Author: admin

ಕೊರಟಗೆರೆ : ತಾಲ್ಲೂಕಿನಲ್ಲಿ ಈಗಾಗಲೇ ಅನೇಕ ಭಾಗಗಳಲ್ಲಿ ಭೀಮ್ ಸಂಸ್ಥೆಯ ಅಡಿಯಲ್ಲಿ ಸಾವಿರಾರು ನಿರುದ್ಯೋಗಿ ಯುವಕ ಯುವತಿಯರು ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ . ಇದೀಗ ಭೀಮ್ ಸಂಸ್ಥೆ ಮತ್ತೊಂದು ಹೆಜ್ಜೆ ಇಟ್ಟಿದ್ದು, ಕರ್ನಾಟಕದ ಗಡಿಭಾಗದ  ಬ್ಯಾಲ್ಯ ಗ್ರಾಮ ಮತ್ತು ಹಕ್ಕಿಪಿಕ್ಕಿ ಕಾಲೋನಿಯಲ್ಲಿ  ನೂತನವಾಗಿ ಉದ್ಘಾಟನೆಗೊಂಡು  ಪ್ರಾರಂಭವಾಗಿರುವ  ಭೀಮ್ ರೂರಲ್  ಡೆವಲಪ್ ಮೆಂಟ್ ಆರ್ಗನೈಸೇಷನ್ ಈ ಸಂಸ್ಥೆ ಅಡಿಯಲ್ಲಿ  ಕಂಪ್ಯೂಟರ್ ಬೇಸಿಕ್ , ಡಾಟಾ ಎಂಟ್ರಿ, ಟ್ಯಾಲಿ ವಿಥ್ ಜಿಎಸ್ ಟಿ ,ಫೋಟೋಶಾಪ್ ಮತ್ತು ಎಡಿಟಿಂಗ್ ಡಿಟಿಪಿ ಟೈಲರಿ, ಎಂಬ್ರಾಯಿಡಿಂಗ್ ಇನ್ನು ಮುಂತಾದ ಅನೇಕ ತರಬೇತಿಗಳನ್ನು  ಗ್ರಾಮೀಣ ಭಾಗದ ಬಡ ನಿರುದ್ಯೋಗಿ ಯುವಕ ಯುವತಿಯರಿಗೆ  ಉಚಿತವಾಗಿ ನೀಡಲು ವ್ಯವಸ್ಥೆ ಮಾಡಲಾಗಿದೆ. ಈ ವಿಶೇಷ ಸಂದರ್ಭವನ್ನುದ್ದೇಶಿಸಿ ಮಾತನಾಡಿದ  ಮೈಂಡ್ಟ್ರೀ ಫೌಂಡೇಷನ್ ಗ್ಲೋಬಲ್ ಹೆಡ್  ಪಣೀಶ್ ರಾವ್,  ಅನೇಕ ಗ್ರಾಮೀಣ ಭಾಗದಲ್ಲಿ  ಹೆಣ್ಣು ಮಕ್ಕಳು ಹಾಗೂ ಯುವಕರು  ಶಿಕ್ಷಣವನ್ನು ಮುಗಿಸಿ ಮನೆಯಲ್ಲಿಯೇ ಇದ್ದಾರೆ ಇನ್ನೂ ಕೆಲ ಹೆಣ್ಣುಮಕ್ಕಳು ಮದುವೆಯಾದರೂ ಕೂಡ ಗಂಡನ ಮನೆಯಲ್ಲಿ ಸುಮ್ಮನೆ ಕೂರುವ…

Read More

ತುಮಕೂರು: ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕ ದಂಪತಿ ಸಾವಿಗೀಡಾದ ಘಟನೆ ಮಲ್ಲಸಂದ್ರ ಬಳಿ ಬುಧವಾರ ಬೆಳಗ್ಗೆ ನಡೆದಿದೆ. ಗುಬ್ಬಿ ತಾಲೂಕಿನ ದಂಪತಿ 52 ವರ್ಷ ವಯಸ್ಸಿನ ಈಶ್ವರಪ್ಪ, 48 ವರ್ಷ ವಯಸ್ಸಿನ ಕಲ್ಪನಾ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತ ದಂಪತಿ ಇಬ್ಬರೂ ಶಿಕ್ಷಕರಾಗಿದ್ದರು. ಗುಬ್ಬಿಯ ಖಾಸಗಿ ಶಾಲೆಯಲ್ಲಿ ಈಶ್ವರಪ್ಪ, ಗುಬ್ಬಿ ಸರ್ಕಾರಿ ಶಾಲೆಯಲ್ಲಿ ಕಲ್ಪನಾ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಬುಧವಾರ ತುಮಕೂರು ಕಡೆಯಿಂದ ಗುಬ್ಬಿ ಕಡೆಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡ ಕಾರು, ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬಂದ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಘಟನೆ ಸಂಬಂಧ ಮಾಹಿತಿ ಸಂಗ್ರಹಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ಕೊರಟಗೆರೆ: ಎಣ್ಣೆಯ ಏಟಿಗೆ ಯುವಕನೋರ್ವ ಮೃತಪಟ್ಟ ಘಟನೆ ತಾಲ್ಲೂಕಿನ ಕೋಳಾಲ ಹೋಬಳಿಯ ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ನಡು ದಾರಿಯಲ್ಲಿ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಎಲೆರಾಂಪುರ ಗ್ರಾಮದ ಯೋಗೀಶ್ ಬಿನ್ ಶಿವರಾಜ್ (24) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದ್ದು, ಮೇ ೯ರಂದು ಸಂಜೆ ಕೆಲಸದಿಂದ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಕಂಠಮಟ್ಟ ಮದ್ಯ ಸೇವಿಸಿದ್ದ ಈತ, ಮದ್ಯ ಓವರ್ ಡೋಸ್ ಆದ ಕಾರಣ ನಿಶಕ್ತನಾಗಿ ದಾರಿಯಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಘಟನೆ ಸಂಭವಿಸಿದ ಸ್ಥಳಕ್ಕೆ ಕೋಳಾಲ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಮಹಾಲಕ್ಷ್ಮಮ್ಮ ಮತ್ತು ಸಿಬ್ಬಂದಿ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 2,897 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕೋವಿಡ್ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ನಿನ್ನೆಗೆ ಹೋಲಿಸಿದರೆ ಕೊಂಚ ಹೆಚ್ಚಳವಾಗಿದೆ. 24 ಗಂಟೆಯಲ್ಲಿ 54 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,157 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 19,494 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,986 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,66,935 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ತಿಪಟೂರು: ತಾಲೂಕು ಕಬ್ನಳ್ಳಿ ಹೋಬಳಿ ಕಟ್ಟಡ ಕಾರ್ಮಿಕ ಸಂಘ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ವತಿಯಿಂದ ಕಾರ್ಮಿಕ ದಿನಾಚರಣೆಯನ್ನು ಅರಳಗುಪ್ಪೆ ಗ್ರಾಮದಲ್ಲಿ ನಡೆಸಲಾಯಿ ತು. ಕಾಂಗ್ರೆಸ್ ನ ಮಾಜಿ ಶಾಸಕ ಕೆ.ಷಡಕ್ಷರಿ,  ಕಾರ್ಯಕ್ರಮ ಉದ್ಘಾಟಿಸಿದರು.  ಬಳಿಕ ಮಾತನಾಡಿದ ಅವರು,  ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅರಳಗುಪ್ಪೆ ಗ್ರಾಮಕ್ಕೆ ನಾನು ಶಾಸಕನಾಗಿದ್ದ ಒಂದು ಕೋಟಿ ರೂ.,  ನವಗ್ರಾಮ ಯೋಜನೆಯಡಿ ಸಿಮೆಂಟ್ ರಸ್ತೆ ಹಾಗೂ ಅರಳುಕುಪ್ಪೆ ಗ್ರಾಮದ ಕೆರೆಗೆ ನೀರು ತುಂಬಿಸುವ ಯೋಜನೆ ಕೂಲಿ ಕಾರ್ಮಿಕರು ಗಳಿಗೆ ಇಎಸ್ ಐ ಆಸ್ಪತ್ರೆ ತಿಪ್ಟೂರು ನಗರಕ್ಕೆ ತಂದು ಕೊಟ್ಟಿದ್ದೇನೆ ಎಂದರು. ನಗರದಲ್ಲಿ ತಿಪಟೂರಿನಲ್ಲಿ ಇಂದಿರಾ ಕ್ಯಾಂಟೀನ್ ತಂದಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಬಡವರಿಗೆ 10 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುವುದು.  ನಮ್ಮ ಅಧಿಕಾರದಲ್ಲಿ ಹಲವಾರು ಯೋಜನೆಗಳನ್ನು ತಿಪಟೂರು ತಾಲೂಕಿಗೆ ತಂದಿರುತ್ತೇನೆ ಅರಳಗುಪ್ಪೆ ಲಿ ಸೇರಿದ ಎಲ್ಲಾ ಕಾರ್ಮಿಕರಿಗೂ ಕಿಟ್ಟು ವಿತರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸಿದ್ದಯ್ಯ,  ಸಂಘಟನಾ ಸಂಚಾಲಕ ಹರೀಶ್,  ತಾಲೂಕು ಪಂಚಾಯಿತಿ ಅಧ್ಯಕ್ಷ…

Read More

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲೂ ಪಿಎಸ್‌ ಐ ನೇಮಕಾತಿ ಪರೀಕ್ಷೆ ಹಗರಣ ನಡೆದಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಯುವ ಕಾಂಗ್ರೆಸ್ ಮುಖಂಡನನ್ನು ಬಂಧಿಸಲಾಗಿದೆ. ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶರತ್ ಅವರನ್ನು ಬಂಧಿಸಲಾಗಿದೆ. ಪಿಎಸ್‌ ಐ ಅಭ್ಯರ್ಥಿ ಪರ ಡೀಲ್ ಕುದುರಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಶರತ್ ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಸರಗೂರು:  ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ  ಕೇಂದ್ರ ಸರ್ಕಾರ ನೀಡುವ ವಿಶಿಷ್ಟ ಗುರುತಿನ ಚೀಟಿ UDID Card ಆಸೆಸ್ ಮೆಂಟ್ ಕ್ಯಾಂಪ್ ಮೈಸೂರು  KR ಆಸ್ಪತ್ರೆ ವೈದ್ಯಾಧಿಕಾರಿ ರವರು ತಪಾಸಣೆ ಮಾಡಿ, ಒಟ್ಟು 87 ವಿಕಲಚೇತನರಲ್ಲಿ 75 ಜನ ವಿಕಲಚೇತನರಿಗೆ UDID Card ಆಸೆಸ್ ಮೆಂಟ್ ಮಾಡಿದರು. ಈ ಸಂದರ್ಭದಲ್ಲಿ ಸರಗೂರು ತಾಲೂಕು ಸಂಯೋಜಕರಾದ S.H.ದೇವರಾಜ್  ಎಲ್ಲಾ ರೀತಿಯ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಿದರು ತಮ್ಮ ಸ್ವಂತ ಖರ್ಚಿನಿಂದ ಬಂದ  ವೈದ್ಯಾಧಿಕಾರಿಗಳಿಗೆ ಚಹಾ ಹಾಗೂ ಉಪಹಾರ ವ್ಯವಸ್ಥೆ ಮಾಡಿದರು. ಇದೇ ವೇಳೆ ವಿಕಲಚೇತನರ ಸಮಸ್ಯೆಯನ್ನು ಆಲಿಸಿ  ಪರಿಹಾರ ಸೂಚಿಸಿದರು. ಈ ಸಂದರ್ಭದಲ್ಲಿ ಎಲ್ಲಾ ಗ್ರಾಮ ಪಂಚಾಯಿತಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹಾಜರಿದ್ದರು. ಸರಗೂರು ತಾಲೂಕು ಸಂಯೋಜಕರಾದ S.H. ದೇವರಾಜ್,  ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಬಸವರಾಜು, ಸ್ವಮೇಶ್, ಸಂತೋಷ,  ಮೋಹನ್ ಕುಮಾರ, ಕೆಂಡಗಣ, ರಂಜಿತ, ಮಹಾದೇವಮೂರ್ತಿ ಹಾಗೂ ಮೈಸೂರಿನ ವೈದ್ಯಾಧಿಕಾರಿ ಸರಗೂರು ಆಸ್ಪತ್ರೆ ಸಿಬ್ಬಂದಿ  ಹಾಜರಿದ್ದರು. ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಗುಬ್ಬಿ:  ತುಮಕೂರು ಜಿಲ್ಲೆಯ ಪೆದ್ದನಹಳ್ಳಿಯಲ್ಲಿ ಎಸ್ ಸಿ ಹಾಗೂ ಎಸ್ ಟಿ ಯುವಕರ ಜೋಡಿ ಕೊಲೆಯನ್ನು ಖಂಡಿಸಿ, ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯಿಸಿ ಪಾವಗಡ ಪಟ್ಟಣದ ತಹಸೀಲ್ದಾರ್ ಕಚೇರಿ ಮುಂದೆ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯನ್ನುದ್ದೇಶಿಸಿ ದಲಿತ ಮುಖಂಡ ಡಿ.ಜೆ.ಎಸ್. ನಾರಾಯಣಪ್ಪ  ಮಾತನಾಡಿ,  ಕೊಲೆಗಡುಕರನ್ನು ಕೂಡಲೇ ಸರ್ಕಾರ ಪೊಲೀಸ್ ಇಲಾಖೆ ಬಂಧಿಸಬೇಕು. ತನಿಖೆಯನ್ನು ಸಿಐಡಿಗೆ ನೀಡಬೇಕು ಹಾಗೂ ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ 25 ಲಕ್ಷ ರೂಪಾಯಿಗಳನ್ನು ಪರಿಹಾರ ನೀಡಿ. ಕುಟುಂಬದ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಮತ್ತು ಮಕ್ಕಳ ಉನ್ನತ ಶಿಕ್ಷಣ ನೀಡಲು ಸರ್ಕಾರ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು. ದಲಿತ ಮುಖಂಡ ಕಡಲಕೆರೆ ಹನುಮಂತರಾಯಪ್ಪ ಮಾತನಾಡಿ, ಮೃತರ ಕುಟುಂಬಕ್ಕೆ 5 ಎಕರೆ ಜಮೀನು ನೀಡಬೇಕು. ಗಂಗಾ ಕಲ್ಯಾಣ ಯೋಜನೆಯಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಬೇಕು. ಕುಟುಂಬಕ್ಕೆ ವಸತಿ ಯೋಜನೆಯಲ್ಲಿ ಮನೆ…

Read More

ತುಮಕೂರು: ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಕರಿಶೆಟ್ಟಿಹಳ್ಳಿಯ ರಸ್ತೆಬದಿ ಮಂಗಳವಾರ ಬೆಳ್ಳಂಬೆಳಗ್ಗೆ ಪತ್ತೆಯಾದ ವ್ಯಕ್ತಿಯ ಮೃತದೇಹ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲವು ವಿಚಾರಗಳು ಬಯಲಾಗಿದೆ. ಐಯ್ಯಣ್ಣ ಎಂಬುವವರು ತನ್ನ ಪುತ್ರಿ ಸುಮಿತ್ರಾಳನ್ನು 6 ವರ್ಷದ ಹಿಂದೆ ಮೂಡ್ಲಯ್ಯಗೆ ಕೊಟ್ಟು ಮದುವೆ ಮಾಡಿದ್ದರು. ಪತ್ನಿ ಇದ್ದರೂ ಮೂಡ್ಲಯ್ಯಗೆ ಪರಸ್ತ್ರೀಯ ಚಟ ಹೊಂದಿದ್ದನು. ಈ ವಿಚಾರವಾಗಿ ಮೂಡ್ಲಯ್ಯಗೆ ಬುದ್ಧಿಮಾತು ಹೇಳಿದ್ದ ಮಾವ ಐಯ್ಯಣ್ಣ, ಮಗಳ ಜೀವನ ಬೀದಿ ಪಾಲು ಮಾಡಬೇಡ. ಪರಸ್ತ್ರೀ ಜತೆಗಿನ ಸಂಬಂಧವನ್ನು ನಿಲ್ಲಿಸುವಂತೆ ಬುದ್ದಿ ಹೇಳಿದ್ದಾರೆ. ಆದರೆ ಮೂಡ್ಲಯ್ಯ ಅವರ ಮಾತಿಗೆ ಬೆಲೆ ಕೊಡದೆ ತನ್ನ ಕೆಟ್ಟ ಚಾಳಿ ಮುಂದುವರಿಸಿದ್ದ ಇದರಿಂದ ಬೆಸತ್ತ ಅಪ್ಪ-ಮಗ ಇಬ್ಬರೂ ಮೂಡ್ಲಯ್ಯನ ಮುಗಿಸಲು ಸಂಚು ರೂಪಿಸಿದ್ದು, ಸೋಮವಾರ ತಡರಾತ್ರಿ ಬೈಕ್ ನಲ್ಲಿ ಬರುತ್ತಿದ್ದ ಮೂಡ್ಲಯ್ಯನನ್ನು ಕರಿಶೆಟ್ಟಿಹಳ್ಳಿ ಬಳಿ ಅಡ್ಡಗಟ್ಟಿದ ಮಾವ-ಬಾಮೈದುನ ಇಬ್ಬರೂ ಆತನ ಮರ್ಮಾಂಗಕ್ಕೆ ಒದ್ದು ಸಾಯಿಸಿದ್ದಾರೆ. ಬಳಿಕ ರಸ್ತೆಬದಿ ನಗ್ನ ಸ್ಥಿತಿಯಲ್ಲಿ ಮೃತದೇಹ ಎಸೆದು, ನಡುರಸ್ತೆಯಲ್ಲಿ ಬೈಕ್ ಬಿಸಾಡಿ ಪರಾರಿಯಾಗಿದ್ದರು. ಮಂಗಳವಾರ ಬೆಳಗ್ಗೆ ಮ್ರತದೇಹ ಮತ್ತು…

Read More

ಉತ್ತರಪ್ರದೇಶ: ಮದುವೆ ಆಮಂತ್ರಣ ಪತ್ರಿಕೆ ಹಂಚಲು ಹೋಗುತ್ತಿದ್ದ ವೇಳೆ 18 ವರ್ಷ ವಯಸ್ಸಿನ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಮಾರಾಟ ಮಾಡಿದ ಆಘಾತಕಾರಿ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಆರೋಪಿಗಳು ತನ್ನನ್ನು ರಾಜಕೀಯ ಪಕ್ಷದ ನಾಯಕರೊಬ್ಬರ ಬಳಿಗೆ ಕರೆದೊಯ್ದರು. ನಂತರ ಮಧ್ಯಪ್ರದೇಶದ ಪಕ್ಕದ ದಾತಿಯಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಬೇರೊಬ್ಬರೊಂದಿಗೆ ಇರುವಂತೆ ಒತ್ತಾಯಿಸಿದರು ಎಂದು ಯುವತಿ  ಹೇಳಿಕೆ ನೀಡಿರುವುದಾಗಿ  ಝಾನ್ಸಿ ಜಿಲ್ಲೆಯ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಎಪ್ರಿಲ್ 21 ರಂದು ನಡೆಯಲಿರುವ ತನ್ನ ಮದುವೆಯ ಕಾರ್ಡ್‌ಗಳನ್ನು ವಿತರಿಸಲು ಹೋದಾಗ ಗ್ರಾಮದ ಮೂವರು ಯುವಕರು ಎಪ್ರಿಲ್ 18 ರಂದು ತನ್ನನ್ನು ಅಪಹರಿಸಿದ್ದಾರೆ ಎಂದು ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More