Author: admin

ತುಮಕೂರು: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಹಾಗೂ ಹಗರಣಗಳ ಸರಮಾಲೆ ಇಂದ ಜನರು ಹೈರಾಣಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ  ಕಾಂಗ್ರೆಸ್ ಪಕ್ಷದ ವತಿಯಿಂದ ತುಮಕೂರಿನಲ್ಲಿ ಬೃಹತ್ ಜನಾಕ್ರೋಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಡಿ.ಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಹಿನ್ನೆಲೆಯಲ್ಲಿ ಎಂ.ಎಲ್ ಸಿ ರಾಜೇಂದ್ರ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರು ಶಶಿ ಹುಲಿಕುಂಟೆ, ಮೋಹನ್, ರಾಜೇಶ್ ದೊಡ್ಮನೆ ಸೇರಿದಂತೆ ಹಲವು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಇನ್ನು ಸುಮಾರು ಮುನ್ನೂರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಪೊಲೀಸ್ ಸರ್ಪಗಾವಲು ಹಾಕಿದ್ದ ಪೊಲೀಸರು ತಡೆದರು .ಇದೆ ಸಂದರ್ಭದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರ ಹಾಗೂ ಪೊಲೀಸರ ನಡುವೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇದೇ ವೇಳೆ ಪ್ರತಿಕ್ರಿಯಿಸಿರುವ ತುಮಕೂರು ಜಿಲ್ಲಾ ಯುವ ಕಾಂಗ್ರೆಸ್…

Read More

ವಿಶ್ವವಿದ್ಯಾನಿಲಯ ಅನುದಾನ ಆಯೋಗವು ಪಿಜಿ ಕೋರ್ಸ್‌ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಯೋಜನೆಯನ್ನು ಪ್ರಕಟಿಸಿದೆ. ಈ ಯೋಜನೆಯಡಿ, ವೃತ್ತಿಪರ ಪಿಜಿ ಕೋರ್ಸ್‌ಗಳನ್ನು ಅನುಸರಿಸುವ ವಿದ್ಯಾರ್ಥಿಗಳಿಗೆ ತಿಂಗಳಿಗೆ 4,500 ಮತ್ತು 7,800 ರೂ. ವಿದ್ಯಾರ್ಥಿ ವೇತನ ದೊರೆಯಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ವಿದ್ಯಾರ್ಥಿವೇತನ ಯೋಜನೆಗೆ ಅರ್ಜಿ ಸಲ್ಲಿಸಬಹುದು. ತಾಂತ್ರಿಕ, ಎಂಜಿನಿಯರಿಂಗ್, ಮ್ಯಾನೇಜ್‌ಮೆಂಟ್, ಫಾರ್ಮಸಿ ಮತ್ತು ಇತರ ಶಿಕ್ಷಣ ಕೋರ್ಸ್‌ಗಳನ್ನು ಅನುಸರಿಸುವ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆಯುತ್ತಾರೆ. ಎಂಇ ಮತ್ತು ಎಂಟೆಕ್ ವಿದ್ಯಾರ್ಥಿಗಳಿಗೆ ಮಾಸಿಕ 7,800 ರೂ., ಇತರೆ ಪಿಜಿ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ಮಾಸಿಕ 4,500 ರೂ. ಎಸ್‌ಸಿ, ಎಸ್‌ಟಿ ವರ್ಗದ ವಿದ್ಯಾರ್ಥಿಗಳು ಈ ಯೋಜನೆಯಡಿ ಪ್ರಯೋಜನ ಪಡೆಯುತ್ತಾರೆ. ಈ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ: ವೃತ್ತಿಪರವಲ್ಲದ ಕೋರ್ಸ್‌ಗಳಿಗೆ ಸೇರುವ ವಿದ್ಯಾರ್ಥಿಗಳು ಈ ಯೋಜನೆಯಡಿ ಪ್ರಯೋಜನಗಳನ್ನು ಪಡೆಯುವುದಿಲ್ಲ. UGC ಮಾರ್ಗಸೂಚಿಗಳ ಪ್ರಕಾರ MA, MSc, MCom, MSW ನಂತಹ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮವು ವೃತ್ತಿಪರೇತರ ಕೋರ್ಸ್‌ಗಳ ಭಾಗವಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಈ ಕೋರ್ಸ್‌ಗಳನ್ನು…

Read More

ಮೇ 7 ರಂದು ರಾಂಚಿ ವಿಮಾನ ನಿಲ್ದಾಣದಲ್ಲಿ ಅಂಗವಿಕಲ ಮಗುವಿಗೆ ಬೋರ್ಡಿಂಗ್ ನಿರಾಕರಿಸಿದ್ದಕ್ಕಾಗಿ ವೈಮಾನಿಕ ನಿಯಂತ್ರಕ ಡಿಜಿಸಿಎ ಇಂಡಿಗೋ ಏರ್‌ಲೈನ್‌ಗೆ ರೂ 5 ಲಕ್ಷ ದಂಡ ವಿಧಿಸಿದೆ. ಮಗುವು ಮೇ 9 ರಂದು ರಾಂಚಿ-ಹೈದರಾಬಾದ್ ಟ್ರಿಪ್ ಹತ್ತಲು ಇಂಡಿಗೋ ಅನುಮತಿ ನಿರಾಕರಿಸಿತು.ಮಗುವು ನೋಡಲಿಕ್ಕೆ ಭಯಭೀತನಾಗಿದೆ ಎಂದು ಅದು ಕಾರಣ ನೀಡಿತ್ತು. ಯಾವಾಗ ಇಂಡಿಗೋ ವಿಮಾನ ಮಗುವಿಗೆ ಅವಕಾಶ ನೀಡಲಿಲ್ಲವೋ, ಆಗ ಅದರ ಪೋಷಕರು ಸಹಿತ ಪ್ರಯಾಣಿಸಲು ನಿರಾಕರಿಸಿದರು ಎನ್ನಲಾಗಿದೆ.ವಿಮಾನಯಾನದ ವಾಚ್‌ಡಾಗ್ ಆಗಿರುವ ಡಿಜಿಸಿಎ ವಿಮಾನಯಾನ ಸಂಸ್ಥೆಗೆ ಆರ್ಥಿಕ ದಂಡ ವಿಧಿಸಿರುವುದು ಇದೇ ಮೊದಲು ಎನ್ನಲಾಗಿದೆ. ಈ ಘಟನೆ ಕುರಿತು ತನಿಖೆ ನಡೆಸಲು ಡಿಜಿಸಿಎ ಮೇ 9ರಂದು ಮೂವರು ಸದಸ್ಯರ ತಂಡವನ್ನು ರಚಿಸಿತ್ತು. “ಇಂಡಿಗೋ ಸಿಬ್ಬಂಧಿ ಅಂಗವಿಕಲ ಮಗುವನ್ನು ನಿರ್ವಹಿಸುವುದರಲ್ಲಿ ನ್ಯೂನತೆಯನ್ನು ಎಸೆಗಿದೆ, ಆ ಮೂಲಕ ಪರಿಸ್ಥಿತಿಯನ್ನು ಉಲ್ಬಣಗೊಳಿಸಿದೆ ಎಂದು ಗಮನಿಸಲಾಗಿದೆ” ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಹೇಳಿಕೆ ತಿಳಿಸಿದೆ. ಹೆಚ್ಚು ಸಹಾನುಭೂತಿಯ ನಿರ್ವಹಣೆಯನ್ನು ಸುಗಮಗೊಳಿಸುತ್ತದೆ, ಮಗುವನ್ನು ಶಾಂತಗೊಳಿಸುತ್ತದೆ ಮತ್ತು ಪ್ರಯಾಣಿಕರಿಗೆ…

Read More

ಲಖನೌ (ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಂತರ, ಮಥುರಾ, ವೃಂದಾವನ, ವಿಂಧ್ಯವಾಸಿನಿ ಧಾಮ ಮತ್ತು ನೈಮಿಶ್ ಧಾಮದಂತೆ ದೇವಾಲಯಗಳ ಪಟ್ಟಣವಾದ ಕಾಶಿಯು ಎಚ್ಚರಗೊಳ್ಳುತ್ತಿರುವಂತೆ ತೋರುತ್ತಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಹೇಳಿದರು. ಲಖನೌ ದಲ್ಲಿ ನಡೆದ ಬಿಜೆಪಿಯ ಒಂದು ದಿನದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಕೋಮುಗಲಭೆ ನಡೆದಿಲ್ಲ. ಇತ್ತೀಚಿನ ಹಬ್ಬಗಳನ್ನು ಪ್ರಸ್ತಾಪಿಸಿ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಈದ್‌ನ ಹಿಂದಿನ ಕೊನೆಯ ಶುಕ್ರವಾರದ ನಮಾಜ್ ಅನ್ನು ರಸ್ತೆಗಳಲ್ಲಿ ನಡೆಸಲಾಗಿಲ್ಲ ಎಂದು ಹೇಳಿದರು. ಕಾಶಿ ವಿಶ್ವನಾಥ ದೇವಸ್ಥಾನದ ಕಾರಿಡಾರ್ ಉದ್ಘಾಟನೆಯನ್ನು ಉಲ್ಲೇಖಿಸಿದ ಆದಿತ್ಯನಾಥ್, ಪ್ರತಿದಿನ ಒಂದು ಲಕ್ಷ ಭಕ್ತರು ಕಾಶಿಗೆ ಭೇಟಿ ನೀಡುತ್ತಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಸ್ಥಳವು ತನ್ನ ಹೆಸರಿನ ಮಹತ್ವವನ್ನು ಸಾಬೀತುಪಡಿಸುತ್ತಿದೆ ಎಂದರು. ರಾಮ ನವಮಿ ಮತ್ತು ಹನುಮ ಜಯಂತಿಯನ್ನು ಶಾಂತಿಯುತವಾಗಿ ನಡೆಸಲಾಯಿತು. ಇದೇ ಮೊದಲ ಬಾರಿಗೆ ಈದ್ ಹಿಂದಿನ ಕೊನೆಯ ಶುಕ್ರವಾರದ ನಮಾಜ್…

Read More

ವಿಶ್ವದ ಅತಿ ದೊಡ್ಡ ವಿಸ್ಕಿ ಬಾಟಲ್ ಹರಾಜು ಪ್ರಕ್ರಿಯೆ ನಡೆದಿದೆ. 5 ಅಡಿ 11 ಇಂಚು ಉದ್ದದ ಈ ಬಾಟಲಿಯು 311 ಲೀಟರ್ ವಿಸ್ಕಿಯಿಂದ ತುಂಬಿದೆ. ಈ ಬಾಟಲಿಯನ್ನು ಅಂತಿಮವಾಗಿ ಆನ್‌ಲೈನ್ ಮಾರಾಟದಲ್ಲಿ ಹರಾಜು ಮಾಡಲಾಯಿತು. ಹರಾಜು-ಸಂಘಟನಾ ಕಂಪನಿ ಲಿಯಾನ್ ಮತ್ತು ಟರ್ನ್‌ಬುಲ್ ಪ್ರಕಾರ 5 ಅಡಿ 11 ಇಂಚು ಉದ್ದ ಮತ್ತು 311 ಲೀಟರ್‌ ಸ್ಕಾಚ್ ವಿಸ್ಕಿ ಇದ್ದ ವಿಶ್ವದ ಅತಿದೊಡ್ಡ ಬಾಟಲಿ ಸುಮಾರು 1.4 ಮಿಲಿಯನ್ ಡಾಲರ್ (10,85,88,900 ರೂ.) ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಇದರ ಬಿಡ್ ಅನ್ನು ಆನ್‌ಲೈನ್‌ನಲ್ಲಿ ಇರಿಸಲಾಗಿತ್ತು. ಅಂತಿಮವಾಗಿ ಅಂತರಾಷ್ಟ್ರೀಯ ಅಪರಿಚಿತ ಸಂಗ್ರಾಹಕ ಅದನ್ನು ಖರೀದಿಸಿದರು. ಈ ವಿಸ್ಕಿಗೆ ‘ದಿ ಇಂಟ್ರೆಪಿಡ್’ ಎಂದು ಹೆಸರಿಡಲಾಗಿದೆ ಎಂದು ಹರಾಜು ಕಂಪನಿ ತಿಳಿಸಿದೆ. ಇದು ಸುಮಾರು 32 ವರ್ಷಗಳಷ್ಟು ಹಳೆಯದಾದ ಸಿಂಗಲ್ ಮಾಲ್ಟ್ ಆಗಿದೆ. ಇದನ್ನು 1989 ರಲ್ಲಿ ಸ್ಪೈಸೈಡ್‌ನ ಪ್ರತಿಷ್ಠಿತ ದಿ ಮಕಲನ್‌ನಲ್ಲಿ ಭಟ್ಟಿ ಇಳಿಸಲಾಯಿತು. ಸೆಪ್ಟೆಂಬರ್ 2021 ರಲ್ಲಿ ವಿಸ್ಕಿಯನ್ನು ಭರ್ತಿ ಮಾಡಿದಾಗ ಗಿನ್ನೆಸ್…

Read More

ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ.ಮಾನ್ಸಾದ ಜವಾಹರ್ಕೆ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದ ಗುಂಡಿನ ದಾಳಿಯಲ್ಲಿ ಸಿಧು ಮೂಸೆವಾಲಾ ಸೇರಿದಂತೆ ಕನಿಷ್ಠ ಮೂವರು ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಾನ್ಸಾದ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಸಿಧು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು. ಅವರಿಗೆ 27 ವರ್ಷ ವಯಸ್ಸಾಗಿತ್ತು. ಪಂಜಾಬ್‌ನಲ್ಲಿ ಶನಿವಾರದಂದು ಭಗವಂತ್ ಮಾನ್ ನೇತೃತ್ವದ ಆಮ್ ಆದ್ಮಿ ಪಕ್ಷ ಸರ್ಕಾರವು ಮೂಸೆವಾಲಾ ಅವರ ಭದ್ರತೆಯನ್ನು ಕಡಿತಗೊಳಿಸಿತ್ತು. ಮೂಸೆವಾಲಾ ಅವರಿಗೆ ನಾಲ್ವರು ಪೊಲೀಸ್ ಬಂದೂಕುಧಾರಿಗಳಿದ್ದರು, ಅವರಲ್ಲಿ ಇಬ್ಬರನ್ನು ಹಿಂತೆಗೆದುಕೊಳ್ಳಲಾಯಿತು. ಸುದ್ದಿ ಮೂಲಗಳ ಪ್ರಕಾರ ಅವರು ತಮ್ಮ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ದಾಳಿಕೋರರು ಸಿಧು ಮೂಸೆವಾಲಾ ಮತ್ತು ಅವರ ಇಬ್ಬರು ಸ್ನೇಹಿತರ ಮೇಲೆ ಗುಂಡು ಹಾರಿಸಿದ್ದಾರೆ.ಅವರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಮೂಸೆವಾಲಾ ಅವರು ಈ ಹಿಂದೆ 18 ನೇ ಶತಮಾನದ ಸಿಖ್ ಯೋಧ ಮೈ…

Read More

ತುಮಕೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ 3 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹೆಸರು ಮಾತ್ರ ರಾಮಂದು, ಮುಖ ರಾವಣಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸಿದ್ದರಾಮಯ್ಯ ವಿರುದ್ಧ ಆಕೋಶ್ರ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ಆಯೋಜಿಸಿದ್ದ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ನಳಿನ್‌ ಕುಮಾರ್‌ ಸಿದ್ದರಾಮಯ್ಯನ ಆಡಳಿತ ಕಾಲದಲ್ಲಿ ಅತಿ ಹೆಚ್ಚು ಗೋ ಹತ್ಯೆ ನಡೆದಿದೆ. ಸಿದ್ದರಾಮಯ್ಯನವರ ಕಾರಣದಿಂದ 61 ಮಂದಿ ಕಾಂಗ್ರೆಸ್ ನಾಯಕರು ಪಕ್ಷ ತೊರೆದಿದ್ದಾರೆ ಎಂದರು. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗಂಜಿ ಕೇಂದ್ರದ ಆಸೆಗಾಗಿ ಆರ್​ಎಸ್​ಎಸ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಿದ್ದರಾಮಯ್ಯ ಟ್ವೀಟ್​ಗೆ ತಿರುಗೇಟು ನೀಡಿದ್ದಾರೆ. ಇಟಲಿ ಮೂಲದ ನಾಯಕರಿಗೆ ಹತ್ತಿರವಾಗಲು ಸಿದ್ದರಾಮಯ್ಯ ಆ ರೀತಿಯ ಹೇಳಿಕೆ ನೀಡ್ತಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರ ಮಾತಿಗೆ ಬೆಲೆಯಿತ್ತು. ಆದರೆ ಈಗ ಅವರ ಮಾತನ್ನು ಅವರ ಪಕ್ಷದ ಕಾರ್ಯಕರ್ತರೇ ಕೇಳುತ್ತಿಲ್ಲ. ಅವರ ಮಾತಿಗೆ ಕಿಮ್ಮತ್ತು ಇಲ್ಲ ಎಂದು ಸಹಕಾರ…

Read More

ಬೆಂಗಳೂರು: ನಾನು ಮಾತ್ರವಲ್ಲ, ನೀವೂ ದ್ರಾವಿಡರೇ ಆಗಿದ್ದೀರಿ. ಈ ಸ್ಪಷ್ಟತೆ ನನಗಿದೆ. ನಾನು ದ್ರಾವಿಡ ಮೂಲವನ್ನು ಉಳಿಸಿಕೊಂಡಿದ್ದೇನೆ, ನೀವು ಮಾತ್ರ ಅಧಿಕಾರದ ದುರಾಸೆಯಿಂದ ಮೂಲವನ್ನು ತೊರೆದು ಪಕ್ಷಾಂತರ ಮಾಡಿದ್ದೀರಿ. ಬೇಗ ‘ಘರ್ ವಾಪಸಿ” ಆಗಿಬಿಡಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗಳಿಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು,  ನೆಹರು ಅವರನ್ನು ಮೋದಿಗೆ ಹೋಲಿಸಲು ಸಾಧ್ಯವೇ ಇಲ್ಲ ಎಂದು ಮತ್ತೆ ಮತ್ತೆ ಹೇಳುತ್ತೇನೆ. ಇಬ್ಬರು ನಾಯಕರ ಸಾಧನೆ ಬಗ್ಗೆ ಮುಕ್ತ ಚರ್ಚೆಗೆ ನೀವು ಸಿದ್ಧ ಇದ್ದರೆ ನಾನೂ ಸಿದ್ಧನಿದ್ದೇನೆ ಎಂದಿದ್ದಾರೆ. ನನ್ನ ಮಾತಿಗೆ ನೀವು ಖರೀದಿಸಿಟ್ಟಿರುವ ”ಟ್ರೋಲ್ ಗ್ಯಾಂಗ್” ಮೂಲಕ ಉತ್ತರ ಕೊಡಿಸಲು ಹೋಗಬೇಡಿ. ಭಾರತ ಮಾತೆ ತನ್ನ ಭಕ್ತನನ್ನು ಕಳೆದುಕೊಂಡಿದ್ದಾಳೆ, ಶಾಂತಿ ತನ್ನ ರಕ್ಷಕನನ್ನು ಕಳೆದುಕೊಂಡು ಅನಾಥಳಾಗಿದ್ದಾಳೆ, ನಿರಾಶ್ರಿತರು ತನ್ನ ಆಶ್ರಯದಾತನನ್ನು, ಸಾಮಾನ್ಯ ಜನ ತಮ್ಮ ಕಣ್ಮಣಿಯನ್ನು ಕಳೆದುಕೊಂಡಿದ್ದಾರೆ.. ಪರದೆ ಬಿದ್ದಿದೆ -ಹೀಗೆಂದು ನೆಹರು…

Read More

ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ಪೆಟ್ರೋಲ್ ಬಂಕ್ ಮಾಲಿಕರು ಮುಷ್ಕರ ನಡೆಸಲು ನಿರ್ಧರಿಸಿದ್ದು , ಈ ಹಿನ್ನೆಲೆಯಲ್ಲಿ  ಪೆಟ್ರೋಲ್ ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿವೆ. ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪೆಟ್ರೋಲ್ ಬಂಕ್ ಮಾಲೀಕರು ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಪೆಟ್ರೋಲ್, ಡೀಸೆಲ್ ಖರೀದಿ ಬಂದ್ ಮಾಡಲಿದ್ದಾರೆ. ಬಂಕ್ ನಲ್ಲಿ ಸ್ಟಾಕ್ ಇರುವ ಪೆಟ್ರೋಲ್, ಡೀಸೆಲ್ ಮಾತ್ರ ಮಾರಾಟ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಎರಡು ಬಾರಿ ಪೆಟ್ರೋಲ್, ಡೀಸೆಲ್ ಮೇಲಿನ ಟ್ಯಾಕ್ಸ್ ಕಡಿತಗೊಳಿಸಿದೆ. ನಾವು ಖರೀದಿಸಿದ್ದ ತೈಲಕ್ಕೆ ನೀಡಿದ್ದ ತೆರಿಗೆ ಮರುಪಾವತಿ ಮಾಡಿಲ್ಲ. ಹೀಗಾಗಿ ಪ್ರತಿ ಡೀಲರ್ ಗೆ 7-8 ಲಕ್ಷ ನಷ್ಟವಾಗಿದೆ. ತೈಲ ಕಂಪನಿಗೆ ಮೊದಲೇ ಕಟ್ಟಿದ್ದ ತೆರಿಗೆ ಮರುಪಾವತಿಸಬೇಕು. ಬೇಡಿಕೆಗೆ ತಕ್ಕಂತೆ ಪೆಟ್ರೋಲ್, ಡೀಸೆಲ್ ಪೂರೈಸಬೇಕು ಎಂದು ಮಾಲೀಕರು ಆಗ್ರಹಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಕನ್ನಡದ ಪ್ರೇಮಲೋಕ ರಣಧೀರ, ಕನಸುಗಾರ ಎಂದೆ ಕನ್ನಡ ಸಿನಿ ರಂಗದಲ್ಲಿ ಪ್ರಖ್ಯಾತ ಪಡೆದಿರುವ ನಟ ರವಿಚಂದ್ರನ್  ರವರ ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ ನಾಯಕ ನಟನಾಗಿ ನಟಿಸುತ್ತಿರುವ ಕನ್ನಡದ ಬಹಳಷ್ಟು ರವಿಚಂದ್ರನ್ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿರುವ ತ್ರಿವಿಕ್ರಮ ಸಿನಿಮಾದ ಹಾಡಿಗೆ ಸ್ಟೆಪ್ ಹಾಕಿದ ಶಿವರಾಜ್​ ಕುಮಾರ್  ಶುಭಾಶಯ ಕೋರಿದರು. ಕನ್ನಡದ ಕನಸುಗಾರ ವಿ.ರವಿಚಂದ್ರನ್ ರವರ ಎರಡನೇಯ ಮಗ  ವಿಕ್ರಮ್  ರವಿಚಂದ್ರನ್ ನಾಯಕರಾಗಿ ನಟಿಸುತ್ತಿರುವ‌ ತ್ರಿವಿಕ್ರಮ ಚಿತ್ರದ ಪೋಸ್ಟರ್ ಹಾಗೂ ಟೀಸರ್​ನಿಂದಲೇ ಸ್ಯಾಂಡಲ್ ವುಡ್​ನಲ್ಲಿ ಸದ್ದು ಮಾಡುತ್ತಿದೆ. ಚಿತ್ರದ ಮಮ್ಮಿ ಪ್ಲೀಸ್ ಮಮ್ಮಿ ಎಂಬ ಹಾಡು ಬಿಡುಗಡೆ ಆಗಿ ಸೋಷಿಯಲ್‌‌ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಇದೀಗ ತ್ರಿವಿಕ್ರಮ ಸಿನಿಮಾಗೆ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ಅಭಯಹಸ್ತ ಸಿಕ್ಕಿದೆ. ಈ‌ ಸಿನಿಮಾ ಹಾಗು ಪ್ಲೀಸ್ ಮಮ್ಮಿ ಹಾಡಿನ ಬಗ್ಗೆ ಮಾತನಾಡಿದ್ದಾರೆ. ಶಿವರಾಜ್ ಕುಮಾರ್ ತ್ರಿವಿಕ್ರಮ ಸಿನಿಮಾದ ಸ್ಪೆಷಾಲಿಟಿ ಹಾಗೂ ರವಿಚಂದ್ರನ್ ಮಗ ವಿಕ್ರಮ್ ಬಗ್ಗೆ ಮಾತನಾಡಿದ್ದಾರೆ. ಶಿವರಾಜ್ ಕುಮಾರ್, ಯುವ ನಟ ವಿಕ್ರಮ್…

Read More