Author: admin

ಪೊಲೀಸ್ ಮೆಸ್‍ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ಪೊಲೀಸ್ ಕಾನ್ಸ್‍ಟೇಬಲ್ ವೊಬ್ಬರು ಬೀದಿಗಿಳಿದು ಪ್ರತಿಭಟನೆ ನಡೆಸಿರುವ ವಿಡಿಯೋ ವೈರಲ್ಲಾಗಿದೆ. ಫಿರೋಜಾಬಾದ್‍ನ ಪೊಲೀಸ್ ಹೆಡ್‍ಕ್ವಾಟ್ರ್ರಸ್‍ನ ಮೆಸ್‍ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ರೊಟ್ಟಿ ದಾಲ್ ಮತ್ತು ಚಟ್ನಿ ಇರುವ ಆಹಾರದ ಪ್ಲೇಟ್‍ನ್ನು ಹಿಡಿದುಕೊಂಡು ಪೊಲೀಸ್ ಕಾನ್ಸ್‍ಟೇಬಲ್ ಸ್ಟೆಬಲ್ ಮನೋಜ್‍ಕುಮಾರ್ ರಸ್ತೆಗೆ ಬಂದಿದ್ದಾರೆ. ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಮುಂದೆ ಹೋಗಿ ನಾಯಿಯೂ ತಿನ್ನದಂತಹ ಕೆಟ್ಟ ಆಹಾರವನ್ನು ನಮಗೆ ನೀಡಲಾಗುತ್ತಿದೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೊಲೀಸರ ಪೌಷ್ಟಿಕ ಆಹಾರಕ್ಕಾಗಿ ಹೆಚ್ಚುವರಿಯಾಗಿ 1875 ರೂ.ಗಳನ್ನು ನೀಡುವುದಾಗಿ ಹೇಳಿದ್ದಾರೆ. ಆದರೆ ಈ ರೊಟ್ಟಿ ನೋಡಿ ಎಂದು ಪ್ರಯಾಣಿಕರಿಗೆ ತೋರಿಸಿದ್ದಾರೆ. ಹೆದ್ದಾರಿಯ ಮಧ್ಯದಲ್ಲಿರುವ ಡಿವೈಡರ್ ಮೇಲೆ ಕುಳಿತು ಧರಣಿ ನಡೆಸಿದ್ದಾರೆ. ಅಷ್ಟಕ್ಕೆ ಸುಮ್ಮನಾಗದ ಕಾನ್ಸ್‍ಟೇಬಲ್ ಹೆಡ್ ಕ್ವಾಟ್ರಸ್ ಮುಂದೆ ಆಹಾರದ ತಟ್ಟೆಯೊಂದಿಗೆ ನಿಂತು ಅತ್ತು ರಂಪಾಟ ಮಾಡಿದ್ದಾರೆ. ಈ ವಿಡಿಯೋ ಯೋಗಿ ಆದಿತ್ಯನಾಥ್ ಅವರಿಗೆ ತಲುಪಿಸಿ ನಮ್ಮ ಗೋಳು ಕೇಳುವವರು ಇಲ್ಲ. ಎಡಿಜಿಪಿ…

Read More

ಎಪ್ಪತ್ತೈದನೆ ಸ್ವಾತಂತ್ರ್ಯೋತ್ಸವವನ್ನು ಸರ್ಕಾರ ರಾಜ್ಯಾದ್ಯಂತ ಅದ್ಧೂರಿಯಾಗಿ ಆಚರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮೈಸೂರಿನಲ್ಲಿಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು, ಮಾಧ್ಯಮಗಳೊಂದಿಗೆ ಮಾತನಾಡಿ, ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಹೇಳಿದರು. 75ನೇ ಸ್ವಾತಂತ್ರ್ಯೋತ್ಸವಕ್ಕೆ ಸಿದ್ಧತೆ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಳವಡಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯದಾದ್ಯಂತ ಸರ್ಕಾರ ಅದ್ಧೂರಿಯಾಗಿ ಆಚರಿಸಲಿದೆ. ಮುಂದಿನ ನಮ್ಮ ದೇಶದ ಭವಿಷ್ಯ ನಮ್ಮ ಜನತೆಯ ಕೈಯಲ್ಲಿದೆ. ಹರ್ ಘರ್ ತಿರಂಗಕ್ಕೆ ಕಾಂಗ್ರೆಸ್ ಟೀಕೆ ಮಾಡುತ್ತಿರುವ ವಿಚಾರಕ್ಕೆ ಕಿಡಿಕಾರಿದರು. ತ್ರಿವರ್ಣ ಧ್ವಜ ತ್ಯಾಗ, ಬಲಿದಾನ, ಹೋರಾಟದಿಂದ ಸಿಕ್ಕಿರುವುದು. ಸ್ವಾತಂತ್ರ್ಯ ಪೂರ್ವದಲ್ಲಿ ಹಿರಿಯರು ಹೋರಾಟ ಮಾಡಿರುವ ಫಲ. ಸ್ವಾತಂತ್ರ್ಯ ಹೋರಾಟವನ್ನು ತಿರುಚದೆ ಸತ್ಯಾಸತ್ಯತೆ ತಿಳಿಸಬೇಕಿದೆ. ತ್ರಿವರ್ಣ ಧ್ವಜದಲ್ಲಿ ಭಾರತದ ಏಕತೆ, ಶಕ್ತಿ, ಸ್ವಾತಂತ್ರ್ಯ, ಭವಿಷ್ಯ ಎಲ್ಲವೂ ಅಡಗಿದೆ. ಅದರ ಬಗ್ಗೆ ವಿರೋಧ ಮಾಡುವುದು, ಟೀಕೆ ಮಾಡುವುದು ದೇಶ ವಿರೋಧಿ ಕೃತ್ಯದಂತೆ. ಅಂತಹ ಕೀಳುಮಟ್ಟದ ಮಾತಿಗೆ ಜನತೆ ಬೆಲೆ ಕೊಡುವುದಿಲ್ಲ.…

Read More

ವಿಮಾನದಲ್ಲಿ ವ್ಯಕ್ತಿಯೊಬ್ಬ ಧೂಮಪಾನ ಮಾಡುತ್ತಿರುವ ವಿಡಿಯೋ ವಿವಾದಕ್ಕೆ ಕಾರಣವಾಗಿರುವ ಜೊತೆ ಭದ್ರತೆ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಉತ್ತರಖಂಡ್‍ ನ ಶಾಸಕ ಉಮೇಶ್ ಕುಮಾರ್ ಅವರು ತಮ್ಮ ಟ್ವೀಟರ್‍ನಲ್ಲಿ ಹಂಚಿಕೊಂಡಿರುವ ವಿಡಿಯೋ ಚರ್ಚೆಗೆ ಗ್ರಾಸವಾಗಿದೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬ ವಿಮಾನದ ಸೀಟಿನಲ್ಲಿ ಅಡಗಿಕೊಳ್ಳುವಂತೆ ಮಲಗಿ ಕಾಲ ಮೇಲೆ ಕಾಲು ಹಾಕಿದ್ದು, ಲೈಟರ್‍ನಿಂದ ಸಿಗರೇಟ್ ಅಂಟಿಸಿ ಧೂಮಪಾನ ಮಾಡಿದ್ದಾನೆ. ಅದೇ ವಿಮಾನದ ಮುಂಭಾಗ ಸೀಟ್‍ಗಳಲ್ಲಿ ಪ್ರಯಾಣಿಕರು ಕುಳಿತಿರುವು ಕಂಡುಬಂದಿದೆ. ಆತ ಸಿಗರೇಟ್ ಸೇದುವುದನ್ನು ಮತ್ತೊಬ್ಬ ವ್ಯಕ್ತಿ ವಿಡಿಯೋ ಮಾಡಿದ್ದಾರೆ. ವಿಮಾನ ನಿಲ್ದಾಣಗಳಲ್ಲಿ ಬಿಗಿಭದ್ರತೆ ಇರಲಿದ್ದು, ಬೆಂಕಿಗೆ ಕಾರಣವಾಗಿರುವ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಹೋಗಲು ಅವಕಾಶ ನೀಡುವುದಿಲ್ಲ. ಹಾಗಿದ್ದು ವಿವಾದಿತ ವ್ಯಕ್ತಿ ಸಿಗರೇಟ್ ಮತ್ತು ಲೈಟರ್‍ನ್ನು ತೆಗೆದುಕೊಂಡು ಹೋಗಿದ್ದು ಹೇಗೆ ಎಂಬ ಪ್ರಶ್ನೆ ಕಾಡಲಾರಂಭಿಸಿದೆ. ಭಯೋತ್ಪಾದನೆಯ ದಾಳಿ, ಬೆದರಿಕೆಗಳ ನಡುವೆ ಈ ರೀತಿಯ ಭದ್ರತೆಯ ವೈಫಲ್ಯಗಳು ಆತಂಕ ಮೂಡಿಸಿವೆ. ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ…

Read More

ಸರಣಿ ಮೊಬೈಲ್ ಸುಲಿಗೆ ಮಾಡಿ ಹೊರ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ, 78.84 ಲಕ್ಷ ರೂ. ಮೌಲ್ಯದ 512 ಸ್ಮಾರ್ಟ್‍ಫೋನ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಪಾದರಾಯನಪುರದ ನಿವಾಸಿ ಅಜ್ಮಲ್ ಪಾಷಾ ಮತ್ತು ಶಿವಾಜಿನಗರದ ನಿವಾಸಿ ಇಜಾಜ್ ಬಂಧಿತ ಆರೋಪಿಗಳು. ನಗರದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಮೊಬೈಲ್ ಫೋನ್ ಸುಲಿಗೆ ಪ್ರಕರಣಗಳು ಹೆಚ್ಚಾಗುತ್ತಿದ್ದ ಬಗ್ಗೆ ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಗಳಿಗಾಗಿ ಶೋಧ ಕೈಗೊಂಡು ಇಬ್ಬರನ್ನು ಬಂಧಿಸಿದ್ದಾರೆ. ಈ ಇಬ್ಬರು ಆರೋಪಿಗಳು 7ರಿಂದ 8 ಜನರ ತಂಡದೊಂದಿಗೆ ಸೇರಿಕೊಂಡು ಸುಲಿಗೆ ಮಾಡುತ್ತಿದ್ದರು. ನಗರದಲ್ಲಿ ಮೊಬೈಲ್ ಫೋನ್‍ಗಳನ್ನು ಸುಲಿಗೆ ಮತ್ತು ಕಳವು ಮಾಡಿ ನಂತರ ಆ ಮೊಬೈಲ್‍ಗಳನ್ನು ಮುಂಬೈ, ಹೈದರಾಬಾದ್ ಮತ್ತು ದೆಹಲಿಯಲ್ಲಿರುವ ಅಂಗಡಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಆರೋಪಿಗಳ ವಿರುದ್ಧ ಈ ಹಿಂದೆ ಚಾಮರಾಜಪೇಟೆ, ಉಪ್ಪಾರಪೇಟೆ, ಮಾಗಡಿ ರಸ್ತೆ, ಕಾಮಾಕ್ಷಿಪಾಳ್ಯ, ವರ್ತೂರು ಹಾಗೂ ಅಶೋಕನಗರ ಪೊಲೀಸ್ ಠಾಣೆಗಳಲ್ಲಿ ಮೊಬೈಲ್ ಸುಲಿಗೆ ಮತ್ತು ಕಳವು ಪ್ರಕರಣ ದಾಖಲಾಗಿದ್ದು, ಆ ಪ್ರಕರಣಗಳಲ್ಲಿ ಜೈಲಿಗೆ ಹೋಗಿ…

Read More

ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.7.2ರಷ್ಟಿದ್ದು, 18 ವರ್ಷ ಮೇಲ್ಪಟ್ಟವರು 3ನೇ ಡೋಸ್‍ನ್ನು ಮುನ್ನೆಚ್ಚರಿಕೆ ಕ್ರಮವಾಗಿ ಪಡೆಯ ಬೇಕೆಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು. ವಿಧಾನಸೌಧದಲ್ಲಿಂದು ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ.17ರಷ್ಟು ಮಾತ್ರ 3ನೇ ಡೋಸ್ ಲಸಿಕೆ ಪಡೆದಿದ್ದಾರೆ. ಕೋವಿಡ್ ಹೋಗಿದೆ ಎಂದು ಉದಾಸೀನ ಮಾಡದೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದರು. ಹೈದರಾಬಾದ್ ಮೂಲದ ಸಂಸ್ಥೆಹೊಸದಾಗಿ ಕಾರ್ಬೋ ವ್ಯಾಕ್ಸ್‍ನ್ನು ಸಂಶೋಧಿಸಿದೆ. ಇದಕ್ಕೆ ಕೇಂದ್ರ ಅನುಮತಿ ನೀಡಿದ್ದು, ಈ ಲಸಿಕೆ ಪಡೆಯಲು ಅವಕಾಶವಿದೆ. ರಾಜ್ಯದಲ್ಲೂ ಕೂಡ ಚಾಲನೆ ನೀಡಲಾಗುವುದು ಎಂದರು. ಆ.1ರಿಂದ 10ರ ಅವಧಿಯಲ್ಲಿ ಕೋವಿಡ್ ರೋಗದಿಂದ 24 ಮಂದಿ ಮೃತಪಟ್ಟಿದ್ದು, ಅವರಲ್ಲಿ 60 ವರ್ಷ ಮೇಲ್ಪಟ್ಟವರೇ ಹೆಚ್ಚಾಗಿದ್ದಾರೆ. ಕೋವಿಡ್ ಪಾಸಿಟಿವ್ ಬಂದರೆ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯಬೇಕು. ತೀವ್ರತರದ ವ್ಯಾವುಳ್ಳವರು 3ನೇ ಡೋಸ್‍ನ್ನು ಜರೂರಾಗಿ ಪಡೆಯಬೇಕು ಎಂದರು. ದೆಹಲಿಯಲ್ಲಿ ಕೋವಿಡ್ ಪಾಸಿವಿಟಿ ಶೇ.15ರಷ್ಟಿದೆ. ಬೆಂಗಳೂರು…

Read More

ಬಿಎಂಟಿಸಿ ಪ್ರಯಾಣಿಕರಿಗೊಂದು ಸಿಹಿ ಸುದ್ದಿ. ಆ.15ರಂದು ನಗರದಾದ್ಯಂತ ಬಿಎಂಟಿಸಿ ಬಸ್‍ಗಳಲ್ಲಿ ಸಂಚರಿಸಿದರೆ ಟಿಕೆಟ್ ಖರೀದಿಸಬೇಕಾಗಿಲ್ಲ. ಉಚಿತವಾಗಿ ಪ್ರಯಾಣ ಮಾಡಬಹುದು. 75ನೆ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಬಿಎಂಪಿಟಿ ಮಹತ್ವದ ಸೇವೆಯನ್ನು ಘೋಷಿಸಿದೆ. 15ರಂದು ಇಡೀ ದಿನ ಬೆಂಗಳೂರಿನಾದ್ಯಂತ 24 ಗಂಟೆ ಕಾಲ ಸಂಪೂರ್ಣ ಉಚಿತ ಸಂಚಾರವಿರುತ್ತದೆ. ಓಲ್ವೋ ಸೇರಿದಂತೆ ಎಲ್ಲ ಬಿಎಂಟಿಸಿ ಬಸ್‍ಗಳಲ್ಲೂ ಈ ಸೇವೆ ಅನ್ವಯವಾಗಲಿದೆ. ಇದರಿಂದ ಬಿಎಂಟಿಸಿಗೆ ಸುಮಾರು 3 ಕೋಟಿ ಹೊರೆ ಬೀಳಲಿದೆ. ಆದರೂ ಸಹ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರ ಒಪ್ಪಿಗೆ ಕೊಟ್ಟ ಹಿನ್ನೆಲೆಯಲ್ಲಿ ಉಚಿತ ಪ್ರಯಾಣ ಘೋಷಣೆಯನ್ನು ಮಾಡಲಾಗಿದೆ. ಅಮೃತ ಮಹೋತ್ಸವದ ಅಂಗವಾಗಿ ಆ.14ರಂದು 75 ಎಲೆಕ್ಟ್ರಿಕ್ ಬಸ್‍ಗಳು ರಸ್ತೆಗಿಳಿಯಲಿವೆ. ಈಗಾಗಲೇ ನಗರದಲ್ಲಿ 90 ಎಲೆಕ್ಟ್ರಿಕ್ ಬಸ್‍ಗಳು ಸಂಚರಿಸುತ್ತಿದ್ದು, ಇದರ ಜತೆಗೆ 75 ಬಸ್‍ಗಳು ಸೇರ್ಪಡೆಯಾಗಲಿವೆ ಎಂದು ಬಿಎಂಟಿಸಿ ಮಾಹಿತಿ ನೀಡಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ಕರೊನಾ ಸಮಯದಲ್ಲಿ ಕ್ರಿಪ್ಟೋ ಕರೆನ್ಸಿಯ ಬಳಕೆ ಜಾಗತಿಕವಾಗಿ ಹೆಚ್ಚಾಗಿ ಅಭೂತಪೂರ್ವ ದರದಲ್ಲಿ ಏರಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ವಿಶ್ವದ ಎರಡನೇ ಅತಿ ಹೆಚ್ಚು ಜನಸಂಖ್ಯೆಯ ಭಾರತದಲ್ಲಿ ಶೇ.7 ಕ್ಕಿಂತ ಹೆಚ್ಚು ಜನರು ಡಿಜಿಟಲ್ ಕರೆನ್ಸಿಯನ್ನು ಹೊಂದಿದ್ದಾರೆ ಎಂದು ಬಹಿರಂಗಪಡಿಸಿದೆ. ಯುಎನ್ ವ್ಯಾಪಾರ ಮತ್ತು ಅಭಿವೃದ್ಧಿ ಸಂಸ್ಥೆ UNCTAD 2021ರ ವರದಿಯಲ್ಲಿ ಕ್ರಿಪ್ಟೋ ಕರೆನ್ಸಿಗಳನ್ನು ಹೊಂದಿರುವ ಜನಸಂಖ್ಯೆಯ ಪಾಲಿಗೆ ಬಂದಾಗ ಅಭಿವೃದ್ಧಿಶೀಲ ರಾಷ್ಟ್ರಗಳು ಗಮನಾರ್ಹ ಆರ್ಥಿಕತೆ ಗಮನಸೆಳೆದಿದೆ ಉಕ್ರೇನ್ ಶೇ 12.7 ರೊಂದಿಗೆ ಅಗ್ರಸ್ಥಾನದಲ್ಲಿದ್ದು, ನಂತರದ ಸ್ಥಾನದಲ್ಲಿ ರಷ್ಯಾ (ಶೇ 11.9), ವೆನೆಜುವೆಲಾ (ಶೇ 10.3), ಸಿಂಗಾಪುರ (ಶೇ 9.4), ಕೀನ್ಯಾ (ಶೇ 8.5) ಮತ್ತು ಯುಎಸ್ (ಶೇ 8.3) ದಾಖಲಾಗಿದೆ. ಭಾರತದಲ್ಲಿ, 2021ರ ಜನಸಂಖ್ಯೆಯ ಶೇಕಡಾ7.3ರಷ್ಟು ಜನರು ಡಿಜಿಟಲ್ ಕರೆನ್ಸಿಯನ್ನು ಹೊಂದಿದ್ದಾರೆ, ಜನಸಂಖ್ಯೆಯ ಆಧಾರದ ಮೇಲೆ ಡಿಜಿಟಲ್ ಕರೆನ್ಸಿ ಮಾಲೀಕತ್ವಕ್ಕಾಗಿ ಅಗ್ರ 20 ಜಾಗತಿಕ ಆರ್ಥಿಕತೆ ರಾಷ್ಟ್ರ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಪ್ರಕಟವಾದ ಮೂರು ನೀತಿ ಸಂಚಿಕೆಗಳಲ್ಲಿ, ಈ ಖಾಸಗಿ ಡಿಜಿಟಲ್…

Read More

ಒಂದು ಕಡೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೋವಿಡ್ ಸೋಂಕಿನ ಪ್ರಕರಣಗಳು, ಮತ್ತೊಂದು ಕಡೆ ಸಾಲು ಸಾಲು ಹಬ್ಬಗಳು ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೆ ಕೋವಿಡ್ ನಿಯಂತ್ರಣಕ್ಕಾಗಿ ಕೆಲವು ನಿರ್ಬಂಧಗಳನ್ನು ಹಾಕಲು ಮುಂದಾಗಿದೆ. ನಾಳೆ ಅಥವಾ ಶನಿವಾರ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಸಭೆ ನಡೆಸಲಿದ್ದು, ನಂತರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಕಳೆದ ವಾರ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯವರು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಅತಿ ಹೆಚ್ಚು ಸೋಂಕು ಹಬ್ಬಿರುವ 5 ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ. ಕೂಡಲೇ ಕೆಲವು ನಿರ್ಬಂಧಗಳನ್ನು ವಿಧಿಸಬೇಕೆಂದು ಸೂಚಿಸಿದ್ದರು. ಜನನಿಬಿಡ ಪ್ರದೇಶ, ಮಾರುಕಟ್ಟೆ, ಮಾಲುಗಳು, ಸಂತೆ ಮೈದಾನ, ಸಿನಿಮಾ ಮಂದಿರ, ಧಾರ್ಮಿಕ ಕೇಂದ್ರಗಳು ಸೇರಿದಂತೆ ಮತ್ತಿತರ ಕಡೆ ಕೆಲವು ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಸೂಚಿಸಿದ್ದರು. ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ರಾಜ್ಯ ಸರ್ಕಾರ…

Read More

ಉಕ್ಕು, ಜವಳಿ ವ್ಯಾಪಾರಿಗಳು ಮತ್ತು ರಿಯಲ್ ಎಸ್ಟೇಟ್ ಉದ್ಯಮಿಗಳ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ 58 ಕೋಟಿ ರೂಪಾಯಿ ನಗದು ಸೇರಿದಂತೆ 390 ಕೋಟಿ ರೂಪಾಯಿಗಳ ಅಕ್ರಮ ಸಂಪತ್ತನ್ನು ವಶ ಪಡಿಸಿಕೊಂಡಿದೆ. ಮಹಾರಾಷ್ಟ್ರದ ನಾಸಿಕ್ ಘಟಕ ಆಗಸ್ಟ್ ಮೊದಲ ವಾರದಲ್ಲಿ ಜಲನ್ ಮತ್ತು ಔರಂಗಬಾದ್ ನಗರಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. ಆದಾಯ ತೆರಿಗೆ ಇಲಾಖೆ ಮೂಲಗಳ ಪ್ರಕಾರ 390 ಕೋಟಿ ರೂಪಾಯಿ ಸಂಪತ್ತನ್ನು ಪತ್ತೆ ಹಚ್ಚಲಾಗಿದೆ. ಅದರಲ್ಲಿ 32ಕೆ.ಜಿ. ಚಿನ್ನವನ್ನು ಜಪ್ತಿ ಮಾಡಲಾಗಿದೆ. ಆದಾಯ ತೆರಿಗೆ ಇಲಾಖೆಯ 260ಕ್ಕೂ ಹೆಚ್ಚು ಅಧಿಕಾರಿಗಳು, ಐದು ತಂಡಗಳಾಗಿ, ಸುಮಾರು 13 ಗಂಟೆ ಕಾಲ ಶೋಧ ಕಾರ್ಯಾಚರಣೆ ನಡೆಸಿದ್ದರು. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ರಾಷ್ಟ್ರಪ್ರಶಸ್ತಿ ಪುರಸ್ಕøತ, ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಸರ್ಕಾರವು ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವದೊಂದಿಗೆ ನೆರವೇರಿಸಲು ಆದೇಶಿಸಲಾಗಿದೆ. ಸುಬ್ಬಣ್ಣ ಅವರು ನಿನ್ನೆ ನಿಧನರಾಗಿದ್ದು, ಮೃತರ ಗೌರವಾರ್ಥ ಪೊಲೀಸ್ ಗೌರವಗಳೊಂದಿಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ಕನಿಷ್ಟ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಕೋವಿಡ್-19ರ ಮಾರ್ಗಸೂಚಿಗಳನ್ನು ಪಾಲಿಸಿ ನೆರವೇರಿಸಲು ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. ಸುಬ್ಬಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವರಾದ ಆರಗ ಜ್ಞಾನೇಂದ್ರ, ಗೋವಿಂದ ಕಾರಜೋಳ, ಸಿ.ಎನ್.ಅಶ್ವತ್ಥ್ ನಾರಾಯಣ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟಿಲ್ ಮತ್ತಿತರ ಗಣ್ಯರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More