Subscribe to Updates
Get the latest creative news from FooBar about art, design and business.
- ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ
- ಬೀದರ್: ಆನ್ ಲೈನ್ ಗೇಮ್ ಚಟಕ್ಕೆ ಬಲಿಯಾದ ಎಂಬಿಬಿಎಸ್ ವಿದ್ಯಾರ್ಥಿ
- 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ: ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿ ಪ್ರಕಟ: ಸಚಿವ ಮಧು ಬಂಗಾರಪ್ಪ
- ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸುತ್ತಾರೆ: ಸದನದಲ್ಲಿ ಸಚಿವ ಜಮೀರ್ ಅಹ್ಮದ್ ಘೋಷಣೆ
- ಒಳಮೀಸಲಾತಿ: “ನಾಗಮೋಹನ್ ದಾಸ್ ಆಯೋಗದ ವರದಿ ಅವೈಜ್ಞಾನಿಕ”: ಮಾ.25ರಂದು ಬೃಹತ್ ಪ್ರತಿಭಟನೆ
- ನಾಲ್ಕು ಹೆಣ್ಣುಮಕ್ಕಳ ತಾಯಿಗೆ ಸ್ವಯಂ ಉದ್ಯೋಗ: ರೆಸ್ಪಾನ್ಸಿವ್ ಕೇರ್ ಫೌಂಡೇಶನ್ ಕಾರ್ಯಕ್ಕೆ ಇಕ್ಬಾಲ್ ಅಹಮದ್ ಸಾಥ್
- ಬಡವರ ಮನೆ ಬೆಳಗಲು ಶಾಲೆ ಉಳಿಸಿ, ಭಗತ್ ಸಿಂಗ್ ಕನಸು ಕಂಡ ಭಾರತ ಕಟ್ಟಲು ಮುಂಬನ್ನಿ! : ಲಕ್ಕಪ್ಪ
- ಗುಬ್ಬಿ: ಆಟೊ ಗ್ಯಾಸ್ ದರ ಏರಿಕೆ ವಿರುದ್ಧ ಚಾಲಕರ ಆಕ್ರೋಶ; ಬಂಕ್ ಮುಂದೆ ಪ್ರತಿಭಟನೆ
Author: admin
ಬಳ್ಳಾರಿ: ಲಾರಿಯ ಚಕ್ರಕ್ಕೆ ಸಿಲುಕಿದ ವೃದ್ಧೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ನಡೆದಿದ್ದು, ಬಳ್ಳಾರಿಯ ಜಿಂದಾಲ್ ಕಾರ್ಖಾನೆ ಎದುರು ಈ ಘಟನೆ ನಡೆದಿದೆ. ಕಾರ್ಖಾನೆ ಎದುರು ನಡೆದು ಹೋಗುತ್ತಿದ್ದ ವೃದ್ಧೆಯ ಮೇಲೆ ಲಾರಿಯೊಂದು ಹರಿದಿದೆ. ಲಾರಿಯಡಿಗೆ ಸಿಲುಕಿದ ವೃದ್ಧೆಯ ದೇಹ ಛಿದ್ರಛಿದ್ರವಾಗಿದೆ. ವೃದ್ಧೆಯ ಮೇಲೆ ಲಾರಿ ಹತ್ತಿದರೂ ಲಾರಿ ಚಾಲಕ ಲಾರಿ ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎದೆ ಝಲ್ ಎನಿಸುವಂತಿದೆ. ಜಿಂದಾಲ್ ಕಾರ್ಖಾನೆ ಓಲ್ಡ್ ಗೇಟ್ ಬಳಿ ಈ ಅಪಘಾತ ಸಂಭವಿಸಿದ್ದು, ತೋರಣಗಲ್ ಪೊಲೀಸರು ಲಾರಿ ಚಾಲಕನ್ನು ವಶಕ್ಕೆ ಪಡೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಹುಳಿಯಾರು ರಸ್ತೆಯ ಅಗಲಿಕರಣದ ಕಾಮಗಾರಿ ನಡೆಸುತ್ತಿದ್ದು, ಕಾಮಗಾರಿಗಾಗಿ ಇಲ್ಲಿ ವಾಸವಿದ್ದ ನಾಗರಿಕರ ಮನೆಗಳನ್ನು ಧ್ವಂಸ ಮಾಡಲಾಗಿದ್ದು, ಆದರೆ ಯಾವುದೇ ಪರಿಹಾರ ನೀಡದೇ, ಮೂಲಭೂತ ಸೌಕರ್ಯವನ್ನೂ ಕಲ್ಪಿಸದ ಹಿನ್ನೆಲೆಯಲ್ಲಿ ಜನರು ಬೀದಿಪಾಲಾಗಿದ್ದಾರೆ. ನಮ್ಮ ಮನೆಗಳನ್ನು ಧ್ವಂಸ ಮಾಡಲಾಗಿದೆ. ಆದರೆ, ನಮಗೆ ಯಾವುದೇ ಪರಿಹಾರ ನೀಡಲಾಗಿಲ್ಲ. ದಿನನಿತ್ಯ ಕೂಲಿಯನ್ನು ನಂಬಿಕೊಂಡು ಜೀವನ ಮಾಡುತ್ತಿದ್ದೇವೆ. ಆದರೆ ಇದೀಗ ಇರುವ ಮನೆಯನ್ನೂ ಕಳೆದುಕೊಂಡು ಬೀದಿ ಪಾಲಾಗಿದ್ದೇವೆ ಎಂದು ನಮ್ಮತುಮಕೂರು ಜೊತೆಗೆ ನಾಗರಿಕರು ಅಳಲು ತೋಡಿಕೊಂಡಿದ್ದಾರೆ. ಸರ್ಕಾರದ ಆದೇಶದಂತೆ ಅಳತೆ ಮಾಡದೇ, ಸಂಬಂಧಪಟ್ಟ ಅಧಿಕಾರಿಗಳು ತಮಗೆ ತೋಚಿದಂತೆ ಅಳತೆ ಮಾಡುವ ಮೂಲಕ ಜನರಿಗೆ ಮೋಸ ಮಾಡಿದ್ದಾರೆ. ವಾರ್ಡ್ ನಂ 28ರಲ್ಲಿನ ವಾರ್ಡ್ ನಗರಸಭೆ ಸದಸ್ಯರು ಸಹ ಇತ್ತ ಕಡೆ ಗಮನಹರಿಸುವುದಿಲ್ಲ ಹಾಗೂ ನಮಗೆ ವಾರ್ಡ್ ನಗರಸಭೆ ಸದಸ್ಯರು ಯಾರು ಅನ್ನೋದು ಸಹ ನಮಗೆ ಗೊತ್ತಿಲ್ಲ ಎಂದು ಜನರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ಸರ್ಕಾರಿ ಶಾಲೆಯೂ ಇದ್ದು, ಶಾಲೆಯ ಮುಂಭಾಗವನ್ನು…
ಮುಂಬೈ: ಯಾರಾದರೂ ಒಬ್ಬರ ಅದೃಷ್ಟವನ್ನು ಒಬ್ಬ ವೈಯಕ್ತಿಕ ಸಾಧನೆ ಎಂದು ತಪ್ಪಾಗಿ ಅರ್ಥೈಸಿಕೊಂಡಾಗ, ಅವನ ಅವನತಿಯ ಕಡೆಗೆ ಪ್ರಯಾಣ ಪ್ರಾರಂಭವಾಗುತ್ತದೆ ಎಂದು ಟ್ವೀಟ್ ಮಾಡುವ ಮೂಲಕ ಉದ್ಧವ್ ಠಾಕ್ರೆ ಸಹೋದರ ಸಂಬಂಧಿ ರಾಜ್ ಠಾಕ್ರೆ ಕಾಲೆಳೆದಿದ್ದಾರೆ. ರಾಜ್ ಠಾಕ್ರೆ ಅವರು ಶಿವಸೇನೆ ವಿರುದ್ಧ ಬಂಡಾಯವೆದ್ದು , ಸುಮಾರು ಎರಡು ದಶಕಗಳ ಹಿಂದೆ ತಮ್ಮದೇ ಮಹಾರಾಷ್ಟ್ರ ನವನಿರ್ಮಾಣ ಸೇನೆಯನ್ನು ಸ್ಥಾಪಿಸಿದರು. ಇದೀಗ ತಮ್ಮ ಕಣ್ಣಮುಂದೆ ಉದ್ದವ್ ಠಾಕ್ರೆ ನೇತೃತ್ವದ ಸರ್ಕಾರ ತನ್ನದೇ ಶಾಸಕರ ಬಂಡಾಯದಿಂದ ಪತನವಾಗಿರುವುದಕ್ಕೆ ಸಂಭ್ರಮಿಸಿರುವ ಅವರು, ಉದ್ದವ್ ಠಾಕ್ರೆಯನ್ನು ಕೆಣಕಿದ್ದಾರೆ. ರಾಜ್ ಠಾಕ್ರೆಯವರ ತಂದೆ ಶ್ರೀಕಾಂತ್ ಠಾಕ್ರೆ, ಉದ್ಧವ್ ಠಾಕ್ರೆಯವರ ತಂದೆ ಶಿವಸೇನಾ ಸಂಸ್ಥಾಪಕ ಬಾಳ್ ಠಾಕ್ರೆಯವರ ಕಿರಿಯ ಸಹೋದರ. ಕಿಡಿ ಭಾಷಣಗಳು ಮತ್ತು ಆಕ್ರಮಣಕಾರಿ ವಾಕ್ಚಾತುರ್ಯಕ್ಕೆ ಹೆಸರುವಾಸಿಯಾದ ರಾಜ್ ಠಾಕ್ರೆ ಸೌಮ್ಯ ಸ್ವಭಾವದ ಉದ್ಧವ್ ಠಾಕ್ರೆಗೆ ವಿರುದ್ಧವಾಗಿ ನಿಂತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಸರಗೂರು: ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿ ಪಟ್ಟಣ ಪಂಚಾಯಿತಿ ಸದಸ್ಯರು ಸಭೆಯಿಂದ ಹೊರ ಹೋಗಿದ್ದಾರೆ. ಸರಗೂರು ತಾಲೂಕಿನ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಪ.ಪಂ ಅಧ್ಯಕ್ಷೆ ರಾಧಿಕಾ ಶ್ರೀನಾಥ್ ಹಾಗೂ ಮುಖ್ಯಾಧಿಕಾರಿ ಸತೀಶ್ ಅವರ ನೇತೃತ್ವದಲ್ಲಿ ಸಾಮಾನ್ಯ ಸಭೆಯನ್ನು ಆಯೋಜಿಸಲಾಗಿದ್ದು, 8 ಮಂದಿ ಸದಸ್ಯರು ಸಭೆಯನ್ನು ಬಹಿಷ್ಕರಿಸಿದ್ದಾರೆ. ಸ್ಥಾಯಿ ಸಮಿತಿ ಸಭೆಯ ಅಜೆಂಡದಲ್ಲಿ ಸದಸ್ಯರುಗಳ ವಾರ್ಡಿನ ಸಮಸ್ಯೆಗಳು, ಕಾಮಗಾರಿಯ ವಿಳಂಬ, ಪಟ್ಟಣದ ಅಭಿವೃದ್ಧಿಯ ವಿಚಾರಗಳು ಹಾಗೂ ಮುಖ್ಯವಾಗಿ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷರ ನೇಮಕದ ಕುರಿತ ವಿಷಯಗಳು ಇಲ್ಲದಿರುವ ಕಾರಣ ಪಟ್ಟಣ ಪಂಚಾಯಿತಿಯ 08 ಮಂದಿ ಸದಸ್ಯರು ಸಭೆಯನ್ನು ತಿರಸ್ಕರಿಸಿ ಹೊರ ನಡೆದಿದ್ದಾರೆ. ಕೇವಲ ಸ್ಥಾಯಿ ಸಮಿತಿ ಸಭೆಯ ಅಜೆಂಡಾದಲ್ಲಿ ಪ.ಪಂ ನಡೆಯುವ ಕಾರ್ಯಕ್ರಮಗಳ ವೆಚ್ಚವನ್ನೇ ಮಾತ್ರ ನಮೂದಿಸಿರುವ ಕಾರಣ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳ ಸದಸ್ಯರುಗಳು ಮುಖ್ಯಾಧಿಕಾರಿ ಹಾಗೂ ಪ.ಪಂ ಅಧ್ಯಕ್ಷೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಳಿಗ್ಗೆ 10:30 ಗಂಟೆಗೆ ಪ್ರಾರಂಭವಾಗಬೇಕಿದ್ದ ಸಭೆಯು ಮಧ್ಯಾಹ್ನ 02 ಗಂಟೆಯಾದರೂ ಸದಸ್ಯರುಗಳು ಸಭೆಗೆ ಹಾಜರಾಗದ ಕಾರಣ…
ಬೆಂಗಳೂರು: ರಾಜಸ್ಥಾನದಲ್ಲಿ ನಡೆದ ಕನ್ಹಯ್ಯ ಲಾಲ್ ಹತ್ಯೆ ಪ್ರಕರಣವನ್ನು ಕೇಂದ್ರ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ, ಇಲ್ಲದಿದ್ದರೆ ಇದು ದೊಡ್ಡ ಅನಾಹುತಕ್ಕೆ ಕಾರಣವಾಗುತ್ತದೆ. ಮುಸ್ಲಿಂ ಸಂಘಟನೆ, ಓವೈಸಿ ಸಂಘಟನೆಯವರು ಘಟನೆ ಬಗ್ಗೆ ಏಕೆ ತುಟಿ ಬಿಚ್ಚುತ್ತಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಪ್ರಶ್ನಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ಅವರು, ಈ ಘಟನೆ ವಿರುದ್ಧ ಮುಸ್ಲಿಂ ಸಂಘಟನೆಗಳು ಹೊರಬಂದು ಮಾತನಾಡಬೇಕು. ಮುಸ್ಲಿಂ ನಾಯಕರು ಯಾಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು. ಬಟ್ಟೆ ಹೊಲಿಯಲು ಕೊಡುತ್ತೀನಿ ಎಂದು ಚಾಕು ಹಾಕಿದ್ದಾರೆ. ಇವರಿಗೆ ದಮ್ ಇಲ್ಲ, ಇದನ್ನೆಲ್ಲ ಹೇಡಿಗಳು ಮಾಡುವ ಕೆಲಸ ಎಂದು ಆರ್.ಅಶೋಕ್ ಆಕ್ರೋಶ ಹೊರ ಹಾಕಿದರು. ಭಯೋತ್ಪಾದನೆಯ ಮುಸ್ಲಿಂ ಸಂಘಟನೆ ಅವರು ಹೀಗೆ ಮಾಡುತ್ತಾರೆ. ಈ ಹಿಂದೆ ಸಾಕಷ್ಟು ಸಂಘಟನೆಗಳನ್ನ ಬ್ಯಾನ್ ಮಾಡಿದ್ದೇವೆ, ಬ್ಯಾನ್ ಮಾಡಿದರೆ ಇನ್ನೊಂದು ಹೆಸರಲ್ಲಿ ಬರ್ತಾ ಇದ್ದಾರೆ. ರಾಜಸ್ಥಾನ ಸರ್ಕಾರ ಈ ವಿಚಾರದಲ್ಲಿ ತಪ್ಪು ಮಾಡಿದ್ದರೆ ಸರ್ಕಾರ ಉಳಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ…
ನವದೆಹಲಿ: ವಿಮಾನ ಪ್ರಯಾಣದ ಸಮಯದಲ್ಲಿ ಮಹಿಳೆಯೊಬ್ಬರ ವರ್ತನೆಯಿಂದ ಸಹ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಪಾಲ್ ಸ್ಟೋಥಾರ್ಡ್ ಎಂಬ ವ್ಯಕ್ತಿ ಎಮಿರೇಟ್ಸ್ ನಲ್ಲಿ ಪ್ರಯಾಣ ಮಾಡುತ್ತಿದ್ದಾಗ ಅವರ ಪಕ್ಕದ ಸೀಟ್ ನಲ್ಲಿ ಕೂತಿದ್ದ ಮಹಿಳೆಯು ತನ್ನ ಮುಂಭಾಗದ ಸೀಟಿನ ಮೇಲೆ ತನ್ನ ಪಾದಗಳನ್ನು ಹಾಕಿ ವಿಶ್ರಮಿಸುತ್ತಿರುವುದನ್ನು ಗಮನಿಸಿ ಫೋಟೋ ಕ್ಲಿಕ್ಕಿಸಿದ್ದು, ತಮ್ಮ ಅಸಮಾಧಾನವನ್ನು ಟ್ವೀಟ್ ಮಾಡಿದ್ದಾರೆ. ನನ್ನ ವಿಮಾನದಲ್ಲಿ ನನ್ನ ಪಕ್ಕದಲ್ಲಿರುವ ವ್ಯಕ್ತಿ ಎಂಬ ಶೀರ್ಷಿಕೆಯೊಂದಿಗೆ ಅವರು ಮಹಿಳೆಯ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಮಹಿಳಾ ಪ್ರಯಾಣಿಕರು ಒಂದು ಜೊತೆ ಭಾರವಾದ ಬೂಟುಗಳನ್ನು ಧರಿಸಿ, ತನ್ನ ಪಾದಗಳನ್ನು ತನ್ನ ಮುಂಭಾಗದ ಸೀಟಿನ ಹೆಡ್ ರೆಸ್ಸ್ ನಲ್ಲಿ ವಿಶ್ರಾಂತಿ ಮಾಡುವುದು ಚಿತ್ರದಲ್ಲಿದೆ. ಈ ಚಿತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಹಿಳೆಯ ವರ್ತನೆ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಮುಂಬೈ: ಶಿವಸೇನಾ ನಾಯಕ ಏಕನಾಥ ಶಿಂಧೆ ಅವರು ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಗುರುವಾರ ಸಂಜೆ 7.30ಕ್ಕೆ ಶಿಂಧೆ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಶಿಂಧೆ ಅವರು ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯವೆದ್ದು ತಮ್ಮದೇ ಗುಂಪು ರಚಿಸಿಕೊಂಡಿದ್ದರು. ತಮ್ಮದೇ ನಿಜವಾದ ಶಿವಸೇನಾ ಎಂದು ಘೋಷಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಮರೇನಾಯಕನಹಳ್ಳಿ ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ಆಯುಷ್ ಇಲಾಖೆ, ಬೆಂಗಳೂರು ಜಿಲ್ಲಾ ಪಂಚಾಯಿತಿ, ತುಮಕೂರು ಮತ್ತು ಜಿಲ್ಲಾ ಆಯುಷ್ ಕಚೇರಿ ಇವರ ವತಿಯಿಂದ ನುರಿತ ವೈದ್ಯರ ತಂಡದಿಂದ ಉಚಿತ ಆಯುಷ್ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ ಆರೋಗ್ಯ ಸಮಸ್ಯೆಗಳಾದ ರಕ್ತದೊತ್ತಡ, ಮಧುಮೇಹ, ಅಸ್ತಮಾ, ಕಿಡ್ನಿ ಸಮಸ್ಯೆ, ಥೈರಾಯ್ಡ್, ಶ್ವಾಸ ಸಂಬಂಧಿ ಹಾಗೂ ಹೃದಯ ಸಂಬಂಧಿ ಸಮಸ್ಯೆ ಇನ್ನು ಮುಂತಾದ ಕಾಯಿಲೆಗಳಿಗೆ ಉಚಿತವಾಗಿ ಔಷಧಿ ವಿತರಣೆ ಮಾಡಿ ಸೂಕ್ತ ಚಿಕಿತ್ಸೆ ನೀಡುವುದರ ಮೂಲಕ ಹಾಗೂ ಸಲಹೆಗಳನ್ನು ತಿಳಿಸಿಕೊಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಯುಷ್ ಅಧಿಕಾರಿ ಡಾ. ಗುರುಪ್ರಸಾದ್, ಡಾ. ಜಯಶ್ರೀ, ಸಿ ಆರ್ ಪಿ ಮೋಹನ್ ಚಾರ್, ಪಿಡಿಓ ವಿಜಯ ಕುಮಾರಿ, ಮುಖ್ಯ ಶಿಕ್ಷಕಿ ಸರೋಜಾ ಬಾಯಿ, ಶಿಕ್ಷಕರಾದ ನರಸಿಂಹಮೂರ್ತಿ,ಎಸ್ ಡಿ ಎಂ ಸಿ ಅಧ್ಯಕ್ಷ ನಂಜಪ್ಪ,ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರೇಮ ಕುಮಾರ್, ಶ್ರೀನಿವಾಸ್,ಕಾಂಗ್ರೆಸ್ ಮುಖಂಡ ಅರವಿಂದ್, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಹುಲಿರಾಮಯ್ಯ, ಮುದ್ದರಂಗಪ್ಪ.…
ತುಮಕೂರು: ರಾಜಸ್ಥಾನದ ಉದಯಪುರದಲ್ಲಿ ಹಿಂದೂ ಕಾರ್ಯಕರ್ತ ಕನ್ನಯ್ಯ ಲಾಲ್ ನನ್ನು ಅಮಾನುಷವಾಗಿ ಹತ್ಯೆ ಮಾಡಿದ ಘಟನೆಯನ್ನು ಖಂಡಿಸಿ ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಯಿಸಿದ ನೂರಾರು ಮಂದಿ ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ರಾಜಸ್ಥಾನದ ಉದಯಪುರ್ ನಲ್ಲಿ ಅಮಾನುಷವಾಗಿ ಕನ್ನಯ್ಯ ಲಾಲ್ ನನ್ನು ಹತ್ಯೆ ಮಾಡಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಅವರನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ಅವರ ಪ್ರತಿಕೃತಿಗಳನ್ನು ದಹಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಭಜರಂಗದಳದ ಜಿಲ್ಲಾ ಸಂಚಾಲಕ ಮಂಜು ಭಾರ್ಗವ ನೂಪುರ್ ಶರ್ಮ ಅವರನ್ನು ಬೆಂಬಲಿಸಿ ಪೋಸ್ಟ್ ಒಂದನ್ನು ರಾಜಸ್ಥಾನದ ದರ್ಜಿಗ ಕನ್ನಯ್ಯ ಲಾಲ್ ತನ್ನ ಸ್ಟೇಟಸ್ ನಲ್ಲಿ ಹಾಕಿದ್ದೇ ದೊಡ್ಡ ಅಪರಾಧವೆಂದು ಭಾವಿಸಿದ ದುಷ್ಕರ್ಮಿಗಳು ಅವರ ಕುತ್ತಿಗೆಯನ್ನು ಸೀಳಿ ಹತ್ಯೆಗೈದು ವಿಕೃತಿ ಮೆರೆದಿದ್ದಾರೆ. ಜೊತೆಗೆ ತಾವೇ ಕೊಲೆ ಮಾಡಿರುವ ವಿಡಿಯೋ ಸಹ…
ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರದ ಹಿಂದೂ ಮುಸ್ಲಿಂ ಹಾಗೂ ಜೈನ ಧರ್ಮಗಳ ಸೌಹಾರ್ದತೆ, ಸೋದರತೆಯ ಸಮಾನಮನಸ್ಕರ ಹಾಗೂ ಸುತ್ತಮುತ್ತಲ ಗ್ರಾಮಸ್ಥರುಗಳ ವತಿಯಿಂದ ಜಾಮಿಯಾ ಸಮುದಾಯ ಭವನದಲ್ಲಿ ಅಲ್ಪಸಂಖ್ಯಾತರ ಇಲಾಖೆಯಲ್ಲಿ ಉಪಕಾರ್ಯದರ್ಶಿ ಯಾಗಿ ಸೇವೆ ಸಲ್ಲಿಸಿ, ವಿಶ್ರಾಂತ ಜೀವನ ಸಾಗಿಸಿ ಇಹಲೋಕ ತ್ಯಜಿಸಿದ ಸ್ನೇಹಜೀವಿ ದಿವಂಗತ ಅಕ್ರಂ ಭಾಷಾ ಅವರಿಗೆ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅಕ್ರಂ ಭಾಷಾ ಅಗಲಿಕೆಗೆ ಕಂಬನಿ ಮಿಡಿದ ಮಿತ್ರರು, ತಮ್ಮ ಅಧಿಕಾರವಧಿಯಲ್ಲಿ ಮಾಯಸಂದ್ರದ ಬಸದಿ ಯಾತ್ರೆ ನಿವಾಸ ಜಾಮಿಯಾ ಸಮುದಾಯ ಭವನ ಹಾಗೂ ಊರಿನ ತುಂಬಾ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಅನುದಾನ ನೀಡಿದ್ದರು ಹಾಗೂ ಅನೇಕ ಜನರಿಗೆ ಸಹಾಯ ಸಹಕಾರ ನೀಡಿದ್ದರು ಎಂದು ನೆನಪಿಸಿಕೊಂಡರು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಮಂಗಳ ಗೌರಮ್ಮ ಹೊನ್ನಪ್ಪ, ಗ್ರಾಮ ಪಂಚಾಯತಿ ಸದಸ್ಯರಾದ ಅಜಿತ್ ಪ್ರಸಾದ್ ಜೈನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್. ಆರ್ .ಜಯರಾಮ್ , ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಮದನ್ ಕುಮಾರ್ ಜೈನ್ ,…