Author: admin

ಗುಬ್ಬಿ: ಹನುಮ ಜಯಂತಿಯನ್ನು ಶ್ರೀರಾಮ ಜಯಂತಿಯಂದೇ ಮಾಡಬೇಕಿದ್ದ ಶ್ರೀರಾಮ ಜಯಂತೋತ್ಸವದ ಕಾರ್ಯಕರ್ತರುಗಳು ಇಬ್ಬಗೆ ನೀತಿಯಿಂದ ಹಾಗೂ ಮೂರು ದಿನದ ಅವಧಿಯನ್ನು ಪೊಲೀಸ್ ಇಲಾಖೆಯು ವಿಸ್ತರಿಸಿ ಇಂದು ರಾಮ ರಥೋತ್ಸವವನ್ನು ಆಚರಿಸಲಾಯಿತು. ಪಟ್ಟಣದ ಶ್ರೀ ಚನ್ನ ಬಸವೇಶ್ವರ ದೇವಾಲಯದದಿಂದ ಪ್ರಾರಂಭ ವಾದ ಶ್ರೀ ರಾಮ ಉತ್ಸವವು ವಿವಿಧ ಜಾನಪದ ಕಲಾತಂಡದೊಂದಿಗೆ ಮೆರವಣಿಗೆ ಮೂಲಕ ಸಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ  ಪೊಲೀಸ್ ಬಂದೋಬಸ್ತಿನಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹಾಗೂ ಕಾರ್ಯಕರ್ತರ ಹುಮ್ಮಸ್ಸಿನೊಂದಿಗೆ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಮುಸ್ಲಿಂ ಬಾಂಧವರಿಂದ ರಾಮ ಭಕ್ತರಿಗೆ ಪಾನಕ ಮತ್ತು ಮಜ್ಜಿಗೆ ಗುಬ್ಬಿವೀರಣ್ಣ ಸರ್ಕಲ್ ಬಳಿ ವಿತರಿಸಿ, ನಾವು ಯಾವತ್ತು ಅಣ್ಣತಮ್ಮಂದಿರಂತೆ ಇರುತ್ತೇವೆಂದು ಕೇಸರಿ ಶಾಲನ್ನು ಹೊದ್ದು ರಾಮ ರಥೋತ್ಸವಕ್ಕೆ ಪುಷ್ಪಾರ್ಚನೆ ಮಾಡಿ ಬಾಂಧವ್ಯ ತೋರಿಸಿದರು. ಮೆರವಣಿಗೆಯಲ್ಲಿ  ಜೆಡಿಎಸ್ ನ ಕಾರ್ಯಕರ್ತರುಗಳು ಹಾಗೂ ಶಾಸಕ ಎಸ್.ಆರ್. ಶ್ರೀನಿವಾಸ್ ಬಿಜೆಪಿ ಮುಖಂಡ ದಿಲೀಪ್ ಕುಮಾರ್,  ಮಂಡಲದ ಅಧ್ಯಕ್ಷ ಪಂಚಾಕ್ಷರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೈರಪ್ಪ ಹಾಗೂ ನೂರಾರು ಸಂಖ್ಯೆಯ…

Read More

ಕೊರಟಗೆರೆ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ  ಕಾರ್ಯಕ್ರಮದ ಅಡಿಯಲ್ಲಿ ಈ ತಿಂಗಳ ಜಿಲ್ಲಾಧಿಕಾರಿಗಳ ನಡೆ ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿಯ ದೊಡ್ಡಪಾಲನಹಳ್ಳಿ  ಗ್ರಾಮದ ಕಡೆ  ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು  ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಗ್ರೇಡ್2 ತಹಶೀಲ್ದಾರ್  ನರಸಿಂಹಮೂರ್ತಿ ತಿಳಿಸಿದ್ದಾರೆ. ದೊಡ್ಡಪಾಲನಹಳ್ಳಿ ಗ್ರಾಮ ಪಂಚಾಯ್ತಿಯ ಎಲ್ಲಾ ಜನರು ತಮ್ಮ ಕುಂದುಕೊರತೆಗಳನ್ನು ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಅಡಿಯಲ್ಲಿ ಪರಿಹರಿಸಿಕೊಳ್ಳಬಹುದಾಗಿದೆ. ಏಪ್ರಿಲ್ 16ರ ಶನಿವಾರ ಬೆಳಗ್ಗೆ 10ಗಂಟೆಗೆ ದೊಡ್ಡ ಪಾಲನಾಹಳ್ಳಿ ಗ್ರಾಮಕ್ಕೆ  ಜಿಲ್ಲಾಧಿಕಾರಿಗಳು  ಆಗಮಿಸಲಿದ್ದು,  ತಾಲ್ಲೂಕಿನ ಎಲ್ಲಾ ಇಲಾಖೆಯ  ಅಧಿಕಾರಿಗಳು ನಿಮ್ಮ ಗ್ರಾಮದಲ್ಲಿ ವಾಸ್ತವ್ಯ ಹೂಡುತ್ತಾರೆ ಎಂದು ಅವರು ತಿಳಿಸಿದರು. ಕೋಳಾಲ ಹೋಬಳಿಯ ದೊಡ್ಡಪಾಲನಹಳ್ಳಿ  ಗ್ರಾಮದ ಎಲ್ಲ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಂಡು, ತಮ್ಮ ಊರಿನ  ಸಮಸ್ಯೆ, ತಮ್ಮ ಮನೆಯ ದಾಖಲಾತಿಗಳ ಸಮಸ್ಯೆ  ಹಾಗೂ ಜಮೀನುಗಳ ತಕರಾರು ಇದ್ದಲ್ಲಿ ಅಥವಾ ಯಾವುದೇ  ಕುಂದುಕೊರತೆಗಳನ್ನು ಇಲ್ಲಿ  ಯಾವ ಇಲಾಖೆಯ ಅಧಿಕಾರಿಗಳಿಗೆ  ಸಂಬಂಧಪಡುತ್ತದೆ  ಅಂತಹ ಅಧಿಕಾರಿಗಳಿಗೆ ನೇರವಾಗಿ ಲಿಖಿತ ಖಚಿತ ದಾಖಲೆಗಳೊಂದಿಗೆ ನೀವೂ ನೀಡಬಹುದು ಎಂದು ಮಾಹಿತಿ ನೀಡಿದರು. ಸಮಸ್ಯೆಗಳನ್ನು…

Read More

ಸಂತೋಷ್ ಪಾಟೀಲ್ ಅವರು ‘ನನ್ನ ಸಾವಿಗೆ ಈಶ್ವರಪ್ಪನವರೇ ನೇರ ಹೊಣೆ’ ಎಂದು ಡೆತ್ ನೋಟ್ ಸಂದೇಶ ರವಾನಿಸಿದ್ದಾರೆಂದು ವರದಿಯಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಈಶ್ವರಪ್ಪನವರನ್ನು ತಕ್ಷಣ ಸಂಪುಟದಿಂದ ವಜಾ ಮಾಡಿ ನ್ಯಾಯಾಂಗ ತನಿಖೆಗೆ ವಹಿಸಬೇಕು ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಜಿ ಉಪಮುಖ್ಯಮಂತ್ರಿ, ಶಾಸಕರಾದ ಡಾ.ಜಿ.ಪರಮೇಶ್ವರ್ ಸರ್ಕಾರವನ್ನು ಒತ್ತಾಯಿಸಿದರು. ಈ ಹಿಂದೆ ದೇಶದ ಪ್ರಧಾನಿಗಳು ಕಾಂಗ್ರೆಸ್ ಸರ್ಕಾರವನ್ನು 10% ಸರ್ಕಾರ ಎಂದು ಕರೆದಿದ್ದರು. ಆದರೆ ಈಗ ನೋಂದಾಯಿತ ಗುತ್ತಿಗೆದಾರರ ಸಂಘವೇ ರಾಜ್ಯ ಸರ್ಕಾರದ ಸಚಿವರು ಹಾಗೂ ಪ್ರತಿನಿಧಿಗಳು 40% ಕಮಿಷನ್ ಕೇಳುತ್ತಿರುವ ಬಗ್ಗೆ ಲಿಖಿತ ರೂಪದಲ್ಲಿ ದೂರು ನೀಡಿದ್ದರೂ, ಸಹ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ನಮಗೆ ಪ್ರಧಾನ ಮಂತ್ರಿಗಳೇ ಈ 40% ಕಮಿಷನ್ ಗೆ ಬೆಂಬಲವಾಗಿ ನಿಂತಿದ್ದಾರೆಯೇ ಎಂಬ ಅನುಮಾನ ಮೂಡುವಂತೆ ಮಾಡುತ್ತಿದೆ ಎಂದರು. ಕೆಲವು ವಿಷಯಗಳಲ್ಲಿ ಟ್ವಿಟ್ಟರ್ ನಲ್ಲಿ ಬರುವ ಸಂದೇಶಗಳಿಗೆ ತತ್ ಕ್ಷಣ ಪ್ರತಿಕ್ರಿಯೆ ನೀಡುವ ಪ್ರಧಾನಿಗಳು ಗುತ್ತಿಗೆದಾರರು ಲಿಖಿತ ರೂಪದಲ್ಲಿ…

Read More

ಬೆಂಗಳೂರು: ಬೆಳಗಾವಿಯ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪರವರನ್ನು ಕೂಡಲೇ ಬಂಧಿಸಬೇಕು ಎಂದು ಆಮ್‌ ಆದ್ಮಿ ಪಾರ್ಟಿ ನಾಯಕರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸ್ ಠಾಣೆಯಲ್ಲಿ ಈಶ್ವರಪ್ಪ ವಿರುದ್ಧ ದೂರು ದಾಖಲಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ, ‘ನನ್ನ ಸಾವಿಗೆ ಸಚಿವ ಈಶ್ವರಪ್ಪನವರೇ ಕಾರಣವೆಂದು ಡೆತ್‌ನೋಟ್‌ನಲ್ಲಿ ಸಂತೋಷ್‌ ಪಾಟೀಲ್‌ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಈಶ್ವರಪ್ಪನವರನ್ನು ಬಂಧಿಸಬೇಕು. ಇಲ್ಲದಿದ್ದರೆ ಅವರು ಸಾಕ್ಷಿ ನಾಶ ಮಾಡುವ ಸಾಧ್ಯತೆಯಿದೆ. ಸಚಿವರನ್ನು ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸಿದಾಗ ಮಾತ್ರ ಪ್ರಕರಣದ ಆಳ-ಅಗಲ ತಿಳಿಯಲಿದೆ’ ಎಂದು ಹೇಳಿದರು.‘ಗುತ್ತಿಗೆದಾರರಾಗಿದ್ದ ಸಂತೋಷ್‌ರವರು ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಳೆದ ವರ್ಷವೇ ಪ್ರಧಾನಿ ನರೇಂದ್ರ ಮೋದಿಯವರಿಗೆ ದೂರು ನೀಡಿದ್ದರು. ಆಗಲೇ ಈಶ್ವರಪ್ಪರವರನ್ನು ಸಚಿವ ಸಂಪುಟದಿಂದ ವಜಾ ಮಾಡಿದ್ದರೆ, ನಾವಿಂದು ಸಂತೋಷ್‌ರವರನ್ನು ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ. ಆದರೆ ಆ ಸಂಬಂಧ ಯಾವುದೇ ತನಿಖೆ…

Read More

ಕಾಳಿ ಸ್ವಾಮಿ ತುಂಬಿದ ಕೊಡ ಅಲ್ಲ ಅರ್ಧ ತುಂಬಿದ ಕೊಡ ಹಾಗಾಗಿ ಸರಿಯಾಗಿ ನಿಲ್ಲಲು ಸಾಧ್ಯವಾಗಿಲ್ಲ ಎಂದು ಶಾಸಕ ಎಸ್.ಆರ್.ಶ್ರೀ ನಿವಾಸ್ ಕಾಳಿ ಸ್ವಾಮಿ ವಿರುದ್ಧ ಗುಡುಗಿದರು. ತಾಲೂಕಿನ ನಿಟ್ಟೂರು ಗ್ರಾಮದ ಜೈನಿಗರ ಬಡಾವಣೆಯಲ್ಲಿ ಸುಮಾರು 24 ಲಕ್ಷ ರೂಗಳ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ ಕಾಳಿ ಸ್ವಾಮಿಯ ಬಗ್ಗೆ ನಾನು ಯಾವುದೇ ಮಾತನಾಡಿಲ್ಲ. ಯಾರು ಸಮಾಜದಲ್ಲಿ ಅಶಾಂತಿ ಮೂಡಿಸುವ ಸ್ವಾಮಿಗಳ ಬಗ್ಗೆ ಮಾತನಾಡಿದ್ದೇನೆ. ಹೊರತು ಈ ಕಾಳಿ ಸ್ವಾಮಿ ಯಾವ ಕಾರಣಕ್ಕೋಸ್ಕರ ಹೇಳಿಕೆ ನೀಡಿದ್ದಾರೋ ಗೊತ್ತಾಗುತ್ತಿಲ್ಲ. ಮಠಾಧೀಶರು ಹಾಗೂ ಸ್ವಾಮಿಗಳ ಮಾತುಗಳಲ್ಲಿ ಹಿಡಿತವಿರಬೇಕು. ಯಾವುದೇ ಸ್ವಾಮಿಗಳನ್ನು ನೋಡಿದರೆ ಕಾಲು ಮುಟ್ಟಿ ನಮಸ್ಕರಿಸುವ ಅಂತಹ ಭಾವನೆಯನ್ನು ಸಾರ್ವಜನಿಕರಲ್ಲಿ ಮೂಡಿಸುವಂತಹ ಸ್ವಾಮಿಗಳು ಲಕ್ಷಾಂತರ ಭಕ್ತರ ಸೇವೆಯಲ್ಲಿ ಹಾಗೂ ಸಮಾಜವನ್ನು ತಿದ್ದುವಂತಹ ಸ್ವಾಮಿಗಳು ಇದ್ದಾರೆ ಎಂದರು. ಸಮಾಜದಲ್ಲಿ ಒಡಕು ಮೂಡಿಸುವಂತಹ ಯಾವುದೇ ವ್ಯಕ್ತಿಯಾಗಲಿ ಆತನನ್ನು ಶಿಕ್ಷಿಸುವುದು ಅತ್ಯವಶ್ಯಕ. ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಗಳ ಬಳಿ…

Read More

ಕನ್ನಡ ಚಿತ್ರರಂಗದ ಖ್ಯಾತ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಿನ್ನೆ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಪವಿತ್ರ ರಂಜಾನ್ ಮಾಸದ ಇಫ್ತಿಯಾರ್ ಕೂಟದಲ್ಲಿ ಪಾಲ್ಗೊಂಡು, ಆತಿಥ್ಯ ಸ್ವೀಕರಿಸಿ ಶುಭ ಹಾರೈಸಿದರು. ನಿರಂತರ ಕೆಲಸದ ನಡುವೆಯೂ ಬಿಡುವು ಮಾಡಿಕೊಂಡು ತಮ್ಮ ನಿವಾಸಕ್ಕೆ ಆಗಮಿಸಿ, ಆತಿಥ್ಯ ಸ್ವೀಕರಿಸಿದ್ದಕ್ಕಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಅವರು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಇತರ ಅತಿಥಿಗಳಿಗೆ ಧನ್ಯವಾದ ತಿಳಿಸಿದರು. ಈ ವೇಳೆ ನಟ ವಿನೋದ್ ಪ್ರಭಾಕರ್, ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್, ಮುಖಂಡರಾದ ಇಮ್ತಿಯಾಜ್ ಫಾರುಖ್ ಖಾನ್, ಜಿ.ಎ ಬಾವಾ, ಅಲ್ತಾಫ್ ಖಾನ್, ಶೋಯೆಬ್‌ ಖಾನ್ ಉಪಸ್ಥಿತರಿದ್ದರು. ವರದಿ ಆಂಟೋನಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತೀವ್ರ ಭೂ ವಿವಾದಕ್ಕೆ ಗುರಿಯಾಗಿದ್ದ ಡಾ.ಕೆ.ಶಿವರಾಮಕಾರಂತ ಬಡಾವಣೆ ಸಂಬಂಧ ಬರೋಬ್ಬರಿ ೧೪೭೫ ಕಟ್ಟಡಗಳಿಗೆ ಸಕ್ರಮಗೊಳಿಸುವುದಾಗಿ ಬಿಡಿಎ ಸಮಿತಿ ಪ್ರಕಟಿಸಿದ್ದು, ಶೀಘ್ರದಲ್ಲೇ ಸಕ್ರಮ ಪ್ರಮಾಣ ಪತ್ರ ಹಂಚಿಕೆ ಮಾಡಲಿದೆ.ನಗರದಲ್ಲಿಂದು ಬಿಡಿಎ ಕೇಂದ್ರ ಕಚೇರಿಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೂತನವಾಗಿ ಅಭಿವೃದ್ಧಿಪಡಿಸುತ್ತಿರುವ ಡಾ. ಶಿವರಾಮ ಕಾರಂತ ಬಡಾವಣೆ ಕುರಿತು ಸರ್ಕಾರ ನೇಮಿಸಿರುವ ಸಮಿತಿ ಅಧ್ಯಕ್ಷರೂ ಆದ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಸುಪ್ರೀಂ ಕೋರ್ಟಿನ ತೀರ್ಪಿನ ಅನ್ವಯ ಡಾ.ಶಿವರಾಂ ಕಾರಂತ ಬಡಾವಣೆಗಳೆಂದು ಅಧಿಸೂಚನೆ ಹೊರಡಿಸಲಾಗಿದ್ದ ೧೭ ಗ್ರಾಮಗಳ ೧೪೭೫ ಕಟ್ಟಡಗಳಿಗೆ ಅನುಮೋದನೆ ನೀಡಿದೆ. ಅದರಂತೆ ಈ ಎಲ್ಲಾ ಕಟ್ಟಡ ಮಾಲೀಕರಿಗೆ ಸಕ್ರಮ ಪ್ರಮಾಣ ಪತ್ರಗಳನ್ನು ನೀಡಲು ಸಮಿತಿ ಉದ್ದೇಶಿಸಿದೆ ಎಂದು ಅವರು ತಿಳಿಸಿದರು.ಇನ್ನೂ, ಡಾ. ಕೆ. ಶಿವರಾಮಕಾರಂತ ಬಡಾವಣೆಗೆ ಗೊತ್ತುಪಡಿಸಿದ ಜಾಗದಲ್ಲಿ ಕಟ್ಟಡ ನಿರ್ಮಿಸಿದ್ದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅರ್ಜಿಗಳ ಆಹ್ವಾನಿಸುವ ಪ್ರಕ್ರಿಯೆ ನಡೆಸಲಾಗಿತ್ತು.ಅದರಂತೆ ೭,೧೬೧ ಅರ್ಜಿಗಳು ಬಂದಿವೆ. ಈ ಪೈಕಿ ೪೨೯ ಅರ್ಜಿಗಳಿಗೆ ದಾಖಲೆ ಇಲ್ಲ. ಹೀಗಾಗಿ, ಗಣನೆಗೆ ತೆಗೆದುಕೊಂಡಿಲ್ಲ ಎಂದು…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ದಕ್ಷಿಣ ಕಾಶಿ  ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಬೀಗ ಮುರಿದು ಒಳಗೆ ನುಗ್ಗಿದ ಕಳ್ಳರು  ಎರಡು ಹುಂಡಿಗಳನ್ನು ಒಡೆದು ಕಳ್ಳತನ ನಡೆಸಿದ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ಎರಡು ಹುಂಡಿಗಳಲ್ಲಿನ  ಹಣ, ಬೆಳ್ಳಿ , ಬಂಗಾರ, ಹಾಗೂ ಬೆಳ್ಳಿ ಪ್ರಭಾವಳಿ , ಮುಖ್ ಬದ್ನ , ನಾಗಾಭರಣಗಳನ್ನು ಕಳವು ಮಾಡಲಾಗಿದೆ. ಎಂದಿನಂತೆ ಇಂದು ದೇವಾಲಯದ ಅರ್ಚಕರು ಮಂಗಳವಾರ ರಾತ್ರಿ ದಿನನಿತ್ಯದಂತೆ ಪೂಜೆ ಮುಗಿಸಿಕೊಂಡು ದೇವಾಲಯದ ಬೀಗ ಹಾಕಿ ಹೋಗಿದ್ದರು. ಇಂದು ಬೆಳಗ್ಗೆ ದೇವಾಲಯದ ಅರ್ಚಕ ವಿಶ್ವನಾಥ್ ದೇವಸ್ಥಾನಕ್ಕೆ ಆಗಮಿಸಿದ ವೇಳೆ ಕಳವು ನಡೆದಿರುವುದು ಬೆಳಕಿಗೆ ಬಂದಿದ್ದು, ಅವರು ತಕ್ಷಣವೇ ಸ್ಥಳೀಯ ಆಡಳಿತ ಮಂಡಳಿ  ಅಧಿಕಾರಿಗಳಿಗೆ ಹಾಗೂ ಹಿರಿಯೂರು ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಹಿರಿಯೂರು ತಾಲ್ಲೂಕಿನ ಕಂದಾಯ ಇಲಾಖೆಯ ಎ ಡಿ ಎಮ್ ಸಿ      ಶಿರಸ್ತರಾದ  ತಿಪ್ಪೇಸ್ವಾಮಿ, ಗ್ರಾಮ ಲೆಕ್ಕಾಧಿಕಾರಿಯಾದ  ಮಾಯವರ್ಮ , ಬಬ್ಬೂರು ಶಿವಣ್ಣ, ದ್ವಿದಸ ಸಹಾಯಕರಾದ ಚನ್ನಬಸವರಾಜು ಹಾಗೂ ಹಿರಿಯೂರು…

Read More

ವರ್ಗಾವಣೆ ಬೇಕಿದ್ದಲ್ಲಿ ಒಂದು ರಾತ್ರಿಯ ಮಟ್ಟಿಗೆ ನಿನ್ನ ಹೆಂಡತಿಯನ್ನು ನನ್ನ ಬಳಿ ಕಳುಹಿಸು’ ಎಂದು ಹೇಳಿದ್ದ ವಿದ್ಯುತ್ ಇಲಾಖೆಯ ಮೇಲಧಿಕಾರಿಯ ಮಾತಿನಿಂದ ನೊಂದು ಉದ್ಯೋಗಿಯೋರ್ವ ಡೀಸೆಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಲಖೀಂಪುರ್‌ನಲ್ಲಿ ನಡೆದಿದೆ. ಲೈನ್ಮನ್ ಗೋಕುಲ ಪ್ರಸಾದ್ (೪೫) ಲಖಿಂಪುರದ ಜ್ಯೂನಿಯರ್ ಇಂಜಿನಿಯರ್ ಕಚೇರಿಯ ಹೊರಗೆ ತನ್ನ ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜ್ಯೂನಿಯರ್ ಇಂಜಿನಿಯರ್ ನಾಗೇಂದ್ರ ಕುಮಾರ ಮತ್ತು ಓರ್ವ ಗುಮಾಸ್ತೆಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪ್ರಸಾದ್ ಮೈಗೆ ಬೆಂಕಿ ಹಚ್ಚಿಕೊಂಡ ಬಳಿಕ ಚಿತ್ರೀಕರಿಸಲಾಗಿದ್ದ ವೀಡಿಯೊದಲ್ಲಿ ತೀವ್ರ ನೋವಿನಲ್ಲಿಯೂ ತನ್ನ ಕೃತ್ಯಕ್ಕೆ ಕಾರಣವನ್ನು ತಿಳಿಸಿದ್ದಾರೆ. ಕುಮಾರ ಮತ್ತು ಆತನ ಸಹಾಯಕ ತನಗೆ ಕಿರುಕುಳ ನೀಡುತ್ತಿದ್ದರು, ತಾನು ಪೊಲೀಸರ ಮೊರೆ ಹೋಗಿದ್ದರೂ ಅವರು ನೆರವಾಗಿರಲಿಲ್ಲ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪ್ರತ್ಯೇಕ ವೀಡಿಯೋ ಮಾಡಿ ಪ್ರತಿಕ್ರಿಯೆ ನೀಡಿರುವ ಪ್ರಸಾದ್‌ನ ಪತ್ರಿ, ಆರೋಪಿಗಳು ಮೂರು…

Read More

ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಇಂದಿನಿಂದ ಪಕ್ಷದ ನಾಯಕರುಗಳು ಮೂರು ತಂಡಗಳಲ್ಲಿ ರಾಜ್ಯ ಪ್ರವಾಸ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಿಜೆಪಿ ಉಸ್ತುವಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ಸಿಂಗ್, ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲು ನೇತೃತ್ವದ ಮೂರು ತಂಡಗಳಲ್ಲಿ ಬಿಜೆಪಿಯ ಪ್ರಮುಖ ಮುಖಂಡರುಗಳು, ಶಾಸಕರು, ಸಂಸದರು ಪಕ್ಷ ಬಲವರ್ಧನೆಗೆ ಇಂದಿನಿಂದ ಏ. 28ರವರೆಗೆ ರಾಜ್ಯಾದ್ಯಂತ ಪ್ರವಾಸ ನಡೆಸಿ ಸಭೆ ಸಮಾವೇಶಗಳಲ್ಲಿ ಭಾಗಿಯಾಗುವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ತಂಡದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ, ಕೇಂದ್ರ ಸಚಿವ ಹ್ರಹ್ಲಾದ್ ಜೋಷಿ, ಸಚಿವರಾದ ಡಾ. ಅಶ್ವತ್ಥ ನಾರಾಯಣ, ಬಿ. ಶ್ರೀರಾಮುಲು, ಬಿಜೆಪಿ ರಾಜ್ಯ ಉಪಾಧ್ಯಕ್ಷರುಗಳಾದ ಬಿ.ವೈ ವಿಜಯೇಂದ್ರ,, ಲಕ್ಷಣ ಸವದಿ, ನಿರ್ಮಲ್‌ಕುಮಾರ್ ಸುರಾನಾ, ನಯನಾ ಗಣೇಶ್ ಇವರುಗಳಿದ್ದು, ರಾಜ್ಯ ಕಾರ್ಯದರ್ಶಿ ವಿನಯ್ ಬಿದಿರೆ ಈ ತಂಡದ ಸಂಯೋಜಕರಾಗಿದ್ದು, ಈ ತಂಡ ಇಂದು ಮತ್ತು ನಾಳೆ ಮಂಗಳೂರು ವಿಭಾಗದಲ್ಲಿ ಸರಣಿ ಸಭೆ ನಡೆಸಲಿದ್ದು, 19,  20 ರಂದು ಶಿವಮೊಗ್ಗ ವಿಭಾಗದಲ್ಲಿ,…

Read More