Subscribe to Updates
Get the latest creative news from FooBar about art, design and business.
- ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
- ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
- ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
- ದುಶ್ಚಟ ಬಿಟ್ಟು ಕ್ರೀಡೆಯಲ್ಲಿ ತೊಡಗಲು ಕರೆ: ಶಾಸಕ ಕೆ.ಎನ್.ರಾಜಣ್ಣ
- ಹೇಮಾವತಿ ಲಿಂಕ್ ಕೆನಾಲ್ ಗೆ ನಾನು ವಿರೋಧಿ: ಶಾಸಕ ಎಸ್.ಆರ್. ಶ್ರೀನಿವಾಸ್
- ವಕೀಲರ ಸಂಘದ ಅಧ್ಯಕ್ಷರಾಗಿ ಎಸ್.ಜಯಣ್ಣ ಆಯ್ಕೆ
- ರಾಜ್ಯ ಸರ್ಕಾರಕ್ಕೆ 3 ವರ್ಷ: ಮೇ 20ರಂದು ವಿವಿಧ ಸವಲತ್ತುಗಳ ವಿತರಣೆ
- ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್
Author: admin
ಮಹಾರಾಷ್ಟ್ರದ ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ ಅಕ್ರಮ ಸಾಬೀತಾದ ಹಿನ್ನೆಲೆಯಲ್ಲಿ ಕಲ್ಲಿದ್ದಲು ಇಲಾಖೆ ಕಾರ್ಯದರ್ಶಿ ಎಚ್ ಸಿ ಗುಪ್ತಾ ಅವರಿಗೆ ದೆಹಲಿಯ ವಿಶೇಷ ಸಿಬಿಐ ನ್ಯಾಯಾಲಯ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಕಲ್ಲಿದ್ದಲು ಹಗರಣದ ಪ್ರಕರಣದಲ್ಲಿ ಮಾಜಿ ಜಂಟಿ ಕಾರ್ಯದರ್ಶಿ ಕೆ.ಎಸ್. ಕ್ರೋಫಾ ಅವರಿಗೆ ಎರಡು ವರ್ಷ ಮತ್ತು ನಾಗ್ಪುರ ಮೂಲದ ಎಂ,ಎಸ್ ಗ್ರೇಸ್ ಇಂಡಸ್ಟ್ರೀಸ್ ಲಿಮಿಟೆಡ್ನ ನಿರ್ದೇಶಕ ಮುಖೇಶ್ ಗುಪ್ತಾ ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ನ್ಯಾಯಾಲಯ ವಿಧಿಸಿದೆ. ವಿಶೇಷ ನ್ಯಾಯಾಧೀಶ ಅರುಣ್ ಭಾರದ್ವಾಜ್ ಶಿಕ್ಷೆಯ ತೀರ್ಪು ಪ್ರಕಟಿಸುವಾಗ ಎಚ್ಸಿ ಗುಪ್ತಾಗೆ ಒಂದು ಲಕ್ಷ ರೂಪಾಯಿ, ಕೆಎಸ್ ಕ್ರೋಫಾಗೆ ೫೦,೦೦೦ ರೂಪಾಯಿ, ಮುಖೇಶ್ ಗುಪ್ತಾಗೆ ೨ ಲಕ್ಷ ರೂಪಾಯಿ ಮತ್ತು ನಾಗ್ಪುರ ಮೂಲದ ಸಂಸ್ಥೆಗೆ ೨ ಲಕ್ಷ ರೂಪಾಯಿ ದಂಡ ವಿಧಿಸಿದೆ. ಮಿಸ್ಸಸ್ ಗ್ರೇಸ್ ಇಂಡಸ್ಟ್ರೀಸ್ ಲಿಮಿಟೆಡ್ ಗೆ ದಂಡ ವಿಧಿಸಿದೆ. ಮಹಾರಾಷ್ಟ್ರದ ಲೋಹರಾ ಪೂರ್ವ ಕಲ್ಲಿದ್ದಲು ನಿಕ್ಷೇಪ ಹಂಚಿಕೆಗೆ ಸಂಬಂಧಿಸಿದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ನ್ಯಾಯಾಲಯ ಅವರನ್ನು…
ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ಮೈತ್ರಿಸರ್ಕಾರದ ನಡುವೆ ಶೀತಲ ಸಮರ ಮುಂದುವರೆದಿರುವ ಬೆನ್ನಲ್ಲೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಪಕ್ಷದ ಸಂಸದರು ಹಾಗೂ ಶಾಸಕರ ಮಹತ್ವದ ಸಭೆ ಕರೆದಿದ್ದಾರೆ. ಜೆಡಿಯುಗೆ ಆರ್.ಪಿ.ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಈ ಸಭೆ ಕರೆದಿರುವುದು ಕುತೂಹಲ ಕೆರಳಿಸಿದೆ. ಜೆಡಿಯು, ಎನ್ಡಿಎ ಅಂಗಪಕ್ಷವಾಗಿದ್ದರೂ ಸರ್ಕಾರದಿಂದ ದೂರ ಉಳಿದಿದೆ. ನಿತೀಶ್ ಕುಮಾರ್ ಅವರು ಕೇಂದ್ರ ಸರ್ಕಾರ ಸರ್ಕಾರ ನೀಡುತ್ತಿಲ್ಲ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ನಿನ್ನೆ ದೆಹಲಿಯಲ್ಲಿ ಪ್ರಧಾನಿ ನೇತೃತ್ವದಲ್ಲಿ ನಡೆದ ನೀತಿ ಆಯೋಗದ ಸಭೆಗೂ ನಿತೀಶ್ ಕುಮಾರ್ ಗೈರು ಹಾಜರಾಗಿದ್ದರು. ಇದು ರಾಜಕೀಯ ವಲಯಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಮತ್ತೊಂದೆಡೆ ಜೆಡಿಯುಗೆ ಆರ್.ಪಿ .ಸಿಂಗ್ ಗುಡ್ ಬೈ ಹೇಳಿದ್ದು ಬಿಹಾರ ಸಿಎಂ ವಿರುದ್ಧ ಆರೋಪ ಮಾಡಿದ್ದು ಕಳೆದ ವರ್ಷ ತಮ್ಮನ್ನು ಸಂಪರ್ಕಿಸದೆ ಮೋದಿ ಅವರ ಸಂಪುಟದಲ್ಲಿ ಸ್ಥಾನ ಪಡೆದಿದ್ದರು ಎಂದು ಆರೋಪಿಸಿದ್ದಾರೆ. ಜೆಡಿಯು ಪಕ್ಷದ ಅಂತರಿಕ ಜಗಳವನ್ನು ಬಿಜೆಪಿ ಮೇಲೆ ಗೂಬೆ ಕೂರಿಸಲಾಗುತ್ತಿದೆ. ತಮ್ಮ ಮತ್ತು ಜೆಡಿಯು ನಡುವೆ…
ಬಾಲಿವುಡ್ ನಟ ಅಮೀರ್ ಖಾನ್ ಇತ್ತೀಚೆಗೆ ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಸಾಲಬಾಧೆಯಿಂದ ಶಾಲಾ ಶುಲ್ಕ ಪಾವತಿಸಲು ಪೋಷಕರು ವಿಫಲರಾಗಿದ್ದನ್ನು ಸ್ಮರಿಸಿದ್ದಾರೆ. ಅಮೀರ್ ಖಾನ್ ಈಗ ದೊಡ್ಡ ಸೂಪರ್ಸ್ಟಾರ್ ಆಗಿರಬಹುದು, ಆದರೆ ಅವರು ಉದ್ಯಮದಲ್ಲಿ ತಮ್ಮನ್ನು ತಾವು ಗುರುತಿಸಿಕೊಳ್ಳುವ ಮೊದಲು ಕಷ್ದ ದ ದಿನಗಳನ್ನು ನೋಡಿದ್ದಾರೆ. ಜಗತ್ತು ಅವರಲ್ಲಿರುವ ಪ್ರತಿಭೆಯನ್ನು ಗುರುತಿಸುವ ಮೊದಲು ಹೋರಾಟದ ಬದುಕಿನ ಬಗ್ಗೆ ಬಹಿರಂಗಪಡಿಸಿದ್ದಾರೆ. ಹೊಸ ಹ್ಯೂಮನ್ಸ್ ಆಫ್ ಬಾಂಬೆ ಸಂದರ್ಶನದಲ್ಲಿ, ಅಮೀರ್ ಖಾನ್ ಅವರು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಾಗ ಅವರು ತಮ್ಮ ಕುಟುಂಬ ಸಾಲದಲ್ಲಿದ್ದಾಗ ಮತ್ತು ಶಾಲೆಯಲ್ಲಿ ಕಷ್ಟಗಳನ್ನು ಎದುರಿಸಿದರು. ಅವರು ಮತ್ತು ಅವರ ಒಡಹುಟ್ಟಿದವರು ಶಾಲಾ ಶುಲ್ಕವನ್ನು ಪಾವತಿಸಲು ತಡವಾದಾಗ ಅನುಭವಿಸಿದ ಮಾನಸಿಕಯಾತನೆ ಕುರಿತು ಅವರು ಮಾತನಾಡಿದ್ದಾರೆ. ಶಾಲಾ ಅಸೆಂಬ್ಲಿಯಲ್ಲಿ ಪ್ರಾಂಶುಪಾಲರು ಶುಲ್ಕ ಪಾವತಿಸದ ಬಗ್ಗೆ ಹೆಸರನ್ನು ಘೋಷಿಸುತ್ತಿದ್ದಾಗ ಮುಜುಗರ ಅನುಭವಿಸುತ್ತಿದ್ದುದ್ದನ್ನು ಉಲ್ಲೇಖಿಸಿದ್ದರು. ಸಂದರ್ಶನದಲ್ಲಿ, ಅಮೀರ್ ಖಾನ್ ತಮ್ಮ ಕುಟುಂಬವು ಸಾಲದಲ್ಲಿ ಸಿಲುಕಿದ ಸಮಯದಲ್ಲಿ ಅವರ ಶಾಲಾ ದಿನಗಳಲ್ಲಿ ೬ನೇ ತರಗತಿಗೆ ೬…
ದೇಶದಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ ಆದರೂ ದಿನದ ಪಾಸಿಟಿವಿಟಿ ಪ್ರಮಾಣ ಶೇಕಡ ೬ರ ಗಡಿದಾಟಿದೆ. ದೇಶದಲ್ಲಿ ಕಳೆದ ೨೪ ಗಂಟೆಗಳ ಅವಧಿಯಲ್ಲಿ ಹೊಸದಾಗಿ ೧೬,೧೬೭ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದೇ ಅವಧಿಯಲ್ಲಿ ಚೇತರಿಸಿಕೊಂಡು ಬಿಡುಗಡೆಯಾದವರ ಸಂಖ್ಯೆ ೧೫,೫೪೯ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಸೋಂಕು ಸಂಖ್ಯೆಯ ಏರಿಳಿತದ ನಡುವೆಯೂ ಸೋಂಕಿನ ದಿನದ ಪಾಸಿಟಿವಿಟಿ ಪ್ರಮಾಣ ಶೇ. ೬,೧೪ ರಷ್ಟು ಇದೆ. ಜೊತೆಗೆ ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ ೧,೩೫,೫೧೦ ಮಂದಿಯಲ್ಲಿ ಇದೆ ಎಂದು ಸಚಿವಾಲಯ ತಿಳಿಸಿದೆ. ಹೊಸದಾಗಿ ಕಾಣಿಸಿಕೊಂಡಿರುವ ಸೋಂಕು ಸೇರಿದಂತೆ ಇಲ್ಲಿಯ ತನಕ ಒಟ್ಟು ಸೋಂಕಿನ ಸಂಖ್ಯೆ ೪.೪೦ ಕೋಟಿ ಸನಿಹದಲ್ಲಿದೆ. ಅಲ್ಲದೆ ಇಲ್ಲಿಯತನಕ ಚೇತರಿಸಿಕೊಂಡು ಬಿಡುಗಡೆಯಾದವರ ಒಟ್ಟು ಸಂಖ್ಯೆ ೪,೩೪,೯೯,೬೫೯ ಮಂದಿಗೆ ಏರಿಕೆಯಾಗಿದೆ.ಜೊತೆಗೆ ಸೋಂಕಿನಿಂದ ೫,೨೬,೭೩೦ ಮಂದಿ ಸಾವನ್ನಪ್ಪಿದ್ದಾರೆ. ಸೋಂಕು ಏರಿಳಿತ ಹಿನ್ನೆಲೆಯಲ್ಲಿ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ ೧,೩೫,೫೧೦ ಮಂದಿಯಲ್ಲಿ ಇದೆ.ಜೊತೆಗೆ ಪಾಸಿಟಿವಿಟಿ…
ಸುಪ್ರೀಂ ಕೋರ್ಟ್ ಬಗ್ಗೆ ಯಾವುದೇ ಭರವಸೆ ಉಳಿದಿಲ್ಲ, ಸೂಕ್ಷ್ಮ ಪ್ರಕರಣಗಳನ್ನು ಕೆಲವು ನ್ಯಾಯಾಧೀಶರಿಗೆ ಮಾತ್ರ ನಿಯೋಜಿಸಲಾಗಿದೆ ಎಂದು ಹಿರಿಯ ನ್ಯಾಯವಾದಿ ಹಾಗು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ದೆಹಲಿಯಲ್ಲಿ ಆಯೋಜಿಸಿದ್ದ ಪೀಪಲ್ಸ್ ಟ್ರಿಬ್ಯೂನಲ್ನಲ್ಲಿ “ನ್ಯಾಯಾಂಗ ದ ರೋಲ್ ಕುರಿತು ಮಾತನಾಡಿದ ಅವರು ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ಕೆಲವು ತೀರ್ಪುಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಸುಪ್ರೀಂ ಕೋರ್ಟ್ನಿಂದ ನಿಮಗೆ ಪರಿಹಾರ ಸಿಗುತ್ತದೆ ಎಂದು ನೀವು ಭಾವಿಸಿದರೆ, ನೀವು ತುಂಬಾ ತಪ್ಪಾಗಿ ಭಾವಿಸುತ್ತೀರಿ. ಮತ್ತು ಸುಪ್ರೀಂ ಕೋರ್ಟ್ನಲ್ಲಿ ೫೦ ವರ್ಷಗಳ ಅಭ್ಯಾಸ ಮಾಡಿದ ನಂತರ ಇದನ್ನು ಹೇಳುತ್ತಿದ್ದೇನೆ” ಎಂದು ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ನಿಂದ ಮಹತ್ವದ ತೀರ್ಪು ಬಂದರೂ ಅದು ನೆಲದ ವಾಸ್ತವತೆ ಬದಲಾಯಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಸುಪ್ರೀಂ ಕೋರ್ಟ್ ನೀಡಿದ ಪ್ರಗತಿಪರ ತೀರ್ಪುಗಳ ಬಗ್ಗೆ ಮಾತನಾಡುತ್ತೀರಿ ಆದರೆ ವಾಸ್ತವಕ್ಕೆ ಭಾರಿ ವ್ಯತ್ಯಾಸವಿದೆ. . ಸುಪ್ರೀಂ ಕೋರ್ಟ್ ಗೌಪ್ಯತೆಯ ತೀರ್ಪು ನೀಡಿದರೆ ಇಡಿ ಅಧಿಕಾರಿಗಳು ನಿಮ್ಮ ಮನೆಗೆ…
ಸಾಗರ: ಹರ್ ಘರ್ ತಿರಂಗ ಅಭಿಯಾನಕ್ಕಾಗಿ ಸಾವಿರಕ್ಕೂ ಅಧಿಕ ರಾಷ್ಟ್ರ ಧ್ವಜ ಸಿದ್ಧವಾಗುತ್ತಿದೆ. ಇದೇ ಸಂದರ್ಭದಲ್ಲಿ ಸಾಗರ ತಾಲೂಕಿನ ಅರಳಗೋಡು ಗ್ರಾಮ ಪಂಚಾಯ್ತಿ ಕಚೇರಿಗೆ ರವಾನೆಯಾದ ಧ್ವಜವೊಂದರಲ್ಲಿನ ಅಶೋಕ ಚಕ್ರದ ಸಂಕೇತ ಧ್ವಜದ ಬದಿಗೆ ಸರಿದಿದ್ದು, ಅವಮಾನಕರವಾಗಿ ಕಂದು ಬಂದಿದೆ. ಮನೆ ಮನೆಗೆ ರಾಷ್ಟ್ರಧ್ವಜ ಹಂಚುವ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ ಚಾಲನೆ ನೀಡಿದ ಜನಪ್ರತಿನಿಧಿಗಳು ರಾಷ್ಟ್ರ ಧ್ವಜಗಳನ್ನು ಪ್ರದರ್ಶಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವೇಳೆ ಈ ದೋಷವನ್ನು ಗುರುತಿಸಲಾಗಿದೆ. ಧ್ವಜದ ಬಿಳಿ ಬಣ್ಣದ ಸ್ಥಳದ ಮಧ್ಯದಲ್ಲಿರಬೇಕಾದ ಅಶೋಕ ಚಕ್ರ ಪಕ್ಕದಲ್ಲಿದೆ ಎಂಬ ಆಕ್ಷೇಪದ ಮಾತುಗಳು ಕೇಳಿಬಂದಿವೆ. ಈ ಬಗ್ಗೆ ಅರಳಗೋಡು ಗ್ರಾಪಂ ಅಧ್ಯಕ್ಷ ಮೇಘರಾಜ್ ಅರೋಡಿ ಮಾತನಾಡಿ, ಧ್ವಜ ಸಂಬಂಧ ನಿರ್ದಿಷ್ಟ ನಿಯಮಗಳಿರುವ ಹಿನ್ನೆಲೆಯಲ್ಲಿ ದೋಷಪೂರಿತ ಧ್ವಜಗಳ ಬಳಕೆಯಾಗದಂತೆ ಕಟ್ಟೆಚ್ಚರ ಅಗತ್ಯ. ದೋಷಗಳಿರುವ ರಾಷ್ಟ್ರಧ್ವಜ ಬಳಕೆಯಾಗದಂತೆ ನಿಗಾ ವಹಿಸಲಾಗಿದೆ. ಸಿದ್ಧಪಡಿಸಲಾದ ಬಾವುಟಗಳಲ್ಲಿ ದೋಷಗಳಿರದಂತೆ ಪರಿಶೀಲನೆ ನಡೆಸಲಾಗುತ್ತಿದೆ. ಸೋಮವಾರ ಸಹ ಗ್ರಾ.ಪಂ. ಕಚೇರಿಯಲ್ಲಿ ಧ್ವಜಗಳ ಪರಿಶೀಲನೆ ಮಾಡಲಾಗುತ್ತಿದೆ ಎಂದರು.…
ಸಾಮಾಜಿಕ ಜಾಲತಾಣಗಳಲ್ಲಿ ಸದಾ ಹತ್ತು ಹಲವು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಸದಾ ವಿವಾದಾತ್ಮಕ ವಿಡಿಯೋಗಳೇ ಸಾಮಾಜಿಕ ಜಾಲತಾಣಗಳಲ್ಲಿ ಜನರಿಂದ ವೀಕ್ಷಣೆಗೊಳಪಡುತ್ತವೆ. ಇದೀಗ ರೈಲಿನಲ್ಲಿ ಕಣ್ಸನ್ನೆಯೊಂದಿಗೆ ಆರಂಭವಾದ ಪ್ರೇಮ, ಲವ್ ಲೆಟರ್ ವರೆಗೆ ಮುಂದುವರಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೊದಲ ನೋಟದ ಪ್ರೇಮ ಅನ್ನೋವಂತಹ ಪ್ರೇಮ ಪ್ರಕರಣ ಇದಾಗಿದ್ದು, ಚಲಿಸುವ ರೈಲಿನಲ್ಲಿ ಹುಡುಗ ಮತ್ತು ಹುಡುಗಿ ಪರಸ್ಪರ ಕಣ್ಸನ್ನೆ ಮೂಲಕವೇ ಮಾತನಾಡುತ್ತಾ, ವಿಚಾರ ವಿನಿಮಯ ಮಾಡುತ್ತಿದ್ದಾರೆ. ಹುಡುಗ ಪದೇ ಪದೇ ಹುಡುಗಿಯನ್ನು ನೋಡುತ್ತಾ ನಗುತ್ತಿರುತ್ತಾನೆ. ಎಲ್ಲರೂ ನೋಡುತ್ತಿರುವುದನ್ನು ಕಂಡ ಹುಡುಗಿ ಕೊಂಚ ಸಂಕೋಚದಿಂದಲೇ ನೋಡುತ್ತಿರುತ್ತಾಳೆ. ಆದರೆ ಹುಡುಗ ಎದುರಿಕೆ ಸಿಕ್ಕ ತಕ್ಷಣವೇ ಲವ್ ಲೆಟರ್ ಕೊಟ್ಟೇ ಬಿಡುತ್ತಾಳೆ. ಈ ವಿಡಿಯೋ ನೋಡಿದವರು ಮಿಶ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೆಲವರು ಇದೆಲ್ಲ, ಕೇವಲ ಆಕರ್ಷಣೆ ಅಷ್ಟೇ ಇದು ರಿಯಲ್ ಲೈಫ್ ಅಲ್ಲ ಎಂದರೆ, ಇನ್ನು ಕೆಲವರು, ಇದು ಸಿನಿಮಾ ಕಥೆಯನ್ನೂ ಹೋಲುವ ಪ್ರೇಮಾ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ತುರುವೇಕೆರೆ: ಮಹಿಳೆಯ ಕಣ್ಣಿಗೆ ಖಾರದ ಪುಡಿ ಎರಚಿದ ಕಳ್ಳರು ಕೊರಳಲ್ಲಿದ್ದ ಮಾಂಗಲ್ಯ ಸರವನ್ನು ದೋಚಿ ಪರಾರಿಯಾಗಲು ಯತ್ನಿಸಿದ ಘಟನೆ ತುರುವೇಕೆರೆ ತಾಲೂಕು ದಂಡಿನ ಶಿವರ ಹೋಬಳಿಯ ಹಾಲುಗೊಂಡನಹಳ್ಳಿಯಲ್ಲಿ ನಡೆದಿದೆ. ಸುಜಾತಾ ಎಂಬ ಮಹಿಳೆ ತೋಟಕ್ಕೆ ತೆರಳುತ್ತಿದ್ದ ವೇಳೆ, ಕಳ್ಳತನಕ್ಕೆ ಹೊಂಚು ಹಾಕಿದ್ದ ಕಳ್ಳರು, ಕಣ್ಣಿಗೆ ಖಾರದ ಪುಡಿ ಎರಚಿ ಮಾಂಗಲ್ಯ ಸರವನ್ನು ದೋಚಲು ಯತ್ನಿಸಿದ್ದಾರೆ. ಈ ವೇಳೆ ಸಮಯ ಪ್ರಜ್ಞೆ ಮೆರೆದ ಗ್ರಾಮಸ್ಥರು ಕಳ್ಳರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳರನ್ನು ಹಿಡಿದ ಗ್ರಾಮಸ್ಥರು ತಕ್ಷಣವೇ ದಂಡಿನ ಶಿವರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವರದಿ: ಸುರೇಶ್ ಬಾಬು ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಕೋಳಿ ಫಾರಂಗೆ ನೀರು ನುಗ್ಗಿದ ಪರಿಣಾಮ 35 ಸಾವಿರ ಕೋಳಿಗಳ ಮಾರಣಹೋಮ ನಡೆದಿರುವ ಘಟನೆ ತುಮಕೂರು ತಾಲೂಕಿನ ಹೆಬ್ಬೂರು ಹೋಬಳಿಯ ಯಾಲದಹಳ್ಳಿಯಲ್ಲಿ ನಡೆದಿದೆ. ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಈ ನಡುವೆ ನಾರಾಯಣಪ್ಪ ಎಂಬವರ 8 ಕೋಳಿ ಫಾರಂಗಳಿಗೆ ನೀರು ನುಗ್ಗಿದ್ದು, ಸುಮಾರು 35 ಸಾವಿರ ಕೋಳಿಗಳ ಮಾರಣಹೋಮ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ 80 ಲಕ್ಷ ರೂಪಾಯಿ ನಷ್ಟ ಸಂಭವಿಸಿದ್ದು, ಸಾಲ ಮಾಡಿ ಕೋಳಿ ಸಾಕಣಿಕೆಗೆ ಇಳಿದಿದ್ದ ನಾರಾಯಣಪ್ಪ ಇದೀಗ ಭಾರೀ ನಷ್ಟದಿಂದ ಕಂಗಾಲಾಗಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಆಗಸ್ಟ್ 9ಕ್ಕೆ ಪ್ರತಿಯೊಬ್ಬ ಕನ್ನಡಿಗರ ಮನೆ ಮೇಲೆ ಕನ್ನಡದ ಹಳದಿ ಮತ್ತು ಕೆಂಪು ಬಣ್ಣದ ಬಾವುಟ ರಾರಾಜಿಸಲಿ ಎಂದು ಕರ್ನಾಟಕ ರಣಧೀರರ ವೇದಿಕೆ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು.ಕೆ.ಆರ್ ರವರು ಸ್ವಾಭಿಮಾನಿ ಕನ್ನಡಿಗರಿಗೆ ಕರೆ ನೀಡಿದ್ದಾರೆ. ಹೇಳಿಕೆ ಹೀಗಿದೆ: ಕರ್ನಾಟಕ ರಾಜ್ಯವೂ ಈ ಹಿಂದೆ ಮೈಸೂರು ಸಂಸ್ಥಾನ ಎಂಬ ಹೆಸರಿನ ಸ್ವತಂತ್ರ ದೇಶ, ಸಾಮ್ರಾಜ್ಯವಾಗಿತ್ತು. ಆದರೆ ಈ ಒಕ್ಕೂಟ ಭಾರತದ ಸ್ವಾತಂತ್ರ್ಯ ಸಲುವಾಗಿ ನಮ್ಮ ದೇಶವನ್ನು ರಾಜ್ಯವನ್ನಾಗಿ ಕೆಳದರ್ಜೆ ಇಳಿಸಲಾಯಿತು ಎಂದರೆ ತಪ್ಪಾಗಲಾರದು, 09 ಆಗಸ್ಟ್ 1947 ರಲ್ಲಿ ಒಕ್ಕೂಟ ಭಾರತದ ರಾಯಭಾರಿಯಾದ ನರಸಿಂಹ ರಾವ್ ರವರ ಮಾತುಕತೆಯಿಂದ ಅಂದಿನ ಮೈಸೂರು ದೇಶದ/ಸಾಮ್ರಾಜ್ಯದ ಮಹಾರಾಜರಾದ ಜಯಚಾಮರಾಜೇಂದ್ರ ಒಡೆಯರ್ ತಮ್ಮ ಸಾಮ್ರಾಜ್ಯವನ್ನು ಭಾರತದ ಒಕ್ಕೂಟಕ್ಕೆ ಸಂಯೋಜಿಸಿ ಒಪ್ಪಂದಕ್ಕೆ ಸಹಿ ಹಾಕಿದರು. ಆ ಮಹಾರಾಜರು ಅಂದು ಮಾಡಿದ ತಪ್ಪಿನಿಂದ ಇಂದಿಗೂ ಕನ್ನಡಿಗರು ನೋವು, ಮೋಸ ವಂಚನೆ, ದ್ರೋಹಗಳನ್ನು ಅನುಭವಿಸುತ್ತಾ ಬರುತ್ತಿದ್ದೇವೆ ಎಂದರೆ ತಪ್ಪಾಗಲಾರದು. ಒಕ್ಕೂಟಕ್ಕೆ ಸೇರಲು ಅಂದು ಒಡೆಯರ್ ರವರು ಸಹಿ ಹಾಕಿದ್ದು 3 ವಿಚಾರಗಳಿಗೆ:…