Author: admin

ಪಾವಗಡ:  ತಾಲೂಕು ನಿಡಿಗಲ್ ಹೋಬಳಿ ಸಿ.ಕೆ.ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊತ್ತೂರು ಶಾಲೆ ಭಾಗ ಗೋಪಾಲ್ ರೆಡ್ಡಿ ಮನೆಯವರಿಗೂ ಹಾದುಹೋಗಿರುವ ವಿದ್ಯುತ್ ತಂತಿ ಇಂದು ಕೆಳಗಡೆ ಬಿದ್ದಿದೆ ಘಟನೆ ಸಂಭಂಧ ಆಕ್ರೋಶ ವ್ಯಕ್ತಪಡಿಸಿ ಗ್ರಾಮಸ್ಥರು ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಈ ವಿದ್ಯುತ್ ಸ್ಥಾವರವನ್ನು ಆದಷ್ಟು ಬೇಗ ಬದಲಾಯಿಸಬೇಕೆಂದು  ಒತ್ತಾಯಿಸಿದರು. ಈ ವೇಳೆ ಕೊತ್ತೂರು ಗ್ರಾಮಸ್ಥರಾದ ಗೋಪಾಲಪ್ಪ, ಹನುಮಕ್ಕ, ಈಶ್ವರಪ್ಪ, ರಾಮಕೃಷ್ಣಪ್ಪ ಇದ್ದರು. ವರದಿ: ನಂದೀಶ್ ಕೊತ್ತೂರು, ನಿಡಗಲ್ ಹೋಬಳಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಕೊರಟಗೆರೆ:  ಮಳೆಯನ್ನೇ ನಂಬಿ ಬದುಕು ಸಾಗಿಸುತ್ತಿರುವ ರೈತನಿಗೆ ಆಗಾಗ ಮಳೆ ಕೈಕೊಟ್ಟು ರೈತನನ್ನು ಸಂಕಷ್ಟಕ್ಕೆ ದೂಡುತ್ತಿದ್ದು, ಸರ್ಕಾರಗಳು ರೈತರಿಗೆ ಆಸರೆಯಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿ ಆರ್ಥಿಕವಾಗಿ ಮುಂದೆ ಬರಲು ಸಹಕಾರಿಯಾಗಬೇಕೆಂದು ವಡ್ಡಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವಸಂತರಾಜು ಸಲಹೆ ನೀಡಿದರು. ಕೊರಟಗೆರೆ ತಾಲ್ಲೂಕು ಗರುಗದೊಡ್ಡಿ ಗ್ರಾಮದಲ್ಲಿ ನೆಹರು ಯುವಕೇಂದ್ರ ತುಮಕೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ , ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘ ಮತ್ತು ವಲಯ ಸಂಶೋಧನಾ ಕೇಂದ್ರ ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಆತ್ಮನಿರ್ಭರ್ ಭಾರತ ಯೋಜನೆಯ ಕುರಿತು ಯುವಜನರಿಗೆ ಕಾರ್ಯಾಗಾರ ಹಾಗೂ ರೈತ ಫಲಾನುಭವಿಗಳಿಗೆ ಟಾರ್ಪಲ್ ವಿತರಣೆ , ಯುವಕ ಮತ್ತು ಯುವತಿ ಮಂಡಳಿಗಳಿಗೆ ಕ್ರೀಡಾ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೈತರು ಸದಾಕಾಲ ಶ್ರಮಜೀವಿಗಳು ಆದರೆ ಮಳೆರಾಯ ರೈತರೊಂದಿಗೆ ಜೂಜಾಟವಾಡುತ್ತಿದ್ದಾನೆ. ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ಹತಾಶನಾಗುತ್ತಿದ್ದಾನೆ. ಇಂತಹ ಸಂದರ್ಭದಲ್ಲಿ ಕೃಷಿ ಇಲಾಖೆ ರೈತರ ಸಂಕಷ್ಟವನ್ನು ದೂರ ಮಾಡಲು ಅಗತ್ಯ ಸಲಹೆ…

Read More

ರಾಜ್ಯದ ಪೊಲೀಸ್ ತರಬೇತಿ ಶಾಲೆಗಳಲ್ಲಿ ಮಹಿಳೆಯರ ಆತ್ಮರಕ್ಷಣೆಗಾಗಿ ವಿಶೇಷ ತರಬೇತಿ ನೀಡಲು ಗೃಹ ಇಲಾಖೆಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ ವಿವಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ ಓಬವ್ವ ಆತ್ಮರಕ್ಷಣಾ ಕಲೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಹಾಗೂ ಲೋಗೋ ಬಿಡುಗಡೆ ಮಾಡಿ ಅವರು ಮಾತನಾಡಿದರು. ರಾಜ್ಯದಲ್ಲಿ 12 ಪೊಲೀಸ್ ತರಬೇತಿ ಶಾಲೆಗಳಿದ್ದು, ವಿಶೇಷ ತರಬೇತಿ ನೀಡುವ ಮೂಲಕ ಮಹಿಳೆಯರ ಆತ್ಮರಕ್ಷಣೆಗೆ ಸನ್ನದ್ಧರನ್ನಾಗಿ ಮಾಡಲಾಗುವುದು. ಮಹಿಳೆಯರ ಬಗ್ಗೆ ಪೂಜ್ಯ ಭಾವನೆ ಹಾಗೂ ಗೌರವವಿದ್ದರೂ ದುಷ್ಟಶಕ್ತಿಗಳು ಅಮಾನುಷವಾಗಿ ನೋಡುವ ರೀತಿಯಿಂದ ಅಮಾಯಕ ಹೆಣ್ಣು ಮಕ್ಕಳು ನೋವು ಅನುಭವಿಸುತ್ತಿರುವುದನ್ನು ಇಡೀ ದೇಶವಲ್ಲ, ವಿಶ್ವದಲ್ಲೇ ನೋಡಿದ್ದೇವೆ. ಹಲವು ಕಾನೂನು ಹಾಗೂ ಕಾರ್ಯಕ್ರಮಗಳ ಮೂಲಕ ಇಂತಹ ದುಷ್ಟಶಕ್ತಿಗಳನ್ನು ತಡೆಯುವ ಪ್ರಯತ್ನ ಮತ್ತು ಆತ್ಮ ರಕ್ಷಣೆಗೆ ಆತ್ಮವಿಶ್ವಾಸ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾನೂನು, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ಸರ್ಕಾರ…

Read More

ಅಂತರ ರಾಷ್ಟ್ರೀಯ ಸಮುದಾಯದ ಎಚ್ಚರಿಕೆಯ ನಡುವೆಯೂ ತಾಲಿಬಾನ್‍ಗಳ ಹಿಡಿತದಲ್ಲಿರುವ ಆಫ್ಘಾನಿಸ್ತಾನದಲ್ಲಿ ಭಯೋತ್ಪಾದನೆಗೆ ಉತ್ತೇಜನ ನೀಡುವ ಹಲವು ಬೆಳವಣಿಗೆಗಳಾಗುತ್ತಿದ್ದು, ದಿನೇ ದಿನೇ ಜಾಗತಿಕ ಮಟ್ಟದ ಬೆದರಿಕೆ ಹೆಚ್ಚಾಗುತ್ತಿದೆ.ಸುಮಾರು ಎರಡು ದಶಕಗಳ ಕಾಲ ಆಫ್ಘಾನಿಸ್ತಾನದಲ್ಲಿ ನಾಗರಿಕ ಯುದ್ಧದಲ್ಲಿ ಭಾಗಿಯಾಗಿದ್ದ ಅಮೆರಿಕಾ ಸೇನೆ ಸಂಘರ್ಷ ಸ್ಥಗಿತಗೊಳಿಸುವುದಾಗಿ ಘೋಷಿಸಿದ ಬೆನ್ನಲ್ಲೆ ತಾಲಿಬಾನ್‍ಗಳು ಕಳೆದ ವರ್ಷದ ಆಗಸ್ಟ್ 15ರಂದು ಕಾಬೂಲ್‍ ಗೆ ನುಗ್ಗಿ ರಾಜಧಾನಿಯನ್ನು ವಶ ಪಡಿಸಿಕೊಂಡಿದ್ದರು. ಆಗಿನ ಅಧ್ಯಕ್ಷರು ದೇಶ ಬಿಟ್ಟು ಪರಾರಿಯಾಗಿದ್ದರು. ಸ್ಥಳೀಯ ನಾಗರಿಕರು, ವಿದೇಶಿ ಪ್ರಜೆಗಳು ಸುಮಾರು ಒಂದು ತಿಂಗಳ ಕಾಲ ಆಫ್ಘಾನಿಸ್ತಾನದಿಂದ ಹೊರ ಹೋಗುವ ಪ್ರಹಸನ ನಡೆಯಿತು. ಅಮೆರಿಕಾ, ಭಾರತ ಸೇರಿ ಹಲವು ರಾಷ್ಟ್ರಗಳು ವಿಶೇಷ ವಿಮಾನಗಳ ಮೂಲಕ ತಮ್ಮ ಪ್ರಜೆಗಳನ್ನು ಸುರಕ್ಷಿತವಾಗಿ ಕರೆಸಿಕೊಂಡಿದ್ದವು.ಬಳಿಕ ತಾಲಿಬಾನ್‍ಗಳು ಆಡಳಿತದ ಚುಕ್ಕಾಣಿ ಹಿಡಿದಿದ್ದರು. ಪ್ರಜಾ ಸತಾತ್ಮಕವಾಗಿ ಚುನಾಯಿತವಾಗಿದ್ದ ಸರ್ಕಾರವನ್ನು ಒಳಗೊಂಡಂತೆ ಸಂಯುಕ್ತ ಸರ್ಕಾರ ರಚಿಸಬೇಕು ಎಂದು ವಿಶ್ವಸಂಸ್ಥೆ ಸೇರಿದಂತೆ ವಿವಿಧ ರಾಷ್ಟ್ರಗಳು ಒತ್ತಡ ಹೇರಿದ್ದರು. ಆದರೆ ತಾಲಿಬಾನಿಗಳು ಅದಕ್ಕೆ ಸೊಪ್ಪು ಹಾಕಿಲ್ಲ. ಜಾಗತಿಕ ರಾಷ್ಟ್ರಗಳು ಹಲವು…

Read More

ನವದೆಹಲಿ: ಕೊರೊನಾ ವಿರುದ್ಧ ಹೋರಾಡಲು ಭಾರತದ ಡ್ರಗ್ಸ್ ಕಂಟ್ರೋಲರ್ ಜನರಲ್‌ನಿಂದ ‘ಸ್ಪುಟ್ನಿಕ್ ಲೈಟ್’ ಲಸಿಕೆ ಬಳಕೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ. ಸ್ಪುಟ್ನಿಕ್ ಲೈಟ್‌ ನ ಅನುಮತಿಯೊಂದಿಗೆ, ಈಗ ದೇಶದಲ್ಲಿ ಒಟ್ಟು 9 ಕೊರೊನಾ ಲಸಿಕೆಗಳನ್ನು ಬಳಸಲಾಗುತ್ತಿದೆ. ಸ್ಪುಟ್ನಿಕ್ ಲೈಟ್, ಸ್ಪುಟ್ನಿಕ್-ವಿ ಕಾಂಪೊನೆಂಟ್-1 ಅನ್ನು ಹೋಲುತ್ತದೆ. ಅಲ್ಲದೇ ಈ ಲಸಿಕೆಯು ಸೋಂಕಿನ ವಿರುದ್ಧ ರಾಷ್ಟ್ರದ ಸಾಮೂಹಿಕ ಹೋರಾಟವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಹೇಳಿದ್ದಾರೆ. ಡಾ. ರೆಡ್ಡೀಸ್ ಲ್ಯಾಬೋರೇಟರೀಸ್ ಅವರು ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದಿಂದ ಅನುಮತಿ ಕೋರಿದ್ದರು. ಹೈದರಾಬಾದ್ ಮೂಲದ ಫಾರ್ಮಾ ಕಂಪನಿಯು ಸೆಪ್ಟೆಂಬರ್ 2020 ರಲ್ಲಿ ಸ್ಪುಟ್ನಿಕ್ V ಮತ್ತು ಭಾರತದಲ್ಲಿ ಅದರ ವಿತರಣೆಯ ಕ್ಲಿನಿಕಲ್ ಪ್ರಯೋಗ ನಡೆಸಲು ರಷ್ಯಾದ ನೇರ ಹೂಡಿಕೆ ನಿಧಿಯೊಂದಿಗೆ (RDIF) ಒಪ್ಪಂದ ಮಾಡಿಕೊಂಡಿತ್ತು. ಡಾ ರೆಡ್ಡೀಸ್ ಲ್ಯಾಬೊರೇಟರೀಸ್ ಪ್ರಕಾರ, ಅರ್ಜೆಂಟೀನಾ ಮತ್ತು ರಷ್ಯಾ ಸೇರಿದಂತೆ 29 ದೇಶಗಳಲ್ಲಿ ಸ್ಪುಟ್ನಿಕ್ ಲೈಟ್ ಅನ್ನು ಪ್ರಯೋಗಕ್ಕೆ…

Read More

ತ್ರಿಪುರಾ: ವ್ಯಕ್ತಿಯೊರ್ವ ಆಲ್ಕೋಹಾಲ್ ಎಂದು ತಪ್ಪಾಗಿ ಆಸಿಡ್ ಕುಡಿದು ಸಾವನ್ನಪ್ಪಿರುವ ಘಟನೆ ತ್ರಿಪುರಾದ ಖೋವೈ ಜಿಲ್ಲೆಯ ಲಂಕಾಪುರ ಎಡಿಸಿ ಗ್ರಾಮದಲ್ಲಿ ನಡೆದಿದೆ. 55 ವರ್ಷದ ಕಾರ್ತಿಕ್ ಮೋಹನ್ ದೆಬ್ಬರ್ಮ ಮೃತಪಟ್ಟಿರುವ ವ್ಯಕ್ತಿ. ಕಾರ್ತಿಕ್ ಮೋಹನ್ ದೆಬ್ಬರ್ಮ ದಿನನಿತ್ಯ ಕುಡಿಯುವ ಅಭ್ಯಾಸ ಬೆಳೆಸಿಕೊಂಡಿದ್ದ. ಕುಡಿದ ಅಮಲಿನಲ್ಲಿ ಆಸಿಡ್ ತುಂಬಿದ ಬಾಟಲಿಯನ್ನು ಶುಕ್ರವಾರ ರಾತ್ರಿ ಕುಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ದೆಬ್ಬರ್ಮ ಸ್ಥಳೀಯ ಹಳ್ಳಿಗಾಡಿನ ಮದ್ಯದ ಅಂಗಡಿಯಲ್ಲಿ ಅತಿಯಾಗಿ ಕುಡಿದಿದ್ದು, ಮನೆಗೆ ಹೋಗಿ ಮಲಗಿಕೊಂಡಿದ್ದಾನೆ. ನಂತರ ಮಧ್ಯರಾತ್ರಿ ಎದ್ದು, ಮದ್ಯ ಕುಡಿಯಲು ಹುಡುಕಾಡಿದ್ದಾನೆ. ಆದರೆ ಆತನ ಕೈಗೆ ಮನೆಯಲ್ಲಿದ್ದ ಆಸಿಡ್ ಬಾಟಲಿ ಸಿಕ್ಕಿದೆ. ಅದನ್ನೇ ಮದ್ಯ ಎಂದು ತಿಳಿದ ದೆಬ್ಬರ್ಮ ಆಸಿಡ್ ಕುಡಿದಿದ್ದಾನೆ ಎಂದು ತಿಳಿದುಬಂದಿದೆ. ಆಸಿಡ್ ಕುಡಿದ ತಕ್ಷಣ ದೆಬ್ಬರ್ಮ ಪ್ರಜ್ಞಾಹೀನನಾಗಿದ್ದಾನೆ. ದೆಬ್ಬರ್ಮ ಕುಟುಂಬ ಸದಸ್ಯರು ಆತ ಪ್ರಜ್ಞಾಹೀನನಾಗಿರುವುದನ್ನು ನೋಡಿ ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು. ಆದರೆ ವೈದ್ಯರು ಆತ ಮೃತಪಟ್ಟಿದ್ದಾನೆ ಎಂದು ತಿಳಿಸಿದರು ಎಂದು ಮೂಲಗಳು…

Read More

ಚಿಕ್ಕಮಗಳೂರು: ಶಾಲೆ- ಕಾಲೇಜುಗಳಲ್ಲಿ ಹೆಚ್ಚಾಗುತ್ತಿರುವ ಹಿಜಾಬ್, ಕೇಸರಿ ಶಾಲು ಸಮರ ಬಳಿಕ ನೀಲಿ ಶಾಲು ಎಂಟ್ರಿ ಕೊಟ್ಟ ಘಟನೆ ಚಿಕ್ಕಮಗಳೂರಿನ ಐಡಿಎಸ್‌ ಜಿ ಕಾಲೇಜಿನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಮವಸ್ತ್ರ ಸಂಹಿತೆ ಪಾಲಿಸುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಆದರೂ ಇಂದು ರಾಜ್ಯದ ಬಹುತೇಕ ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದಾರೆ. ಹಾಗೂ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ. ಇದರಿಂದ ಕಾಲೇಜು ಆಡಳಿತ ಮಂಡಳಿಗೆ ತಲೆ ನೋವಾಗಿದ್ದು ಮುಂದೆ ಏನು ಎಂಬ ಭಯದಲ್ಲಿ ಕುಳಿತಿದ್ದಾರೆ. ಸದ್ಯ ಕೆಲ ಕಾಲೇಜುಗಳಲ್ಲಿ ರಜೆ ಘೋಷಿಸಲಾಗಿದೆ. ಕೆಲವು ಕಡೆ ವಿದ್ಯಾರ್ಥಿಗಳಿಗೆ ಕ್ಲಾಸ್ ರೂಂ ಪ್ರವೇಶಕ್ಕೆ ತಡೆ ಹಿಡಿಯಲಾಗಿದೆ. ಮತ್ತೇ ಕೆಲವು ಕಡೆ ಕಾಲೇಜುಗಳ ಮುಂದೆ ವಿದ್ಯಾರ್ಥಿಗಳು ಜೈಶ್ರೀರಾಮ್ ಎಂದು ಘೋಷಣೆ ಕೂಗುತ್ತಿದ್ದಾರೆ. ಈ ಘಟನೆಯ ನಡುವೆ ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ಹಿಜಾಬ್ ತೆಗೆಸಬಾರದೆಂದು ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಧರಣಿ ನಡೆಸುತ್ತಿದ್ದಾರೆ. ಚಿಕ್ಕಮಗಳೂರು ನಗರದ ಐಡಿಎಸ್‌ ಜಿ…

Read More

ತುರುವೇಕೆರೆ: ತಾಲ್ಲೂಕಿನ ತಾಳ್ಕೆರೆಯಲ್ಲಿ ಶುದ್ಧ ನೀರಿನ ಘಟಕವಿದ್ದರೂ , ಸಾರ್ವಜನಿಕರು ಸರಿಯಾಗಿ ಅದರ ಪ್ರಯೋಜನ ಪಡೆದುಕೊಳ್ಳಲು ಹೆಣಗಾಡುವ ರೀತಿ ಆಗಿದೆ. ತಾಳ್ಕೆರೆ ಪಂಚಾಯ್ತಿ ಪಕ್ಕದಲ್ಲೇ ಇರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಕಾಯಿನ್ ಬಾಕ್ಸ್ ಇಲ್ಲದೇ ನೀರು ತುಂಬಿಕೊಳ್ಳಲು ಬರುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ನೀರು ಬಿಡಲು ಯಾರೋ ಒಬ್ಬ ವ್ಯಕ್ತಿಯನ್ನು ನೇಮಿಸಿದ್ದಾರೆ ಮತ್ತು ಅವರು ಬರುವವರೆಗೂ ನೀರು ಸಿಗುವುದಿಲ್ಲ. ಇದರೊಂದಿಗೆ ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಮತ್ತು ಸಂಜೆ 4 ಗಂಟೆಯ ಮೇಲೆ ಮಾತ್ರ ನೀರಿನ ಲಭ್ಯತೆ ಇದೆ ಎಂದು ಬೋರ್ಡ್ ಕೂಡ ಹಾಕಲಾಗಿದೆ. ಇದ್ಯಾವುದೂ ಪಂಚಾಯ್ತಿಯ ಗಮನಕ್ಕೆ ಬಂದಿಲ್ಲವೇ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಇನ್ನಾದರೂ ಸಂಬಂಧ ಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿದಿಗಳು ಎಚ್ಚೆತ್ತುಕೊಂಡು ಈ ಸಮಸ್ಯೆಗೆ ಪರಿಹಾರ ನೀಡಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ. ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ತುಮಕೂರು: ಜಿಲ್ಲೆಯ ಸುಪ್ರಸಿದ್ದ ಪುಣ್ಯಕ್ಷೇತ್ರ ಕ್ಯಾಮೇನಹಳ್ಳಿಯ ಶ್ರೀ ಆಂಜನೇಯ ಸ್ವಾಮಿ ದೇವಾಲಯಕ್ಕೆ  ನಿನ್ನೆ ಬೀಗ ಹಾಕಿರುವ ಘಟನೆ  ನಡೆದಿದೆ. ಇತಿಹಾಸದಲ್ಲೇ ಮೊದಲ ಸಲ ಈ ಘಟನೆ ನಡೆದಿದ್ದು, ಭಕ್ತರು ತೀವ್ರ ಬೇಸರ ವ್ಯಕ್ತಪಡಿಸಿದ್ಧಾರೆ.  ಮುಜರಾಯಿ ಇಲಾಖೆ, ದೇವಾಲಯ ವ್ಯವಸ್ಥಾಪನ ಸಮಿತಿ ಮತ್ತು ಪರಿಚಾರಕನ ನಡುವಿನ ಗೊಂದಲ, ಸಮನ್ವಯ ಕೊರತೆಯಿಂದ ಭಕ್ತರಿಗೆ ಸಂಕಷ್ಟ ಸೃಷ್ಟಿಯಾಗಿದೆ. ಆಂಜನೇಯ ಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ಫೆ.6ರಿಂದ ಫೆ.17ರ ವರೆಗೆ ದೇವಾಲಯ ಪ್ರಧಾನ ಅರ್ಚಕರ ಹುದ್ದೆಗೆ ದೇವರಾಯನ ದುರ್ಗದ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಅರ್ಚಕ ಲಕ್ಷ್ಮೀನಾರಾಯಣ್ ತಾತ್ಕಾಲಿಕ ನಿಯೋಜಿಸಲು ಜಿಲ್ಲಾಧಿಕಾರಿ ಫೆ.3ರಂದು ಆದೇಶ ಮಾಡಿದ್ದಾರೆ. ಕಳೆದ ಐದು ವರ್ಷದಿಂದ ಅರ್ಚಕರನ್ನು ನೇಮಕ ಮಾಡದೇ ಮೌನ ವಹಿಸಿದ್ದ ಮುಜರಾಯಿ ಇಲಾಖೆ, ಈಗ ಏಕಾಏಕಿ ನೇಮಕ ಮಾಡಿರುವುದೇ ಸಮಸ್ಯೆ ಸೃಷ್ಟಿಯಾಗಲು ಕಾರಣವಾಗಿದೆ. ಈ ನಡುವೆ ಜಿಲ್ಲಾಧಿಕಾರಿ ಶ್ರೀ ಆಂಜನೇಯ ಸ್ವಾಮಿ ದೇವಾಲಯಕ್ಕೆ ತಾತ್ಕಾಲಿಕವಾಗಿ ಲಕ್ಷ್ಮೀನಾರಾಯಣರನ್ನು ಅರ್ಚಕರಾಗಿ ನೇಮಿಸಿದ್ರು ದೇವಾಲಯ ಪರಿಚಾರಕ ಕೃಷ್ಣಚಾರ್ ಕ್ಷೇತ್ರದ ಜವಾಬ್ದಾರಿ ನೀಡಲು ನಿರಾಕರಿಸಿ, ತುಮಕೂರು ಜಿಲ್ಲಾಧಿಕಾರಿ ಆದೇಶಕ್ಕೆ…

Read More

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಕಾಮೆಂಟ್ ಮಾಡುವ ಅನಾಮಧೇಯರ ಹಾವಳಿ ಹೆಚ್ಚಾಗಿದ್ದು, ಮುಜುಗರ ಉಂಟು ಮಾಡುತ್ತಿದೆ. ಬಸವರಾಜ ಬೊಮ್ಮಾಯಿ ಅವರು ಸರ್ಕಾರ ಮತ್ತು ಪಕ್ಷದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲು ಫೆಸ್‍ಬುಕ್‍ನಲ್ಲಿ ಖಾತೆ ಹೊಂದಿದ್ದಾರೆ.ಅದಕ್ಕೆ ಫೆಸ್‍ಬುಕ್‍ನಿಂದ ನೀಲಿ ಟಿಕ್‍ ನ ಅಧಿಕೃತ ಮಾನ್ಯತೆಯೂ ದೊರೆತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮನಿರ್ಭರ್ ಭಾರತ್ ಕುರಿತು ದೇಶದ ಎಲ್ಲಾ ರಾಜ್ಯಗಳ ಬಿಜೆಪಿ ಘಟಕಗಳನ್ನು ಉದ್ದೇಶಿಸಿ ಮೂರು ದಿನಗಳ ಹಿಂದೆ ಭಾಷಣ ಮಾಡಿದರು. ಅದರಲ್ಲಿ ವಿಡಿಯೋ ಕಾನರೆನ್ಸ್ ಮೂಲಕ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವರು, ಬಿಜೆಪಿಯ ಪ್ರಮುಖ ನಾಯಕರು ಭಾಗವಹಿಸಿದ್ದರು.ಈ ಕಾರ್ಯಕ್ರಮಗಳ ಪೋಟೊಗಳು ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಆಗಿದ್ದವು. ಪೋಟೋ ಕೆಳಗೆ ಕಾಮೆಂಟ್ ಬಾಕ್ಸ್ ನಲ್ಲಿ ವನಜ ವನಜ ಎಂಬ ಹೆಸರಿನ ಖಾತೆಯಿಂದ ಆಕ್ಷೇಪಾರ್ಹ ವಿಷಯ ಪ್ರಸ್ತಾಪವಾಗಿದೆ. ನಮಸ್ಕಾರ್ ಸಿಎಂ ಸರ್, ನಾನು ನಿಮ್ಮ ಹಿಂದೆ ಕುಳಿತಿರುವ ರಾಜಕುಮಾರ್ ಪಾಟೀಲ್ ತೇಲ್ಕರ್ ಸೆಡಂ ಎಂಎಲ್‍ಎಯಿಂದ ಮೊಸ ಹೋದ…

Read More