Subscribe to Updates
Get the latest creative news from FooBar about art, design and business.
- ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ
- ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ
- ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
- ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ
- LPG ಸಿಲಿಂಡರ್ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!
- ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು: ಪ್ರಿಯಾಂಕ್ ಖರ್ಗೆ ಕಿಡಿ
- ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ
- ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್ ಗಳಿಗೆ ಬೀಗ!
Author: admin
ಮುಂಬೈ: ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಓರ್ವ ಮೃತಪಟ್ಟು ಹಲವರು ಅವಶೇಷಗಳಡಿಯಲ್ಲಿ ಸಿಲುಕಿದ ಘಟನೆ ಮುಂಬೈಯ ಕುರ್ಲ ಪ್ರದೇಶದಲ್ಲಿ ನಡೆದಿದೆ. ಅವಶೇಷಗಳಡಿಯಲ್ಲಿ ಸಿಲುಕಿದ್ದ 12 ಮಂದಿಯನ್ನು ಈಗಾಗಲೇ ರಕ್ಷಿಸಲಾಗಿದೆ, ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕುರ್ಲಾದ ನಾಯಕ್ ನಗರ ಸೊಸೈಟಿಯಲ್ಲಿರುವ ವಸತಿ ಕಟ್ಟಡದ ಒಂದು ಭಾಗ ಕಳೆದ ಮಧ್ಯರಾತ್ರಿಯ ಸುಮಾರಿಗೆ ಕುಸಿದಿದೆ. ಗಾಯಾಳುಗಳನ್ನು ಘಾಟ್ಕೋಪರ್ ಮತ್ತು ಸಿಯಾನ್ನಲ್ಲಿರುವ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದ್ದು, ಬದುಕುಳಿದವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅವಶೇಷಗಳ ಅಡಿಯಲ್ಲಿ ಇನ್ನೂ 20ರಿಂದ 22 ಮಂದಿ ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸ್ಥಳದಲ್ಲಿ ಅಗ್ನಿಶಾಮಕದಳ ಹಾಗೂ ಎನ್ ಡಿಆರ್ ಎಫ್ ತಂಡ ಕಾರ್ಯಾಚರಣೆ ನಡೆಸುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರದಲ್ಲಿ ಮೀನುಗಾರು ಅಪರೂಪದ ಬೃಹತ್ “ಟೆಲಿಯಾ ಭೋಲಾ” ಮೀನನ್ನು ಸೆರೆ ಹಿಡಿದಿದ್ದು, ಈ ಮೀನು ಸುಮಾರು 55 ಕೆಜಿ ತೂಕ ಹೊಂದಿದೆ. ಮೀನನ್ನು ಹರಾಜಿನಲ್ಲಿ ಕಂಪನಿಯೊಂದು ಪ್ರತಿ ಕೆಜಿಗೆ 26 ಸಾವಿರ ರೂಪಾಯಿಗೆ ಖರೀದಿಸಿದೆ. ಈ ಮೀನು ಒಟ್ಟು 13 ಲಕ್ಷ ರೂಪಾಯಿಗೆ ಮಾರಾಟವಾಗಿದೆ. ಟೆಲಿಯಾ ಭೋಲಾ ಮೀನಿನ ವೈಶಿಷ್ಟ್ಯವೆಂದರೆ ಅದು ಬಹಳಷ್ಟು ಮಾವ್ (Maw) ಅನ್ನು ಹೊಂದಿರುತ್ತದೆ, ಇದರಿಂದ ಔಷಧಿಗಳನ್ನು ತಯಾರಿಸಲಾಗುತ್ತದೆ. ವರದಿಗಳ ಪ್ರಕಾರ ಈ ಮೀನಿನ ಮಾವನ್ನು ವಿದೇಶದಲ್ಲೂ ಮಾರಾಟ ಮಾಡಲಾಗುತ್ತದೆ. ಈ ಮೀನನ್ನು ನೋಡಲು ಅಪಾರ ಸಂಖ್ಯೆ ಜನರು ಜಮಾಯಿಸಿದ್ದರು. ಮೀನಿನ ಒಟ್ಟು ತೂಕ 55 ಕೆ.ಜಿ ಇದ್ದು 5 ಕೆಜಿ ಮೊಟ್ಟೆಗಳನ್ನು ಹೊರತುಪಡಿಸಿದರೇ, ಮೀನಿನ ಒಟ್ಟು ತೂಕ 50 ಕೆ.ಜಿ. ಇದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ನಾಡುಕಂಡ ಶ್ರೇಷ್ಠ ದೂರ ದೃಷ್ಟಿಯ ಆಡಳಿತಗಾರ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಪ್ರವಾಸಿ ಮಂದಿರದ ಬಳಿ ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾವಣೆಗೊಂಡರು ಅಲ್ಲಿಂದ ಕಾಲ್ನಡಿಗೆಯಲ್ಲಿ ಹಾಗೂ ಬೈಕ್ ರ್ಯಾಲಿ ಮೂಲಕ ಹಿರಣ್ಣಯ್ಯ ಬಯಲುರಂಗ ಮಂದಿರದ ವೇದಿಕೆ ಕಾರ್ಯಕ್ರಮಕ್ಕೆ ಸಾಗಿದರು. ರ್ಯಾಲಿಯ ಉದ್ದಕ್ಕೂ ಕೆಂಪೇಗೌಡರಿಗೆ ಘೋಷಣೆಗಳನ್ನು ಕೂಗುತ್ತ ಸಾಗಿದರು ರ್ಯಾಲಿಯಲ್ಲಿ ವಿವಿಧ ಜಾನಪದ ತಂಡಗಳು ಜನರನ್ನು ಮನರಂಜಿಸಿದವು . ತುರುವೇಕೆರೆ ಕ್ಷೇತ್ರದ ಶಾಸಕ ಮಸಾಲ ಜಯರಾಮ್ ರವರ ಏಕಲವ್ಯ ಹೆಸರಿನ ಹೋರಿ ಜನರ ಆಕರ್ಷಣೆಯಾಗಿದ್ದುವು. ದಾರಿಯುದ್ದಕ್ಕೂ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು ವೇದಿಕೆ ಕಾರ್ಯಕ್ರಮದಲ್ಲಿ ಶಾಸಕ ಮಸಾಲ ಜಯರಾಮ್ . ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ , ಮಾಜಿ ವಿಧಾನ ಪರಿಷತ್ತಿನ ಸದಸ್ಯ ಬೆಮೆಲ್ ಕಾಂತರಾಜು ಸುಬ್ರಮಣ್ಯ ಶ್ರೀಕಠೇಗೌಡ ,ಬಾಣಸಂದ್ರ ರಮೇಶ್ , ದೊಡ್ಡಾಘಟ್ಟ ಚಂದ್ರೇಶ್ ,ಕೊಂಡಜ್ಜಿ ವಿಶ್ವನಾಥ್ ಮತ್ತಿತರರು ಹಾಜರಿದ್ದರು ವರದಿ: ಸುರೇಶ್ ಬಾಬು, ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಕೊರಟಗೆರೆ : ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ 513ನೇ ಜಯಂತೋತ್ಸವವನ್ನು ತಾಲೂಕು ಆಡಳಿತ ಹಾಗೂ ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ಸರಳ ಸುಂದರ ಜಯಂತ್ಯುತ್ಸವನ್ನು ಆಚರಿಸಲಾಯಿತು. ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ಒಕ್ಕಲಿಗ ಸಮುದಾಯ ಭವನಕ್ಕೆ ಹಾಗೂ ಇನ್ನಿತರ ಕಾರ್ಯಕ್ರಮಗಳ ಆಯೋಜನೆ ಮಾಡಲು ಖಾಲಿ ಸ್ಥಳವನ್ನು ಸಮುದಾಯಕ್ಕೆ ನೀಡಬೇಕು ಎಂದು ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ನೀಡಿದರು . ತಾಲ್ಲೂಕು ದಂಡಾಧಿಕಾರಿ ನಹೀದಾ ಜಮ್ ಜಮ್ ಮಾತನಾಡಿ, ನಮ್ಮ ನಾಡಿಗೆ ಮಾತ್ರವಲ್ಲ ನಮ್ಮ ಇಡೀ ವಿಶ್ವಕ್ಕೆ ಮಾದರಿ ನಗರವನ್ನಾಗಿ ಬೆಂಗಳೂರನ್ನು ಕಟ್ಟಿದ ನಾಡಪ್ರಭು ಕೆಂಪೇಗೌಡರ ಜಯಂತಿ ಕೇವಲ ಒಕ್ಕಲಿಗ ಸಮುದಾಯಕ್ಕೆ ಸೀಮಿತವಲ್ಲ ಇಡೀ ದೇಶದ ಜನತೆಯ ಆಸ್ತಿ ನಾಡಪ್ರಭು ಕೆಂಪೇಗೌಡರು ಎಂದರೆ ತಪ್ಪಾಗಲಾರದು ಅವರು ಬೆಂಗಳೂರನ್ನು ನಿರ್ಮಿಸಲು ಪಟ್ಟ ಶ್ರಮ ಅಷ್ಟಿಷ್ಟಲ್ಲ ಅವರಿಂದಲೇ ಇಂದು ಸುಂದರ ಬೆಂಗಳೂರು ನಿರ್ಮಾಣವಾಗಲು ಸಾಧ್ಯವಾಗಿದೆ ಎಂದು ತಿಳಿಸಿದರು. ಸಮುದಾಯದ ಮುಖಂಡ ವೀರಕ್ಯಾತಯ್ಯ ಮಾತನಾಡಿ ನಾಡಪ್ರಭು ಕೆಂಪೇಗೌಡರ ಜಯಂತಿ ಕೇವಲ 4 ಗೋಡೆಗಳ ಮಧ್ಯೆ…
ತುಮಕೂರು: ಅಗ್ನಿಪಥ ಯೋಜನೆಯನ್ನು ವಿರೋಧಿಸಿ ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದ್ದಾರೆ. ಅಗ್ನಿಪಥ ಯೋಜನೆಯ ಹೆಸರಿನಲ್ಲಿ ಸೈನಿಕರಿಗೆ ದ್ರೋಹ ಮಾಡುತ್ತಿರುವ ಬಿಜೆಪಿಗೆ ಧಿಕ್ಕಾರ, ಬಿಜೆಪಿ ಸರ್ಕಾರ ತೊಲಗಲಿ ಎಂದು ಕಾಂಗ್ರೆಸ್ ಮುಖಂಡರು ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದ್ದಾರೆ. ಉದ್ಯೋಗದ ಹೆಸರಿನಲ್ಲಿ ಬಿಜೆಪಿ ಸರ್ಕಾರ ಯುವಕರನ್ನು ಬೀದಿ ಪಾಲು ಮಾಡಲಾಗುತ್ತಿದೆ. ಅಧಿಕಾರ ಹಿಡಿಯುವ ಸಲುವಾಗಿ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದವರು ಮತ್ತೆ ಈ ಬಗ್ಗೆ ಮಾತನಾಡಲಿಲ್ಲ. ಅವರ ಪ್ರಕಾರ ಇದುವರೆಗೆ 16 ಕೋಟಿ ಉದ್ಯೋಗ ನೀಡಬೇಕಿತ್ತು. ಆದರೆ, ಸುಳ್ಳು ಹೇಳುವುದರಲ್ಲಿ ಕೇಂದ್ರ ಸರ್ಕಾರ ಮುಳುಗಿದೆ ಕಾಂಗ್ರೆಸ್ ಕಾರ್ಯಕರ್ತರು ಎಂದು ಆಕ್ರೋಶ ವ್ಯಕ್ತಪಡಿಸಿದರು. ಸೇನೆಯಲ್ಲಿ ಶಾಶ್ವತವಾದ ಸ್ಥಾನ ನೀಡಲಿ. ಅಗ್ನಿಪಥ ಬಿಜೆಪಿ ಕಾರ್ಯಾಲಯದಲ್ಲಿಯೇ ಇರಲಿ. ಪ್ರತಿಯೊಬ್ಬರು ಯೋಜನೆ ವಿರೋಧಿಸುತ್ತಿದ್ದಾರೆ. ರೈತರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದ ರೀತಿಯಲ್ಲಿ ಅಗ್ನಿಪಥ ಹಿಂದಕ್ಕೆ ಪಡೆಯಬೇಕು. ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಕಸಬಾ ಹೋಬಳಿ ಮಲ್ಲಾಘಟ್ಟ ಕೆರೆಯ ಕೋಡಿ ಬಿದ್ದಿದ್ದು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಈ ಕ್ಷೇತ್ರದಲ್ಲಿ ಶ್ರೀ ಗಂಗಾಧರೇಶ್ವರ ದೇವಾಲಯ ಇದೆ. ಈ ಕೆರೆಯು ಮೈದುಂಬಿ ಹರಿಯುತ್ತಿರುವುದರಿಂದ ದೂರದ ಬೆಂಗಳೂರು, ಮೈಸೂರು ಅರಸೀಕೆರೆ ಹಾಸನ ಮುಂತಾದ ಕಡೆಯಿಂದ ಸಾವಿರಾರು ಪ್ರವಾಸಿಗರ ದಂಡು ಈ ಕೆರೆಯ ಕೋಡಿಯ ಮನೋಹರವಾದ ದೃಶ್ಯವನ್ನು ನೋಡಲು ಬರುತ್ತಿದ್ದಾರೆ. ಈ ಸ್ಥಳದಲ್ಲಿ ತಾಲೂಕಿನ ಗ್ರಾಮದೇವತೆಗಳ ಪುಣ್ಯ ಸ್ನಾನಕ್ಕೆ ಭಕ್ತರು ಆಗಮಿಸಿ ಹೋಮ-ಹವನಗಳನ್ನು ಮಾಡಿ ದೇವರ ಕೃಪೆಗೆ ಪಾತ್ರರಾಗುತ್ತಾರೆ. ಮಕ್ಕಳಾಗದ ದಂಪತಿಗಳು ಗಂಗಾ ಪೂಜೆ ಮಾಡಿಸಿ ಕೊಂಡು ಹೋಗುತ್ತಾರೆ. ಈ ಸ್ಥಳಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದರೂ ಕ್ಷೇತ್ರದ ಅಭಿವೃದ್ಧಿಗೆ ತಾಲೂಕು ಆಡಳಿತವಾಗಲಿ, ಜಿಲ್ಲಾಡಳಿತವಾಗಲಿ, ಜಲಾನಯನ ಇಲಾಖೆಯಾಗಲಿ ,ಜನಪ್ರತಿನಿಧಿಗಳಾಗಲಿ ಕಿಂಚಿತ್ತೂ ಕಾಳಜಿ ತೋರಿಸುತ್ತಿಲ್ಲ ಎನ್ನುವ ಚರ್ಚೆ ಕೇಳಿ ಬಂದಿದೆ. ಇನ್ನಾದರೂ ಈ ಸ್ಥಳದ ಅಭಿವೃದ್ಧಿಗಾಗಿ ಕಾಳಜಿ ವಹಿಸುತ್ತಾರಾ ಪ್ರೇಕ್ಷಣೀಯ ಸ್ಥಳ ಮಾಡುತ್ತಾರಾ ? ಎಂದು ಕಾದುನೋಡಬೇಕಾಗಿದೆ. ವರದಿ: ಸುರೇಶ್ ಬಾಬು, ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ…
ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ “ಅರಿವು” ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಶೈಕ್ಷಣಿಕ ಸಾಲ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮತಿಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖರು, ಭೌದ್ಧರು, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗಕ್ಕೆ ಸೇರಿದ ಸಿ.ಇ.ಟಿ-ನೀಟ್ ಪರೀಕ್ಷೆ ಬರೆದು ವಿವಿಧ ವೃತ್ತಿಪರ ಕೋರ್ಸ್ಗಳಾದ ವೈದ್ಯಕೀಯ (ಎಂ.ಬಿ.ಬಿ.ಎಸ್), ಬಿ.ಡಿ.ಎಸ್, ಬಿ.ಇ/ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಹಾಗೂ ಆಯುಶ್ ಪದವಿ ಕೋರ್ಸಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳು ಶೈಕ್ಷಣಿಕ ಸಾಲ ಪಡೆಯಬಹುದು. ಆಸಕ್ತ ಅಭ್ಯರ್ಥಿಗಳು ನಿಗಮದ ವೆಬ್ಸೈಟ್ http//kmdconline.karnataka.gov.in ಮೂಲಕ ಜುಲೈ 20 ರೊಳಗೆ ಅರ್ಜಿ ಸಲ್ಲಿಸಿ ಜಿಲ್ಲಾ ಕಛೇರಿಗೆ ಜುಲೈ 25ರೊಳಗೆ ಭೌತಿಕ ಪ್ರತಿ ಸಲ್ಲಿಬೇಕು. ಹೆಚ್ಚಿನ ವಿವರಗಳಿಗೆ ಮೇಲ್ಕಂಡ ಅಂತರ್ಜಾಲ ಮತ್ತು ಜಿಲ್ಲಾ ಕಛೇರಿಯನ್ನು ಸಂಪರ್ಕಿಸಲು ಕೋರಿದೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ನವದೆಹಲಿ: ಕಠ್ಮಂಡು ಕಣಿವೆಯ ಲಲಿತ್ಪುರ ಮೆಟ್ರೋಪಾಲಿಟನ್ ಸಿಟಿಯಲ್ಲಿ 12 ಜನರಿಗೆ ಕಾಲರಾ ತಗುಲಿರುವ ಬೆನ್ನಲ್ಲೇ ಅಧಿಕಾರಿಗಳು ಪಾನಿ ಪುರಿ ಮಾರಾಟವನ್ನು ನಿಷೇಧಿಸಿದ್ದಾರೆ.ಪಾನಿಪುರಿಯಲ್ಲಿ ಕಾಲರಾ ಬ್ಯಾಕ್ಟೀರಿಯಾವನ್ನು ಹೊತ್ತೊಯ್ಯುವ ನೀರನ್ನು ಬಳಸಲಾಗುತ್ತಿದೆ ಎಂದು ಲಲಿತ್ಪುರ ಮೆಟ್ರೋಪಾಲಿಟನ್ ಸಿಟಿ (ಎಲ್ಎಂಸಿ) ಹೇಳಿಕೊಂಡಿದೆ. ಮಹಾನಗರ ಪಾಲಿಕೆಯು ಜನನಿಬಿಡ ಪ್ರದೇಶಗಳಲ್ಲಿ ಮತ್ತು ಕಾರಿಡಾರ್ ಪ್ರದೇಶದಲ್ಲಿ ಪಾನಿಪುರಿ ಮಾರಾಟವನ್ನು ನಿಲ್ಲಿಸಲು ಆಂತರಿಕ ಸಿದ್ಧತೆಗಳನ್ನು ನಡೆಸಿದೆ, ಕಣಿವೆಯಲ್ಲಿ ಕಾಲರಾ ಹರಡುವ ಅಪಾಯ ಹೆಚ್ಚಿದೆ ಎಂದು ಮುನ್ಸಿಪಲ್ ಪೊಲೀಸ್ ಮುಖ್ಯಸ್ಥ ಸೀತಾರಾಮ್ ಹಚೇತು ಹೇಳಿದ್ದಾರೆ. ಕಣಿವೆಯಲ್ಲಿ ಇನ್ನೂ ಏಳು ಜನರು ಕಾಲರಾಗೆ ತಗುಲುವುದರೊಂದಿಗೆ ಕಣಿವೆಯಲ್ಲಿ ಒಟ್ಟು ಕಾಲರಾ ರೋಗಿಗಳ ಸಂಖ್ಯೆ 12 ಕ್ಕೆ ತಲುಪಿದೆ ಎಂದು ಆರೋಗ್ಯ ಮತ್ತು ಜನಸಂಖ್ಯೆ ಸಚಿವಾಲಯ ತಿಳಿಸಿದೆ.ಆರೋಗ್ಯ ಸಚಿವಾಲಯದ ಅಧೀನದಲ್ಲಿರುವ ಸಾಂಕ್ರಾಮಿಕ ರೋಗ ಮತ್ತು ರೋಗ ನಿಯಂತ್ರಣ ವಿಭಾಗದ ನಿರ್ದೇಶಕ ಚುಮನ್ಲಾಲ್ ದಾಶ್ ಪ್ರಕಾರ, ಕಠ್ಮಂಡು ಮಹಾನಗರದಲ್ಲಿ ಐದು ಕಾಲರಾ ಮತ್ತು ಚಂದ್ರಗಿರಿ ಪುರಸಭೆ ಮತ್ತು ಬುಧಾನಿಲಕಂಠ ಪುರಸಭೆಯಲ್ಲಿ ತಲಾ ಒಂದು ಪ್ರಕರಣಗಳನ್ನು ಗುರುತಿಸಲಾಗಿದೆ. ಸೋಂಕಿತರು ಪ್ರಸ್ತುತ…
ಪೋಷಕರಿಂದ ದೂರವಾಗಿ ಅಲೆಯುತ್ತಿದ್ದ ಬಾಲಕನನ್ನು ಪುನಃ ಪೋಷಕರ ಮಡಿಲಿಗೆ ಸೇರಿಸುವ ಮೂಲಕ ನಗರದ ಯುವಕರು ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ. ಎರಡು ವಾರಗಳ ಹಿಂದೆ ನಗರದ ಬಿಟಿಎಂ ಲೇಔಟ್ ಬಳಿ ಹಸಿವಿನಿಂದ ಓಡಾಡುತ್ತಿದ್ದ ಉತ್ತರ ಭಾರತ ಮೂಲದ ಸುಹಾಸ್ ಎಂಬ ಬಾಲಕನನ್ನು ಸ್ಥಳೀಯ ಬೇಕರಿ ಮಾಲೀಕ ರಾಜಣ್ಣ, ಯುವಕರಾದ ನಿತಿನ್ ಹಾಗೂ ಶ್ರೀಧರ್ ಗಮನಿಸಿ ವಿಚಾರಿಸಿದ್ದಾರೆ. ಹಿಂದಿ ಭಾಷೆ ಮಾತನಾಡುತ್ತಿದ್ದ ಬಾಲಕನಿಗೆ ಊರಿನ ಹೆಸರು ಮರೆತಿತ್ತು. ಆದರೆ, ಬಾಲಕ ಸುಹಾಸ್ ಹೇಳಿದ್ದ ಅಣ್ಣನ ಹೆಸರನ್ನ ಫೇಸ್ ಬುಕ್ನಲ್ಲಿ ಹುಡುಕಾಡಿದಾಗ ಪಶ್ಚಿಮ ಬಂಗಾಳದಲ್ಲಿರುವ ತನ್ನ ಅಣ್ಣನ ಫೋಟೋವನ್ನ ಗುರುತಿಸಿದ್ದ. ಕೂಡಲೇ ಮೆಸೆಂಜರ್ ಮೂಲಕ ಆತನ ಅಣ್ಣನನ್ನ ಸಂಪರ್ಕಿಸಿದ್ದಾರೆ. ಶ್ರೀಧರ್ ಆತನ ಪೋಷಕರು ಬರುವವರೆಗೂ ಬೇಕರಿಯಲ್ಲೇ ಮಲಗಲು ಜಾಗ ಕೊಟ್ಟು, ಹೇರ್ ಕಟಿಂಗ್ ಮಾಡಿಸಿ, ಊಟ ಬಟ್ಟೆ ಕೊಟ್ಟು ನೋಡಿಕೊಂಡಿದ್ದಾರೆ. ಒಂದು ವಾರದ ಬಳಿಕ ಸುಹಾಸ್ ಪೋಷಕರು ನಗರಕ್ಕೆ ಬಂದು ಮಗನನ್ನ ಕಂಡು ತಾಯಿ ಕಣ್ಣೀರು ಹಾಕಿದ್ದಾರೆ. ಒಂದು ವರ್ಷದ ಹಿಂದೆ ಊರಿನ ಬಳಿ ಕಣ್ಣಾ ಮುಚ್ಚಾಲೆ…
ಸಂಘರ್ಷ, ವಿಪತ್ತುಗಳು ಮತ್ತು ಹವಾಮಾನ ಬಿಕ್ಕಟ್ಟಿನಂತಹ ದುರಂತಗಳಿಂದ ವಿಶ್ವದಾದ್ಯಂತ ಹೆಚ್ಚಿನ ಸಂಖ್ಯೆಯ ಜನರು ತಮ್ಮ ತಮ್ಮ ದೇಶಗಳಿಂದ ಸ್ಥಳಾಂತರಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ಮುಖ್ಯಸ್ಥ ಅಂಟೋನಿಯೋ ಗುಟೆರಸ್ ಹೇಳಿದ್ದಾರೆ. ಜಗತ್ತು ಆಂತರಿಕ ಸ್ಥಳಾಂತರದ ಬಿಕ್ಕಟ್ಟನ್ನು ಎದುರಿಸುತ್ತಿದೆ. ಸ್ಥಳಾಂತರಗೊಂಡ ವ್ಯಕ್ತಿಗಳಿಗೆ ಸಹಾಯ ಮಾಡುವ ಪ್ರಯತ್ನಗಳನ್ನು ಉತ್ತೇಜಿಸಲು ಕ್ರಿಯಾಯೋಜನೆ ರೂಪಿಸುವುದು ಅಗತ್ಯ ಎಂದಿದ್ದಾರೆ. ಆಂತರಿಕವಾಗಿ ಸ್ಥಳಾಂತರಗೊಂಡ ವ್ಯಕ್ತಿಗಳು ವರ್ಷಗಳವರೆಗೆ, ದಶಕಗಳಿಂದಲೂ ಹೊರಗಿದ್ದಾರೆ. ಅದರಲ್ಲಿಯೂ ಕೇವಲ ಮೂರು ತಿಂಗಳುಗಳಲ್ಲಿ, ಉಕ್ರೇನ್ನಲ್ಲಿನ ಸಂಘರ್ಷದಿಂದ ೧೩ ದಶ ಲಕ್ಷ ಜನರು ಅವರ ಮನೆಗಳು ಮತ್ತು ಸಮುದಾಯಗಳಿಂದ ತೊರೆದಿದ್ದಾರೆ., ಅವರಲ್ಲಿ ಸುಮಾರು ಮೂರನೇ ಎರಡರಷ್ಟು ಜನರು ಉಕ್ರೇನ್ನಲ್ಲಿಯೇ ಇದ್ದಾರೆ ಎಂದು ಅವರು ಹೇಳಿದ್ದಾರೆ. ಕ್ರಿಯಾ ಕಾರ್ಯಸೂಚಿ ಮೂರು ಪ್ರಮುಖ ಉದ್ದೇಶಗಳನ್ನು ಹೊಂದಿದ್ದು ಆಂತರಿಕವಾಗಿ ಸ್ಥಳಾಂತರಗೊಂಡ ವ್ಯಕ್ತಿಗಳಿಗೆ ದೀರ್ಘ ಕಾಲದ ಪರಿಹಾರ ಕಂಡುಕೊಳ್ಳಲು ಸಹಾಯ ಮಾಡುವುದು, ಭವಿಷ್ಯದ ಸ್ಥಳಾಂತರದ ಬಿಕ್ಕಟ್ಟುಗಳನ್ನು ಉತ್ತಮವಾಗಿ ತಡೆಗಟ್ಟುವುದು ಮತ್ತು ಪ್ರಸ್ತುತ ಸ್ಥಳಾಂತರವನ್ನು ಎದುರಿಸುತ್ತಿರುವವರಿಗೆ ಬಲವಾದ ರಕ್ಷಣೆ ಮತ್ತು ಸಹಾಯವನ್ನು ಖಚಿತಪಡಿಸುವುದು ಅಗತ್ಯವಾಗಿದೆ ಎಂದು ಅವರು ಹೇಳಿದ್ದಾರೆ. ಸ್ಥಳಾಂತರ…