Author: admin

ತುಮಕೂರು: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿ, ಚರ್ಚೆಗೆ ತಂದು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು, ರಾಜ್ಯ ಮಾದಿಗ ದಂಡೋರ  ಸಮಿತಿಯ ನಿಯೋಗವು ಬೆಳಗಾವಿಯ ಅಧಿವೇಶನದಲ್ಲಿ ಮನವಿ ಸಲ್ಲಿಸಿದ್ದು, ಈ ಸಂಬಂಧ  ಮಾದಿಗ ದಂಡೋರದ ರಾಜ್ಯ ಕಾರ್ಯದರ್ಶಿ ಬೇವಿನಹಳ್ಳಿ ಚನ್ನಬಸವಯ್ಯ ಅವರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಲಾಯಿತು. ಮುಖಂಡರಾದ ಚನ್ನಬಸವಯ್ಯ ಮಾತನಾಡಿ, ಮಾದಿಗ ದಂಡೋರದ ನಿಯೋಗವು ಸಚಿವರಾದ ಮಾಧುಸ್ವಾಮಿ ಹಾಗೂ ಸಮಾಜ ಕಲ್ಯಾಣ ಸಚಿವರ ಸಮ್ಮುಖದಲ್ಲಿ, ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಈ ವೇಳೆ ಮುಖ್ಯಮಂತ್ರಿಯವರು, ನಮ್ಮ ನಿಯೋಗವು ನೀಡಿದ ಮನವಿಯನ್ನು ಸ್ವೀಕರಿಸಿ, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ವಿಚಾರವನ್ನು ವಿಧಾನಸಭೆಯಲ್ಲಿ ಚರ್ಚಿಸಲು, ಸಂಬಂಧಿಸಿದ ಇಲಾಖೆ ಹಾಗೂ ಸಚಿವರು ಸಿದ್ಧತೆ ಮಾಡಿಕೊಳ್ಳಲು ಕನಿಷ್ಠ ಪಕ್ಷ ಹದಿನೈದು ದಿನಗಳ ಆವಶ್ಯಕತೆ ಇರುವುದರಿಂದ, ಈ ಬೆಳಗಾವಿಯ ಅಧಿವೇಶನದಲ್ಲಿ  ಚರ್ಚಿಸಲು ಸಾಧ್ಯವಿಲ್ಲ, ಆದರೆ ಮುಂದಿನ ಬಜೆಟ್ ಅಧಿವೇಶನದಲ್ಲಿ ಚರ್ಚಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು ಎಂದು ತಿಳಿಸಿದರು. ಸಿಎಂ ಭೇಟಿಗೆ ಜೆ.ಸಿ.ಮಾಧುಸ್ವಾಮಿ…

Read More

ಬೆಳಗಾವಿ: ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡಲಾಗುವುದು ಎಂದು ಸುವರ್ಣ ಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಹಾನಿ ಮಾಡಿದ ಮತ್ತು ಶಿವಾಜಿ ಪ್ರತಿಮೆ ಮಸಿ ಬಳಿದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿಯೊಂದಿಗೆ ಮಾತನಾಡುತ್ತೇನೆ ಎಂದು ಅವರು ಹೇಳಿದರು. ಇನ್ನೂ ಕಾನೂನಿನಲ್ಲಿ ಅವಕಾಶವಿದ್ದರೆ, ಎಂಇಎಸ್ ಸಂಘಟನೆಯನ್ನು ಕರ್ನಾಟಕದಲ್ಲಿ ಬ್ಯಾನ್ ಮಾಡಲಾಗುವುದು. ಇದಕ್ಕೆ ಎಲ್ಲ ರೀತಿಯ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಬೊಮ್ಮಾಯಿ ಘೋಷಿಸಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಮಧುಗಿರಿ: ಮಧುಗಿರಿ ತಾಲ್ಲೂಕಿನ ನೇರಳೇಕೆರೆ ಗ್ರಾ.ಪಂ.ವ್ಯಾಪ್ತಿಯ ವೀರಾಪುರ ಮತ್ತು ಅಕ್ಕ-ಪಕ್ಕದ ಗ್ರಾಮಗಳಿಗೆ ಯಾವುದಾದರೂ ಮೂಲಕಗಳಿಂದ ನೀರನ್ನು ಒದಗಿಸಬೇಕೆಂದು ಒತ್ತಾಯಿಸಿ ನೇರಳೇಕೆರೆ ಗ್ರಾ.ಪಂ.ಅಧ್ಯಕ್ಷರಾದ ನಾಗಲಕ್ಷ್ಮೀ ನೇತೃತ್ವದಲ್ಲಿ ಗ್ರಾಮಸ್ಥರುಗಳು, ಮುಖಂಡರುಗಳು ಕಾವೇರಿ  ನೀರಾವರಿ ವ್ಯವಸ್ಥಾಪಕ ನಿರ್ದೇಶಕ ಜಯಪ್ರಕಾಶ್‍ ರವರಿಗೆ ಮನವಿ ಪತ್ರ ಅರ್ಪಿಸಿದರು. ವೀರಾಪುರ ಭಾಗದಲ್ಲಿ ಸುಮಾರು 5 ಸಾವಿರ ಮಂದಿ ವಾಸಿಸುತ್ತಿದ್ದು, ಕೃಷಿಯೇ ಮೂಲಧಾರವಾಗಿದೆ. ಜೀವನ ನಿರ್ವಹಣೆಗೆ ಯಾವುದೇ ಮೂಲ ಇರುವುದಿಲ್ಲ. ಹಾಗೂ ಅಂತರ್ಜಲ ಕುಸಿದು ಹೋಗಿದೆ. ರೈತರಿಗೆ ವ್ಯವಸಾಯಕ್ಕೆ ನೀರಿನ ತೊಂದರೆ ಎದುರಿಸುತ್ತಿದ್ದಾರೆ. ಕಳೆದ 20 ವರ್ಷಗಳಿಂದ ಬರಗಾಲ ಪೀಡಿತ ಪ್ರದೇಶವಾಗಿ ಜನರು ಸಂಕಷ್ಟ ಅನುಭವಿಸುತ್ತಿದ್ದು, ರೈತರು ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಈ ಸಂದರ್ಭದಲ್ಲಿ ಕನಿಷ್ಠ ಕುಡಿಯುವ ನೀರು ತಮ್ಮ ದನ, ಕರುಗಳಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಲು, ಯಾವುದಾದರೂ ಮೂಲಗಳಿಂದ ನೀರನ್ನು ಒದಗಿಸುವ ಮತ್ತು ಕೆರೆಗಳಿಗೆ ನೀರು ತುಂಬಿಸುವ ಪ್ರಯತ್ನ ಮಾಡಬೇಕೆಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಿದ್ದಲಿಂಗಪ್ಪ ಸಿದ್ದರಾಮಯ್ಯ, ಕೆಂಚಪ್ಪ, ಇಂದ್ರಕುಮಾರ್, ಸಿದ್ದಪ್ಪ, ಶಿವಣ್ಣ, ಶಿವಕುಮಾರ್ ವೀರಾಪುರ,…

Read More

ಮಧುಗಿರಿ: ಜಾನಪದ ಕಲೆಯ ತಾಯಿಬೇರುಗಳಾದ ಯಕ್ಷಗಾನ, ಮೂಡಲಪಾಯ, ಬಯಲಾಟ ಕಲೆಗಳನ್ನು ಸಂರಕ್ಷಿಸಿದರೆ ಜಾನಪದದ ಅಸ್ವಿತ್ವಕ್ಕೆ ಧಕ್ಕೆ ಬಾರದು ಎಂದು ಆದಾಯ ತೆರಿಗೆ ಆಯುಕ್ತರಾದ ಜಯರಾಮ್ ರಾಯಪುರ ಪ್ರತಿಪಾದಿಸಿದರು. ಬಯಲುಸೀಮೆಯಾದ್ಯಂತ ಗ್ರಾಮೀಣ ಭಾಗದಲ್ಲಿ ಪುರಾತನ ಕಾಲದಿಂದಲೂ ನೆಲೆಗೊಂಡಿರುವ ಮೂಡಲಪಾಯ ಬಯಲಾಟ ಕಲೆ ಉಳಿವಿಗಾಗಿ ಭಾಗವತರನ್ನು ಒಂದುಗೂಡಿಸಲು ಜಾನಪದ ಒಡನಾಡಿಗಳೊಂದಿಗೆ ಕ್ಷೇತ್ರ ಪರ್ಯಟನೆ ಕೈಗೊಂಡಿರುವ ಅವರು ತಾಲ್ಲೂಕಿನ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿದ ನಂತರ ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಹುಲಿಗಳನ್ನು ಸಂರಕ್ಷಿಸುವ ಟೈಗರ್ ಪ್ರಾಜೆಕ್ಟ್ ಯೋಜನೆಯಿದೆ. ಹುಲಿಗಳ ಉಳಿಸಬೇಕು ಎಂದರೆ ಮೊದಲು ಬೇಟೆ ಪ್ರಾಣಿಗಳನ್ನು ಉಳಿಸಿ ಜೀವಿ ಸಮತೋಲನ ಕಾಯ್ದು ಕೊಳ್ಳಬೇಕು. ಆಗೆಯೇ ಜಾನಪದ ಕಲೆ ಉಳಿಸಬೇಕೆಂದರೆ ಯಕ್ಷಗಾನ, ಬಯಲಾಟ ಸೇರಿದಂತೆ ಜಾನಪದರ ಬಾಯಲ್ಲಿರುವ ಕಲೆಗಳನ್ನು ಉಳಿಸುವುದು ಅನಿವಾರ್ಯ ಎಂದರು. ನಾನು ಅಧಿಕಾರಿಯಾಗಿ ಅಕ್ಷರ ತಿಳಿದವನಾಗಿ ನಮ್ಮ ಕಣ್ಣಮುಂದೆಯೇ ನಶಿಸುತ್ತಿರುವ ಕಲೆಗಳನ್ನು ಉಳಿಸುವ ಪ್ರಯತ್ನಕ್ಕೆ ಕೈಜೋಡಿಸದಿದ್ದರೆ ಆತ್ಮ ವಂಚನೆ ಮಾಡಿಕೊಂಡಂತಾಗುತ್ತದೆ ಎಂಬ ಕಾರಣಕ್ಕೆ ಜಾನಪದ ವಿದ್ವಾಂಸರೊಂದಿಗೆ ಸೇರಿ ಭಾಗವತರನ್ನು ಒಂದುಗೂಡಿಸುವ ಕಾರ್ಯದಲ್ಲಿ…

Read More

ಸರಗೂರು: ಹುಲಿ ಬಂತು, ಹುಲಿ… ಹೌದು..! ಸರಗೂರು ತಾಲೂಕಿನ ಹೆಚ್.ಬಿ. ಮಟಗೆರೆ ಗ್ರಾಮದಲ್ಲಿ ಹುಲಿಯನ್ನು ಕಂಡು ಸಾರ್ವಜನಿಕರು ಬೆಚ್ಚಿ ಬಿದ್ದ ಘಟನೆ ನಡೆದಿದ್ದು, ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಹುಲಿಯನ್ನು ಹಿಡಿಯಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಹೆಚ್.ಬಿ.ಮಟಗೆರೆ ಗ್ರಾಮದ ಹೊರವಲಯದಲ್ಲಿ ಹುಲಿ ಕಾಣಿಸಿಕೊಂಡಿದೆ ಎಂದು ರೈತರು ಹೇಳಿದ್ದಾರೆ. ವಿಚಾರ ತಿಳಿದು ಅರಣ್ಯ ಇಲಾಖೆಯ ಸಿಬ್ಬಂದಿ, ಜೆಸಿಬಿ ಮೂಲಕ  ಕಾರ್ಯಾಚರಣೆ ನಡೆಸಿದ್ದು, ರೈತರು ಹೇಳಿದ ಜಾಗದಲ್ಲಿ ಹುಲಿ ಇದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಹುಲಿ ಪ್ರತ್ಯಕ್ಷವಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದು, ಕೃಷಿ ಚಟುವಟಿಕೆಗಳಿಗೆ ಜಮೀನಿಗೆ ಹೋಗಲು ಭೀತಿ ಸೃಷ್ಟಿಯಾಗಿದೆ ಎಂದು ದೂರಿದ್ದಾರೆ. ಹೀಗಾಗಿ ತಕ್ಷಣವೇ ಹುಲಿಗೆ ಬೋನಿಟ್ಟು ಹಿಡಿದು, ಭಯಮುಕ್ತ ವಾತಾವರಣ ಸೃಷ್ಟಿಸಬೇಕು ಎಂದು ಇಲ್ಲಿನ ರೈತರು ಮನವಿ ಮಾಡಿಕೊಂಡಿದ್ದಾರೆ. ವರದಿ: ಚಂದ್ರ ಹಾದನೂರು ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ದಾವಣಗೆರೆ: ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಭಗ್ನಗೊಳಿಸಿರುವ ಎಂಇಎಸ್ ಪುಂಡರ ಕೃತ್ಯ ಖಂಡಿಸಿ ನಗರದಲ್ಲಿ ದಾಸಶ್ರೇಷ್ಠ ಶ್ರೀಕನಕದಾಸರು ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೋರಾಟ ಸಮಿತಿ ಹಾಗೂ ಕರ್ನಾಟಕ ಸಮರ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಪಿಬಿ ರಸ್ತೆಯಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜಮಾಯಿಸಿದ ಪ್ರತಿಭನಾಕಾರರು, ರಾಯಣ್ಣರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಎಂಇಎಸ್ ಪುಂಡಾಟಿಕೆ ವಿರುದ್ಧ ಘೋಷಣೆ ಕೂಗಿ, ಟಯರ್ ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾನಿರತರು ಪಿಬಿ ರಸ್ತೆಯಲ್ಲಿ ಟಯರ್ ಸುಡಲು ಮುಂದಾದಾಗ ಪೊಲೀಸರು ಅದನ್ನು ತಡೆಯಲು ಮುಂದಾದರು. ಆಗ ಪ್ರತಿಭಟನಾನಿರತರು ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಎಷ್ಟೇ ಮನವೊಲಿಸಲು ಮುಂದಾದರೂ ಪಟ್ಟು ಸಡಲಿಸದ ಪ್ರತಿಭಟನಾಕಾರರು ಟಯರ್ ಸುಟ್ಟು ಎಂಇಎಸ್ ಪುಂಡಾಟಿಕೆ ವಿರುದ್ಧ ಕಿಡಿಕಾರಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿವಿಧ ಸಂಘಟನೆಗಳ ಮುಖಂಡರು, ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಪುಂಡರು ಅಪ್ರತಿಮ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತಿ ಭಗ್ನಗೊಳಿಸಿರುವುದು…

Read More

ದಾವಣಗೆರೆ: ಕೂಡಲಸಂಗಮ ಪೀಠದ ಜಗದ್ಗುರು ಶ್ರೀಬಸವ ಜಯಮೃತ್ಯುಂಜಯ ಮಹಾಸ್ವಾಮಿಗಳ ಜನ್ಮ ದಿನಾಚರಣೆಯ ಅಂಗವಾಗಿ ಡಿ.23ರಂದು ನಗರದ ಸದ್ಯೋಜ್ಯಾತ ಮಠದಲ್ಲಿ ಬೆಳಗ್ಗೆ 10:30ಕ್ಕೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಲಿಂಗಾಯಿತ ಪಂಚಮಸಾಲಿ ಮಹಾಸಭಾ ರಾಜ್ಯ ಯುವ ಘಟಕದ ಅಧ್ಯಕ್ಷ ಬಿ.ಜಿ.ಅಜಯ್ ಕುಮಾರ್ ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಗಳು ತಮ್ಮ ಜನ್ಮ ದಿನಾಚರಣೆಯ ಅಂಗವಾಗಿ ಡಿ.23ರಂದು ಬೆಳಗ್ಗೆ 10 ಗಂಟೆಗೆ ಬೆಳಗಾವಿಯ ಗಾಂಧಿ ಭವನದಲ್ಲಿ ಸ್ವತಃ ರಕ್ತದಾನ ಮಾಡುವುದರ ಮೂಲಕ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ. ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟದಲ್ಲಿ ಹೇಳಿದಂತೆ ‘ರಕ್ತ ಕೊಟ್ಟೇವು,  ಮೀಸಲಾತಿ ಬಿಡೆವು’ ಘೋಷಣೆಯಂತೆ ಈ ಬಾರಿ ಜಗದ್ಗುರುಗಳ 42ನೇ ಹುಟ್ಟುಹಬ್ಬದ ಅಂಗವಾಗಿ ಕರ್ನಾಟಕ ರಾಜ್ಯದಾದ್ಯಂತ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ರಕ್ತದಾನ ಮಾಡುವುದರ ಮೂಲಕ ರಕ್ತ ದಾಸೋಹ ಕಾರ್ಯಕ್ರಮದ ಮೂಲಕ ಮೀಸಲಾತಿ ಹೋರಾಟವನ್ನು ಮುನ್ನಲೆಗೆ ತಂದು ಸರ್ಕಾರಕ್ಕೆ ಅರಿವು ಮೂಡಿಸಲಾಗುವುದು ಎಂದರು. ಪಂಚಮಸಾಲಿ ಸಮಾಜದ ಜನಾಂಗವು ಜಗತ್ತಿನಲ್ಲಿ ಸಾಮಾಜಿಕ ಕಳಕಳಿ ಉಳ್ಳಂತವರು…

Read More

ಹಾಸನ: ಕುಡಿದ ಮತ್ತಿನಲ್ಲಿ ಚಾಲಕ ಲಾರಿ ಚಲಾಯಿಸಿದ ಪರಿಣಾಮ ಸರಣಿ ಅಪಘಾತ ಸಂಭವಿಸಿದ್ದು, ಪರಿಣಾಮವಾಗಿ ಅವಳಿ ಮಕ್ಕಳು ಸೇರಿದಂತೆ ತಾಯಿ ಸಾವನ್ನಪ್ಪಿದ್ದಾರೆ. ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ 8 ರ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದೆ. ಪ್ರಣತಿ (3), ಪ್ರಣವ್(3) ಮತ್ತು ಜ್ಯೋತಿ ಮೃತರು. ಪ್ರಣತಿ, ಪ್ರಣವ್ ಇಬ್ಬರೂ ಅವಳಿ ಮಕ್ಕಳಾಗಿದ್ದಾರೆ. ತಂದೆ ಶಿವಾನಂದ್ ಹಾಗೂ ತಾಯಿ ಜ್ಯೋತಿ ಜೊತೆ ಮಕ್ಕಳು ಬೈಕ್‌ ನಲ್ಲಿ ಹೋಗುತ್ತಿದ್ದರು. ಈ ವೇಳೆ ಸುಮಾರು ನಾಲ್ಕು ಬೈಕ್ ಗಳಿಗೆ ಡಿಕ್ಕಿ ಹೊಡೆದ ಲಾರಿ, ಎರಡು ಪುಟ್ಟ ಮಕ್ಕಳಿದ್ದ ಬೈಕ್‌ ಗೂ ಡಿಕ್ಕಿ ಹೊಡೆದಿದೆ ಪರಿಣಾಮ ಮಕ್ಕಳಿಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ತಾಯಿ ಕೂಡ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿರುವ ಮಕ್ಕಳ ತಂದೆ ಶಿವಾನಂದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಡಿದ ಮತ್ತಿನಲ್ಲಿ ಮನಬಂದಂತೆ ಲಾರಿ ಚಲಾಯಿಸಿದ ಚಾಲಕ ಅಪಘಾತಕ್ಕೆ ಕಾರಣವಾಗಿದ್ದಲ್ಲದೇ, ಅಪಘಾತದ ನಂತರವೂ ಲಾರಿ ನಿಲ್ಲಿಸದೆ ವೇಗವಾಗಿ ಹೋಗಿದ್ದಾನೆ.  ಇದರಿಂದ ಸುಮಾರು ಎರಡು…

Read More

ಯಾದಗಿರಿ: ಜಿಲ್ಲೆಯ ಸುರಪುರ ನಗರದಿಂದ ಮಹಾರಾಷ್ಟ್ರದ ಪುಣೆ ನಗರಕ್ಕೆ ತೆರಳಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಮೇಲೆ ದುಸ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಬೆಳಗಾವಿಯಲ್ಲಿ ಎಂಇಎಸ್ ಹಾಗೂ ಶಿವಸೇನಾ ಬೆಂಬಲಿಗರು ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಮಾಡಿ ಪುಂಡಾಟ ಮೆರೆದಿದ್ದರು, ಇದಕ್ಕೆ ಕನ್ನಡಿಗರು ಒಗ್ಗಟ್ಟಾಗಿ ಪ್ರತಿಭಟಿಸುತ್ತಿರುವುದರಿಂದ ಆಕ್ರೋಶಗೊಂಡಿರುವ ಅಲ್ಲಿನ ಕೆಲ ಕಿಡಿಗೇಡಿಗಳು ಪ್ರತಿಕಾರವಾಗಿ ಬಸ್‌ ನ ಮೇಲೆ ಕಲ್ಲು ತೂರಿರುವುದರಿಂದ ಗ್ಲಾಸ್‌ ಗಳು ಒಡೆದಿವೆ ಎಂಬ ಆರೋಪ ಕೇಳಿ ಬಂದಿದೆ. ಬಸ್ ಚಾಲಕ ಹಾಗೂ ನಿರ್ವಾಹಕ ಅಪಾಯದಿಂದ ಪಾರಾಗಿದ್ದು, ಆರೋಪಿಗಳ ಬಂಧನಕ್ಕೆ ವ್ಯಾಪಕ ಒತ್ತಡ ಕೇಳಿ ಬರುತ್ತಿದೆ. ವರದಿ : ಆನಂದ್ ತಿಪಟೂರು ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರ ಕೃತ್ಯವನ್ನು ಖಂಡಿಸಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದು, ಕರವೇ ನಡೆ, ಬೆಳಗಾವಿ ಕಡೆಗೆ ಎಂಬ ವಾಕ್ಯದೊಂದಿಗೆ ಹೋರಾಟ ಆರಂಭಿಸಿದೆ. ಇಂದು ಬೆಳಗಾವಿಯಲ್ಲಿ ಕರವೇ ಬೃಹತ್ ಪ್ರತಿಭಟನೆ ಹಾಗೂ ಧರಣಿ ನಡೆಸಲು ಸಿದ್ಧತೆ ನಡೆಸಿರುವ ನಡುವೆಯೇ, ಬೆಳಗಾವಿ ನಗರ, ತಾಲೂಕಿನಲ್ಲಿ ಸೆಕ್ಷನ್ 144 ಜಾರಿಯಲ್ಲಿದೆ. ಹೀಗಾಗಿ ಯಾವುದೇ ಪ್ರತಿಭಟನೆ, ಮೆರವಣಿಗೆಗೆ ಅವಕಾಶ ನೀಡುವುದಿಲ್ಲ ಎಂದು ಡಿಸಿಪಿ ವಿಕ್ರಮ್ ಆಮಟೆ ಹೇಳಿಕೆ ನೀಡಿರುವುದಾಗಿ ವರದಿಯಾಗಿದೆ. ಪ್ರತಿಭಟನಾಕಾರರನ್ನು ಹೀರೇಬಾಗೇವಾಡಿ ಟೋಲ್ ಗೇಟ್ ಬಳಿಯಲ್ಲಿಯೇ ತಡೆಯಲಾಗುವುದು. ಪ್ರತಿಭಟನಾ ನಿರತರನ್ನು ಮನವೊಲಿಸಿ ವಾಪಸ್ ಕಳುಹಿಸುವುದಾಗಿ ಡಿಸಿಪಿ ತಿಳಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More