Subscribe to Updates
Get the latest creative news from FooBar about art, design and business.
- ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ
- ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ
- ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ: ಬಿ.ವೈ. ವಿಜಯೇಂದ್ರ ಆರೋಪ
- ಮಾಜಿ ಸಚಿವ, ಶಾಸಕ ಹೆಚ್.ವೈ.ಮೇಟಿ ನಿಧನ
- ಹುಲಿ ದಾಳಿಗೆ ಹೆದರಿ ಹೊರಬಾರದ ಜನ: ಅರಣ್ಯ ಇಲಾಖೆಯಿಂದ ಆಹಾರದ ಕಿಟ್ ವಿತರಣೆ
- ಸರಗೂರು | ಮುಳ್ಳೂರು ಗ್ರಾಮವನ್ನು ಹೋಬಳಿ ಕೇಂದ್ರ ಮಾಡಲು ಪ್ರಯತ್ನಿಸಲಾಗುವುದು: ಶಾಸಕ ಅನಿಲ್ ಕುಮಾರ್
- ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ
- ಕೊರಟಗೆರೆ ಬಸ್ ಗಾಗಿ ಪರದಾಟ: ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ
Author: admin
ಚಿಕ್ಕಹೊಮ್ಮ ಯೂಥ್ಸ್ ಅಸೋಸಿಯೇಷನ್ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಾರ್ಟಿಯಾ ರಾಜ್ಯ ಹಾಗೂ ಮೈಸೂರು ಜಿಲ್ಲಾ ಅಸಂಘಟಿತ ವಲಯ ಸಹಯೋಗದ ವತಿಯಿಂದ ಚಿಕ್ಕಹೊಮ್ಮ ಗ್ರಾಮದಲ್ಲಿ ಅಸಂಘಟಿತ ಕಾರ್ಮಿಕರಿಗೆ ಉಚಿತವಾಗಿ ಇ-ಶ್ರಮ್ ಕಾರ್ಡ್ ವಿತರಿಸಲಾಯಿತು. ಮೈಸೂರು ಮತ್ತು ಚಾಮರಾಜನಗರ ಮದನ್ ರವರು ಚಿಕ್ಕಹೊಮ್ಮ ಗ್ರಾಮದಲ್ಲಿ ಅಸಂಘಟಿತ ಕಾರ್ಮಿಕರಿಗೆ ಉಚಿತವಾಗಿ ಇ- ಶ್ರಮ್ ವಿತರಣೆ ಮಾಡಿದರು. ಇದೆ ಸಂದರ್ಭದಲ್ಲಿ ಚಿಕ್ಕಹೊಮ್ಮ ಯೂಥ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾದ ಮದನ್, ಸಿ.ಎಸ್, ಕಾರ್ಯದರ್ಶಿ ರಾಜು ಕೆ., ರಾಜ್ಯ ಅಸಂಘಟಿತ ವಲಯದ ಪ್ರಧಾನ ಕಾರ್ಯದರ್ಶಿ ಫ್ರಾನ್ಸಿಸ್ , ಉಪಾಧ್ಯಕ್ಷರಾದ ಸುನಿಲ್ ನಾರಾಯಣ್, ಮೈಸೂರು ಜಿಲ್ಲಾ ಅಸಂಘಟಿತ ವಲಯದ ಅಧ್ಯಕ್ಷರಾದ ನಾಗರಾಜು, ಅಭಿ, ಮಧುಸೂದನ್ ಹಾಗೂ ಗ್ರಾಮಸ್ಥರು ಭಾಗಿಯಾಗಿದ್ದರು . ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ತಿಪಟೂರು: ನಗರದಲ್ಲಿರುವ ಸರ್ಕಾರಿ ನೌಕರರ ಭವನದಲ್ಲಿ ಇಂದು ಕಾಂಗ್ರೆಸ್ ವತಿಯಿಂದ ಡಿಜಿಟಲ್ ಸದಸ್ಯತ್ವ ಹಾಗೂ ನೋಂದಣಿ ಕಾರ್ಯಾಗಾರ ಸಭೆಯನ್ನು ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆಯನ್ನು ನೀಡಲಾಯಿತು. ಕಾಂಗ್ರೆಸ್ ಮಾಜಿ ಶಾಸಕ ಷಡಕ್ಷರಿ ಕಾಂಗ್ರೆಸ್ ಮುಖಂಡ ಲೋಕೇಶ್ವರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ ಮಹಿಳಾ ಮುಖಂಡರಾದ ಸುಮಯ್ಯ ತಬ್ರಿಜ್ ಅವರು ಡಿಜಿಟಲ್ ಸದಸ್ಯತ್ವದ ಬಗ್ಗೆ ಗ್ರಾಮ ಪಂಚಾಯಿತಿವಾರು ಸದಸ್ಯತ್ವ ನೋಂದಣಿ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಮಡೆನೂರು ಕಾಂತರಾಜ್, ಕೆಪಿಸಿಸಿ ಸದಸ್ಯ ಯೋಗೇಶ್, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ನಗೆನಹಳ್ಳಿ ಸುರೇಶ್, ನಗರಸಭೆ ಸದಸ್ಯ ಯೋಗೇಶ್, ತಾಲೂಕಿನ ಕಾಂಗ್ರೆಸ್ ಸದಸ್ಯರುಗಳು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸರಗೂರು: ಪಟ್ಟಣದ ಅರಣ್ಯ ಇಲಾಖೆ ಮುಂಭಾಗದಲ್ಲಿರುವ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯವು ಅವ್ಯವಸ್ಥೆಯ ಆಗರವಾಗಿದ್ದು, ಇಲ್ಲಿನ ವಿದ್ಯಾರ್ಥಿಗಳಿಗೆ ಸರಿಯಾದ ವಸತಿ ಹಾಗೂ ಊಟದ ವ್ಯವಸ್ಥೆಯೇ ದೊರೆಯುತ್ತಿಲ್ಲ. ಜೊತೆಗೆ ಹಾಸ್ಟೆಲ್ ಸಿಬ್ಬಂದಿ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿದೆ. ಹಾಸ್ಟೆಲ್ ವಾರ್ಡನ್ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಅಡುಗೆ ಸಿಬ್ಬಂದಿ ಕೂಡ ತೀವ್ರ ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಹಾಸ್ಟೆಲ್ ಅವ್ಯವಸ್ಥೆಯ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಗಮನಕ್ಕೆ ಸಾಕಷ್ಟು ಬಾರಿ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ. ಹಾಸ್ಟೆಲ್ ಪಕ್ಕದಲ್ಲಿ ಅಂಬೇಡ್ಕರ್ ಭವನ ಇದೆ. ಮದುವೆ ಇನ್ನಿತರ ಕಾರ್ಯಕ್ರಮ ನಡೆದರೆ, ಬೆಳಿಗ್ಗೆ ಮತ್ತು ಸಂಜೆ ಭವನದಿಂದ ಮಕ್ಕಳನ್ನು ಕರೆದುಕೊಂಡು ಹೋಗಿ ಅಲ್ಲಿಂದಲೇ ಊಟವನ್ನು ತೆಗೆದುಕೊಂಡು ಬಂದು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕೊಡುತ್ತಾರೆ. ವಾರ್ಡನ್ ಗೆ ಈ ಬಗ್ಗೆ ವಿದ್ಯಾರ್ಥಿಗಳು ದೂರು ನೀಡಿದರೆ, ನಾಳೆ ಬಂದು ಸರಿ ಮಾಡುತ್ತೇನೆ ಎಂದು ತಪ್ಪಿಸಿಕೊಳ್ಳುತ್ತಿದ್ದಾರೆ. ಹಾಸ್ಟೆಲ್ ನಲ್ಲಿ ಮೂಲಭೂತ ಸೌಕರ್ಯಗಳು ಕೂಡ…
ತುರುವೇಕೆರೆ: ತಾಲೂಕಿನ ಮಾಯಸಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತುಮಕೂರು ಹಾಗೂ ತಾಲೂಕು ಆಡಳಿತ ತಾಲೂಕು ಪಂಚಾಯತ್ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ತುರುವೇಕೆರೆ ಇವರ ಸಹಯೋಗದೊಂದಿಗೆ ರಾಷ್ಟ್ರೀಯ ತಂಬಾಕು ನಿಯಂತ್ರಣ ಬಗ್ಗೆ ಜಾಗೃತಿ ಕಾರ್ಯಕ್ರಮ ಮತ್ತು ಗುಲಾಬಿ ಆಂದೋಲನಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ರವಿಪ್ರಕಾಶ್, ತಂಬಾಕು ಸೇವನೆ ಮಾಡುವವರಿಂದ ಅಕ್ಕಪಕ್ಕದಲ್ಲಿರುವ ಜನರಿಗೂ ತೊಂದರೆಯಾಗುತ್ತದೆ. ಹೃದಯ ಸಂಬಂಧಿ ಕಾಯಿಲೆ, ಬಾಯಿ ಕ್ಯಾನ್ಸರ್, ಬ್ರೈನ್ ಟ್ಯೂಮರ್, ಕಣ್ಣಿನಲ್ಲಿ ಪೊರೆ ಇನ್ನೂ ಅನೇಕ ಕಾಯಿಲೆಗಳು ಬರುತ್ತದೆ ಎಂದರು. ಮಾಯಸಂದ್ರ ಸರ್ಕಾರಿ ವೈದ್ಯಾಧಿಕಾರಿಯಾಗಿ ಡಾ.ಸ್ವರೂಪ ಮಾತನಾಡಿ, ತಂಬಾಕು ಸೇವನೆಯಿಂದ ದೂರ ಉಳಿಯಲು ವಿದ್ಯಾರ್ಥಿಗಳ ಮೂಲಕವೇ ಈ ಗುಲಾಬಿ ಆಂದೋಲನ ಮಾಡಲಾಗುತ್ತಿದೆ. ಇನ್ನು ಮುಂದಿನ ದಿನಗಳಲ್ಲಿ ನಿಮ್ಮಂತ ವಿದ್ಯಾರ್ಥಿಗಳು ತಂಬಾಕು ಸೇವನೆ ಮಾಡುವವರಿಗೆ ಇದು ಅಪಾಯ ಎಂಬ ಮನವರಿಕೆಯಾಗಬೇಕು ಎಂದರು. ಇದೇ ವೇಳೆ ಸಾರ್ವಜನಿಕರಿಗೆ, ಅಂಗಡಿ ಮುಂಗಟ್ಟುಗಳಿಗೆ ಗುಲಾಬಿ ನೀಡಿ ತಂಬಾಕು ಬಿಡಿ ಎಂಬ ಘೋಷಣೆಯೊಂದಿಗೆ ರಸ್ತೆಯ…
ಆಸ್ಟ್ರೇಲಿಯಾದ ಸಿಡ್ನಿಯ ಬೀದಿಯಲ್ಲಿ ಕುತೂಹಲದಿಂದ ಕಾಣುವ ಜೀವಿ ಪತ್ತೆಯಾಗಿದ್ದು, ಭ್ರೂಣವನ್ನು ಹೋಲುವ ವಿಲಕ್ಷಣ ‘ಏಲಿಯನ್ ತರಹದ’ ಜೀವಿ ಇದಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಡಿಯೋ ಭಾರೀ ವೈರಲ್ ಆಗುತ್ತಿದೆ ಭ್ರೂಣವನ್ನು ಹೋಲುವ ಈ ವಿಚಿತ್ರ ಪ್ರಾಣಿಯ ವಿಡಿಯೋವನ್ನು ಇನ್ಸ್ಟಾಗ್ರಾಮ್ (Instagram) ಬಳಕೆದಾರ ಹ್ಯಾರಿ ಹೇಯ್ಸ್ ಎಂಬುವವರು ಹಂಚಿಕೊಂಡಿದ್ದಾರೆ. ಫೆಬ್ರವರಿ 28 ರಂದು ಬೆಳಿಗ್ಗೆ ಸಿಡ್ನಿಯ ಮಾರಿಕ್ವಿಲ್ಲೆ ಉಪನಗರದ ಮೂಲಕ ಜಾಗಿಂಗ್ ಮಾಡುತ್ತಿದ್ದಾಗ ಈ ವಿಚಿತ್ರವಾಗಿ ಕಾಣುವ ಜೀವಿಯನ್ನು (Alien) ಕಂಡಿದ್ದೇನೆ ಎಂದು ಹ್ಯಾರಿ ಹೇಯ್ಸ್ ತಿಳಿಸಿದ್ದಾರೆ. ಈ ವಿಡಿಯೋ ಕ್ಲಿಪ್ 1,144 ಲೈಕ್ ಗಳನ್ನು ಪಡೆದಿದೆ. ಏತನ್ಮಧ್ಯೆ, ಆಸ್ಟ್ರೇಲಿಯಾದ ಅತ್ಯಂತ ಜನನಿಬಿಡ ನಗರವಾದ ಸಿಡ್ನಿಯಲ್ಲಿ ಕಳೆದ ವಾರದಿಂದ ಭಾರೀ ಮಳೆ ಸುರಿಯುತ್ತಿದೆ. ದೇಶದ ಪೂರ್ವ ಭಾಗದಾದ್ಯಂತ ಪ್ರವಾಹದಿಂದ ಸತ್ತವರ ಸಂಖ್ಯೆ ಶನಿವಾರ (ಮಾರ್ಚ್ 5) ದಂದು 17 ಕ್ಕೆ ತಲುಪಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ವರದಿ: ಆಂಟೋನಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ತುಮಕೂರು: ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಟ್ಟ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಕೊರೊನ ಸಂಕಷ್ಟ ಕಾಲದಲ್ಲಿ ಪ್ರಾಣದ ಹಂಗು ತೊರೆದು, ಕೊರೊನಾ ಸೋಂಕಿತರನ್ನು ಆರೈಕೆ ಮಾಡಿದ ಗುತ್ತಿಗೆ ನೌಕರರನ್ನು ಮುಂದುವರಿಸಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದೆ. ತುಮಕೂರು ಘಟಕದ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ರವರ ನೇತೃತ್ವದಲ್ಲಿ ಗುತ್ತಿಗೆ ನೌಕರರ ನೇತೃತ್ವದ ತಂಡ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕೊರೊನಾ ಸಂಕಷ್ಟದಲ್ಲಿದ್ದ ರೋಗಿಗಳಿಗೆ ಚಿಕಿತ್ಸೆ ನೀಡಿದ ಕೊರೊನಾ ವಾರಿಯರ್ಸ್ ಗಳ ಗುತ್ತಿಗೆ ಅವಧಿ ಈ ತಿಂಗಳು ಮುಗಿಯುತ್ತಿದ್ದು, ಇರುವವರೆಗೂ ಅಲ್ಪ ಅವಧಿಗೆ ಕೆಲಸ ನಿರ್ವಹಿಸಿದ ನಾವು, ಸಂಕಷ್ಟ ಕಾಲದಲ್ಲಿ ಪ್ರಾಣದ ಹಂಗು ತೊರೆದು ಕೆಲಸ ನಿರ್ವಹಿಸಿದ್ದೇವೆ. ಆದರೆ ಈಗ ಗುತ್ತಿಗೆ ಅವಧಿ ಮುಗಿದು ಈ ತಿಂಗಳು ಅವರ ಸೇವೆ ಕೊನೆಗೊಳ್ಳಲಿದೆ. ಸರ್ಕಾರ ಗುತ್ತಿಗೆ ನೌಕರರ ಸೇವೆಯನ್ನು ಗುರುತಿಸಿ ಕೆಲಸದಲ್ಲಿ ಮುಂದುವರಿಸಲು ಮುಂದಾಗಬೇಕು…
ತುಮಕೂರು: ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿದ್ದ ಯುದ್ಧದ ನಡುವೆ ಸುರಕ್ಷಿತವಾಗಿ ಆಗಮಿಸಿದ ತುಮಕೂರಿನ ವಿದ್ಯಾನಗರದ ವಿದ್ಯಾರ್ಥಿನಿ ದೀಕ್ಷಾ ಅವರ ಮನೆಗೆ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಭೇಟಿ ನೀಡಿ ವಿದ್ಯಾರ್ಥಿನಿಗೆ ಸ್ವಾಗತಿಸಿ ,ಅಲ್ಲಿನ ಪರಿಸ್ಥಿತಿಯನ್ನು ಚರ್ಚಿಸಿದರು. ಈ ವೇಳೆ ವಿದ್ಯಾರ್ಥಿಗೆ ಧೈರ್ಯ ತುಂಬಿ ಮಾತನಾಡಿದ ಮಾಜಿ ಸಚಿವ ಸೊಗಡು ಶಿವಣ್ಣ, ನಮ್ಮ ದೇಶದಿಂದ ಉಕ್ರೇನ್ ದೇಶಕ್ಕೆ ಮೆಡಿಕಲ್ ವಿದ್ಯಾಭ್ಯಾಸಕ್ಕೆಂದು ತೆರಳಿದ್ದ ನೂರಾರು ವಿದ್ಯಾರ್ಥಿನಿಯರು ನಮ್ಮ ದೇಶದಲ್ಲಿದ್ದಾರೆ. ಅಂತಹ ವಿದ್ಯಾರ್ಥಿನಿಯರಿಗೆ ನಮ್ಮ ಪಕ್ಷದ ಮುಖಂಡ ಪ್ರಭಾಕರ್ ಕೋರೆ ಹೇಳಿದಂತೆ, ನಮ್ಮ ದೇಶದಲ್ಲಿರುವ ಯೂನಿವರ್ಸಿಟಿಗಳಲ್ಲಿ ಮೆಡಿಕಲ್ ವಿದ್ಯಾಭ್ಯಾಸ ಮಾಡುವಂತೆ ಸರಕಾರ ಕೂಡಲೇ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ನಮ್ಮ ದೇಶದ ಮಕ್ಕಳು ನಮಗೆ ಸರ್ವಸಂಪತ್ತು ಇದ್ದಹಾಗೆ. ಆದರೆ, ಅವರು ಹೊರದೇಶಕ್ಕೆ ವಿದ್ಯಾಭ್ಯಾಸಕ್ಕೆಂದು ಹೋಗುವಂತಾಗಿರುವುದು ಸರಿಯಲ್ಲ. ಈ ಕೂಡಲೇ ಕೇಂದ್ರ ಸರ್ಕಾರ ಸೂಕ್ತ ಕ್ರಮ ವಹಿಸಬೇಕು ಎಂದು ಅವರು ಸರ್ಕಾರಕ್ಕೆ ಒತ್ತಾಯಿಸಿದರು. ವಿದ್ಯಾರ್ಥಿನಿಯ ಸಾಂತ್ವನದ ವೇಳೆ ಕೆಸಿಡಿಸಿ ನಿರ್ದೇಶಕರಾದ ಸದಾಶಿವಯ್ಯ ಉಪಸ್ಥಿತರಿದ್ದರು.…
ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಕಾಳಘಟ್ಟ ಫಿರ್ಕಾದ ಗ್ರಾಮ ಸಹಾಯಕರಾದ ತಿಮ್ಮಪ್ಪ ನವರನ್ನು ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ, ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಕರ್ತವ್ಯದ ನಿಮಿತ್ತ ನವೋದಯ ಯೋಜನೆಯಡಿ ಪಿಂಚಣಿದಾರರ ಮಾಹಿತಿಯನ್ನು ಪಡೆಯುವ ಸಲುವಾಗಿ ದಯಾನಂದ ಮತ್ತು ರಾಜಪ್ಪ ನವರನ್ನು ಭೇಟಿ ಮಾಡಿ ದಾಖಲಾತಿಯನ್ನು ಪಡೆಯಲು ಹೋದ ಸಂದರ್ಭದಲ್ಲಿ ಗ್ರಾಮ ಸಹಾಯಕರಿಗೆ ದಾಖಲಾತಿ ನೀಡದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೇ ಮಾರಣಾಂತಿಕ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ತಕ್ಷಣವೇ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕು. ಈ ಮೂಲಕ ಪ್ರತಿಯೊಂದು ಇಲಾಖೆ ಗಳಲ್ಲಿಯೂ ಸಹ ನೌಕರರು ನಿರ್ಭಯವಾಗಿ ಕರ್ತವ್ಯ ನಿರ್ವಹಿಸುವಂತಹ ವಾತಾವರಣ ನಿರಗಮಾಣವಾಗಬೇಕು. ಹಲ್ಲೆಗೊಳಗಾದ ಗ್ರಾಮ ಸಹಾಯಕರ ಕುಟುಂಬಕ್ಕೆ ರಕ್ಷಣೆ ನೀಡಬೇಕೆಂದು ಒತ್ತಾಯಿಸಿ, ತಾಲ್ಲೂಕಿನ ಕಂದಾಯ ಇಲಾಖೆಯ ಗ್ರಾಮ ಸಹಾಯಕರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ – ದಾವಣಗೆರೆ ) . ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ತುಮಕೂರು: ಜಿಲ್ಲೆಯ ಸಿರಾ ತಾಲ್ಲೂಕಿನ ಸಿರಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಜಯಚಂದ್ರರವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಡಿಜಿಟಲ್ ಸದ್ಯಸತ್ವ ಅಭಿಯಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಕೋ ಆರ್ಡಿನೇಟರ್ ಹಾಗೂ ಉಸ್ತುವಾರಿಗಳಾದ ಖಾಲಿದ್, ಹುಸೇನ್, ನಾಗರಾಜಯ್ಯ, ಅಜೀಮ್ (HMG) ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಕಣಜನಹಳ್ಳಿ ಜಿ.ಕೃಷ್ಣಮೂರ್ತಿ ಬ್ಲಾಕ್ ಅಧ್ಯಕ್ಷರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು. ವರದಿ: ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ) ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸುರೇಖಾಮಣಿ, ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ನಾಗರತ್ನಮ್ಮರವರ ಅಧ್ಯಕ್ಷತೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಿರಿಯೂರು ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿಯಾದ ರಜೀಯಾ ಸುಲ್ತಾನ್, ಈ ದಿನ ಮಹಿಳೆಯರಿಗೆ ತುಂಬಾ ಮಹತ್ವವಾದ ದಿನ, ಒಂದು ಹೆಣ್ಷು ಮಗಳು ಕೇವಲ ಮನೆಗೆ ಮಾತ್ರ ಮೀಸಲಾಗಿಲ್ಲ, ಹೆಣ್ಣು ಮಕ್ಕಳು ಸಮಾಜದಲ್ಲಿ ಸದಾ ಏನಾದರೂ ಒಂದು ಸಾಧನೆ ಮಾಡಲೇಬೇಕು.ಈ ಸಾಧನೆಗೆ ಮನೆಯಲ್ಲಿನ ತಂದೆ, ತಾಯಿ ಅಥವಾ ಪತಿಯ ಸಹಕಾರ ಪ್ರೋತ್ಸಾಹ ಅಷ್ಟೇ ಅಗತ್ಯ ಎಂದರು. ಮಾಜಿ ಸಚಿವ ಡಿ.ಸುಧಾಕರ್ ರವರು ಮಾತನಾಡಿ, ನಾನು 2008 ರಲ್ಲಿ ಹಿರಿಯೂರು ಕ್ಷೇತ್ರದಲ್ಲಿ ಮೊದಲ ಬಾರಿಗೆ ಸ್ವತಂತ್ರ ಅಭ್ಯರ್ಥಿಯಾಗಿ ಹಿರಿಯೂರು ಕ್ಷೇತ್ರದಲ್ಲಿ ಶಾಸಕರಾಗಿ ಚುನಾವಣೆಯಲ್ಲಿ ಗೆಲ್ಲಲು ಕಾರಣ ಈ ನಮ್ಮ ಹಿರಿಯೂರು ತಾಲ್ಲೂಕಿನ ಮಹಿಳೆಯರು ಎಂದು ಸ್ಮರಿಸಿಕೊಂಡರು. ಈ ಸಂದರ್ಭದಲ್ಲಿ ಹಿರಿಯೂರು ತಾಲ್ಲೂಕಿನ…