Subscribe to Updates
Get the latest creative news from FooBar about art, design and business.
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
- ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
- ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
- ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
- ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
- ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
Author: admin
ನವದೆಹಲಿ : ದೇಶದ ಜನರಿಗೆ 2022 ರ ದೀಪಾವಳಿಯಲ್ಲಿ, ಜಿಯೋ 5 ಜಿ ಅನ್ನು ಭಾರತದ ಮೆಟ್ರೋ ನಗರಗಳಲ್ಲಿ ಪ್ರಾರಂಭಿಸಲಾಗುವುದು ಎಂದು ಆರ್ಐಎಲ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಹೇಳಿದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ 45 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, 5ಜಿಯನ್ನು ಬಳಸಿಕೊಂಡು, ನಾವು ಉನ್ನತ ಗುಣಮಟ್ಟದ, ಹೆಚ್ಚು ಕೈಗೆಟುಕುವ ಸ್ಥಿರ ಬ್ರಾಡ್ಬ್ಯಾಂಡ್ ಸೇವೆಗಳ ರೋಲ್-ಔಟ್ ಅನ್ನು ತ್ವರಿತಗೊಳಿಸಬಹುದು ಎಂದು ಮುಕೇಶ್ ಅಂಬಾನಿ ಹೇಳಿದರು, ಜಿಯೋ 5 ಜಿ ವಿಶ್ವದ ಅತ್ಯಂತ ಸುಧಾರಿತ 5 ಜಿ ಆಗಿದೆ ಎಂದು ಅವರು ಹೇಳಿದರು. ನಮ್ಮ ಕಂಪನಿಯು ವಾರ್ಷಿಕ ಆದಾಯದಲ್ಲಿ 100 ಬಿಲಿಯನ್ ಡಾಲರ್ ದಾಟಿದ ಭಾರತದ ಮೊದಲ ಕಾರ್ಪೊರೇಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಸಾಯಿಖಾನೆ ಹಾಗೂ ಮಾಂಸ ಮಾರಾಟದ ಅಂಗಡಿಗಳನ್ನು ಗಣೇಶ ಚತುರ್ಥಿ ನಿಮಿತ್ಯ ಬುಧವಾರ (ಆ.31) ಬಂದ್ ಮಾಡುವಂತೆ ಮಹಾನಗರ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದು, ಮಾಲೀಕರು ಅಂಗಡಿಗಳನ್ನು ಬಂದ ಮಾಡಿ ಸಹಕರಿಸುವಂತೆ ತಿಳಿಸಲಾಗಿದೆ. ಸದರಿ ಅಂಗಡಿ ಮಾಲೀಕರು ಆದೇಶವನ್ನು ಉಲ್ಲಂಘನೆ ಮಾಡಿರುವದು ಕಂಡು ಬಂದಲ್ಲಿ ಅಂತಹ ಅಂಗಡಿ ಮಾಲಿಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ್ ಘಾಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಎಷ್ಟೇ ಕಠಿಣ ನಿಯಮಗಳು, ಕಾನೂನು ಜಾರಿಗೆ ತಂದರು ವಾಹನಗಳ ಮೇಲೆ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಹೀಗಾಗಿ ರಸ್ತೆ ಅಪಘಾತದಲ್ಲಿ ಬಲಿಯಾಗುವರ ಸಂಖ್ಯೆ ಹೆಚ್ಚುತ್ತಿದೆ. 2021 -2022 ರ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ 816 ರಸ್ತೆ ಅಪಘಾತದಲ್ಲಿ ಬಲಿಯಾಗುವ ಮೂಲಕ ರಾಜ್ಯದಲ್ಲಿ ಬೆಳಗಾವಿ ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಬೆಂಗಳೂರು ನಗರದಲ್ಲಿ 633, ತುಮಕೂರು ಜಿಲ್ಲೆಯಲ್ಲಿ 596, ಮೈಸೂರು 510 ಮತ್ತು ಬೆಂಗಳೂರು ನಗರ ಹೊರತುಪಡಿಸಿ ಬೆಂಗಳೂರು ಜಿಲ್ಲೆಯಾದ್ಯಂತ 507 ಬಲಿಯಾಗಿವೆ. ಇನ್ನು 2021- 22ರಲ್ಲಿ ರಾಜ್ಯದಲ್ಲಿ 34,394 ಅಪಘಾತಗಳು ವರದಿಯಾಗಿದ್ದು, 9,868 ಸಾವುಗಳು ಮತ್ತು 40,483 ಮಂದಿ ಗಾಯಗೊಂಡಿದ್ದಾರೆ. ಅಂದರೆ ಆ ಅವಧಿಯಲ್ಲಿ ರಾಜ್ಯದಲ್ಲಿ ಪ್ರತಿದಿನ ಸರಾಸರಿ 94 ಅಪಘಾತಗಳು ಮತ್ತು 27 ಸಾವುಗಳು ವರದಿಯಾಗಿವೆ ಎಂದು ತಿಳಿದುಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿತ್ರದುರ್ಗ: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಸ್ವಾಮೀಜಿಗಳು ನಿರೀಕ್ಷಣಾ ಜಾಮೀನು ಕೋರಿ ಕೋರ್ಟಗೆ ಅರ್ಜಿ ಸಲ್ಲಿಸಿದ್ದಾರೆ. ಸೋಮವಾರ ನಿರೀಕ್ಷಣಾ ಜಾಮೀನು ಕೋರಿ ಮುರುಘಾ ಶ್ರೀಗಳ ಪರ ವಕೀಲರು ಚಿತ್ರದುರ್ಗದ ಎರಡನೇ ಸೆಷನ್ಸ್ ಕೋರ್ಟ ಅರ್ಜಿ ಸಲ್ಲಿಸಿದ್ದು, ಅರ್ಜಿ ಸ್ವೀಕರಿಸಿ ವಿಚಾರಣೆಯನ್ನು ಕೋರ್ಟ್ ಸೆಪ್ಟೆಂಬರ 1ಕ್ಕೆ ನಿಗದಿಪಡಿಸಿದೆ. ಆದರೆ ತಮ್ಮ ವಿರುದ್ಧದ ಆರೋಪಗಳನ್ನು ಮುರುಘಾ ಶ್ರೀಗಳು ತಳ್ಳಿ ಹಾಕಿದ್ದು, ನನ್ನ ವಿರುದ್ಧ ಪಿತೂರಿ ನಡೆದಿದೆ. ಇದೇನು ಹೊಸದಲ್ಲ, ಕಳೆದ 15 ವರ್ಷದಿಂದ ಪಿತೂರಿ ನಡೆಯುತ್ತಿದೆ. ನಮ್ಮ ಮಠ ನ್ಯಾಯ ದೇಗುಲದಂತಿತ್ತು. ಇದೀಗ ಮಠದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಸಿರು ನಿಶಾನೆ ತೋರಿಸಿದೆ. 3 ದಿನ ಗಣೇಶ ಕೂರಿಸಲು ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಈದ್ಗಾ ಮೈದಾನದಲ್ಲಿ ಗಣೇಶ ಕೂರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಗಣೇಶ ಪ್ರತಿಷ್ಠಾಪನೆಗಾಗಿ 6 ಹಿಂದುಪರ ಸಂಘಟನೆಗಳು ಮನವಿ ಸಲ್ಲಿಸಿದ್ದವು. ಸಮಿತಿ ಗಣೇಶ ಪ್ರತಿಷ್ಠಾಪನೆ ಅವಕಾಶ ಮಾಡಿಕೊಡುವಂತೆ ವರದಿ ನೀಡಿತ್ತು. 6 ಸಂಘಟನೆಗಳಲ್ಲಿ ಒಂದು ಸಂಘಟನೆಗೆ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ. ಮೂರು ದಿನಗಳ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ ಎಂದು ಹುಬ್ಬಳ್ಳಿ ಮೇಯರ್ ಈರೇಶ್ ಅಂಚಟಗೇರಿ ತಿಳಿಸಿದ್ಧಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ರಾಜ್ಯದಲ್ಲಿ ಆರ್ಭಟ ಜೋರಾಗಿದ್ದು, ನಿನ್ನೆ ಒಂದೇ ದಿನ ಮಳೆ ಹೊಡೆತಕ್ಕೆ ಐವರು ಬಲಿಯಾಗಿದ್ಧಾರೆ. ಬೆಂಗಳೂರಿನಿಂದ ರಾಯಚೂರುವರೆಗೂ 15ಕ್ಕೂ ಹೆಚ್ಚು ಜಿಲ್ಲೆಗಳು ತತ್ತರವಾಗಿದೆ. ಕಳೆದ ರಾತ್ರಿ ಬೆಂಗಳೂರು ಸೇರಿ ಹೊರವಲಯದಲ್ಲಿ ಭಾರೀ ಮಳೆಯಾಗಿದೆ. ರಾಮನಗರ, ಚನ್ನಪಟ್ಟಣ ಕುಂಭದ್ರೋಣ ಮಳೆಗೆ ಕಂಗಾಲ್ ಆಗಿದ್ದು, ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಇದೇ ಪರಿಸ್ಥಿತಿಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ/ಯುವತಿಯರಿಗಾಗಿ 30 ದಿನಗಳ ಮೊಬೈಲ್ ಪೋನ್ ದುರಸ್ಥಿ ಮತ್ತು ಕೃಷಿಯ ಜೊತೆಗೆ 10 ದಿನಗಳ ಲಾಭದಾಯಕ ತರಕಾರಿ ಬೆಳೆ ಹಾಗೂ ನರ್ಸರಿ ಮಾಡುವುದರ ಬಗ್ಗೆ ಸಪ್ಟೆಂಬರ್ ತಿಂಗಳಿನಲ್ಲಿ ಯಚಿತ ತರಬೇತಿ ನೀಡಲಾಗಿದ್ದು, ಸಪ್ಟೆಂಬರ್ 05 ರೊಳಗಾಗಿ ತಮ್ಮ ಹೆಸರು, ವಿಳಾಸಗಳನ್ನು ನೊಂದಾಯಿಸಿ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿದ್ದು, ತರಬೇತಿ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕೀಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಬಗೆಗಿನ ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು. ತರಬೇತಿಯಲ್ಲಿ ಭಾಗವಹಿಸಲು ಆಸಕ್ತರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆ, ಹಳಿಯಾಳ, ಉತ್ತರ…
ತುಮಕೂರು : ಪದೇ ಪದೇ ಚಡ್ಡಿಯಲ್ಲಿ ಬಾಲಕನೊಬ್ಬ ಮೂತ್ರ ಮಾಡಿಕೊಳ್ಳುತ್ತಿದ್ದ ಅನ್ನುವ ಕಾರಣಕ್ಕೆ ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಸೇರಿ ಬಾಲಕನ ಗುಪ್ತಾಂಗವನ್ನು ಬೆಂಕಿಕಡ್ಡಿಯಿಂದ ಸುಟ್ಟಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ. ಮೂರುವರೆ ವರ್ಷದ ಬಾಲಕ ಪದೇ ಪದೇ ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದ. ಹೀಗಾಗಿ ವಿದ್ಯಾರ್ಥಿಯನ್ನು ಗದರಿಸಲು ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಸೇರಿ ಬಾಲಕನ ಗುಪ್ತಾಂಗವನ್ನು ಬೆಂಕಿ ಕಡ್ಡಿಯಿಂದ ಸುಟ್ಟಿದ್ದಾರೆ. ಬಾಲಕನ ಗುಪ್ತಾಂಗ ಮತ್ತು ತೊಡೆಯ ಬಳಿ ಸುಟ್ಟ ಗಾಯಗಳಾಗಿವೆ. ಈ ಬಗ್ಗೆ ಸುದ್ದಿ ತಿಳಿದ ಜಿಲ್ಲಾ ಮಕ್ಕಳ ಹಕ್ಕು ರಕ್ಷಣಾ ಘಟಕದ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿ ಅಂಗನವಾಡಿ ಕೇಂದ್ರದ ಶಿಕ್ಷಕಿ ಹಾಗೂ ಸಹಾಯಕಿಗೆ ನೋಟಿಸ್ ನೀಡಿ ತಪ್ಪೋಪ್ಪಿಗೆ ಪತ್ರ ಪಡೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿತ್ರದುರ್ಗ: ಸ್ಕೂಟರ್ ಗೆ ವಾಹನವೊಂದು ಡಿಕ್ಕಿಯಾದ ಪರಿಣಾಮ ಸ್ಕೂಟರ್ ಧಗಧಗನೆ ಹೊತ್ತಿ ಉರಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಪ್ರಧಾನ ರಸ್ತೆಯಾದ ಅರಣ್ಯ ಇಲಾಖೆಯ ಬಳಿ ನಡೆದಿದೆ. ಹಿರಿಯೂರು ನಗರದ ಟಿ.ಬಿ.ಸರ್ಕಲ್ ನಿಂದ ಗಾಂಧಿ ಸರ್ಕಲ್ ಗೆ ಬರುತ್ತಿದ್ದಂತಹ ಸ್ಕೂಟರ್ ಗೆ ಎದುರಿನಿಂದ ಬಂದ ವಾಹನವೊಂದು ಡಿಕ್ಕಿಯಾಗಿತ್ತು. ಅಪಘಾತದ ವೇಳೆ ಸ್ಕೂಟರ್ ಗೆ ಬೆಂಕಿ ಹತ್ತಿಕೊಂಡಿದ್ದು, ಸ್ಕೂಟರ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸ್ಕೂಟರ್ ನಲ್ಲಿದ್ದ ಮಹಿಳೆಯ ಬಲಗೈಗೆ ಹಾಗೂ ತಲೆಗೆ ಏಟು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಿರಿಯೂರು ತಾಲ್ಲೂಕಿನ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಅವರು ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಗೊಂಡ ಮಹಿಳೆಯು ಇದೀಗ ಹಿರಿಯೂರು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ವರದಿ: ಮುರುಳಿಧರನ್ ಆರ್. ಚಿತ್ರದುರ್ಗ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ತುಮಕೂರು ಗ್ರಾಮಾಂತರದ ಊರುಕೆರೆ ಗ್ರಾಮದಲ್ಲಿ ಊರುಕೆರೆ ಕೋಡಿ ಹರಿದಿದ್ದು, ಪರಿಣಾಮವಾಗಿ ಕೆರೆ ನೀರು ರಸ್ತೆ, ಗದ್ದೆ, ತೋಟ, ಜಮೀನುಗಳಿಗೆ ಹರಿದು ಜನರು ಸಂಕಷ್ಟಕ್ಕೀಡಾಗಿದ್ದಾರೆ. ಇಲ್ಲಿನ ಮುಖ್ಯ ರಸ್ತೆಗಳಲ್ಲಿ ನೀರು ತುಂಬಿ ಹರಿಯುತ್ತಿದ್ದು, ಇದೇ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿವೆ. ರಾತ್ರಿ ಸುರಿದ ಭಾರೀ ಮಳೆಗೆ ಕೆರೆಕೋಡಿ ಹರಿದಿದ್ದು, ಕೆರೆ ಕೋಡಿ ಹರಿದಿರುವುದನ್ನು ನೋಡಲು ಜನರು ಆಗಮಿಸುತ್ತಿದ್ದಾರೆ. ಒಂದೇ ರಾತ್ರಿಗೆ ಕೆರೆ ಕೋಡಿ ಹರಿದಿದೆ. ಎಲ್ಲ ಹೊಲ ತೋಟಗಳಿಗೆ ನೀರು ತುಂಬಿ ಬಿಟ್ಟಿದೆ. ರೋಡಿನ ಮೇಲೆಯೇ ನೀರು ಹೋಗ್ತಾ ಇದೆ. ಹೂಳುಗಳನ್ನು ಸರಿಯಾಗಿ ತೆಗೆಯದ ಪರಿಣಾಮ ರಸ್ತೆಗೆ ನೀರು ನುಗ್ಗಿದೆ. ಸರ್ಕಾರದವರು ಬಂದು ಹೂಳು ತೆಗೆದು ನೀರು ಹೋಗಲು ವ್ಯವಸ್ಥೆ ಮಾಡಿದರೆ ಮಾತ್ರ ನೀರು ರಸ್ತೆಗೆ ಬರೋದನ್ನು ತಡೆಯಲು ಸಾಧ್ಯ ಎಂದು ನಮ್ಮತುಮಕೂರಿಗೆ ರೇವಣರುದ್ರಪ್ಪ ಎಂಬವರು ಪ್ರತಿಕ್ರಿಯಿಸಿದರು. ಊರುಕೆರೆ ಗ್ರಾಮದ ಕೆರೆ ಕೋಡಿ ಹರಿದು ಸುಮಾರು 32 ವರ್ಷಗಳೇ ಆಗಿದ್ದವು. ಹಿಂದೆ ಇದ್ದ ಹಳ್ಳಗಳು ಮುಚ್ಚಿ ಹೋಗಿವೆ, ಸುತ್ತ ಮುತ್ತ ಮರಗಿಡಗಳು ಬಂದು ನೀರು…