Subscribe to Updates
Get the latest creative news from FooBar about art, design and business.
- ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು
- ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ
- ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಗತಿ ಪರಿಶೀಲನೆ
- ಏನೂ ಮಾಡದ ಸ್ಪಂದನಾ ಸೇಫ್ ಆಗುತ್ತಿರುವುದು ಹೇಗೆ? | ಮಾಳು ನಿಪನಾಳ್ ಅಸಮಾಧಾನ
- ಮನೆಯವರಿಗೆ, ಸ್ನೇಹಿತರಿಗೆ ಗೊತ್ತಾಗದಂತೆ ಮಾಸ್ಕ್ ಧರಿಸಿ 14 ಕೋಟಿ ಲಾಟರಿ ಬಹುಮಾನ ಪಡೆದ ಯುವಕ: ಕಾರಣ ಕೇಳಿದ್ರೆ ಶಾಕ್ ಆಗ್ತೀರಿ…!
- ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಗೆಲುವು ಕಟ್ಟಟ್ಟ ಬುತ್ತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ವಾಜಪೇಯಿ ಅವರ 101ನೇ ಜಯಂತಿ: ವಾಜಪೇಯಿ ನಡೆದು ಬಂದ ಹಾದಿ ಸದಾ ಪ್ರೇರಣೆ: ವಿಹೆಚ್ ಪಿ ಜಿಲ್ಲಾಧ್ಯಕ್ಷರಾದ ಪ್ರದೀಪ್
- “ಧಂ ಹೋಡಿಯೋದ್ ಕಮ್ಮಿ ಮಾಡ್ಬೇಕಲೈ…!” | ಒಂದು ಸಿಗರೇಟ್ ಬೆಲೆ ಎಷ್ಟು ಏರಲಿದೆ? 72 ರೂ. ಆಗೋದು ಸತ್ಯನಾ?
Author: admin
ತುಮಕೂರು: ನಗರದ ಎನ್. ಆರ್. ಕಾಲೋನಿಯಲ್ಲಿ ಇಫ್ತಿಯಾರ್ ಕೂಟ ಏರ್ಪಡಿಸಿ, ನಾವೆಲ್ಲರೂ ಒಂದೇ ಎಂದು ಭಾವೈಕ್ಯತೆ ತೋರಿಸಿದ್ದಾರೆ ಈ ವೇಳೆ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷರಾದ ನರಸಿಂಹ ಮೂರ್ತಿ, ಇಲ್ಲಿ ನಾವೆಲ್ಲರೂ ಅಣ್ಣ ತಮ್ಮಂದಿರಂಗೆ ಇದ್ದೇವೆ. ಕೆಲವು ಕಿಡಿಗೇಡಿಗಳು ಜಾತಿ ಜಾತಿ ಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ನಾವು ಗಳು ಇದ್ಯಾವುದಕ್ಕೂ ಗಮನ ಕೊಡಬಾರದು ನಾವುಗಳು ಹಿಂದೂ ಮುಸ್ಲಿಂ ಒಂದೇ ಎಂದು ತೋರಿಸಬೇಕು ಎಂದರು . ಈ ಸಂದರ್ಭದಲ್ಲಿ ತುಮಕೂರು ನಗರ ಮಾಜಿ ಶಾಸಕ ರಫೀಕ್ ಅಹಮದ್, ದೊರೆಸ್ವಾಮಿ, ಡಾ.ಚಿದಾನಂದ್ ಮೂರ್ತಿ, ನರಸಿಂಹ ಮೂರ್ತಿ, ನಾಗಣ್ಣ, ರೂಪಶ್ರೀ, ಸಯ್ಯದ್ ನಯಾಜ್, ತಾಜುದ್ದೀನ್ ಶರೀಫ್ ಉಪಸ್ಥಿತರಿದ್ದರು ವರದಿ: ಎ.ಎನ್. ಪೀರ್ , ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ತುಮಕೂರು: ವ್ಯವಸ್ಥಿತವಾಗಿ ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ದುರುದ್ದೇಶದಿಂದಲೇ ಈಶ್ವರಪ್ಪನವರ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ದೂರಿದರು. ತುಮಕೂರು ನಗರದ ಶ್ರೀದೇವಿ ಮೆಡಿಕಲ್ ಕಾಲೇಜಿನಲ್ಲಿ ನಡೆದ ಘಟಿಕೋತ್ಸವದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ ಐ ನೇಮಕಾತಿಗೆ ಸಂಬಂಧಿಸಿದ ಅಕ್ರಮದ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿರುವುದು ಬಿಜೆಪಿ ಸರ್ಕಾರ. ಅಕ್ರಮದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಅಪರಾಧ ಹೇಗಾಗುತ್ತದೆ. ಅಕ್ರಮವನ್ನು ಮುಚ್ಚಿ ಹಾಕಿದರೆ ಅಕ್ರಮ ಆಗುತ್ತದೆ. ಈ ಅಕ್ರಮದಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ ಅವರನ್ನು ಪತ್ತೆಹಚ್ಚಿ ಬಂಧಿಸಿದರೆ ಅಪರಾಧವಾಗುತ್ತದೆಯೇ ಎಂದು ಪ್ರಶ್ನಿಸಿದರು. ಅಕ್ರಮವನ್ನು ಮುಚ್ಚಿ ಹಾಕುವ ಕೆಲಸವನ್ನು ಬಹಳ ಹಿಂದಿನಿಂದಲೂ ಕಾಂಗ್ರೆಸ್ ಪಕ್ಷ ವ್ಯವಸ್ಥಿತವಾಗಿ ಮಾಡುತ್ತಾ ಬಂದಿದೆ. ಆರ್ಕಾವತಿ ಹಗರಣ, ಹ್ಯೂಬ್ಲೆಟ್ ವಾಚ್ ಹಗರಣವನ್ನು ಮುಚ್ಚಿ ಹಾಕಿದ್ದು ಯಾರು ಎಂದು ಸಿ.ಟಿ. ರವಿ ಪ್ರಶ್ನಿಸಿದರು. ಯಾವ ಗುತ್ತಿಗೆದಾರರು 40 ಪರ್ಸಂಟೇಜ್ ಕಮೀಷನ್ ಕೊಟ್ಟು ಕೆಲಸ ಮಾಡಲು ಸಾಧ್ಯವಿದೆ. ಇದೆಲ್ಲ…
ತಿಪಟೂರು: ತೆಂಗುಕಲ್ಪತರು ನಾಡಿನ ಕೊಬ್ಬರಿ ಮಾರುಕಟ್ಟೆಯ ತೆಂಗು ಹಾಗೂ ತೆಂಗು ಉತ್ಪನ್ನಗಳ ಸಂಸ್ಕರಣ ಪ್ರಯೋಗಾಲಯ ಕುಡುಕರು ಅನೈತಿಕ ಚಟುವಟಿಕೆಗಳ ತಾಣವಾಗಿದೆ ತುಮಕೂರು ವಿಶ್ವವಿದ್ಯಾನಿಯ ತಿಪಟೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಪ್ರಾರಂಭ ಮಾಡಿದ್ದ ತೆಂಗು ಹಾಗೂ ತೆಂಗಿನ ಉತ್ಪನ್ನಗಳ ಸಂಸ್ಕರಣ ಪ್ರಯೋಗಗಾಲಯ ಪ್ರಾರಂಭದಿಂದಲೂ ಗ್ರಹಣ ಹಿಡಿದಿದೆ . ಕಲ್ಪತರು ನಾಡು ತಿಪಟೂರು ತುರುವೇಕೆರೆ ಚಿಕ್ಕನಾಯ್ಕನಹಳ್ಳಿ ಹಾಸನ ಸೇರಿದಂತೆ ರಾಜ್ಯದ ಹಲವಾರು ಭಾಗಗಳ ತೆಂಗು ಬೆಳೆಗೆ ಪ್ರಮುಖ ವ್ಯಾಪಾರ ಕೇಂದ್ರವಾಗಿದ್ದು, ವಿಶ್ವವಿಖ್ಯಾತ ಒಣಕೊಬ್ಬರಿ ಮಾರುಕಟ್ಟೆಯನ್ನು ಸಹ ಹೊಂದಿದೆ ಒಂದೆಡೆ ತೆಂಗಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ, ತೆಂಗಿನ ಮೌಲ್ಯವರ್ಧನೆಗಾಗಿ ಕ್ರಮವಹಿಸಬೇಕು ಎನ್ನುವ ಕೂಗು ತಿಪಟೂರಿನಲ್ಲಿ ಹಲವಾರು ವರ್ಷಗಳಿಂದ ಕೇಳಿ ಬಂದಿತ್ತು. ಆದರೆ, ತುಮಕೂರು ವಿಶ್ವವಿದ್ಯಾನಿಲಯದ ತಿಪಟೂರು ಎಪಿಎಂಸಿ ಅವರಣದಲ್ಲಿ ಪ್ರಾರಂಭಿಸಿರುವ ತೆಂಗು ಹಾಗೂ ತೆಂಗು ಉತ್ಪನ್ನಗಳ ಸಂಸ್ಕರಣ ಪ್ರಯೋಗಾಲಯ ತಾಲ್ಲೂಕಿನ ತೆಂಗುಬೆಳೆಗಾರರಲ್ಲಿ ಹೊಸ ಬರವಸೆ ಉಂಟುಮಾಡಿತ್ತು. ತೆಂಗು ಹಾಗೂ ತೆಂಗು ಉತ್ಪನ್ನಗಳ ಮೇಲೆ ಹೊಸ ಹೊಸ ಪ್ರಯೋಗ ನಡೆಯಬಹುದು ಎನ್ನುವ ಆಸೆ ಚಿಗುರೊಡೆಯುವಂತೆ…
ಕುಣಿಗಲ್: ಜನತಾ ಜಲಧಾರೆಗೆ ತೆರಳುತ್ತಿದ್ದ ಬಸ್ ಹಾಗೂ ಆಟೋವೊಂದರ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂದ ಘಟನೆ ಶನಿವಾರ ಬೆಳಗ್ಗೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಳಿಯೂರು ದುರ್ಗ ಸಮೀಪದ ಅರ್ಜುನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೆಡಿಎಸ್ ನ ಜನತಾ ಜಲಧಾರೆ ಈ ಕಾರ್ಯಕ್ರಮಕ್ಕೆ ಜನರನ್ನು ಕರೆತರುತ್ತಿದ್ದ ಬಸ್ ಮತ್ತು ಒಂದೇ ಕುಟುಂಬದ ಐವರನ್ನು ದೇಗುಲಕ್ಕೆ ಕರೆದೊಯ್ಯುತ್ತಿದ್ದ ಆಟೋ ನಡುವೆ ಮಾರ್ಗಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬಸ್ ಸಮೀಪದ ಗದ್ದೆಗೆ ಉರುಳಿದೆ. ಅಪಘಾತದಲ್ಲಿ ಆಟೋದಲ್ಲಿದ್ದ ಗೌಡಗೆರೆ ಗ್ರಾಮದ ರಾಮಯ್ಯ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ನಾಲ್ವರಿಗೆ ಗಂಭೀರವಾಗಿ ಗಾಯಗಳಾಗಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ತುಮಕೂರು: ಜಿಲ್ಲೆಯಲ್ಲಿ ಮೂವರು ಸಚಿವರಿದ್ದರೂ ದಲಿತರ ಮೇಲೆ ಅಮಾನವೀಯ ಕೃತ್ಯ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಜಿಲ್ಲಾ ಸಚಿವರು ಎಂಬುದೇ ಮರೆತಿದ್ದಾರೋ ಅಥವಾ ಉದ್ದೇಶ ಪೂರ್ವಕವಾಗಿ ನಿರ್ಲಕ್ಷ್ಯ ತಾಳಿದ್ದರೋ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಈಚೆಗೆ ಹತ್ಯೆಗೀಡಾದ ಗಿರೀಶ್ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಅವರು, ಪೊಲೀಸ್ ಇಲಾಖೆಯ ಇತ್ತೀಚಿನ ವಿದ್ಯಮಾನ ಅಚ್ಚರಿ ತಂದಿದೆ. ಮೇಲ್ನೋಟಕ್ಕೆ ತನಿಖೆ ನಡೆಸದೆ, ಗಂಭೀರತೆ ಇಲ್ಲಿ ಕಾಣಬೇಕಿದೆ. ದಲಿತ ವಿರೋಧಿತನ ಮಟ್ಟ ಹಾಕಿ ನ್ಯಾಯ ಒದಗಿಸುವ ಗೃಹ ಇಲಾಖೆ ಮಾಡಬೇಕು ಎಂದು ಒತ್ತಾಯಿಸಿದರು. ಇಡೀ ರಾಜ್ಯವೇ ಬೆಚ್ಚಿಬೀಳಿಸಿದ ಈ ಹತ್ಯಾಕಾಂಡ ಬಗ್ಗೆ ಬೇಜವಾಬ್ದಾರಿತನ ಪ್ರದರ್ಶಿಸದೆ, ನ್ಯಾಯಯುತ ತನಿಖೆ ನಡೆಯಬೇಕು. ಈಗಾಗಲೇ 20 ಕ್ಕೂ ಅಧಿಕ ಮಂದಿ ಆರೋಪಿಗಳ ಬಂಧನವಾಗಿದೆ. ಕೂಲಿ ಮಾಡಿ ಜೀವನ ಸಾಗಿಸುವ ಗಿರೀಶ್ ಎಂಬ ಇಬ್ಬರು ದಲಿತ ಯುವಕರ ಕೊಲೆಯ ಸಂಚು ಹೊರತರಬೇಕಿದೆ ಎಂದು ಅವರು ಒತ್ತಾಯಿಸಿದರು. ಘಟನೆಗೆ ಮೂಲ ಕಾರಣಕರ್ತರ ಹೆಸರು…
ಮೈಸೂರು: ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ, ಅಕ್ರಮಗಳು ಹೆಚ್ಚಾಗಿವೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಇಂದು ಮೈಸೂರಿನ ಟಿ. ನರಸೀಪುರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಕಾನೂನು ಎಲ್ಲರಿಗೂ ಕಾನೂನು ಒಂದೇ. ರಾಜಕೀಯ ಲಾಭಕ್ಕಾಗಿ ಒಂದು ಧರ್ಮವನ್ನ ಟಾರ್ಗೆಟ್ ಮಾಡುವುದು ತಪ್ಪು. ಯಾವ ಧರ್ಮದವರು ತಪ್ಪು ಕ್ರಮ ಕೈಗೊಳ್ಳಬೇಕು. ಒಂದು ಧರ್ಮದ ಜನರನ್ನು ಟಾರ್ಗೆಟ್ ಮಾಡಿದರೆ ಮತ ದೃವೀಕರಣ ಆಗತ್ತೆ ಎಂಬ ಭ್ರಮೆಯಲ್ಲಿ ಬಿಜೆಪಿ ಇದೆ. ಅದು ಅಸಾಧ್ಯ. ಈಗಾಗಲೇ ಅವರಿಗೆ ತಿರುಗುಬಾಣ ಆಗಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದರು. ಸಿದ್ದರಾಮಯ್ಯ ಸೋನಿಯಾ ಗಾಂಧಿಯ ಗುಲಾಮ ಎಂಬ ಸಿ.ಟಿ. ರವಿ ಹೇಳಿಕೆ ವಿಚಾರವಾಗಿ ಮಾತನಾಡಿ ಅವರು ಪ್ರಜಾಪ್ರಭುತ್ವದಲ್ಲಿ ಯಾರು ಯಾರಿಗೂ ಗುಲಾಮರಲ್ಲ ಎಂದು ತಿಳಿಸಿದ್ದಾರೆ.ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಕಾಂಗ್ರೆಸ್ಗೆ ನೈತಿಕತೆ ಇಲ್ಲ ಎಂಬ ಸಚಿವ ಅಶೋಕ್ ಹೇಳಿಕೆ ವಿಚಾರ ಟೀಕೆ ಮಾಡಿದ ಅಶೋಕ ಏನ್ ಮಾಡ್ತಾ ಇದ್ದರು. ಕಾಂಗ್ರೆಸ್ ಆಡಳಿತದ ಸಮಯದಲ್ಲಿ ಬಿಜೆಪಿ ಪ್ರತಿಪಕ್ಷದಲ್ಲಿತ್ತು. ಆಗ ಯಾಕೆ…
ಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ಆರೋಪಿ ಮೊಹಮ್ಮದ್ ಆರೀಫ್ ಜೈಲಿನಲ್ಲಿಯೇ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದು. ಹಳೇ ಹುಬ್ಬಳ್ಳಿ ಠಾಣೆಯಲ್ಲಿರುವ ಗಲಬೆ ಆರೋಪಿ , ತನ್ನ ಕಾಲಿಗೆ ಗಾಯವಾಗಿದೆ, ಹಾಗಾಗಿ ಟರ್ಪಂಟೈನ್ ಕೊಡಿ ಎಂದು ಕೇಳಿದ್ದ ಕಾರಣ ಪೊಲೀಸರು ಟರ್ಪಂಟೈನ್ ತಂದುಕೊಟ್ಟಿದ್ದರು. ಬಳಿಕ ಮೊಹಮ್ಮದ್ ಆರಿಪ್ ಟರ್ಪಂಟೈನ್ನ್ನು ಕುಡುದು ಪ್ರಯತ್ನಿಸಿದ್ದಾಗಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ ಎಂದು ವರದಿಯಾಗಿದೆ. ಮೊಹಮ್ಮದ್ ಆರಿಫ್ ಜತೆಗಿದ್ದ ಇನ್ನೊಬ್ಬ ಆರೋಪಿ ಎಐಎಂಐಎಂ ಕಾರ್ಪೋರೇಟರ್ ನಜೀರ್ ಅಹಮದ್ ಹೊನ್ಯಾಳ ಕೂಡಲೇ ಆರಿಫ್ರನ್ನು ತಡೆದಿದ್ದು ಮಾತ್ರವಲ್ಲದೆ ಪೊಲೀಸರಿಗೂ ಮಾಹಿತಿ ನೀಡಿದ್ದಾನೆ. ಕೂಡಲೇ ಮೊಹಮ್ಮದ್ ಆರೀಫ್ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ಹುಬ್ಬಳ್ಳಿಯಲ್ಲಿ ಪ್ರಚೋದನಕಾರಿ ವಾಟ್ಸ್ಆಯಪ್ ಸ್ಟೇಟಸ್ನಿಂದ ದೊಡ್ಡಮಟ್ಟದಲ್ಲಿ ಗಲಭೆ ನಡೆದಿತ್ತು. ಈ ಪ್ರಕರಣದಲ್ಲಿ ಈಗಾಗಲೇ 100ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. 10-12 ಜನರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. ಈ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದ ಮೌಲ್ವಿ ವಸೀಂ ಪಠಾಣ್ ನನ್ನು ಪೊಲೀಸರು ಬಂಧಿಸಿದ್ದ, ಆತನ…
ತುಮಕೂರು: ಹಿರಿಯ ಪೊಲೀಸ್ ಅಧಿಕಾರಿ ,ಹಾಗೂ ಸಹಾಯಕ ನಿರ್ದೇಶಕರು ರಾಜ್ಯ ಗುಪ್ತವಾರ್ತೆ ತುಮಕೂರು ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್ಎಂ ಶಿವಕುಮಾರ್ (54) ರವರು ಕಳೆದ ರಾತ್ರಿ 1 ಗಂಟೆ ಸಮಯದಲ್ಲಿ ತುಮಕೂರು ನಗರದ ಪೊಲೀಸ್ ಕ್ವಾಟ್ರಸ್ ನಲ್ಲಿ ಹೃದಯಾಘಾತಕ್ಕೀಡಾಗಿ ನಿಧನರಾಗಿದ್ದಾರೆ. ಮೃತ ಶಿವಕುಮಾರ್ ರವರು ಪತ್ನಿ ವಿಜಯಲಕ್ಷ್ಮಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಶಿವಕುಮಾರ್ ಅವರ ಸ್ವಗೃಹ ಚಿಂಗೂಬನನಹಳ್ಳಿ ,ಜಗಳೂರು ಹೋಬಳಿ ,ಚಿತ್ರದುರ್ಗ ಜಿಲ್ಲೆಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ. ಇನ್ನು ಶಿವಕುಮಾರ್ ರವರ ನಿಧನಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಕಂಬನಿ ಮಿಡಿದಿದ್ದು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ವರದಿ : ಮಾರುತಿ ಪ್ರಸಾದ್ ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ನವದೆಹಲಿ: ನವದೆಹಲಿಯಲ್ಲಿಂದು ನಡೆದ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳ ಜಂಟಿ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳನ್ನು ಪ್ರೋತ್ಸಾಹಿಸಬೇಕಾಗಿದೆ ಇದು ಸಾಮಾನ್ಯ ಜನರಲ್ಲಿ ವಿಶ್ವಾಸ ಮೂಡಿಸುತ್ತದೆ. ಇದು ನ್ಯಾಯ ವ್ಯವಸ್ಥೆಯಲ್ಲಿ ಸಾಮಾನ್ಯ ನಾಗರಿಕರ ವಿಶ್ವಾಸವನ್ನು ಹೆಚ್ಚಿಸುವುದಲ್ಲದೆ, ಸುಗಮ ಸಂಪರ್ಕಕ್ಕೆ ಸಹಾಯವಾಗಲಿದೆ ಎಂದು ಅವರುತಿಳಿಸಿದ್ದಾರೆ. ಭಾರತವು ಸ್ವಾತಂತ್ರ್ಯದ 75 ನೇ ವರ್ಷಾಚರಣೆಯನ್ನು ಆಚರಿಸುತ್ತಿರುವಾಗ ಎಲ್ಲರಿಗೂ ಸುಲಭವಾಗಿ, ನ್ಯಾಯ ದೊರೆಯುವ ವ್ಯವಸ್ಥೆಯನ್ನು ರಚಿಸುವತ್ತ ಗಮನಕೊಂಡಬೇಕು ಎಂದು ಸಂದೇಶ ನೀಡಿದರು. ಭಾರತದಲ್ಲಿ ನ್ಯಾಯಾಂಗ ಸಂವಿಧಾನ ರಕ್ಷಕನ ಪಾತ್ರವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದು, ಶಾಸಕಾಂಗ ನಾಗರಿಕರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತದೆ. ಸುಪ್ರಿಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ, ಸಂವಿಧಾನ ಮೂರು ಅಂಗಗಳ ನಡುವೆ ಅಧಿಕಾರವನ್ನು ಪ್ರತ್ಯೇಕಗೊಳಿಸಿ ಸ್ಪಷ್ಟತೆ ನೀಡಿದೆ. ಪ್ರತಿಯೊಂದು ಅಂಗವೂ ಕರ್ತವ್ಯ ನಿರ್ವಹಿಸುವಾಗ ಲಕ್ಷ್ಮಣ ರೇಖೆಯನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದರು.ನ್ಯಾಯಾಂಗ ತೀರ್ಪುಗಳ ಹೊರತಾಗಿಯೂ ಸರ್ಕಾರಗಳ ಉದ್ದೇಶಪೂರ್ವಕ ನಿಷ್ಕ್ರಿಯತೆ ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಒಳ್ಳೆಯದಲ್ಲ. ಶಾಸಕಾಂಗ, ನ್ಯಾಯಾಂಗ ಮತ್ತು ಕಾರ್ಯಾಂಗಗಳ ನಡುವಿನ ಸಾಮರಸ್ಯ ಪ್ರಜಾಪ್ರಭುತ್ವವನ್ನು…
ದೇಶದಲ್ಲಿ ಕಲ್ಲಿದ್ದಲು ಸಂಗ್ರಹ ಶೋಚನೀಯ ಮಟ್ಟ ತಲುಪಿದೆ ಎಂಬ ಊಹಾಪೋಹಗಳ ಮಧ್ಯೆ ದೇಶದ ಅನೇಕ ಮಹಾನಗರಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ಇನ್ನು ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕು ಎಂದು ಎಂಎಸ್ಎಂಇಗಳು ಏಪ್ರಿಲ್ 25ರಂದು ಮನವಿ ಮಾಡಿದ್ದಾರೆ. ಈ ಬಳಿಕ ವಿಷಯದ ಚರ್ಚೆಯು ಮಹತ್ವ ಪಡೆದುಕೊಂಡಿದೆ. ಅಷ್ಟೇ ಅಲ್ಲದೆ, ಜಮ್ಮು ಮತ್ತು ಕಾಶ್ಮೀರದ ಪ್ರಮುಖ ರಾಜಕೀಯ ಪಕ್ಷಗಳು, ಆರರಿಂದ ಏಳು ಗಂಟೆಗಳವರೆಗೆ ವಿದ್ಯುತ್ ಕಡಿತಗೊಳಿಸುವುದರ ವಿರುದ್ಧ ಪ್ರತಿಭಟನೆಗಳನ್ನು ನಡೆಸಿವೆ. ಮತ್ತೊಂದೆಡೆ ಎಎಪಿ ನೇತೃತ್ವದ ದೆಹಲಿ ಸರ್ಕಾರವು ವಿದ್ಯುತ್ ಕಡಿತ ಮತ್ತು ಕಲ್ಲಿದ್ದಲು ಕೊರತೆಗೆ ಸಂಬಂಧಿಸಿದಂತೆ ಕಳವಳ ವ್ಯಕ್ತಪಡಿಸಿದೆ. ದೇಶದಲ್ಲಿರುವ 173 ಉಷ್ಣ ವಿದ್ಯುತ್ ಸ್ಥಾವರಗಳ ಪೈಕಿ 106 ಸ್ಥಾವರಗಳಲ್ಲಿ ಕಲ್ಲಿದ್ದಲು ಸಂಗ್ರಹ ಶೋಚನೀಯ ಮಟ್ಟಕ್ಕೆ ಕುಸಿದಿದೆ ಎಂದು ತಿಳಿದುಬಂದಿದೆ. ಉತ್ತರ ಭಾರತದಲ್ಲಿ ಬೀಸುವ ಬಿಸಿಗಾಳಿಯಿಂದಾಗಿ ವಿದ್ಯುತ್ಗೆ ಬೇಡಿಕೆ ಹೆಚ್ಚಾಗಿತ್ತು. ಆದರೆ ಕಲ್ಲಿದ್ದಲು ಸಂಗ್ರಹಣೆಯ ಕೊರತೆಯಿಂದ ವಿದ್ಯುತ್ ಉತ್ಪಾದಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ವಿದ್ಯುತ್ ಕೊರತೆ ಉಂಟಾಗಿದೆ. ಗುರುವಾರ ತಡರಾತ್ರಿ ಕೇಂದ್ರೀಯ…