Author: admin

ತೀವ್ರ ಭೂ ವಿವಾದಕ್ಕೆ ಗುರಿಯಾಗಿದ್ದ ಡಾ.ಕೆ.ಶಿವರಾಮಕಾರಂತ ಬಡಾವಣೆ ಸಂಬಂಧ ಬರೋಬ್ಬರಿ ೧೪೭೫ ಕಟ್ಟಡಗಳಿಗೆ ಸಕ್ರಮಗೊಳಿಸುವುದಾಗಿ ಬಿಡಿಎ ಸಮಿತಿ ಪ್ರಕಟಿಸಿದ್ದು, ಶೀಘ್ರದಲ್ಲೇ ಸಕ್ರಮ ಪ್ರಮಾಣ ಪತ್ರ ಹಂಚಿಕೆ ಮಾಡಲಿದೆ.ನಗರದಲ್ಲಿಂದು ಬಿಡಿಎ ಕೇಂದ್ರ ಕಚೇರಿಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೂತನವಾಗಿ ಅಭಿವೃದ್ಧಿಪಡಿಸುತ್ತಿರುವ ಡಾ. ಶಿವರಾಮ ಕಾರಂತ ಬಡಾವಣೆ ಕುರಿತು ಸರ್ಕಾರ ನೇಮಿಸಿರುವ ಸಮಿತಿ ಅಧ್ಯಕ್ಷರೂ ಆದ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಸುಪ್ರೀಂ ಕೋರ್ಟಿನ ತೀರ್ಪಿನ ಅನ್ವಯ ಡಾ.ಶಿವರಾಂ ಕಾರಂತ ಬಡಾವಣೆಗಳೆಂದು ಅಧಿಸೂಚನೆ ಹೊರಡಿಸಲಾಗಿದ್ದ ೧೭ ಗ್ರಾಮಗಳ ೧೪೭೫ ಕಟ್ಟಡಗಳಿಗೆ ಅನುಮೋದನೆ ನೀಡಿದೆ. ಅದರಂತೆ ಈ ಎಲ್ಲಾ ಕಟ್ಟಡ ಮಾಲೀಕರಿಗೆ ಸಕ್ರಮ ಪ್ರಮಾಣ ಪತ್ರಗಳನ್ನು ನೀಡಲು ಸಮಿತಿ ಉದ್ದೇಶಿಸಿದೆ ಎಂದು ಅವರು ತಿಳಿಸಿದರು.ಇನ್ನೂ, ಡಾ. ಕೆ. ಶಿವರಾಮಕಾರಂತ ಬಡಾವಣೆಗೆ ಗೊತ್ತುಪಡಿಸಿದ ಜಾಗದಲ್ಲಿ ಕಟ್ಟಡ ನಿರ್ಮಿಸಿದ್ದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅರ್ಜಿಗಳ ಆಹ್ವಾನಿಸುವ ಪ್ರಕ್ರಿಯೆ ನಡೆಸಲಾಗಿತ್ತು.ಅದರಂತೆ ೭,೧೬೧ ಅರ್ಜಿಗಳು ಬಂದಿವೆ. ಈ ಪೈಕಿ ೪೨೯ ಅರ್ಜಿಗಳಿಗೆ ದಾಖಲೆ ಇಲ್ಲ. ಹೀಗಾಗಿ, ಗಣನೆಗೆ ತೆಗೆದುಕೊಂಡಿಲ್ಲ ಎಂದು…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ದಕ್ಷಿಣ ಕಾಶಿ  ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಬೀಗ ಮುರಿದು ಒಳಗೆ ನುಗ್ಗಿದ ಕಳ್ಳರು  ಎರಡು ಹುಂಡಿಗಳನ್ನು ಒಡೆದು ಕಳ್ಳತನ ನಡೆಸಿದ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ಎರಡು ಹುಂಡಿಗಳಲ್ಲಿನ  ಹಣ, ಬೆಳ್ಳಿ , ಬಂಗಾರ, ಹಾಗೂ ಬೆಳ್ಳಿ ಪ್ರಭಾವಳಿ , ಮುಖ್ ಬದ್ನ , ನಾಗಾಭರಣಗಳನ್ನು ಕಳವು ಮಾಡಲಾಗಿದೆ. ಎಂದಿನಂತೆ ಇಂದು ದೇವಾಲಯದ ಅರ್ಚಕರು ಮಂಗಳವಾರ ರಾತ್ರಿ ದಿನನಿತ್ಯದಂತೆ ಪೂಜೆ ಮುಗಿಸಿಕೊಂಡು ದೇವಾಲಯದ ಬೀಗ ಹಾಕಿ ಹೋಗಿದ್ದರು. ಇಂದು ಬೆಳಗ್ಗೆ ದೇವಾಲಯದ ಅರ್ಚಕ ವಿಶ್ವನಾಥ್ ದೇವಸ್ಥಾನಕ್ಕೆ ಆಗಮಿಸಿದ ವೇಳೆ ಕಳವು ನಡೆದಿರುವುದು ಬೆಳಕಿಗೆ ಬಂದಿದ್ದು, ಅವರು ತಕ್ಷಣವೇ ಸ್ಥಳೀಯ ಆಡಳಿತ ಮಂಡಳಿ  ಅಧಿಕಾರಿಗಳಿಗೆ ಹಾಗೂ ಹಿರಿಯೂರು ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಹಿರಿಯೂರು ತಾಲ್ಲೂಕಿನ ಕಂದಾಯ ಇಲಾಖೆಯ ಎ ಡಿ ಎಮ್ ಸಿ      ಶಿರಸ್ತರಾದ  ತಿಪ್ಪೇಸ್ವಾಮಿ, ಗ್ರಾಮ ಲೆಕ್ಕಾಧಿಕಾರಿಯಾದ  ಮಾಯವರ್ಮ , ಬಬ್ಬೂರು ಶಿವಣ್ಣ, ದ್ವಿದಸ ಸಹಾಯಕರಾದ ಚನ್ನಬಸವರಾಜು ಹಾಗೂ ಹಿರಿಯೂರು…

Read More

ವರ್ಗಾವಣೆ ಬೇಕಿದ್ದಲ್ಲಿ ಒಂದು ರಾತ್ರಿಯ ಮಟ್ಟಿಗೆ ನಿನ್ನ ಹೆಂಡತಿಯನ್ನು ನನ್ನ ಬಳಿ ಕಳುಹಿಸು’ ಎಂದು ಹೇಳಿದ್ದ ವಿದ್ಯುತ್ ಇಲಾಖೆಯ ಮೇಲಧಿಕಾರಿಯ ಮಾತಿನಿಂದ ನೊಂದು ಉದ್ಯೋಗಿಯೋರ್ವ ಡೀಸೆಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಲಖೀಂಪುರ್‌ನಲ್ಲಿ ನಡೆದಿದೆ. ಲೈನ್ಮನ್ ಗೋಕುಲ ಪ್ರಸಾದ್ (೪೫) ಲಖಿಂಪುರದ ಜ್ಯೂನಿಯರ್ ಇಂಜಿನಿಯರ್ ಕಚೇರಿಯ ಹೊರಗೆ ತನ್ನ ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜ್ಯೂನಿಯರ್ ಇಂಜಿನಿಯರ್ ನಾಗೇಂದ್ರ ಕುಮಾರ ಮತ್ತು ಓರ್ವ ಗುಮಾಸ್ತೆಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪ್ರಸಾದ್ ಮೈಗೆ ಬೆಂಕಿ ಹಚ್ಚಿಕೊಂಡ ಬಳಿಕ ಚಿತ್ರೀಕರಿಸಲಾಗಿದ್ದ ವೀಡಿಯೊದಲ್ಲಿ ತೀವ್ರ ನೋವಿನಲ್ಲಿಯೂ ತನ್ನ ಕೃತ್ಯಕ್ಕೆ ಕಾರಣವನ್ನು ತಿಳಿಸಿದ್ದಾರೆ. ಕುಮಾರ ಮತ್ತು ಆತನ ಸಹಾಯಕ ತನಗೆ ಕಿರುಕುಳ ನೀಡುತ್ತಿದ್ದರು, ತಾನು ಪೊಲೀಸರ ಮೊರೆ ಹೋಗಿದ್ದರೂ ಅವರು ನೆರವಾಗಿರಲಿಲ್ಲ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪ್ರತ್ಯೇಕ ವೀಡಿಯೋ ಮಾಡಿ ಪ್ರತಿಕ್ರಿಯೆ ನೀಡಿರುವ ಪ್ರಸಾದ್‌ನ ಪತ್ರಿ, ಆರೋಪಿಗಳು ಮೂರು…

Read More

ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಇಂದಿನಿಂದ ಪಕ್ಷದ ನಾಯಕರುಗಳು ಮೂರು ತಂಡಗಳಲ್ಲಿ ರಾಜ್ಯ ಪ್ರವಾಸ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಿಜೆಪಿ ಉಸ್ತುವಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ಸಿಂಗ್, ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲು ನೇತೃತ್ವದ ಮೂರು ತಂಡಗಳಲ್ಲಿ ಬಿಜೆಪಿಯ ಪ್ರಮುಖ ಮುಖಂಡರುಗಳು, ಶಾಸಕರು, ಸಂಸದರು ಪಕ್ಷ ಬಲವರ್ಧನೆಗೆ ಇಂದಿನಿಂದ ಏ. 28ರವರೆಗೆ ರಾಜ್ಯಾದ್ಯಂತ ಪ್ರವಾಸ ನಡೆಸಿ ಸಭೆ ಸಮಾವೇಶಗಳಲ್ಲಿ ಭಾಗಿಯಾಗುವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ತಂಡದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ, ಕೇಂದ್ರ ಸಚಿವ ಹ್ರಹ್ಲಾದ್ ಜೋಷಿ, ಸಚಿವರಾದ ಡಾ. ಅಶ್ವತ್ಥ ನಾರಾಯಣ, ಬಿ. ಶ್ರೀರಾಮುಲು, ಬಿಜೆಪಿ ರಾಜ್ಯ ಉಪಾಧ್ಯಕ್ಷರುಗಳಾದ ಬಿ.ವೈ ವಿಜಯೇಂದ್ರ,, ಲಕ್ಷಣ ಸವದಿ, ನಿರ್ಮಲ್‌ಕುಮಾರ್ ಸುರಾನಾ, ನಯನಾ ಗಣೇಶ್ ಇವರುಗಳಿದ್ದು, ರಾಜ್ಯ ಕಾರ್ಯದರ್ಶಿ ವಿನಯ್ ಬಿದಿರೆ ಈ ತಂಡದ ಸಂಯೋಜಕರಾಗಿದ್ದು, ಈ ತಂಡ ಇಂದು ಮತ್ತು ನಾಳೆ ಮಂಗಳೂರು ವಿಭಾಗದಲ್ಲಿ ಸರಣಿ ಸಭೆ ನಡೆಸಲಿದ್ದು, 19,  20 ರಂದು ಶಿವಮೊಗ್ಗ ವಿಭಾಗದಲ್ಲಿ,…

Read More

ಬೆಂಗಳೂರು: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರ ತಲೆದಂಡ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಶೇ.40ರಷ್ಟು ಕಮಿಷನ್ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಸಂತೋಷ್ ಪಾಟೀಲ್ ಪ್ರಕರಣವು ಕಾಂಗ್ರೆಸ್‍ಗೆ ಪ್ರಭಲ ಅಸ್ತ್ರ ಸಿಕ್ಕಂತಾಗಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆ ಬೆನ್ನಲ್ಲಿಯೇ ಪ್ರತಿಪಕ್ಷ ಕಾಂಗ್ರೆಸ್ ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರದ ವಿರುದ್ಧ ಮುಗಿಬಿದ್ದಿದೆ.  ಕೂಡಲೇ ಈಶ್ವರಪ್ಪ ರಾಜೀನಾಮೆಯನ್ನು ಪಡೆಯಬೇಕು ಮತ್ತು ಅವರನ್ನು ಸಂಪುಟದಿಂದ ಕಿತ್ತೆಸೆಯಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ. ಈಶ್ವರಪ್ಪನವರ ರಾಜೀನಾಮೆಗೆ ಪ್ರತಿಪಕ್ಷಗಳಿಂದ ಒತ್ತಡ ಹಿನ್ನೆಲೆ ಸಿಎಂ ಬೊಮ್ಮಾಯಿಯವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರೊಂದಿಗೆ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. ಸದ್ಯ ಬೆಳಗಾವಿ ಪ್ರವಾಸದಲ್ಲಿರುವ ಯಡಿಯೂರಪ್ಪನವರ ಜೊತೆಗೆ ಸಿಎಂ ಬೊಮ್ಮಾಯಿ ಮಾತನಾಡಿದ್ದು, ಈಶ್ವರಪ್ಪನವರಿಂದ ರಾಜೀನಾಮೆ ಪಡೆಯುವ ಬಗ್ಗೆ ಚರ್ಚಿಸಿದ್ದಾರೆಂದು ತಿಳಿದುಬಂದಿದೆ. ಉಭಯ ನಾಯಕರ ಫೋನ್ ಸಂಭಾಷಣೆ ಕುರಿತು ಬಿಜೆಪಿ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಸಿಎಂ ಬೊಮ್ಮಾಯಿಯವರ ಮಾತಿಗೆ ಬಿಎಸ್‌ವೈ ಸಮ್ಮತಿ ನೀಡಿದ್ರಾ? ಸಚಿವ ಸ್ಥಾನಕ್ಕೆ ಇಂದು ರಾತ್ರಿಯೇ ಕೆ.ಎಸ್.…

Read More

ಹೃದಯಘಾತ ಒಳಗಾಗಿದ್ದ ನೀರುವಿತರಕರೊಬ್ಬರು ಚಿಕಿತ್ಸೆ ಪಡೆದು ಮರಳಿ ಕೆಲಸಕ್ಕೆ ಆಗಮಿಸುವ ವೇಳೆ ಕೆಲಸ ನೀಡಲು ನಿರಾಕರಿಸಿದ ಘಟನೆ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಪಂಚಾಯತ್ ನ ಕ್ರಮವನ್ನು ಖಂಡಿಸಿ ಸಂತ್ರಸ್ತ ಹಾಗೂ ಕುಟುಂಬದ ಸದಸ್ಯರು ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಮುಂಭಾಗ ಧರಣಿ ನಡೆಸಿದ್ದು, ತಕ್ಷಣವೇ ಕೆಲಸಕ್ಕೆ ಮರುನೇಮಕ ಮಾಡುವಂತೆ ಒತ್ತಾಯಿಸಿದರು. ಹೃದಯಘಾತ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಕಛೇರಿಗೆ ಕೆಲಸಕ್ಕೆ ಹಾಜರಾಗಲು ಹೋದರೆ, ಗ್ರಾಮ ಪಂಚಾಯಿತಿ ಆಡಳಿತ ನೀರುವಿತರಕ ಹುದ್ದೆಯಿಂದ ನಿನ್ನನ್ನು ವಜಾಕರಿಸಲಾಗಿದೆ ಎಂದು ಹೇಳಿದೆ. ಇದರಿಂದಾಗಿ ನನ್ನ ಕುಟುಂಬವೇ ಇಂದು ಬೀದಿಗೆ ಬರುವ ಪರಿಸ್ಥಿತಿ ಎದುರಾಗಿದೆ ಎಂದು ನೊಂದ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ನೌಕರ ಕೃಷ್ಣಚಾರಿ ಅಳಲು ತೋಡಿಕೊಂಡಿದ್ದಾರೆ. ನಾನು 2014 ನೇ ಸಾಲಿನಲ್ಲಿ ಗ್ರಾಮ ಪಂಚಾಯಿತಿಗೆ ನೀರು ವಿತರಕನಾಗಿ ಕೆಲಸಕ್ಕೆ ಸೇರಿದ್ದು, ಪ್ರಾಮಾಣಿಕವಾಗಿ ಕೆಲಸ ನಿರ್ವಹಣೆ ಮಾಡುತ್ತಿದ್ದೆ. ಇತ್ತೀಚೆಗೆ ನಾನು ಹೃದಯಘಾತಕ್ಕೆ ಒಳಗಾಗಿ ಆಸ್ಪತ್ರೆ ಸೇರಿ ಸುಮಾರು 8 ಇಂಚಿನಷ್ಟು ಬೈಪಾಸ್ ಸರ್ಜರಿ ಮಾಡಿದ್ದಾರೆ. ಈ…

Read More

ಮಧುಗಿರಿ: ತಾಲೂಕಿನ ಪುರವರ ಹೋಬಳಿಯ ಗೊಂದಿಹಳ್ಳಿ,ಪುರವರ,ಬ್ಯಾಲ್ಯ,ಕೋಡಗದಾಲ ಗ್ರಾಮಗಳಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ,ಬಾಲ್ಯ ವಿವಾಹ ನಿಷೇದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಬಾಲ್ಯವಿವಾಹ ನಿಷೇಧ ಕಾಯ್ದೆಯ ಸಮರ್ಪಕ ಅನುಷ್ಠಾನದ ಅಭಿಯಾನ ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಂಬಂಧವಾಗಿ ವಾರ್ತಾ ಇಲಾಖೆಯ “ವಿಡಿಯೋ ಆನ್ ವ್ಹೀಲ್ಸ್ ” ಮುಖಾಂತರ ಬಸ್ ನಿಲ್ದಾಣ ಸ್ಥಳಗಳಲ್ಲಿ ವಿಡಿಯೋ ಪ್ರದರ್ಶನ ಏರ್ಪಡಿಸಲಾಗಿತ್ತು. ಗ್ರಾಮದಲ್ಲಿನ ಕಾರ್ಯಕ್ರಮವನ್ನು ಮಧುಗಿರಿಯ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಮಹೇಶ್, ಗೊಂದಿಹಳ್ಳಿ ಗ್ರಾ.ಪಂ ಅಧ್ಯಕ್ಷೆ ರಮ್ಯಾ, ಪುರವರ ಗ್ರಾ.ಪಂ ಉಪಾಧ್ಯಕ್ಷೆ ರಾಧಿಕಾ, ಪಿ ಡಿ ಓ ಪುಂಡಲಿಕ, ಕಂದಾಯ ಇಲಾಖೆಯ ನಟರಾಜು ಉದ್ಘಾಟಿಸಿದರು.  ಸಾಂತ್ವನ ಕೇಂದ್ರದ ವಿಜಯಲಕ್ಷ್ಮಿ, ಗ್ರಾಮದ ಮುಖಂಡ ಸತೀಶ್ ಗ್ರಾ.ಪಂ ಬಿಲ್ ಕಲೆಕ್ಟರ್ ಮಂಜುನಾಥ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಧುಗಿರಿಯ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಮಹೇಶ್ ಪ್ರಮಾಣ ವಚನ ಭೋದಿಸಿದರು. ಪಿಡಿಓ ಪುಂಡಲಿಕ ರವರು ಬಾಲ್ಯವಿವಾಹದಿಂದಾಗುವ ಅನಾಹುತಗಳನ್ನು ಕುರಿತು ವಿವರಿಸಿದರು. ನಂತರ ಬಾಲ್ಯವಿವಾಹ ನಿಷೇದ ಕುರಿತು ಜಾಗೃತಿ…

Read More

ರಾಮನವಮಿ ಮೆರವಣಿಗೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟಗಳು ನಡಿಸಿದ ಪರಿಣಾಮ ಉಂಟಾದ ಗಲಭೆಯಲ್ಲಿ ಕೆಲವು ವಾಹನಗಳು ಮತ್ತು ಮನೆಗಳಿಗೆ ಬೆಂಕಿ ಹಚ್ಚಿಲಾಗಿದ್ದು ಪರಿಸ್ಥಿತಿ ಹತೋಟಿಗೆ ತರಲು ಪೋಲೀಸರು ಕೊನೆಗೂ ಯಶಸ್ವಿಯಾಗಿ ಇಡೀ ಖಾರ್ಗೋನ್ ನಗರದಲ್ಲಿ ಕಫ್ರ್ಯೂ ವಿಸಲಾಗಿದೆ.ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಜಿಲ್ಲಾಕೇಂದ್ರದ ಬಳಿಯ ತಾಲಾಬ್ ಚೌಕ್ ಪ್ರದೇಶದಿಂದ ರಾಮನವಮಿ ಮೆರವಣಿಗೆ ಪ್ರಾರಂಭವಾದಾಗ ಕಿಡಿಗೇಡಿಗಳು ಕಲ್ಲು ಎಸೆದು ದಾಂದಲೆ ನಡೆಸಿದ್ದಾರೆ ಅಂಗಡಿಗಳಿಗೆ ಬೆಂಕಿಹಚ್ಚಿ ಭಯದ ವಾತಾವರನ ಸೃಷ್ಠಸಿದರು ಎಂದು ಉದ್ರಿಕ್ತ ಗುಂಪು ಪೋಲಿಸರ ಮೇಲೆ ಹಲ್ಲೆಗೆ ಮುಂದಾದಾಗ ಪರಿಸ್ಥಿತಿಯನ್ನು ನಿಯಂತ್ರಿಸಲು ಪೋಲೀಸರು ಅಶ್ರುವಾಯುಸೆಡಿಸಲಾಯಿತ್ತು.ಖಾರ್ಗೋನೆ ಪೋಲೀಸ್ ಅೀಧಿಕ್ಷಕ ಸಿದ್ಧಾರ್ಥ್ ಚೌಧರಿ ಮತ್ತು ಇತರ ಇಬ್ಬರು ಪೋಲೀಸ್ ಸಿಬ್ಬಂದಿ ಸೇರಿ ಹಲವು ಜನರು ಗಾಯಗೊಂಡಿದ್ದಾರೆ. ಘಟನೆಯ ನಂತರ, ಇಡೀ ಖಾರ್ಗೋನ್ ನಗರದಲ್ಲಿ ಕಫ್ರ್ಯೂ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ .ಅನುಗ್ರಹ ಹೇಳಿದ್ದಾರೆ.ವೈದ್ಯಕೀಯ ತುರ್ತು ಪರಿಸ್ಥಿತಿಗಾಗಿ ಮಾತ್ರ ಮನೆಯಿಂದ ಹೊರಬರುವಂತೆ ನಾಗರಿಕರಿಗೆ ತಿಳಿಸಲಾಗಿದೆ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ಹೇಳಿದರು. ಆಕ್ಷೇಪಾರ್ಹ ಸಂದೇಶಗಳು ಮತ್ತು…

Read More

ಮುಂಬೈನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಸೋಮವಾರ ರಾತ್ರಿ ನಡೆದ ಐಪಿಎಲ್ ಟೂರ್ನಿಯ 21ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್‍ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 8 ವಿಕೆಟ್‍ಗಳ ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಗೆದ್ದ ಹೈದರಾಬಾದ್ ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಗುಜರಾತ್ ನಿಗದಿತ 20 ಓವರ್‍ ಗಳಲ್ಲಿ 7 ವಿಕೆಟ್‍ ಕಳೆದುಕೊಂಡು 162 ರನ್‍ ಗಳಿಸಿತು. ಗೆಲುವಿನ ಗುರಿ ಬೆನ್ನತ್ತಿದ ಹೈದರಾಬಾದ್ 19.1 ಓವರ್‍ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಭರ್ಜರಿ ಗೆಲುವು ಸಾಧಿಸಿತು. ಸತತ 3 ಗೆಲುವು ಸಾಧಿಸಿದ್ದ ಗುಜರಾತ್ ತಂಡಗ ಗೆಲುವಿನ ನಾಗಾಲೋಟಕ್ಕೆ ಹೈದರಾಬಾದ್ ಬ್ರೇಕ್ ಹಾಕಿತು. ಹಾರ್ದಿಕ್ ಪಾಂಡ್ಯ ಪಡೆಗೆ ಸೋಲಿನ ರುಚಿ ತೋರಿಸುವ ಮೂಲಕ ಕೇನ್ ವಿಲಿಯಮ್ಸನ್ ಪಡೆ 2ನೇ ಗೆಲುವು ದಾಖಲಿಸಿತು. ವರದಿ ಆಂಟೋನಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಪ್ರತಿಭಟನೆ ಮಾಡುವ ನೈತಿಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಹೇಳಿದರು. ಉಡುಪಿ-ಮಂಗಳೂರು ಪ್ರವಾಸಕ್ಕೆ ತೆರಳುವ ಮುನ್ನ ಬೆಂಗಳೂರಿನ ಆರ್‌ಟಿ ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಇಂದು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್‌ಗೆ ಪ್ರತಿಭಟನೆ ಮಾಡೋಕೆ ನೈತಿಕ ಹಕ್ಕೇ ಇಲ್ಲ ಎಂದರು. ಈ ದೇಶದಲ್ಲಿ ಅತಿ ಹೆಚ್ಚು ಬೆಲೆ ಏರಿಕೆ ಮಾಡಿದ ಕೀರ್ತಿ, ಖ್ಯಾತಿ, ದಾಖಲೆ ಕಾಂಗ್ರೆಸ್ ಪಕ್ಷದ್ದು ಎಂದು ವಾಗ್ದಾಳಿ ನಡೆಸಿದ ಅವರು, ಯಾವ ನೈತಿಕತೆ ಇಟ್ಟುಕೊಂಡು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆಯೋ ಗೊತ್ತಿಲ್ಲ ಎಂದರು. ಕಾಂಗ್ರೆಸ್ ಆಡಳಿತದಲ್ಲಿ ಯಾವುದೇ ಬೆಲೆಗಳು ಇಳಿಕೆಯಾಗಿರಲಿಲ್ಲ. ಈಗಿರುವಾಗ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುವುದಕ್ಕೆ ನೈತಿಕತೆ ಇಲ್ಲ ಎಂದರು. ಮಂಡ್ಯದ ವಿದ್ಯಾರ್ಥಿನಿ ಮಸ್ಕಾನ್‌ಗೂ ಆಲ್‌ ಖೈದಾಗೂ ಸಂಬಂಧ ಇದೆ ಈ ಬಗ್ಗೆ ತನಿಖೆ ನಡೆಸಿ ಎಂದು ಬಿಜೆಪಿ ಸಂಸದ ಅನಂತ್‌ ಕುಮಾರ್ ಹೆಗಡೆ…

Read More