Subscribe to Updates
Get the latest creative news from FooBar about art, design and business.
- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
- ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ
- ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
- ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
- ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
- ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
- ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ
- ಹುಮನಾಬಾದ್ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್ ಸೇವೆ ಒದಗಿಸಲು ದಸಂಸ ಆಗ್ರಹ
Author: admin
ಹಿರಿಯೂರು: ಸರ್ಕಾರ ಬುಡಕಟ್ಟು ಹಿನ್ನೆಲೆ ಹೊಂದಿರುವ ಕಾಡುಗೊಲ್ಲ ಜನಾಂಗವನ್ನು ಅವಮಾನಿಸುತ್ತಿರುವುದು ನಿಜಕ್ಕೂ ಸಹ ನೋವಿನ ಸಂಗತಿ ಎಂದು ಕಾಡುಗೊಲ್ಲ ಮುಖಂಡರಾದ ಗೋಪಿ ಯಾದವ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಕಾಡು ಗೊಲ್ಲರನ್ನು ಕಡೆಗಣಿಸುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಮತ ಚಲಾಯಿಸಿ 15ರಿಂದ 18 ಕ್ಷೇತ್ರದಲ್ಲಿ ಬಿಜೆಪಿ ಶಾಸಕರನ್ನು ಸಮುದಾಯ ಗೆಲ್ಲಿಸಿದೆ. ಆದರೆ ಅಧಿಕಾರ ದೊರಕಿದ ಬಳಿಕ ಬಿಜೆಪಿ ಸಮುದಾಯವನ್ನು ಕಡೆಗಣಿಸಿದೆ ಎಂದರು. ಸರ್ಕಾರವು ಕಾಡುಗೊಲ್ಲರ ಅಭಿವೃದ್ಧಿ ನಿಗಮ ಘೋಷಿಸಿದೆಯಾದರೂ ಈವರೆಗೆ ಅದಕ್ಕೆ ಅಧ್ಯಕ್ಷರನ್ನೂ ನೇಮಕ ಮಾಡದೇ ಪದೇ ಪದೇ ಕುಂಟು ನೆಪ ಹೇಳುತ್ತಾ ಸಮುದಾಯವನ್ನು ಅವಮಾನಿಸುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಕಾಡುಗೊಲ್ಲರು 18 ಲಕ್ಷ ಜನಸಂಖ್ಯೆ ಇದ್ದರೂ, ಅವರ ಅಭಿವೃದ್ಧಿಗೆಂದು ಮೂರು ನಾಮ ಹಾಕಿದಂತೆ ಕೇವಲ 3 ಕೋಟಿ ಅನುದಾನ ನೀಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ಕಾಡುಗೊಲ್ಲ ರಿಗೆ ಹಲವಾರು ಯೋಜನೆಗಳನ್ನು ಘೋಷಣೆ ಮಾಡಿ ಅನುಷ್ಠಾನಕ್ಕೆ ತರಲಾಗಿತ್ತು. ಆ ಸಂದರ್ಭದಲ್ಲಿ ಜಯಮ್ಮ ಬಾಲರಾಜ್…
ತುಮಕೂರು: ಸಿಮೆಂಟ್ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಬ್ರೇಕ್ ಫೈಲ್ ಆದ ಪರಿಣಾಮ ಡಿವೈಡರ್ ಗೆ ಡಿಕ್ಕಿಯಾಗಿ ಮಗುಚಿ ಬಿದ್ದ ಘಟನೆ ರಿಂಗ್ ರೋಡ್ ನಲ್ಲಿ ನಡೆದಿದೆ. ಬೆಳಗ್ಗಿನ ಜಾವ 5:45ರ ಸುಮಾರಿಗೆ ಘಟನೆ ನಡೆದಿದ್ದು ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಲಾರಿಯು ಕನಕಪುರಕ್ಕೆ ಸಿಮೆಂಟ್ ತುಂಬಿಕೊಂಡು ಹೋಗುತ್ತಿತ್ತು ಎನ್ನಲಾಗಿದೆ. ಬ್ರೇಕ್ ಫೈಲ್ ಆದ ಕೂಡಲೇ ಲಾರಿ ಚಾಲಕ ಸಮಯ ಪ್ರಜ್ಞೆ ಮೆರೆದಿದ್ದು, ಲಾರಿಯನ್ನು ಡಿವೈಡರ್ ಗೆ ಡಿಕ್ಕಿ ಹೊಡೆದು ನಿಲ್ಲಿಸಿದ್ದಾರೆನ್ನಲಾಗಿದೆ. ಇದರಿಂದಾಗಿ ನಡೆಯಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಕೊಡಗಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದರೆ, ಹೆಣ ಬೀಳುತ್ತದೆ ಎಂದು ರಾಜ್ಯಸಭಾ ಸದಸ್ಯ ಜಗ್ಗೇಶ್ ಹೇಳಿಕೆ ನೀಡಿದ್ದು, ಪ್ರತಿಭಟನೆ ಅವಕಾಶ ಕೊಟ್ಟು ಹೆಣ ಬಿದ್ದು ದೊಡ್ಡ ಗಲಾಟೆಯಾಗಲು ಯಾಕೆ ಅವಕಾಶ ನೀಡಬೇಕು ಎಂದು ಅವರು ಪ್ರಶ್ನಿಸಿದ್ದಾರೆ. ಕೊಡಗಿಗೆ ಕಾಂಗ್ರೆಸ್ ಚಲೋ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಕಾರ್ಯಕರ್ತನೇ ಮೊಟ್ಟೆ ಎಸೆದಿದ್ದಾನೆ. ಆತನ ಯಾವುದೊ ವಿಚಾರಕ್ಕೆ ಬೇಸರಗೊಂಡು ಎಸೆದಿದ್ದಾನೆ. ಇದು ಜಗತ್ಜಾಹೀರಾಗಿದೆ. ಆತನ ಸಂದೇಶಗಳನ್ನು ನೋಡಿದ್ದೇನೆ. ಆತ ನಾನು ಜೆಡಿಎಸ್ ನಲ್ಲಿದ್ದೆ ಆನಂತ ಕಾಂಗ್ರೆಸ್ ಗೆ ಬಂದೆ ಎಂದಿದ್ದಾನೆ. ಈಗ ಆತನನ್ನು ಅರೆಸ್ಟ್ ಮಾಡಲಾಗಿದೆ ಎಂದು ಜಗ್ಗೇಶ್ ಹೇಳಿದರು. ಕಾಂಗ್ರೆಸ್ ಹೋರಾಟ ನೆಕ್ಸ್ಟ್ ಜೂನ್ ವರೆಗೂ ಇರಬಹುದು. ಆಮೇಲೆ ಎಲ್ಲಾ ತಣ್ಣಾಗಿ ಬಿಡುತ್ತೆ. ರಾಜ್ಯದ ಜನತೆಗೆ ಗೊತ್ತಿದೆ ಯಾಕೆ ಈಗ ಪ್ರತಿಭಟನೆ ಆಗ್ತಿದೆ ಅಂತ . ಪ್ರತಿಯೊಬ್ಬರಿಗೂ ಆ ಜಾಗ ಹಿಡಿಬೇಕು ಎಂಬ ಹುಮ್ಮಸಿದೆ. ಬಟ್ ವಿಷಯಗಳಿಲ್ಲ, ವಿಷಯ ಇದ್ದಿದ್ದೆ ಆದ್ರೆ ಅದ್ಭುತ ಡಿಬೇಟ್ ನಡೆಯುತ್ತಿತ್ತು. ಡಿಬೇಟ್ ನಡೆಯದೆ ಬರೀ ಮೊಟ್ಟೆ…
ಮುಂಬೈ: ಬಾಲಿವುಡ್ನ ಹಿರಿಯ ನಟ ಅಮಿತಾಭ್ ಬಚ್ಚನ್ ಅವರಿಗೆ ಗೆ ಮತ್ತೆ ಕೋವಿಡ್ ಸೋಂಕು ತಗುಲಿದೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ನನ್ನ ಸಂಪರ್ಕಕ್ಕೆ ಬಂದವರೂ ಸಹ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ್ದಾರೆ. 79 ವರ್ಷದ ಅಮಿತಾಬ್ ಬಚ್ಚನ್ಗೆ 2ನೇ ಬಾರಿಗೆ ಕೊರೊನಾ ಸೋಂಕು ತಗುಲಿದೆ. 2020 ರಲ್ಲಿ ಕೋವಿಡ್ ಪಾಸಿಟಿವ್ ಬಂದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಮಗ ಅಭಿಷೇಕ್ ಬಚ್ಚನ್, ಸೊಸೆ ಐಶ್ವರ್ಯಾ ರೈ ಬಚ್ಚನ್ ಮತ್ತು ಮೊಮ್ಮಗಳು ಆರಾಧ್ಯ ಬಚ್ಚನ್ ಕೂಡ ಕೋವಿಡ್ ಸೋಂಕಿಗೆ ಒಳಗಾಗಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಳಗಾವಿ: ನಗರದ ಗಾಲ್ಫ್ ಮೈದಾನದಲ್ಲಿ ಕಳೆದ 19 ದಿನಗಳಿಂದ ಅವಿತುಕೊಂಡಿರುವ ಚಿರತೆ ಸೆರೆ ಹಿಡಿಯಲು ಶಿವಮೊಗ್ಗದ ಸಕ್ರೇಬೈಲು ಆನೆಬಿಡಾರದಿಂದ ಬಂದ ಎರಡು ಆನೆಗಳು ಕಾರ್ಯಾಚರಣೆ ಆರಂಭಿಸಿವೆ. ಚಿರತೆ ಸೆರೆ ಕಾರ್ಯಾಚರಣೆಗೆ ಆಗಮಿಸಿರುವ ಈ ಎರಡೂ ಆನೆಗಳು ಈಗಾಗಲೇ ಗಾಲ್ಫ್ ಕೋರ್ಸ್ ನ ಪೊದೆಯೊಳಗೆ ನುಗ್ಗಿವೆ. ಡಾಟಿಂಗ್ ಸ್ಪೆಷಲಿಸ್ಟ್ ವನ್ಯಜೀವಿ ತಜ್ಞ ಡಾ.ವಿನಯ ನೇತೃತ್ವದಲ್ಲಿ ಈ ಸ್ಪೇಷಲ್ ಟೀಂ ಬಂದಿವೆ. ಸಕ್ರೇಬೈಲು ಬಿಡಾರದ ಅರ್ಜುನ ಹಾಗೂ ಆಲೆ ಆನೆ ಬಂದಿವೆ. ವೈದ್ಯರು, ಸಹಾಯಕ ಸಿಬ್ಬಂದಿ, ಸೇರಿದಂತೆ 8 ಜನರ ತಂಡ ಆಗಮಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಳಗಾವಿ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕರೊಬ್ಬರು ಸೇವೆಯಲ್ಲಿರುವಾಗಲೇ ನಿಧನ ಹೊಂದಿದ್ದರಿಂದ ಅವರ ಅವಲಂಬಿತ ಕಿರಿಯ ಸಹೋದರನಿಗೆ ಕೇವಲ 24 ಗಂಟೆಯಲ್ಲಿ ಅನುಕಂಪ ಆಧಾರಿತ ನೇರ ನೇಮಕಾತಿ ಆದೇಶ ನೀಡುವ ಮೂಲಕ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕಳಕಳಿಯನ್ನು ಮೆರೆದಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಚಿನ್ ಮಹಾದೇವ ಬಾದುಲೆ ಅವರು ದಿನಾಂಕ ಆಗಸ್ಟ್ 22 ರಂದು ಅನಾರೋಗ್ಯದಿಂದ ನಿಧನ ಹೊಂದಿದ್ದರು. ತಮ್ಮ ಸಹೋದರ ಸೇವೆಯಲ್ಲಿರುವಾಗ ನಿಧನ ಹೊಂದಿರುವುದರಿಂದ ಕುಟುಂಬ ನಿರ್ವಹಣೆಗಾಗಿ ತಮಗೆ ಅನುಕಂಪ ಆಧಾರದ ಮೇಲೆ ನೌಕರಿ ನೀಡಬೇಕು ಎಂದು ಬಸವರಾಜ ಮಹಾದೇವ ಬಾದುಲೆ ಅವರು ಅರ್ಜಿ ಸಲ್ಲಿಸಿದ್ದರು. ಸದರಿ ಅರ್ಜಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಮೃತ ಸಚಿನ್ ಬಾದುಲೆ ಅವರ ಅವಲಂಬಿತ ಸಹೋದರ ಬಸವರಾಜ ಮಹಾದೇವ ಬಾದುಲೆ ಅವರನ್ನು ಕೇವಲ 24 ಗಂಟೆಗಳ ಅವಧಿಯಲ್ಲಿ ಗ್ರುಪ್ “ಸಿ” ಹುದ್ದೆಗೆ ನೇರ ನೇಮಕಾತಿ ಮಾಡುವ ಮೂಲಕ ಮಾನವಿಯತೆ ಮೆರೆದಿದ್ದಾರೆ. ಬಿ.ಎ.…
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಪ್ರಭಾವಕ್ಕೆ ಒಳಗಾಗಿ ಸರಿಯಾದ ತನಿಖೆ ನಡೆಸಿಲ್ಲ ಎಂದು ಆರೋಪಿಸಿ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್ ವಿರುದ್ಧ ಮೃತ ಸಂತೋಷ್ ಸೋದರ ಸಂಬಂಧಿ ಪ್ರಶಾಂತ್ ಪಾಟೀಲ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪೂರ್ವಾಗ್ರಹ ಪೀಡಿತರಾಗಿ, ಪ್ರಭಾವಕ್ಕೊಳಗಾಗಿ ಪೊಲೀಸರು ತನಿಖೆ ನಡೆಸಿದ್ದು, ಪ್ರಕರಣದ ತನಿಖೆಯನ್ನು ಮತ್ತೊಂದು ತನಿಖಾ ಸಂಸ್ಥೆಗೆ ವಹಿಸುವಂತೆ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಜಿಲ್ಲೆ ತುರುವೇಕೆರೆ ತಾಲೂಕಿನ ಸೊರವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ನಡೆದ ಅಕ್ರಮ ಕಾಮಗಾರಿಗಳನ್ನು ಪ್ರಶ್ನಿಸಿ ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಯಿತು. ಎಸ್.ಕೆ.ರಘು ನಂಜುಂಡಯ್ಯ, ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಲಿಂಗರಾಜು ಹಾಗೂ ಗ್ರಾಮಸ್ಥರ ನೇತೃತ್ವದಲ್ಲಿ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ರಘು, ಈ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ಸುಮಾರು ವರ್ಷಗಳಿಂದಲೂ ಅಕ್ರಮವಾಗಿ ಕಂದಾಯ ಇಲಾಖೆಗೆ ಸೇರಿದ ಜಾಗಗಳನ್ನು ಯಾವುದೇ ಮಾಹಿತಿ ಇಲ್ಲದೆ ಕಂದಾಯ ಇಲಾಖೆಗೆ ಮಾಹಿತಿ ಕೊಡದೆ ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದು, ಇದರ ವಿರುದ್ಧ ಮುಂದಿನ ದಿನಗಳಲ್ಲೂ ಕೂಡ ದೊಡ್ಡಮಟ್ಟದ ಹೋರಾಟವನ್ನು ಮಾಡುತ್ತೇವೆ ಎಂದು ಹೇಳಿದರು. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜ್ಯೋತಿ ಹಾಗೂ ಪಂಚಾಯತಿ ಅಧ್ಯಕ್ಷರಾದ ಜಾಬಿರ್ ಹುಸೇನ್ ಪ್ರತಿಭಟನಾಕಾರರ ಮನವೊಲಿಸಿದ ಬಳಿಕ ಪ್ರತಿಭಟನೆ ಕೈ ಬಿಡಲಾಯಿತು. ವರದಿ: ಸುರೇಶ ಬಾಬು, ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಹಲಗೂರು: ಹಣ ಮತ್ತು ಚಿನ್ನಾಭರಣದ ಆಸೆಗಾಗಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಹಲಗೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಅಂಚೆ ಪಾಳ್ಯ ಪೋಸ್ಟ್, ಚಳ್ಳಘಟ್ಟ ವಾಸಿ ಲಕ್ಷ್ಮಿ ಮತ್ತು ಬೆಂಗಳೂರಿನ ಗೊಲ್ಲಹಳ್ಳಿ ನಾರಾಯಣ ಬಂಧಿತ ಆರೋಪಿಗಳಾಗಿದ್ದಾರೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಕೊಲೆ ನಡೆದಿತ್ತು. ಆದರೆ ಹತ್ಯೆಗೀಡಾದ ಮಹಿಳೆಯ ಗುರುತು ಪತ್ತೆಯಾಗಿರಲಿಲ್ಲ. ಹೀಗಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಮತ್ತು ಅಪರ ಜಿಲ್ಲಾ ಪೊಲೀಸ್ ಅಧಿಕ್ಷಕರ ಮಂಡ್ಯ ಜಿಲ್ಲೆ ಮಾರ್ಗದರ್ಶನ ಮತ್ತು ಸೂಚನೆಯ ಮೇರೆಗೆ ನಾಪತ್ತೆಯಾದ ಮಹಿಳೆಯರ ಪ್ರಕರಣಗಳನ್ನು ಪತ್ತೆ ಮಾಡಲಾಗಿತ್ತು. ಈ ವೇಳೆ ಬೆಂಗಳೂರು ನಗರ ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಪತ್ತೆಯಾಗಿರುವ ಶೋಭಾ ಎಂಬ ಮಹಿಳೆಯ ಚಹರೆಗೆ ಹೋಲಿಕೆ ಕಂಡು ಬಂದಿತ್ತು. ತಕ್ಷಣವೇ ತನಿಖೆ ಚುರುಕುಗೊಳಿಸಿದ ಪೊಲೀಸರು ನಾಪತ್ತೆಯಾದ ಮಹಿಳೆಯ ಮೊಬೈಲ್ ನಂಬರ್ ಮಾಹಿತಿ ಪಡೆದುಕೊಂಡು ಮೃತಳ ಕಾಲ್ ರೆಕಾರ್ಡ್ ಪರಿಶೀಲನೆ ನಡೆಸಿದ್ದು, ಈ ವೇಳೆ ಆರೋಪಿಗಳ ಸುಳಿವು ಲಭ್ಯವಾಗಿತ್ತು. ಶೋಭಾ ಅವರಿಗೆ ಚಿನ್ನಾಭರಣಗಳನ್ನು…
ನಾಗಮಂಗಲ: ಬೆಳ್ಳೂರು ಪೊಲೀಸ್ ಠಾಣೆಯ ಜನ ವಿರೋಧಿ, ಕಾನೂನು ಬಾಹಿರ ನಡುವಳಿಕೆಯನ್ನು ಖಂಡಿಸಿ ಅಖಿಲ ಭಾರತೀಯ ಪರಿಶಿಷ್ಟ ಜಾತಿ ಯುವ ಜನ ಸಮಾಜ ಮತ್ತು ಪ್ರಗತಿಪರ ಎಲ್ಲಾ ಸಂಘಟನೆಗಳ ಒಕ್ಕೂಟ ವತಿಯಿಂದ ಸಾಂಕೇತಿಕ ಕಪ್ಪು ಪಟ್ಟಿ ಧರಿಸಿ ಬೆಳ್ಳೂರು ಕ್ರಾಸ್ ನಿಂದ ಬೆಳ್ಳೂರು ಪೊಲೀಸ್ ಠಾಣೆಯ ತನಕವೂ ಕಾಲುನಡಿಗೆಯಲ್ಲಿ ಜಾಥಾ ನಡೆಯಿತು. ಪ್ರತಿಭಟನೆ ನೇತೃತ್ವ ವಹಿಸಿದ್ದ ಅಖಿಲ ಭಾರತೀಯ ಪರಿಶಿಷ್ಟ ಜಾತಿ ಯುವ ಜನ ಸಮಾಜ ಮಂಡ್ಯ ಜಿಲ್ಲಾಧ್ಯಕ್ಷ ಡಿ. ವೆಂಕಟೇಶ್ ಮಾತನಾಡಿ, ಬೆಳ್ಳೂರು ಪೊಲೀಸ್ ಠಾಣೆಗೆ ದೌರ್ಜನ್ಯಕ್ಕೆ ತುತ್ತಾದ ಸಾರ್ವಜನಿಕ ರು ದೂರು ನೀಡಲು ಹೋದಾಗ ದೂರುದಾರರ ಮೇಲೆ ಪೊಲೀಸ್ ದರ್ಪ ತೋರಿಸಿ ದೌರ್ಜನ್ಯಕೋರರ ಪರ ವಕಾಲತ್ತು ವಹಿಸಿ ಸುಳ್ಳು ಪ್ರಕರಣ ದಾಖಲಿಸಿ ದೌರ್ಜನ್ಯ ಎಸಗುತ್ತಿರುವ ಬೆಳ್ಳೂರು ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕ ಲೋಕೇಶ್, ನಾಗರಾಜ್ ಕರ್ತವ್ಯ ಲೋಪ ಎಸಗುತ್ತೀದ್ದಾರೆ. ಆದ್ದರಿಂದ ಈ ಕೊಡಲೇ ಈ ಮೂವರನ್ನು ಅಮಾನತುಗೊಳಿಸ ಬೇಕೆಂದು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಒತ್ತಾಯಿಸಿದ್ದರು. ಬೆಳ್ಳೂರು ಪೊಲೀಸ್ ಠಾಣೆಯ ಮುಂದೆ…