Subscribe to Updates
Get the latest creative news from FooBar about art, design and business.
- ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
- ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
- ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
- ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
- ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
- ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
- ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
- ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್.ಕೃಷ್ಣಮೂರ್ತಿ
Author: admin
ತುಮಕೂರು: ಡಿ.ಕೆ.ಶಿವಕುಮಾರ್ ಸಿಎಂ ಆದ್ರೆ, ತುಮಕೂರಿಗೆ ನಾನೇ ಸಿಎಂ ಎಂದಿದ್ದ ಕುಣಿಗಲ್ ಶಾಸಕ ಡಾ.ರಂಗನಾಥ್ ಇದೀಗ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ತುಮಕೂರಿನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಕುಣಿಗಲ್ ತಾಲೂಕಿನ ಅಭಿವೃದ್ಧಿ ಉದ್ದೇಶದಿಂದ ನಾನು ಹಾಗೇ ಹೇಳಿದ್ದೇನೆ. ಕಾಂಗ್ರೆಸ್ ಸರ್ಕಾರ ಬಂದರೇ ಅಭಿವೃದ್ಧಿ ಆಗಲಿದೆ ಎಂದು ಹೇಳಿದ್ದೇನೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಸಿಎಂ ರೇಸ್ ನಲ್ಲಿ ಇದ್ದಾರೆ. ನಾನು ಮಾತಿನ ಭರದಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದೆ ಎಂದು ಸ್ಪಷ್ಟನೆ ನೀಡಿದರು. ಕಾಂಗ್ರೆಸ್ ನಿಂದ ಯಾರೂ ಮುಖ್ಯಮಂತ್ರಿ ಆದರೂ ಕುಣಿಗಲ್ ನಲ್ಲಿ ಅಭಿವೃದ್ಧಿ ದೃಷ್ಟಿಯಿಂದ ನಾನೇ ಸಿಎಂ ಎಂದಿದ್ದೇನೆ. ಮುಖ್ಯಮಂತ್ರಿ ಯಾರಾಬೇಕು ಅನ್ನೋದು ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಅವರು ಹೇಳಿದರು. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ತುಮಕೂರು: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದದ ಹಿನ್ನೆಲೆ ಅಖಿಲ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್ಎಸ್ಯುಐ) ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ನೇತೃತ್ವದಲ್ಲಿ ಕಾರ್ಯಕರ್ತರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಲ್ಲದೆ,ಖಾಕಿ ಚಡ್ಡಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬುಧವಾರ ನಡೆದಿದೆ. ಈಗಾಗಲೇ 15 ಜನರರು ಮತ್ತು 2 ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ರೀತಿಯ ಗುಂಡಾ ವರ್ತನೆ ನಮ್ಮಲ್ಲಿ ನಡೆಯಲ್ಲ. ಬೆಂಗಳೂರಿಂದ ಐವರು, ದಾವಣಗೆರೆಯಿಂದ ಮೂವರು, ಹಾಸನದಿಂದ ಒಬ್ಬರು, ತುಮಕೂರಿನಿಂದ ಒಬ್ಬರು ಎಸ್ಎಸ್ಯುಐ ಮುಖಂಡರು ಪ್ರೀ ಪ್ಲಾನ್ ಮಾಡಿಕೊಂಡು ಬಂದಿದ್ದಾರೆ. ಅವರಿಗೆಲ್ಲ ಈಗ ಪೊಲೀಸರು ಕಾನೂನಿನ ಪಾಠ ಮಾಡ್ತಾರೆ. ಇದು ಕಾಂಗ್ರೆಸ್ ಮುಖಂಡರ ಕೈವಾಡ. ದಾವಣಗೆರೆಯ ಎನ್ಎಸ್ಯುಐ ಉಪಾಧ್ಯಕ್ಷ ಫೈಲ್ವಾನ್ ಅಲಿ ರೆಹಮಾನ್ ಎಂಬಾತ ಬಂದಿದ್ದಾನೆ. ಮೊದಲೇ ಸಂಚು ರೂಪಿಸಿಕೊಂಡು ಬಂದಿದ್ದಾರೆ ಎಂದು ಗೃಹ ಸಚಿವರು ಎಚ್ಚರಿಸಿದರು.ಘಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಗೃಹ ಸಚಿವ…
ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಿ.ರೂಪಾ ಮೌದ್ಗಿಲ್ ಅವರ ವಿರುದ್ಧ ಬುಧವಾರ ಮತ್ತೊಂದು ದೂರನ್ನು ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ನೀಡಿದ್ದು, ಅದರಲ್ಲಿ ರೂಪಾ ತಾವು ನಡೆಸಿರುವ ಅಕ್ರಮಕ್ಕೆ ಕಡತಗಳನ್ನು ಸರಿಪಡಿಸುವ, ನಾಶಪಡಿಸುವ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ಆರೋಪಿಸಿದ್ದಾರೆ. ರೂಪಾ ಅವರು ಒಂದು ಹೊಸ ಇನೋವಾ ಕ್ರಿಸ್ಟಾಕಾರನ್ನು ಅವರ ಉಪಯೋಗಕ್ಕೆ, ಇನ್ನೊಂದು ಇನ್ನೋವಾ, ನಿಸಾನ್ ಸನ್ನಿ ಮತ್ತು ಒಂದು ದ್ವಿಚಕ್ರ ವಾಹನವನ್ನು ಮನೆಯ ಬಳಕೆಗೆ ಉಪಯೋಗಿಸಿ ನಿಗಮಕ್ಕೆ ಹೊರೆ ಮಾಡಿದ್ದಾರೆ. ಅಕ್ರಮ ನಡೆಸಿದ್ದಾರೆ ಎಂದು ನಾನು ಆರೋಪ ಮಾಡಿದ ಬಳಿಕ ಕಡತಗಳನ್ನು ತರಿಸಿಕೊಂಡು ಕೆಲವನ್ನು ತಿದ್ದಿ ಸರಿಪಡಿಸುವ, ಮತ್ತೆ ಕೆಲವನ್ನು ನಾಶಪಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ. ಮೂರು ಕಾರಿಗೆ ಡೀಸೆಲ್ ಬಿಲ್ ಮಾಡಿಸಿಕೊಳ್ಳಲು ಅನುಕೂಲವಾಗಲಿ ಎಂದು 2 ವರ್ಷದಿಂದ ಕೆಲಸ ಮಾಡುತ್ತಿದ್ದ ಹಳೆಯ ಅಕೌಂಟೆಂಟ್ ಸುಭೇಶ್ ಅವರಿಗೆ ಕಿರುಕುಳ ನೀಡಿ ಓಡಿಸಿ ಶೋ ರೂಂನಲ್ಲಿ ಕ್ಯಾಶಿಯರ್ ಆಗಿದ್ದ…
ಸರಗೂರು: ಅಮಾಯಕ ಹಾಡಿ ಜನರ ಮೇಲೆ ಅರಣ್ಯ ಇಲಾಖೆ ಹಾಕಿರುವ ಸುಳ್ಳು ಮೊಕದ್ದಮೆಯನ್ನು ಖಂಡಿಸಿ, ತಾಲೂಕಿನ ಶಾಸಕ ಅನಿಲ್ ಚಿಕ್ಕಮಾದು ಹಾಡಿ ಜನರೊಂದಿಗೆ ಅರಣ್ಯ ಇಲಾಖೆ ಕಚೇರಿಯಲ್ಲಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಮೊಳೆಯೂರು ವನ್ಯ ಜೀವಿ ವಲಯದ ಅರಣ್ಯಾಧಿಕಾರಿ ಪುಟ್ಟರಾಜು, ಹಾಡಿಯ 16 ಮಂದಿ ಮೇಲೆ ದೂರು ದಾಖಲಿಸಿ, ಇಬ್ಬರನ್ನು ಬಂಧಿಸಿದ್ದಾರೆ. ಹಾಡಿ ಜನತೆ ಜಿಂಕೆಯನ್ನು ಕೊಂದು ತಿಂದಿದ್ದಾರೆ ಎನ್ನುವುದು ಅರಣ್ಯ ಇಲಾಖೆ ದೂರು. ಆದರೆ ಹಾಡಿ ಜನತೆ ಜಿಂಕೆಯನ್ನು ಕೊಂದು ತಿಂದಿಲ್ಲ. ಕೆಬ್ಬೇಪುರ ಹಾಡಿ ಅರಣ್ಯದಂಚಿನಲ್ಲಿದ್ದು, ಜಿಂಕೆಯೊಂದು ಹಾಡಿಗೆ ಬಂದಿದೆ. ಹಾಡಿಯಲ್ಲಿದ್ದ ನಾಯಿಗಳು, ಜಿಂಕೆ ಮೇಲೆ ದಾಳಿ ನಡೆಸಿ ಕೊಂದು ತಿಂದಿವೆ. ಆದರೆ ಈ ಬಗ್ಗೆ ಸರಿಯಾಗಿ ವಿಚಾರಣೆ ನಡೆಸದ ಅರಣ್ಯಾಧಿಕಾರಿ ಪುಟ್ಟರಾಜು, ಹಾಡಿಯ 16 ಮಂದಿ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ, ಮೂವರನ್ನು ಬಂದಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಮೇ 26 ರಂದು ಘಟನೆ ನಡೆದಿದೆ. ದೂರು ದಾಖಲಾದ ಅಂದಿನಿಂದ ಹಾಡಿ ಜನತೆ…
ಸರಗೂರು: ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಶ್ರೀಗಂಧ ಮರದ ಚೇಗಿನ ತುಂಡುಗಳನ್ನು ಅರಣ್ಯಧಿಕಾರಿಗಳು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಇಲ್ಲಿನ ಕಲ್ಲಹಳ್ಳ ಗ್ರಾಮದ ಬಳಿ ನಡೆಸಿದೆ. ರಾಜು(40) ಹಾಗೂ ರಮೇಶ್(37) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಈ ಪ್ರಕರಣದ ಇನ್ನಿತರ ಮೂವರು ಆರೋಪಿಗಳಾದ ದಾಸ(28), ಕುಮಾರ(30) ಶಿವು(25 ವರ್ಷ ತಲೆ ಮರೆಸಿಕೊಂಡ ಆರೋಪಿಗಳಾಗಿದ್ದಾರೆ. ಶ್ರೀಗಂಧದ ಮರದ ಚೇಗಿನ ತುಂಡುಗಳನ್ನು ಸಾಗಿಸಲಾಗುತ್ತಿರುವ ಬಗ್ಗೆ ಖಚಿತ ಮಾಹಿತಿಮೇರೆಗೆ ವಿಶೇಷ ಹುಲಿ ಸಂರಕ್ಷಣಾ ದಳ ಪ್ಲಟೂನ್-02 ಹ್ಯಾಂಡ್ ಪೋಸ್ಟ್ ಪ್ರಭಾರ ವಲಯ ಅರಣ್ಯಧಿಕಾರಿಗಳಾದ ನವೀನ್ ಕುಮಾರ್ ಅಶೋಕ ಚಿಕ್ಕಗಡೆ ರವರ ನೇತೃತ್ವದಲ್ಲಿ, ಕಲ್ಲಹಳ್ಳ ಗ್ರಾಮದ ಬಳಿ ಇಬ್ಬರು ಆರೋಪಿಗಳನ್ನು ಬಂಧಿಸಿ, ಮರ ಮರದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳೆಲ್ಲರೂ ಕಾಂತನ ಹಾಡಿ ಸರಗೂರು ತಾಲೂಕಿನವರಾಗಿರುತ್ತಾರೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳು ಹಾಗೂ ಜಪ್ತಿ ಮಾಲಿನ ಸಮೇತ ಮೊಳೆಯೂರು ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿಗಳ ರವರ ಕಚೇರಿಗೆ ಹಸ್ತಾಂತರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಕಾರ್ಯಾಚರಣೆಯಲ್ಲಿ ವಿಶೇಷ ಹುಲಿ…
ತಿಪಟೂರು : ಅಭಿವೃದ್ಧಿಯಲ್ಲಿ ಶೂನ್ಯ. ಕಳೆದ ಚುನಾವಣೆಯಲ್ಲಿ ಜನರಿಗೆ ಅನೇಕ ಸುಳ್ಳು ಭರವಸೆ ನೀಡಿ ಶಾಸಕರನ್ನು ಹೈಜಾಕ್ ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಸದಾ ವಿವಾದಗಳನ್ನು ಸೃಷ್ಠಿಸುತ್ತಾ ಜನರ ಮನಸ್ಸಿಗೆ ಘಾಸಿ ಮಾಡಿ ಸದಾ ಒಂದು ಸಮುದಾಯದ ಹಿತ ಕಾಪಾಡುತ್ತಾ ಎಲ್ಲಾ ವರ್ಗದವರ ದಾರಿತಪ್ಪಿಸುತ್ತಿದೆ. ಇದೀಗ ರಾಜ್ಯ ಸರ್ಕಾರ ಪಠ್ಯ ಪರಿಷ್ಕರಣೆ ಹೆಸರಲ್ಲಿ ತಮ್ಮ ಕೋಮುವಾದ ಬಿಂಬಿಸುತ್ತಿದೆ ಎಂದು ತಿಪಟೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಷಡಕ್ಷರಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ನನ್ನ ರಾಜಕೀಯ ಜೀವನದಲ್ಲಿ ಇಂತಹ ದುಸ್ಥಿತಿ ಎಂದೂ ಕಂಡಿಲ್ಲಾ. ಹಿಂದೆ ತಾವು ಬರೆದ ಲೇಖನ ಪಠ್ಯದಲ್ಲಿ ಬಂದರೇ ಹೆಮ್ಮೆಪಡುತ್ತಿದ್ದರು. ಆದರೆ ಈಗ ಪಠ್ಯ ಭಾಗಗಳಿಗೆ ಲೇಖಕರು ಬರೆದ ಪಾಠಗಳನ್ನು ದಯಮಾಡಿ ಸೇರಿಸಬೇಡಿ ಎಂದು ಲೇಖಕರೇ ಪತ್ರ ಬರೆಯುತ್ತಿರುವುದು ದುಸ್ಥಿತಿಯಾಗಿದೆ ಎಂದು ಅವರು ಹೇಳಿದರು. ಲಿಂಗಾಯತ ಧರ್ಮ ಸ್ಥಾಪನೆ ಮಾಡಿದ ಜ್ಞಾನಜ್ಯೊತಿ ಬಸವಣ್ಣ ಧರ್ಮವನ್ನು ಸುಧಾರಿಸಿದರು ಎಂದು ಸೇರಿಸುವ ಮಟ್ಟಕ್ಕೆ ಇಳಿದಿದ್ದಾರೆಂದರೇ ಜನ ಯೋಚಿಸಬೇಕು.…
ಕೊರಟಗೆರೆ: ಶಿಕ್ಷಣ, ಆರೋಗ್ಯ,ಕೃಷಿ, ಕೈಗಾರಿಕಾ ಕ್ಷೇತ್ರಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರ ಹೆಚ್ಚಿನ ಆದ್ಯತೆಯ ಅನುದಾನ ಮೀಸಲಿಡಬೇಕಿದೆ ಎಂದು ಶಾಸಕ ಡಾ.ಜಿ.ಪರಮೇಶ್ವರ್ ಆಗ್ರಹಿಸಿದರು. ಕೊರಟಗೆರೆ ತಾಲ್ಲೂಕು ಹೊಳವನಹಳ್ಳಿ ಹೋಬಳಿ ಬೈರೇನಹಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆ ಮತ್ತು ತಾಲ್ಲೂಕು ಪಂಚಾಯತ್ ಯಿಂದ ಸೋಮವಾರ ಏರ್ಪಡಿಸಲಾಗಿದ್ದ ಗಂಗಾಕಲ್ಯಾಣ ಯೋಜನೆಯಡಿ ಮೋಟಾರುಪಂಪು ವಿತರಣೆ ಮತ್ತು ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತ ದೇಶದ ರೈತಾಪಿವರ್ಗ ಮಳೆಯನ್ನೇ ಆಧರಿಸಿ ವ್ಯವಸಾಯ ಮಾಡ್ತಾರೇ. ನೀರಾವರಿ ಯೋಜನೆಗೆ ಈಗಾಗಲೇ ಹತ್ತಾರು ಕಾಮಗಾರಿ ನಡೆಯುತ್ತಿದೆ. ಎತ್ತಿನಹೊಳೆ ಯೋಜನೆಯಿಂದ ಕೊರಟಗೆರೆ ತಾಲೂಕಿನ 109ಕೆರೆಗಳಿಗೆ ನೀರು ಹರಿಯಲಿದೆ. ಇದರಿಂದ ರೈತಾಪಿವರ್ಗ ಕೃಷಿ ಚಟುವಟಿಕೆ ಮಾಡಲು ಅನುಕೂಲ ಆಗಲಿದೆ ಎಂದು ತಿಳಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ 15, ವಾಲ್ಮೀಕಿ ಅಭಿವೃದ್ದಿ ನಿಗಮದಿಂದ 16, ಆದಿಜಾಂಭವ ಅಭಿವೃದ್ದಿ ನಿಗಮದಿಂದ 10, ತಾಂಡ ಅಭಿವೃದ್ದಿ ನಿಗಮದಿಂದ 2 ಸೇರಿ ಒಟ್ಟು 2018-19ನೇ ಸಾಲಿನ ಗಂಗಾಕಲ್ಯಾಣ ಯೋಜನೆಯಡಿ 43ಫಲಾನುಭವಿಗಳಿಗೆ ಮೋಟಾರ್ ಪೈಪ್ ಮತ್ತು ಪರಿಕರ ಹಾಗೂ…
ಮೈಸೂರು: ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರವೇಶಾತಿ ಶುಲ್ಕ ಹಾಗೂ ಪರೀಕ್ಷಾ ಶುಲ್ಕವನ್ನು ರದ್ದುಪಡಿಸಬೇಕೇಂದು ಒತ್ತಾಯಿಸಿ ವಿಶ್ವವಿದ್ಯಾನಿಲಯದ ಆಡಳಿತ ವ್ಯವಸ್ಥೆಯ ವಿರುದ್ಧ ವಿದ್ಯಾರ್ಥಿಗಳು ವಿವಿಧ ಘೋಷಣೆಗಳನ್ನು ಕೂಗುತ್ತಾ ಮಾನಸಗಂಗೋತ್ರಿಯ ಕ್ಲಾಕ್ ಟವರ್ ಮುಂಭಾಗ ಪ್ರತಿಭಟನೆ ಮಾಡಲಾಯಿತು. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಇದ್ದಕ್ಕಿದ್ದ ಹಾಗೆ ಪ್ರವೇಶ ಶುಲ್ಕ ಮತ್ತು ಪರೀಕ್ಷಾ ಶುಲ್ಕವನ್ನು ಕೂಡಲೇ ಪಾವತಿ ಮಾಡಬೇಕೆಂದು ಆದೇಶ ಹೊರಡಿಸಿರುವ ಆಡಳಿತ ವ್ಯವಸ್ಥೆಗೆ ಧೋರಣೆಯನ್ನು ತೀವ್ರವಾಗಿ ಖಂಡಿಸಿ, ಕರ್ನಾಟಕ ರಾಜ್ಯ ಸಂಶೋಧಕ ಸಂಘದ ಅಧ್ಯಕ್ಷರಾದ ಮರಿದೇವಯ್ಯ.ಎಸ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು, 2021/22ನೇ ಸಾಲಿನಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರವೇಶಾತಿ ಸಂದರ್ಭದಲ್ಲಿ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳಿಗೆ ಪ್ರವೇಶಾತಿಯನ್ನು ಸರ್ಕಾರದ ಆದೇಶದ ಅನುಸಾರ ಉಚಿತವಾಗಿ ಪ್ರವೇಶಾತಿಯನ್ನು ನೀಡಿದ್ದು, ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಗೆ ಬಂದಾಗ ಪ್ರವೇಶ ಶುಲ್ಕವನ್ನು ಕಡಿತ ಮಾಡಿಕೊಳ್ಳಬೇಕಿತ್ತು. ಆದರೆ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಬರುವ ಮುಂಚೆಯೇ ಎಲ್ಲರೂ ಪ್ರವೇಶ ಶುಲ್ಕ ಮತ್ತು ಪರೀಕ್ಷಾ ಶುಲ್ಕವನ್ನು 31/05/2022ರಂದು ಕಡೆಯ ದಿನದ ಒಳಗೆ ಕಟ್ಟಬೇಕೆಂದು…
ತಿಪಟೂರು: ತಾಲ್ಲೂಕಿನ ಗುರುಗದಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶ್ರೀಮತಿ ಶೈಲಾ ಮತ್ತು ಉಪಾಧ್ಯಕ್ಷರಾಗಿ ಎಚ್.ಎಂ.ನಾಗರಾಜ್ ಅವಿರೋಧ ಆಯ್ಕೆಯಾಗಿದ್ದಾರೆ. ಸದಸ್ಯರಾದ ಶಶಿಧರ್, ನರಸಿಂಹಮೂರ್ತಿ ಮಾಜಿ ಅಧ್ಯಕ್ಷೆ ಮೀನಾಕ್ಷಿ, ಉಪಾಧ್ಯಕ್ಷ ಶಶಿಧರ್, ಚಂದ್ರಶೇಖರ್, ಮಾಜಿ ಸದಸ್ಯ ದರ್ಶನ್ ಪಟೇಲ್, ಕಾಂಗ್ರೆಸ್ ಮುಖಂಡರಾದ ನಾಗರಾಜ್ (ಎಲ್ಐಸಿ), ರಾಜು, ಪ್ರಸನ್ನ ಕುಮಾರ್, ಸೋಮಶೇಖರ್, ಜೀವನ್ ಕುಮಾರ್, ಮಂಜುನಾಥ್, ಶಿವರ ಹಾಲಿನ ಡೈರಿಯ ಅಧ್ಯಕ್ಷ ಗುರುಸಿದ್ದಯ್ಯ, ಉಪಾಧ್ಯಕ್ಷ ಕರಿಯಪ್ಪ,ಶೇಖರಯ್ಯ,ಶಂಕ್ರಪ್ಪ, ದೇವೇಗೌಡ,ಮಂಜುನಾಥ್ ಮತ್ತು ಬಸವರಾಜ್ ಸೇರಿದಂತೆ ಹಲವು ಮುಖಂಡರುಗಳು ಹಾಜರಿದ್ದು,ಅಭಿನಂದನೆ ಸಲ್ಲಿಸಿದ್ದಾರೆ. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಹೋವಳಿಯ ನೀಲಮ್ಮನಹಳ್ಳಿ ಗ್ರಾಮದ ಆಕರ್ಷಣೆ ವಿದ್ಯಾ ಸಂಸ್ಥೆ ಬಲ್ಲೇನಹಳ್ಳಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಎಸ್. ತಮ್ಮಪ್ಪನವರು ನಿವೃತ್ತರಾಗಿದ್ದು, ಈ ಹಿನ್ನೆಲೆಯಲ್ಲಿ ಶಾಲೆಯ ಸಿಬ್ಬಂದಿ ಬೀಳ್ಕೊಡುಗೆ ಸಮಾರಂಭ ಆಯೋಜಿಸುವ ಮೂಲಕ ಎಸ್. ತಮ್ಮಪ್ಪನವರ ಸೇವೆಗೆ ಗೌರವ ಪೂರ್ವಕ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ತಮ್ಮಪ್ಪನವರು, ಆಕರ್ಷಣೆ ಸಂಸ್ಥೆಯ ಕುರಿತು ಮಾತನಾಡಿ, ಸುಮಾರು 30ವರ್ಷಗಳಿಂದ ಶಾಲೆ ಮೇಲ್ಛಾವಣಿ ಇಲ್ಲದೇ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಕಷ್ಟಪಡುವಂತಾಗಿತ್ತು. ಈ ಸಮಸ್ಯೆಗಳನ್ನು ಕಂಡ ನೀಲಮ್ಮನಹಳ್ಳಿ ಆಧಿಶೇಷ ಮತ್ತು ಛಲಪತಿ ಹಾಗೂ ಭೂಶಪ್ಪ ಇವರು ಹೆಂಚಿನ ಮನೆ ಕೊಟ್ಟು ಮಕ್ಕಳಿಗೆ ಶಿಕ್ಷಣ ನೀಡಲು ವ್ಯವಸ್ಥೆ ಮಾಡಿಕೊಟ್ಟರು. ಈ ಸಂಸ್ಥೆಯ ಕಾರ್ಯದರ್ಶಿಗಳಾದ ಬಲರಾಮಯ್ಯ ಇವರು ಶಾಲೆಗೆ 3 ಎಕರೆ ಜಮೀನು ನೀಡಿದರು. ಈ ಶಾಲೆಗೆ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಾನ್ಯತೆ ನೀಡಿದರು ಎಂದು ನೆನಪಿಸಿಕೊಂಡರು. ಕಾರ್ಯಕ್ರಮದಲ್ಲಿ ಹೆಚ್ಚಿನ ಅಂಕ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಹಾಗೂ ಪಠ್ಯ ಪುಸ್ತಕ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಯಾದವ…