Subscribe to Updates
Get the latest creative news from FooBar about art, design and business.
- ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ
- ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ
- ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ
- ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ
- ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ
- ಜೆಫ್ರಿ ಎಫ್ಟೀನ್ ಫೈಲ್ ನಲ್ಲಿ ಮೋದಿ ಹೆಸರು: ಯುವ ಕಾಂಗ್ರೆಸ್ ಪ್ರತಿಭಟನೆ
- SSLC: ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
- ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ
Author: admin
ಮೈಸೂರು: ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ವಿರೋಧಿಸಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ. ಮೈಸೂರು: ವಿಶ್ವವಿದ್ಯಾನಿಲಯದ ಸಂಶೋಧಕರ ನೂತನ ವಿದ್ಯಾರ್ಥಿ ನಿಲಯವು ಉದ್ಘಾಟನೆಗೊಂಡು ಒಂದೂವರೆ ವರ್ಷ ಕಳೆದರೂ ವಿಶ್ವವಿದ್ಯಾನಿಲಯವು ಇನ್ನೂ ಸಹ ಪ್ರವೇಶಾತಿಯನ್ನು ನೀಡದೆ ವಿಳಂಬ ಮಾಡುತ್ತಿರುವುದರಿಂದ ಹಲವಾರು ಸಂಶೋಧನಾ ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ತೊಂದರೆ ಉಂಟಾಗಿದ್ದು, ಇದನ್ನು ಪ್ರಶ್ನಿಸಿ ಮೈಸೂರು ವಿಶ್ವವಿದ್ಯಾನಿಯದಲ್ಲಿ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸಿದರು. ಕುಲಪತಿಗಳಿಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದ ಪ್ರತಿಭಟನಾಕಾರರು, ಸಂಶೋಧಕರ ವಿದ್ಯಾರ್ಥಿನಿಲಯದ ಪ್ರವೇಶಾತಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಮತ್ತು ಪರೀಕ್ಷಾ ಶುಲ್ಕ ಕೂಡಲೇ ಕಟ್ಟಬೇಕೆಂದು ಮೈಸೂರು ವಿವಿ ಆದೇಶ ಹೊರಡಿಸಿರುವ ಆದೇಶವನ್ನು ರದ್ದುಪಡಿಸಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಬಂದನಂತರ ಶುಲ್ಕಗಳನ್ನು ಕಡಿತಗೊಳಿಸಬೇಕೆಂದು ಒತ್ತಾಯಿಸಿ ದರು. ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಇದೆ. ಅದೇ ದಿನ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಪರೀಕ್ಷೆಯನ್ನು ಮುಂದೂಡಬೇಕು ಎಂದು ಇದೇ ವೇಳೆ…
ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಹಾಲ್ಕುರಿಕೆ ತರಳಬಾಳು ಇಂಟರ್ನ್ಯಾಷನಲ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ತರಳಬಾಳು ಗುರುಪರಂಪರೆಯ ಚರಪಟ್ಟಾಧ್ಯಕ್ಷರಾದ ಲಿಂಗೈಕ್ಯ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿಯವರ100ನೇ ವರ್ಷದ ಜನ್ಮದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಹೆಚ್.ಸಿ.ಎಂ.ಜಿ ಕಾಲೇಜಿನ ಪ್ರಾಂಶುಪಾಲ ದೇವೇಂದ್ರ ನಾಯಕ್,ತರಳಬಾಳು ಇಂಟರ್ನ್ಯಾಷನಲ್ ಸ್ಕೂಲ್ ನ ಮುಖ್ಯ ಶಿಕ್ಷಕ ಹೆಚ್.ಬಿ.ವಿಜಯ ಕುಮಾರ್,ಪ್ರೌಢಶಾಲೆಯ ಮುಖ್ಯ ಶಿಕ್ಷಕ ವೀರಣ್ಣ ಗೌಡ್ರು ಸೇರಿದಂತೆ ಶಾಲಾ ಕಾಲೇಜಿನ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಶಾಲಾ ಮಕ್ಕಳಿಗೆ ಪರಿಸರದ ಬಗ್ಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.ಗಿಡ ನೆಡುವುದರ ಮೂಲಕ ಪರಿಸರ ದಿನಾಚರಣೆಗೆ ಚಾಲನೆ ಕೊಡಲಾಯಿತು.ಪರಿಸರ ಗೀತಾ ಗಾಯನ ಹಮ್ಮಿಕೊಳ್ಳಲಾಗಿತ್ತು. ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿ ರವರ ಜೀವನ ವೃತ್ತಾಂತ,ಸೇವೆ,ಅವರ ಹಾಕಿ ಕೊಟ್ಟಂತಹ ಮಾರ್ಗವನ್ನು ನೆನೆಯಲಾಯಿತು. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಪಾವಗಡ: ತಾಲೂಕಿನ ಪ್ರಾರ್ಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತಿ ವತಿಯಿಂದ ಹಾಗೂ ತುಮಕೂರು ಜಿಲ್ಲಾ ಸಹಕಾರ ಬ್ಯಾಂಕ್ ಆಶ್ರಯದಲ್ಲಿ ತಾಲೂಕಿನ ಪ್ರಾಥಮಿಕ ಸಹಕಾರ ಸಂಘಗಳಿಗೆ ತಾಲೂಕಿನ ಪಟ್ಟಣದ ಎಸ್. ಎಸ್. ಕೆ. ಸಮುದಾಯಭವನದಲ್ಲಿ ಪೀಠೋಪಕರಣಗಳ ವಿತರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿರ್ದೇಶಕರಾದ ಆರ್. ರಾಜೇಂದ್ರ ಭಾಗವಹಿಸಿ ಮಾತನಾಡಿ, ಪಾವಗಡ ಪಾವಗಡ ತಾಲೂಕು ಅತೀ ಹಿಂದುಳಿದಿದ್ದು, ತಾಲೂಕಿನ ಅಭಿವೃದ್ಧಿಗೆ ಪಕ್ಷತೀತವಾಗಿ ಕೆಲಸ ಮಾಡಲಾಗುವುದು ಹಾಗೂ ತಾಲೂಕಿನ ಸಹಕಾರ ಸಂಘಗಳ ಅಭಿವೃದ್ದಿಗೆ ಶಕ್ತಿ ತುಂಬಿ ಅಭಿವೃದ್ಧಿಪಡಿಸುತ್ತೇವೆ ಮತ್ತು ತಾಲೂಕಿನ ಸಮಗ್ರ ನೀರಾವರಿ ಯೋಜನೆಗೆ ಜಾರಿಗೆ ತರಲು ಸರ್ಕಾರ ಮಟ್ಟದಲ್ಲಿ ಒತ್ತಾಯಿಸಲಾಗುವುದು ಮುಂದಿನ ದಿನಗಳಲ್ಲಿ ತಾಲೂಕಿನ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಸಕ ವೆಂಕಟರವಣಪ್ಪ , ಸಹಕಾರ ಸಂಘಗಳು ರೈತರಿಗೆ ಸಾಲ ಸೌಲಭ್ಯ ನೀಡಿ…
ಪಾವಗಡ: ಪ್ರವಾದಿ ಮಹಮ್ಮದ್ ಕುರಿತು ಲಘು ಹೇಳಿಕೆ ವಿವಿಧ ರಾಷ್ಟ್ರಗಳು ಭಾರತವನ್ನು ಕೆಂಗಣ್ಣಿನಿಂದ ನೋಡುವಂತಾಗಿದೆ ಎಂದು ವಿಧಾನಪರಿಷತ್ ಸದಸ್ಯ ಉಗ್ರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಬಿಜೆಪಿಯ ವಕ್ತಾರರೊಬ್ಬರು ಪ್ರವಾದಿ ಮಹಮ್ಮದ್ ಕುರಿತು ಲಘುವಾಗಿ ಹೇಳಿಕೆ ನೀಡಿದ್ದಾರೆ. ಇದರಿಂದಾಗಿ ಇಡೀ ಪ್ರಪಂಚದ ವಿವಿಧ ರಾಷ್ಟ್ರಗಳು ಭಾರತದ ಬಗ್ಗೆ ಅನುಮಾನದ ಕೆಂಗಣ್ಣಿನಿಂದ ನೋಡುವಂತಾಗಿದೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಬೆಲೆ ಏರಿಕೆಯಿಂದಾಗಿ ದೇಶ ತತ್ತರಿಸಿಹೋಗಿದೆ. ಹೀಗಾಗಿ ಮೋದಿ ಆಧುನಿಕ ಬಸ್ಮಾಸುರನಾಗಿದ್ದಾರೆ ಎಂದು ಅವರು ಇದೇ ವೇಳೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಪ್ರತಿ ವರ್ಷ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವಿದ್ಯಾರ್ಥಿಗಳಿಗೆ ಒಂದಲ್ಲಾ ಒಂದು ತೊಂದರೆ ಕೊಡ್ತಾನೆ ಇದೆ. ಸಿಇಟಿ ಪರೀಕ್ಷಾ ಶುಲ್ಕ ಪಾವತಿ ಮಾಡಿದ್ರು ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಡೌನ್ ಲೋಡ್ ಆಗುತ್ತಿಲ್ಲ. ಪರೀಕ್ಷೆ ಸಮಯಕ್ಕೆ ಸರಿಯಾಗಿ ಹಾಲ್ ಟಿಕೆಟ್ ಸಿಗುತ್ತೋ ಸಿಗಲ್ವೋ ಅಂತ ಸಾವಿರಾರು ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಸಿಇಟಿ ಪರೀಕ್ಷೆಗೆ ಇನ್ನೂ ಕೇವಲ 9 ದಿನ ಮಾತ್ರ ಬಾಕಿ ಉಳಿದಿದೆ. ಸಿಇಟಿ ಪರೀಕ್ಷೆ ತೆಗೆದುಕೊಂಡ ವಿದ್ಯಾರ್ಥಿಗಳು ಇದೀಗ ಆತಂಕಕ್ಕೆ ಒಳಗಾಗಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳಿಗೆ ಸಿಇಟಿ ಪರೀಕ್ಷೆ ಸಿಗೋದಿಲ್ಲ ಅನ್ನೂ ಆತಂಕಕ್ಕೆ ಒಳಗಾಗಿ ಕಣ್ಣೀರು ಹಾಕುತ್ತಿದ್ದಾರೆ. ಈ ಕುರಿತು ಪೋಷಕರು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಆದ್ರೆ, ಪ್ರಾಧಿಕಾರದಿಂದ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹಾಲ್ ಟಿಕೆಟ್ ಸಮಸ್ಯೆ ಒಂದಲ್ಲ, ಎರಡಲ್ಲ ಬರೋಬ್ಬರಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಎದುರಾಗಿದೆ. ಎಲ್ಲಾ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷಾ ಶುಲ್ಕವನ್ನು ಪಾವತಿ ಮಾಡಿದ್ದಾರೆ. ಆದ್ರೆ, ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಳ್ಳಲು…
ಪಠ್ಯ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಜೂನ್ 9 ರಂದು ಕಾಂಗ್ರೆಸ್ ವಿಧಾನಸೌಧದಲ್ಲಿ ಧರಣಿ ಸತ್ಯಾಗ್ರಹ ನಡೆಸಲಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಧರಣಿ ನಡೆಯಲಿದ್ದು, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗಿಯಾಗಲಿದ್ದಾರೆ. ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಈಗ ಪಠ್ಯದ ಪರಿಷ್ಕರಣೆ ನೆಪದಲ್ಲಿ ಸಾಂಸ್ಕೃತಿಕ ಅತ್ಯಾಚಾರ ನಡೆಯುತ್ತಿದೆ. ಮೊದಲನೇ ಬಾರಿಗೆ ಸ್ವಾಮೀಜಿ,ಸಾಹಿತಿ, ಸಂಘಟನೆಗಳು ಸರ್ಕಾರದ ಧೋರಣೆಯನ್ನು ವಿರೋಧಿಸಿದ್ದಾರೆ. ಸಿದ್ದಗಂಗಾ ಶ್ರೀಗಳಿಗೆ, ಮುರುಘಾ ಮಠ ಶ್ರೀ, ಆದಿ ಚುಂಚನಗಿರಿ,ಸಾಣೆ ಮಠದ ಶ್ರೀಗಳಿಗೆ ನಮಸ್ಕಾರ ಹೇಳುತ್ತೇನೆ.ಅವರ ಧ್ವನಿ ಜೊತೆಗೆ ನಮ್ಮ ಧ್ವನಿ ಸೇರಿಸುತ್ತೇವೆ ಎಂದರು. ಚಿಕ್ಕ ವಯಸ್ಸಿನ ಮಕ್ಕಳಿಗೆ ಹೊಸ ರೂಪ ಕೊಡುವ ಪ್ರಯತ್ನ ಮಾಡುತ್ತಿದ್ದಾರೆ. ಅಂಬೇಡ್ಕರ್ ಅವರನ್ನು ಸಂವಿಧಾನ ಶಿಲ್ಪಿ ಎಂಬುವುದನ್ನು ಪಠ್ಯದಲ್ಲಿ ತೆಗೆದು ಹಾಕಲಾಗಿದೆ. ಇದಕ್ಕಿಂತ ಅವಮಾನ ಏನು ಬೇಕು? ಇದು ಇಡೀ ಭಾರತ ಭೂಮಿಗೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿವೇಕಾನಂದ,ಪೆರಿಯಾರ್ ವಿಚಾರಗಳಿಗೆ ಕತ್ತರಿ ಹಾಕಲಾಗಿದೆ, ತಿರುಚಲಾಗಿದೆ. ಭಕ್ತಿ ಹಾಗೂ ಸೂಫಿ ಪಂಥದ…
ಕಲಬುರಗಿ: ಊಟ ಬೇಡಿದ ಮುಗ್ದ ಮಗುವಿನ ಕೈಗೆ ಮಲತಾಯಿ ಬರೆ ಹಾಕಿರುವ ಘಟನೆ ನಡೆದಿದೆ. ಈ ಕೃತ್ಯ ನಾಲವಾರ ಗ್ರಾಮದಲ್ಲಿ ನಡೆದಿದ್ದು, ನಾಲ್ಕು ವರ್ಷದ ಮಗುವಿಗೆ ಮಲತಾಯಿ ಚಿತ್ರಹಿಂಸೆ ನೀಡಿದ್ದಾಳೆ. ನಾಲ್ಕು ವರ್ಷದ ಮಗುವನ್ನು ಹಗ್ಗದಿಂದ ಮಂಚಕ್ಕೆ ಕಟ್ಟಿ ಹಾಕಿ, ಕೆಂಡದಿಂದ ಕೈಯನ್ನು ಸುಟ್ಟು ಕ್ರೂರತೆ ಮೆರೆದಿದ್ದಾಳೆ. ಇನ್ನು ಎರಡು ದಿನಗಳಿಂದ ಮಗು ಹೊರಗಡೆ ಬಾರದನ್ನು ಗಮನಿಸಿದ ಸ್ಥಳೀಯರು ಮಲತಾಯಿಯನ್ನು ವಿಚಾರಣೆ ಮಾಡಿದ್ದಾಳೆ. ಈ ಸಂದರ್ಭದಲ್ಲಿ ವಿಚಾರ ತಿಳಿದು, ಗ್ರಾಮಸ್ಥರು ಮಗುವನ್ನು ಆಕೆಯ ಕಪಿಮುಷ್ಟಿಯಿಂದ ಬಿಡಿಸಿಕೊಂಡು ಬಂದಿದ್ದಾರೆ. ಈ ವೇಳೆ ಸ್ಥಳೀಯರ ಜೊತೆ ವಾದಕ್ಕಿಳಿದ ಮಹಿಳೆ, ನಾನು ಸುಡುವುದು ಹೀಗೇ. ನೀವ್ಯಾರು ಕೇಳೋಕೆ ಅಂತ ವಾಗ್ವಾದ ನಡೆಸಿದ್ದಾಳೆ. ಇನ್ನು ಮಗುವಿನ ರೋಧನೆ ಕಂಡು ವಾಡಿ ಪೊಲೀಸ್ ಠಾಣೆಗೆ ಗ್ರಾಮಸ್ಥರು ದೂರು ನೀಡಿದ್ದಾರೆ. ಮಗುವಿಗೆ ಯಾವುದೇ ಸಮಸ್ಯೆಯಾಗಬಾರದು ಎಂದು ಪುಟ್ಟ ಕಂದಮ್ಮನ ತಂದೆ ತಿಪ್ಪಣ್ಣ ಎರಡನೇ ಮದುವೆಯಾಗಿದ್ದ. ಆದರೆ ಕೆಲಸದ ನಿಮಿತ್ತ ಮಗುವನ್ನು ಈಕೆಯ ಬಳಿ ಬಿಟ್ಟು ಕಳೆದ ಕೆಲ ದಿನಗಳ ಹಿಂದೆ…
ಉತ್ತರಪ್ರದೇಶದ ಶಾಮ್ಲಿಯಲ್ಲಿ ಕುತೂಹಲಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ವ್ಯಕ್ತಿಯೊಬ್ಬ ಎಮ್ಮೆ ಕರುವನ್ನು ಕಳ್ಳತನ ಮಾಡಿರುವ ಆರೋಪ ಮಾಡಿದ್ದಾನೆ. ಆದರೆ, ಯಾರ ಮೇಲೆ ಆರೋಪ ಮಾಡಲಾಗಿದೆಯೋ ಆ ವ್ಯಕ್ತಿ ಕೂಡಾ ಆರೋಪವನ್ನು ತಳ್ಳಿ ಹಾಕಿದ್ದಾನೆ. ಹೀಗಾಗಿ ಪೊಲೀಸರು ಸತ್ಯವನ್ನು ಕಂಡು ಹಿಡಿಯಲು ಮಾರ್ಗವೊಂದನ್ನು ಕಂಡು ಕೊಂಡಿದ್ದಾರೆ. ಎಮ್ಮೆಯ ಡಿಎನ್ಎ ಪರೀಕ್ಷೆ ನಡೆಸಿ ನಿಜವಾದ ಮಾಲೀಕನ ಪತ್ತೆ ಹಚ್ಚಲು ಪೊಲೀಸರು ತೀರ್ಮಾನಿಸಿದ್ದಾರೆ. 2020 ರಲ್ಲಿ ಕಳುವಾಗಿದ್ದ ಕರು : ಕೂಲಿ ಕೆಲಸ ಮಾಡುವ ಚಂದ್ರಪಾಲ್ ಕಶ್ಯಪ್ ಎಂಬ ವ್ಯಕ್ತಿ ಪೊಲೀಸರೆದುರು ಎಮ್ಮೆ ಕರು ಕಳ್ಳತನದ ದೂರನ್ನು ತೆಗೆದುಕೊಂಡು ಬಂದಿದ್ದಾರೆ. ಅವರ ಪ್ರಕಾರ 2020 ರ ಆಗಸ್ಟ್ 25 ರಂದು, 3 ವರ್ಷದ ಎಮ್ಮೆ ಕರುವನ್ನು ಕೊಟ್ಟಿಗೆಯಿಂದ ಕಳ್ಳತನ ಮಾಡಲಾಗಿದೆ. ನಂತರ ಆ ಕರುವಿಗಾಗಿ ಎಲ್ಲಾ ಕಡೆಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಇದಾದ ಬಳಿಕ 2020 ರ ನವೆಂಬರ್ ನಲ್ಲಿ ಸಹರಾನ್ಪುರದಲ್ಲಿ ಎಮ್ಮೆ ಕರು ಪತ್ತೆಯಾಗಿದೆ. ಆದರೆ ಪತ್ತೆಯಾದ ಕರು ತಮ್ಮದು ಎನ್ನುವುದು ಸಹರಾನ್ಪುರದ ಸತ್ಬೀರ್…
ನಗರದಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಶ್ಮೀರದಿಂದ ಬೆಂಗಳೂರಿಗೆ ಬಂದು ಹೆಸರು ಬದಲಾಯಿಸಿಕೊಂಡು ಓಡಾಡುತ್ತಿದ್ದ ಎಂದು ಹೇಳಲಾಗಿದೆ. ಜಮ್ಮು ಮತ್ತ ಕಾಶ್ಮೀರದ ಪೊಲೀಸರು ಬೆಂಗಳೂರಿನ ಶ್ರೀರಾಂಪುರದಲ್ಲಿ ಕಾರ್ಯಾಚರಣೆ ನಡೆಸಿ ತಾಲಿಬ್ ಹುಸೇನ್ (38) ನನ್ನು ಬಂಧಿಸಿದ್ದಾರೆ. ತಾಲಿಕ್ ಎಂದು ಹೆಸರು ಬದಲಿಸಿಕೊಂಡು ಈತ ಓಡಾಡುತ್ತಿದ್ದನಂತೆ. ಉಗ್ರ ತಾಲಿಬ್, ಬಿಎನ್ಎಲ್ ಏರ್ ಸರ್ವಿಸ್ನಲ್ಲಿ ಕೆಲಸ ಮಾಡುತ್ತಿದ್ದ. ಕಾಶ್ಮೀರದಿಂದ ಬೆಂಗಳೂರಿಗೆ ಬರುವ ವೇಳೆಯಲ್ಲಿ ಪೊಲೀಸ್ ಪತ್ನಿಯನ್ನೇ ಕರೆತಂದಿದ್ದಾನೆ. ಅದರಂತೆ ಪತ್ನಿ ಮತ್ತು ಮೂವರು ಮಕ್ಕಳ ಜೊತೆಗೆ ಬೆಂಗಳೂರಿನಲ್ಲಿ ನೆಲಸಿದ್ದನು. ಮೂಲತಃ ಜಮ್ಮು ಕಾಶ್ಮೀರದವನೇ ಆದ ತಾಲೀಬ್ ಹುಸೇನ್, ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಆಗಿದ್ದ. ಜಮ್ಮು ಮತ್ತು ಕಾಶ್ಮೀರ್ ಪೊಲೀಸರು ಹಾಗೂ 17 ನೇ ರಾಷ್ಟ್ರೀಯ ರೈಫಲ್ಸ್ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈತ ಪೊಲೀಸರ ಹಿಟ್ ಲಿಸ್ಟ್ನಲ್ಲಿದ್ದ ಎಂದು ಮಾಹಿತಿ ದೊರೆತಿದೆ. ಈತ ಬೆಂಗಳೂರಿನಲ್ಲಿ ಬಿಎನ್ಎಲ್ ಏರ್ ಸರ್ವಿಸ್ ಲೋಡಿಂಗ್ ಅನ್ ಲೋಡಿಂಗ್ ಕೆಲಸ ಮಾಡಿಕೊಂಡಿದ್ದ. ನಗರದಲ್ಲಿ ಪತ್ನಿ ಮತ್ತು…
ಬೆಂಗಳೂರು : ನಗರದ ಟೌನ್ ಹಾಲ್ ನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಸಂಜೆ ದಶಮ ಸಂಭ್ರಮ ಕಾರ್ಯಕ್ರಮದಲ್ಲಿ ತುರುವೇಕೆರೆ ತಾಲೂಕಿನ ಮುಗಳೂರು ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿನಿ ಕು. ಮೌಲ್ಯ ಎಂ.ಎನ್. ಹಾಗೂ ಬೆಂಗಳೂರು ನಗರದ ಕು.ರಮ್ಯ ರವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಡಾ.ಸಂತೋಷ್ ಭಾರತಿ ಶ್ರೀಪಾದಂಗಳವರು ಹಾಗೂ ಸಂಜೆ ಪ್ರಭ ದಿನಪತ್ರಿಕೆ ಸಂಪಾದಕರಾದ ವೆಂಕಟೇಶ್ ಪೈ ರವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ವಿದ್ಯಾರ್ಥಿನಿ ಕು.ಮೌಲ್ಯ ಎಂ.ಎನ್.ಪ್ರಸ್ತುತ ಮಂಗಳೂರು ಮಹೇಶ್ ಇನ್ಸ್ಟಿಟ್ಯೂಷನ್ ತುಮಕೂರು ಅಶೋಕ ನಗರದ ಮಹೇಶ್ ಪಿ.ಯು. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ವೈದ್ಯೆಯಾಗುವ ಆಸೆ ಹೊತ್ತಿದ್ದಾರೆ. ಪ್ರತಿಭಾ ಪುರಸ್ಕಾರ ಆಯ್ಕೆಗೊಂಡ ವಿದ್ಯಾರ್ಥಿನಿಗೆ ಕಾಲೇಜು ಆಡಳಿತ ಮಂಡಳಿ ಮತ್ತು ಪೋಷಕರಿಂದ ಅಭಿನಂದಿಸಿದೆ. ಸಂಜೆ ಪ್ರಭ ದಿನಪತ್ರಿಕೆಯ 10ನೇ ವರ್ಷದ ದಶಮ ಸಂಭ್ರಮದ ಕಾರ್ಯಕ್ರಮದಲ್ಲಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಸಮಾಜ ಸೇವಕರನ್ನು ಗುರುತಿಸಿ ಅವರಿಗೆ ಸಂಜೆ ಪ್ರಭಾ ಸಾಮಾಜಿಕ ಸೇವಾ ರತ್ನ ಪ್ರಶಸ್ತಿಯನ್ನು ಹಾಗೂ ಮಾಧ್ಯಮ ಕ್ಷೇತ್ರದಲ್ಲಿ…