Subscribe to Updates
Get the latest creative news from FooBar about art, design and business.
- ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ
- ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ
- ರಾಜ್ಯದಲ್ಲಿರೋದು ಚುನಾಯಿತ ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್.ಅಶೋಕ್ ಆರೋಪ
- ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ
- ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ
- 3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ
- ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
Author: admin
ಹಿರಿಯೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಪತಿಯ ದರ್ಬಾರ್ ಹಾಗೂ ಇದರ ವಿರುದ್ಧ ಕ್ರಮಕೈಗೊಳ್ಳದೇ ಅಸಹಾಯಕತೆ ವ್ಯಕ್ತಪಡಿಸುತ್ತಿರುವ ಜಿಲ್ಲಾಡಳಿತದ ವಿರುದ್ಧ ಮಾಜಿ ಸಚಿವ ಡಿ.ಸುಧಾಕರ್ ಹಾಗೂ ಹಿರಿಯೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಆದಿವಾಲ ಗ್ರಾಮದಲ್ಲಿ ರೂ. 25 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಹೈಟೆಕ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆಯ ಸರ್ಕಾರಿ ಕಾರ್ಯಕ್ರಮದಲ್ಲಿ ಹಿರಿಯೂರು ಶಾಸಕಿಯ ಪತಿಯ ಫೋಟೋವನ್ನು ದೊಡ್ಡದಾಗಿ ಹಾಕಲಾಗಿತ್ತು. ಜೊತೆಗೆ ಶಾಸಕಿ ಮಾಡಬೇಕಾದ ಭಾಷಣವನ್ನು ಅವರ ಪತಿ ಮಾಡಿದ್ದರು ಇದರ ಬಗ್ಗೆ ಕ್ರಮಕೈಗೊಳ್ಳಬೇಕಾದ ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ, ನಾನು ಜಿಲ್ಲಾಧಿಕಾರಿಯಾಗಿದ್ದರೂ ಬಹಳ ಅಸಹಾಯಕಳಾಗಿದ್ದೇನೆ ಎಂದು ಪತ್ರಿಕೆಗಳಿಗೆ ಹೇಳಿಕೆ ನೀಡಿದ್ದರು. ಇಂತಹ ಹೇಳಿಕೆ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಖಾದಿರಮೇಶ್ ಹೇಳಿದರು. ಶಾಸಕಿ ಪೂರ್ಣಿಮಾಶ್ರೀನಿವಾಸ್ ರವರ ಪತಿ ಡಿ.ಟಿ ಶ್ರೀನಿವಾಸ್ ರವರು ಹಿರಿಯೂರು ತಾಲ್ಲೂಕಿನ ಪ್ರತಿಯೊಂದು ಗ್ರಾಮ ಪಂಚಾಯತಿಯ ಪಿ ಡಿ ಓ ಅಧಿಕಾರಿಗಳನ್ನು ಕರೆದುಕೊಂಡು, …
ಕೋಮುವಾದದ ವಿಷ ಕಾರಲು ಕೇಸರಿ ವಸ್ತ್ರವನ್ನು ಬಳಸುತ್ತಿರುವ ಹಿಂದೂ ಮತೀಯವಾದಿಗಳು ತಿಳಿದುಕೊಳ್ಳಬೇಕಾದ ವಾಸ್ತವ ಸಂಗತಿ ಏನೆಂದರೆ…, ಕೇಸರಿ ವಸ್ತ್ರ ಮೂಲದಲ್ಲಿ ಬುದ್ಧಗುರು, ಬಸವಾದಿ ಪ್ರಮಥ ಶರಣರು, ಪಂಚಗಣಾಧೀಶರು ಹಾಗೂ ದೇಶಿ ಯೋಗಧಾರೆಯ ಸಾಧು ಸನ್ಯಾಸಿ ಯೋಗಿಗಳು ಧರಿಸುತ್ತಿದ್ದ ಧರ್ಮಾತೀತ ವಸ್ತ್ರವಾಗಿತ್ತು. ಡಾ.ಬಿ.ಆರ್.ಅಂಬೇಡ್ಕರ್ ಅವರು ಬೌದ್ಧ ಧರ್ಮದ ದೀಕ್ಷೆಯನ್ನು ಪಡೆದ ಬಳಿಕ ಬುದ್ಧಗುರುವಿನಂತೆ ಇದೇ ಕೇಸರಿ ಚೀವರವನ್ನು ಧರಿಸಿದ್ದರು. ಆಗೆಲ್ಲಾ ಕೇಸರಿ ಶಾಲು ಹಿಂದೂ ಮತೀಯವಾದಿಗಳ ಲಾಂಛನವಾಗಿರಲಿಲ್ಲ. ಇಂತಹ ಕೇಸರಿಯನ್ನು ಹಿಂದೂಧರ್ಮದ ಗುರುತಿನ ಬಣ್ಣದ ವಸ್ತ್ರವನ್ನಾಗಿ ಹೈಜಾಕ್ ಮಾಡಿರುವ ಹಿಂದೂ ಮತೀಯವಾದಿಗಳು ಹಚ್ಚುತ್ತಿರುವ ಬೆಂಕಿಗೆ ವಿದ್ಯಾರ್ಥಿಗಳು ದೀಪದ ಹುಳುಗಳಂತೆ ಆಕರ್ಷಿತವಾಗಬಾರದು. ದೀಪದ ಹುಳುಗಳು ರೆಕ್ಕೆ ಸುಟ್ಟು ಬೀಳುವಂತೆ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಸುಟ್ಟುಕೊಳ್ಳಬಾರದು. ನ್ಯಾಯಾಲಯವು ಬುದ್ಧಗುರು ಬಸವಣ್ಣ ಅಂಬೇಡ್ಕರ್ ಬಳಸಿರುವ ಕೇಸರಿ ವಸ್ತ್ರವನ್ನು ಕೋಮುವಾದವನ್ನು ಪ್ರಚೋದಿಸುವ ಲಾಂಛನವನ್ನಾಗಿ ಯಾವುದೇ ವ್ಯಕ್ತಿ ಅಥವಾ ಸಂಘಟನೆಗಳು ಬಳಸಿಕೊಳ್ಳಬಾರದೆಂದು ನಿಷೇಧ ಹೇರಲು ನಾವು ಸರ್ಕಾರವನ್ನು ಒತ್ತಾಯಿಸುವ ಅಗತ್ಯವಿದೆ. ಡಾ.ವಡ್ಡಗೆರೆ ನಾಗರಾಜಯ್ಯ 8722724174 ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಮಧುಗಿರಿ: ಪಟ್ಟಣದಲ್ಲಿರುವ ಐತಿಹಾಸಿಕ ಶ್ರೀವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ರಥಸಪ್ತಮಿ ಅಂಗವಾಗಿ’ ಬ್ರಹ್ಮ ರಥೋತ್ಸವ ಭಕ್ತರ ಸಮ್ಮುಖದಲ್ಲಿ ಮಂಗಳವಾರ ನಡೆಸಲಾಯಿತು. ಉತ್ಸವಮೂರ್ತಿಯನ್ನು ದೇವಸ್ಥಾನದ ಪ್ರಾಂಗಣದಲ್ಲಿ ಮೂರು ಬಾರಿ ಪ್ರಾಕಾರೋತ್ಸವ ನಡೆಸಿ ದೇವಸ್ಥಾನದ ಮುಂಭಾಗದಲ್ಲಿ ರಥೋತ್ಸವಕ್ಕೆ ಧಾರ್ಮಿಕ ವಿಧಿವಿಧಾನಗಳನ್ನು ಪೂರೈಸಿ ಮಂಗಳವಾದ್ಯಗಳೊಂದಿಗೆ ತಂದು ಕುಳ್ಳಿರಿಸಲಾಯಿತು. ಪೂಜೆ ನಡೆಸಿ ರಥವನ್ನು ಎಳೆಯಲಾಯಿತು. ಈ ವೇಳೆ ಭಕ್ತರು ಬಾಳೆಹಣ್ಣನ್ನು ರಥದ ಮೇಲೆ ಎಸೆದು ತಮ್ಮ ಇಷ್ಟಾರ್ಥಗಳು ಸಿದ್ದಿಗಾಗಿ ಪ್ರಾರ್ಥಿಸಿಕೊಂಡರು. ಈ ವೇಳೆ ಧಾರ್ಮಿಕ ಮುಖಂಡ ಡಾ.ಎಂ.ಜಿ. ಶ್ರೀನಿವಾಸ ಮೂರ್ತಿ, ವಕೀಲರ ಸಂಘದ ಅಧ್ಯಕ್ಷ ಪಿ.ಸಿ.ಕೃಷ್ಣಾರೆಡ್ಡಿ, ಶಂಕರ ಸೇವಾ ಸಮಿತಿಯ ಬಿ.ಆರ್.ಸತ್ಯನಾರಾಯಣ, ಕಲಾರಂಗದ ಅಧ್ಯಕ್ಷ ಚಿ.ಸೂ.ಕೃಷ್ಣಮೂರ್ತಿ, ಪುರಸಭಾ ಮಾಜಿ ಅಧ್ಯಕ್ಷ ಎಂ.ವಿ.ಗೋವಿಂದರಾಜು, ಗ್ರೇಡ್-2 ತಹಸೀಲ್ದಾರ್ ಶ್ರೀನಿವಾಸ್, ರೆವಿನ್ಯೂ ಇನ್ಸ್ ಪೆಕ್ಟರ್ ಜಯರಾಮಯ್ಯ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಸಹನಾ ನಾಗೇಶ್, ಪುರಸಭಾ ಸದಸ್ಯ ಲಾಲಾಪೇಟೆ ಮಂಜುನಾಥ್, ಮಾಜಿ ಸದಸ್ಯ ರುಗಳಾದ ಆರ್.ಎಲ್.ಎಸ್. ರಮೇಶ್ ,ಮಂಜುನಾಥ್, ಸೇವಾಕರ್ತರಾದ ದೂಲಿ ಬಾಬು, ಯತೀಶ್ ಬಾಬು ,ಎಸ್ ಬಿ ಐ ಗೋಪಾಲ್, ಜಿ. ಆರ್.ಧನ್…
ಪಾವಗಡ: ತಾಲ್ಲೂಕು ಗುಜ್ಜನಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆಮ್ಮನಹಳ್ಳಿ ಗ್ರಾಮದಲ್ಲಿ 20 ಲಕ್ಷ ವೆಚ್ಚದ ಸಿಸಿ ರಸ್ತೆ, ಸಿ ಆರ್ ಪಾಳ್ಯ ಗ್ರಾಮದಲ್ಲಿ 10 ಲಕ್ಷ ವೆಚ್ಚದ ಸಿಸಿ ರಸ್ತೆ, ಎ ಎಚ್ ಪಾಳ್ಯ ಗ್ರಾಮದಲ್ಲಿ 10 ಲಕ್ಷ ವೆಚ್ಚದ ಸಿಸಿ ರಸ್ತೆ, ಗುಜ್ಜನಡು ಗ್ರಾಮದಲ್ಲಿ 15 ಲಕ್ಷ ವೆಚ್ಚದ ಸಿಸಿ ರಸ್ತೆ ನಿರ್ಮಾಣಕ್ಕೆ ಶಾಸಕ ವೆಂಕಟರಮಣಪ್ಪ ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಮುಖಂಡರುಗಳಾದ ಬೋಜರಾಜ್, ನಂಜುಂಡಪ್ಪ,ಸೀನಪ್ಪ, ಡಿ.ಮಂಜುನಾಥ್, ಕೆ.ಎಚ್. ಪ್ರಕಾಶ್, ಸ್ವಾರಣ್ಣ,ಅನಿಲ್ ಕುಮಾರ್, ಜಿ.ಸಿ.ದೇವರಾಜ್,ಗುತ್ತಿಗೆದಾರರಾದ ಕೋಡೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ಸುಜಿತ್,ಮಹಿಳಾ ನಾಯಕಿ ನಾಗಮ್ಮ, ಪೂಜಾರಪ್ಪ, ಸಾಮಾಜಿಕ ಜಾಲತಾಣ ಸದಸ್ಯ ಪಾಪಣ್ಣ ವಿ.ಹೆಚ್. ಪಾಳ್ಯ ಸೇರಿದಂತೆ ಲೋಕೋಪಯೋಗಿ ಇಲಾಖೆ ಎಇಇ ಅನಿಲ್ ಕುಮಾರ್, ಸತ್ಯೆಂದ್ರ ಪ್ರಸಾದ್ ಮತ್ತಿತರರು ಹಾಜರಿದ್ದರು. ವರದಿ: ದೇವರಹಟ್ಟಿ ನಾಗರಾಜು, ಕಸಬಾ ಹೋಬಳಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಸರಗೂರು: ಪಟ್ಟಣದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ರಾಯಚೂರು ಜಿಲ್ಲೆ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡನ ಸೇವೆಯಿಂದ ವಜಾಗೊಳಿಸಿ ಬೃಹತ್ ಪ್ರತಿಭಟನೆ ನಡಿಸಲಾಯಿತು. ಸರಗೂರು ಪಟ್ಟಣದ ಅಂಗಡಿ ಮುಗ್ಗಟ್ಟು ಮಾಲಿಕರು ಸೇರಿದಂತೆ, ಸರಗೂರು ಬಂದ್ ಗೆ ಸಂವಿಧಾನ ಸಂರಕ್ಷಣಾ ಸಮಿತಿ ವರ್ತಕರ ಮಂಡಳಿ ಕರೆ ನೀಡಿದ ಬಳಿಕ ಎಲ್ಲಾ ಬಂದ್ ಗೆ ಬೆಂಬಲ ನೀಡಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಭವನದಿಂದ ಶುರುವಾದ ಮೆರವಣಿಗೆ ತಹಶೀಲ್ದಾರ್ ಕಚೇರಿವರೆಗೆ ನಡೆಯಿತು. ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳಿಂದ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಅನುಯಾಯಿಗಳು , ಹೆಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನ ಜನರು ಭಾರೀ ಜನಸಂಖ್ಯೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಇದೇ ವೇಳೆ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಿ ಮತ್ತು ಗಡಿಪಾರು ಮಾಡಿ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ, ಪ.ಪಂ. ಸದಸ್ಯ ಎಸ್.ಎಲ್.ರಾಜಣ್ಣ, ಮಲ್ಲಿಕಾರ್ಜುನ ಗೌಡ ಕಿಡಿಗೇಡಿ, ದೇಶದ್ರೋಹಿ, ಮನುವಾದಿ ಮನಸ್ಥಿತಿಯ ನ್ಯಾಯಾಧೀಶ ಎಂದು ಆಕ್ರೋಶ ವ್ಯಕ್ತಪಡಿಸಿ, ಅವರನ್ನು ತಕ್ಷಣವೇ ವಜಾಗೊಳಿಸಿ, ಗಡಿಪಾರು ಮಾಡಲು ಒತ್ತಾಯಿಸಿದರು. ಮೈಸೂರು…
ತುಮಕೂರು: ಜಿಲ್ಲೆ ಕೊರಟಗೆರೆ ತಾಲ್ಲೂಕು ಕೋಳಾಲ ಹೋಬಳಿ ತೀತಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೀತಾ ಗ್ರಾಮದಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಒನ್ ಕಾರ್ಯಕ್ರಮವನ್ನು ಕೊರಟಗೆರೆ ತಾಲೂಕು ದಂಡಾಧಿಕಾರಿಗಳಾದ ನಹಿದಾ ಜಮ್ ಜಮ್ ರವರು ಉದ್ಘಾಟನೆ ಮಾಡಿದರು ಈ ಯೋಜನೆಯಲ್ಲಿ ಸರ್ಕಾರದ 790 ಹೆಚ್ಚು ಸೇವೆಗಳು ದೊರೆಯಲಿವೆ ಎಂದು ದಂಡಾಧಿಕಾರಿಗಳು, ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಕೋಳಾಲ ಉಪತಹಶೀಲ್ದಾರ್ ಮಧುಚಂದ್ರ, ಕೊರಟಗೆರೆ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕರವೇ ನಟರಾಜ್ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಯತಿಂದ್ರ ಕುಮಾರ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಗದೀಶ್ ಟಿ.ಕೆ ಮತ್ತು ವಿ.ಎ.ಮಂಜುನಾಥ್ ಮತ್ತು ಗ್ರಾಮ ಒನ್ ಸೇವಾ ಕರ್ತರಾದ ಜಾನಕಿ ಟಿ.ಕೆ. ಮತ್ತು ನರಸಿಂಹಮೂರ್ತಿ ಹಾಜರಿದ್ದರು. ವರದಿ : ಸಿದ್ದೇಶ್ ನೇಗಲಾಲ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy…
ತುಮಕೂರು: ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ನ್ಯಾಯಾಧೀಶ ಮಲ್ಲಿಕಾರ್ಜುನ್ ಗೌಡ ಅವರನ್ನು ಬಂಧಿಸಲು ಆಗ್ರಹಿಸಿ, ದಲಿತ ಸಂಘಟನೆಗಳ ಒಕ್ಕೂಟದಿಂದ ‘ರಾಯಚೂರು ಚಲೋ’ ನಡೆಯಿತು. ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಲಿತ ಸಂಘಟನೆಯ ಒಕ್ಕೂಟದ ಮುಖಂಡರುಗಳು, ನಾವು ರಾಯಚೂರು ತಲುಪುವುದರೊಳಗೆ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರನ್ನು ಸೇವೆಯಿಂದ ಅಮಾನತು ಮಾಡಿ, ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯ ವ್ಯಾಪ್ತಿ ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ವೇದಿಕೆಯಿಂದ ತೆಗೆದರೆ ಮಾತ್ರ ಧ್ವಜಾರೋಹಣ ಮಾಡುವುದಾಗಿ ಹೇಳಿದ್ದಲ್ಲದೆ, ಅದನ್ನು ಮಾಡಿಯೇ ತೋರಿಸಿದ ಜಿಲ್ಲಾ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಪಾಟೀಲರು ದುರಹಂಕಾರಕ್ಕೆ ಪಾಠ ಕಲಿಸಬೇಕು ಮತ್ತು ಅಪರಾಧ ಕಾನೂನಿನ ಕಠಿಣ ಶಿಕ್ಷೆ ಆಗಬೇಕೆಂದು ರಾಜ್ಯ ವ್ಯಾಪ್ತಿ ಆಕ್ರೋಶ ಭುಗಿಲೆದ್ದಿದೆ. ಈತನ ಮೇಲೆ ಪೊಲೀಸ್ ಕೇಸು ದಾಖಲಿಸಿ ಜೈಲಿಗೆ ಹಾಕಲು…
ತುಮಕೂರು: ಕೇಂದ್ರ ಸರ್ಕಾರದ 290 ಕೋಟಿ ಹಾಗೂ ರಾಜ್ಯ ಸರ್ಕಾರದ 297 ಕೋಟಿ ರೂ. ಅನುದಾನದಲ್ಲಿ ನಗರದಲ್ಲಿ ಅನುಷ್ಠಾನಗೊಂಡಿರುವ ಸ್ಮಾರ್ಟ್ ಸಿಟಿ ಅಭಿವೃದ್ಧಿ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಮುಂದಿನ ದಿನ ಗಳಲ್ಲಿ ಹೋರಾಟ ಹಮ್ಮಿಕೊಳ್ಳುವುದಾಗಿ ಮಾಜಿ ಶಾಸಕ ಡಾ.ಎಸ್. ರಫೀಕ್ ಅಹಮದ್ ಎಚ್ಚರಿಕೆ ನೀಡಿದರು. ನಗರದಲ್ಲಿ ಇಂದು ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸ್ಮಾರ್ಟ್ ಸಿಟಿ ಯೋಜನೆಗೆ ಸಂಬಂಧಿಸಿದ ಇಲಾಖೆಯವರಿಗೆ ಪತ್ರ ಬರೆದು ಮಾಹಿತಿ ಕೇಳಿದರೆ ಪೂರ್ಣ ಮಾಹಿತಿಯನ್ನು ಕೊಟ್ಟಿಲ್ಲ. ಬಂದಿರುವ ಅನುದಾನ ಖರ್ಚಾಗಿರುವುದೆಷ್ಟು, ಕಾಮ ಗಾರಿಗಳ ಪ್ರಗತಿಗೆ ಸಂಬಂಧಿ ಸಿದಂತೆ ಅಪೂರ್ಣ ಮಾಹಿತಿ ನೀಡಿದ್ದು, ಇದರ ವಿರುದ್ಧ ಸ್ಮಾರ್ಟ್ ಸಿಟಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು. ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ, ಗ್ರಂಥಾಲಯ, ಕ್ರೀಡಾಂಗಣ, ಟ್ರಾಮಸೆಂಟರ್ ಇತ್ಯಾದಿ ಕಾಮಗಾರಿಗಳ ಜೊತೆಗೆ ಅಲ್ಲಲ್ಲಿ ಗಿಡಗಳನ್ನು ನೆಟ್ಟು ಬೆಳೆಸುತ್ತಿದ್ದು, ಈ ಎಲ್ಲ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು…
ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ರಾಜಕೀಯ ಬೇಡ ಎನ್ನುತ್ತಲೇ ತಾವು ಸ್ಪರ್ಧೆ ಮಾಡೋ ಕ್ಷೇತ್ರಗಳ ಪಟ್ಟಿಯನ್ನು ತೆರೆದಿಡುವ ಮೂಲಕ ರಾಜಕೀಯ ಪ್ರವೇಶದ ಸುಳಿವು ನೀಡಿದ್ದಾರೆ. ಬಳ್ಳಾರಿಯಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ನನಗೆ ಬಳ್ಳಾರಿ, ಗಂಗಾವತಿ, ಕೊಪ್ಪಳ, ಯಲಬುರ್ಗಾ, ಬೆಂಗಳೂರಿನ ಕೆ.ಆರ್.ಪುರಂ, ಬಿಟಿಎಂ ಲೇಔಟ್, ಕೋಲಾರದಲ್ಲಿ ಸ್ಪರ್ಧಿಸುವಂತೆ ಡಿಮ್ಯಾಂಡ್ ಮಾಡುತ್ತಿದ್ದಾರೆ ಎಂದು ಜನಾರ್ದನ್ ರೆಡ್ಡಿ ಹೇಳಿದ್ದಾರೆ. ನನ್ನ ಸಹೋದರರು ಶಾಸಕರಾಗಿದ್ದಾರೆ, ನಾನೂ ಶಾಸಕನಿದ್ದಂತೆ. ನನ್ನ ಮಿತ್ರ ಶ್ರೀರಾಮುಲು ಬಳ್ಳಾರಿ ಉಸ್ತುವಾರಿಯಾಗಿದ್ದಾರೆ. ಅವರು ಮಂತ್ರಿ ಆದರೆ ನಾನು ಕೂಡ ಮಂತ್ರಿಯಾದಂತೆ. ನಾನು ಕೇವಲ ರಾಜಕೀಯಕ್ಕಾಗಿ ಬಳ್ಳಾರಿಗೆ ಬಂದಿಲ್ಲ. ಬಳ್ಳಾರಿಯನ್ನು ಅಭಿವೃದ್ಧಿ ಮಾಡುವುದಕ್ಕಾಗಿ ಬಂದಿದ್ದೇನೆ ಎಂದು ಹೇಳಿದರು. ಬಳ್ಳಾರಿಯಲ್ಲಿ ಇನ್ನೊಂದೆರಡು ವರ್ಷದಲ್ಲಿ ಕ್ರಿಕೆಟ್ ವರ್ಲ್ಡ್ಕಪ್ ನಡೆಯುವ ಮಟ್ಟಕ್ಕೆ ಬಳ್ಳಾರಿಯನ್ನು ಅಭಿವೃದ್ಧಿ ಮಾಡುವೆ. ಈ ಹಿಂದೆ ನಾನು ಹೇಳಿದ ಕೆಲಸಗಳು ವೇಗವಾಗಿ ನಡೀತಿತ್ತು. ಈಗ ಆಗುತ್ತಿಲ್ಲ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ಹೀಗಾಗಿ ಚಿಂತೆ ಮಾಡಬೇಡ ಎಂದು ರಾಮುಲುಗೆ ತಿಳಿಸಿದ್ದೇನೆ ಎಂದು ತಿಳಿಸಿದರು. ವರದಿ:…
ಬಿಹಾರ: ಭಿಕ್ಷುಕನೊಬ್ಬ ಚಿಲ್ಲರೆ ಇಲ್ಲದಿದ್ದರೆ ಡಿಜಿಟಲ್ ರೂಪದಲ್ಲಿ ಭಿಕ್ಷೆ ನೀಡಿ ಎಂದು ವಿಶಿಷ್ಠವಾಗಿ ಭಿಕ್ಷೆ ಬೇಡುತ್ತಿರುವ ಪ್ರಸಂಗ ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬೆಟ್ಟಿಯಾ ಪಟ್ಟಣದಲ್ಲಿ ನಡೆದಿದೆ. ನಿಮ್ಮಲ್ಲಿ ಚಿಲ್ಲರೆ ಇಲ್ಲದಿದ್ದರೆ, ಚಿಂತಿಸಬೇಡಿ. ನೀವು ನನಗೆ ಇ ವ್ಯಾಲೆಟ್ ಮೂಲಕ ಪಾವತಿಸಬಹುದು. ಈಗ ನಾನು ಡಿಜಿಟಲ್ ಪಾವತಿಯ ಸೌಲಭ್ಯವನ್ನು ಹೊಂದಿದ್ದೇನೆ. ಎಂದು ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬೆಟ್ಟಿಯಾ ಪಟ್ಟಣದ ನಿವಾಸಿ ಭಿಕ್ಷುಕ ರಾಜು ಪ್ರಸಾದ್ (40) ಅವರು ಡಿಜಿಟಲ್ ರೂಪದಲ್ಲಿ ಪಾವತಿಸುವಂತೆ ಕೇಳುತ್ತಿದ್ದಾರೆ. ಶುಕ್ರವಾರ ಅವರು ತಮ್ಮ ಇ ವ್ಯಾಲೆಟ್ನಲ್ಲಿ ಭಿಕ್ಷಾಟನೆಯಿಂದ 57 ರೂಪಾಯಿಗಳನ್ನು ಗಳಿಸಿದರು. ಪ್ರಸಾದ್ ಅವರು ತಮ್ಮ 10ನೇ ವಯಸ್ಸಿನಿಂದ ಬೆಟ್ಟಿಯಾ ರೈಲು ನಿಲ್ದಾಣದ ಆಸುಪಾಸಿನಲ್ಲಿ ಭಿಕ್ಷೆ ಬೇಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ‘ಡಿಜಿಟಲ್ ಇಂಡಿಯಾ’ ಅಭಿಯಾನದ ಕಟ್ಟಾ ಬೆಂಬಲಿಗರಾದ ಪ್ರಸಾದ್ ಅವರು ಡಿಜಿಟಲ್ ಪಾವತಿಯ ಸೌಲಭ್ಯವನ್ನು ಪಡೆಯಲು ಇತ್ತೀಚೆಗೆ ಬ್ಯಾಂಕ್ ಖಾತೆಯನ್ನು ತೆರೆದರು. ನನ್ನ ಬಳಿ ಆಧಾರ್ ಕಾರ್ಡ್ ಇದ್ದರೂ ಪ್ಯಾನ್ ಕಾರ್ಡ್ ಇರಲಿಲ್ಲ, ಇದರಿಂದ…