Subscribe to Updates
Get the latest creative news from FooBar about art, design and business.
- ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ
- ಬೀದರ್: ಆನ್ ಲೈನ್ ಗೇಮ್ ಚಟಕ್ಕೆ ಬಲಿಯಾದ ಎಂಬಿಬಿಎಸ್ ವಿದ್ಯಾರ್ಥಿ
- 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ: ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿ ಪ್ರಕಟ: ಸಚಿವ ಮಧು ಬಂಗಾರಪ್ಪ
- ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸುತ್ತಾರೆ: ಸದನದಲ್ಲಿ ಸಚಿವ ಜಮೀರ್ ಅಹ್ಮದ್ ಘೋಷಣೆ
- ಒಳಮೀಸಲಾತಿ: “ನಾಗಮೋಹನ್ ದಾಸ್ ಆಯೋಗದ ವರದಿ ಅವೈಜ್ಞಾನಿಕ”: ಮಾ.25ರಂದು ಬೃಹತ್ ಪ್ರತಿಭಟನೆ
- ನಾಲ್ಕು ಹೆಣ್ಣುಮಕ್ಕಳ ತಾಯಿಗೆ ಸ್ವಯಂ ಉದ್ಯೋಗ: ರೆಸ್ಪಾನ್ಸಿವ್ ಕೇರ್ ಫೌಂಡೇಶನ್ ಕಾರ್ಯಕ್ಕೆ ಇಕ್ಬಾಲ್ ಅಹಮದ್ ಸಾಥ್
- ಬಡವರ ಮನೆ ಬೆಳಗಲು ಶಾಲೆ ಉಳಿಸಿ, ಭಗತ್ ಸಿಂಗ್ ಕನಸು ಕಂಡ ಭಾರತ ಕಟ್ಟಲು ಮುಂಬನ್ನಿ! : ಲಕ್ಕಪ್ಪ
- ಗುಬ್ಬಿ: ಆಟೊ ಗ್ಯಾಸ್ ದರ ಏರಿಕೆ ವಿರುದ್ಧ ಚಾಲಕರ ಆಕ್ರೋಶ; ಬಂಕ್ ಮುಂದೆ ಪ್ರತಿಭಟನೆ
Author: admin
ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಅಮೃತ್ ಪೌಲ್ ಪಿಎಸ್?ಐಗಳ ಮೊದಲ ನೇಮಕ ಪ್ರಕ್ರಿಯೆಯಲ್ಲಿ ಕೋಟ್ಯಾಂತರ ಹಣ ಮಾಡಲು ಆಕಾಂಕ್ಷಿಗಳ ಎಲ್ಲ ವಿವರಗಳನ್ನು ತಿಳಿದ ಬಳಿಕ ಡೀಲ್ ಗೆ ಓಕೆ ಮಾಡಿರುವುದು ಸಿಐಡಿ ತನಿಖೆಯಲ್ಲಿ ಪತ್ತೆಯಾಗಿದೆ. ಪಿಎಸ್ ಐ ನೇಮಕಾತಿ ಪರೀಕ್ಷಾ ಅಕ್ರಮದಲ್ಲಿ ಇಲ್ಲಿಯವರೆಗೆ ಬಂಧಿತ ಪ್ರಮುಖ ಆರೋಪಿಗಳು ಅಭ್ಯರ್ಥಿಗಳಿಂದ ವಸೂಲಿ ಮಾಡಿದ ಹಣದಲ್ಲಿ ಅಮೃತ್ ಪೌಲ್ ಅವರಿಗೆ ಪಾಲು ನೀಡಿದ್ದು ಅದು ಕೋಟ್ಯಾಂತರ ರೂಗಳಾಷ್ಟಾಗಿದೆ ಎನ್ನುವುದು ತನಿಖೆಯಲ್ಲಿ ಸಾಬೀತಾಗಿದೆ. ಕಳೆದ ೨೦೨೦ರ ಫೆ.೨ರಂದು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಅಮೃತ್ ಪೌಲ್ ವಿಭಾಗದ ಎಲ್ಲಾ ಮಾಹಿತಿಯನ್ನು ಕಲೆ ಹಾಕಿದ್ದರು. ನೇಮಕಾತಿ ವಿಭಾಗದಲ್ಲಿ ಠಿಕಾಣಿ ಹೂಡಿದ್ದ ಡಿವೈಎಸ್?ಪಿ ಶಾಂತಕುಮಾರ್ ಜೊತೆ ಹಲವು ಬಾರಿ ಚರ್ಚೆ ನಡೆಸಿದ್ದು ಹಣಕಾಸಿನ ವ್ಯವಹಾರಗಳ ಪ್ರಸ್ತಾಪದ ವೇಳೆ ನೇಮಕಾತಿ ಡೀಲ್ ನ ಮಾತುಕತೆ ನಡೆಸಲಾಗಿತ್ತು.ಅದಕ್ಕೆ ಎಡಿಜಿಪಿ ಗ್ರೀನ್ ಸಿಗ್ನಲ್ ತೋರಿಸುತ್ತಿದರು. ಇದರ ಬೆನ್ನಲ್ಲೇ ಕೋವಿಡ್ ಲಾಕ್? ಡೌನ್ ತೆರವಾದ ನಂತರ ೨೦೨೧ರ…
ಕಾಂಗ್ರೆಸ್ ಕಾಲದಲ್ಲಿ ನಡೆದಿರುವ ಅಕ್ರಮ ನೇಮಕಾತಿಗಳ ಕುರಿತು ದಾಖಲೆ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ನೀಡಿರುವ ಹೇಳಿಕೆಗೆ ಕಿಡಿ ಕಾರಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದಾಖಲೆಗಳಿದ್ದರೆ ನಮ್ಮ ಕಾಲದ ನೇಮಕಾತಿಯ ಬಗ್ಗೆಯೂ ತನಿಖೆ ನಡೆಸಿ ಎಂದು ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ ಅಕ್ರಮ ನೇಮಕಾತಿ ನಡೆದಿದೆ ಎಂಬುದು ಸುಳ್ಳು, ಆಗ ವಿರೋಧ ಪಕ್ಷದಲ್ಲಿದ್ದರು. ಏನು ಮಾಡುತ್ತಿದ್ದರು. ಕಡಲೆ ಪುರಿ ತಿಂತಾ ಇದ್ದರಾ, ಯಾಕೆ ಸುಮ್ಮನಿದ್ದರು. ಆಗ ಏಕೆ ಮಾತನಾಡಲಿಲ್ಲ ಎಂದು ಹರಿಹಾಯ್ದರು. ದಾಖಲೆ ಇದ್ದರೆ ಆಗಲೇ ಹೇಳಬೇಕಿತ್ತಲ್ಲ. ಸುಮ್ಮನೆ ಇದ್ದಿದ್ದು ಅಪರಾಧ, ಕಾನೂನು ಇವರಿಗೆ ಗೊತ್ತಿಲ್ಲವಾ? ನನ್ನ ಕುರ್ಚಿಯನ್ನು ಉಳಿಸೋಕೆ ಮಾತನಾಡಿರಲಿಲ್ಲವಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ದಾಖಲೆ ಇದ್ದರೆ ನಮ್ಮ ಕಾಲದ ನೇಮಕಾತಿ ಬಗ್ಗೆಯೂ ತನಿಖೆ ಮಾಡಿಸಿ ಎಂದೂ ಅವರು ಸವಾಲು ಹಾಕಿದರು. ಪಿಎಸ್ಐ ನೇಮಕಾತಿ ಪ್ರಕರಣದಲ್ಲಿ ಗೃಹ ಸಚಿವ ಅರಗಜ್ಞಾನೇಂದ್ರ ಅವರು ಸದನಕ್ಕೆ ತಪ್ಪು ಮಾಹಿತಿ ಕೊಟ್ಟಿದ್ದಾರೆ. ಅವರನ್ನು…
ಐದು ಕೋಟಿಗೆ ಆಸ್ತಿಯೊಂದನ್ನು ಮಾರಿದ ವಿಚಾರವೇ ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಕೊಲೆಗೆ ಕಾರಣವಾಗಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಹಲವು ದಿನಗಳಿಂದ ತಮ್ಮ ಬೇನಾಮಿ ಆಸ್ತಿಯೊಂದನ್ನು ಮಾರಾಟ ಮಾಡಿ ಪಡೆದ ಐದು ಕೋಟಿ ಕೊಡುವಂತೆ ಹಾಕುತ್ತಿದ್ದ ಒತ್ತಡದಿಂದ ರೋಸಿ ಹೋದ ಮಹಾಂತೇಶ ಗುರೂಜಿ ಕೊಲೆ ಮಾಡಿದ್ದಾನೆ ಎಂಬುದು ಬಹಿರಂಗವಾಗಿದೆ. ಗುರೂಜಿಗಾಗಿ ಎಲ್ಲವನ್ನೂ ತ್ಯಾಗ ಮಾಡಿದ್ದು ಆಸ್ತಿಯ ಹಣ ಏಕೆ ಕೊಡಬೇಕು ಎಂದು ಹಂತಕ ತಗಾದೆ ತೆಗೆದು ರೊಚ್ಚಿಗೆದ್ದು ಮಂಜುನಾಥ ಮರೇವಾಡನ ಜೊತೆ ಸೇರಿ ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಗುರೂಜಿಯ ಬಹುತೇಕ ವ್ಯವಹಾರವನ್ನು ಹಂತಕ ಮಹಾಂತೇಶ ಶಿರೂರು ನೋಡಿಕೊಳುತ್ತಿದ್ದು,ಸುಮಾರು ವರ್ಷಗಳ ಕಾಲ ಮುಂಬೈನಲ್ಲಿ ಸರಳವಾಸ್ತು ಮುಖ್ಯಸ್ಥನಾಗಿ ಕೆಲಸ ಮಾಡುತ್ತಾ ನಂಬಿಕೆ ಗಳಿಸಿದ್ದ ಆತನ ಹೆಸರಿನಲ್ಲಿ ಗುರೂಜಿ ಕೋಟ್ಯಾಂತರ ಮೌಲ್ಯದ ಆಸ್ತಿ ಮಾಡಿದ್ದರು. ಆದರೆ ಐದು ಕೋಟಿಗೆ ಆಸ್ತಿಯೊಂದನ್ನು ಮಾರಿದ ವಿಚಾರವಾಗಿ ಗಲಾಟೆ ನಡೆದಿತ್ತು. ಇದರಿಂದ ಮಹಾಂತೇಶ ನನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು ಇದೇ ವಿಚಾರದಲ್ಲಿ ನಡೆದ ವೈಷಮ್ಯ ಕೊಲೆಗೆ…
ತಿಪಟೂರು : ಲೋಕದಲ್ಲಿ ಅತಿವೃಷ್ಟಿ-ಅನಾವೃಷ್ಟಿ ಸಂಭವಿಸದೇ ಜನರು ಶಾಂತಿ, ನೆಮ್ಮದಿ ಜೀವನ ನಿರ್ವಹಣೆ ಮಾಡುವಂತಾಲಿ ಎಂಬ ಲೋಕಕಲ್ಯಾಣಾರ್ಥವಾಗಿ ಸತ್ಯನಾರಾಯಣ ಸ್ವಾಮಿಯ ಪೂಜಾ ಕಾರ್ಯವನ್ನು ಹಮ್ಮಿಕೊಳ್ಳಾಗಿದೆ ಎಂದು ದಸರೀಘಟ್ಟದ ಆದಿಚುಂಚನಗಿರಿ ಶಾಖಾಮಠದ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ದಸರೀಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಚೌಡೇಶ್ವರಿ ದೇವಾಲಯದಲ್ಲಿ ಪ್ರತಿವರ್ಷದ ಆಷಾಡ ಮಾಸದಲ್ಲಿ ಲೋಕಕಲ್ಯಾಣಾರ್ಥವಾಗಿ ಆಯೋಜಿಸಿದ್ದ 10ನೇ ವರ್ಷದ ಸತ್ಯನಾರಾಯಣಸ್ವಾಮಿ ಪೂಜಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಲೋಕದಾದ್ಯಂತ ಮಾನವನ ಸ್ವಾರ್ಥಕ್ಕಾಗಿ ಸಾವು ನೋವುಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮತ್ತೊಂದೆಡೆ ಮಾನವನ ಆವಿಷ್ಕಾರಗಳಿಗೆ ಪ್ರತಿಯಾಗಿ ಪ್ರಕೃತಿಯು ವಿಕೋಪಗಳು ಸಂಭವಿಸಿ ಅತಿವೃಷ್ಟಿ-ಅನಾವೃಷ್ಟಿಯಿಂದ ನರಳುತ್ತಿದ್ದಾರೆ. ಪ್ರಕೃತಿಯ ವೈಪರಿತ್ಯ, ಬದಲಾವಣೆಗಳ ಮುಂದೆ ಮಾನವನ ಆಲೋಚನೆ, ಅಭಿವೃದ್ಧಿ ಚಿಂತನೆಗಳು ನಡೆಯುವುದಿಲ್ಲ. ಇಂತಹ ಘಟನೆಗಳು ನಡೆಯದಂತಿರಲಿ ಎಂಬ ಉದ್ದೇಶದಿಂದ ಜನತೆಗೆ ಒಳ್ಳೆದಾಗಲಿ ಎಂಬ ಉದ್ದೇಶದಿಂದ ಲೋಕಕಲ್ಯಾಣಾರ್ಥವಾಗಿ ಸತ್ಯನಾರಾಯಣ ಸ್ವಾಮಿಯ ಪೂಜೆಯನ್ನು ನಡೆಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಶೃಂಗೇರಿ ಶಾಖಾಮಠದ ಗುಣನಾಥ ಸ್ವಾಮೀಜಿ, ಹಾಸನ ಶಾಖಾಮಠದ ಶಂಭುನಾಥ ಸ್ವಾಮೀಜಿ, ಕಬ್ಬಳ್ಳಿ ಶಾಖಾಮಠದ ಶಿವಪುತ್ರ ಸ್ವಾಮಿಜಿ, ಬಿಜಿ ನಗರದ…
ಚೀನಾ ಮೊಬೈಲ್ ಉತ್ಪಾದಿಸುವ ವೀವೊ ಕಂಪನಿಯ ಮೇಲೆ ದೇಶದ 44 ಕಡೆಗಳಲ್ಲಿ ಜಾರಿನಿರ್ದೇಶನಾಲಯ ಹಠಾತ್ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ನೆರೆಯ ಚೀನಾದ ವ್ಯಾಪಾರದ ಮೂಲವನ್ನು ಕೇಂದ್ರಸರ್ಕಾರ ತಪಾಸಣೆ ನಡೆಸುವುದನ್ನು ಚುರುಕುಗೊಳಿಸಿರುವ ಬೆನ್ನಲ್ಲೆ ಇಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ವೀವೊ ಜತೆ ಸಂಪರ್ಕ ಹೊಂದಿರುವ ಕಂಪನಿಗಳನ್ನು ಗುರಿಯಾಗಿರಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ಮೇ ತಿಂಗಳಿನಲ್ಲಿ ಜೆಡ್ಟಿಇ ಕಾರ್ಪೋರೇಷನ್ ವೀವೊ ಮೊಬೈಲ್ ಕಮ್ಯುನಿಕೇಷನ್ ನಲ್ಲಿ ನಡೆದಿರುವ ಅಕ್ರಮ ಅವ್ಯವಹಾರ ನಡೆದಿರುವ ಆರೋಪಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಶಿವೋಮಿ ಕಾರ್ಪೋರೇಷನ್ ಚೀನಾದ ಮತ್ತೊಂದು ಮೊಬೈಲ್ ತಯಾರಿಕಾ ಕಂಪನಿ ವಿರುದ್ಧವೂ ತನಿಖೆ ನಡೆಸಲಾಗಿದೆ. ಮಾಲೀಕತ್ವ ಮತ್ತು ಹಣಕಾಸು ವ್ಯವಹಾರ ನಡೆದಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಹೀಗಾಗಿ ಏಪ್ರಿಲ್ ತಿಂಗಳಿನಲ್ಲೂ ವಿವೋ ವಿರುದ್ಧ ತನಿಖೆ ನಡೆಸಲಾಗಿತ್ತು. ಭಾರತ ಮತ್ತು ಚೀನಾ ನಡುವಣ ಸಂಬಂಧ…
ಮಧುಗಿರಿ: ಕಳೆದ 33 ವರ್ಷಗಳ ನಂತರ ಮಧುಗಿರಿಗೆ ಸ್ವ-ಉದ್ಯೋಗ ಮೇಳ ಮತ್ತು ಸಾಧನ ಸಮಾವೇಶಕ್ಕೆ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗಡೆಯವರು ಆಗಮಿಸಿ, ಶ್ರೀ ದಂಡಿನ ಮಾರಮ್ಮ ತಾಯಿಯ ದರ್ಶನ ಪಡೆದರು. ನಂತರ ಭವ್ಯ ಮೆರವಣಿಗೆಯೊಂದಿಗೆ ವಿವಿಧ ಜಾನಪದ ಕಲಾ ತಂಡಗಳಾದ ವೀರಗಾಸೆ, ಡೊಳ್ಳು ಕುಣಿತ, ಹುಲಿ ವೇಷ ಕುಣಿತ, ಮತ್ತು ವಿವಿಧ ವಾದ್ಯಗಳು ಮತ್ತು ಸಾವಿರಾರು ಹೆಣ್ಣುಮಕ್ಕಳು ಕಳಸ ಹೊತ್ತು ವೀರೇಂದ್ರ ಹೆಗ್ಗಡೆಯವರನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ, ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿನ ವೇದಿಕೆಗೆ ಬರಮಾಡಿಕೊಂಡರು. ನಂತರ ಸ್ವ ಉದ್ಯೋಗ ಮೇಳ ಮತ್ತು ಸಾಧನ ಸಮಾವೇಶವನ್ನು ಡಾ.ಹೆಗ್ಗಡೆ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ, ಶಾಸಕ ಎಂ.ವಿ ವೀರಭದ್ರಯ್ಯ, ಜಿ ಪರಮೇಶ್ವರ್ ಹಾಗೂ ವಿಧಾನಪರಿಷತ್ ಸದಸ್ಯರಾದ ರಾಜೇಂದ್ರ, ಚಿದಾನಂದಗೌಡ ಮತ್ತು ಪುರಸಭೆ ಅಧ್ಯಕ್ಷ ತಿಮ್ಮರಾಜು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದೇ ವೇಳೆ ವೀರೇಂದ್ರ ಹೆಗ್ಗಡೆಯವರು ಗಣ್ಯರು, ವಿವಿಧ ಫಲಾನುಭವಿಗಳಿಗೆ ಆಟೋರಿಕ್ಷಾ, ನಾಲ್ಕು ಚಕ್ರದ ವಾಹನಗಳು, ನಮ್ಮ ಊರು ನಮ್ಮ…
ನವದೆಹಲಿ: ದಕ್ಷಿಣ ಭಾರತದ ಜನಪ್ರಿಯ ಸಂಗೀತ ಸಂಯೋಜಕ ಇಳಯರಾಜಾ ಮತ್ತು ಮಾಜಿ ಒಲಿಂಪಿಕ್ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಪಿ.ಟಿ.ಉಷಾ ಹಾಗೂ ಧರ್ಮಸ್ಧಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಸೇರಿದಂತೆ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ವೀರೇಂದ್ರ ಹೆಗ್ಗಡೆಯವರು ಅಸಾಧಾರಣ ಸಮುದಾಯ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಇವರು ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಮಾಡುತ್ತಿರುವ ಮಹತ್ಕಾರ್ಯಕ್ಕೆ ಸಾಕ್ಷಿಯಾಗುವ ಅವಕಾಶ ನನಗೆ ದೊರೆತಿದೆ. ಅವರು ಖಂಡಿತವಾಗಿಯೂ ಸಂಸದೀಯ ಕಾರ್ಯಕಲಾಪಗಳನ್ನು ಶ್ರೀಮಂತಗೊಳಿಸುತ್ತಾರೆ ಎಂದಿದ್ದಾರೆ. ಇಳಯರಾಜಾ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಇಳಯರಾಜಾ ಜೀ ಅವರ ಸೃಜನಶೀಲ ಪ್ರತಿಭೆ ತಲೆಮಾರುಗಳಾದ್ಯಂತ ಜನರನ್ನು ಮಂತ್ರಮುಗ್ಧರನ್ನಾಗಿಸಿದೆ. ಅವರ ಕೃತಿಗಳು ಅನೇಕ ಭಾವನೆಗಳನ್ನು ಸುಂದರವಾಗಿ ಪ್ರತಿಬಿಂಬಿಸುತ್ತವೆ. ಅಷ್ಟೇ ಸ್ಪೂರ್ತಿದಾಯಕವಾದುದು ಅವರ ಜೀವನ ಪಯಣ- ಅವರು ವಿನಮ್ರ ಹಿನ್ನೆಲೆಯಿಂದ ಮೇಲೆದ್ದು ಬಹಳಷ್ಟು ಸಾಧಿಸಿದರು. ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದಕ್ಕೆ ಸಂತೋಷವಾಗಿದೆ ಎಂದಿದ್ದಾರೆ. ಪಿ.ಟಿ. ಉಷಾ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಉಷಾ ಜಿ ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯಾಗಿದ್ದಾರೆ. ಕ್ರೀಡೆಗಳಲ್ಲಿ ಇವರ ಸಾಧನೆಗಳು ವ್ಯಾಪಕವಾಗಿ…
ತಿಪಟೂರು: ತಾಲೂಕಿನ ನೊಣವಿನಕೆರೆ ಹೋಬಳಿ, ಗುಂಗುರು ಮಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಗುರು ಮಳೆ ಗ್ರಾಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಿ. ಡಾ.ಎನ್.ಮೂರ್ತಿ ಸ್ಥಾಪಿತ ಸಂಘಟನೆಯ ಗ್ರಾಮ ಶಾಖೆಯನ್ನು ಡಿಎಸ್ ಎಸ್ ತಾಲೂಕು ಉಪಾಧ್ಯಕ್ಷರಾದ ಮತಿಘಟ್ಟ ಶಿವಕುಮಾರ್ ಉದ್ಭಾಟಿಸಿದರು. ಬಳಿಕ ಮಾತನಾಡಿದ ಅವರು, ಬರೀ ಉದ್ಘಾಟನೆ ಆದರೆ ಸಾಲದು ಇದರ ಜೊತೆಗೆ ಕೆಳ ಸಮುದಾಯದ ಜನರು ಪರಿಶಿಷ್ಟ ಜಾತಿ, ಪಂಗಡದ ಜನರ ಶೈಕ್ಷಣಿಕ ಅಭಿವೃದ್ಧಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು. ಆರ್ಥಿಕ ಸಾಮಾಜಿಕ ರಾಜಕೀಯ ಕ್ಷೇತ್ರದಲ್ಲಿ ಶೋಷಿತರು ಮುಂದೆ ಬರಲು ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಸ್ಪರ್ಧಿಸಬೇಕು ಸರ್ಕಾರದಿಂದ ಸಿಗುವ ಎಸ್ಸಿ ಎಸ್ಟಿ ಸಮುದಾಯದ ಮೂಲಭೂತ ಸೌಕರ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ತಾಲೂಕು ಅಧ್ಯಕ್ಷ ಅಶೋಕ್ ಗೌಡನಕಟ್ಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಟ್ಟಸ್ವಾಮಿ, ವಿಭಾಗಿಯ ಉಪಾಧ್ಯಕ್ಷ ಪ್ರಸನ್ ಕುಮಾರ್, ಕಾರ್ಮಿಕ ಘಟಕದ ಅಧ್ಯಕ್ಷ ಹೊನ್ನಪ್ಪ, ಯುವ ಘಟಕದ ಅಧ್ಯಕ್ಷ…
ತಿಪಟೂರು: ಗ್ರಾಮಗಳಲ್ಲಿ ಒಳಚರಂಡಿಗಳು ತುಂಬಿ ತುಳುಕುತ್ತಿದ್ದರೂ ಗ್ರಾಮ ಪಂಚಾಯಿತಿಯವರು ಒಳಚರಂಡಿಗಳನ್ನು ಸ್ವಚ್ಛತೆ ಮಾಡದೆ ನಿರ್ಲಕ್ಷಿಸಿದ್ದಾರೆ ಎಂದು ಕೆಲವು ಗ್ರಾಮಗಳ ಗ್ರಾಮಸ್ಥರು ಆರೋಪಿಸಿದ್ದಾರೆ ತಾಲೂಕಿನ ದಸರಿಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ಗ್ರಾಮಗಳ ಒಳಚರಂಡಿಗಳು ಸ್ವಚ್ಛತೆಯನ್ನು ಕಂಡಿದ್ದರೆ, ಇನ್ನೂ ಕೆಲವು ಒಳಚರಂಡಿಗಳು ಸ್ವಚ್ಛತೆಯನ್ನು ಕಾಣದಂತಾಗಿದೆ. ಪೂಜಾರಿ ಪಾಳ್ಯಗ್ರಾಮದಲ್ಲಿ ಒಳಚರಂಡಿಗಳು ತುಂಬಿ ತುಳುಕುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಅಧ್ಯಕ್ಷರು ಸದಸ್ಯರು ಇವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜವಾಗಿಲ್ಲ ಎಂದು ಇಲ್ಲಿನ ನಾಗರಿಕರು ದೂರಿದ್ದಾರೆ. ಒಳಚರಂಡಿ ಸ್ವಚ್ಛಗೊಳಿಸಿ ಎಂದರೆ, ಸ್ವಚ್ಛತೆಯನ್ನು ಪೂರ್ಣ ಮಾಡಿಸುತ್ತೇವೆ ಎಂದು ಹೇಳುತ್ತಾರೆ. ಆದರೆ ಗ್ರಾಮ ಪಂಚಾಯಿತಿ ವರ್ಕರ್ ಗಳು ಮಾತ್ರ ಅಧಿಕಾರಿಗಳ ಮಾತಿಗೆ ಬೆಲೆ ಇಲ್ಲದಂತೆ ವರ್ತಿಸುತ್ತಿರುವುದು ಕಂಡು ಬರುತ್ತಿದೆ. ದಿನೇ ದಿನೇ ಒಳ ಚರಂಡಿಗಳು ತುಂಬಿ ದುರ್ವಾಸನೆ ಬೀರುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪೂಜಾರಿ ಪಾಳ್ಯ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಗಳನ್ನು ಅಳವಡಿಸಿದ ಸ್ಥಳಗಳಲ್ಲಿ ಕುಡಿಯುವ ನೀರನ್ನು ಬಳಸಿ ಬಟ್ಟೆ ಒಗೆಯುವುದು, ಹಸು, ಕರುಗಳ…
ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ರಾಜೀನಾಮೆ ಕೇಳುವ ನೈತಿಕ ಹಕ್ಕು ಕಾಂಗ್ರೆಸ್ ಪಕ್ಷಕ್ಕಿಲ್ಲ. ಗೃಹ ಸಚಿವರು ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದಲೇ ಈ ಹಗರಣದ ತನಿಖೆ ಉತ್ತಮವಾಗಿ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪಿಎಸ್ ಐ ನೇಮಕಾತಿ ಅಕ್ರಮ ಗೊತ್ತಾಗುತ್ತಿದ್ದಂತೆಯೇ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಸಿಐಡಿ ತನಿಖೆಗೆ ಆದೇಶಿಸಿ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಬಯಲಿಗೆಳೆಯುವ ಕೆಲಸ ಮಾಡಿದ್ದಾರೆ. ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸಲ್ಲ ಎಂದರು. ಬೆಂಗಳೂರಿನ ಆರ್ ಟಿ ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಗೃಹ ಸಚಿವರ ರಾಜೀನಾಮೆ ಕೇಳುವ ಹಕ್ಕಿಲ್ಲ. ಗೃಹ ಸಚಿವರು ತೋರಿದ ಆಸಕ್ತಿ, ದಕ್ಷತೆಯಿಂದಲೇ ಈ ಪ್ರಕರಣ ಇಲ್ಲಿಯವರೆಗೆ ಬಂದಿದೆ ಎಂದರು. ಕಾಂಗ್ರೆಸ್ ಅಧಿಕಾರಾವಧಿಯಲ್ಲೇ ಪಿಎಸ್ ಐ ಹಗರಣ ಆಗಿತ್ತು. ಪ್ರಶ್ನೆಪತ್ರಿಕೆ ಬಹಿರಂಗಗೊಂಡಿತ್ತು. ಹಿರಿಯ ಅಧಿಕಾರಿ ಆರೋಪಿಯಾಗಿದ್ದರೂ ಆಗ ಯಾವುದೇ ಕ್ರಮಕೈಗೊಂಡಿರಲಿಲ್ಲ. ನಮ್ಮ ಅಧಿಕಾರಿಗಳಿಗೆ ಸಂಪೂರ್ಣ ಸ್ವತಂತ್ರ ನೀಡಿದ್ದೇವೆ. ನಮ್ಮದು ಜೀರೋ ಟಾಲರೆನ್ಸ್ ಯಾವುದನ್ನೂ…