Subscribe to Updates
Get the latest creative news from FooBar about art, design and business.
- ತುಮಕೂರು: ಎರಡು ದಿನ ವಿದ್ಯುತ್ ವ್ಯತ್ಯಯ: ವಿವರಗಳಿಗಾಗಿ ಈ ಸುದ್ದಿ ಓದಿ
- ಆರ್ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ
- “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!
- ಕಾಡಾನೆ ಹಾವಳಿ ತಡೆಗೆ ‘ಎಐ’ ತಂತ್ರಜ್ಞಾನ: ಅರಣ್ಯ ಇಲಾಖೆಯಿಂದ ಹೊಸ ಪ್ರಯೋಗ
- ಅರಣ್ಯ ಇಲಾಖೆ ಸಿಬ್ಬಂದಿಗೆ ಬಂಪರ್ ಕೊಡುಗೆ: 1 ಕೋಟಿ ರೂ. ಅಪಘಾತ ವಿಮೆ ಘೋಷಿಸಿದ ಸಚಿವ ಈಶ್ವರ ಖಂಡ್ರೆ
- ಭಾರತದಲ್ಲಿ ಜಾತಿಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್ ಸುಟ್ಟ ದಿನ: ಸರಗೂರಿನಲ್ಲಿ ಅರ್ಥಪೂರ್ಣ ಆಚರಣೆ
- ತಿಪಟೂರು | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ
- ಗುಬ್ಬಿ: SBI ಬ್ಯಾಂಕ್ ನ ಎಟಿಎಂನಿಂದ ಹಣ ದೋಚಿದ ಕಳ್ಳರು
Author: admin
ದಿನೇ ದಿನೇ ಕಚ್ಛಾ ಕಾಗದ ಹಾಗೂ ಮುದ್ರಣ ಸಾಮಾಗ್ರಿಗಳ ಬೆಲೆ ಹೆಚ್ಚಳವಾಗುತ್ತಿರುವುದರಿಂದ ಮುದ್ರಣಕ್ಕೆ ಎದುರಾಗಿರುವ ಸಮಸ್ಯೆಯನ್ನು ರಾಜ್ಯ ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಿ ಪರಿಹರಿಸಬೇಕು ಎಂದು ಕರ್ನಾಟಕ ಪಠ್ಯ ಪುಸ್ತಕ ಮುದ್ರಕರ ಸಂಘ ಇಂದು ಪ್ರತಿಭಟನೆ ನಡೆಸಿತು. ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ(ಫ್ರೀಡಂಪಾರ್ಕ್) ಅಸೋಸಿಯೇಷನ್ ಅಧ್ಯಕ್ಷರಾದ ಸತ್ಯಕುಮಾರ್, ಉಪಾಧ್ಯಕ್ಷರಾದ ಗೋಪಾಲಕೃಷ್ಣ, ಖಜಾ0ಚಿ ನಾಗಸುಂದರ್ , ವಿ.ಶ್ರೀನಿವಾಸ್ ಸೇರಿದಂತೆ ಪದಾಧಿಕಾರಿಗಳು ಹಾಗೂ ಮುದ್ರಣ ವಿಭಾಗದ ನೂರಾರು ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕ ಪಠ್ಯ ಪುಸ್ತಕ ಮುದ್ರಕರ ಸಂಘದ ಅಧ್ಯಕ್ಷ ಸತ್ಯಕುಮಾರ್ ಅವರು, ಒಂದು ಟನ್ ಕಾಗದದ ಬೆಲೆ ಸುಮಾರು 60 ಸಾವಿರ ರೂ.ನಿಂದ 90 ಸಾವಿರ ರೂ.ಗಳಿಗೆ ಏರಿಕೆಯಾಗಿದೆ. ಹೀಗಾದರೆ ನಾವು ಉದ್ಯಮ ನಡೆಸುವುದು ಹೇಗೆ ಎಂದು ಪ್ರಶ್ನಿಸಿದರು.ಮುದ್ರಣದ ಮೂಲ ಸಾಮಗ್ರಿಗಳಾದ ಇಂಕು, ಪ್ಲೇಟ್, ಕೆಮಿಕಲ್ಸ್, ಕಾಗದ ಸೇರಿದಂತೆ ಎಲ್ಲಾ ಕಚ್ಚಾ ಸಾಮಗ್ರಿಗಳ ಬೆಲೆ ದುಬಾರಿಯಾಗಿದ್ದು, ಪಠ್ಯ ಪುಸ್ತಕ, ವೃತ್ತ ಪತ್ರಿಕೆ ಹಾಗೂ ಲೇಖನ ಸಾಮಗ್ರಿಗಳನ್ನು ಮುದ್ರಣ ಮಾಡಲಾಗದಂತಹ ತೀವ್ರ…
ದೇಶದಲ್ಲಿ ಕೊರೊನಾ ಅಲೆ ನಮ್ಮನ್ನು ಸಂಪೂಣವಾಗಿ ಬಿಟ್ಟು ಹೋಗಿಲ್ಲ. ನಮ್ಮಲ್ಲಿ ಪರಿಸ್ಥಿತಿ ಹದಗೆಟ್ಟಿಲ್ಲವಾದರೂ ನಿರ್ಲಕ್ಷ್ಯವಹಿಸದೆ ಕೆಲವು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದಾರೆ.ಈ ಹಿಂದೆ ಅನುಸರಿಸಿದ್ದ ತ್ರಿ-ಟಿ (ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್ಮೆಂಟ್) ತಂತ್ರವನ್ನು ಎಲ್ಲಾ ರಾಜ್ಯಗಳು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಕೋವಿಡ್ ಹೋಗಿದೆ ಎಂದು ಯಾರೂ ಭಾವಿಸಬೇಡಿ. ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ನಮ್ಮಲ್ಲಿ ಪರಿಸ್ಥಿತಿ ಉತ್ತಮವಾಗಿದೆ ಆದರೂ ನಿರ್ಲಕ್ಷ್ಯ ಬೇಡ ಎಂದು ಅವರು ಕಿವಿಮಾತು ಹೇಳಿದರು. ಇಂದು ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನರೆನ್ಸ್ ನಡೆಸಿದ ಮೋದಿ ಅವರು, ಇತರೆ ದೇಶಗಳಿಗೆ ಹೋಲಿಸಿದರೆ ನಾವು ಸುರಕ್ಷಿತವಾಗಿದ್ದೇವೆ. ಈ ಹಿಂದೆ 1, 2 ಮತ್ತು 3ನೇ ಕೋವಿಡ್ ಅಲೆಯನ್ನು ಸಮರ್ಥವಾಗಿ ನಿಭಾಯಿಸಿದ್ದೇವೆ. ಓಮಿಕ್ರಾನ್ ಎದುರಿಸಿರುವಾಗ 4ನೇ ಅಲೆ ನಮಗೇನು ದೊಡ್ಡ ಸಮಸ್ಯೆಯಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು. ಒಂದನೇ ಲಸಿಕೆಯನ್ನು ಬಹುತೇಕ ಎಲ್ಲರೂ ಪಡೆದಿದ್ದಾರೆ. ಕೆಲವರು…
ರಾಜ್ಯದಲ್ಲಿ 4ನೇ ಅಲೆ ಕಾಣಿಸಿಕೊಂಡರೂ ಸದ್ಯಕ್ಕೆ ಕಠಿಣ ಕ್ರಮ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ. ಈ ಮೂಲಕ 4ನೇ ಅಲೆ ಬಂದರೆ ಲಾಕ್ಡೌನ್ ಸೇರಿದಂತೆ ಕೆಲವು ಕಠಿಣ ನಿಯಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂಬ ವದಂತಿಗೆ ಖುದ್ದು ಸಚಿವರೇ ತೆರೆ ಎಳೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ ತಿಂಗಳ ಮೊದಲ ವಾರದಲ್ಲಿ ಕೋವಿಡ್ ಅಲೆ ಬರಬಹುದೆಂದು ತಜ್ಞರು ಹೇಳಿದ್ದಾರೆ. ನಾವು ಮುನ್ನೆಚ್ಚರಿಕೆ ಕ್ರಮವಾಗಿ ಈಗಾಗಲೇ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದೇವೆ. ಇದಕ್ಕಿಂತ ಹೆಚ್ಚಿನ ಕ್ರಮ ಅಗತ್ಯವಿಲ್ಲ ಎಂದು ಹೇಳಿದರು. 60 ವರ್ಷ ಮೇಲ್ಪಟ್ಟು ಉಚಿತ ಬೂಸ್ಟರ್ ಡೋಸ್ ಕೊಡುತ್ತಿದ್ದೇವೆ. 18 ವರ್ಷದವರು ಎರಡನೇ ಲಸಿಕೆ ಪಡೆದು 9 ತಿಂಗಳು ಆದವರೂ ಕೂಡ ಲಸಿಕೆ ಪಡೆಯಬಹುದು ಎಂದು ಸಲಹೆ ಮಾಡಿದರು.ಈ ಕುರಿತು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಸಭೆ ಕರೆದಿದ್ದು , ಕೆಲವು ಸಲಹೆ , ಸೂಚನೆಗಳನ್ನು ನೀಡಲಿದ್ದಾರೆ. ಈಗ ತೆಗೆದುಕೊಂಡಿರುವ ಕ್ರಮಕ್ಕಿಂತ ಹೆಚ್ಚಿನ…
ಮುಂಬರುವ ದಿನಗಳಲ್ಲಿ ಕಾಣಿಸಿಕೊಳ್ಳಲಿರುವ ಕೊರೊನಾ ನಾಲ್ಕನೇ ಅಲೆಯಿಂದ ಬಚಾವಾಗಬೇಕಾದರೆ ಬೂಸ್ಟರ್ ಡೋಸ್ ಪಡೆದುಕೊಳ್ಳುವುದು ಅನಿವಾರ್ಯ. ಆದರೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಬೂಸ್ಟರ್ ಡೋಸ್ ಸಿಗದಿರುವುದು ಆತಂಕಕ್ಕೆ ಕಾರಣವಾಗಿದೆ.ಬಿಬಿಎಂಪಿ ಆಸ್ಪತ್ರೆಗಳಲ್ಲಿ ಬೂಸ್ಟರ್ ಡೋಸ್ ಸಿಗುತ್ತಿಲ್ಲ. ಬದಲಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಮಾತ್ರ ಎಷ್ಟು ಬೇಕೋ ಅಷ್ಟು ಬೂಸ್ಟರ್ ಡೋಸ್ ಸಿಗುತಿದೆ. ಬೂಸ್ಟರ್ ಡೋಸ್ ಹೆಸರಿನಲ್ಲಿ ಲೂಟಿಗೆ ಇಳಿದಿರುವ ಖಾಸಗೀ ಆಸ್ಪತ್ರೆಗಳು ಡೋಸ್ಗಳನ್ನು ಹಣಕ್ಕೆ ಮಾರಾಟ ಕೊಳ್ಳುತ್ತಿವೆ. ಉಳ್ಳವರು ಖಾಸಗೀ ಆಸ್ಪತ್ರೆಗಳಿಗೆ ತೆರಳಿ ನಿಗಪಡಿಸಿರುವ ಹಣ ಪಾವತಿಸಿ ಬೂಸ್ಟರ್ ಡೋಸ್ ಪಡೆದುಕೊಳ್ಳುತ್ತಿದ್ದಾರೆ. ಹಣ ಇಲ್ಲದವರು ಬೂಸ್ಟರ್ ಡೋಸ್ ಸಿಗದೆ ಪರದಾಡುವಂತಾಗಿದೆ. ಕೊರೊನಾ ನಾಲ್ಕನೆ ಅಲೆ ಕಾಣಿಸಿಕೊಳ್ಳುತ್ತಿರುವ ಸಂದರ್ಭದಲ್ಲೆ ಸರ್ಕಾರ ಬೂಸ್ಟರ್ ಡೋಸ್ಗಳನ್ನು ಖಾಸಗೀ ಆಸ್ಪತ್ರೆಗಳಿಗೆ ನೀಡಿ ಸಾಮಾನ್ಯ ನಾಗರೀಕರಿಗೆ ಉಚಿತ ಬೂಸ್ಟರ್ ನೀಡದಿರುವುದು ಜನ ಸಾಮಾನ್ಯರನ್ನು ಕಂಗೇಡಿಸಿದೆ. ಒಂದು ಹಾಗೂ ಎರಡನೆ ಹಂತದ ಕೊರೊನಾ ಸಂದರ್ಭದಲ್ಲಿ ಉಚಿತ ಕೊರೊನಾ ಲಸಿಕೆ ನೀಡಿದ್ದ ಸರ್ಕಾರ ಈಗ ಮಾತ್ರ ಮೂರನೇ ಡೋಸ್ಗೆ ಹಣ ನಿಗ ಮಾಡುವುದು ಎಷ್ಟು ಸರಿ ಎನ್ನುವುದು…
ಕೊರಟಗೆರೆ: 3 ಬಾರಿ ಜಿಪಂ ಸದಸ್ಯ, 2013ರಲ್ಲಿ ಶಾಸಕನಾಗಿ 5ವರ್ಷ ಸೇವೆ ಸಲ್ಲಿಸಿರುವ ಬಡಜನರ ಒಡನಾಡಿ, 2018ರ ವಿಧಾನಸಭೆ ಚುನಾವಣೆಯಲ್ಲಿ ಸೋತರು ಸಹ ಬಡಜನರ ಸೇವೆಯನ್ನು ಮಾಡುತ್ತೀರುವ ಪಿ.ಆರ್.ಸುಧಾಕರಲಾಲ್ ಕೊರಟಗೆರೆ ಕ್ಷೇತ್ರದ ನಿಜವಾದ ಜನನಾಯಕ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಬಣ್ಣಿಸಿದರು. ಕೊರಟಗೆರೆ ಪಟ್ಟಣದ ಪಪಂ ಆವರಣದಲ್ಲಿ ಜಾತ್ಯಾತೀತ ಜನತಾದಳ ಪಕ್ಷದ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ ಜನತಾ ಜಲಧಾರೆ ರಥಯಾತ್ರೆಯ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ರಾಜ್ಯದ ರೈತಾಪಿವರ್ಗ ಸಂಕಷ್ಟದ ಸ್ಥಿತಿಗೆ ತಲುಪಿದ್ದಾರೆ. ಎತ್ತಿನಹೊಳೆ ಯೋಜನೆಯ ಕಾಮಗಾರಿ ತೂಗಿಗತ್ತಿ ಮೇಲೆ ನಿಂತಿದೆ. ಕರ್ನಾಟಕ ರಾಜ್ಯದ ರೈತರಿಗೆ ಸಮರ್ಪಕ ನೀರಾವರಿ ಯೋಜನೆ ರೂಪಿಸುವುದೇ ಜನತಾ ಜಲಧಾರೆಯ ಉದ್ದೇಶ. ರೈತಾಪಿವರ್ಗ ಮತ್ತು ಬಡಜನರ ಅಭಿವೃದ್ದಿಗೆ ಸದಾ ಚಿಂತಿಸುವ ಪ್ರಾದೇಶಿಕ ಪಕ್ಷಕ್ಕೆ ನಿಮ್ಮೇಲ್ಲರ ಸಹಕಾರ ಇರಲಿ ಎಂದು ತಿಳಿಸಿದರು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿ ಕೊರಟಗೆರೆ ಕ್ಷೇತ್ರದ ಜನಸಾಮಾನ್ಯರ ಧ್ವನಿ ನಮ್ಮ ಪಿ.ಆರ್.ಸುಧಾಕರಲಾಲ್. ಕಾಂಗ್ರೇಸ್ ನಾಯಕರ ಆಮಿಷ ಮತ್ತು ಒತ್ತಡಗಳಿಗೆ ಜೆಡಿಎಸ್ ಪಕ್ಷ…
ತುರುವೇಕೆರೆ: ಕ್ಯಾಂಟರ್ ಲಾರಿ ಹಾಗೂ ಇನೋವಾ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುರುವೇಕೆರೆ ತಾಲೂಕಿನ ದೊಡ್ಡಶೆಟ್ಟಿಕೆರೆ ಬಳಿ ನಡೆದಿದೆ. ಕಾರು ಚಾಲಕ ಸೇರಿದಂತೆ ಇಬ್ಬರು ಅಪಘಾತದಲ್ಲಿ ಮೃತಪಟ್ಟವರು ಎಂದು ತಿಳಿದು ಬಂದಿದ್ದು, ಮೃತರು ಆನೆಕಲ್ ಮೂಲದವರು ಎಂದು ತಿಳಿದು ಬಂದಿದೆ. ತುರುವೇಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಾಯಗಳಾಗಿದ್ದು, ಅವರನ್ನು ಬೆಳ್ಳೂರು ಕ್ರಾಸ್ ನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ತುಮಕೂರು : ಮೇ 1 ಕಾರ್ಮಿಕ ದಿನಾಚರಣೆಯ ದಿನದಂದು ಬೆಂಗಳೂರಿನಲ್ಲಿ ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರಾದ ಕೆ.ಪುಟ್ಟಸ್ವಾಮಿ ಗೌಡ ಅವರ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ವಿ ಎಸ್ ಸೈಯದ್ ದಾದಾಪೀರ್ ತಿಳಿಸಿದರು. ಬೆಂಗಳೂರಿನ ಕಾರ್ಯಕ್ರಮಕ್ಕೆ ತುಮಕೂರಿನಿಂದ ಹೊರಡಲು ಕಾರ್ಯಕರ್ತರನ್ನು ಸಜ್ಜುಗೊಳಿಸುವ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯಾದ್ಯಂತ ವಿವಿಧ ಜಿಲ್ಲೆಗಳ ಕಾರ್ಮಿಕ ಮುಖಂಡರು, ಪದಾಧಿಕಾರಿಗಳು, ಸಾರ್ವಜನಿಕರು ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆ ಇದೆ. ತುಮಕೂರು ಜಿಲ್ಲೆಯಿಂದಲೂ ಬೆಂಗಳೂರಿಗೆ ಹೊರಡಲು ಸಜ್ಜಾಗಿದ್ದೇವೆ ಎಂದು ತಿಳಿಸಿದರು. ತುಮಕೂರು ಜಿಲ್ಲೆಯಿಂದ ಕಾರ್ಮಿಕ ವಿಭಾಗದ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹೊರಡುವ ಉದ್ದೇಶದಿಂದ ಪೂರ್ವಭಾವಿ ಸಭೆಯನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ನಡೆಸಿದ್ದೇವೆ ಎಂದು ಅವರು ಇದೇ ವೇಳೆ ತಿಳಿಸಿದರು. ಈ ಸಂದರ್ಭದಲ್ಲಿ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷರು ಅಬ್ದುಲ್ ರಹೀಮ್, ಜಿಲ್ಲಾ ಉಪಾಧ್ಯಕ್ಷರಾದ ಆದಿಲ್ ಪಾಷಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮನೋಜ್, ಭವ್ಯ, ಕಾರ್ಯದರ್ಶಿಗಳಾದ ಕಲೀಮ್…
ತುಮಕೂರು: ಭೂಮಿ ಮತ್ತು ವಸತಿ ವಂಚಿತರ ಆಹೋರಾತ್ರಿ ಧರಣಿ 37ನೇ ದಿನಕ್ಕೆ ಕಾಲಿಟ್ಟಿದ್ದು, ಈ ದಿನ ಪ್ರತಿಭಟನಾಕಾರರಿಗೆ ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ) ಬೆಂಬಲ ನೀಡಿತು. BSP ಪಕ್ಷದ ಕೊರಟಗೆರೆ ತಾಲ್ಲೂಕು ಅಧ್ಯಕ್ಷರಾದ ಜಟ್ಟಿ ಅಗ್ರಹಾರ ನಾಗರಾಜು ಹಾಗೂ ಪಕ್ಷದ ಇನ್ನಿತರ ಮುಖಂಡರು ಭೂಮಿ, ವಸತಿಗಾಗಿ ಹಗಲು ರಾತ್ರಿ ಎನ್ನದೇ ಧರಣಿ ನಡೆಸುತ್ತಿರುವ ಪ್ರತಿಭಟನಾಕಾರರಿಗೆ ಬೆಂಬಲ ಘೋಷಿಸಿದರು. ಈ ವೇಳೆ ತಾಲ್ಲೂಕು ಪದಾಧಿಕಾರಿಗಳು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಗಧಾಮಯ್ಯ, ಸ್ನೇಹಿತರಾದ ಲಾರೆನ್ಸ್ ದಿನಪತ್ರಿಕೆ ಹಂಚಿಕೆದಾರರ ಒಕ್ಕೂಟದ ರಾಜ್ಯ ಕಾರ್ಯದರ್ಶಿ ನಾದೂರು ವಾಸು,ಲಿಂಗದಹಳ್ಳಿ ಚೇತನ್, ಸೀಗಲಹಳ್ಳಿ ಮೂರ್ತಿ ಜೊತೆಗಿದ್ದರು. ಈಗಾಗಲೇ ಅನೇಕ ಸಮಸ್ಯೆಗಳು ಬಗೆಹರಿದಿದ್ದು,ಇನ್ನೇನು ಕೆಲವೇ 4,5 ಸಮಸ್ಯೆಗಳಷ್ಟೆ ಬಾಕಿ ಉಳಿದಿರುತ್ತವೆ.ಇವುಗಳು ಕೂಡ 3,4 ದಿನಗಳಲ್ಲಿ ಬಗೆಹರಿಯುವ ಭರವಸೆಯೂ ಕೂಡ ಇದ್ದು ಬಗೆಹರಿದ ತಕ್ಷಣ ಈ ನಮ್ಮ ಧರಣಿಯನ್ನು ಕೈ ಬಿಡಲಾಗುವುದು ಎಂದು ಹೋರಾಟದ ನೇತೃತ್ವ ವಹಿಸಿರುವ ಹಂದ್ರಾಳ್ ನಾಗಭೂಷಣ್ ತಿಳಿಸಿದ್ದಾರೆ.
ದೇಶೀಯ ಹಸುಗಳನ್ನು ಸಾಕುತ್ತಿರುವ ರೈತರಿಗೆ ತಿಂಗಳಿಗೆ 900 ರೂಪಾಯಿ ನೀಡುವುದಾಗಿ ಮಧ್ಯಪ್ರದೇಶ ಸರ್ಕಾರ ಹೇಳಿದೆ. ಕೃಷಿ ಕುರಿತ ನೀತಿ ಆಯೋಗದ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ನೈಸರ್ಗಿಕ ಕೃಷಿಯನ್ನು ಉತ್ತೇಜಿಸಲು ಮಧ್ಯಪ್ರದೇಶ ನೈಸರ್ಗಿಕ ಕೃಷಿ ಅಭಿವೃದ್ಧಿ ಮಂಡಳಿ ಸ್ಥಾಪಿಸುವುದಾಗಿ ಪ್ರಕಟಿಸಿದ್ದಾರೆ. ನೈಸರ್ಗಿಕ ಕೃಷಿಗೆ ದೇಸಿ (ದೇಶಿ) ಹಸುಗಳು ಅತ್ಯಗತ್ಯವಾಗಿವೆ. ರೈತರು ಕನಿಷ್ಠ ಒಂದು ದೇಸಿ ಹಸುವನ್ನು ಸಾಕಬೇಕು. ಅಂತಹ ರೈತರಿಗೆ ತಿಂಗಳಿಗೆ 900 ರೂ.ಗಳನ್ನು ನೀಡಲು ನಿರ್ಧರಿಸಿದ್ದೇವೆ. ಆದ್ದರಿಂದ, ಒಬ್ಬ ರೈತ ದೇಸಿ ಹಸುವಿಗೆ ವರ್ಷದಲ್ಲಿ ಒಟ್ಟು 10,800 ರೂ. ಪಡೆಯಲಿದ್ದಾರೆ ಎಂದಿದ್ದಾರೆ. ರಾಜ್ಯದ 52 ಜಿಲ್ಲೆಗಳಲ್ಲಿ ತಲಾ 100 ಗ್ರಾಮಗಳಲ್ಲಿ ನೈಸರ್ಗಿಕ ಕೃಷಿಯನ್ನು ಉತ್ತೇಜಿಸಲು ಸಂಸದ ಸರ್ಕಾರ ವಿಶೇಷ ಚಟುವಟಿಕೆಗಳನ್ನು ಪ್ರಾರಂಭಿಸಲಿದೆ. ಪ್ರಸಕ್ತ ಖಾರಿಫ್ ಬೆಳೆ ಹಂಗಾಮಿನಲ್ಲಿ ರಾಜ್ಯದ 5,200 ಗ್ರಾಮಗಳಲ್ಲಿ ನೈಸರ್ಗಿಕ ಕೃಷಿ ಚಟುವಟಿಕೆಗಳು ಆರಂಭವಾಗಲಿವೆ. ಇದುವರೆಗೆ 1.65 ಲಕ್ಷ ರೈತರು ನೈಸರ್ಗಿಕ ಕೃಷಿಯಲ್ಲಿ ಆಸಕ್ತಿ ತೋರಿದ್ದಾರೆ. ನೈಸರ್ಗಿಕ ಕೃಷಿಗೆ ವಾತಾವರಣ ನಿರ್ಮಿಸಲು ರಾಜ್ಯದಲ್ಲೂ…
ಜೂನ್ ಕೊನೆ ವಾರದಲ್ಲಿ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲು ಸಿದ್ಧತೆಗಳು ಆರಂಭವಾಗಿವೆ. ಏಪ್ರಿಲ್ 22 ರಿಂದ ಪಿಯು ಪರೀಕ್ಷೆ ಆರಂಭವಾಗಿದ್ದು, ಒಂದೊಂದು ವಿಷಯದ ಪರೀಕ್ಷೆ ಆಗುತ್ತಿದ್ದಂತೆ ಮೌಲ್ಯಮಾಪನ ಶುರುವಾಗುತ್ತದೆ. ಜೂನ್ ಕೊನೆ ವಾರ ಪಿಯುಸಿ ಫಲಿತಾಂಶ ಬರುವುದು ಪಕ್ಕಾ ಎಂದು ಮೂಲಗಳಿಂದ ತಿಳಿದುಬಂದಿದೆ. ಮೇ 20 ರಿಂದ ಜೂ.15ರೊಳಗೆ ಮೌಲ್ಯಮಾಪನ ಮುಗಿಸಿ ಜೂನ್ ಕೊನೆ ವಾರದೊಳಗೆ ಫಲಿತಾಂಶ ಪ್ರಕಟ ಮಾಡಬೇಕೆಂದು ಕಾಲಾವಧಿಯನ್ನು ನಿಗದಿ ಮಾಡಲಾಗಿದೆ. ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು. ಹಾಗಾಗಿ ಆದಷ್ಟು ಬೇಗ ಫಲಿತಾಂಶ ನೀಡುತ್ತೇನೆ ಎಂದು ಪಿಯು ಬೋರ್ಡ್ ನಿರ್ದೇಶಕ ಆರ್.ರಾಮಚಂದ್ರನ್ ಅವರು ತಿಳಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೊರೊನಾದಿಂದ ಪರೀಕ್ಷೆ ನಡೆಯದೆ ಫಲಿತಾಂಶದ ಸಮಯದಲ್ಲಿ ಏರುಪೇರಾಗಿತ್ತು. ಈಗ ನಿಗದಿತ ಅವಧಿಯಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು, ಫಲಿತಾಂಶವನ್ನೂ ನಿಗದಿತ ಅವಧಿಯಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…