Subscribe to Updates
Get the latest creative news from FooBar about art, design and business.
- ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
- ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
- ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ
- ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
- ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
- RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
- ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
Author: admin
ಮಧುಗಿರಿ: ತಾಲೂಕು ಕಸಬಾ ಹೋಬಳಿ ಸಿದ್ದಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಮುಂಭಾಗದಲ್ಲಿ ಪಂಚಾಯತಿ ವತಿಯಿಂದ ಕಸದ ತೊಟ್ಟಿಯನ್ನು ಇಟ್ಟಿದ್ದು, ಇದರಿಂದ ಶಾಲೆಯ ಸ್ವಚ್ಛ ಆವರಣಕ್ಕೆ ಧಕ್ಕೆಯಾಗುತ್ತಿರುವ ಕುರಿತು ನಮ್ಮತುಮಕೂರು ಮಾಧ್ಯಮ ಸವಿವರವಾದ ವರದಿಯನ್ನು ಮಾಡಿತ್ತು. ಇದೀಗ ಗ್ರಾಮ ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮಕೈಗೊಂಡಿದ್ದಾರೆ. ಇದೀಗ ಶಾಲೆಯ ಮುಂಭಾಗದಲ್ಲೇ ಇದ್ದ ಕಸದ ತೊಟ್ಟಿಯನ್ನು ತೆರವುಗೊಳಿಸಲಾಗಿದ್ದು, ಜೊತೆಗೆ ಶಾಲಾ ಮಕ್ಕಳಿಗೆ ಅಪಾಯಕಾರಿಯಾಗಿ ಪರಿಣಮಿಸಿದ್ದ ತುಕ್ಕು ಹಿಡಿದ ಪೈಪ್ ಲೈನ್ ನ್ನು ಕೂಡ ತೆರವುಗೊಳಿಸುವ ಮೂಲಕ ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮಕೈಗೊಳ್ಳಲಾಗಿದೆ. ಹಲವು ಸಮಯಗಳಿಂದ ಬಗೆ ಹರಿಯದೇ ಉಳಿಸಿದ್ದ ಸಮಸ್ಯೆ ನಮ್ಮ ತುಮಕೂರು ವರದಿಯಿಂದ ಕೆಲವೇ ದಿನಗಳಲ್ಲಿ ಬಗೆ ಹರಿದಿದ್ದು, ನಮ್ಮತುಮಕೂರು ಮಾಧ್ಯಮದ ವರದಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೂ ಸಮಸ್ಯೆ ಬಗೆ ಹರಿದ ಹಿನ್ನೆಲೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕ, ಹಾಗೂ ಸಹಶಿಕ್ಷರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು, ಸದಸ್ಯರಿಗೆ ಅಭಿನಂದನೆಗಳು ತಿಳಿಸಿ ಮುಂದಿನ…
ಗುಬ್ಬಿ: ವಾಲ್ಮೀಕಿ ಜನಾಂಗದ ಮೀಸಲಾತಿಗಾಗಿ ಮಹಾಸ್ವಾಮಿಗಳು ಹೋರಾಡುತ್ತಿದ್ದು, ಇಂದಿಗೆ 231 ದಿನಗಳ ಕಳೆದರೂ ಈವರೆಗೆ ಸರ್ಕಾರ ಮೀಸಲಾತಿ ಹೆಚ್ಚಿಸದೇ ನಿರ್ಲಕ್ಷ್ಯ ಧೋರಣೆ ತಳೆದಿದೆ ಎಂದು ವಾಲ್ಮೀಕಿ ಸಮುದಾಯದ ಮುಖಂಡರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಎಸ್ ಸಿ, ಎಸ್ ಟಿ ಸಮುದಾಯಗಳು ಮತ್ತು ತಳ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸುವಂತೆ ಒತ್ತಾಯಿಸಿ, ಗುಬ್ಬಿ ಪಟ್ಟಣದ ತಾಲೂಕು ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಿದ ಮುಖಂಡರು, ಸರ್ಕಾರದ ನಿರ್ಲಕ್ಷ್ಯದ ಧೋರಣೆಯನ್ನು ಖಂಡಿಸಿದರು. ಸ್ವಾಮೀಜಿಗಳು ಆಹೋ ರಾತ್ರಿ ಧರಣಿ ಮಾಡುತ್ತಿದ್ದರೂ, ಸರ್ಕಾರ ಸೌಜನ್ಯಕ್ಕಾದರೂ ಅವರನ್ನು ಭೇಟಿ ಮಾಡುವ ಕೆಲಸ ಮಾಡಿಲ್ಲ ಎಂದು ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವರದಿ: ಮಂಜುನಾಥ್ ಗುಬ್ಬಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರರಿಬ್ಬರೂ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ-ಶಿರಗಾಂವ ರಸ್ತೆಯಲ್ಲಿ ನಡೆದಿದೆ. ಸವದತ್ತಿ ತಾಲೂಕಿನ ಚಚಡಿ ಗ್ರಾಮದ ಮಲ್ಲನಗೌಡ ಯಲ್ಲನಗೌಡ ಪಾಟೀಲ್ (21) ಹಾಗೂ ಸಿದ್ಧಾರೂಢ ವೀರಭದ್ರ ಕರೋಶಿ (24) ಮೃತ ದುರ್ದೈವಿಗಳು. ಇವರಿಬ್ಬರೂ ಶಿರಗಾಂವ ಗ್ರಾಮಕ್ಕೆ ತೆರಳುತ್ತಿದ್ದರು. ಬೈಕ್ನಲ್ಲಿ ವೇಗವಾಗಿ ಹೋಗುತ್ತಿದ್ದ ವೇಳೆ ರಸ್ತೆ ಬದಿ ಟ್ರ್ಯಾಕ್ಟರ್ ನಿಲ್ಲಿಸಿರುವುದನ್ನು ಗಮನಿಸದೇ ಡಿಕ್ಕಿ ಹೊಡೆದಿದ್ದಾರೆ. ಇಬ್ಬರ ತಲೆಗೂ ಗಂಭೀರವಾಗಿ ಪೆಟ್ಟು ಬಿದ್ದಿತ್ತು. ಕೂಡಲೇ ಸ್ಥಳೀಯರು ಆಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ರವಾನಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರೂ ಸಾವನ್ನಪ್ಪಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ತಾಲೂಕಿನ ಸಂತಿ ಬಸ್ತವಾಡ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ದೇಮಣ್ಣ ನಾಯ್ಕ ಜಯ ಗಳಿಸಿದ್ದಾರೆ. ಮಂಗಳವಾರ ಅಧ್ಯಕ್ಷ ಸ್ಥಾನಕ್ಕೆ ನಡೆದ ತುರುಸಿನ ಸ್ಪರ್ಧೆಯಲ್ಲಿ ಒಟ್ಟು 15 ಮತಗಳ ಪೈಕಿ ದೇಮಣ್ಣ ನಾಯ್ಕ 8 ಮತ ಗಳಿಸಿ ಜಯ ಸಾಧಿಸಿದರೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಭರಮ ಗುದುಮ್ಕೇರಿ ಅವರು 7 ಮತ ಗಳಿಸಿ ಸೋಲನುಭವಿಸಿದರು. ಅಧ್ಯಕ್ಷ ಸ್ಥಾನಕ್ಕೇರಿದ ಕಾಂಗ್ರೆಸ್ ಅಭ್ಯರ್ಥಿ ದೇಮಣ್ಣ ನಾಯ್ಕ ಹಾಗೂ ಆಯ್ಕೆಯಾಗಲು ಶ್ರಮಿಸಿದ ಎಲ್ಲ ಕಾರ್ಯಕರ್ತರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅಭಿನಂದನೆ ಸಲ್ಲಿಸಿದ್ದಾರೆ. ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲ ಸಹಕಾರ ನೀಡುವುದಾಗಿ ಅವರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಾಗಲಕೋಟೆ: ಮುಧೋಳ ನಗರದಲ್ಲಿ ಏರ್ಪಡಿಸಲಾಗಿದ್ದ ವಿಧಾನ್ ಪರಿಷತ್ ಸದಸ್ಯ, ಆರ್ ಬಿ ತಿಮ್ಮಾಪುರ ಜನ್ಮದಿನೋತ್ಸವ ಕಾರ್ಯಕ್ರಮದ ವೇದಿಕೆ ಮೇಲೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಗ್ಗರಿಸಿ ಬಿದ್ದಿದ್ದಾರೆ. ಸಿದ್ದರಾಮಯ್ಯ ಆಸನದ ಮೇಲೆ ಕೂರೋದಕ್ಕೆ ಬರುವ ವೇಳೆ ಎಡವಿ ಮುಗ್ಗಿರಿಸಿ ಟಿಪಾಯ್ ಮೇಲೆ ಬಿದ್ದಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಸಿದ್ದರಾಮಯ್ಯ ಆಪ್ತರು ಮೇಲೆಬ್ಬಿಸಿದ್ದಾರೆ. ಮಾಜಿ ಕೇಂದ್ರ ಸಚಿವ ದಿವಂಗತ ಸಿದ್ದು ನ್ಯಾಮಗೌಡ ಪುತ್ಥಳಿ ಅನಾವರಣ ಹಾಗೂ ಮಾಜಿ ಸಚಿವ ತಿಮ್ಮಾಪುರ ಅವರ ಹುಟ್ಟುಹಬ್ಬದ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಗೆ ಆಗಮಿಸಿದ್ದರು. ಹೀಗಾಗಿ ಸಚಿವ ಮುರಗೇಶ್ ನಿರಾಣಿ, ಸಹೋದರ ಸಂಗಮೇಶ್ ನಿರಾಣಿ ಸಿದ್ದರಾಮಯ್ಯ ಅವರನ್ನು ಮನೆಗೆ ಆಹ್ವಾನಿಸಿದರು. ಮನೆಗೆ ತೆರಳಿ ಮನೆಯಲ್ಲಿ ಕಾಫೀ ಸೇವಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಧುಗಿರಿ : ಶಾಲೆ ಮುಗಿದ ನಂತರ ಆಟೋದಲ್ಲಿ ಹಿಂದಿರುಗುತ್ತಿದ್ದ ವೇಳೆ ಆಟೋದಿಂದ ಆಯತಪ್ಪಿ ಬಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ಲಿಂಗೇನಹಳ್ಳಿ ಸಮೀಪ ಮಂಗಳವಾರ ಸಂಜೆ ನಡೆದಿದೆ. ಪಟ್ಟಣದ ವಿವೇಕಾನಂದ ವಿದ್ಯಾಮಂದಿರ ಶಾಲೆಯ ಮೂರನೇ ತರಗತಿಯ 9 ವರ್ಷದ ವಿದ್ಯಾರ್ಥಿ ಕುಶಲ್ ಮೃತಪಟ್ಟ ದುರ್ದೈವಿ. ಶಾಲೆ ಮುಗಿಸಿಕೊಂಡು ಬೆಂಕಿಪುರದಲ್ಲಿರುವ ಮನೆಗೆ ಹಿಂದಿರುಗುತ್ತಿದ್ದಾಗ ಮೂಡ್ಲಪ್ಪ ಹೋಟೆಲ್ ಬಳಿ ವಿದ್ಯಾರ್ಥಿ ಆಟೋದಿಂದ ಇಳಿಯುವುದಕ್ಕೂ ಮುಂಚೆ ಆಟೋ ಮುಂದಕ್ಕೆ ಚಲಿಸಿದ್ದು, ಈ ವೇಳೆ ವಿದ್ಯಾರ್ಥಿ ಆಯಾ ತಪ್ಪಿ ಬಿದ್ದಿದ್ದು, ಆಟೋದ ಹಿಂಬದಿ ಚಕ್ರ ವಿದ್ಯಾರ್ಥಿಯ ತಲೆ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತ ವಿದ್ಯಾರ್ಥಿಯ ತಾಯಿ ಸರೋಜಮ್ಮ ಮರುವೇಕೆರೆ ಗ್ರಾಮದ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ತಂದೆ ಅಶ್ವತಪ್ಪನ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹವನ್ನು ತಂದಾಗ ವಿದ್ಯಾರ್ಥಿಯ ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿತು. ಈ ಘಟನೆಗೆ ಸಂಬಂಧಿಸಿ ಮಧುಗಿರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲಿಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ… ವರದಿ : ಅಬಿದ್…
ರಾಮನಗರ, ಸೆಪ್ಟೆಂಬರ್, 27: ಫೆಬ್ರವರಿ ತಿಂಗಳಿನಲ್ಲಿ ಜಿಲ್ಲೆಯಲ್ಲಿ ಆರೋಗ್ಯ ಕವಚ 108ರ ಸೇವೆಯನ್ನು ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಮೇಲ್ದರ್ಜೆಗೇರಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿತ್ತು. ಈ ಮಹತ್ವದ ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದರು. ಆರೋಗ್ಯ ಸಚಿವರು ಹೇಳಿಕೆ ನೀಡಿ 8 ತಿಂಗಳು ಕಳೆದಿದ್ದು, ಆರೋಗ್ಯ ಕವಚ ಯೋಜನೆಯ ಉನ್ನತೀಕರಣವೂ ಆಗಿಲ್ಲ. ಕಾಲ್ ಸೆಂಟರ್ ಸರ್ವರ್ ಸಮಸ್ಯೆಯಿಂದಾಗಿ ತುರ್ತು ಕರೆ ಕನೆಕ್ಟ್ ಆಗದೆ ಆರೋಗ್ಯ ಕವಚ ಹೆಸರಿನ 108 ಆ್ಯಂಬುಲೆನ್ಸ್ ಸೇವೆ ನೊಂದವರಿಗೆ ಸಿಗದೆ ಅನಾರೋಗ್ಯ ಪೀಡಿತವಾಗಿದೆ. ರಾಜ್ಯ ಮಟ್ಟದಲ್ಲಿ 108 ಆ್ಯಂಬುಲೆನ್ಸ್ ಉಚಿತ ಕರೆಯ ಸರ್ವರ್ ಸಮಸ್ಯೆ ಉಂಟಾಗಿದೆ. ಇದರಿಂದ ತುರ್ತು ಕರೆ ಸಂಪರ್ಕ ಸಿಗದೆ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಈ ಹಿಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲೆಯ ವ್ಯಾಪ್ತಿಯಲ್ಲಿ ದಿನದ 24 ಗಂಟೆಗಳ ಕಾಲ ತುರ್ತು ಕರೆಗಳನ್ನು ಸ್ವೀಕರಿಸಲು ಕಂಟ್ರೋಲ್ ರೂಂ ಸ್ಥಾಪಿಸಿದೆ. 90363 96689 ಹಾಗೂ 88800…
ಗೋವಾ ಪೊಲೀಸರು ಗೂಡ್ಸ್ ವಾಹನಗಳು ರಾಜ್ಯಕ್ಕೆ ಪ್ರವೇಶಿಸಿದಂತೆ ಕರ್ನಾಟಕ-ಗೋವಾ ಗಡಿಯಲ್ಲಿ ತಡೆಯುತ್ತಿದ್ದಾರೆ. ಹೀಗಾಗಿ ಕರ್ನಾಟಕ-ಗೋವಾ ಗಡಿಯಲ್ಲಿ ಲಾರಿಗಳು ಸಾಲುಗಟ್ಟಿ ನಿಂತಿವೆ. ಖಾನಾಪುರ ತಾಲೂಕಿನ ಕಣಕುಂಬಿ ಗ್ರಾಮ ಮತ್ತು ಗೋವಾದ ಚೋರ್ಲಾ ಬಳಿ ಲಾರಿಗಳು ನಿಂತಿವೆ. ಚೋರ್ಲಾ ಘಾಟ್ನಲ್ಲಿ ಗೂಡ್ಸ್ ಲಾರಿ ಪ್ರವೇಶಕ್ಕೆ ನಿಷೇಧ ವಿಧಿಸಿದ್ದಕ್ಕೆ ಗೋವಾ ಪೊಲೀಸರ ವಿರುದ್ಧ ಲಾರಿ ಮಾಲಿಕರು ತೀರ್ವ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 21ರಂದು ಅಧಿಸೂಚನೆ ಹೊರಡಿಸಿರುವ ಗೋವಾ ಉತ್ತರ ಜಿಲ್ಲಾಧಿಕಾರಿ, ಚೋರ್ಲಾ ಘಾಟ್ ಮೂಲಕ ಗೋವಾ ಪ್ರವೇಶಿಸಲು ಭಾರೀ ಲಾರಿಗಳಿಗೆ 2023ರ ಮಾರ್ಚ್ 19ರವರೆಗೆ ಸಂಚಾರ ನಿಷೇಧಿಸಿದ್ದಾರೆ. ಗೋವಾಗೆ ಸಂಪರ್ಕ ಕಲ್ಪಿಸುವ ರಾಮನಗರ ಗೋವಾ ರಸ್ತೆ ಕಳೆದ ಮೂರು ವರ್ಷಗಳಿಂದ ಬಂದ್ ಆಗಿದೆ. ಹೀಗಾಗಿ ಗೋವಾ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಚೋರ್ಲಾ ಘಾಟ್ ಮೂಲಕ ಗೂಡ್ಸ್ ವಾಹನಗಳು ತೆರಳುತ್ತವೆ. ಇದರಿಂದ ಕೇರಿ-ಬೆಳಗಾವಿ ರಾಜ್ಯ ಹೆದ್ದಾರಿ 01ರಲ್ಲಿ ಭಾರಿ ವಾಹನಗಳ ದಟ್ಟಣೆ ಹೆಚ್ಚಾಗುತ್ತಿದೆ. ಪರಿಣಾಮ, ಉತ್ತರ ಗೋವಾ ಟ್ರಾಫಿಕ್ ಎಸ್ಪಿ ಮನವಿ ಮೇರೆಗೆ ಉತ್ತರ ಗೋವಾದ ಡಿಸಿ…
ಶಿವಮೊಗ್ಗ : ರಾಜ್ಯಾದ್ಯಂತ ಪಿಎಫ್ ಐ ಮುಖಂಡರ ಮನೆಗಳ ಪೊಲೀಸರು ದಾಳಿ ಮಾಡಿ 70 ಕ್ಕೂಹೆಚ್ಚು ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ , ಕೇಂದ್ರ ಸರ್ಕಾರ ಪಿಎಫ್ ಐ ನಿಷೇಧ ಮಾಡಲು ಮುಂದಾಗಿದೆ. ಇದನ್ನು ಕೇಂದ್ರ ಸರ್ಕಾರ ಮೊದಲೇ ಮಾಡಬೇಕಿತ್ತು. ಸಮಗ್ರ ತನಿಖೆ ಮಾಡಿದ ಮೇಲೆ ಎಸ್ ಡಿಪಿಐ,ಪಿಎಫ್ಐ ಸಂಘಟನೆಗಳ ಷಡ್ಯಂತ್ರ ಬಯಲಾಗಲಿದೆ ಎಂದರು. ಇನ್ನು ಪೇ ಸಿಎಂ ಕ್ಯಾಂಪನ್ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ಈಗಾಗಲೇ ನಾವು ಕೇಸ್ ದಾಖಲು ಮಾಡಿದ್ದೇವೆ. ಸಿದ್ದರಾಮಯ್ಯ ವಿಪಕ್ಷ ನಾಯಕರಂತೆ ವರ್ತಿಸಲಿ,ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಇದಕ್ಕ ಕಾಂಗ್ರೆಸ್ ನಾಯಕರು ನಾಡಿನ ಜನತೆಗೆ ಉತ್ತರ ಕೊಡಬೇಕು ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಸಿಐಡಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ರಾಜ್ಯ ಸಮಗ್ರ ಶಿಕ್ಷಣ ಅಭಿಯಾನದ ನಿರ್ದೇಶಕಿ ಸೇರಿದಂತೆ ಶಿಕ್ಷಣ ಇಲಾಖೆಯ ಐವರು ಹಿರಿಯ ಅಧಿಕಾರಿಗಳು ಹಾಗೂ ಓರ್ವ ಕಂಪ್ಯೂಟರ್ ಆಪರೇಟರ್ ನನ್ನು ಬಂಧಿಸಲಾಗಿದೆ. ರಾಜ್ಯ ಸಮಗ್ರ ಶಿಕ್ಷಣ ಅಭಿಯಾನದ ನಿರ್ದೇಶಕಿ ಗೀತಾ, ಪಠ್ಯ ಪುಸ್ತಕ ವಿಭಾಗದ ನಿರ್ದೇಶಕ ಮಾದೇಗೌಡ, ನಿವೃತ್ತ ಜಂಟಿ ನಿರ್ದೇಶಕ ಬಸವರಾಜ್, ರತ್ನಯ್ಯ, ಶಿವಕುಮಾರ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಂಗಳೂರು ವಿಭಾಗದ ಕಚೇರಿ ಕಂಪ್ಯೂಟರ್ ಆಪರೇಟರ್ ನರಸಿಂಹರಾವ್ ಬಂಧಿಸಲಾಗಿದೆ. ಆರೋಪಿಗಳನ್ನು ಸಿಐಡಿ ಪೊಲೀಸರು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಹಿನ್ನೆಲೆ ಸಿಐಡಿ ಪೊಲೀಸರು ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಈ ಸಂಬಂಧ ಬಂಧಿತ ಐವರು ಆರೋಪಿಗಳು ಅಕ್ಟೋಬರ್ 1 ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…