Subscribe to Updates
Get the latest creative news from FooBar about art, design and business.
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
- ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
- ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
- ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
- ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
- ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
Author: admin
ತಿಪಟೂರು: ಧಾರ್ಮಿಕ ನಾಡು ಎಂದು ಹೆಸರಾಗಿರುವ ಹಾಲುಕುರಿಕೆಯ ಅಮಾನಿಕೆರೆ ಕೆರೆ ಮೈದುಂಬಿ ಕೋಡಿ ಹರಿದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಗಂಗಾಮಾತೆಗೆ ಬಾಗಿನ ಸಮರ್ಪಿಸಿದರು. ತಿಪಟೂರು ತಾಲೂಕಿನ ಎರಡನೇ ಅತಿ ದೊಡ್ಡ ಕೆರೆಯಾದ ಹಾಲುಕುರಿಕೆ ಕೆರೆಯು ಸರಿಸುಮಾರು 440 ಎಕರೆ ಇದ್ದು. ಸುಮಾರು12 ವರ್ಷದ ನಂತರ ಕೋಡಿ ಹರಿದಿದೆ. ಹೀಗಾಗಿ ಗ್ರಾಮಸ್ಥರು ಸಿಡಿಮದ್ದ ಸಿಡಿಸಿ ಸಂಭ್ರಮಿಸಿದರು. ಗ್ರಾಮ ದೇವತೆಗಳಾದ ಶ್ರೀ ಕೆಂಪಮ್ಮ ಮತ್ತು ಶ್ರೀ ಪ್ಲೇಗಿನಮ್ಮ ದೇವರುಗಳ ಸಮಕ್ಷಮದಲ್ಲಿ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಅವರು ಗಂಗಾಮಾತೆಗೆ ಬಾಗಿನ ಸಮರ್ಪಿಸಿದರು. ಕಾರ್ಯಕ್ರಮದಲ್ಲಿ ತಾಲೂಕಿನ ಹಲವು ಮುಖಂಡರುಗಳು, ಹಾಲುಕುರಿಕೆ ಗ್ರಾಮಸ್ಥರು ಮತ್ತು ಅಕ್ಕ ಪಕ್ಕದ ಊರಿನ ಗ್ರಾಮಸ್ಥರು ಭಾಗಿಯಾಗಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ದೇಶದಾದ್ಯಂತ ಗಣೇಶ ಚತುರ್ಥಿ ಸಮೀಪಿಸುತ್ತಿರುವ ಹಿನ್ನೆಲೆ ಗಣೇಶ ವಿಗ್ರಹ ಮೂರ್ತಿಗಳ ಬೇಡಿಕೆ ಹೆಚ್ಚಾಗಿದ್ದು, ಕರ್ನಾಟಕದಲ್ಲಿಯೂ ವಿಶೇಷ ರೀತಿಯ ಗಣಪತಿ ವಿಗ್ರಹ ಮೂರ್ತಿ ಗಳಿಗೆ ಭಾರಿ ಬೇಡಿಕೆ ಇದೆ. ಇತ್ತ ತಿಪಟೂರಿನಲ್ಲಿ ಈ ಬಾರಿ ಪುನೀತ್ ರಾಜ್ ಕುಮಾರ್ ರವರೊಂದಿಗೆ ಇರುವ ಗಣಪತಿ ಗಳಿಗೆ ಭಾರೀ ಬೇಡಿಕೆ ಸೃಷ್ಟಿಯಾಗಿದೆ. ಡಾ.ರಾಜ್ ಪುನೀತ್ ರಾಜ್ ಕುಮಾರ್ ರವರ ಗೆಳೆಯರ ಬಳಗದ ವತಿಯಿಂದ ಈ ಬಾರಿ ತಿಪಟೂರಿನಲ್ಲಿ ಪುನೀತ್ ರಾಜ್ ಕುಮಾರ್ ರೊಂದಿಗೆ ಇರುವ ಗಣಪತಿಯನ್ನು ಮಾಡಿಸಿ ವಿಶೇಷ ಉತ್ಸವಕ್ಕೆ ಯುವಕರು ತಯಾರಾಗಿದ್ದಾರೆ. ಪುನೀತ್ ರಾಜ್ ಕುಮಾರ್ ಗೆಳೆಯರ ಬಳಗದ ಸದಸ್ಯ ಸೂರ್ಯಪ್ರಕಾಶ್ ಮಾಧ್ಯಮದೊಂದಿಗೆ ಮಾತನಾಡಿ, ಈ ಬಾರಿಯ ಗಣೇಶೋತ್ಸವ ನಮ್ಮ ಪುನೀತ್ ಅಣ್ಣನವರು ಇಲ್ಲದ ಕಾರಣ ಅವರ ಸ್ಮರಣಾರ್ಥವಾಗಿ ಗಣಪತಿಯೊಂದಿಗೆ ಅವರ ವಿಗ್ರಹ ಮೂರ್ತಿಯನ್ನು ಮಾಡಿಸಲಾಗಿದೆ ಎಂದು ತಿಳಿಸಿದರು. ಗಣಪತಿ ವಿಗ್ರಹ ಮೂರ್ತಿ ಮಾಡಿದ ಚೇತನ್ ಅವರು ಮಾಧ್ಯಮದೊಂದಿಗೆ ಮಾತನಾಡಿ, ನಾವು ನಮ್ಮ ತಂದೆ ಕಳೆದ ಮೂವತ್ತು ವರ್ಷಗಳಿಂದ ಗಣಪತಿಗಳನ್ನು ಮಾಡಿಕೊಂಡು ಬಂದಿದ್ದು, ತಿಪಟೂರು…
ಪತ್ರಕರ್ತರೆಂದು ಹೇಳಿಕೊಂಡು ಗೂಡ್ಸ್ ಗಾಡಿ ಅಡ್ಡಗಟ್ಟಿ ವ್ಯಕ್ತಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಮಕನಮರಡಿ ಪೊಲೀಸರು ನಾಲ್ವರು ನಕಲಿ ಪತ್ರಕರ್ತರನ್ನು ಬಂಧಿಸಿದ್ದಾರೆ. ಗುರುರಾಜ್ ಹುಕ್ಕೇರಿ ಎಂಬುವವರು ತಮ್ಮ ಗೂಡ್ಸ್ ವಾಹನದಲ್ಲಿ ಜೋಳದ ಪಿಡ್ಸ್ ಲೋಡ್ ಮಾಡಿಕೊಂಡು ಕೊನ್ನೂರಿನಿಂದ ಹೆಬ್ಬಾಳಕ್ಕೆ ಹೊರಟಾಗ ಟಾಟಾ ಇಂಡಿಗೋ ಕಾರ್ ಗಾಡಿ ಬಂದ ನಾಲ್ವರು ದುಷ್ಕರ್ಮಿಗಳು ಗೂಡ್ಸ್ ಗಾಡಿ ಅಡ್ಡಗಟ್ಟಿ ಬೆದರಿಕೆಯೊಡ್ದಿದ್ದಾರೆ. ನಾವು ಪತ್ರಕರ್ತರು ಎಂದು ಹೇಳಿಕೊಂಡು ನಿಮ್ಮ ಗಾಡಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದೀರಿ ಅಂದು ಫುಡ್ ಇನ್ಸ್ಪೆಕ್ಟರ್ ಮತ್ತು ಪೊಲೀಸರಿಗೆ ದೂರು ಕೊಟ್ಟು ಗಾಡಿ ಶೀಜ್ ಮಾಡಿಸುತ್ತೇವೆ ಎಂದು ಅವಾಜ್ ಹಾಕಿದ್ದಲ್ಲದೇ ಅವಾಚ್ಯ ಶಬ್ಧಗಳಿಂದ ಬೈದು ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಗುರುರಾಜ್ ಶಿವಾನಂದ್ ಯಮಕನಮರಡಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಯಮಕನಮರಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಐಪಿಸಿ ಸೆಕ್ಷನ್ 506, 341, 384, 34, 506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ…
ಪಿಎಸ್’ಐ ನೇಮಕಾತಿ ಅಕ್ರಮ ಸಂಬಂಧ ಸಿಐಡಿ ಅಧಿಕಾರಿಗಳ ಬೇಟೆ ಮುಂದುವರೆದಿದೆ. ಇಂದು ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ. ಜಿಲ್ಲೆಯ ಅಳಂದ ತಾಲೂಕಿನ ಹಿರೋಳಿ ಗ್ರಾಮದಲ್ಲಿ ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಆರೋಪಿ ರಚನಾ ಎಂಬಾಕೆಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ರಚನಾ ಪಿಎಸ್’ಐ ನೇಮಕಾತಿ ಪರೀಕ್ಷೆಯಲ್ಲಿ ಮಹಿಳಾ ಕೋಟಾದಲ್ಲಿ ಮೊದಲ ರ್ಯಾಂಕ್ ಪಡೆದಿದ್ದರು. ರಚನಾ ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಳಿಕ ಆರೋಪಿ ರಚನಾ ನಾಪತ್ತೆಯಾಗಿ ಮಹಾರಾಷ್ಟ್ರ ಸೇರಿದಂತೆ ವಿವಿಧ ಸ್ಥಳಗಳಲ್ಲಿ ತಲೆ ಮರೆಸಿಕೊಂಡಿದ್ದರು. ರಚನಾ ಪತ್ತೆಯಾಗಿ ಬಲೆ ಬೀಸಿದ್ದಂತ ಸಿಐಡಿ ಅಧಿಕಾರಿಗಳು ಇದೀಗ ಕಲಬುರ್ಗಿಯ ಅಳಂದದ ಹಿರೋಳಿ ಗ್ರಾಮದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಲಬುರ್ಗಿಯ 5ನೇ ಜೆಎಂಎಫ್ ಸಿ ಕೋರ್ಟ್ ಮುಂದೆ ಹಾಜರುಪಡಿಸಲಾಗಿದೆ. ಇಂದು ರಾತ್ರಿ ಬೆಂಗಳೂರಿಗೆ ಸಿಐಡಿ ಪೊಲೀಸರು ಆರೋಪಿ ರಚನಾ ಕರೆತರೋ ಸಾಧ್ಯತೆ ಇದೆ. ರಚನಾ ಮೂಲತಃ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ನಿವಾಸಿಯಾಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಚಿತ್ರದುರ್ಗ: ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ . ಇತ್ತ ಮಠದ ಆಡಳಿತಾಧಿಕಾರಿ ಬಸವರಾಜನ್ ವಿರುದ್ಧವೂ ಅತ್ಯಾಚಾರ ಯತ್ನ ಪ್ರಕರಣ ದಾಖಲಾಗಿದೆ. ಇದರ ನಡುವೆ ಮುರುಘಾ ಶ್ರೀಗಳ ಮೇಲೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ, ಚಿತ್ರದುರ್ಗದ ಮುರುಘಾ ಮಠದಲ್ಲಿ ಶ್ರೀಗಳು ಸಲಹಾ ಸಮಿತಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮುರುಘಾಶ್ರೀ, ನಾನು ಸಮರಕ್ಕೂ ಸಿದ್ಧ, ಸಂಧಾನಕ್ಕೂ ಸಿದ್ಧ ಎಂದು ಆಪ್ತರೆದುರು ಮನದ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ಸಲಹಾ ಸಮಿತಿ ಸಭೆಯಲ್ಲಿ ಭಕ್ತರು, ವಕೀಲರು, ವಿವಿಧ ಸಮಾಜಗಳ ಮುಖಂಡರು ಸೇರಿ ಹಲವರು ಭಾಗಿಯಾಗಿದ್ರು. ಸಲಹಾ ಸಮಿತಿ ಸಭೆ ಬಳಿಕ ಮಾತನಾಡಿದ ಮುಖಂಡರು, ನೇರವಾಗಿ ಮಾಜಿ ಶಾಸಕ ಬಸವರಾಜನ್ ವಿರುದ್ಧ ಷಡ್ಯಂತ್ರದ ಆರೋಪ ಮಾಡಿದ್ದಾರೆ. ಆದರೆ ಮುರುಘಾಶ್ರೀ, ಸಭೆಯಲ್ಲಿ ತಮ್ಮ ಆಪ್ತರೆದುರು ನಾನು ಸಮರಕ್ಕೂ ಸಿದ್ಧ, ಸಂಧಾನಕ್ಕೂ ಸಿದ್ಧ ಎಂದಿದ್ದಾರೆ. ತಪ್ಪು ಒಪ್ಪಿಕೊಂಡು ಬಂದರೆ ಕ್ಷಮಿಸಿ ಸಂಧಾನ ಮಾಡೋಣ. ಕಾನೂನು ಸಮರಕ್ಕೆ ಸೈ ಅಂದ್ರೆ ಕಾನೂನು ಮೂಲಕವೇ ಹೋರಾಟ…
ದೆಹಲಿ : ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವು ಪ್ರಕರಣ ಸಂಬಂಧಿಸಿದ ಗೋವಾ ಪೊಲೀಸರಿಂದ ಪಬ್ ಓನರ್, ಡ್ರಗ್ ಪೆಡ್ಲರ್ ಬಂಧಿಸಲಾಗಿದೆ. ಬಂಧಿತ ಕ್ಲಬ್ ಮಾಲೀಕನನ್ನ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಬಾತ್ರೂಮ್ನಲ್ಲಿ ಮಾದಕ ವಸ್ತು ಸಿಕ್ಕಿದೆ. ಸೋನಾಲಿ ತಮ್ಮ ಸಹಾಯಕರ ಸಹಾಯದಿಂದ ಡ್ರಗ್ ಪಡೆದುಕೊಂಡಿದ್ದಳು. ಡ್ರಗ್ ಪಡೆದ ನಂತರ ಅವರು ಇಬ್ಬರ ಭುಜವನ್ನ ಹಿಡಿದುಕೊಂಡು ಕ್ಲಬ್ನಲ್ಲಿ ನಡೆದಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದರ ಆಧಾರದ ಮೇಲೆ ತನಿಖೆಯನ್ನ ಆರಂಭಿಸಿದ್ದೇವೆ ಎಂದು ಗೋವಾ ಪೊಲೀಸರು ಮಾಹಿತಿ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ: ತಾಲ್ಲೂಕಿನ ಗೊರವನಹಳ್ಳಿ -ತೀತಾ ಗ್ರಾಮಗಳ ಮಧ್ಯೆ ಹಾದು ಹೋಗಿರುವ ತೀತಾ ಜಲಾಶಯದ ಕೋಡಿ ಹಳ್ಳಕ್ಕೆ ನಿರ್ಮಿಸಿರುವ ರಸ್ತೆಯ ಸೇತುವೆ ಕುಸಿದು ವಾಹನ ಸಂಚಾರ ಸ್ಥಗಿತಗೊಂಡಿದೆ. ಕೊರಟಗೆರೆಯಿಂದ ದೊಡ್ಡಬಳ್ಳಾಪುರ ರಸ್ತೆ ಇದಾಗಿದ್ದು, ತಾಲ್ಲೂಕಿನಲ್ಲಿ ಸುರಿದ ಅತಿಯಾದ ಮಳೆ ಹಾಗೂ ತೀತಾ ಜಲಾಶಯವು ಕೋಡಿ ಬಿದ್ದು ನೀರು ರಸ್ತೆಯ ಮೇಲೆ ಹರಿದು, ಸೇತುವೆಯಲ್ಲಿ ಕುಸಿತ ಕಂಡು ಬಂದಿದೆ. ಇದರಿಂದ ಕೋಳಾಲ ಮಾರ್ಗವಾಗಿ ಗೊರವನಹಳ್ಳಿ ಲಕ್ಷ್ಮಿ ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ಹಾಗೂ ಮಾವತ್ತೂರು ದೊಡ್ಡಸಾಗ್ಗೆರೆ ಸುತ್ತಮುತ್ತಲ ಭಾಗದ ಜನರು ಕೊರಟಗೆರೆಗೆ ಪ್ರಯಾಣಿಸಲು ತೀವ್ರ ತೊಂದರೆ ಉಂಟಾಗಿದ್ದು, ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕಿದೆ. ಕೂಡಲೇ ಕುಸಿದಿರುವ ಸೇತುವೆಯನ್ನು ದುರಸ್ಥಿಗೊಳಿಸಿ ಈ ಭಾಗದ ಜನರು ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಸಂಪರ್ಕಿಸುವ ಈ ರಸ್ತೆಯ ಸೇತುವೆ ಕುಸಿದಿರುವ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಲೋಕೋಪಯೋಗಿ ಇಲಾಖೆಯ ಎಇಇ ಮಲ್ಲಿಕಾರ್ಜುನಯ್ಯ ಭೇಟಿ ನೀಡಿ ಪರಿಶೀಲಿಸಿ ಆದಷ್ಟು ಬೇಗ…
ತುಮಕೂರು: ಪಟ್ಟಣದ ಚಿಲುಮೆ ಪೊಲೀಸ್ ಸಮುದಾಯದ ಭವನದಲ್ಲಿ ಪೊಲೀಸ್ ಅಧೀಕ್ಷಕರಾದ ಶ್ರೀ ರಾಹುಲ್ ಕುಮಾರ್ ಶಹಪೂರ್ ವಾಡ್, ರವರ ಮಾರ್ಗದರ್ಶನದಲ್ಲಿ ಗೌರಿ-ಗಣೇಶ ಹಬ್ಬದ ಪ್ರಯುಕ್ತ ನಗರದ ಎಲ್ಲಾ ಸಮುದಾಯದ ಮುಖಂಡರುಗಳನ್ನು ಹಾಗೂ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪನೆ ಮಾಡುವ ಮುಖಂಡರವರನ್ನ ಕರೆಸಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಶಾಂತಿ ಸಭೆ ನಡೆಸಲಾಯಿತು. ಗಣಪತಿ ಕೂರಿಸಲು ಯಾವ ಯಾವ ರೀತಿಯಲ್ಲಿ ಕ್ರಮ ಅನುಸರಿಸಬೇಕೆಂದು ತಿಳಿಸಲಾಯಿತು.ಈ ಸಭೆಯಲ್ಲಿ ಇಲಾಖೆಗಳ ಮುಖ್ಯಸ್ಥರು ಭಾಗವಹಿಸಿದ್ದರು. ಈ ಸಭೆಯಲ್ಲಿ ಮಾನ್ಯ ನಗರ ಶಾಸಕರು,ಪೊಲೀಸ್ ಅಧಿಕ್ಷಕರು, ಹೆಚ್ಚವರಿ ಪೊಲೀಸ್ ಅದೀಕ್ಷಕರು, ಮಹಾನಗರಪಾಲಿಕೆಯ ಕಮಿಷನರ್ ರವರು, ಬೆಸ್ಕಾಂ ಅಧಿಕಾರಿಗಳು, ಅಗ್ನಿಶಾಮಕ ಠಾಣೆಯ ಮುಖ್ಯಸ್ಥರು, ಹಾಗೂ ಬೇರೆ ಬೇರೆ ಇಲಾಖೆಯ ಮುಖ್ಯಸ್ಥರು ಭಾಗವಹಿಸಿದರು, ನಗರ ಡಿಎಸ್ಪಿ ಶ್ರೀನಿವಾಸ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು ಮತ್ತು ನಗರದ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು. ಅನುಮತಿ ಇಲ್ಲದೆ ಯಾವುದೇ ಫ್ಲೆಕ್ಸ್ ಅಳವಡಿಸುವಂತಿಲ್ಲ, ಸ್ಥಳೀಯ ಠಾಣೆಯಲ್ಲಿ ಫ್ಲೆಕ್ಸ್ ಡಿಸೈನ್ ಅನುಮತಿ ಕಡ್ಡಾಯ, ಕಾನೂನು ಭಂಗ ತರುವಂತಹ ಯಾವ ಫ್ಲೆಕ್ಸ್ ಗಳಿಗೂ…
ತುಮಕೂರು: ಇಲಾಖೆ ಪರ್ಮಿಷನ್ ತೆಗೆದುಕೊಂಡು ಮದರಸ ನಡೆಯುತ್ತಿದೆ. ಹೇಗೆ ಬೇರೆ ಬೇರೆ ಶಾಲೆಗಳ ಪರಿಸ್ಥಿತಿಗಳನ್ನ ಅವಲೋಕನ ಮಾಡ್ತೀವೋ ಹಾಗೇ ಮದರಸ ಕೂಡ ಮಾಡ್ತೀವಿ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದರಸಗಳ ಬಗ್ಗೆ ಪೋಷಕರಿಂದ ದೂರು ಇತ್ತು. ಅಲ್ಲಿ ಬೇರೆ ಬೇರೆ ವಿಷಯಗಳನ್ನ ಕಲಿಸುತ್ತಿಲ್ಲ ಅಂತಾ ದೂರು ಇತ್ತು. ಹಾಗಾಗಿ ಅಧಿಕಾರಿಗಳು ಹೋಗಿ ಚೆಕ್ ಮಾಡಿದ್ದಾರೆ. ವಸ್ತುಸ್ಥಿತಿ ಅರಿಯಲು ಅಧಿಕಾರಿಗಳನ್ನ ಕಳಿಸಿದ್ದೇನೆ ಎಂದರು. ಮದರಸದ ಮಕ್ಕಳನ್ನು ಇತರೆ ಮಕ್ಕಳ ಸಮಾನಕ್ಕೆ ತರಲು ಪ್ರಯತ್ನಿಸುತ್ತೇವೆ. 20 ಸಾವಿರ ಅಂಗನವಾಡಿಗಳಲ್ಲಿ ಎನ್.ಇ.ಪಿ. ಜಾರಿ ತರುತ್ತೇವೆ. ಮದರಸದಿಂದ ಬಂದ ವಿದ್ಯಾರ್ಥಿಗಳಿಗೆ ಗುಣಮಟ್ಟ ಇಲ್ಲಾ ಅಂತಾ ಮಕ್ಕಳು ಹೇಳಿಕೊಳ್ತಿದ್ದರು. ಮೇಲಿನ ತರಗತಿ ಪಾಠ ಅರ್ಥ ಆಗಲ್ಲ ಅಂತಾ ಹೇಳುತ್ತಿದ್ದರು ಎಂದು ಬಿ.ಸಿ.ನಾಗೇಶ್ ಹೇಳಿದರು. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ನಮ್ಮ ಅವಧಿಯಲ್ಲಿ ಯಾವುದೇ ಕಮೀಷನ್ ಇರಲಿಲ್ಲ. ಹಾಗೆ ಇದ್ದಿದ್ದು ಹೌದಾದರೇ ಮುಖ್ಯಮಂತ್ರಿಗಳು ನ್ಯಾಯಾಂಗ ತನಿಖೆ ಮಾಡಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು. ತುಮಕೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಮೀಷನ್ ಇದ್ದಿದ್ದು ಹೌದಾದರೇ ಮುಖ್ಯಮಂತ್ರಿಗಳು ನ್ಯಾಯಾಂಗ ತನಿಖೆ ಮಾಡಿಸಲಿ. ನ್ಯಾಯಾಂಗ ತನಿಖೆ ಆದರೆ ಎಲ್ಲಾ ಸತ್ಯಗಳು ಆಚೆ ಬರುತ್ತೆ ಎಂದರು. ಎಂಥೆಂಥಾ ಸೂಸೈಡ್ ಕೇಸ್ ಗಳಿಗೆ ನಿಮ್ಮ ಹತ್ರ ಸರ್ಕಾರ ಇದೆ ಅಂತೇಳಿ ಬಿ-ರಿಪೋರ್ಟ್ ಹಾಕ್ತೀರಾ. ಎಲ್ಲವನ್ನೂ ಮುಚ್ಚಾಕ್ತೀರಾ ಎಂದ ಅವರು, ಮೈತ್ರಿ ಸರ್ಕಾರದಲ್ಲೂ ಕಮಿಷನ್ ದಂಧೆ ಇತ್ತು ಅನ್ನೋ ಹೆಚ್ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿ, ಇದರ ಬಗ್ಗೆ ನನಗೆ ಗೊತ್ತಿಲ್ಲಾ, ಇದು ಅವರನ್ನೇ ಕೇಳಿ. ಕುಮಾರಸ್ವಾಮಿ ಒಪ್ಪಿಕೊಂಡ್ರು ಅಂತಾ ನಮಗೂ ಅವರಿಗೂ ಸಂಬಂಧ ಇಲ್ಲ ಎಂದರು. ಕೆ.ಹೆಚ್ ಮುನಿಯಪ್ಪ, ಸುಧಾಕರ್ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರ ಜಿಲ್ಲೆ ವಿಚಾರದಲ್ಲಿ ಏನೋ ಭೇಟಿಯಾಗಿದ್ದಾರೆ. ಮುನಿಯಪ್ಪ ಅವರು ನಮ್ಮ ಪಾರ್ಟಿಯ ದೊಡ್ಡ ಲೀಡರ್, ವರ್ಕಿಂಗ್ ಕಮಿಟಿ…