Subscribe to Updates
Get the latest creative news from FooBar about art, design and business.
- ತಿಪ್ಪಯನದುರ್ಗ ಗ್ರಾಮದಲ್ಲಿ ಮಣ್ಣು ಹಗರಣ: ಪ್ರಶ್ನಿಸಿದಾಗ ಸ್ಥಳೀಯ ಶಾಸಕರ ಹೆಸರು ದುರ್ಬಳಕೆ!
- ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ
- ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ
- ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ: ಬಿ.ವೈ. ವಿಜಯೇಂದ್ರ ಆರೋಪ
- ಮಾಜಿ ಸಚಿವ, ಶಾಸಕ ಹೆಚ್.ವೈ.ಮೇಟಿ ನಿಧನ
- ಹುಲಿ ದಾಳಿಗೆ ಹೆದರಿ ಹೊರಬಾರದ ಜನ: ಅರಣ್ಯ ಇಲಾಖೆಯಿಂದ ಆಹಾರದ ಕಿಟ್ ವಿತರಣೆ
- ಸರಗೂರು | ಮುಳ್ಳೂರು ಗ್ರಾಮವನ್ನು ಹೋಬಳಿ ಕೇಂದ್ರ ಮಾಡಲು ಪ್ರಯತ್ನಿಸಲಾಗುವುದು: ಶಾಸಕ ಅನಿಲ್ ಕುಮಾರ್
- ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ
Author: admin
ವಿಜಾಪುರ ಜಿಲ್ಲೆ: ಕೊಲ್ಹಾರತಾಲ್ಲೂಕು ಕೊಲ್ಹಾರ ಪಟ್ಟಣದ ಮುಳುಗಡೆ ಸಂತ್ರಸ್ತರಿಗೆ ನಿವೇಶನಗಳ ವಿತರಣೆ ಹಾಗೂ ಪರಿಹಾರ ವಿತರಣೆಯಲ್ಲಿ ಪುನರ್ವಸತಿ ಅಧಿಕಾರಿಗಳಿಂದ ಅನ್ಯಾಯವಾಗಿದೆ ಎಂದು ಕೊಲ್ಹಾರ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಹೋರಾಟ ಸಮೀತಿ ಅಧ್ಯಕ್ಷ ಸಿದ್ದಪ್ಪ ಬಾಲಗೊಂಡ ಹೇಳಿದರು. ಪಟ್ಟಣದ ಉಪ್ಪಾಸೆಪ್ಪ ದೇವಸ್ಥಾನದಲ್ಲಿ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಹೋರಾಟ ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ ಚರ್ಚಾಕೂಟದಲ್ಲಿ ಮಾತನಾಡಿದ ಅವರು, ಸರಕಾರಕ್ಕಾಗಿ ನಾವುಗಳು ಮಾಡಿರುವ ತ್ಯಾಗ ಅಪಾರವಾದದ್ದು ಪುನರ್ವಸತಿ ಅಧಿಕಾರಿಗಳು ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು. ಸಂತ್ರಸ್ತರಿಗೆ ಪೂರ್ಣ ಸೌಲಭ್ಯಗಳನ್ನು ಕಲ್ಪಿಸುವವರೆಗೆ ಮುಳುಗಡೆ ಸಂತ್ರಸ್ತರ ಹೋರಾಟ ಸಮಿತಿ ವತಿಯಿಂದ ನಿರಂತರವಾಗಿ ಹೋರಾಟ ಮಾಡಲಾಗುವುದು ಎಂದರು. ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಕಲ್ಲು ಸೊನ್ನದ ಮಾತನಾಡಿ, ಸರ್ವರು ಈ ಹೋರಾಟಕ್ಕೆ ಕೈಜೋಡಿಸಬೇಕು. ಈ ಹಿಂದೆ ಕೊಲ್ಹಾರ ತಾಲ್ಲೂಕು ಹೋರಾಟ ಸಮಿತಿಯ ವತಿಯಿಂದ ಹೋರಾಟ ಹಮ್ಮಿಕೊಳ್ಳುವ ಮೂಲಕ ಹೇಗೆ ಯಶಸ್ವಿಯಾದೆವೋ, ಅದೇ ರೀತಿ ಈ ಹೋರಾಟಕ್ಕೂ ಸರ್ವರು ಕೈಜೋಡಿಸುವ ಮೂಲಕ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳೋಣ ಎಂದು ಹೇಳಿದರು. ಕೊಲ್ಹಾರ ಸಂತ್ರಸ್ತರ ಜೊತೆಗೆ ಪಟ್ಟಣದಲ್ಲಿ…
ಮೊಹಾಲಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾವನ್ನು ಇನ್ನಿಂಗ್ಸ್ ಮತ್ತು 222 ರನ್ಗಳಿಂದ ಸೋಲಿಸಿದೆ. ಇದರೊಂದಿಗೆ ಭಾರತ ತಂಡ ಎರಡು ಟೆಸ್ಟ್ಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ರೋಹಿತ್ ಶರ್ಮಾ ಟೆಸ್ಟ್ ಗೆಲುವಿನೊಂದಿಗೆ ನಾಯಕನಾಗಿ ಕೂಡ ಶುಭಾರಂಭ ಮಾಡಿದ್ದಾರೆ. ಈ ಪಂದ್ಯದಲ್ಲಿ ಹಲವು ದಾಖಲೆಗಳು ನಿರ್ಮಾಣವಾದವು. ರವೀಂದ್ರ ಜಡೇಜಾಗೆ ಈ ಪಂದ್ಯವು ತುಂಬಾ ವಿಶೇಷವಾಗಿತ್ತು, ಜಡೇಜಾ ಅವರು ಅಂತರರಾಷ್ಟ್ರೀಯ ವೃತ್ತಿಜೀವನದ ಅತಿದೊಡ್ಡ ಇನ್ನಿಂಗ್ಸ್ ಆಡಿದರು, ನಂತರ ವಿರಾಟ್ ಕೊಹ್ಲಿ (Virat Kohli) ತಮ್ಮ ವೃತ್ತಿಜೀವನದಲ್ಲಿ 100 ಟೆಸ್ಟ್ ಪಂದ್ಯಗಳನ್ನು ಪೂರ್ಣಗೊಳಿಸಿದರು. ಈ ಪಂದ್ಯದಲ್ಲಿ ರೋಹಿತ್ ಶರ್ಮಾ (Rohit Sharma) ನಾಯಕನಾಗಿಯೂ ಅಂತಹ ದಾಖಲೆಯನ್ನು ಮಾಡಿದ್ದಾರೆ, ವಿರಾಟ್ ಕೊಹ್ಲಿ ಹಾಗೂ ಮಹೇಂದ್ರ ಸಿಂಗ್ ಧೋನಿ (Mahendra SIngh Dhoni) ಕೂಡ ಅವರ ಹೆಸರಿನಲ್ಲಿ ಈ ದಾಖಲೆ ಮಾಡಲು ಸಾಧ್ಯವಾಗಲಿಲ್ಲ. ಮತ್ತೊಂದು ವಿಶೇಷ ದಾಖಲೆ ನಿರ್ಮಿಸಿದ ರೋಹಿತ್ : ನಾಯಕನಾಗಿ ರೋಹಿತ್ ಶರ್ಮಾ (Rohit Sharma) ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ತಂಡವೂ…
ದೇಶದ ಏಕೈಕ ಸರ್ಕಾರಿ ಟೆಲಿಕಾಂ ಕಂಪನಿ BSNL ಇತ್ತೀಚಿಗೆ ಹೊಸ ರಿಚಾರ್ಜ್ ಪ್ಲಾನ್ ಅನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ನಿಮಗೆ ಅತಿ ಕಡಿಮೆ ದರದಲ್ಲಿ ಹೆಚ್ಚಿನ ವೇಗದ ಡೇಟಾವನ್ನು ನೀಡಲಾಗುತ್ತಿದೆ. ವಾಸ್ತವವಾಗಿ, BSNL ಇತ್ತೀಚೆಗೆ ಬ್ರಾಡ್ಬ್ಯಾಂಡ್ ಯೋಜನೆಯನ್ನು ಪ್ರಾರಂಭಿಸಿದೆ, ಅಲ್ಲಿ ನಿಮಗೆ 329 ರೂ.ಗೆ 1,000GB ಡೇಟಾ ಮತ್ತು ಇತರ ಪ್ರಯೋಜನಗಳನ್ನು ನೀಡಲಾಗುತ್ತಿದೆ. ಈ ಯೋಜನೆ ಬಗ್ಗೆ ನಿಮಗಾಗಿ ಮಾಹಿತಿ ಇಲ್ಲಿದೆ.. BSNL 329 ರೂ.ಗೆ ಹಲವು ಪ್ರಯೋಜನಗಳು ಪ್ರಸ್ತುತ, BSNL ನ ಅಗ್ಗದ ಬ್ರಾಡ್ಬ್ಯಾಂಡ್ ಪ್ಲಾನ್(BSNL Broadband Plan) ಬಗ್ಗೆ ಮಾತನಾಡಲಾಗುತ್ತಿದೆ, ಇದರ ಬೆಲೆ 329 ರೂ. ಈ ಯೋಜನೆಯಲ್ಲಿ, ನಿಮಗೆ 1TB ಅಂದರೆ 1,000GB ಡೇಟಾವನ್ನು 20Mbps ವೇಗದಲ್ಲಿ 329 ರೂಪಾಯಿಗಳಿಗೆ ನೀಡಲಾಗುತ್ತಿದೆ. ಇದಲ್ಲದೆ, ಈ ಯೋಜನೆಯಲ್ಲಿ ನಿಮಗೆ ಉಚಿತ ಫಿಕ್ಸೆಡ್ ಲೈನ್ ಧ್ವನಿ ಕರೆ ಸಂಪರ್ಕದ ಸೌಲಭ್ಯವನ್ನು ಸಹ ನೀಡಲಾಗುತ್ತಿದೆ. ಅಷ್ಟೇ ಅಲ್ಲ, ಈ ಬ್ರಾಡ್ಬ್ಯಾಂಡ್ ಯೋಜನೆಯ ಮೊದಲ ತಿಂಗಳ ಬಿಲ್ನಲ್ಲಿ ನಿಮಗೆ 90% ರಿಯಾಯಿತಿ ನೀಡಲಾಗುವುದು…
ಇತ್ತೀಚೆಗೆ ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆ(Harsha Murder Case)ಯಾದ ಹಿಂದೂಪರ ಸಂಘಟನೆ ಕಾರ್ಯಕರ್ತ ಹರ್ಷ ಮನೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ(BS Yediyurappa) ಭೇಟಿ ನೀಡಿದರು. ಹರ್ಷ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಿಎಸ್ವೈ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಸರ್ಕಾರದ ವತಿಯಿಂದ ಘೋಷಿಸಲಾಗಿದ್ದ 25 ಲಕ್ಷ ರೂ. ಪರಿಹಾರದ ಚೆಕ್ ಅನ್ನು ಹರ್ಷ(Bajrang Dal Activist) ಕುಟುಂಬಸ್ಥರಿಗೆ ಬಿಎಸ್ ವೈ ಹಸ್ತಾಂತರ ಮಾಡಿದರು. ಬಳಿಕ ಮಾತನಾಡಿದ ಅವರು, ಭಜರಂಗದಳ ಸಂಘಟನೆ ಕಾರ್ಯಕರ್ತ ಹರ್ಷ ಹತ್ಯೆ ನಡೆದಿರುವುದು ಖಂಡನೀಯ. ಹಿಂದೂ ಸಮಾಜದ ಮುಖಂಡನಾಗಿ ಬೆಳೆಯುತ್ತಿದ್ದ ಹರ್ಷನ ಬೆಳವಣಿಗೆಯನ್ನು ಸಹಿಸಲಾಗದೆ ಕೊಲೆ ಮಾಡಲಾಗಿದೆ. ಯಾರ ತಂಟೆಗೂ ಹೋಗದೆ ತನ್ನ ಪಾಡಿಗೆ ತಾನು ಸಂಘಟನಾ ಕೆಲಸ ಮಾಡುತ್ತಿದ್ದ ಹರ್ಷರನ್ನು ಕೊಲೆ ಮಾಡಿರುವುದು ದುಃಖದ ವಿಷಯವೆಂದು ಬಿಎಸ್ವೈ(Former CM BSY) ಬೇಸರ ವ್ಯಕ್ತಪಡಿಸಿದರು. ಹರ್ಷನ ಕುಟುಂಬ(Harsha Family) ಸದಸ್ಯರಿಗೆ ಸಾಂತ್ವನ ಹೇಳುವುದುನ್ನು ಬಿಟ್ಟರೆ ಬೇರೇನೂ ಮಾಡಲು ಸಾಧ್ಯವಿಲ್ಲ. ಪರಿಹಾರವೆಂದು ಎಷ್ಟೇ ಹಣ ಕೊಟ್ಟರೂ ಅದು ನೆಪಮಾತ್ರ. ಹೋದ ಅಮೂಲ್ಯ ಜೀವ ಮತ್ತೆ ಬರುವುದಿಲ್ಲ.…
24 ರ ಯುವಕನೋರ್ವ ಮತ್ತು 77 ರ ವಯಸ್ಸಿನ ಮಹಿಳೆಯನ್ನು ವರಿಸಿದ (Marriage) ಘಟನೆ ನಡೆದಿದೆ. ತಮ್ಮ ಸಂಬಂಧವನ್ನು ತಪ್ಪು ಎಂದು ಅನೇಕರು ಕರೆದರೂ ಅವರು ಮುಜುಗರ ಪಟ್ಟಿಲ್ಲ ಎಂದು ಇವರು ಹೇಳಿದ್ದಾರೆ. ಅಕ್ಟೋಬರ್ 2015 ರಲ್ಲಿ ಮದುವೆಯಾದ 53 ವರ್ಷಗಳ ವಯಸ್ಸಿನ (Wedding) ಅಂತರವಿರುವ ಈ ದಂಪತಿಗಳು ತಮ್ಮ ಮದುವೆ “ಅತ್ಯುತ್ತಮ” ಮತ್ತು “ಸ್ಥಿರವಾಗಿದೆ” ಎಂದು ಹೇಳಿದ್ದಾರೆ.2015 ರಲ್ಲಿ ಅಲ್ಮೆಡಾ ಎಂಬ ವೃದ್ಧೆ ಅವರ ಮಗನ ಅಂತ್ಯಕ್ರಿಯೆಯಲ್ಲಿ (Funeral) ಗ್ಯಾರಿ ಎಂಬ ಯುವಕನನ್ನು ಭೇಟಿಯಾದರು. ಆ ನಂತರ ಇವರಿಬ್ಬರು ಎರಡು ವಾರಗಳ ಬಳಿಕ ವಿವಾಹವಾದರು. ಆ ಸಮಯದಲ್ಲಿ, ಗ್ಯಾರಿ ಕೇವಲ 17 ವರ್ಷ ವಯಸ್ಸಿನವರಾಗಿದ್ದರು. “ನಾವು ಯಾವಾಗಲೂ ಅತ್ಯುತ್ತಮವಾದ, ಸ್ಥಿರವಾದ ದಾಂಪತ್ಯವನ್ನು ಹೊಂದಿದ್ದೇವೆ” ಎಂದು ಗ್ಯಾರಿ ಹೇಳುತ್ತಾರೆ. ಇವರಿಬ್ಬರ ನಡುವೆ 53 ವರ್ಷಗಳ ವಯಸ್ಸಿನ ಅಂತರವಿದೆ. ಗ್ಯಾರಿ ಮತ್ತು ಅಲ್ಮೆಡಾ (Gary & Almeda) ಅವರ ದಾಂಪತ್ಯ ಜೀವನ ಸಂತಸದಿಂದ ತುಂಬಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಯೋತ್ಪಾದಕ ದಾಳಿ ನಡೆದಿದೆ. ಅಮಿರಾ ಕಡಲ್ ನ ಹರಿ ಸಿಂಗ್ ಹೈ ಸ್ಟ್ರೀಟ್ ಪ್ರದೇಶದಲ್ಲಿ ಭಾನುವಾರ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗ್ರೆನೇಡ್ (Granade Attack) ಅನ್ನು ಎಸೆದಿದ್ದಾರೆ. ಈ ದಾಳಿಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಒಬ್ಬ ಪೊಲೀಸ್ ಸೇರಿದಂತೆ 24 ಜನರು ಗಾಯಗೊಂಡಿದ್ದಾರೆ. “ಸಂಜೆ 4:20ರ ಸುಮಾರಿಗೆ, ಹರಿ ಸಿಂಗ್ ಹೈ ಸ್ಟ್ರೀಟ್ನಲ್ಲಿ ನಿಯೋಜಿಸಲಾಗಿದ್ದ ಪೊಲೀಸರು ಮತ್ತು ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗ್ರೆನೇಡ್ನಿಂದ ದಾಳಿ ನಡೆಸಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಾಯಾಳುಗಳನ್ನು ಶ್ರೀ ಮಹಾರಾಜ ಹರಿ ಸಿಂಗ್ ಆಸ್ಪತ್ರೆಗೆ (Maharaja Hari Singh Hospital) ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಉಗ್ರರನ್ನು (Terror Attack) ಬಂಧಿಸುವ ಪ್ರಯತ್ನ ಮುಂದುವರಿದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಘಟನೆಯಲ್ಲಿ ಓರ್ವ ಪೊಲೀಸ್ ಸೇರಿದಂತೆ 24 ಮಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದರೆ. ಗಾಯಾಳುಗಳನ್ನು ಶ್ರೀ ಮಹಾರಾಜ ಹರಿ ಸಿಂಗ್…
ಸಿರಾ: ಉಕ್ರೇನ್ ನಲ್ಲಿ ಎಂಬಿಬಿಎಸ್ನ ಓದುತ್ತಿದ್ದ ವಿದ್ಯಾರ್ಥಿಗಳು ಭಾರತಕ್ಕೆ ಬಂದು ತಲುಪಿದ್ದಾರೆ. ಮಕ್ಕಳು ಆಗಮಿಸುತ್ತಿದ್ದಂತೆಯೇ ಪೋಷಕರು ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ. ಸಿರಾ ನಗರದ ವಿದ್ಯಾರ್ಥಿನಿ ನಗರದ ಪ್ರಿಯಾಂಕ ಮತ್ತು ಮತ್ತೊಬ್ಬ ವಿದ್ಯಾರ್ಥಿ ಸಿರಾ ನಗರದ ಸಪ್ತಗಿರಿ ಬಡಾವಣೆಯ ತ್ರಿಶಾಂಕ ಸುರಕ್ಷಿತವಾಗಿ ಭಾರತಕ್ಕೆ ವಾಪಸ್ ಆಗಿದ್ದಾರೆ. ಮಕ್ಕಳ ಆಗಮನದಿಂದ ಪೋಷಕರು ತೀವ್ರ ಸಂತದ ವ್ಯಕ್ತಪಡಿಸಿದ್ದಾರೆ. ಉಕ್ರೇನ್ ದೇಶದ ವಿವಿಧ ವಿವಿಯಲ್ಲಿ ಎಂಬಿಬಿಎಸ್ ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಯುದ್ಧ ಭೀತಿ ಆವರಿಸಿದಾಗ ಪೋಷಕರ ಒತ್ತಾಯಕ್ಕೆ ಮಣಿದು ಉಕ್ರೇನ್ ನಿಂದ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಅಲ್ಲಿಂದ. ಸಿರಾಕ್ಕೆ ವಾಪಸ್ ಆಗಮಿಸಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಉಕ್ರೇನ್ ದೇಶದಿಂದ ಮರಳಿ ಸುರಕ್ಷಿತವಾಗಿ ಮನೆಗೆ ತಲುಪಿರುವ ವಿದ್ಯಾರ್ಥಿಗಳ ಮನೆಗೆ ಕೇಂದ್ರ ಸಚಿವರಾದ ನಾರಾಯಣಸ್ವಾಮಿ, ಶಾಸಕ ಡಾ.ರಾಜೇಶ್ ಗೌಡ, ತಹಶೀಲ್ದಾರ್ ಮಮತಾ ಮತ್ತಿತರರು ಭೇಟಿ ನೀಡಿದರು. ಮುಂದಿನ ವಿದ್ಯಾಭ್ಯಾಸದ ಕುರಿತು ಸರ್ಕಾರದಿಂದ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಭರವಸೆಯನ್ನು ಇದೇ ಸಂದರ್ಭದಲ್ಲಿ ನೀಡಿದರು. ವರದಿ: ಎ.ಎನ್. ಪೀರ್…
ಉಕ್ರೇನ್ ನಲ್ಲಿ ಪರಿಸ್ಥಿತಿ ದಿನೇ ದಿನೇ ಹದಗೆಡುತ್ತಿದೆ. ಉನ್ನತ ವಿದ್ಯಾಭ್ಯಾಸಕಾಗಿ ಉಕ್ರೇನ್ ಗೆ ತೆರಳಿದ್ದ ಅದೆಷ್ಟೋ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ (Ukraine)ಸಿಲುಕಿದ್ದರು. ಇದೀಗ ಆ ವಿದ್ಯಾರ್ಥಿಗಳನ್ನು ಮರಳಿ ತಾಯ್ನಾಡಿಗೆ ಕರೆ ತರುವ ಕೆಲಸ ನಡೆಯುತ್ತಿದೆ. ಇಂದು ಕೂಡಾ ಉಕ್ರೇನ್ ನಿಂದ ೩೭ ವಿದ್ಯಾರ್ಥಿಗಳ ತಂದ ಬೆಂಗಳೂರಿಗೆ ಬಂದಿಳಿದಿದೆ (Studnts returned from Ukraine). ಈ ಸಂದರ್ಭದಲ್ಲಿ ತಮ್ಮ ಮಕ್ಕಳನ್ನು ಕಂಡು ಪೋಷಕರು ಕಣ್ಣೀರು ಹಾಕಿದ್ದಾರೆ. ರಷ್ಯಾ ಉಕ್ರೇನ್ ವಿರುದ್ಧ ಯುದ್ಧ (Russia Ukraine War) ಸಾರಿದ ದಿನದಿಂದ ಉಕ್ರೇನ್ ನಲ್ಲಿ ಜನರ ಸ್ಥಿತಿ ದುಸ್ತರವಾಗಿದೆ. ಈ ನಡುವೆ ಉನ್ನತ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ ಗೆ ತೆರೆಳಿದ್ದ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿ ಕರೆ ತರುವ ಜವಾಬ್ದಾರಿ ಕೂಡಾ ಸರ್ಕಾರದ ಮೇಲಿತ್ತು (Studnts returned from Ukraine). ಈ ಬಗ್ಗೆ ಸರ್ಕಾರ ಸತತ ಪ್ರಯತ್ನಗಳನ್ನು ನಡೆಸುತ್ತಲೇ ಇದೆ. ಅನೇಕ ವಿದ್ಯಾರ್ಥಿಗಳು ಈಗಾಗಲೇ ದೇಶಕ್ಕೆ ಮರಳಿದ್ದಾರೆ. ಇಂದು ಕೂಡಾ ರಾಜ್ಯದ ೩೭ ವಿದ್ಯಾರ್ಥಿಗಳು ವಾಪಾಸಾಗಿದ್ದಾರೆ.…
ಪಾವಗಡ: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಕರ್ನಾಟಕ ರಾಜ್ಯದ ನೋಂದಾಯಿತ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ತಾಲ್ಲೂಕು ಕಸಬಾ ಹೋಬಳಿಯ ಕನ್ನಮೇಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷ್ಣಗಿರಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಶ್ರೀ ಭಗತ್ ಸಿಂಗ್ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ನಡೆಸಲಾಯಿತು. ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕೃಷ್ಣಗಿರಿ ಜೂಲಪ್ಪನಹಟ್ಟಿ, ಆಲದಮರದ ಹಟ್ಟಿ, ಗ್ರಾಮಗಳ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಈ ಶಿಬಿರದ ಸದುಪಯೋಗ ಪಡೆದುಕೊಂಡರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಮಿಕ ನಿರೀಕ್ಷಕ ಶ್ರೀ ಅಬ್ದುಲ್ ರವೂಫ್, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಗಾಳಿ-ಮಳೆ ಧೂಳಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಅವರ ಆರೋಗ್ಯದ ರಕ್ಷಣೆಗಾಗಿ ಸರ್ಕಾರ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ದುಡಿದು ಸಂಸಾರವನ್ನು ನಿರ್ವಹಿಸುವಂತಹ ಕಾರ್ಮಿಕ ಅನಾರೋಗ್ಯಕ್ಕೆ ತುತ್ತಾದರೆ ಕುಟುಂಬವು ಕಷ್ಟಕ್ಕೆ ತುತ್ತಾಗುತ್ತಾರೆ. ಆದ್ದರಿಂದ …
ಕೊರಟಗೆರೆ: ಪಟ್ಟಣದ ರಾಮೇಶ್ವರ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಘದ ವತಿಯಿಂದ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ ಗ್ರಾಮೀಣ ಹೆಣ್ಣುಮಕ್ಕಳಿಗೆ ತುಳಸಿಕಟ್ಟೆ ವಿತರಣೆ ಮಾಡಲಾಗಿತ್ತು. ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಕಾವ್ಯ ಶ್ರೀ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಗ್ರಾಮೀಣ ಭಾಗದ ಹೆಣ್ಣು ಮಕ್ಕಳಿಗೆ ಸ್ವಂತ ದುಡಿಮೆಗೆ ಅನುಕೂಲವಾಗುವಂತೆ ಹೆಣ್ಣುಮಕ್ಕಳಿಗೆ ಅನೇಕ ಅನುಕೂಲಗಳನ್ನು ಮಾಡಿಕೊಡುತ್ತಿದೆ ಎಂದರು. ಮದುವೆಯಾಗಿ ಗಂಡನ ಮನೆಗೆ ಬಂದಿರುವ ಹೆಣ್ಣು ಮಕ್ಕಳು ಮನೆಯಲ್ಲಿಯೇ ಇರಬೇಕಿತ್ತು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವದ್ಧಿ ಸಂಸ್ಥೆಯ ವತಿಯಿಂದ ಅಂತಹ ಹೆಣ್ಣು ಮಕ್ಕಳು ಸ್ವಾವಲಂಬಿ ಆಗಲು ಅನೇಕ ಯೋಜನೆಗಳನ್ನು ರೂಪಿಸಿದೆ. ಅವರ ಸ್ಕೂಲಿಗಾಗಿ ಸಂಸ್ಥೆ ವತಿಯಿಂದ ಲೋನ್ ಕೂಡ ಕೊಡಲಾಗುತ್ತಿದೆ. ಹೆಣ್ಣುಮಕ್ಕಳಿಗೆ ಲೋನ್ ಕೊಡುವುದರಿಂದ ಸರಿಯಾದ ಸಮಯಕ್ಕೆ ತಿರುಗಿಸುತ್ತಾರೆ ಹಾಗೆಯೇ ಆ ಹಣದಿಂದ ತಮ್ಮ ಉತ್ತಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಹೀಗೆ ಮುಂದುವರಿಯಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಯೋಜನಾಧಿಕಾರಿ ಬಾಲಕೃಷ್ಣ ಮಾತನಾಡಿ…