Subscribe to Updates
Get the latest creative news from FooBar about art, design and business.
- ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ
- ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ
- ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ: ಬಿ.ವೈ. ವಿಜಯೇಂದ್ರ ಆರೋಪ
- ಮಾಜಿ ಸಚಿವ, ಶಾಸಕ ಹೆಚ್.ವೈ.ಮೇಟಿ ನಿಧನ
- ಹುಲಿ ದಾಳಿಗೆ ಹೆದರಿ ಹೊರಬಾರದ ಜನ: ಅರಣ್ಯ ಇಲಾಖೆಯಿಂದ ಆಹಾರದ ಕಿಟ್ ವಿತರಣೆ
- ಸರಗೂರು | ಮುಳ್ಳೂರು ಗ್ರಾಮವನ್ನು ಹೋಬಳಿ ಕೇಂದ್ರ ಮಾಡಲು ಪ್ರಯತ್ನಿಸಲಾಗುವುದು: ಶಾಸಕ ಅನಿಲ್ ಕುಮಾರ್
- ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ
- ಕೊರಟಗೆರೆ ಬಸ್ ಗಾಗಿ ಪರದಾಟ: ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ
Author: admin
ಮಧುಗಿರಿ: ಪಟ್ಟಣದ ಆರ್ ಎಂ ಸಿ ಯಲ್ಲಿ ಹಮಾಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಕಾಂತರಾಜು ಬಿನ್ ಲಕ್ಷ್ಮೀನಾರಾಯಣ ಅವರು ತಮ್ಮ ಎರಡೂ ಕಣ್ಣುಗಳನ್ನು ಕಳೆದುಕೊಂಡು ಅಸಹಾಯಕ ಜೀವನ ನಡೆಸುತ್ತಿದ್ದು, ಈ ವಿಚಾರ ತಿಳಿದ ಶಿಕ್ಷಕರೊಬ್ಬರು ಮಾನವೀಯತೆ ಮೆರೆದ ಘಟನೆ ನಡೆದಿದೆ. ಮುಂಜಾನೆ ವೇಳೆ ವಾಯು ವಿಹಾರಕ್ಕೆ ತೆರಳಿದ್ದ ಶಿಕ್ಷಕ ದಂಪತಿ ಫಣೀಂದ್ರನಾಧ್ ಹಾಗೂ ಇಂದ್ರಮ್ಮ ಅವರಿಗೆ ಕಾಂತರಾಜು ಕಂಡಿದ್ದು, ಕಣ್ಣುಗಳನ್ನು ಕಳೆದುಕೊಂಡಿರುವ ಅವರನ್ನು ಶಿಕ್ಷರು ವಿಚಾರಿಸಿದ್ದಾರೆ. ಈ ವೇಳೆ ತಾನು ಮೊದಲಿಗೆ ಒಂದು ಕಣ್ಣು ಕಳೆದುಕೊಂಡು ಹಮಾಲಿ ವೃತ್ತಿ ಮಾಡಿಕೊಂಡು ಜೀವನಸಾಗಿಸುತ್ತಿದ್ದೆ ಆದರೆ, ಬಳಿಕ ಆಕಸ್ಮಿಕವಾಗಿ ಮತ್ತೊಂದು ಕಣ್ಣನ್ನು ಕಳೆದುಕೊಂಡಿರುವುದಾಗಿ ಕಾಂತರಾಜು ತಿಳಿಸಿದ್ದಾರೆ. ಕಾರ್ಮಿಕನ ನೋವು ಕೇಳಿ ಫಣೀಂದ್ರನಾಧ್ ಅವರ ಹೃದಯ ಕರಗಿದ್ದು, ಅವರು ಕಾರ್ಮಿಕ ಕಾಂತರಾಜುನನ್ನು ಕರೆದು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ಕಣ್ಣು ತಜ್ಞ ಡಾ.ಗಂಗಾಧರ್ ಅವರಿಗೆ ತೋರಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ವೈದ್ಯರು, ಇನ್ನೊಂದು ತಿಂಗಳಲ್ಲಿ ದೃಷ್ಟಿ ಮರಳಿ ಬರುತ್ತದೆ ಎಂದ ಭರವಸೆ ನೀಡಿದ್ದಾರೆ. ಇನ್ನೂ ಸದ್ಯ…
ತುಮಕೂರು: ಸಿರಾ ತಾಲ್ಲೂಕು ಸಿರಾ ನಗರದ ಸಂತೆ ಪೇಟೆಯಲ್ಲಿರುವ ಬ್ರಹ್ಮಕುಮಾರಿ ವಿಶ್ವವಿದ್ಯಾನಿಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕುಮಾರಿ ಆಶಾ ಕೆಎಸ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಈಶ್ವರಿ ವಿಶ್ವವಿದ್ಯಾನಿಲಯದ ಆಧ್ಯಾತ್ಮಿಕ ಚಿಂತಕರಾದ ಪಿ.ಎಚ್.ಮಹೇಂದ್ರಪ್ಪ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಮಮತಾ ಎಂ., ರಾಮಕೃಷ್ಣ ಪಬ್ಲಿಕ್ ಸ್ಕೂಲ್ ಮತ್ತು ನರ್ಸಿಂಗ್ ಕಾಲೇಜಿನ ಡಾ.ರಾಮಕೃಷ್ಣ, ವಂಶವೃಕ್ಷ ಆಸ್ಪತ್ರೆಯ ಡಾ.ಮಾಲಿನಿ, ಪ್ರಸೂತಿ ತಜ್ಞರಾದ ಡಾ.ನಿರ್ಮಲ, ವಕೀಲರ ಸಂಘದ ಅಧ್ಯಕ್ಷ ಎಚ್.ಪಿ. ಧರಣೇಶ್ ಗೌಡ, ಉಪಾಧ್ಯಕ್ಷರಾದ ವೈ.ಟಿ.ರಾಮಚಂದ್ರಪ್ಪ, ಕಾರ್ಯದರ್ಶಿ ಕಂಬದೂರಪ್ಪ, ಖಜಾಂಚಿ ಗುರುಮೂರ್ತಿ, ತಾಲೂಕು ವೈದ್ಯಾಧಿಕಾರಿ ಡಾ.ಮೋಹನ್ ಸಿ.ಆರ್., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಯೋಜನಾಧಿಕಾರಿ ಸದಾಶಿವ, ಗೋಪಾಲಕೃಷ್ಣ, ರಾಜಯೋಗಿನಿ ಬಿ.ಕೆ. ಶಾಂತ, ಡಾ.ಕಲಾ, ಮಂಜುಳಾ ಅನ್ನಪೂರ್ಣ ಅಂಗನವಾಡಿ ಕಾರ್ಯಕರ್ತರು ರಾಮಕೃಷ್ಣ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉಕ್ರೇನ್ ನಿಂದ ಸಿರಾಕ್ಕೆ ಆಗಮಿಸಿದ ವೈದ್ಯಕೀಯ ವ್ಯಾಸಂಗದ ವಿದ್ಯಾರ್ಥಿ ಪ್ರಿಯಾಂಕ ಅವರನ್ನು ಸನ್ಮಾನಿಸಲಾಯಿತು ವರದಿ: ಎ.ಎನ್.ಪೀರ್, ತುಮಕೂರು ನಮ್ಮತುಮಕೂರು.ಕಾಂನ ಕ್ಷಣ…
ಪಾವಗಡ: ಹೆಲ್ಪ್ ಸೊಸೈಟಿ ವತಿಯಿಂದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ದಿನ್ನಪ್ಪನಬಾವಿ ತಾಂಡಾ ಮಕ್ಕಳಿಗೆ ಉಚಿತ ಬ್ಯಾಗ್ ಹಾಗೂ ಉಚಿತ ನೋಟ್ ಪುಸ್ತಕಗಳು ಹಾಗೂ ಅಂಗನವಾಡಿ ಕೇಂದ್ರಕ್ಕೆ ಟೇಬಲ್ ಹಾಗೂ ಅಂಗನವಾಡಿ ಮಕ್ಕಳಿಗೆ ಬ್ಯಾಗ್ ವಿತರಿಸಲಾಯಿತು. ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಕಲಿಕಾ ಸಾಮಗ್ರಿ ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಹೆಲ್ಪ್ ಸೊಸೈಟಿಯ ಪದಾಧಿಕಾರಿಗಳಾದ ವೆಂಕಟೇಶ್ ನಾಯ್ಕ, ಗೌತಮ್, ಸಾಯಿ ಕುಮಾರ್, ಶ್ರೀಕಾಂತ್, ನರೇಶ್ ಹಾಗೂ ಎಸ್ ಡಿಎಂಸಿ ಉಪಾಧ್ಯಕ್ಷರಾದ ಶಂಕರ್ ನಾಯ್ಕ, ಸಮಾಜಸೇವಕರಾದ ಪ್ರಕಾಶ್, ಮುಖ್ಯಶಿಕ್ಷಕ ಗಂಗಾಧರ್, ಸಹ ಶಿಕ್ಷಕ ಶಾರದಮ್ಮ, ಅಂಗನವಾಡಿ ಕಾರ್ಯಕರ್ತೆ ಭಾಗ್ಯಮ್ಮ ಉಪಸ್ಥಿತರಿದ್ದರು. ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಕೊರಟಗೆರೆ: ಪಟ್ಟಣದಲ್ಲಿ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಈ ಹಿಂದೆ ಇ -ಸೊತ್ತು ಆಂದೋಲನ ಕಾರ್ಯಕ್ರಮವನ್ನು ನಡೆಸಿದ್ದು, ಅದರಲ್ಲಿ ಮೂರನೇ ವಾರ್ಡಿನ 38 ಜನ ಸಾರ್ವಜನಿಕರು ತಮ್ಮ ಮನೆಯ ಇ-ಸ್ವತ್ತಿಗೆ ಅರ್ಜಿಯನ್ನು ಸಲ್ಲಿಸಿದ್ದರು ಅರ್ಜಿಗಳನ್ನು ಪರಿಶೀಲಿಸಿ ಇಂದು ಸಾರ್ವಜನಿಕರ ಮನೆ ಬಾಗಿಲಿಗೆ ಅಧ್ಯಕ್ಷರು ಸದಸ್ಯರು ಹಾಗೂ ಅಧಿಕಾರಿಗಳು ತೆರಳಿ ಸುತ್ತಿನ ಅಳತೆಗಳನ್ನು ಮಾಡಿ ಇ ಸೊತ್ತನ್ನು ಸಾರ್ವಜನಿಕರಿಗಿಡುತ್ತಿದ್ದಾರೆ. ಅಧ್ಯಕ್ಷರಾದ ಕಾವ್ಯಶ್ರೀ ರಮೇಶ್ ಮಾತನಾಡಿ, ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗಮನ ಹರಿಸಲಾಗಿದೆ ಮುಂದಿನ ದಿನಗಳಲ್ಲಿ ಎಲ್ಲ ವಾರ್ಡ್ ಗಳಲ್ಲೂ ಕೂಡ ಈ ಕಾರ್ಯಕ್ರಮವನ್ನು ಆಯೋಜಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವುದು ನಮ್ಮ ಧ್ಯೇಯ ಎಂದು ತಿಳಿಸಿದರು . 13ನೇ ವಾರ್ಡಿನ ಸದಸ್ಯ ಒಬಳರಾಜು ಮಾತನಾಡಿ, ಕ್ಷೇತ್ರದ ಶಾಸಕರಾದ ಡಾ.ಜಿ.ಪರಮೇಶ್ವರ್ ಅವರ ಆಶಯದಂತೆ ತಾಲೂಕಿನ ಜನತೆಯು ಯಾವ ಕಚೇರಿಗೂ ಅಲೆದಾಡಬಾರದು ಅವರ ಕುಂದುಕೊರತೆಗಳನ್ನು ಆಯಾ ವಾರ್ಡಿನ ಸದಸ್ಯರೇ ಖುದ್ದಾಗಿ ಪರಿಶೀಲಿಸಿ ಸಮಸ್ಯೆಗೆ ಪರಿಹಾರ ಒದಗಿಸಿಕೊಡಬೇಕು ಎಂದು…
ತಿಪಟೂರು: ತಾಲೂಕಿನ ಗುರುಗದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಲೂರಿನಲ್ಲಿ ಗ್ರಾಮದಲ್ಲಿ ಕುಡಿಯುವ ನೀರಿಲ್ಲದೆ 8 ಮನೆಗಳ ಗೃಹಿಣಿಯರು ಪರದಾಡುತ್ತಿದ್ದಾರೆ. ಗೌಡನಕಟ್ಟೆ ವಾಟರ್ ಮ್ಯಾನ್ ವಿಶ್ವನಾಥ್ ತಮಗೆ ಬೇಕಾದ ಮಿನಿ ವಾಟರ್ ಟ್ಯಾಂಕ್ ಗಳಿಗೆ ನೀರು ತುಂಬಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಗ್ರಾಮದ ಸುನಂದಾ ಎಂಬ ಮಹಿಳೆ ಮಾತನಾಡಿ ನಮಗೆ ಕುಡಿಯಲು ನೀರು ಸರಿಯಾಗಿ ಸಿಗದೆ ಎಂಟು ವರ್ಷಗಳೇ ಕಳೆದಿದೆ ಕುಡಿಯುವ ನೀರಿಗಾಗಿ ನಾವು ಸುಮಾರು 150 ಮೀಟರ್ ದೂರದ ಮಿನಿ ವಾಟರ್ ಟ್ಯಾಂಕು ಗಳಿಗೆ ಹೋಗಿ ನೀರನ್ನು ತರುವಂತಹ ಘಟನೆ ಗ್ರಾಮದ ವೃದ್ಧರಿಗೆ ಮತ್ತು ಮಹಿಳೆಯರಿಗೆ ಘಟನೆ ಎದುರಾಗಿದೆ ಎಂದರು. 8 ಮನೆಗಳಿಗೆ ನೀಡಿದಂತಹ ಮಿನಿ ವಾಟರ್ ಟ್ಯಾಂಕ್ ಸ್ವಚ್ಛತೆ ಕೂಡ ಆಗಿರುವುದಿಲ್ಲ ಸುತ್ತಮುತ್ತ ಗಿಡಗಂಟೆಗಳು ಬೆಳೆದು ಪಾಳುಬಿದ್ದಿರುವ ಸ್ಥಿತಿಯಲ್ಲಿ ವಾಟರ್ ಟ್ಯಾಂಕ್ ಇದೆ. ಇದೆ ವಿಚಾರವೇ ಸುಮಾರು ಹತ್ತಾರು ಬಾರಿ ಗ್ರಾಮ ಪಂಚಾಯಿತಿ ಪಿಡಿಓ ಮತ್ತು ಅಧ್ಯಕ್ಷರು ಮತ್ತು ಸದಸ್ಯರ ಗಮನಕ್ಕೆ ತಂದರು ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಅದಲ್ಲದೆ…
ತುಮಕೂರು: ವಿದ್ಯಾರ್ಥಿಯೊಬ್ಬ ಬಸ್ ಹತ್ತುವ ವೇಳೆ ಅಚಾನಕ್ಕಾಗಿ ಬಸ್ಸಿನ ಗಾಜಿಗೆ ಕೈಹಾಕಿದ ಪರಿಣಾಮ ಬಸ್ಸಿನ ಗಾಜು ಆಕಸ್ಮಿಕವಾಗಿ ಒಡೆದಿದ್ದು, ಈ ವೇಳೆ ಕೆಎಸ್ಸಾರ್ಟಿಸಿ ಸಿಬ್ಬಂದಿ ವಿದ್ಯಾರ್ಥಿಯ ಕೊರಳಪಟ್ಟಿ ಹಿಡಿದು ಎಳೆದಾಡಿದ ಘಟನೆ ವರದಿಯಾಗಿದೆ. ಸೋಮವಾರ ಸಂಜೆ ಐದು ಮೂವತ್ತರ ಸಮಯದಲ್ಲಿ ತುಮಕೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಯೊಬ್ಬ ಊರಿಗೆ ತೆರಳಲು ಸೀಟಿಗೆ ಬ್ಯಾಗನ್ನು ಹಾಕುವ ವೇಳೆ ಅಚಾನಕ್ಕಾಗಿ ಬಸ್ಸಿನ ಗಾಜಿಗೆ ಕೈ ತಾಗಿದ್ದು, ಈ ವೇಳೆ ಬಸ್ಸಿನ ಗಾಜು ಹೊಡೆದಿದೆ ಎನ್ನಲಾಗಿದೆ. ಇದನ್ನು ಗಮನಿಸಿದ ಕೆಎಸ್ಸಾರ್ಟಿಸಿ ಸಿಬ್ಬಂದಿ, ವಿದ್ಯಾರ್ಥಿಯನ್ನು ಕಳ್ಳನಂತೆ ಹಿಡಿದು ಎಳೆದಾಡಿದ ಘಟನೆ ನಡೆದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಎಡೆಮಾಡಿದೆ. ವಿದ್ಯಾರ್ಥಿಯ ಮೇಲೆ ಹಲ್ಲೆ ಮಾಡಲು ಮುಂದಾದ ಕೆಎಸ್ಸಾರ್ಟಿಸಿ ಸಿಬ್ಬಂದಿಗಳ ಕಾರ್ಯವೈಖರಿಗೆ ವಿದ್ಯಾರ್ಥಿ ಹಾಗೂ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಇನ್ನು ಹಳ್ಳಿ ಗಾಡಿಗೆ ತೆರಳುವ ವಿದ್ಯಾರ್ಥಿಗಳು ಕೆಎಸ್ಸಾರ್ಟಿಸಿ ಬಸ್ ಅನ್ನು ಅವಲಂಬಿಸಿದ್ದಾರೆ. ಆದರೆ, ಬೆಳಗ್ಗೆ ಹಾಗೂ ಸಂಜೆ ವೇಳೆಯಲ್ಲಿ ಬಸ್ ನಿಲ್ದಾಣ…
ವಿಜಯವಾಡ: ಕೃಷ್ಣಾ ಜಿಲ್ಲೆಯಲ್ಲಿ ಹುಚ್ಚು ಬೆಕ್ಕು (Cat) ಕಚ್ಚಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಎರಡು ತಿಂಗಳ ಹಿಂದೆ ಬೆಕ್ಕಿನಿಂದ ಕಚ್ಚಿಸಿಕೊಂಡಿದ್ದ ಮಹಿಳೆಯರು ಶನಿವಾರ ಸಾವನ್ನಪ್ಪಿದ್ದಾರೆ.ರೇಬಿಸ್ನಿಂದಾಗಿ (rabies) ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ವೈದ್ಯರು ಹೇಳಿದ್ದಾರೆ. ಬೆಕ್ಕುಗಳು ತಮ್ಮಲ್ಲಿ ರೇಬೀಸ್ ಸೂಕ್ಷ್ಮಾಣುಗಳನ್ನು ಹೊಂದಿರುತ್ತವೆ. ಬೆಕ್ಕು ಕಡಿತದಿಂದ ಜನರು ರೇಬೀಸ್ನಿಂದ ಸಾಯುವುದು ಅಪರೂಪ. ಮಾನವರಲ್ಲಿ ರೇಬೀಸ್ಗೆ ಸಾಮಾನ್ಯ ಕಾರಣವೆಂದರೆ ಹುಚ್ಚು ನಾಯಿಗಳ ಕಡಿತ. ಮೃತರನ್ನು ಆರ್ಟಿಸಿ ಬಸ್ ಕಂಡಕ್ಟರ್ ಸಾಲಿ ಭಾಗ್ಯರಾವ್ ಅವರ ಪತ್ನಿ ಕಮಲಾ (64) ಮತ್ತು ಗ್ರಾಮೀಣ ವೈದ್ಯಾಧಿಕಾರಿ ಬೊಡ್ಡು ಬಾಬು ರಾವ್ ಅವರ ಪತ್ನಿ ನಾಗಮಣಿ (43) ಎಂದು ಪೊಲೀಸರು ಗುರುತಿಸಿದ್ದಾರೆ. ಇವರು ಕೃಷ್ಣಾ ಜಿಲ್ಲೆಯ ವೇಮುಲಮಾಡ ಕಾಲೋನಿಯ ನಿವಾಸಿಗಲಾಗಿದ್ದರು. ಬೆಕ್ಕಿನ ಕಡಿತದ (Cat Bite) ನಂತರ, ಅವರು ಆಸ್ಪತ್ರೆಗೆ ಹೋದರು, ಅಲ್ಲಿ ವೈದ್ಯರು ಆಂಟಿ ಟೆಟನಸ್ ಶಾಟ್ ನೀಡಿದರು. ಆದರೆ ಬೆಕ್ಕಿಗೆ ಹುಚ್ಚು ಹಿಡಿದಿದೆ ಎಂದು ವೈದ್ಯರು ನಿರೀಕ್ಷಿಸಿರಲಿಲ್ಲ. ಬಳಿಕ ನಾಲ್ಕು ದಿನಗಳ ಹಿಂದೆ ಕಮಲಾ ಮತ್ತು ನಾಗಮಣಿ…
ಬೆಂಗಳೂರು: ತಮಿಳುನಾಡಿನಲ್ಲಿ ಪ್ರಿಯಕರನೊಂದಿಗೆ ಮಂತ್ರಿ ಮಗಳು(TamilNadu Minister Daughter) ಎಸ್ಕೇಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತನ್ನ ಪ್ರಿಯಕರನೊಂದಿಗೆ ಎಸ್ಕೇಪ್ ಆಗಿದ್ದ ತಮಿಳುನಾಡು ಮುಜರಾಯಿ ಇಲಾಖೆ ಸಚಿವ ಶೇಖರ್ ಬಾಬು ಪುತ್ರಿ ಕರ್ನಾಕಟಕಕ್ಕೆ ಬಂದು ಮದುವೆಯಾಗಿದ್ದಾರೆ. ಪ್ರಿಯಕರ ಸತೀಶ್ ಕುಮಾರ್ ಜೊತೆಗೆ ಎಸ್ಕೇಪ್ ಆಗಿದ್ದ ಶೇಖರ್ ಬಾಬು ಮಗಳು ಜಯಕಲ್ಯಾಣಿ(Jayakalyani) ಕರ್ನಾಟಕದಲ್ಲಿ ಮದುವೆಯಾಗಿದ್ದು, ತಮಗೆ ಭದ್ರತೆ ನೀಡುವಂತೆ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ಇರುವ ಈ ಜೋಡಿಗೆ ಜೀವಬೆದರಿಕೆ ಇದೆಯಂತೆ. ಹೀಗಾಗಿ ಕಮಿಷನರ್ ಕಚೇರಿಗೆ ತೆರಳಿದ ಜೋಡಿ ತಮಗೆ ಜೀವ ಬೆದರಿಕೆ ಇದೆ, ರಕ್ಷಣೆ ನೀಡಿ ಎಂದು ಕೋರಿಕೊಂಡಿದೆ. ಹಡಗಲಿ ತಾಲೂಕಿನ ಹಾಲಸ್ವಾಮಿ ಮಠದಲ್ಲಿ ಈ ಜೋಡಿಗೆ ಮದುವೆ ಮಾಡಿಸಲಾಗಿದೆ ಎಂದು ತಿಳಿದುಬಂದಿದೆ. ತಮಿಳುನಾಡು ಪೊಲೀಸರ(Tamil Nadu Police) ಮೇಲೆ ತಮಗೆ ನಂಬಿಕೆ ಇಲ್ಲವೆಂದು ಕರ್ನಾಟಕ ಪೊಲೀಸರ ಮೊರೆ ಹೋಗಿರುವುದಾಗಿ ಜೋಡಿ ತಿಳಿಸಿದೆ. ತಮಿಳುನಾಡಿಗೆ ಹೋದರೆ ನಮ್ಮನ್ನು ಕೊಲೆ ಮಾಡುತ್ತಾರೆಂದು ಯುವತಿ ಹೇಳಿಕೊಂಡಿದ್ದಾಳೆ. ತಾನು ಯೂಟ್ಯೂಬ್ ನಲ್ಲಿ ಕನ್ನಡ ಸಂಘಟನೆ…
ಮಧುಗಿರಿ: ಬಿಸಿಯೂಟ ತಿಂದ ವಿದ್ಯಾರ್ಥಿಗಳಿಗೆ ಹೊಟ್ಟೆನೋವು ಕಾಣಿಸಿಕೊಂಡು ವಾಂತಿಯಾಗಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲ್ಲೂಕಿನ ಹೊನ್ನಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮಧ್ಯಾಹ್ನದ ಊಟದ ಸಮಯದಲ್ಲಿ ತಟ್ಟೆಯಲ್ಲಿದ್ದ ಸಾರಿನಲ್ಲಿ ಹುಳಗಳು ಕಂಡುಬಂದಿದೆ. ಇದನ್ನು ವಿದ್ಯಾರ್ಥಿಗಳು ಶಿಕ್ಷಕರಿಗೆ ತೋರಿಸಿದ್ದಾರೆ. ಇದೇ ಸಂದರ್ಭದಲ್ಲಿ ಊಟ ಮಾಡಿದ್ದವರಿಗೆ ಹೊಟ್ಟೆನೋವು, ವಾಂತಿಯಾಗಿದೆ. ತಕ್ಷಣವೇ ನೆರಳೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ವೈದ್ಯರು ಬಂದು ಚಿಕಿತ್ಸೆ ನೀಡಿದ್ದಾರೆ. ಆಂಬ್ಯುಲೆನ್ಸ್ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಸುಮಾರು ಹದಿನೈದು ವಿದ್ಯಾರ್ಥಿಗಳನ್ನು ದಾಖಲು ಮಾಡಲಾಗಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಲವಲವಿಕೆಯಿಂದ ಇದ್ದರು. ಸ್ಥಳಕ್ಕೆ ಡಿಡಿಪಿಐ ಎಂ.ರೇವಣಸಿದ್ದಪ್ಪ, ಬಿಇಒ, ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ವಿ.ಹೆಚ್.ವೆಂಕಟೇಶಯ್ಯ, ಶಿಕ್ಷಣ ಇಲಾಖೆಯ ಅಧಿಕಾರಿಗಳು,ಶಾಲೆಯ ಶಿಕ್ಷಕರು ಮತ್ತು ಪೋಷಕರು ಇದ್ದರು. ವರದಿ: ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ಹುಬ್ಬಳ್ಳಿ: ಹುಬ್ಬಳ್ಳಿಯ KHB ಕಾಲೋನಿಯಲ್ಲಿ ಶ್ರೀಗಂಧದ ಮರ(Sandalwood Trees)ವನ್ನು ಕಡಿದು ಕದ್ದೊಯ್ಯಲಾಗಿದೆ. ರಾತ್ರಿ ವೇಳೆ ಯಾರೂ ಇಲ್ಲದ ಸಮಯವನ್ನು ಗಮನಿಸಿದ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ಬೆಳೆದು ನಿಂತಿದ್ದ ಗಂಧದ ಮರವನ್ನು ಮಂಗಮಾಯ ಮಾಡಿದ್ದಾರೆ. ಶಿವಶಂಕರ್ ಐಹೊಳೆ ಎಂಬುವರ ಮನೆ ಆವರಣದಲ್ಲಿ ಬೆಳೆದು ನಿಂತಿದ್ದ ಲಕ್ಷಾಂತರ ರೂ. ಮೌಲ್ಯದ ಶ್ರೀಗಂಧದ ಮರ(Sandalwood Theft)ಕ್ಕೆ ಖತರ್ನಾಕ್ ಖದೀಮರು ಕೊಡಲಿಪೆಟ್ಟು ಹಾಕಿದ್ದಾರೆ. ಕಡಿದ ಶ್ರೀಗಂಧದ ಮರವನ್ನು ಕಡಿದು ಕಳ್ಳರು ಸಾಗಿಸುತ್ತಿರುವ ದೃಶ್ಯವು ಸಮೀಪದ ಸಿಸಿಟಿವಿ ಕ್ಯಾಮೆರಾ(CCTV Footage)ದಲ್ಲಿ ಸೆರೆಯಾಗಿದೆ. ಬುಡಸಮೇತ ಗಂಧದ ಮರವನ್ನು ಕಡಿದಿರುವ ಕಳ್ಳರು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಘಟನೆ ಕುರಿತು ಹುಬ್ಬಳ್ಳಿ ಕಸಬಾ ಠಾಣೆ (Hubli Kasaba Police Station)ಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಈ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸುತ್ತಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಶ್ರೀಗಂಧದ ಮರ ಕಳ್ಳತನ(Sandalwood Trees Stolen)ಮಾಡಿರುವ ಕಳ್ಳರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ಕೊಡಿಸಬೇಕೆಂದು ಮನೆ ಮಾಲೀಕ ಶಿವಶಂಕರ್ ಐಹೊಳೆ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾರೆ. ಅನೇಕ ವರ್ಷಗಳಿಂದ…