Subscribe to Updates
Get the latest creative news from FooBar about art, design and business.
- ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ
- ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ
- ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ
- ಬೀದರ್ ನಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ
- ವಿಶ್ವಕರ್ಮ ಸಮಾಜವು ಸಂಘಟಿತರಾದಾಗ ಯೋಜನೆಗಳ ಸದ್ಬಳಕೆಗೆ ಸಹಕಾರಿ: ತಹಶೀಲ್ದಾರ್ ಮೋಹನಕುಮಾರಿ ಸಲಹೆ
- ಎಂ.ಎನ್.ಭೀಮರಾಜ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ
- ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ
- ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Author: admin
ಉಜಿರೆ: ಉತ್ತಮ ಆಹಾರ ಶೈಲಿ, ಪರಿಪೂರ್ಣ ಜೀವನ ಕ್ರಮ ಹಾಗೂ ಕಾಲ ಕಾಲಕ್ಕೆ ಸರಿಯಾಗಿ ಸೂಕ್ತ ವೈದ್ಯರಿಂದ ತಪಾಸಣೆ ನಡೆಸಿದಾಗ ಕ್ಯಾನ್ಸರ್ ರೋಗವನ್ನು ಸಂಪೂರ್ಣವಾಗಿ ನಿವಾರಿಸಬಹುದು ಎಂದು ಎಸ್.ಡಿ.ಎಮ್. ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಶಂಕರ್ ನುಡಿದರು. ಡಿ.ಕೆ.ಆರ್. ಡಿ.ಎಸ್. (ರಿ) ಬೆಳ್ತಂಗಡಿ ನೇತೃತ್ವದಲ್ಲಿ, ಕಾರಿತಾಸ್ ಇಂಡಿಯಾ ನವದೆಹಲಿ-ಸ್ಪರ್ಶ ಕಾರ್ಯಕ್ರಮ, ಗ್ರಾಮ ಪಂಚಾಯತ್ ಉಜಿರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಉಜಿರೆ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ- ಎಸ್.ಡಿ.ಎಮ್. ಕಾಲೇಜು ಉಜಿರೆ, ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಬೆಳ್ತಂಗಡಿ ಹಾಗೂ ಸಮಾಜ ಕಾರ್ಯ ವಿಭಾಗ- ಸರಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಇವುಗಳ ಆಶ್ರಯದಲ್ಲಿ ಉಜಿರೆ ಪೇಟೆಯಲ್ಲಿ ನಡೆದ ‘ವಿಶ್ವ ಕ್ಯಾನ್ಸರ್ ದಿನಾಚರಣಾ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುಂಡಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕಾವ್ಯ ವೈಪನಾ ಕ್ಯಾನ್ಸರ್ ರೋಗದ ಬಗ್ಗೆ ಮಾಹಿತಿ ನೀಡಿದರು. ಡಿ.ಕೆ.ಆರ್.ಡಿ.ಎಸ್. ಸಂಸ್ಥೆಯ ನಿರ್ದೇಶಕರಾಗಿರುವ ವಂ. ಫಾ. ಬಿನೋಯಿ. ಎ. ಜೆ. ಪ್ರಾಸ್ತಾವಿಕವಾಗಿ…
ರಾಷ್ಟ್ರೀಯ ಹೆದ್ದಾರಿ 4ರ ತುಮಕೂರು ರಸ್ತೆಯಲ್ಲಿ ನಡೆಯುತ್ತಿರುವ ಮೇಲ್ಸೇತುವೆ ದುರಸ್ತಿ ಕಾಮಗಾರಿ ಯಾವಾಗ ಮುಗಿಯುತ್ತದೆ ಎಂಬುದು ಯಕ್ಷಪಶ್ನೆಯಾಗಿ ಉಳಿದಿದೆ. ತಾಂತ್ರಿಕ ದೋಷ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಕಳೆದ ಡಿ.25ರಂದು ಏಕಾಏಕಿ ಮೇಲ್ಸೇತುವೆ ಮೇಲೆ ವಾಹನ ಸಂಚಾರವನ್ನು ಬಂದ್ ಮಾಡಲಾಗಿತ್ತು. ಜ.14ರೊಳಗೆ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿತ್ತು. ಆದರೆ ಅದು ಇನ್ನು ಮುಗಿಯುವುದು ಯಾವಾಗ ಎಂಬುದನ್ನು ತಿಳಿಸಲು ಅಧಿಕಾರಿಗಳು ವಿಫಲರಾಗಿದ್ದಾರೆ. ಪಿಲ್ಲರ್ ಸಂಖ್ಯೆ 102, 103 ಸೇರಿದಂತೆ ವಿವಿಧ ಪಿಲ್ಲರ್ಗಳ ಗುಣಮಟ್ಟದ ಬಗ್ಗೆ ಈಗಾಗಲೇ ದೆಹಲಿಯಿಂದ ಬಂದಿದ್ದ ಇಂಜಿನಿಯರ್ಗಳು ತಪಾಸಣೆ ಮಾಡಿ ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ. ಪಿಲ್ಲರ್ಗಳಿಗೆ ಒತ್ತಡ ತಡೆಯಲು ಅಳವಡಿಸಲಾಗಿರುವ ಸಾಧನ ಹಾಳಾಗಿರುವುದರಿಂದ ಅದನ್ನು ದುರಸ್ತಿ ಮಾಡುವುದೇ ಒಂದು ಸವಾಲಿನ ಕೆಲಸವಾಗಿದೆ ಎಂದು ಹೇಳಲಾಗುತ್ತಿದೆ.ಇದು ಗಂಭೀರ ಸಮಸ್ಯೆ ಎಂಬುದರ ಬಗ್ಗೆ ತಿಳಿಸಲೂ ಕೂಡ ಹೆದ್ದಾರಿ ಪ್ರಾಧಿಕಾರದವರು ಯಾವುದೇ ಮಾಹಿತಿಯನ್ನು ಮಾಧ್ಯಮಗಳಿಗಾಗಲಿ, ಸ್ಥಳೀಯರಿಗಾಗಲಿ ತಿಳಿಸುತ್ತಿಲ್ಲ. ತಮ್ಮ ಪಾಡಿಗೆ ತಾವು ಕೆಲವೇ ಕಾರ್ಮಿಕರೊಂದಿಗೆ ದುರಸ್ತಿ ಕಾರ್ಯ ನಡೆಸುತ್ತಿದ್ದಾರೆ.ಸ್ಥಳೀಯರು ಹೇಳುವ ಪ್ರಕಾರ ಇನ್ನು…
ಕಿಡ್ನಿ ಸ್ಟೋನ್ ಅನ್ನು ತೆಗೆದುಹಾಕುತ್ತದೆ – ಮೂತ್ರಪಿಂಡದಲ್ಲಿ ಕ್ಯಾಲ್ಸಿಯಂ ಅಂಶಗಳು ಅಥವಾ ಯೂರಿಕ್ ಆಮ್ಲದಿಂದಾಗಿ ಕಿಡ್ನಿ ಸ್ಟೋನ್ ಅಥವಾ ಮೂತ್ರಪಿಂಡದಲ್ಲಿ ಕಲ್ಲು ಉಂಟಾಗುತ್ತದೆ. ಬಾಳೆದಿಂಡು ಮೂತ್ರಪಿಂಡಗಳಲ್ಲಿ ರೂಪುಗೊಂಡ ಕಲ್ಲುಗಳನ್ನು ವಿಭಜಿಸುವ ಮೂತ್ರವರ್ಧಕ ಮತ್ತು ಪೊಟ್ಯಾಸಿಯಮ್ ಅಂಶವನ್ನು ಹೊಂದಿರುತ್ತದೆ. ಬಾಳೆದಿಂಡಿನ ರಸವು ಮೂತ್ರಪಿಂಡದ ಕಲ್ಲುಗಳನ್ನು ಹೊರಹಾಕಲು ಪರಿಣಾಮಕಾರಿಯಾಗಿದೆ. ಉತ್ತಮ ಫಲಿತಾಂಶಕ್ಕೆ ಸ್ವಲ್ಪ ನಿಂಬೆ ರಸವನ್ನು ಸೇರಿಸಬಹುದು . ಸಿಟ್ರಿಕ್ ಆಮ್ಲವು ಮೂತ್ರಪಿಂಡದ ಕಲ್ಲನ್ನು ಸುಲಭವಾಗಿ ತೆಗೆದುಹಾಕಲು ನೆರವಾಗುತ್ತದೆ. ಮೂತ್ರದ ಸೋಂಕನ್ನು ದೂರವಿರಿಸುತ್ತದೆ – ಬಾಳೆ ದಿಂಡು ಮೂತ್ರದ ಸೋಂಕನ್ನು ನಿವಾರಿಸುವ ಶಕ್ತಿಯನ್ನು ಹೊಂದಿದೆ. ಪೊಟ್ಯಾಸಿಯಮ್, ವಿಟಮಿನ್ ಬಿ 6 ಎಂಬ ಪೋಷಕಾಂಶಗಳು ಮೂತ್ರನಾಳದಲ್ಲಿ ಉಂಟಾಗುವ ಸೋಂಕುಗಳ ವಿರುದ್ಧ ಹೋರಾಡಲು ಇದು ಸಹಾಯ ಮಾಡುತ್ತದೆ. ತಕ್ಷಣದ ಪರಿಹಾರ ಪಡೆಯಲು ಸೋಂಕಿನ ಸಮಯದಲ್ಲಿ ಬಾಳೆ ದಿಂಡಿನ ಜ್ಯೂಸ್ ಮಾಡಿ ಕುಡಿಯಿರಿ ಅಥವಾ ಇತರ ಪದಾರ್ಥಗಳೊಂದಿಗೆ ನಿಯಮಿತವಾಗಿ ಬೇಯಿಸಿ ಸೇವಿಸಿ. ಮಧುಮೇಹಕ್ಕೆ ಚಿಕಿತ್ಸೆ ನೀಡುತ್ತದೆ – ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುವ ಆಹಾರವು ಮಧುಮೇಹ ರೋಗಿಗಳಿಗೆ ಉತ್ತಮವಾಗಿದೆ.…
ಕೊರಟಗೆರೆ : ಇಂದು ಕೊರಟಗೆರೆ ಶಿಶು ಅಭಿವೃದ್ಧಿ ಯೋಜನೆಯಡಿ ಕರ್ನಾಟಕ ಸರ್ಕಾರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ತುಮಕೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತುಮಕೂರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಾಕೃತಿಕ ವಿಕೋಪ ಹಾಗೂ ಇನ್ನಿತರೆ ಸಂಕಷ್ಟದಲ್ಲಿರುವ ಮಕ್ಕಳ ಸಮಸ್ಯೆಗಳು ಮತ್ತು ಪುನರ್ವಸತಿ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾವಲು ಸಮಿತಿ ಪ್ರತಿ ಮೂರು ತಿಂಗಳಿಗೊಮ್ಮೆ ನಡೆಸುತ್ತಿದ್ದು, ಇದರಲ್ಲಿ ಸಾಮಾಜಿಕ ಸಮಸ್ಯೆಗಳಾದ ಬಾಲ್ಯವಿವಾಹ ಮಹಿಳೆಯರ ಹಾಗೂ ಮಕ್ಕಳ ಅನೈತಿಕ ಕಳ್ಳಸಾಗಣಿಕೆ, ಪೋಕ್ಸೋ ಕಾಯ್ದೆ, ಮಕ್ಕಳ ಸಮಗ್ರ ರಕ್ಷಣೆ ಹೀಗೆ ಹಲವು ವಿಷಯಗಳಾದ ಮಹಿಳೆ, ಮಕ್ಕಳು ಮತ್ತು ವೃದ್ಧರು ಹಾಗೂ ದೌರ್ಜನ್ಯಕ್ಕೆ ಒಳಗಾದವರ ಬಗ್ಗೆ ಮಾಹಿತಿ ಪಡೆದು ಚರ್ಚಿಸಬೇಕು ಮತ್ತು ಸಮಸ್ಯೆಗಳು ಬಾರದಂತೆ ಕ್ರಮವಹಿಸಬೇಕು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು…
ಅವಿವಾಹಿತ ಮಹಿಳೆಯರನ್ನು ಸಾಮಾಜಿಕ ಜಾಲತಾಣದ ಮುಖಾಂತರ ಪರಿಚಯ ಮಾಡಿಕೊಂಡು ಅವರ ಅನುಮತಿಯಿಲ್ಲದೆ ಖಾಸಗಿ ಫೋಟೋಗಳನ್ನು ತೆಗೆದು ಲಕ್ಷಾಂತರ ಹಣ ನೀಡುವಂತೆ ಬೆದರಿಕೆ ಹಾಕುತ್ತಿದ್ದ ಚತ್ತೀಸ್ಘಡ ರಾಜ್ಯದ ಆರೋಪಿಯನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಭಿಷೇಕ್ ಅಲಿಯಾಸ್ ಸುಶಾಂತ್ ಜೈನ್ (33) ಬಂಧಿತ ಆರೋಪಿ. ಈತನಿಂದ 3 ಮೊಬೈಲ್ ಹಾಗೂ 3.60 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ. ಈತ ಸಾಫ್ಟ್ವೇರ್ ಕಂಪೆನಿಯೊಂದನ್ನು ತೆರೆಯಲು ತಯಾರಿ ಮಾಡಿಕೊಳ್ಳುತ್ತಿದ್ದನು. ಆರೋಪಿ ಅಭಿಷೇಕ್ಗೆ ವಿವಾಹವಾಗಿ ಪತ್ನಿ, ಮಕ್ಕಳಿದ್ದರೂ ಸಹ ಟೆಂಡರ್ ಎಂಬ ಆ್ಯಪ್ ಮುಖಾಂತರ ಅವಿವಾಹಿತ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಅವರನ್ನು ಪುಸಲಾಯಿಸಿ ವಿಶ್ವಾಸಗಳಿಸುತ್ತಿದ್ದನು.ಡೇಟಿಂಗ್ ಮಾಡುವ ಮತ್ತು ಅವರ ಖಾಸಗಿ ಫೋಟೋಗಳನ್ನು ಕ್ಲಿಕ್ಕಿಸಿಕೊಂಡು ನಂತರ ಹಣಕ್ಕಾಗಿ ಬೇಡಿಕೆ ಇಡುವ ಪ್ರವೃತ್ತಿ ಉಳ್ಳವನಾಗಿರುತ್ತಾನೆ. ಕೊಡಿಗೆಹಳ್ಳಿಯಲ್ಲಿ ಅವಿವಾಹಿತ ಮಹಿಳೆಯನ್ನು ಟೆಂಡರ್ ಆಫ್ ಮೂಲಕ ಪರಿಚಯ ಮಾಡಿಕೊಂಡು ಅವರ ಮೊಬೈಲ್ ನಂಬರ್ ಪಡೆದುಕೊಂಡು ಅವರಿಗೆ ಫೋನ್ಕಾಲ್ ಮತ್ತು ಮೆಸೇಜ್ ಮಾಡಿ ಪುಸಲಾಯಿಸಿದ್ದಾನೆ.ಫೆ.1ರಂದು ಬೆಳಗ್ಗೆ ಆರೋಪಿ ಅಭಿಷೇಕ್ ಮಹಿಳೆ ಮನೆಗೆ ಹೋಗಿ ಬಲವಂತವಾಗಿ ಅವರನ್ನು…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹುಳಿಯಾರ್ ರಸ್ತೆಯಲ್ಲಿನ ಪೌದಿಯಮ್ಮ(ಭಗವತಿ) ಅಮ್ಮನ ದೇವಸ್ಥಾನಕ್ಕೆ ತಿರುಗುವ ತಿರುವಿನಲ್ಲಿರುವ ಸೇತುವೆ ಭೂಮಿಯಿಂದ ಬೇರ್ಪಟ್ಟು ಸಾರ್ವಜನಿಕರಿಗೆ ಅಪಾಯಕಾರಿಯಾಗಿ ಪರಿಣಾಮಿಸಿತ್ತು. ಈ ಸಂಬಂಧ ನಮ್ಮತುಮಕೂರು.ಕಾಂನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ಇದೀಗ ಸೇತುವೆ ಕಾಮಗಾರಿ ಆರಂಭಿಸಿದ್ದಾರೆ. ಮಾಧ್ಯಮ ವರದಿಯ ಬೆನ್ನಲ್ಲೇ ಹಿರಿಯೂರು ನಗರ ಸಭೆ ಆಡಳಿತ ಮಂಡಳಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದರು. ಇದೀಗ ಕೆಲಸ ಆರಂಭವಾಗಿದೆ. ಪ್ರಮುಖ ರಸ್ತೆಯಲ್ಲೇ ಸೇತುವೆ ಬಾಯ್ದೆರೆದು ಪ್ರಾಣ ಬಲಿಗಾಗಿ ಕಾಯುತ್ತಿತ್ತು. ಆದರೆ, ಈ ಬಗ್ಗೆ ಸಂಬಂಧಪಟ್ಟವರು ಬೇಜಾವಬ್ದಾರಿವಹಿಸಿದ್ದರು. ಈ ಸಂಬಂಧ ಸವಿವರವಾದ ವರದಿಯನ್ನು ನಮ್ಮತುಮಕೂರು.ಕಾಂ ವರದಿ ಮಾಡಿದ್ದು, ಈ ವರದಿಯಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು ಇದೀಗ ರಸ್ತೆ ದುರಸ್ತಿ ಕಾರ್ಯ ಆರಂಭಿಸಿದ್ದಾರೆ. ಇಲ್ಲಿನ ರಸ್ತೆ ಕೂಡ ಹೊಂಡ, ಗುಂಡಿಗಳಿಂದ ತುಂಬಿದ್ದು, ವಾಹನ ಪ್ರಯಾಣಿಕರ ಪ್ರಾಣದ ಜೊತೆಗೆ ಚೆಲ್ಲಾಟ ಆಡುವಂತಿತ್ತು. ಶಾಲಾ ಮಕ್ಕಳು, ಮಹಿಳೆಯರು ಸೇರಿದಂತೆ ಸಾರ್ವಜನಿಕರು ಈ ರಸ್ತೆ ಅವ್ಯವಸ್ಥೆಯಿಂದ ಕಂಗೆಟ್ಟಿದ್ದರು. ಇದೀಗ ನಮ್ಮ ತುಮಕೂರು.ಕಾಂ ವರದಿಯಿಂದ ಎಚ್ಚೆತ್ತುಕೊಂಡಿದ್ದು, ಸಾರ್ವಜನಿಕರ ಸುರಕ್ಷತೆ ಕ್ರಮಕೈಗೊಳ್ಳಲಾಗಿದೆ. ಹಲವು…
ಅಂಗಡಿಯಲ್ಲಿ ಮಾಲೀಕರು ಇಲ್ಲದಿದ್ದಾಗ ಲಕ್ಷಾಂತರ ಹಣದೊಂದಿಗೆ ಪರಾರಿಯಾಗಿದ್ದ ನೌಕರನನ್ನು ಸಿಟಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿ 27 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ರಾಜಸ್ಥಾನ ಮೂಲದ ಗಣೇಶ ವರ್ಮಾ ಬಂಧಿತ ನೌಕರ. ಎಲೆಕ್ಟ್ರಿಕಲ್ ಅಂಗಡಿಯೊಂದರಲ್ಲಿ ಗಣೇಶ ವರ್ಮಾ ಸುಮಾರು ಐದಾರು ತಿಂಗಳಿನಿಂದ ಡೆಲಿವರಿ ಕೆಲಸ ಮಾಡಿಕೊಂಡು ಮಾಲೀಕರ ನಂಬಿಕೆಗಳಿಸಿದ್ದನು. ಡಿ.21ರಂದು ಮಧ್ಯಾಹ್ನ 12.30ರ ಸುಮಾರಿನಲ್ಲಿ ಕೆಲಸದ ನಿಮಿತ್ತ ಮಾಲೀಕರು ಹೊರಗೆ ಹೋಗಿದ್ದರು. ಅಂಗಡಿಯಲ್ಲಿದ್ದ ಗಣೇಶ್ ವರ್ಮಾ, ಮಾಲೀಕರ ನಂಬಿಕೆಗೆ ದ್ರೋಹ ಬಗೆದು ಕ್ಯಾಶ್ ಬಾಕ್ಸ್ನಲ್ಲಿದ್ದ 30 ಲಕ್ಷ ರೂ.ಗಳನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದನು. ಕೆಲ ಸಮಯದ ಬಳಿಕ ಅಂಗಡಿ ಮಾಲೀಕರು ವಾಪಸ್ ಆದಾಗ ನೌಕರನೂ ಇರಲಿಲ್ಲ. ಕ್ಯಾಶ್ ಬಾಕ್ಸ್ನಲ್ಲಿದ್ದ ಹಣವೂ ನಾಪತ್ತೆಯಾಗಿದ್ದನ್ನು ಕಂಡು ತಕ್ಷಣ ಸಿಟಿ ಮಾರ್ಕೆಟ್ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಇನ್ಸ್ಪೆಕ್ಟರ್ ಕುಮಾರಸ್ವಾಮಿ ಹಾಗೂ ಸಿಬ್ಬಂದಿ ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿ ವಿಚಾರಣೆ ಗೊಳಪಿಡಿಸಿ 27 ಲಕ್ಷ ಹಣ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಗುಬ್ಬಿ: ತಾಲ್ಲೂಕಿನ ಹಾಗಲವಾಡಿ ಹೋಬಳಿಯ ಯರೇಕಾವಲ್ ನ ದಲಿತ ಮುಖಂಡ ನರಸಿಂಹಯ್ಯ ಎಂಬುವರ ಜಮೀನಿನಲ್ಲಿ ಕಸವಿಲೆವಾರಿ ಘಟಕ ಮುಂಜೂರು ಮಾಡಲಾಗಿದ್ದು , “ನಮ್ಮ ಗಮನಕ್ಕೆ ತರದೇ ಏಕಾಏಕಿ ಕಸವಿಲೇವಾರಿ ಘಟಕ ಮಂಜೂರು ಮಾಡಿರುವುದು ಸರಿಯಲ್ಲ ಎಂದು ನರಸಿಂಹಯ್ಯ ಆಕ್ರೋಶ ವ್ಯಕ್ತಪಡಿಸಿ, ಜಮೀನಿನಲ್ಲಿ ಪ್ರತಿಭಟನೆ ನಡೆಸಿದರು. ಸುಮಾರು 30 ವರ್ಷಗಳಿಂದ ನಮ್ಮ ಜಮೀನಿನಲ್ಲಿ ನಾವೇ ಉಳುಮೆ ಮಾಡಿಕೊಂಡು ಬಂದಿದ್ದು, ಜಮೀನಿನಲ್ಲಿ ಸಾಲ ಸೂಲ ಮಾಡಿ ಬೋರ್, ಟಿಸಿ , ತೆಂಗಿನ ಗಿಡಗಳನ್ನು ನೆಟ್ಟಿದ್ದೇವೆ. ಈಗ ಏಕಾಏಕಿ ಅಧಿಕಾರಿಗಳು ನಮ್ಮ ಜಮೀನಿನಲ್ಲಿ ಕಸವಿಲೆವಾರಿ ಘಟಕ ಮಾಡುವುದಕ್ಕೆ ಮುಂದಾಗಿರುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ನಮ್ಮ ಜಮೀನಿನಲ್ಲಿ ಕಸವಿಲೆವಾರಿ ಘಟಕ ಮಾಡುವುದಕ್ಕೆ ಅವಕಾಶ ಕೊಡಲ್ಲ. ಈ ಜಮೀನು ಬಿಟ್ಟರೆ ನಮ್ಮಗೆ ವಿಷ ಕುಡಿಯುವುದೇ ವಾಸಿ ಎಂದು ನರಸಿಂಹಯ್ಯ ಅಧಿಕಾರಿಗಳ ಮುಂದೆ ಆಕ್ರೋಶ ಹೊರ ಹಾಕಿದರು. ಈ ವೇಳೆ ಚೇಳೂರು ಪೋಲೀಸರು ಮಧ್ಯೆ ಪ್ರವೇಶಿಸಿದರು. ಗ್ರಾಮಸ್ಥರು ಹಾಗೂ ಫೋಲೀಸರ ನಡುವೆ ಮಾತಿನ ಚಕಮಾಕಿ ನಡೆಯಿತ್ತು. ಪಿಡಿಓ ಮಂಜುನಾಥ್ ಮಾತನಾಡಿ,…
ತುಮಕೂರು: ಜೆ.ಸಿ.ಐ. ತುಮಕೂರು ಮೆಟ್ರೋ ಮತ್ತು ರೋಟರಿ ತುಮಕೂರು ಪ್ರೇರಣಾ ಸಂಸ್ಥೆ, ಸಂಯುಕ್ತಾಶ್ರಯದಲ್ಲಿ ಮಹೇಶ್ ಪಿ.ಯು. ಸಹಯೋಗದಲ್ಲಿ ಅಶೋಕನಗರದ ಮಹೇಶ್ ಪಿ.ಯು. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಮಯದ ಮಹತ್ವ ಹಾಗೂ ಸಮಯ ನಿರ್ವಹಣೆಯ ಕುರಿತು ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಜೆ.ಸಿ.ಐ 14ರ ವಲಯ ಮಟ್ಟದ ತರಬೇತಿದಾರರಾದ ರೇಷ್ಮಾ ಬಾಡೊಲ್ಲಾ, ನರೇಶ್ ಬಿ ಗಾಢಿಯ ಮತ್ತು ಮುಕೇಶ್ ಭಂಡಾರಿ, ಪ್ರಾಂಶುಪಾಲರಾದ ಶ್ರೀಮತಿ ವಿದ್ಯಾ ಪಟೇಲ್ ಆಡಳಿತ ಮಂಡಳಿಯೊಂದಿಗೆ ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮುಖ್ಯ ತರಬೇತಿದಾರರಾದ ರೇಷ್ಮಾ ಬಾಡೊಲ್ಲಾ ಮಾತನಾಡಿ, ಪ್ರಸ್ತುತ ವಿದ್ಯಾರ್ಥಿಗಳ ಜೀವನಶೈಲಿಯಲ್ಲಿ ಸಮಯಕ್ಕೆ ಮಹತ್ವ ಮತ್ತು ಸಮಯಪಾಲನೆ ಅತಿಮುಖ್ಯವಾದ ಘಟ್ಟವಾಗಿದೆ. ಸಮಯಪಾಲನೆಯ ಮುಖ್ಯ ಉಪಯೋಗವೇನೆಂದರೆ ತಮಗೆ ಆಗುವ ಬೇಸರದಿಂದ ದೂರವಿರಬಹುದು. ಸಾಮಾನ್ಯವಾಗಿ ಬಹುಸಂಖ್ಯಾತ ವಿದ್ಯಾರ್ಥಿಗಳಿಗೆ ತಮ್ಮ ಪ್ರಾಜೆಕ್ಟ್, ಹೋಂ ವರ್ಕ್ ಮುಗಿಸಲು ಸಮಸ್ಯೆಗಳು ಎದುರಾಗುತ್ತಲೇ ಇರುತ್ತವೆ. ಇಂತಹ ಸಮಸ್ಯೆಗಳಿಂದ ವಿದ್ಯಾಭ್ಯಾಸ ಸುಂದರವಾಗಿರಲು, ಆಸಕ್ತಿದಾಯಕವಾಗಿ ಇರುವಂತೆ ನೋಡಿಕೊಳ್ಳಲು ಉತ್ತಮ ಟೈಮ್ ಮ್ಯಾನೇಜ್ಮೆಂಟ್ ಅಗತ್ಯವಾಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲೆ ಮಹೇಶ್…
ಫೈವ್ ಸ್ಟಾರ್ ಹೋಟೆಲೊಂದರಲ್ಲಿ ಹೈಟೆಕ್ ಜೂಜಾಟ ವಾಡುತ್ತಿದ್ದ ನಿವೃತ್ತ ಸರ್ಕಾರಿ ಅಧಿಕಾರಿ ಸೇರಿದಂತೆ ಆರು ಮಂದಿ ಉದ್ಯಮಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 20.71 ಲಕ್ಷ ರೂ. ಹಣ ವಶಪಡಿಸಿ ಕೊಂಡಿದ್ದಾರೆ. ಹೋಟೆಲ್, ಕ್ಯಾಟರಿಂಗ್, ಟ್ರಾನ್ಸ್ಫೆಪೊರ್ಟ್ ಉದ್ಯಮ ನಡೆಸುತ್ತಿರುವ ಉದ್ಯಮಿಗಳು ಹಾಗೂ ಒಬ್ಬರು ನಿವೃತ್ತ ಸರ್ಕಾರಿ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಹಣ ಸೇರಿದಂತೆ ಇಸ್ಪೀಟ್ ಕಾರ್ಡ್ಗಳು ಹಣ ಎಣಿಸುವ ಯಂತ್ರ ವಶಪಡಿಸಿಕೊಂಡಿದ್ದಾರೆ. ಈ ಆರೂ ಮಂದಿ ಹೈಗ್ರೌಂಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಫೈವ್ಸ್ಟಾರ್ ಹೋಟೆಲ್ನಲ್ಲಿ ರೂಂಬುಕ್ ಮಾಡಿಕೊಂಡು ಹೈಟೆಕ್ ಗ್ಯಾಬ್ಲಿಂಗ್ ಆಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಹೋಟೆಲ್ ಮೇಲೆ ದಾಳಿ ಮಾಡಿ ಆರು ಮಂದಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB