Author: admin

ಚಿತ್ರದುರ್ಗ :  ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿ ಅಬ್ಬಿನಹೊಳೆ  ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಕಾರ್ಯದಲ್ಲಿ  ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಅಬ್ಬಿನಹೊಳೆ  ಗ್ರಾಮ ಪಂಚಾಯಿತಿ ಕಾರ್ಯಾಲಯವು ವಿಫಲವಾಗಿದೆ  ಎಂದು ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯ ತಿಪ್ಪೇಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಹೊಸಹಳ್ಳಿ ಗ್ರಾಮಕ್ಕೆ ಇಂದಿಗೂ ಸಹ ಮೂಲಭೂತ ಸೌಕರ್ಯಗಳನ್ನು ನೀಡುವಲ್ಲಿ ಸಂಬಂಧಪಟ್ಟ  ಅಭಿವೃದ್ಧಿ ಅಧಿಕಾರಿಗಳು,  ವಿಫಲರಾಗುತ್ತಿದ್ದಾರೆ, ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯರಾದ ತಿಪ್ಪೇಸ್ವಾಮಿ ಅವರೇ  ಈ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ. ಹೊಸಕೆರೆ ಗ್ರಾಮದಲ್ಲಿನ ಎ.ಕೆ. ಕಾಲೋನಿಯಲ್ಲಿ  ಇಂದಿಗೂ  ಇಲ್ಲಿನ ಸ್ಥಳೀಯರಿಗೆ ಕುಡಿಯುವ ನೀರು, ಬೀದಿ ದೀಪಗಳು  ಸಹ ಸರಿಯಾದ ರೀತಿಯಲ್ಲಿ ಇಲ್ಲ.  ಇಲ್ಲಿನ ಸರ್ಕಾರಿ ಶಾಲೆಯ ಮುಂದೆ ಕೊಚ್ಚೆ ತುಂಬಿದ್ದರೂ  ಯಾರು ಸಹ ಗಮನಕ್ಕೆ ತೆಗೆದುಕೊಳ್ಳದೇ ಬೇಜಾವ್ದಾರಿತನ ತೋರುತ್ತಿದ್ದಾರೆ ಎಂದು ಗ್ರಾಮ ಪಂಚಾಯತಿ ಸದಸ್ಯರಾದ ತಿಪ್ಪೇಸ್ವಾಮಿ  ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ವರದಿ:  ಮುರುಳಿಧರನ್ ಆರ್.,  ಹಿರಿಯೂರು. ( ಚಿತ್ರದುರ್ಗ…

Read More

ಹೊಸದುರ್ಗ: ಭಾರತೀಯ ದಲಿತ ಸಂಘರ್ಷ ಸಮಿತಿ(ಸಮಾಜಸೇವಾ ರತ್ನ ಡಾ.ಪ್ರಕಾಶ್ ಬಿರಾವರ್ ಸ್ಥಾಪಿತ)  ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಪ್ರಕಾಶ್  ಬಿರಾವಾರ  ಅವರ ಆದೇಶದ ಮೇರೆಗೆ ರಾಜ್ಯ ಕಾರ್ಯಾಧ್ಯಕ್ಷರಾದ ಕೆ ತಿಮ್ಮರಾಜು, ರಾಜ್ಯ ಹಿರಿಯ  ಉಪಾಧ್ಯಕ್ಷರಾದ ಚೋಳಗುಡ್ಡ ಚಂದ್ರಣ್ಣ, ಮತ್ತೊಬ್ಬ ರಾಜ್ಯ ಉಪಾಧ್ಯಕ್ಷರಾದ ಚಂದ್ರಣ್ಣ ಘಾಟ್  ಹಾಗೂ ಚಿತ್ರದುರ್ಗ  ಜಿಲ್ಲಾ ಅಧ್ಯಕ್ಷರಾದ ಹರೀಶ್  ನೇತೃತ್ವದಲ್ಲಿ ಹೊಸದುರ್ಗ ದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ  ಪೂಜಾರ್ ಕರಿಯಪ್ಪ ಅವರನ್ನು ಚಿತ್ರದುರ್ಗ ಜಿಲ್ಲಾ ಹಿರಿಯ ಉಪಾಧ್ಯಕ್ಷರನ್ನಾಗಿ ಆಯ್ಕೆ  ಮಾಡಲಾಯಿತು. ಹೊಸದುರ್ಗ ತಾಲ್ಲೂಕು ಅಧ್ಯಕ್ಷರನ್ನಾಗಿ ಪರಮೇಶ್ ಬಿ. ಅವರನ್ನು ಆಯ್ಕೆ ಮಾಡಲಾಯಿತು. ತಾಲ್ಲೂಕಿನ ಕಾರ್ಯಾಧ್ಯಕ್ಷರನ್ನಾಗಿ ರ೦ಗಸ್ವಾಮಿ ಎಸ್. ಅವರನ್ನು ಆಯ್ಕೆ ಮಾಡಲಾಯಿತು. ತಾಲ್ಲೂಕು ಯುವ ಘಟಕದ ಅಧ್ಯಕ್ಷರನ್ನಾಗಿ ನಿರಂಜನ್ ಮೂರ್ತಿ ಅವರನ್ನು ಆಯ್ಕೆ ಮಾಡಲಾಯಿತು.  ತಾಲ್ಲೂಕು ಉಪಾಧ್ಯಕ್ಷರನ್ನಾಗಿ ಕರಡಿ ಬಸವರಾಜು ಅವರನ್ನು ಆಯ್ಕೆ ಮಾಡಲಾಯಿತು . ನಂತರ ಕರ್ನಾಟಕದ ರಾಜ್ಯ ಸಮಿತಿ ಹಾಗೂ ಜಿಲ್ಲಾ ಸಮಿತಿ.ಯನ್ನು ಹೊಸದುರ್ಗ ತಾಲ್ಲೂಕು ಸಮಿತಿ ವತಿಯಿಂದ  ಸನ್ಮಾನಿಸಲಾಯಿತು. ಸಭೆಯಲ್ಲಿ ಕಾಳಪ್ಪ  ಹನಮಂತಪ್ಪ .ವರದರಾಜು ದೇವರಾಜ್…

Read More

ಮಧುಗಿರಿ:  ತೀವ್ರ ಅನಾರೋಗ್ಯದಿಂದ ಬೇಸತ್ತ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದೊಡ್ಡೇರಿ ಹೋಬಳಿ ಲಕ್ಷೀಪುರದಲ್ಲಿ ನಡೆದಿದೆ. ದೊಡ್ಡೇರಿ ಗೊಲ್ಲರಹಟ್ಟಿಯ ಮಂಜುಳ ಎಂಬವರು ಆತ್ಮಹತ್ಯೆಗೆ ಶರಣಾದವರು ಎಂದು ಹೇಳಲಾಗಿದ್ದು, ಇವರು ತೀವ್ರವಾದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ನೋವಿನಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಯ ಮಾಹಿತಿ ದೊರೆಯುತ್ತಿದ್ದಂತೆಯೇ ಇನ್ ಸ್ಪೆಕ್ಟರ್ ಹನುಮಂತರಾಯಪ್ಪ ಹಾಗೂ ಸಿಬ್ಬಂದಿ , ತಹಸೀಲ್ದಾರ್ ಭೇಟಿ ನೀಡಿದ್ದು, ಘಟನೆಯ ಮಾಹಿತಿ ಪಡೆದುಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ. ಈ ವೇಳೇ  ಗ್ರಾ.ಪಂ. ಸದಸ್ಯ  ಮಂಜುನಾಥ ಕುಮಾರ್, ಮುದ್ದರಾಜು,  ವಕೀಲರಾದ ಶಿವಣ್ಣ,  ರಂಗಸ್ವಾಮಿ,  ಗಂಗಾಧರ ಮತ್ತಿತರ ಗ್ರಾಮಸ್ಥರಿದ್ದರು. ವರದಿ: ಮಹಾಲಿಂಗ ಡಿ.ಎಲ್. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಈ ವರ್ಷ ರಣಜಿ ಟ್ರೋಫಿಯಲ್ಲಿ ತಮ್ಮ ಮೊದಲ ಪ್ರಥಮ ದರ್ಜೆಯ ಋತುವಿಗೆ ಮರಳಿದ ಎಸ್. ಶ್ರೀಶಾಂತ್ (S.Sreesanth) ಅವರು ಎಲ್ಲಾ ರೀತಿಯ ಕ್ರಿಕೆಟ್ ಮಾದರಿಯಿಂದ ನಿವೃತ್ತಿ ಘೋಷಿಸಿದ್ದಾರೆ. ಟ್ವಿಟರ್‌ ನಲ್ಲಿ ನಿವೃತ್ತಿ ಘೋಷಿಸಿದ ಅವರು ಟೀಂ ಇಂಡಿಯಾವನ್ನು ಪ್ರತಿನಿಧಿಸುವುದು ಗೌರವದ ಸಂಗತಿ ಎಂದು ಹೇಳಿದ್ದಾರೆ. ವರದಿ: ಆಂಟೋನಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಈ ರಾಜ್ಯಗಳ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ನಿರ್ಧರಿಸಲಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಚುನಾವಣಾ ಫಲಿತಾಂಶ ಈ ವರ್ಷ ನಡೆಯಲಿರುವ ರಾಷ್ಟ್ರಪತಿ ಚುನಾವಣೆ (President election)ಮೇಲೂ ನೇರ ಪರಿಣಾಮ ಬೀರಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಕೊನೆಗೊಳ್ಳಲಿದೆ. ಮಾರ್ಚ್ 10 ಅಂದರೆ ಇಂದು ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಮಣಿಪುರ ಮತ್ತು ಗೋವಾ ವಿಧಾನಸಭೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ (five state election result). ಇಂದಿನ ಈ ಫಲಿತಾಂಶ 2022 ರ ರಾಷ್ಟ್ರಪತಿ ಚುನಾವಣೆಯಲ್ಲಿ ಯಾವ ಪಕ್ಷ ಅಥವಾ ಒಕ್ಕೂಟವು ನಿರ್ಣಾಯಕ ಪಾತ್ರ ವಹಿಸಲಿದೆ ಎನ್ನುವುದು ಕೂಡಾ ನಿರ್ಣಯವಾಗಲಿದೆ. ಹೆಚ್ಚಲಿದೆಯೇ ಬಿಜೆಪಿ ಸಂಕಷ್ಟ : ಎಕ್ಸಿಟ್ ಪೋಲ್ ಫಲಿತಾಂಶ (Exit poll 2022 result) ಭವಿಷ್ಯ ನುಡಿದಂತೆ ನಡೆದರೆ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿಗೆ ಕಷ್ಟ ಎದುರಾಗಲಿದೆ. ಯುಪಿಯಲ್ಲಿ ನಡೆದ ಹಲವು ಎಕ್ಸಿಟ್ ಪೋಲ್‌ಗಳನ್ನು ವಿಶ್ಲೇಷಿಸಿದರೆ, ಬಿಜೆಪಿ…

Read More

ಬಹುನಿರೀಕ್ಷಿತ ‘ಪಂಚ’ ರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಐದೂ ರಾಜ್ಯಗಳಲ್ಲಿ ಯಾವ ಪಕ್ಷ ಅಧಿಕಾರದ ಗದ್ದುಗೆ ಏರಲಿದೆ ಎಂಬುದರ ಬಗ್ಗೆ ತೀವ್ರ ಕುತೂಹಲ ಮೂಡಿದೆ. ಮತದಾರ ಪ್ರಭು ಯಾರಿಗೆ ಆಶೀರ್ವಾದ ಮಾಡಿದ್ದಾನೆಂಬುದು ಇಂದು ತಿಳಿದುಬರಲಿದೆ. ಉತ್ತರಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ ಮತ್ತು ಮಣಿಪುರ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದ ತಾಜಾ ಮಾಹಿತಿಯನ್ನು ನಾವು ಇಲ್ಲಿ ನಿಮಗೆ ನೀಡಲಿದ್ದೇವೆ. ಆರಂಭಿಕ ಟ್ರೆಂಡ್ ನ ಪ್ರಕಾರ ಪಂಜಾಬ್‌ನ ಮುಕೇರಿಯನ್ ವಿಧಾನಸಭಾ ಕ್ಷೇತ್ರದಲ್ಲಿ ಶಿರೋಮಣಿ ಅಕಾಲಿದಳ ಮುನ್ನಡೆ ಸಾಧಿಸಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.ವಿಧಾನಸಭಾ ಚುನಾವಣೆಯ ಫಲಿತಾಂಶದ ದಿನದಂದು ಮಣಿಪುರ ಸಿಎಂ ಎನ್.ಬಿರೇನ್ ಸಿಂಗ್ ಇಂಫಾಲ್‌ನ ಶ್ರೀ ಗೋವಿಂದಜೀ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಉತ್ತರಪ್ರದೇಶ ವಿಧಾನಸಭಾ ಚುನಾವಣೆಯನ್ನು ದೇಶದ ಮಿನಿ ಮಹಾಚುನಾವಣೆ ಎಂದು ಪರಿಗಣಿಸಲಾಗುತ್ತದೆ. ಉತ್ತರಪ್ರದೇಶ ಮತ್ತು ಮಣಿಪುರದಲ್ಲಿ ಬಿಜೆಪಿಗೆ ಸ್ಪಷ್ಟ ಗೆಲುವು ಸಿಗಲಿದೆ, ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಕಮಾಲ್ ಮಾಡಿದರೆ, ಉತ್ತರಾಖಂಡ ಮತ್ತು ಗೋವಾದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ…

Read More

ನೆಲಮಂಗಲ: ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಸುಮಾರು 20 ಕಾರ್ಮಿಕರಿಗೆ ತೀವ್ರವಾದ ಗಾಯಗಳಾದ ಘಟನೆ ಇಲ್ಲಿನ ಚಿಕ್ಕ ಪಾಲನಹಳ್ಳಿ ಗೇಟ್ ಬಳಿ ಗುರುವಾರ ಸಂಜೆ  ನಡೆದಿದೆ. ತಾಲ್ಲೂಕಿನ ಮಾರತ್ಹಳ್ಳಿ ಬಳಿಯಿರುವ ಟೆಕ್ಸ್  ಪೋರ್ಟ್ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹೆಣ್ಣುಮಕ್ಕಳು ಸಂಜೆ  ಕೆಲಸ ಮುಗಿಸಿ ತಮ್ಮ ಊರುಗಳಿಗೆ ಈ ಬಸ್ಸಿನಲ್ಲಿ ವಾಪಸ್  ಬರುತ್ತಿದ್ದರು ಎನ್ನಲಾಗಿದೆ. ಬಸ್ಸಿನ ಚಾಲಕ ಮದ್ಯದ ಅಮಲಿನಲ್ಲಿದ್ದು, ನಿರ್ಲಕ್ಷ್ಯದಿಂದ ಬಸ್ ಚಲಾಯಿಸಿದ್ದಾನೆ ಎನ್ನಲಾಗಿದೆ. ಚಿಕ್ಕ  ಪಾಲನಹಳ್ಳಿ ಗೇಟ್ ಬಳಿ ಎದುರಿನಿಂದ ಬಂದ ಕಾರನ್ನು ತಪ್ಪಿಸುವ ಭರದಲ್ಲಿ ಈ ಅಪಘಾತ ಸಂಭವಿಸಿದ್ದು,  ಬಸ್ 3 ಪಲ್ಟಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯಲ್ಲಿ 20ಕ್ಕೂ ಅಧಿಕ ಮಹಿಳೆಯರಿಗೆ ಗಾಯಳಾಗಿದ್ದು, ಕೆಲವು ಮಹಿಳೆಯರ ಸ್ಥಿತಿ ಗಂಭೀರವಾಗಿದೆ. ಬಸ್ಸಿನಲ್ಲಿದ್ದ ಮಹಿಳೆಯರು ಎಷ್ಟೇ ಹೇಳಿದರೂ ಕೇಳದ ಚಾಲಕ, ನಿಮ್ಮೆಲ್ಲರ ಪ್ರಾಣ ನನ್ನ ಕೈಲಿದೆ ಎಂದು ಉಡಾಫೆ ಉತ್ತರವನ್ನು ನೀಡಿ,  ಕುಡಿದ ಅಮಲಿನಲ್ಲಿ ಅತಿ ವೇಗದಿಂದ ಚಾಲನೆ ಮಾಡಿದ್ದರಿಂದ ಈ ಅವಘಡ…

Read More

ಹಿರಿಯೂರು: ತಾಲ್ಲೂಕಿನ ವಾಣಿ ಸಕ್ಕರೆ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನಲ್ಲಿ ಸಾಂಸ್ಕೃತಿಕ ಸಮಿತಿ, ಐ.ಕ್ಯೂ.ಎ.ಸಿ, ಎನ್.ಎಸ್.ಎಸ್., ಕ್ರೀಡೆ, ಯೂತ್ ರೆಡ್ ಕ್ರಾಸ್, ರೇಂಜರ್ಸ್ ಹಾಗೂ ರೋವರ್ಸ್ ಸಹಯೋಗದಲ್ಲಿ   ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಿರಿಯೂರು ತಾಲ್ಲೂಕಿನ ಶಾಸಕಿ ಪೂರ್ಣಿಮಾ ಶ್ರೀನಿವಾಸ್ , ಮಹಿಳಾ ದಿನಾಚರಣೆ ಕೇವಲ ಒಂದು ದಿನದ ಆಚರಣೆಯಾಗಿ ಉಳಿಯದೇ,  ಸಮಾಜದಲ್ಲಿ ಮಹಿಳೆಯರಿಗೆ ಉತ್ತಮ ಸ್ಥಾನಮಾನ, ಗೌರವ ಹಾಗೂ ಸ್ವಾತಂತ್ರ್ಯ ಸಿಗುವಂತಾಗಬೇಕು  ಎಂದು ಹೇಳಿದರು. ನಮ್ಮ ಭಾರತ ದೇಶದಲ್ಲಿ ಮಹಿಳೆಯರಿಗೆ ತಮ್ಮದೇ ಆದ  ಸ್ಥಾನಮಾನ, ಗೌರವಗಳಿದ್ದು, ಸಮಾಜದಲ್ಲಿ ಮಹಿಳೆಯರನ್ನು ಅತ್ಯಂತ ಗೌರವಪೂರ್ಣವಾಗಿ ಕಾಣಲಾಗುತ್ತಿದೆ. ಆದರೂ ನಮ್ಮ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಇನ್ನು ಅನೇಕ ಮೂಢನಂಬಿಕೆ ಆಚರಣೆಗಳು, ಕಟ್ಟುಪಾಡುಗಳಿದ್ದು, ಈ ಎಲ್ಲಾ ಆಚರಣೆಗಳು ಹಾಗೂ ಕಟ್ಟುಪಾಡುಗಳಿಂದ ಮಹಿಳೆಯರು ಹೊರಬರಬೇಕು  ಎಂದು ಕರೆ ನೀಡಿದರು. ಸಮಾಜದಲ್ಲಿ ಮಹಿಳೆಯರು ಮತ್ತು ಪುರುಷರು ಒಂದು ಕುಟುಂಬಕ್ಕೆ ಎರಡು ಕಣ್ಣುಗಳಿದ್ದಂತೆ,  ಆದರೂ, ಕೆಲವು ಸಂದರ್ಭದಲ್ಲಿ ಪುರುಷರಿಂದ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದು, ಮಹಿಳೆಯರ …

Read More

ಕೊರಟಗೆರೆ: ಪಟ್ಟಣದ ಬಸವೇಶ್ವರ ಸಮುದಾಯ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಿಳಾ ಘಟಕದ ವತಿಯಿಂದ ಸರಿಗಮಪ ಖ್ಯಾತಿಯ ಮಧುಗಿರಿ ಮೂಲದ ರತ್ನಮ್ಮ ಮಂಜಮ್ಮ ರವರಿಗೆ ವಿಶೇಷವಾಗಿ ಸನ್ಮಾನಿಸಲಾಯಿತು . ನಂತರ ರತ್ನಮ್ಮ ಜಯಮ್ಮ ರಿಂದ ಮಾದೇಶ್ವರನ ಗೀತೆಯನ್ನು ಹಾಡುವಂತೆ ಬಂದಿದ್ದ ಸಾರ್ವಜನಿಕರು ಕೇಳಿಕೊಂಡರು ಸಾರ್ವಜನಿಕರ ಬೇಡಿಕೆಯಂತೆ ರತ್ನಮ್ಮ ಮಂಜಮ್ಮ ಮಾದೇಶ್ವರನ ಗೀತೆಯನ್ನು ಹಾಡಿ ಬಂದಿದ್ದ ಸಾರ್ವಜನಿಕರಿಗೆ  ಮನರಂಜಿಸಿದರು . ನಂತರ ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಅವರು ಮಾತನಾಡಿ, ನಾಡಿನ ಸಮಸ್ತ ಮಹಿಳೆಯರಿಗೆ ಮಹಿಳಾ ದಿನಾಚರಣೆಯ ಶುಭಾಶಯವನ್ನು ಕೋರಿ ಪ್ರತಿಯೊಬ್ಬ ಪುರುಷನ ಯಶಸ್ಸಿನ  ಹಿಂದೆ ಒಂದು ಹೆಣ್ಣು ಇದ್ದೇ ಇರುತ್ತಾಳೆ ಆ ಮಹಾತಾಯಿಯ ತಾಳ್ಮೆಗೆ ನಾವೆಲ್ಲರೂ ಶರಣಾಗಲೇಬೇಕು ನಮ್ಮನ್ನು ಹೆತ್ತು ಹೊತ್ತು ಸಾಕಿ ಸಲುಹಿ ನಮ್ಮದೊಂದು ಗುರಿಯತ್ತ ಮುಟ್ಟಿಸುವಲ್ಲಿ  ಹೆಣ್ಣಿನ ಮಹತ್ವ ಬಹು  ದೊಡ್ಡದು ಎಂದು ತಿಳಿಸಿದರು . ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ತಿಪಟೂರು: ತುಮಕೂರಿನಿಂದ ಶಿವಮೊಗ್ಗದವರೆಗೆ ರಾಷ್ಟ್ರೀಯ ಹೆದ್ದಾರಿ ಯೋಜನೆ ಪ್ರಾರಂಭಗೊಂಡಿದೆ ಆದರೆ ರಾಷ್ಟ್ರೀಯ ಹೆದ್ದಾರಿ ಯೋಜನೆಯಾಗಿ ಮನೆ ನಿವೇಶನ ಹಾಗೂ ಜಮೀನು ಕಳೆದುಕೊಂಡ ತಾಲೂಕಿನ ತಿಪ್ಪನಹಳ್ಳಿ ಗ್ರಾಮಸ್ಥರಿಗೆ ಇನ್ನೂ ಕೂಡ ಸೂಕ್ತ ಪರಿಹಾರ ನೀಡಿಲ್ಲ ಪರಿಹಾರ ನೀಡುವವರೆಗೂ ಶಾಂತಿಯುತವಾಗಿ ನಿರಂತರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಕೆ.ಟಿ. ಶಾಂತಕುಮಾರ್ ತಿಳಿಸಿದರು. ತಾಲೂಕಿನ ಕಿಬ್ಬನಹಳ್ಳಿ ಕ್ರಾಸ್ ನಲ್ಲಿ ಪ್ರತಿಭಟನೆ ಕೈಗೊಂಡ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು,  ಕಿಬ್ಬನಹಳ್ಳಿ ಕ್ರಾಸ್ ನಲ್ಲಿ 125ಕ್ಕೂ ಹೆಚ್ಚು ನಿವೇಶನದ ಮನೆಯನ್ನು ರಾಷ್ಟ್ರೀಯ ಹೆದ್ದಾರಿ ಗಾಗಿ ಸಂತ್ರಸ್ತರು ಕಳೆದುಕೊಂಡಿದ್ದಾರೆ.  ಆದರೆ ಕಳೆದ ಆರು ವರ್ಷಗಳಿಂದ ಹೆದ್ದಾರಿ ಪ್ರಾಧಿಕಾರದವರು ನೋಟಿಸ್ ನೀಡಿದ್ದು ಬಿಟ್ಟರೆ, ಒಂದು ನಯಾ ಪೈಸೆ ಕೂಡ ಪರಿಹಾರದ ಹಣವನ್ನು ಇದುವರೆಗೂ ನೀಡಿರುವುದಿಲ್ಲ. ಭೂ ಕಾಯ್ದೆ ಪ್ರಕಾರ ಭೂಮಿ ಕಳೆದುಕೊಂಡವರಿಗೆ ಒಂದು ವರ್ಷದ ಒಳಗೆ ಪರಿಹಾರ ನೀಡಬೇಕು. ಆದರೆ ಭೂಮಿ ಕಳೆದುಕೊಂಡು ಆರು ವರ್ಷ ಕಳೆದರೂ ಕೂಡ ಜಿಲ್ಲಾಡಳಿತ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ನಿವೇಶನ ಮನೆ ಜಮೀನು…

Read More