Author: admin

ಬೆಂಗಳೂರು: ಇದೀಗ 9ನೇ ತರಗತಿ ಸಮಾಜ ವಿಜ್ಞಾನ ಪುಸ್ತಕದಲ್ಲಿ ಬಸವಣ್ಣನವರ ಕುರಿತು ಪಾಠದಲ್ಲಿ ಕೆಲವು ಬದಲಾವಣೆ ಮಾಡಿರುವುದಕ್ಕೆ ಲಿಂಗಾಯಿತ ಸಮುದಾಯದ ಮಠಾಧೀಶರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 9ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಬಸವಣ್ಣನವರು ಉಪನಯನದ ನಂತರ ಕೂಡಲಸಂಗಮಕ್ಕೆ ಹೋದರು ಎಂದು ಬರೆಯಲಾಗಿದೆ. ಆದರೆ ತನ್ನ ಸಹೋದರಿ ಅಕ್ಕನಾಗಾಯಿಗೆ ಇಲ್ಲದ ಉಪನಯನ ತನಗ್ಯಾಕೆ ಎಂದು ಧಿಕ್ಕರಿಸಿ ಬಸವಣ್ಣನವರು ಕೂಡಲ ಸಂಗಮಕ್ಕೆ ಹೋದರು ಎಂಬುದು ಇತಿಹಾಸ. ಶೈವ ಗುರುಗಳ ಸಾನ್ನಿಧ್ಯದಲ್ಲಿ ಲಿಂಗದೀಕ್ಷೆ ಪಡೆದರು ಎಂದು ಬರೆದಿರುವುದು ತಪ್ಪು. ಶೈವ ಗುರುಗಳು ಗುಡಿ ಸ್ಥಾವರ ಲಿಂಗಾರಾಧಕರು ಅವರು ಹೇಗೆ ಇಷ್ಟಲಿಂಗ ದೀಕ್ಷೆ ಮಾಡಬಲ್ಲರು? ಇಷ್ಟಲಿಂಗ ಬಸವಣ್ಣನವರ ಪರಿಕಲ್ಪನೆಯಲ್ಲಿ ಮೂಡಿಬಂದಿರುವುದು.. ಹೀಗೆ ಬಸವಣ್ಣನವರ ಬಗ್ಗೆ ಹಲವು ತಪ್ಪು ವಿಚಾರಗಳನ್ನು ಪಠ್ಯದಲ್ಲಿ ಸೇರಿಸಿರುವುದು ಖಂಡನೀಯ ಎಂದು ಮಠಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಠ್ಯ ಪುಸ್ತಕದಲ್ಲಿನ ಈ ಅನೈತಿಹಾಸಿಕ ತಪ್ಪುಗಳನ್ನು ಸರಿಪಡಿಸಿ ಇಲ್ಲವಾದರೆ ಲಿಂಗಾಯತ ಸಮುದಾಯದ ಮಠಾಧೀಶರು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಪಾವಗಡ: ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಹೊರಗುತ್ತಿಗೆ ಕರವಸೂಲಿ ನೌಕರ ಜಿ.ಮಂಜುನಾಥ್ ಅವರನ್ನು ಅಮಾನತುಗೊಳಿಸಬೇಕು ಎಂದು ತಾಲೂಕಿನ ವೈ .ಎನ್. ಹೊಸಕೋಟೆ ಹೋಬಳಿ ಪೋತಗಾನಹಳ್ಳಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷರಾದ ಮಾಧವ ರಾಜ್ ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,   ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಹೊರಗುತ್ತಿಗೆ ಕರವಸೂಲಿ ನೌಕರ ಜಿ.ಮಂಜುನಾಥ್ ರವರು ಈ ಹಿಂದೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಅವ್ಯವಹಾರದಲ್ಲಿ ಭಾಗಿಯಾಗಿ ತಮ್ಮ ಸ್ವಂತ ಖಾತೆಗೆ ಹಣ ಹಾಕಿಕೊಂಡು  ಲೋಕಾಯುಕ್ತ ತನಿಖೆ ವೇಳೆ ಸಿಕ್ಕಿಬಿದ್ದಿದ್ದರು.  ಈ ಪ್ರಕರಣ ನ್ಯಾಯಾಲಯದಲ್ಲಿ 2015ರಲ್ಲಿ ಕೇಸ್ ದಾಖಲಾಗಿದ್ದು , ಕೇಸ್ ದಾಖಲಾದ ನಂತರ ದಿನಾಂಕ 7:10 2015ರಂದು ಅವರನ್ನು ಗ್ರಾಮ ಪಂಚಾಯಿತಿಯಿಂದ ಬಿಡುಗಡೆಗೊಳಿಸಿದ್ದರು. ಆದರೆ ಆನಂತರ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಮಂಜುನಾಥ್ ಅವರನ್ನು ಕೊಡಮಡಗು ಗ್ರಾಮ ಪಂಚಾಯಿತಿಯ ಕರವಸೂಲಿಗಾರ ರಾಗಿ ನೇಮಿಸಿದ್ದರು ಎಂದರು. 2021ರಲ್ಲಿ ಮತ್ತೆ ರಾಜಕೀಯ ಪ್ರಭಾವ ಬೆಳೆಸಿ, ಪೋತಗಾನಹಳ್ಳಿ ಹಳ್ಳಿ ಗ್ರಾಮ ಪಂಚಾಯಿತಿಗೆ ಅವರು ಮರು ಆದೇಶದೊಂದಿಗೆ ವಾಪಸ್ ಆಗಿದ್ದು,  ಲೋಕಾಯುಕ್ತ ನ್ಯಾಯಾಲಯದಲ್ಲಿ…

Read More

ಮೈಸೂರು:  ಸಿದ್ದರಾಮಯ್ಯ ಅವರಿಗೆ ಆರೆಸ್ಸೆಸ್ ಭಯ ಕಾಡುತ್ತಿದೆ. ಹೀಗಾಗಿ ಪದೇ ಪದೇ ಅನಗತ್ಯ ಆರೋಪಗಳನ್ನು ಮಾಡುತ್ತಿರುತ್ತಾರೆ  ಎಂದು ಸಂಸದ ಡಿ.ವಿ. ಸದಾನಂದಗೌಡ ಟೀಕಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಕಾಂಗ್ರೆಸ್ ಅಧಃಪತನದಲ್ಲಿದೆ. ಆದ್ದರಿಂದ ಸಿದ್ದರಾಮಯ್ಯ ಕೆಲಸಕ್ಕೆ ಬಾರದ ಟ್ವೀಟ್‌ ಗಳನ್ನು ಮಾಡಿಕೊಂಡು ಕಾಲ ಕಳೆಯುತ್ತಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್‍ ‌ನ್ನು ದೊಡ್ಡ ದನಿಯಲ್ಲಿ ಸಮರ್ಥನೆ ಮಾಡಿಕೊಳ್ಳುತ್ತಿದ್ದ, ವಕ್ತಾರರಾಗಿದ್ದ ಬ್ರಿಜೇಶ್ ಕಾಳಪ್ಪ ಆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇದನ್ನು ನೋಡಿದರೆ ಕಾಂಗ್ರೆಸ್ ಸ್ಥಿತಿ ಏನಾಗಿದೆ ಎನ್ನುವುದು ಗೊತ್ತಾಗುತ್ತದೆ ಎಂದು ಅವರು ತಿರುಗೇಟು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿರುವ ಸಮಾಜಕಲ್ಯಾಣ ಇಲಾಖೆಯ ಬಾಲಕಿಯರ ಪ್ರೀ ಮೆಟ್ರಿಕ್ ವಸತಿ ನಿಲಯದಲ್ಲಿ, ಕಳೆದ  ನಾಲ್ಕೂವರೆ ವರ್ಷಗಳಿಂದ ,ಅಡುಗೆ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ  ಸಾಕಲಕ್ಷ್ಮಮ್ಮ ಅವರನ್ನು ಸಮಾಜ ಕಲ್ಯಾಣ ಇಲಾಖೆಯು,  ಅಡುಗೆ ಸಹಾಯಕಿ ,ಹುದ್ದೆಯನ್ನು ಪದೋನ್ನತಿಗೊಳಿಸಿ ,ವರ್ಗಾವಣೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ  ತುರುವೇಕೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ,ಸಹಾಯಕ ನಿರ್ದೇಶಕರಾದ ಕುಮಾರಿ ತ್ರಿವೇಣಿ ಹಾಗೂ ಇಲಾಖೆಯ ಸಿಬ್ಬಂದಿ , ಸಹಾಯಕ, ನಿರ್ದೇಶಕರ ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭವನ್ನು  ಏರ್ಪಡಿಸಿದ್ದರು. ಪದೋನ್ನತಿ ಹೊಂದಿದ ಸಾಕ ಲಕ್ಷ್ಮಮ್ಮ ರವರಿಗೆ ಸಕಲ ಗೌರವ, ಅಭಿನಂದನೆಯೊಂದಿಗೆ ಬೀಳ್ಕೊಡುಗೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕುಮಾರಿ ತ್ರಿವೇಣಿ, ಸಾಕ ಲಕ್ಷ್ಮಮ್ಮ ನವರು ಪದೋನ್ನತಿ ಹೊಂದಿ, ಬೇರೆಡೆಗೆ ವರ್ಗಾವಣೆಗೊಂಡು ಹೋಗುತ್ತಿದ್ದಾರೆ. ಅವರು ಇನ್ನೂ ಉನ್ನತ ಹುದ್ದೆಗೆ ಹೋಗಲಿ, ಸರ್ಕಾರಿ ಸೇವೆಯನ್ನು ಉತ್ತಮವಾಗಿ ನಿರ್ವಹಿಸಲಿ ,. ಅವರಿಗೆ ಆರೋಗ್ಯ , ಆಯಸ್ಸು ವೃದ್ಧಿಯಾಗಲಿ ಎಂದು ಹಾರೈಸಿದರು. ಈ ಕಾರ್ಯಕ್ರಮದಲ್ಲಿ ವಾರ್ಡನ್ , ದೇವರಾಜ್, ದ್ವಿತೀಯ ದರ್ಜೆ ಸಹಾಯಕರದ ಮಧುಸೂದನ್, ಕಚೇರಿ, ಸಹಾಯಕ ,ಕಿರಣ್…

Read More

ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ರಾಜ್ಯ ರೈತ ಸಂಘ , ಸಿ.ಐ.ಟಿ.ಯು , ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ  ಬೆಂಗಳೂರಿನ ಗಾಂಧಿಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ , ರಾಷ್ಟ್ರೀಯ ರೈತ ಮುಖಂಡ  ರಾಕೇಶ್ ಟಿಕಾಯತ್ ,  ಯುದ್ಧ್ ವೀರಸಿಂಗ್  ಮತ್ತು ರೈತರ ಮೇಲೆ ಬಿ.ಜೆ.ಪಿ .ಗೂಂಡಾಗಳು ಹಲ್ಲೆಯನ್ನು ಖಂಡಿಸಿ , ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಪ್ರವಾಸಿ ಮಂದಿರದಿಂದ ನೂರಾರು ಸಂಖ್ಯೆಯ ಪ್ರತಿಭಟನಾಕಾರರು ಜಮಾವಣೆಗೊಂಡು, ರಾಷ್ಟ್ರೀಯ ಹೆದ್ದಾರಿ 151 ಎ ಮೂಲಕ ಕಾಲ್ನಡಿಗೆ ಜಾಥಾ ಮೂಲಕ ಸಾಗಿದ ಪ್ರತಿಭಟನಾಕಾರರು ಬಿ.ಜೆ.ಪಿ.  ಗೂಂಡಾಗಳ ವಿರುದ್ಧ ಕ್ರಮಕೈಗೊಳ್ಳಿ ಎಂದು ಘೋಷಣೆಗಳನ್ನು ಕೂಗುತ್ತಾ, ಆಕ್ರೋಶವನ್ನು ಹೊರಹಾಕಿದರು . ಬಳಿಕ ತಾಲೂಕು ತಹಸಿಲ್ದಾರ್ ರವರ ಕಚೇರಿ  ಬಳಿ ಬಂದು ತಹಶೀಲ್ದಾರ್ ನಯೀಮ್ ಉನ್ನಿಸಾ ಅವರಿಗೆ ಮನವಿ ಪತ್ರ ನೀಡಿದರು. ಈ ವೇಳೆ ಮಾತನಾಡಿದ ರೈತ ಸಂಘಟನೆಯ ತಾಲೂಕು ಅಧ್ಯಕ್ಷರಾದ ಶ್ರೀನಿವಾಸಗೌಡ , ಇದು ಕೇವಲ ರಾಷ್ಟ್ರೀಯ ರೈತ ಮುಖಂಡ  ಟಿಕಾಯತ್  ರವರಿಗೆ ಮಸಿ ಬಳಿದುದ್ದಲ್ಲ, ದೇಶದ ರೈತರ ಹೋರಾಟದ ಮೇಲೆಯೇ…

Read More

ಕೋಲ್ಕತ್ತಾ: ಕಾರ್ಯಕ್ರಮವೊಂದರಲ್ಲಿ ಪ್ರದರ್ಶನ ನೀಡಿದ ಬಳಿಕ ಅಸ್ವಸ್ಥಗೊಂಡಿದ್ದ ಗಾಯಕ ಕೃಷ್ಣಕುಮಾರ್ ಕುನ್ನಾಥ್  ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೃಷ್ಣಕುಮಾರ್  ಕುನ್ನತ್ ಬಳಿಕ ಅಸ್ವಸ್ಥರಾಗಿದ್ದರು. ಅವರುನ್ನು ನಗರದ ಸಿಎಂಆರ್  ಐ ಆಸ್ಪತ್ರೆಗೆ ಕರೆತರುತ್ತಿದ್ದಾಗಲೇ ಸಾವನ್ನಪ್ಪಿದರು. ಕೆಕೆ ಎಂದು ಹೆಚ್ಚು ಪರಿಚಿತರಾಗಿದ್ದ ಕೃಷ್ಣಕುಮಾರ್ ಕುನ್ನಾಥ್ ಅವರು ತಮ್ಮ 53 ನೇ ವಯಸ್ಸಿನಲ್ಲಿ ನಿಧನರಾದರು. ಮೂರು ದಶಕಗಳ ಕಾಲ ತಮ್ಮ ಸಂಗೀತ ವೃತ್ತಿಜೀವನದಲ್ಲಿ, ಕೆಕೆ ಭಾರತೀಯ ಸಂಗೀತ ಪ್ರೇಮಿಗಳಿಗೆ ಯಾರೂನ್ ದೋಸ್ತಿಯಂತಹ ಅನೇಕ ಹಿಟ್ ಗಳನ್ನು ನೀಡಿದರು. ವರದಿ:  ಮುರುಳಿಧರನ್ ಆರ್.  ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಶಿವಮೊಗ್ಗ: ಶಿವಮೊಗ್ಗದ ನಿರ್ಣಯ ನಮಗೆ ಅನ್ವಯ ಆಗಲ್ಲ. ಅವರದ್ದೇ ಬೇರೆ, ನಮ್ಮದೇ ಬೇರೆ ರೈತ ಸಂಘಟನೆ. ಅವರು ನನ್ನನ್ನು ಹೇಗೆ ಉಚ್ಚಾಟಿಸೋಕೆ ಬರುತ್ತೆ. ಅವರು ಅವರ ಸಂಘಟನೆಯವರನ್ನು ಉಚ್ಚಾಟಿಸಬಹುದು. ನಮಗೂ ಅದಕ್ಕೂ ಸಂಬಂಧವಿಲ್ಲ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಮಾಧ್ಯಮವೊಂದರ ಜೊತೆಗೆ ಮಾತನಾಡಿದ ಅವರು, ಯಾರೂ ತಲೆಮಾಸಿದವರು ನನ್ನ ತೇಜೋವಧೆ ಮಾಡಿದ್ರು. ಹೆಣ್ಣುಮಗಳ ಸೀರೆ ಸರಿಯಿಲ್ಲ ಅಂತ ಹೇಳಿಕೊಳ್ತಾರೆ. ಹಾಗಂತ ಅವರ ಸೀರೆ ಸರಿಯಿದ್ಯಾ ನೋಡಬೇಕಲ್ಲ. ಈ ಕೋಡಿಹಳ್ಳಿ ಇಂತದ್ದಕ್ಕೆಲ್ಲ ಹೆದರೋದಿಲ್ಲ ಎಂದರು. ನನ್ನನ್ನು ಯಾರೂ ಉಚ್ಛಾಟನೆ ಮಾಡಲು ಬರಲ್ಲ. ರೈತ ಸಂಘದ ಅಧ್ಯಕ್ಷನಾಗಿ ನಾನೇ ಮುಂದುವರೆಯುತ್ತೇನೆ. ಎಲ್ಲಾ ಪದಾಧಿಕಾರಿಗಳ ಬೆಂಬಲ ನನಗಿದೆ. ನನ್ನನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸೋದು ರೈತರಿಗೆ ಮಾತ್ರ ಸೇರಿದ್ದು ಎಂದು ಅವರು ಇದೇ ವೇಳೆ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ತಿಪಟೂರು: ಕಂದಾಯ ಇಲಾಖೆ ಮತ್ತು ತಾಲೂಕು ಆಡಳಿತ, ಉಪವಿಭಾಗಾಧಿಕಾರಿಗಳು ಮತ್ತು ತಹಸೀಲ್ದಾರ್  “ಜಿಲ್ಲಾಧಿಕಾರಿಗಳ ನಡೆ -ಹಳ್ಳಿ ಕಡೆ” ಸಾರ್ವಜನಿಕ ಮತ್ತು ರೈತರ ಕುಂದುಕೊರತೆ ಗ್ರಾಮ ಭೇಟಿ ಮತ್ತು ವಾಸ್ತವ್ಯ ಕಾರ್ಯಕ್ರಮ ತಿಪಟೂರು ತಾಲೂಕು, ಕಿಬ್ಬನಹಳ್ಳಿ ಹೋಬಳಿ, ಜಕ್ಕನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಾಲೂಕು ದಂಡಾಧಿಕಾರಿಗಳು ಚಂದ್ರಶೇಖರ್ ಗ್ರಾಮ ಭೇಟಿ ಸಂದರ್ಭದಲ್ಲಿ ತಾಲೂಕು ಆಡಳಿತ ವ್ಯಾಪ್ತಿಗೆ ಒಳಪಡುವ ಎಲ್ಲಾ ಇಲಾಖೆಯ ವತಿಯಿಂದ 113 ಅರ್ಜಿಗಳನ್ನು ಸಾರ್ವಜನಿಕರು ನೀಡಿದ್ದು, ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸುಮಾರು 152 ಅರ್ಜಿಗಳನ್ನು ಸಾರ್ವಜನಿಕರು ನೀಡಿದ್ದು, ಆದಷ್ಟು ಅರ್ಜಿಗಳನ್ನು ಕಾರ್ಯಕ್ರಮದ ಸ್ಥಳದಲ್ಲಿ ಇತ್ಯರ್ಥ ಮಾಡಿ, ಉಳಿಕೆ ಅಹವಾಲುಗಳನ್ನು ಪರಿಶೀಲನೆ ಮಾಡಿ ತಕ್ಷಣವೇ ಇತ್ಯರ್ಥ ಮಾಡುತ್ತೇವೆ ಎಂದು ಸಾರ್ವಜನಿಕರಿಗೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಎತ್ತಿನಹೊಳೆ ಹೋರಾಟ ಸಮಿತಿ ಉಪಾಧ್ಯಕ್ಷರಾದ ಬಿ ಬಿ ಸಿದ್ದಲಿಂಗಮೂರ್ತಿ ಮಾತನಾಡಿ ರೈತರು ಬದುಕಲು ನೀರು ಮುಖ್ಯ ಆದರೆ ತಿಪಟೂರು ತಾಲ್ಲೂಕಿನಲ್ಲಿ ಹೇಮಾವತಿ ನೀರು ಹರಿದು…

Read More

ಮಧುಗಿರಿ:  ಕಳಪೆ ರಸ್ತೆ ಕಾಮಕಾರಿಯನ್ನು ಪ್ರಶ್ನಿಸಿದ ಸಾರ್ವಜನಿಕರ ಜೊತೆಗೆ ಪಿಡಬ್ಲ್ಯೂಡಿ ಅಧಿಕಾರಿಗಳು ಅಧಿಕಾರಿಗಳು ಉದ್ಧಟತನದಿಂದ ವರ್ತಿಸಿದ ಘಟನೆ ಮಧುಗಿರಿ ತಾಲೂಕು ಐಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಸರ್ ಐ. ಡಿ. ಹಳ್ಳಿ ಮಾರ್ಗವಾಗಿ ಜನಕಲೋಟಿ ಗ್ರಾಮಕ್ಕೆ ಸುಮಾರು 1 ಕೋಟಿ ವೆಚ್ಚದಲ್ಲಿ 6 ಕಿಲೋಮೀಟರ್ ಉದ್ದದ ರಸ್ತೆ ನಿರ್ಮಾಣವಾಗಿದ್ದು ತುಂಬಾ ಕಳಪೆಯಿಂದ ಕೂಡಿದೆ. ಈ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ಪಿಡಬ್ಲ್ಯೂಡಿ ಅಧಿಕಾರಿಗಳು ಸ್ಥಳ ತನಿಖೆಗೆ ಆಗಮಿಸಿದ್ದು, ಈ ವೇಳೆ ಪಿಡಬ್ಲ್ಯೂಡಿ ಅಧಿಕಾರಿಗಳು ಸಾರ್ವಜನಿಕರ ಜೊತೆಗೆ ಏಕ ವಚನದಲ್ಲೇ ಮಾತನಾಡಿದ್ದು, ಉದ್ಧಟತನದಿಂದ ವರ್ತಿಸಿದ್ದಾರೆ. ಪಿಡಬ್ಲ್ಯೂಡಿ ಅಧಿಕಾರಿಯೊಬ್ಬರು, ನೀವು ಏನು ಮಾಡಿಕೊಳ್ಳುತ್ತೀರಿ ಮಾಡ್ಕೊಳ್ಳಿ,  ಹೋಗೋಲೇ ಎಂದು ಏಕ ವಚನದಲ್ಲೇ ನಿಂದಿಸಿ ಕಾರು ಹತ್ತುತ್ತಿದ್ದು, ಈ ವೇಳೆ ಕಾರಿಗೆ ಅಡ್ಡ ನಿಂತ ಸಾರ್ವಜನಿಕರು ಅಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಬೆಂಗಳೂರು: ಕುವೆಂಪು ಅವರನ್ನು ಅಪಮಾನಿಸಿರುವ ರೋಹಿತ್ ಚಕ್ರತೀರ್ಥನನ್ನು ಕೂಡಲೇ ಬಂಧಿಸಿ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು. ಈಗಿರುವ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯನ್ನು ಮತ್ತು ಪರಿಷ್ಕೃತ ಪಠ್ಯ ಪುಸ್ತಕವನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಎದುರಿನ ಮೆಟ್ರೋ ಸ್ಟೇಷನ್ ಬಳಿ ಎ.ಪಿ.ರಂಗನಾಥ್ ಅವರ ನೇತೃತ್ವದಲ್ಲಿ ನ್ಯಾಯವಾದಿಗಳಿಂದ ಪ್ರತಿಭಟನೆ ನಡೆಯಿತು. ರಾಷ್ಟ್ರ ಕವಿ ಕುವೆಂಪು ಅವರನ್ನು ಅಪಮಾನಿಸಿರುವ ರೋಹಿತ್ ಚಕ್ರತೀರ್ಥನನ್ನು ತಕ್ಷಣವೇ ಬಂಧಿಸಬೇಕು. ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯನ್ನು ತಕ್ಷಣವೇ ರದ್ದು ಮಾಡಬೇಕು. ಸಂವಿಧಾನದ ಆಶಯಗಳಿಗೆ ಪೂರಕವಾಗಿರುವ ಪ್ರೊ.ಬರಗೂರು ರಾಮಚಂದ್ರಪ್ಪ ಸಮಿತಿಯು ರೂಪಿಸಿರುವ ಪಠ್ಯಪುಸ್ತಕವನ್ನು ಅಳವಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಇವತ್ತಿನ ಪ್ರತಿಭಟನಾ ಸಭೆಯಲ್ಲಿ ಖ್ಯಾತ ವಕೀಲರಾದ ಸಿ.ಎಚ್.ಹನುಮಂತರಾಯ, ಡಾ.ಸಿ.ಎಸ್. ದ್ವಾರಕಾನಾಥ್, ಎ.ಎಸ್.ಪೊನ್ನಣ್ಣ, ಬಿ.ಟಿ.ವೆಂಕಟೇಶ್, ಎ.ಪಿ.ರಂಗನಾಥ್, ಗಂಗಾಧರಯ್ಯ, ವಕೀಲರ ಪರಿಷತ್ ಸದಸ್ಯರಾದ ಶಿವಕುಮಾರ್, ಕೋಟೇಶ್ವರ ರಾವ್, ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳಾದ ಹರೀಶ್, ಮಾಜಿ ಪದಾಧಿಕಾರಿಗಳಾದ ರಮೇಶ್, ಗಿರೀಶ್, ಮಮತಾ, ವಕೀಲರಾದ ಕೆ.ಬಿ.ಕೆ.ಸ್ವಾಮಿ,…

Read More