Author: admin

ಮಧುಗಿರಿ: ತಾಲೂಕಿನ ಐಡಿ ಹಳ್ಳಿ ಹೋಬಳಿಯ ಗ್ರಾಮದ ರೈತರು ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಾನಾ ಸಂಕಷ್ಟಕ್ಕೊಳಗಾಗಿದ್ದು, ಈ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಪ್ರತಿಭಟಿಸಿ, ಉಪತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು. ಕೆರೆ ಕೋಡಿ ಹರಿದು ರೈತರ ಜಮೀನಿನ ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗಿದೆ. ಇದರಿಂದಾಗಿ ಕೃಷಿ ಮಾಡಲು ಅಡ್ಡಿಯಾಗಿದೆ. ರಾಜ ಕಾಲುವೆಗಳ ದುರಸ್ತಿ ಕಾರ್ಯ ನಡೆಯದೆ ರಾಜಕಾಲುವೆಗಳು ಮುಚ್ಚಿ ಹೋಗಿರುವ ಕಾರಣ ಕೃಷಿ ಭೂಮಿಯ ಮೇಲೆ ಕೆರೆ ಕೋಡಿ ಹರಿದಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ನೀರು ಹರಿದ ಪರಿಣಾಮ ಸ್ಮಶಾನದಲ್ಲಿದ್ದ ಶವಗಳು ನೀರಿನಲ್ಲಿ ತೇಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಮಶಾನ ಅಭಿವೃದ್ಧಿ ಮಾಡದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ರೈತ ಹೋರಾಟಗಾರರು, ಪ್ರಗತಿಪರರು ಹಾಗೂ ವಿವಿಧ ಸಂಘಟನೆಗಳ ಹೋರಾಟಗಾರರು ಭಾಗವಹಿಸಿದ್ದರು. ಉಪತಹಶೀಲ್ದಾರ್ ಇನಾಯತ ಉಲ್ಲಾ ಅವರಿಗೆ ಮನವಿ ಸಲ್ಲಿಸಿದರು. R I ನಾರಾಯಣಪ್ಪ,  ರೇಖಾ,  ಪಲ್ಲವಿ,  ಅಶೋಕ್ ರೆಡ್ಡಿ,  ಬಾಲಕೃಷ್ಣ, ನರಸಿಂಹರೆಡ್ಡಿ, ಕೃಷ್ಣಾರೆಡ್ಡಿ,  ನರೇಂದ್ರ, ಜನಾರ್ಧನ್ ರೆಡ್ಡಿ,…

Read More

ದಾವಣಗೆರೆ: ಹೊಟೇಲ್ ಮೇಲೆ ದಾಳಿ ನಡೆಸಿದ ಪೊಲೀಸರು ವೀಕೆಂಡ್ ಪಾರ್ಟಿಯಲ್ಲಿ ತೊಡಗಿದ್ದ ಯುವಕ-ಯುವತಿಯರಿಗೆ ಶಾಕ್ ನೀಡಿದ ಘಟನೆ ದಾವಣಗೆರೆ ಜಿಲ್ಲೆಯ ಮಿಟ್ಲಕಟ್ಟೆ ಗ್ರಾಮದಲ್ಲಿ ನಡೆದಿದ್ದು, ಇಲ್ಲಿನ ದಿ ಸ್ಟೇಜ್ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆನ್ನಾಲಾಗಿದೆ. ವರದಿಗಳ ಪ್ರಕಾರ, ದಿ ಸ್ಟೇಜ್ ಹೋಟೆಲ್ ನಲ್ಲಿ ವೀಕೆಂಡ್ ನಲ್ಲಿ ಶುಕ್ರವಾರ ರಾತ್ರಿಯಿಂದ ಭಾನುವಾರದ ವರೆಗೂ ಪ್ರತಿವಾರ ಡ್ರಿಂಕ್ಸ್ ಪಾರ್ಟಿ ನಡೆಯುತ್ತದೆ, ಕಪಲ್ಸ್ ಗಳಿಗೆ ಮಾತ್ರ ಹೋಟೆಲ್ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಪಾರ್ಟಿಯಲ್ಲಿ ಡಿಜೆ ಸಾಂಗ್, ಡ್ರಿಂಕ್ಸ್ ಜತೆ ಮಾದಕ ವಸ್ತು ಸೇವನೆ ಕೂಡ ಮಾಡಲಾಗುತ್ತಿದೆ ಎಂಬ ಬಗ್ಗೆ ಪೊಲೀಸರಿಗೆ ಮಾಹಿತಿಯ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಎಚ್ಚರಿಕೆ ನೀಡಿದ್ದಾರೆನ್ನಲಾಗಿದ್ದು, ಘಟನೆಯಲ್ಲಿ ಯಾರನ್ನೂ ಬಂಧಿಸಲಾಗಿಲ್ಲ ಎಂದು ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತುಮಕೂರು: ಹುಟ್ಟು ಹಬ್ಬ ಆಚರಣೆ ಮಾಡಿ ಎಂದು ಸಿದ್ದರಾಮಯ್ಯನವರು ಯಾರಿಗೂ ಹೇಳಿಲ್ಲ. ಅವರು ಯಾವ ವರ್ಷನೂ ಹುಟ್ಟು ಹಬ್ಬ ಆಚರಣೆ ಮಾಡಿಕೊಂಡವರಲ್ಲ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಒಬ್ಬ ಮಾಸ್ ಲೀಡರ್. 40 ವರ್ಷದ ರಾಜಕೀಯದಲ್ಲಿ ಇರುವುದರಿಂದ ಸ್ವಾಭಾವಿಕವಾಗಿ ಪ್ರೀತಿ ವಿಶ್ವಾಸದಿಂದ ಮಾಡಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷಕ್ಕೆ ಇದೊಂದು ಒಳ್ಳೆಯ ಅವಕಾಶ. ಇದರಿಂದ ನಮ್ಮ ಪಕ್ಷಕ್ಕೆ ಒಂದು ರೀತಿಯ ಬೆಂಬಲ ಸಿಕ್ಕಿದೆ ಎಂದು ಅವರು ಸಿದ್ದರಾಮೋತ್ಸವದ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದರು. ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಎಸಿಬಿ ರೇಡ್ ವಿಚಾರವಾಗಿ ಮಾತನಾಡಿದ ಅವರು, ಎಸಿಬಿಯವರಿಗೆ ಯಾವ ಮಾಹಿತಿ ಇದೆಯೋ ಗೊತ್ತಿಲ್ಲ, ಪುನಃ ಪುನಃ ಮಾಹಿತಿ ಪಡೆಯಲು ರೇಡ್ ಮಾಡುತ್ತಿರಬಹುದು. ಈ ಬಗ್ಗೆ ನಮ್ಮ ಪಕ್ಷದ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಹಾಗೂ ಮಲ್ಲಿಕಾರ್ಜುನ್ ಖರ್ಗೆ ಅವರು ಮಾತನಾಡಿದ್ದಾರೆ ಎಂದರು. ಕೇಂದ್ರ ಸರ್ಕಾರ ಇಡಿ, ಐಟಿ, ಸಿಬಿಐನಂತಹ ತನಿಖಾ ಸಂಸ್ಥೆಗಳನ್ನು…

Read More

ತುಮಕೂರು: ನಿಂತಿದ್ದ ಲಾರಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ ಘಟನೆ ತುಮಕೂರು-ಶಿರಾ ರಾಷ್ಟ್ರೀಯ ಹೆದ್ದಾರಿಯ ಜೋಗಿಹಳ್ಳಿಯಲ್ಲಿ ನಡೆದಿದೆ. ಬಳ್ಳಾರಿಯ ತಾವರಹಳ್ಳಿ ಮೂಲದ ನಾಗರಾಜ್ ಮೃತ ಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ತುಮಕೂರಿಂದ ಶಿರಾಗೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿದ ಬೈಕ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ನಾಗರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕೊಣಾಜೆ:  ಪೊಲೀಸ್ ಹೆಡ್ ಕಾನ್ಸ್‌ಟೇಬಲ್‌‌ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆ ಠಾಣೆಯ ಹೆಡ್ ಕಾನ್ಸ್‌ಟೇಬಲ್‌ ಜಗನ್ನಾಥ (44) ಎಂಬುವವರು ಹೃದಾಯಾಘಾತದಿಂದ ನಿಧನರಾಗಿದ್ದಾರೆ. ಜಗನ್ನಾಥ ಅವರು ಕರ್ತವ್ಯದಲ್ಲಿದ್ದಾಗಲೇ ಅಸ್ವಸ್ಥರಾಗಿದ್ದು ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕೆತ್ಸೆ ಫಲಕಾರಿಯಾಗದೆ ನಿಧನರಾದರು. ಮೃತರು ಪುತ್ತೂರು ತಾಲೂಕಿನ ಸವಣೂರು ಗ್ರಾಮದವರಾಗಿದ್ದು, ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಮಧುಗಿರಿ: ಇದ್ದ ಸಂಪರ್ಕ ಸೇತುವೆ ಮಳೆಯಿಂದಾಗಿ ಮುರಿದು ಬಿದ್ದು ಒಂದು ವರ್ಷವಾಗಿದೆ ಈ ಊರಿಗೆ ಸಂಪರ್ಕ ಸೇತುವೆ ಇಲ್ಲದೆ ಜನರು ಪರದಾಡುತ್ತಿರುವ ಸ್ಥಿತಿ ನಿರ್ಮಾಣವಾಗಿದ್ದು, ಈವರೆಗೆ ಸಂಪರ್ಕ ಸೇತುವೆ ನಿರ್ಮಿಸದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾವಗಡ-ತುಮಕೂರು ಮಾರ್ಗದ ರಸ್ತೆಯನ್ನು ತಡೆದು ಪ್ರತಿಭಟಿಸಿದ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿ ಲಕ್ಲಿಹಟ್ಟಿ ಗ್ರಾಮದ ಜನರು, ಸಂಪರ್ಕ ಸೇತುವೆ ಇಲ್ಲದ ಕಾರಣ ಜಿಲ್ಲಾಡಳಿತಕ್ಕೆ ಬಿಸಿ ಮುಟ್ಟಿಸಿದರು. ತೀವ್ರವಾಗಿ ಮಳೆ ಸುರಿಯುತ್ತಿದ್ದು,  ಜೀವ ಹಾನಿ ಆಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ತಿರುಗಿ ನೋಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು,  ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ವರದಿ:  ಮಂಜುಸ್ವಾಮಿ. ಎಂ.ಎನ್ . ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ದಾಸಾಲಕುಂಟೆ ಕೆರೆಯು 20 ವರ್ಷಗಳ ನಂತರ ಕೋಡಿ ಬಿದ್ದು ಮೈದುಂಬಿ ಹರಿಯುತ್ತಿರುವುದು ಕಂಡು ಬಂದಿದೆ. 80 ಎಕರೆ ಅಧಿಕ ವಿಸ್ತೀರ್ಣ ಹೊಂದಿದ ಕೆರೆ ಇದಾಗಿದೆ. 2015 ರಲ್ಲಿ ಅರ್ಧ ಭಾಗದಷ್ಟು ಮಾತ್ರ ಈ ಕೆರೆಯು ತುಂಬಿತ್ತು. ಆ ಸಂದರ್ಭದಲ್ಲಿ ಸಿದ್ದರಬೆಟ್ಟದ ಶ್ರೀ ಬಾಳೆಹೊನ್ನೂರು ಮಠದ ಶ್ರೀಗಳಾದ ವೀರಭದ್ರ ಶಿವಾಚಾರ್ಯ ಸ್ವಾಮೀಜಿರವರು ಬಾಗಿನ ಅರ್ಪಿಸಿದ್ದರು. ಸುಮಾರು 16 ಹಳ್ಳಿಗಳ ಜೀವನಾಡಿಯಾಗಿರುವ ದಾಸಾಲಕುಂಟೆ ಕೆರೆ ಕೋಡಿ ಬಿದ್ದಿರುವುದನ್ನು ವೀಕ್ಷಿಸಲು ಜನರು ಆಗಮಿಸುತ್ತಿದ್ದಾರೆ. ಕೆರೆ ಸಂಪೂರ್ಣವಾಗಿ ತುಂಬಿ ಹರಿಯುತ್ತಿರುವುದನ್ನು ಕಂಡು ಊರಿನ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ. ವರದಿ:  ಮಂಜುಸ್ವಾಮಿ.ಎಂ.ಎನ್.,  ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತುಮಕೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಉಕ್ಕಿ ಹರಿಯುವ ನೀರಿನಲ್ಲಿ ಯುವಕರ ಮೋಜು ಮಸ್ತಿ ಮಾಡುತ್ತಿದ್ದ ವೇಳೆ ದುರಂತವೊಂದು ಸಂಭವಿಸಿದ್ದು,  ನೋಡ ನೋಡುತ್ತಲೇ ತಂದೆ ಮಗ ನೀರಲ್ಲಿ ಕೊಚ್ಚಿ ಹೋದ ವಿಡಿಯೋ ವೈರಲ್ ಆಗಿದೆ. ನೀರಿನಲ್ಲಿ ಆಟವಾಡಲು ಹೋದ ಯುವಕ ಮತ್ತು ಬಾಲಕ ಇಬ್ಬರು ರಭಸದಿಂದ ಹರಿಯುತ್ತಿರುವ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ತುಮಕೂರು ಗ್ರಾಮಾಂತರದ ಗೂಳೂರು ಕೆರೆಯಲ್ಲಿ ನಡೆದಿದೆ. ಸ್ಥಳದಲ್ಲೇ ಇದ್ದ ಸ್ಥಳೀಯರು ಮತ್ತು ಸಾರ್ವಜನಿಕರು ಸೇರಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆಯ ತುಮಕೂರು ಗ್ರಾಮಾಂತರ ತಾಲೂಕಿನ ಗೂಳೂರು ಕೆರೆಯಲ್ಲಿ ನಡೆದಿದೆ. ಇನ್ನಾದರೂ ಸ್ಥಳೀಯ ಜಿಲ್ಲಾಡಳಿತ ಎಚ್ಚೆತ್ತು ಕೊಂಡು ತುಂಬಿ ಹರಿಯುತ್ತಿರುವ ಕೆರೆಗಳಿಗೆ ಭದ್ರತೆ ನಿಯೋಜನೆ ಮಾಡುತ್ತದೆಯಾ ನೋಡಬೇಕಿದೆ. ಜೊತೆಗೆ ಸಾರ್ವಜನಿಕರು ಕೂಡ ಜವಾಬ್ದಾರಿಯುತವಾಗಿ ವರ್ತಿಸಬೇಕಿದೆ. ಹರಿಯುವ ನೀರಿನಲ್ಲಿ ಆಟವಾಡುವುದು, ಹುಚ್ಚಾಟ ಆಡುವುದು ಪ್ರಾಣಕ್ಕೆ ಅಪಾಯ ತಂದೊಡ್ಡಬಹುದು. ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ಮಧುಗಿರಿ: ಬಳ್ಳಿ ಮತ್ತು ಮುಳ್ಳುಗಳು ರೆಕ್ಕೆಗೆ ಚುಚ್ಚಿ ಸಿಲುಕಿದ್ದ ರಾಷ್ಟ್ರೀಯ ಪಕ್ಷಿ ನವಿಲನ್ನು ಅರಣ್ಯ ಇಲಾಖೆ ರಕ್ಷಿಸಿದ ಘಟನೆ ನಡೆದಿದೆ. ದೊಡ್ಡೇರಿ ಗ್ರಾಮ ನಿವಾಸಿ ದೊಡ್ಡೇರಿ ಮಹಲಿಂಗಯ್ಯನವರು ಹೆಣ್ಣು ನವಿಲೊಂದು ಪೊದೆಯಲ್ಲಿ ಸಿಲುಕಿಕೊಂಡಿರುವುದನ್ನು ನೋಡಿ ತಕ್ಷಣವೇ ಅರಣ್ಯ ಇಲಾಖೆಅಧಿಕಾರಿಯಾದ ಮುತ್ತುರಾಜ್ ರವರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ತಕ್ಷಣ ಬಡವನಹಳ್ಳಿ ಮತ್ತು ತಿಮ್ಮಲಾಪುರ ಅರಣ್ಯ ರಕ್ಷಕರಾದ ಎಲ್ಲಪ್ಪ ಹಂಚಿನಾಳ್, ಚಿದಾನಂದ ಚೆನ್ನಾಗಿರಿ ಅಧಿಕಾರಿಯವರಿಗೆ ತಿಳಿಸಿದ್ದು, ತಕ್ಷಣ ನವಿಲು ಸಿಲುಕುಕೊಂಡಿರುವ ಸ್ಥಳಕ್ಕೆ ಆಗಮಿಸಿ ಸುಮಾರು ಒಂದು ವರ್ಷ ವಯಸ್ಸಿನ ಹೆಣ್ಣು ನವಿಲನ್ನು ರಕ್ಷಣೆ ಮಾಡಿದ್ದಾರೆ. ಪಕ್ಷಿಯು ಆಹಾರವಿಲ್ಲದೆ ಸುಸ್ತಾಗಿದ್ದು, ಇದೀಗ ನವಿಲನ್ನು ರಕ್ಷಿಸಿರುವ ಅರಣ್ಯ ಇಲಾಖೆ ಸಿಬ್ಬಂದಿ ನವಿಲಿಗೆ ಚಿಕಿತ್ಸೆ ನೀಡಿ, ಆರೈಕೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಸದಸ್ಯರಾದ ಡಿ.ಬಿ.ಮಂಜುನಾಥ್, ಕಾರ್ತಿಕ್, ಜಗದೀಶ್, ರವಿಚಂದ್ರ ಮುಂತಾದವರು ನವಿಲನ್ನು ರಕ್ಷಣೆ ಮಾಡಲು ಸಹಕರಿಸಿದ್ದರು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ನಕಲಿ ಛಾಪಾ ಕಾಗದ ಹಗರಣ ಬೆಳಕಿಗೆ ಬಂದಿದೆ. ನಕಲಿ ಛಾಪಾ ಕಾಗದದ ಮೂಲಕ ಡೀಲ್ ನಡೆಸುತ್ತಿದ್ದ ಹನ್ನೊಂದು ಆರೋಪಿಗಳ ಗ್ಯಾಂಗ್ ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ಬಂಧಿತರಿಂದ ಒಟ್ಟು 1.33 ಕೋಟಿ ರೂ. ಮೌಲ್ಯದ 2664 ನಕಲಿ ಛಾಪಾ ಕಾಗದಗಳನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರು ಒಡೆಯರ ಕಾಲದಿಂದ ಈವರೆಗಿನ ಛಾಪಾ ಕಾಗದಗಳು ಪತ್ತೆಯಾಗಿವೆ. ಈ ಗ್ಯಾಂಗ್ ಛಾಪಾ ಕಾಗದಗಳ ಮೂಲಕ ಪ್ರಾಪರ್ಟಿಗಳ ಜಿಪಿಎ ಮಾಡುತ್ತಿದ್ದರು. ನಾಲ್ಕು ಕಡೆ ನಕಲಿ ಛಾಪಾ ಕಾಗದ ಬಳಸಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. 1990,1995, 2002, 2009 ರಲ್ಲಿ ರಿಜಿಸ್ಟರ್ ಆಗಿರುವಂತೆ ದಾಖಲಾತಿ ಸೃಷ್ಟಿ ಮಾಡಿದ್ದಾರೆ. ನಾಲ್ಕು ಕೇಸ್ ನಲ್ಲಿ ಕೋಟ್ಯಂತರ ರೂಪಾಯಿಗಳ ಬೆಲೆ ಬಾಳುವ ಆಸ್ತಿಗಳ ಜಿಪಿಎ ಮಾಡಿದ್ದು ಬಯಲಿಗೆ ಬಂದಿದೆ. ಈ ಗ್ಯಾಂಗ್ ಒಂದು ಛಾಪಾ ಕಾಗದವನ್ನು ಐದರಿಂದ ಎಂಟು ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಸಧ್ಯ ಆರೋಪಿಗಳಿಂದ 118 ನಕಲಿ ಸೀಲ್ ಗಳು ವಶಪಡಿಸಿಕೊಂಡಿದ್ದಾರೆ. ನಕಲಿ ಛಾಪಾ…

Read More