Subscribe to Updates
Get the latest creative news from FooBar about art, design and business.
- ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
- ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
- ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
- ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
- ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
- ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
- ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
- ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್.ಕೃಷ್ಣಮೂರ್ತಿ
Author: admin
ಬಾಗಲಕೋಟೆ: ಕ್ಷೌರಿಕನೋರ್ವ ಗ್ರಾಹಕನನ್ನು ಕತ್ತರಿಯಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಘಟನೆ ಆಸಂಗಿಯಲ್ಲಿ ನಡೆದಿದ್ದು, 22 ವರ್ಷ ವಯಸ್ಸಿನ ಸಾಗರ್ ಅವಟಿ ಎಂಬಾತ ಮೃತಪಟ್ಟ ಗ್ರಾಹಕ ಎಂದು ಗುರುತಿಸಲಾಗಿದೆ. ಬಾಗಲಕೋಟೆ ಜಿಲ್ಲೆ ರಬಕವಿ -ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರಜ್ವಲ್ ಜೆಂಟ್ಸ್ ಪಾರ್ಲರ್ ಮಾಲೀಕ ಸದಾಶಿವ ನಾವಿ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ತಲೆಗೆ ಬಣ್ಣ ಹಚ್ಚುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದದ ನಂತರ ಹತ್ಯೆ ನಡೆದಿದೆ ಎನ್ನಲಾಗಿದೆ. ಸದಾಶಿವ ನಾವಿ ಗ್ರಾಹಕ ಸಾಗರ್ ನನ್ನು ಕತ್ತರಿಯಿಂದ ಇರಿದಿದ್ದು, ಈ ವೇಳೆ ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆತ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಎಂದು ತಿಳಿದು ಬಂದಿದೆ. ಆರೋಪಿ ಸದಾಶಿವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಕೊಪ್ಪಳ: ಹೊಟೇಲ್ ಸಿಬ್ಬಂದಿ ಊಟ ಇಲ್ಲ ಎಂದಿದ್ದಕ್ಕೆ ಸಿಟ್ಟಿಗೆದ್ದ ಅಪರಿಚಿತರು ಹೊಟೇಲ್ ಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ಘಟನೆ ತಾಲೂಕಿನ ಆನೆಗೊಂದಿಯಲ್ಲಿ ನಡೆದಿದೆ. ರಾತ್ರಿ ಹನ್ನೊಂದುವರೆ ಗಂಟೆಯ ಬಳಿಕ ಊಟ ಇಲ್ಲ ಎಂದು ಹೇಳಿದ್ದಕ್ಕೆ ಕೋಪಗೊಂಡ ಯುವಕರು ಅಡುಗೆ ಸಿಬ್ಬಂದಿಗೆ ಗೊತ್ತಾಗದಂತೆ ಕೋಣೆಯ ಹೊರಗಿನಿಂದ ಚಿಲಕ ಹಾಕಿ ಕೂಡಿಹಾಕಿದ್ದು, ಹೋಟೆಲ್ ನೊಳಗಿದ್ದ ನೀರಿನ ಸಂಪರ್ಕ ಕಡಿತಗೊಳಿಸಿ ಬೆಂಕಿ ಹಚ್ಚಿದ್ದಾರೆ. ಅಡುಗೆ ಕೋಣೆಯಲ್ಲಿ ಬಂಧಿಗಳಾಗಿದ್ದ ಸಿಬ್ಬಂದಿ ಫೋನ್ ಮೂಲಕ ಗ್ರಾಮಸ್ಥರನ್ನು ಸ್ಥಳಕ್ಕೆ ಕರೆಸಿಕೊಂಡು ಬಂಧನದಿಂದ ಹೊರಬಂದಿದ್ದಾರೆ. ಬೆಂಕಿ ನಂದಿಸುವ ಹೊತ್ತಿಗಾಗಲೇ ಹೊಟೇಲ್ ನ ಸಂಪೂರ್ಣ ಭಾಗ ಸುಟ್ಟು ಕರಕಲಾಗಿದೆ. ಯಾವುದೇ ಸಾವು-ನೋವು ಸಂಭವಿಸಿಲ್ಲ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ವಿಜಯಪುರ: ಬಿಜೆಪಿಗೆ ಕಾಂಗ್ರೆಸ್ ನ ಇಬ್ಬರು ಪ್ರಭಾವಿ ನಾಯಕರು ಬರುವುದಕ್ಕೆ ನಾಟಕ ಮಾಡುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಗುರುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಗೆ ಬರಲು ಬಹಳ ಮಂದಿ ಕಾಯುತ್ತಿದ್ದಾರೆ. ವಿಜಯಪುರ ಜಿಲ್ಲೆಯ ಇಬ್ಬರು ಬಿಜೆಪಿಗೆ ಬರಲು ನಾಟಕ ಮಾಡುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಲೂಟಿ ಮಾಡಿ ಬಿಜೆಪಿಗೆ ಬರುತ್ತಿದ್ದಾರೆ. ಇಂತಹ ಕಳ್ಳರು ಬಿಜೆಪಿಗೆ ಬರಬೇಕು ಅಂತಾ ಕಾಯುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಹಮಾಲಿ ಮಾಡೋದಕ್ಕೆ ಇದ್ದಾರಾ ಎಂದವರು ಪ್ರಶ್ನಿಸಿದರು. ಮೇಲಿನವರು ಇಂಥವರನ್ನೆಲ್ಲ ತೆಗೆದುಕೊಳ್ಳಬಾರದು. ಮೇಲಿನವರು ತೆಗೆದುಕೊಂಡರೆ ಕಾರ್ಯಕರ್ತರು ಮಾಡುತ್ತೇವಾ? ಕಳ್ಳರಿಗೆ ತೆಗೆದುಕೊಂಡರೆ ಸಿದ್ದಾಂತ ಎಲ್ಲಿ ಉಳಿಯುತ್ತದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಬೆಂಗಳೂರು: ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಬಿಜೆಪಿಗೆ ಸೇರಲು ಒಪ್ಪದಿದ್ದಾಗ ನನ್ನ ವಿರುದ್ಧ ಸಂಚು ರೂಪಿಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸರ್ಕಾರಿ ಸಂಸ್ಥೆಗಳಿಂದ ನನ್ನ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40 ಪರ್ಸೆಂಟ್ ಕಮಿಷನ್ ಸರ್ಕಾರದಿಂದ ಜನ ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ ಎಂದಿದ್ದಾರೆ. ಸಚಿವರೊಬ್ಬರು ಶೇ. 40 ಕಮಿಷನ್ ಕೇಳಿದ್ದಕ್ಕೆ ಕಾಂಟ್ರ್ಯಾಕ್ಟರ್ ಆತ್ಮಹತ್ಯೆ ಮಾಡಿಕೊಂಡರು. ರಾಜ್ಯ ಸರ್ಕಾರವು 40 ಪರ್ಸೆಂಟ್ ಕಮಿಷನ್ ಕೇಳುತ್ತಿದೆ ಎಂದು ಗುತ್ತಿಗೆದಾರರ ಸಂಘ ಸಾರ್ವಜನಿಕವಾಗಿ ಹೇಳಿದೆ. ಃಎP ಪ್ರಾಯೋಜಿತ PSI ಹಗರಣ ಭೇದಿಸಿದ್ದರಿಂದ ಪೊಲೀಸ್ ನೇಮಕಾತಿ ಸ್ಥಗಿತಗೊಂಡಿದೆ. ಆದರೂ ಯಾರ ಮೇಲೂ ದಾಳಿ ನಡೆದಿಲ್ಲ, ಚಾರ್ಜ್ ಶೀಟ್ ಹಾಕಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಮೈಸೂರು: ರಾಜ್ಯಾದ್ಯಂತ ಯುವ ಕಾರ್ಯಕರ್ತರು ನನ್ನನ್ನ ಪ್ರೀತಿ ಮಾಡ್ತಾರೆ. ನನಗೆ ಟಿಕೆಟ್ ಸಿಗದಿದ್ದಕ್ಕೆ ಕೆಲವರು ಬೇಸರವಾಗಿದ್ದಾರೆ. ನಾನು ಕೂಡಾ ರಾಜಕಾರಣಕ್ಕೆ ಈಗ ಅಂಬೆಗಾಲಿಡುತಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷ ಉತ್ತಮ ಜವಾಬ್ದಾರಿ ನೀಡಲಿದೆ. ಪರಿಷತ್ ಟಿಕೆಟ್ ಸಿಗದಿದ್ದಕ್ಕೆ ಇಲ್ಲಿಗೆ ಎಲ್ಲಾ ಮುಗಿದುಹೋಗಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ನನ್ನ ಹಾಗೆ ಕೆಲಸ ಮಾಡಿದ ಸಾವಿರಾರು ಕಾರ್ಯಕರ್ತರಿದ್ದಾರೆ. ಸ್ವಂತ ದುಡ್ಡು ಖರ್ಚು ಮಾಡಿ ಪಕ್ಷದ ಕೆಲಸ ಮಾಡುತ್ತಿರುವ ಕಾರ್ಯಕರ್ತರಿದ್ದಾರೆ. ಪರಿಷತ್ ಚುನಾವಣೆಗೆ ಸುಮಾರು 20 ಜನರು ಹೆಸರು ಶಿಫಾರಸ್ಸು ಮಾಡಲಾಗಿತ್ತು. ಆದರೆ ಆಯ್ಕೆ ಆಗಬೇಕಿರೋದು ಕೇವಲ ನಾಲ್ಕು ಜನ. ಅದನ್ನ ಹೈಕಮಾಂಡ್ ಈಗಾಗಲೇ ತೀರ್ಮಾನ ಮಾಡಿದೆ ಎಂದರು. ಬಿ.ಎಲ್.ಸಂತೋಷ್ ರಿಂದ ವಿಜಯೇಂದ್ರಗೆ ಟಿಕೆಟ್ ಕೈತಪ್ಪಿದೆ ಎಂಬ ವದಂತಿ ಬಗ್ಗೆ ಮಾತನಾಡಿದ ಅವರು, ಆ ರೀತಿಯ ಯಾವುದೇ ಬೆಳವಣಿಗೆ ನಡೆದಿಲ್ಲ .ಅಭ್ಯರ್ಥಿ ಆಯ್ಕೆ ಮಾಡೋದು ಕೋರ್ ಕಮಿಟಿ ಹಾಗೂ ಕೇಂದ್ರ ನಾಯಕರು. ಇದರಲ್ಲಿ ಯಾರೋ ಒಬ್ಬರ…
ಸರಗೂರು: ಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ನಿಗಾ ವಹಿಸುವ ಜೊತೆಗೆ ಅಪರಾಧ ಕೃತ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವ ಬಗ್ಗೆ ತೀರ್ಮಾನಿಸಲಾಯಿತು. ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಅಪರಾಧ ತಡೆ ಮುನ್ನೆಚ್ಚರಿಕೆ ಕ್ರಮವಾಗಿ ಸರಗೂರು ಪೊಲೀಸರು ವರ್ತಕರು, ಆಭರಣ ಅಂಗಡಿ ಮಾಲೀಕರೊಂದಿಗೆ ಆಯೋಜಿಸಿದ್ದ ಸಭೆಯಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವ ಬಗ್ಗೆ ಒಮ್ಮತದ ಅಭಿಪ್ರಾಯದೊಂದಿಗೆ ಕ್ರಮವಹಿಸಲಾಯಿತು. ಈ ವೇಳೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ವೃತ್ತ ನಿರೀಕ್ಷಕ ಎನ್.ಆನಂದ್, ಅಪರಾಧ ಕೃತ್ಯಗಳನ್ನು ತಡೆಗಟ್ಟುವಲ್ಲಿ ಇಲಾಖೆ ಶ್ರಮವಹಿಸಿದೆ. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಯಾರೇ ಭಾಗಿಯಾಗಿದ್ದರು ಅಂತಹವರಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ. ಆದ್ದರಿಂದ ಅಪರಾಧ ಕೃತ್ಯಗಳನ್ನು ಶೀಘ್ರದಲ್ಲೇ ಪತ್ತೆ ಹಚ್ಚಲು ಸಹಕಾರಿಯಾಗುವಂತೆ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದರೆ ಹೆಚ್ಚಿನ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ವರ್ತಕರು, ಆಭರಣ ಅಂಗಡಿ ಮಾಲೀಕರು ಸಹಕಾರ ನೀಡಬೇಕು ಎಂದರು. ಸಮಾಜದಲ್ಲಿ ಶಾಂತಿಯುತ ವಾತಾವರಣ ನಿರ್ಮಾಣವಾಗಬೇಕಂದರೆ ಅಲ್ಲಿ ಕಾನೂನು ಸುವ್ಯವಸ್ಥೆ…
ತಿಪಟೂರು: ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೋಕಿನ ಪೆದ್ದನಹಳ್ಳಿ ದಲಿತ ಯುವಕರ ಕಗ್ಗೋಲೆ ಪ್ರಕರಣವನ್ನ ದಾರಿತಪ್ಪಿಸುವ ಹುನ್ನಾರ ನಡೆಯುತ್ತಿದ್ದು ಪ್ರಕರಣದ ಪ್ರಮುಖ ಆರೋಪಿಗಳನ್ನ ಬಂಧಿಸಿ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) (ದಾದಾ ಸಾಹೇಬ್ ಎನ್ ಮೂರ್ತಿ ಸ್ಥಾಪಿತ) ತಿಪಟೂರು ತಾಲ್ಲೋಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರಸಲ್ಲಿಸಲಾಯಿತು ಪ್ರತಿಭಟನಾ ನಿರತರನ್ನ ಉದ್ದೇಶಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ದಾದಾ ಸಾಹೇಬ್ ಎನ್. ಮೂರ್ತಿ ಸ್ಥಾಪಿತ )ಅಧ್ಯಕ್ಷ ಗೌಡನಕಟ್ಟೆ ಅಶೋಕ್ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಸರ್ಕಾರ ಪರಿಶಿಷ್ಠ ಜಾತಿ ವರ್ಗಗಳಿ ಸೂಕ್ತ ರಕ್ಷಣೆ ನೀಡದೆ ಮೌನ ವಹಿಸಿರುವುದು ಖಂಡನೀಯವಾಗಿದೆ ಎಂದರು. ಸರ್ಕಾರದ ನಿರ್ಲಕ್ಷ್ಯ ದೋರಣೆಗೆ ಸಾಕ್ಷಿ ಎಂಬತೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೋಕಿನ ಪೆದ್ದನಹಳ್ಳಿಯಲ್ಲಿ ಇಬ್ಬರು ದಲಿತ ಸಮುದಾಯಕ್ಕೆ ಸೇರಿದ ಯುವಕರನ್ನ ಕಳ್ಳತನದ ಆರೋಪಹೊರಿಸಿ ಹಳೇ ಜಾತಿ ವೈಷ್ಯಮ್ಯದ ಹಿನ್ನೆಲೆ…
ಚಿತ್ರದುರ್ಗ: ಜಿಲ್ಲೆಯ ಚಿತ್ರದುರ್ಗ ತಾಲ್ಲೂಕಿನ ಭರಮ ಸಾಗರ ಹೋಬಳಿಯ ಕೊಳಾಳು ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯಾಗಿರುವ ಸಂತೋಷ್ ಹೆಚ್.ಎಸ್. ರವರು ಖಾತೆ ಬದಲಾವಣೆಗಾಗಿ ರೂ 4,500ರೂ., ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಭರಮಸಾಗರದ ನಾಡಕಛೇರಿಯಲ್ಲೆ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಆರೋಪಿ ಗ್ರಾಮ ಲೆಕ್ಕಾಧಿಕಾರಿ ಸಂತೋಷ್ ಹೆಚ್.ಎಸ್. ರವರನ್ನು ಬಂಧಿಸಿದ್ದಾರೆ. ಆರೋಪಿ ಸಂತೋಷ್ ಹಳವುದರ ಗ್ರಾಮದ ರೈತ ವೀರೇಶ್ ಬಳಿ ರೂಪಾಯಿ 4,500 ಲಂಚ ಸ್ವೀಕರಿಸುವಾಗ ಎ ಸಿ ಬಿ ಅಧಿಕಾರಿಗಳು ಬಂಧಿಸಿದ್ದಾರೆ . ಖಾತೆ ಬದಲಾವಣೆ ಮಾಢಿಕೊಡುವಂತೆ ಸಾಕಷ್ಟುಸಲ ರೈತ ಓಡಾಡಿದ್ದರೂ ಗ್ರಾಮ ಲೆಕ್ಕಾಧಿಕಾರಿಯಾಗಿರುವ ಸಂತೋಷ್ ಹೆಚ್.ಎಸ್. ರವರು ಸ್ಪಂದಿಸದೇ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಹೀಗಾಗಿ ರೈತ ಎಸಿಬಿ ಮೊರೆ ಹೋಗಿದ್ದರು. ದಾವಣಗೆರೆ ಎಸಿಬಿ ಅಧಿಕಾರಿಗಳಾದ ಡಿ ವೈ ಎಸ್ ಪಿ ಮಂಜುನಾಥ್ ಆರ್. ,ಇನ್ಸ್ ಪೆಕ್ಟರ್ ಗಳಾದ ಉಮೇಶ್ ಕುಮಾರ್, ಪ್ರಭು ಸೂರಿನ್ ಅವರು ದಾಳಿಯ ನೇತೃತ್ವ ವಹಿಸಿದ್ದರು . ಇನ್ನೂ ಚಿತ್ರದುರ್ಗ ತಾಲ್ಲೂಕು ಕಛೇರಿಯಲ್ಲಿ…
ಬೆಂಗಳೂರು: ಶಾಲಾ ಬಸ್ ವೊಂದು ಬಾಲಕಿಯ ಮೇಲೆ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನಶಂಕರಿಯ ದೇವೇಗೌಡ ಪೆಟ್ರೋಲ್ ಬಂಕ್ ಬಳಿಯಲ್ಲಿ ನಡೆದಿದೆ. ಹಾರೋಹಳ್ಳಿ ನಿವಾಸಿ 16 ವರ್ಷ ವಯಸ್ಸಿನ ಕೀರ್ತನಾ ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಸ್ನೇಹಿತರ ಜತೆ ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಖಾಸಗಿ ಶಾಲಾ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಗೆ ಬಿದ್ದ ಬಾಲಕಿಯ ಮೇಲೆಯೇ ಬಸ್ ಹರಿದಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದಾರೆ. ಡೆಲ್ಲಿ ಪಬ್ಲಿಕ್ ಶಾಲೆ ಬಸ್ ಬಾಲಕಿಯ ಮೇಲೆ ಹರಿದ ಬಸ್ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಬೆಂಗಳೂರು: ನಿರಂತರ ಆದಾಯ ಹೆಚ್ಚಳ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಇಡಿ ಅಧಿಕಾರಿಗಳು ಗುರುವಾರ ದೆಹಲಿ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಬೆಂಗಳೂರು ನಿವಾಸ ಸೇರಿದಂತೆ ದೆಹಲಿ, ಮುಂಬೈ ಸೇರಿ ಹಲವು ನಗರಗಳಲ್ಲಿ ಆಸ್ತಿ ಸಂಪಾದನೆ, ಹಲವು ವರ್ಷಗಳಿಂದ ನಿರಂತರ ಆದಾಯ ಹೆಚ್ಚಳ ಆರೋಪದ ಮೇಲೆ ಈ ಹಿಂದೆ ಇಡಿ ದಾಳಿ ಆಗಿತ್ತು. ದಾಖಲೆ ಸಂಗ್ರಹದ ಸಮಯದಲ್ಲಿ ಡಿಕೆಶಿಯನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಜಾಮೀನು ಪಡೆದು ಜೈಲಿನಿಂದ ಡಿಕೆಶಿ ಹೊರ ಬಂದಿದ್ದರು. ಈ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಚಾರ್ಜ್ಶೀಟ್ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB