Subscribe to Updates
Get the latest creative news from FooBar about art, design and business.
- ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ
- ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ
- ರಾಜ್ಯದಲ್ಲಿರೋದು ಚುನಾಯಿತ ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್.ಅಶೋಕ್ ಆರೋಪ
- ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ
- ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ
- 3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ
- ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
Author: admin
ಸರಗೂರು: ಗ್ರಾಮ ಸಭೆಗೆ ಪ್ರಮುಖ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಸರಗೂರು ತಾಲ್ಲೂಕಿನ ಹಾದನೂರಿನಲ್ಲಿ ನಡೆದಿದೆ. ಸಭೆಗೆ ಕೆಲವೇ ಕೆಲವು ಅಧಿಕಾರಿಗಳು ಆಗಮಿಸಿದ್ದು, ಈ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಗ್ರಾಮಸ್ಥರು, ಎಲ್ಲಅಧಿಕಾರಿಗಳೂ ಕೂಡ ಗ್ರಾಮ ಸಭೆಗೆ ಆಗಮಿಸಬೇಕು ಎಂದು ಒತ್ತಾಯಿಸಿದರು. ತಾಲ್ಲೂಕಿನ ತಹಶೀಲ್ದಾರ್ ಹಾಗೂ ಕಾರ್ಯನಿರ್ವಹಕ ಅಧಿಕಾರಿಗಳು ಸಭೆಗೆ ಬರಬೇಕು, ನಮ್ಮ ಸಮಸ್ಯೆಗಳನ್ನು ಅವರಿಗೆ ತಿಳಿಸಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಹಾದನೂರು ಅತೀ ಹೆಚ್ಚು ದಲಿತರೇ ಇರುವ ಗ್ರಾಮವಾಗಿದ್ದು, ಈ ಗ್ರಾಮವನ್ನು ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ನಿರ್ಲಕ್ಷಿಸುತ್ತಿದ್ದಾರೆ. ಗ್ರಾಮಸಭೆಯನ್ನು ಕಾಟಾಚಾರಕ್ಕೆ ನಡೆಸುತ್ತಿದ್ದು, ಸಭೆಗೆ ಮುಖ್ಯ ಅಧಿಕಾರಿಗಳೇ ಆಗಮಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಚಿತ್ರದುರ್ಗ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಡರಾತ್ರಿ ಚಿತ್ರದುರ್ಗದಲ್ಲಿ ನಡೆದಿದೆ. ಗೀತಾ(32), ಶಾರದಾ (60) ಹಾಗೂ ಧೃತಿ (5) ಮೃತರು ಎಂದು ಗುರುತಿಸಲಾಗಿದೆ. ತಡರಾತ್ರಿ ಕಾರಿನಲ್ಲಿ ಒಂದೇ ಕುಟುಂಬದ 7 ಜನರು ಕುಂದಾಪುರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಆಗ ಕಾರು ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರ ಬಳಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿದೆ. ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 5 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ನಾಲ್ವರಿಗೆ ಗಾಯಗಳಾಗಿದ್ದು, ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಕುಂದಾಪುರ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಬೆಂಗಳೂರು: ಕೆಪಿಟಿಸಿಎಲ್ ಇಲಾಖೆಯ ವಿವಿಧ ಹುದ್ದೆಗಳ ನೇಮಕಕ್ಕೆ ಇನ್ನೂ ಮುಂದೆ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು ಕಡ್ಡಾಯ ಎಂದು ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಅಪ್ಟಿಟ್ಯಾಡ್ ಪರೀಕ್ಷೆಗೂ ಮುನ್ನ ಕಡ್ಡಾಯವಾಗಿ ಕನ್ನಡ ಪರೀಕ್ಷೆ ಬರೆಯಬೇಕು ಹಾಗೂ ಅದರಲ್ಲಿ ಕನಿಷ್ಠ 50 ಅಂಕವನ್ನು ಪಡೆಯಬೇಕು ಎಂದು ಆದೇಶಿಸಲಾಗಿದೆ. ಈ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರಿಗೆ ಮಾತ್ರ ಅರ್ಹತಾ ಪರೀಕ್ಷೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಸಿದ್ದಾರೆ. ಈ ಹಿಂದೆ ನಡೆದ ನೇಮಕದಲ್ಲಿನ ವಿದ್ಯಮಾನದ ಮಾಹಿತಿ ಪಡೆದಿದ್ದ ಸಚಿವರು, ಮತ್ತೆ ಆ ರೀತಿ ಲೋಪ, ಅನ್ಯಾಯದ ಅಪಸ್ವರ ಮರುಕಳಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೆಪಿಟಿಸಿಎಲ್ ನೇಮಕದಲ್ಲಿ ಮತ್ತೆ ಕನ್ನಡ ಭಾಷಾ ಪರೀಕ್ಷಾ ಕಡ್ಡಾಯಗೊಳಿಸುವ ಮೂಲಕ ಕನ್ನಡಪರ ಸಂಘಟನೆಗಳ ಧ್ವನಿಗೂ ಸರಕಾರ ಸ್ಪಂದಿಸಿದೆ. ದೀರ್ಘಾವದಿ ನಂತರ ತುಂಬುತ್ತಿರುವ ಹುದ್ದೆಗಳು ಕನ್ನಡಿಗರು, ಕನ್ನಡ ಬಲ್ಲ ಅರ್ಹರಿಗೆ ದಕ್ಕುವ ರೀತಿಯಲ್ಲಿ ಕ್ರಮ ಕೈಗೊಂಡಿದೆ. ಈ…
ತಿಪಟೂರು: ಕೃಷಿ ವಿಜ್ಞಾನ ಕೇಂದ್ರ ಕೊನೆಹಳ್ಳಿಯಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ “ಮಹಿಳೆ ಮತ್ತು ಮಕ್ಕಳ ಅಪೌಷ್ಠಿಕತೆಯಲ್ಲಿ ಪೌಷ್ಠಿಕ ಆಹಾರದ ಮಹತ್ವ”ದ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೃಷಿ ವಿಜ್ಞಾನ ಕೇಂದ್ರ ಕೊನೆಹಳ್ಳಿಯ ಮುಖ್ಯಸ್ಥರಾದ ಡಾ.ಗೋವಿಂದೇಗೌಡ ಉದ್ಘಾಟಿಸಿದರು. ಕೃಷಿ ವಿಜ್ಞಾನ ಕೇಂದ್ರದ ಗೃಹ ವಿಜ್ಞಾನಿಗಳಾದ ಡಾ.ರೂಪ ಬಿ. ಪಾಟೀಲ್ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಮೇಲ್ವಿಚಾರಕಿ ಬಿ.ಎನ್. ಪ್ರೇಮ ಡಾ.ಅನಿತಾ, ಅಂಜುಮನ್ ಬಾನು ಹಾಜರಿದ್ದರು. ಅಂಗನವಾಡಿ ಕಾರ್ಯಕರ್ತರು ತರಬೇತಿಯಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಂಡರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಅಥ್ಲೆಟಿಕ್ ನಲ್ಲಿ ಪ್ರಸಿದ್ಧ ಕ್ರೀಡಾಪಟುವಾಗಿ ಏಷ್ಯನ್ ಗೇಮ್ಸ ಚಿನ್ನದ ಪದಕ ಗೆದ್ದು ಬಣ್ಣದ ಲೋಕದಲ್ಲಿ ಮಿಂಚಿದ್ದ ನಟ ಪ್ರವೀಣ್ ಕುಮಾರ್ ಸೋಬ್ತಿ(74) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ನಿನ್ನೆ ಸಂಜೆ ಎದೆ ನೋವು ಕಾಣಿಸಿಕೊಂಡಿದೆ.ನಂತರ ವೈದ್ಯರನ್ನು ಮನೆಗೆ ಕರೆಸಿ ಚಿಕಿತ್ಸೆ ನೀಡಲಾಯಿತು ಆದರೆ ರಾತ್ರಿ 10.30 ರಲ್ಲಿ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ ಎಂದು ಸಂಬಂಧಿಯೊಬ್ಬರು ತಿಳಿಸಿದ್ದಾರೆ. ಪ್ರವೀಣ್ ಡಿಸ್ಕಸ್ ಥ್ರೋ ಸೇರಿದಂತೆ ಅಥ್ಲೆಟಿಕ್ ಕ್ರೀಡೆಯಲ್ಲಿ ಅಂತರಾಷ್ಟೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಸಿದರು. 1966 ಮತ್ತು 1970 ರಲ್ಲಿ ಎರಡು ಚಿನ್ನದ ಪದಕಗಳನ್ನು ಒಳಗೊಂಡಂತೆ ಏಷ್ಯನ್ ಗೇಮ್ಸನಲ್ಲಿ ನಾಲ್ಕು ಪದಕಗಳನ್ನು ಗೆದ್ದರು. ಅವರು 1966 ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಹ್ಯಾಮರ್ ಥ್ರೋನಲ್ಲಿ ಬೆಳ್ಳಿ ಪದಕವನ್ನು ಗೆದ್ದರು. 1988 ರಲ್ಲಿ ಟಿವಿ ಪರದೆಯಲ್ಲಿ ಮೂಡಿ ಬಂದ ಮಹಾಭಾರತ ನಲ್ಲಿ ಭೀಮನ ಪಾತ್ರದಲ್ಲಿ ಮಿಂಚಿ ನಂತರ ಸಿನಿಮಾ ನಟನೆಯಲ್ಲಿ ಮತ್ತಷ್ಟು ಜನಪ್ರಿಯತೆಯನ್ನು ಗಳಿಸಿದರು.ಬಾಲಿವುಡ್ ನಲ್ಲಿ ತಮ್ಮ ದೇಹದಡ್ಯ ಮೂಲಕ ಸಾಹಸ ದೃಶ್ಯಗಳು ರಂಚಿಸಿತ್ತು ಕನ್ನಡದಲ್ಲೂ…
ಮೈಸೂರು: ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡರನ್ನು ಸೇವೆಯಿಂದ ವಜಾಗೊಳಿಸಲು ಒತ್ತಾಯಿಸಿ, ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ಕರೆ ಕೊಟ್ಟಿದ “ಮೈಸೂರ್ ಬಂದ್” ಬೆಂಬಲಿಸಿ, ಕರ್ನಾಟಕ ರಾಜ್ಯ ಸಂಶೋಧಕರ ಸಂಘ ಪ್ರತಿಭಟನೆ ನಡೆಸಿತು. ಘೋಷಣೆಗಳನ್ನು ಕೂಗುತ್ತಾ ಮೈಸೂರಿನ ಸಿ.ಟಿ.ಬಸ್ ನಿಲ್ದಾಣ, ಸೈಬರ್ ಬಸ್ ನಿಲ್ದಾಣ, ಅಶೋಕ ರಸ್ತೆ, ಸಯ್ಯಾಜಿರಾವ್ ರಸ್ತೆ, ಅರಸು ರಸ್ತೆ ಮೂಲಕ ಇಡೀ ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಪ್ರತಿಭಟನೆಯಲ್ಲಿ ನಡೆಸಲಾಯಿತು. ರಾಜ್ಯ ಸಂಶೋಧಕರ ಸಂಘದ ರಾಜ್ಯಾಧ್ಯಕ್ಷರಾದ ಮರಿದೇವಯ್ಯ ಮಾತನಾಡಿ, ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡರನ್ನು ಸೇವೆಯಿಂದ ವಜಾಗೊಳಿಸಿದ ಹೋದರೆ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ನಿರಂತರ ಹೋರಾಟ ಮಾಡುವುದಾಗಿ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಎರಡನೇ ಭೀಮಾಕೋರೆಂಗಾವ್ ಯುದ್ಧಕ್ಕೆ ಸಜ್ಜಾಗಬೇಕಿದೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪ್ರತಿಭಟನೆಯಲ್ಲಿ ಸಂಶೋಧಕರಾದ ನಂಜುಂಡಸ್ವಾಮಿ, ಪ್ರವೀಣ್ ಕುಮಾರ್, ಅಮ್ಮ ರಾಮಚಂದ್ರ, ರಾಜೇಂದ್ರ, ಮಾರುತಿ, ಬಳ್ಳಾರಿ ಹನುಮಂತಪ್ಪ ಮತ್ತು ವಿದ್ಯಾರ್ಥಿಗಳ ಕರುಣ, ಮನು ಕುಮಾರ್, ಅಭಿಷೇಕ್, ರಾಹುಲ್, ಅಮಿತ್, ವಿಜಯ್, ಶಿವರಾಜ್, ಸಂತೋಷ್, ಅರುಣ್ ಮಣಿ…
ಪಾವಗಡ: ತಾಲೂಕು ನಿಡಿಗಲ್ ಹೋಬಳಿ ಸಿ.ಕೆ.ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊತ್ತೂರು ಶಾಲೆ ಭಾಗ ಗೋಪಾಲ್ ರೆಡ್ಡಿ ಮನೆಯವರಿಗೂ ಹಾದುಹೋಗಿರುವ ವಿದ್ಯುತ್ ತಂತಿ ಇಂದು ಕೆಳಗಡೆ ಬಿದ್ದಿದೆ ಘಟನೆ ಸಂಭಂಧ ಆಕ್ರೋಶ ವ್ಯಕ್ತಪಡಿಸಿ ಗ್ರಾಮಸ್ಥರು ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಈ ವಿದ್ಯುತ್ ಸ್ಥಾವರವನ್ನು ಆದಷ್ಟು ಬೇಗ ಬದಲಾಯಿಸಬೇಕೆಂದು ಒತ್ತಾಯಿಸಿದರು. ಈ ವೇಳೆ ಕೊತ್ತೂರು ಗ್ರಾಮಸ್ಥರಾದ ಗೋಪಾಲಪ್ಪ, ಹನುಮಕ್ಕ, ಈಶ್ವರಪ್ಪ, ರಾಮಕೃಷ್ಣಪ್ಪ ಇದ್ದರು. ವರದಿ: ನಂದೀಶ್ ಕೊತ್ತೂರು, ನಿಡಗಲ್ ಹೋಬಳಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಕೊರಟಗೆರೆ: ಮಳೆಯನ್ನೇ ನಂಬಿ ಬದುಕು ಸಾಗಿಸುತ್ತಿರುವ ರೈತನಿಗೆ ಆಗಾಗ ಮಳೆ ಕೈಕೊಟ್ಟು ರೈತನನ್ನು ಸಂಕಷ್ಟಕ್ಕೆ ದೂಡುತ್ತಿದ್ದು, ಸರ್ಕಾರಗಳು ರೈತರಿಗೆ ಆಸರೆಯಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿ ಆರ್ಥಿಕವಾಗಿ ಮುಂದೆ ಬರಲು ಸಹಕಾರಿಯಾಗಬೇಕೆಂದು ವಡ್ಡಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವಸಂತರಾಜು ಸಲಹೆ ನೀಡಿದರು. ಕೊರಟಗೆರೆ ತಾಲ್ಲೂಕು ಗರುಗದೊಡ್ಡಿ ಗ್ರಾಮದಲ್ಲಿ ನೆಹರು ಯುವಕೇಂದ್ರ ತುಮಕೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ , ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘ ಮತ್ತು ವಲಯ ಸಂಶೋಧನಾ ಕೇಂದ್ರ ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಆತ್ಮನಿರ್ಭರ್ ಭಾರತ ಯೋಜನೆಯ ಕುರಿತು ಯುವಜನರಿಗೆ ಕಾರ್ಯಾಗಾರ ಹಾಗೂ ರೈತ ಫಲಾನುಭವಿಗಳಿಗೆ ಟಾರ್ಪಲ್ ವಿತರಣೆ , ಯುವಕ ಮತ್ತು ಯುವತಿ ಮಂಡಳಿಗಳಿಗೆ ಕ್ರೀಡಾ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೈತರು ಸದಾಕಾಲ ಶ್ರಮಜೀವಿಗಳು ಆದರೆ ಮಳೆರಾಯ ರೈತರೊಂದಿಗೆ ಜೂಜಾಟವಾಡುತ್ತಿದ್ದಾನೆ. ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ಹತಾಶನಾಗುತ್ತಿದ್ದಾನೆ. ಇಂತಹ ಸಂದರ್ಭದಲ್ಲಿ ಕೃಷಿ ಇಲಾಖೆ ರೈತರ ಸಂಕಷ್ಟವನ್ನು ದೂರ ಮಾಡಲು ಅಗತ್ಯ ಸಲಹೆ…
ರಾಜ್ಯದ ಪೊಲೀಸ್ ತರಬೇತಿ ಶಾಲೆಗಳಲ್ಲಿ ಮಹಿಳೆಯರ ಆತ್ಮರಕ್ಷಣೆಗಾಗಿ ವಿಶೇಷ ತರಬೇತಿ ನೀಡಲು ಗೃಹ ಇಲಾಖೆಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ ವಿವಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ ಓಬವ್ವ ಆತ್ಮರಕ್ಷಣಾ ಕಲೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಹಾಗೂ ಲೋಗೋ ಬಿಡುಗಡೆ ಮಾಡಿ ಅವರು ಮಾತನಾಡಿದರು. ರಾಜ್ಯದಲ್ಲಿ 12 ಪೊಲೀಸ್ ತರಬೇತಿ ಶಾಲೆಗಳಿದ್ದು, ವಿಶೇಷ ತರಬೇತಿ ನೀಡುವ ಮೂಲಕ ಮಹಿಳೆಯರ ಆತ್ಮರಕ್ಷಣೆಗೆ ಸನ್ನದ್ಧರನ್ನಾಗಿ ಮಾಡಲಾಗುವುದು. ಮಹಿಳೆಯರ ಬಗ್ಗೆ ಪೂಜ್ಯ ಭಾವನೆ ಹಾಗೂ ಗೌರವವಿದ್ದರೂ ದುಷ್ಟಶಕ್ತಿಗಳು ಅಮಾನುಷವಾಗಿ ನೋಡುವ ರೀತಿಯಿಂದ ಅಮಾಯಕ ಹೆಣ್ಣು ಮಕ್ಕಳು ನೋವು ಅನುಭವಿಸುತ್ತಿರುವುದನ್ನು ಇಡೀ ದೇಶವಲ್ಲ, ವಿಶ್ವದಲ್ಲೇ ನೋಡಿದ್ದೇವೆ. ಹಲವು ಕಾನೂನು ಹಾಗೂ ಕಾರ್ಯಕ್ರಮಗಳ ಮೂಲಕ ಇಂತಹ ದುಷ್ಟಶಕ್ತಿಗಳನ್ನು ತಡೆಯುವ ಪ್ರಯತ್ನ ಮತ್ತು ಆತ್ಮ ರಕ್ಷಣೆಗೆ ಆತ್ಮವಿಶ್ವಾಸ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾನೂನು, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ಸರ್ಕಾರ…
ಅಂತರ ರಾಷ್ಟ್ರೀಯ ಸಮುದಾಯದ ಎಚ್ಚರಿಕೆಯ ನಡುವೆಯೂ ತಾಲಿಬಾನ್ಗಳ ಹಿಡಿತದಲ್ಲಿರುವ ಆಫ್ಘಾನಿಸ್ತಾನದಲ್ಲಿ ಭಯೋತ್ಪಾದನೆಗೆ ಉತ್ತೇಜನ ನೀಡುವ ಹಲವು ಬೆಳವಣಿಗೆಗಳಾಗುತ್ತಿದ್ದು, ದಿನೇ ದಿನೇ ಜಾಗತಿಕ ಮಟ್ಟದ ಬೆದರಿಕೆ ಹೆಚ್ಚಾಗುತ್ತಿದೆ.ಸುಮಾರು ಎರಡು ದಶಕಗಳ ಕಾಲ ಆಫ್ಘಾನಿಸ್ತಾನದಲ್ಲಿ ನಾಗರಿಕ ಯುದ್ಧದಲ್ಲಿ ಭಾಗಿಯಾಗಿದ್ದ ಅಮೆರಿಕಾ ಸೇನೆ ಸಂಘರ್ಷ ಸ್ಥಗಿತಗೊಳಿಸುವುದಾಗಿ ಘೋಷಿಸಿದ ಬೆನ್ನಲ್ಲೆ ತಾಲಿಬಾನ್ಗಳು ಕಳೆದ ವರ್ಷದ ಆಗಸ್ಟ್ 15ರಂದು ಕಾಬೂಲ್ ಗೆ ನುಗ್ಗಿ ರಾಜಧಾನಿಯನ್ನು ವಶ ಪಡಿಸಿಕೊಂಡಿದ್ದರು. ಆಗಿನ ಅಧ್ಯಕ್ಷರು ದೇಶ ಬಿಟ್ಟು ಪರಾರಿಯಾಗಿದ್ದರು. ಸ್ಥಳೀಯ ನಾಗರಿಕರು, ವಿದೇಶಿ ಪ್ರಜೆಗಳು ಸುಮಾರು ಒಂದು ತಿಂಗಳ ಕಾಲ ಆಫ್ಘಾನಿಸ್ತಾನದಿಂದ ಹೊರ ಹೋಗುವ ಪ್ರಹಸನ ನಡೆಯಿತು. ಅಮೆರಿಕಾ, ಭಾರತ ಸೇರಿ ಹಲವು ರಾಷ್ಟ್ರಗಳು ವಿಶೇಷ ವಿಮಾನಗಳ ಮೂಲಕ ತಮ್ಮ ಪ್ರಜೆಗಳನ್ನು ಸುರಕ್ಷಿತವಾಗಿ ಕರೆಸಿಕೊಂಡಿದ್ದವು.ಬಳಿಕ ತಾಲಿಬಾನ್ಗಳು ಆಡಳಿತದ ಚುಕ್ಕಾಣಿ ಹಿಡಿದಿದ್ದರು. ಪ್ರಜಾ ಸತಾತ್ಮಕವಾಗಿ ಚುನಾಯಿತವಾಗಿದ್ದ ಸರ್ಕಾರವನ್ನು ಒಳಗೊಂಡಂತೆ ಸಂಯುಕ್ತ ಸರ್ಕಾರ ರಚಿಸಬೇಕು ಎಂದು ವಿಶ್ವಸಂಸ್ಥೆ ಸೇರಿದಂತೆ ವಿವಿಧ ರಾಷ್ಟ್ರಗಳು ಒತ್ತಡ ಹೇರಿದ್ದರು. ಆದರೆ ತಾಲಿಬಾನಿಗಳು ಅದಕ್ಕೆ ಸೊಪ್ಪು ಹಾಕಿಲ್ಲ. ಜಾಗತಿಕ ರಾಷ್ಟ್ರಗಳು ಹಲವು…