Subscribe to Updates
Get the latest creative news from FooBar about art, design and business.
- ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
- ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
- ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
- ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
- ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
- ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
- ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್ ಕಾರಣ ಆಗ್ತಾ ಇದೆಯೇ?
- ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
Author: admin
ತುಮಕೂರು: ವಿಶೇಷಚೇತನರಿಗೆ ಸರಕಾರ ನೀಡುವ ತ್ರಿಚಕ್ರವಾಹನ ಸೌಲಭ್ಯ ಕೇವಲ ತೋರಿಕೆಗೆ ಮಾತ್ರ ಎಂಬಂತಿದ್ದು, ಬೇಡಿಕೆಗೆ ಅನುಗುಣವಾಗಿ ವಾಹನ ವಿತರಣೆ ಆಗುತ್ತಿಲ್ಲ. ಬೇಡಿಕೆಯಲ್ಲಿ ಸುಮಾರು ಶೇ.70ರಷ್ಟು ಫಲಾನುಭವಿಗಳಿಗೆ ತ್ರಿಚಕ್ರವಾಹನ ಭಾಗ್ಯ ಕರುಣಿಸಲಾಗುತ್ತಿಲ್ಲ. ವರ್ಷದಿಂದ ವರ್ಷಕ್ಕೆ ಪೂರೈಕೆಯಾಗುವ ತ್ರಿಚಕ್ರವಾಹನಗಳ ಸಂಖ್ಯೆ ಕೂಡ ಗಣನೀಯವಾಗಿ ಕಡಿಮೆ. ಹೀಗಾಗಿ ಅರ್ಹ ಫಲಾನುಭವಿಗಳು ನಿರಾಸೆ ಅನುಭವಿಸಿದಂತಾಗುತ್ತಿದೆ. ಯಾವಾಗ ಶುರು? ವಿಶೇಷಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯಿಂದ ಈ ಸೌಲಭ್ಯ ನೀಡಲಾಗುತ್ತಿದೆ. 2014-15ನೇ ಸಾಲಿನಿಂದ ತ್ರಿಚಕ್ರವಾಹನ ವಿತರಣೆ ಮಾಡಲಾಗುತ್ತಿದೆ. ಎಷ್ಟೆಷ್ಟು ವಿತರಣೆ ? 2017-18ರಲ್ಲಿ 88, 2018-19ರಲ್ಲಿ 128 ತ್ರಿಚಕ್ರವಾಹನಗಳನ್ನು ಜಿಲ್ಲೆಯಲ್ಲಿ ವಿತರಣೆ ಮಾಡಲಾಗಿತ್ತು. 2019-20ರಲ್ಲಿ ಒಂದೇ ಒಂದು ತ್ರಿಚಕ್ರವಾಹನವನ್ನೂ ನೀಡಿರಲಿಲ್ಲ. 2020-21ನೇ ಸಾಲಿನಲ್ಲಿ ನೀಡಿದ್ದು 18 ತ್ರಿಚಕ್ರವಾಹನಗಳನ್ನು ಮಾತ್ರ. 2021-22ನೇ ಸಾಲಿನಲ್ಲಿ75 ತ್ರಿಚಕ್ರವಾಹನಗಳನ್ನು ನೀಡಲಾಗಿದೆ. ಪ್ರತಿವರ್ಷ 500-600 ಅರ್ಜಿಗಳು ಸಲ್ಲಿಕೆಯಾಗುತ್ತಿದ್ದು, ಎಲ್ಲಾ ದಾಖಲೆಗಳು ಸರಿಯಿರುವ 180-200 ಅರ್ಜಿಗಳು ಸಿಂಧುವಾಗುತ್ತವೆ. ಆ ಫಲಾನುಭವಿಗಳಿಗೂ ತ್ರಿಚಕ್ರವಾಹನ ಸೌಲಭ್ಯ ಒದಗಿಸಿಲ್ಲ. ಫಲಾನುಭವಿಗಳು ಯಾರು? ಶೇ.75ಕ್ಕಿಂತ ಹೆಚ್ಚು ಅಂಗವೈಕಲ್ಯತೆಯನ್ನು ಹೊಂದಿರುವವರು. ಕಾಲಿನ ಸಮಸ್ಯೆ…
ಶಿವಮೊಗ್ಗ: ಜಿಲ್ಲೆಯಲ್ಲಿ ನಿಷೇಧಾಜ್ಞೆ ನಡುವೆಯೂ ಬಜರಂಗದಳ ಕಾರ್ಯಕರ್ತನ ಮೇಲೆ ಕಾರ್ಯಕರ್ತನ ಮೇಲೆ ಚಾಕುವಿನಿಂದ ಇರಿಯಲು ಯತ್ನಿಸಿದ ಘಟನೆ ಭದ್ರಾವತಿ ನಗರದ ನೆಹರೂ ಬಡವಾಣೆಯಲ್ಲಿ ಘಟನೆ ನಡೆದಿದೆ. ಕಾರ್ಯಕರ್ತನ ಸುನೀಲ್ ಮೇಲೆ ಹಲ್ಲೆ ಮಾಡಿ ಚಾಕುವಿನಿಂದ ಇರಿಯಲು ಯತ್ನಿಸಿದ್ದಾರೆ. ಕೂದಲೆಳೆಯ ಅಂತರದಲ್ಲಿ ಸುನೀಲ್ ಪಾರಾಗಿದ್ದಾರೆ. ಗಾಯಾಳು ಸುನೀಲ್ ಭದ್ರಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಚ್ಚಿ ಅಲಿಯಾಸ್ ಮುಬಾರಕ್ ಸೇರಿ ಮೂವರಿಂದ ಹಲ್ಲೆ ನಡೆದಿದೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಪ್ರೀತಿಸಿ ಮದುವೆಯಾದವಳ ಟಾರ್ಚರ್ ತಡೆಯೋಕಾಗದೇ ಫಿಲ್ಮಿ ಸ್ಟೈಲ್ ಪ್ಲ್ಯಾನ್ ಮಾಡಿ ಯಾರಿಗೂ ಗೊತ್ತಾಗದಂತೆ ಆಕೆಯ ಕೊಲೆ ಮಾಡಿ ಬಳಿಕ ತಾನೇ ಪೊಲೀಸ್ ಠಾಣೆಗೆ ದೂರು ನೀಡಿದ ಪತಿಯ ಕೃತ್ಯ ತನಿಖೆಯಿಂದ ಬಯಲಾಗಿದೆ. ಹೌದು, ಮೊದಲೇ ಪ್ಲ್ಯಾನ್ ಹಾಕಿ, ಪತ್ನಿಯ ಕೊಲೆ ಮಾಡಿ ಬಳಿಕ ಮಡಿವಾಳ ಪೊಲೀಸರಿಗೆ ದೂರನ್ನೂ ಕೊಟ್ಟಿದ್ದಾನೆ. ಆದರೆ ಅನುಮಾನಗೊಂಡ ಪೊಲೀಸರು ಆತನನ್ನೇ ವಿಚಾರಣೆ ನಡೆಸಿದಾಗ ಖತರ್ನಾಕ್ ಪ್ಲ್ಯಾನ್ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಬೆಂಗಳೂರಿನ ಮಡಿವಾಳದ ಪೃಥ್ವಿರಾಜ್, ಜ್ಯೋತಿಯನ್ನು 8 ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಮದುವೆಯ ಬಳಿಕ ನಿರಂತರವಾಗಿ ಜಗಳವಾಡುತ್ತಿದ್ದರಿಂದ ಪೃಥ್ವಿರಾಜ್ ಟಾರ್ಚರ್ ತಡೆಯಲಾಗದೇ ಪತ್ನಿಯನ್ನು ಕೊಲೆ ಮಾಡಲು ಸ್ಕೆಚ್ ಹಾಕಿದ್ದ. ಮೊದಲೇ ಯೋಜಿಸಿದ ಪ್ಲ್ಯಾನ್ನಂತೆ ಪೃಥ್ವಿರಾಜ್ ತನ್ನ ಹಾಗೂ ಪತ್ನಿಯ ಮೊಬೈಲ್ ಫೋನ್ಗಳನ್ನು ಮನೆಯಲ್ಲಿಯೇ ಇರಿಸಿ ಟ್ರಿಪ್ಗೆ ಕರೆದುಕೊಂಡು ಹೋಗಿದ್ದ. ಆಗಸ್ಟ್ 2 ರಂದು ಹೆಂಡತಿಯನ್ನು ಉಡುಪಿಯ ಮಲ್ಪೆ ಬೀಚ್ಗೆ ಕರೆದುಕೊಂಡು ಹೋಗಿ, ಅಲ್ಲಿ ಸಮುದ್ರದಲ್ಲಿ ಮುಳುಗಿಸಿ ಆಕೆಯ ಕೊಲೆ ಮಾಡುವುದು ಪೃಥ್ವಿರಾಜ್ನ ಪ್ಲ್ಯಾನ್ ಆಗಿತ್ತು.…
ಕೋಲಾರ: ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತಗೊಂಡ ಪರಿಣಾಮ, ದಂಪತಿ ಸಾವನ್ನಪ್ಪಿ, 15ಕ್ಕೂ ಹೆಚ್ಚು ಜನರು ಗಾಯಗೊಂಡಿರುವಂತ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ವಿರುಪಾಕ್ಷಿ ಗೇಟ್ ಬಳಿಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಒಂದು ಪಲ್ಟಿಯಾಗಿದೆ. ಈ ಪರಿಣಾಮ ಬಸ್ಸಿನಲ್ಲಿದ್ದಂತ ದಂಪತಿಗಳಿಬ್ಬರು ಸ್ಥಳದಲ್ಲೇ ದುರ್ಮರಣಹೊಂದಿರೋದಾಗಿ ತಿಳಿದು ಬಂದಿದೆ. ಇನ್ನೂ ಬಸ್ ನಲ್ಲಿದ್ದಂತ 15ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಆಂಧ್ರಪ್ರದೇಶದ ಗುಂಟೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು ಎಂಬುದಾಗಿ ತಿಳಿದು ಬಂದಿದೆ. ಅಪಘಾತಗೊಂಡ ಬಸ್ಸಿನಲ್ಲಿ 30 ಪ್ರಯಾಣಿಕರಿದ್ದರು ಎಂದು ಹೇಳಲಾಗಿದೆ. ಈ ಸಂಬಂಧ ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬಳ್ಳಾರಿ : ಕಾಂಗ್ರೆಸ್ ನಿಂದ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ ಎಂದು ಹೇಳುವ ಮೂಲಕ ಸಚಿವ ಶ್ರೀರಾಮುಲು ಅಚ್ಚರಿ ಮೂಡಿಸಿದ್ದಾರೆ. ಬಳ್ಳಾರಿಯಲ್ಲಿ ನಡೆದ ಕುರುಬ ಸಂಘದ ವಾಣಿಜ್ಯ ಮಳಿಗೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀರಾಮುಲು, ಹಿಂದುಳಿದವರ ಅಭಿವೃದ್ಧಿ ವಿಚಾರಕ್ಕೆ ಬಂದರೆ ನಾನು ಹಾಗೂ ಸಿದ್ದರಾಮಯ್ಯನವರು ಒಂದೇ. ಭಗವಂತ ಆಶೀರ್ವಾದ ಮಾಡಿದರೆ ಕಾಂಗ್ರೆಸ್ ನಿಂದ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಲಿ ಎಂದು ನಾನೂ ಸಹ ಆಸೆ ಪಡುತ್ತೇನೆ ಎಂದು ಹೇಳಿದರು. ಅಲ್ಲದೆ ವೈಯಕ್ತಿಕವಾಗಿ ನನಗೂ ಹಾಗೂ ಸಿದ್ದರಾಮಯ್ಯನವರ ಮಧ್ಯೆ ಏನೂ ಇಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಳಗಾವಿ : ನಗರದ ಚನ್ನಮ್ಮ ವೃತ್ತದಲ್ಲಿರುವ ರಾಣಿ ಚನ್ನಮ್ಮ ಪುತ್ಥಳಿಯ ಕಟ್ಟೆಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ.ತಡರಾತ್ರಿ 11.15ರ ಸುಮಾರಿಗೆ ಈ ಘಟನೆ ನಡೆದಿದೆ. ಕೊಲ್ಲಾಪುರ ವೃತ್ತದ ಕಡೆಯಿಂದ ವೇಗವಾಗಿ ಬಂದ ಲಾರಿ ಪುತ್ಥಳಿಯ ಕಟ್ಟೆಯ ಸುತ್ತಲಿರುವ ಗ್ರಿಲ್ಸ್ ಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗ್ರಿಲ್ಸ್ ಗಳು ನಜ್ಜುಗುಜ್ಜಾಗಿವೆ. ಚನ್ನಮ್ಮ ಪುತ್ಥಳಿಗೆ ಯಾವುದೇ ಹಾನಿ ಸಂಭವಿಸಿಲ್ಲ. ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮುಂಬೈ: ಖ್ಯಾತ ಕೈಗಾರಿಕೋದ್ಯಮಿ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಕುಟುಂಬಕ್ಕೆ ಮತ್ತೊಮ್ಮೆ ಬೆದರಿಕೆ ಬಂದಿದೆ. ಗಿರ್ಗಾಂವ್ ನ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಅಂಬಾನಿ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಸೋಮವಾರ ಬೆಳಗ್ಗೆ 10.30ರ ಸುಮಾರಿಗೆ ವ್ಯಕ್ತಿ ಮೂರ್ನಾಲ್ಕು ಬಾರಿ ಫೋನ್ ಮಾಡಿ ಅಂಬಾನಿ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾನೆ. ಅದರ ನಂತರ, ಮುಂಬೈ ನಗರ ಪೊಲೀಸರು ಮಧ್ಯಪ್ರವೇಶಿಸಿ ದಹಿಸರ್ ಪ್ರದೇಶದಲ್ಲಿ ಶಂಕಿತನನ್ನು ಬಂಧಿಸಿದರು. ಪ್ರಾಥಮಿಕ ತನಿಖೆಯಿಂದ ವ್ಯಕ್ತಿ ಮಾನಸಿಕ ಅಸ್ವಸ್ಥ ಎಂದು ಹೇಳಲಾಗಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಬಾಣಸಂದ್ರದಲ್ಲಿ ಮೊನ್ನೆಯಷ್ಟೇ ಬಸ್ ಡಿಕ್ಕಿಯಾಗಿ ಮೂರು ಎಮ್ಮೆಗಳು ಸಾವನ್ನಪ್ಪಿದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮೊದಲೇ ಇದೀಗ ತುರುವೇಕೆರೆಯಿಂದ ಕೆ.ಬಿ. ಕ್ರಾಸ್ ಗೆ ಹೊರಟಿದ್ದ ತವೇರಾ ಕಾರು ಬಾಣಸಂದ್ರ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯ ಬಲಭಾಗದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಟವೇರಾ ಕಾರು ಗುದ್ದಿದ ರಬಸಕ್ಕೆ ದ್ವಿಚಕ್ರವಾಹನ ಸಂಪೂರ್ಣವಾಗಿ ನುಗ್ಗಿಜ್ಜಾಗಿದೆ ತವೇರಾ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಜಾಗದಲ್ಲಿ ರಸ್ತೆ ಹುಬ್ಬು ಇಲ್ಲದ ಕಾರಣ ವೇಗವಾಗಿ ಬಂದ ವಾಹನಗಳು ಅಪಘಾತಗಳು ನಡೆಯುತ್ತಿವೆ. ಇಂತಹ ದುರ್ಘಟನೆಗಳು ಮತ್ತೆ ಮತ್ತೆ ನಡೆಯುತ್ತಲೇ ಇರುತ್ತವೆ ಎಂದು ಸಾರ್ವಜನಿಕರು ಪಿ ಡಬ್ಲ್ಯೂ ಡಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತ ಇಲ್ಲಿನ ನಿವಾಸಿಗಳು, ಅಪಘಾತಗಳನ್ನು ಕಂಡು ಸಾಕಾಗಿ ಹೋಗಿದೆ. ನಿಮ್ಮ ಸುದ್ದಿ ವಾಹಿನಿಯ ಮೂಲಕವಾದರೂ ಸಂಬಂಧಪಟ್ಟ ಪೊಲೀಸ್ ಹಾಗೂ ಲೋಕೋಪಯೋಗಿ ಇಲಾಖೆಯವರಿಗೆ ಸಮಸ್ಯೆ ಮನವರಿಕೆ ಮಾಡಿ ಎಂದು ಸಾರ್ವಜನಿಕರು ನಮ್ಮತುಮಕೂರು ಪ್ರತಿನಿಧಿಯ…
ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಾಗವಿ (ಸಿದ್ದರಬೆಟ್ಟ)ಗ್ರಾಮ ಪಂಚಾಯಿತಿ ಕಚೇರಿಯ ಆವರಣದಲ್ಲಿರುವ ಧ್ವಜಸ್ಕಂಭದಲ್ಲಿ ದಿನಾಂಕ 13/08/2022 ರ ರಾತ್ರಿ 2 ಗಂಟೆಯವರೆಗೂ ರಾಷ್ಟ್ರಧ್ವಜವನ್ನು ಕೆಳಗಿಳಿಸದೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಘಟನೆ ನಡೆದಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಸದಸ್ಯ ಬಸವರಾಜು ಮಲ್ಲೇಕಾವು ಮಾತನಾಡಿ, ಸಿದ್ದರಬೆಟ್ಟ ಗ್ರಾಮ ಪಂಚಾಯಿತಿಯ ಕಚೇರಿ ಆವರಣದಲ್ಲಿರುವ ಧ್ವಜಸ್ತಂಭದಲ್ಲಿ ದಿನಾಂಕ 13/08/2022 ರ ಬೆಳಗ್ಗೆ ಹಾರಿಸಿದ ತ್ರಿವರ್ಣ ಧ್ವಜವನ್ನು ರಾತ್ರಿ ಇಡೀ ಕೆಳಗಿಳಿಸದೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿ ಕಾನೂನು ಉಲ್ಲಂಘನೆಯನ್ನು ಮಾಡಿರುವ ಘಟನೆ ನಡೆದಿದೆ. ರಾಷ್ಟ್ರಧ್ವಜ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ವಿಜಯ ಕುಮಾರಿ ಹಾಗೂ ಕಾರ್ಯದರ್ಶಿಗಳಾದ ನರಸಿಂಹಮೂರ್ತಿ ಮತ್ತು ಪಂಚಾಯಿತಿ ಅಧ್ಯಕ್ಷೆ ವಿನೋದ ನವೀನ್ ಕುಮಾರ್ ರವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ತಿಳಿಸಿದರು. ರಾಷ್ಟ್ರಧ್ವಜದ ವಿಚಾರವಾಗಿ ಕೇಂದ್ರ ಸರ್ಕಾರದ ಆದೇಶವನ್ನ ಗಾಳಿಗೆ ತೂರಿದ ಘಟನೆಯು ನಮ್ಮ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವಾಗಿ ಸುದ್ದಿ ಹೊರಬಂದಿತ್ತು…
ಸರಗೂರು ತಾಲ್ಲೂಕಿನ ಪಟ್ಟಣದ ಸ್ವಾಮಿ ವಿವೇಕಾನಂದ ಆಸ್ಪತ್ರೆಯಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಅಂಬೇಡ್ಕರ್ ರವರ ಭಾವಚಿತ್ರ ವನ್ನು ಇಡದೆ ಆಚರಣೆ ಮಾಡಿರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದವು. ಸರಗೂರು ತಾಲೂಕಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅಂಗ ಸಂಸ್ಥೆಯಾದ ಸ್ವಾಮಿ ವಿವೇಕಾನಂದ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋ ಹಾಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಂಬೇಡ್ಕರ್ ಫೋಟೋ ಬಳಸದಿರುವ ಬಗ್ಗೆ ವಿವೇಕಾನಂದ ಆಸ್ಪತ್ರೆಯ ಅಧಿಕಾರಿಗಳು ವಿಚಾರಿಸಿದಾಗ ಸ್ವಾತಂತ್ರ್ಯ ದಿನದಂದು ನಾವು ಅಂಬೇಡ್ಕರ್ ಪೋಟೋ ಇಡುವುದಿಲ್ಲ. ಜನವರಿ 26ರಂದು ಇಡುತ್ತೀವಿ ಎಂದರಲ್ಲದೇ ನಿಮ್ಮ ಹತ್ತಿರ ಸರ್ಕಾರದ ಸುತ್ತೋಲೆ ಇದ್ದರೆ ಕೊಡಿ ಎಂದು ಉಡಾಫೆಯ ವರ್ತನೆ ತೋರಿದರು ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ವಾತಂತ್ರ್ಯೋತ್ಸವದಲ್ಲಿ ಅಂಬೇಡ್ಕರ್ ಭಾವ ಚಿತ್ರ ಬಳಸದೇ ನಿರ್ಲಕ್ಷ್ಯತನದಿಂದ ಮಾತನಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂವಿಧಾನ ಸಂರಕ್ಷಣಾ ಸಮಿತಿ ಒತ್ತಾಯಿಸಿದೆ. ಈ ವೇಳೆ ಎಸ್ ಎಲ್ ರಾಜಣ್ಣ ಶಿವಣ್ಣ ಕುಮಾರ್ ಗೊವಿಂದರಾಜು…