Subscribe to Updates
Get the latest creative news from FooBar about art, design and business.
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
- ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
- ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
- ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
- ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
- ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
Author: admin
ಕಲಬುರಗಿ: ಪೊಲೀಸರಿಂದ ತಪ್ಪಿಸಿಕೊಳ್ಳೋ ಭರದಲ್ಲಿ ಜಿಲ್ಲಾ ಆಸ್ಪತ್ರೆಯ ಮೂರನೇ ಮಹಡಿಯಿಂದ ಬಿದ್ದು ಆರೋಪಿ ಮೃತಪಟ್ಟ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮುನ್ನಾ ಅಲಿಯಾಸ್ ಶೇಖ್ ಸೋಹೆಲ್ ಮೃತ ಆರೋಪಿ. ದರೋಡೆ ಪ್ರಕರಣದಲ್ಲಿ ಈತನನ್ನು ಬ್ರಹ್ಮಪೂರ ಪೊಲೀಸರು. ಕೋರ್ಟ್ಗೆ ಹಾಜರಿಪಡಿಸುವ ಪೂರ್ವದಲ್ಲಿ ಕೋವಿಡ್ ತಪಾಸಣೆ ಅಗತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಈತನನ್ನು ತಪಾಸಣೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಕೋವಿಡ್ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಈತ. ಆಸ್ಪತ್ರೆಯ ಮೂರನೇ ಮಹಡಿ ಹತ್ತಿ ತಪ್ಪಿಸಿಕೊಳ್ಳುವ ವೇಳೆ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ.ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ನಗರದ ಗಾಲ್ಫ್ ಮೈದಾನದಲ್ಲಿ ಪತ್ಯಕ್ಷಗೊಂಡಿದ್ದ ಚಿರತೆಯನ್ನು ಹಿಡಿಯಲು ಹರಸಾಹಸ ಪಡುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಹಿಡಿಯುವ ನಿರತಂತರ ಪ್ರಯತ್ನದಲ್ಲಿ ತೊಡಗಿದ್ದಾರೆ.ಈಗಾಗಲೇ ಮೂರು ಬಾರಿ ಕಾಣಿಸಿಕೊಂಡಿರುವ ಚಿರತೆಯನ್ನು ಹಿಡಿಯಲು ತಂತ್ರಗಾರಿಕೆ ಹೂಡಿದ್ದಾರೆ. ಸಿದ್ಧಪಡಿಸಿದ ಮಾಸ್ಟರ್ ಪ್ಲಾನ್ನಂತೆ ಇಂದು 350 ಅರಣ್ಯ ಇಲಾಖೆ ಸಿಬ್ಬಂದಿಗಳು ಏಕಕಾಲದಲ್ಲಿ ಕಾರ್ಯಾಚರಣೆಗೆ ಇಳಿಯಲಿದ್ದಾರೆ. 250 ಎಕರೆ ಪ್ರದೇಶದಲ್ಲಿ ಸುಮಾರು 350 ಅರಣ್ಯ ಇಲಾಖೆ ಸಿಬ್ಬಂದಿಗಳು ಏಕಕಾಲದಲ್ಲಿ ಕೋಬಿಂಗ್ ಕಾರ್ಯಾಚರಣೆ ಆರಂಭಿಸಲಿದ್ದಾರೆ. ಕೋಬಿಂಗ್ ಕಾರ್ಯಾಚರಣೆ ಅಂದರೆ, ಒಂದು ಕಡೆಯಲ್ಲಿ ಬಲೆಯನ್ನು ಹಾಕಿ ಇನ್ನೊಂದು ಕಡೆಯಿಂದ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿ ಚಿರತೆಯನ್ನು ಬಲೆಗೆ ಹಾಕುವ ಪ್ಲಾನ್ ಅನ್ನು ರೂಪಿಸಿಕೊಂಡಿದ್ದಾರೆ. ಈಗಾಗಲೇ ಗಾಲ್ಫ್ ಮೈದಾನದ ತಡೆಗೋಡೆ ಸುತ್ತ ಸುಮಾರು ಮೂರು ಕಿ.ಮೀ. ವರೆಗೆ ಬಲೆಯನ್ನು ಹಾಕಲಾಗಿದೆ. ಹನುಮಾನ್ ನಗರ, ಜಾಧವ್ ನಗರ ಭಾಗದ ಕಡೆಗಳಲ್ಲಿ ಸಿಬ್ಬಂದಿಗಳು ಚಿರತೆ ಸೆರೆ ಹಿಡಿಯುವ ಬಲೆ ಹಾಕಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ಗದಗ: ನನಗೂ ಅಖಂಡ ಕರ್ನಾಟಕಕ್ಕೆ ಮುಖ್ಯಮಂತ್ರಿ ಆಗುವ ಯೋಗ್ಯತೆ ಇದೆ ಅಂತ ಅರಣ್ಯ ಖಾತೆ ಹಾಗೂ ಆಹಾರ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಅವರು ಮಾತನಾಡಿದ ಅವರು , 9 ಬಾರಿ ಶಾಸಕನಾಗಿ ನಾನು ಆಯ್ಕೆ ಆಗಿದ್ದು, ರಾಜ್ಯದ ಹಿರಿಯ ರಾಜಕಾರಣಿಯಾಗಿದ್ದೇನೆ ಹೀಗಾಗಿ ಕರ್ನಾಟಕದ ಮುಖ್ಯಮಂತ್ರಿ ಆಗಬೇಕು. ಇನ್ನೂ 15 ವರ್ಷ ನನ್ನ ರಾಜಕೀಯ ಜೀವನ ಇದೆ ಅಂತ ಹೇಳಿದರು. ಇನ್ನೂ ಇದೇ ವೇಳೆ ಅವರು ರಾಜ್ಯ ಸರ್ಕಾರದ 40% ಕಮೀಷನ್ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಅವರು ಉತ್ತರಿಸುತ್ತ, ಕೆಂಪಯ್ಯ ಯಾರು ಎಂಬುದು ಗೊತ್ತಿಲ್ಲ ಅಂತ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹಾಡು ಹಗಲೇ ವ್ಯಕ್ತಿಯೊಬ್ಬನ ರುಂಡವನ್ನ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ನಡೆದಿದೆ. ಗದಗಯ್ಯ ಹಿರೇಮಠ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದ ನಿವಾಸಿ ಕೊಲೆಯಾದ ದುರ್ದೈವಿ ಎನ್ನಲಾಗಿದೆ. ಬೈಕ್ ಮೇಲೆ ಹೊರಟಿದ್ದ ವ್ಯಕ್ತಿಯ ರುಂಡ ಕತ್ತರಿಸಿ ಕೊಲೆಗಾರರು ಪರಾರಿಯಾಗಿದ್ದಾರೆ. ಇನ್ನು ಮೃತ ದೇಹ ನೋಡಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪತಿ ಮೃತಪಟ್ಟ ಬೆನ್ನಲೆ, ಸೊಸೆ ಹಾಗೂ20 ದಿನದ ಮಗುವನ್ನು ಪತಿಯ ಕುಟುಂಬ ತಿರಸ್ಕರಿಸಿದ ಅಘಾತಕಾರಿ ಘಟನೆ ಉಡುಪಿಯಲ್ಲಿ ನಡೆದಿದೆ. ಒಂದು ಕಡೆ ಪತಿಯನ್ನು ಕಳಕೊಂಡು, ಇನ್ನೊಂದು ಕಡೆ 20 ದಿನದ ಮಗುವನ್ನು ಕಂಕುಳಲ್ಲಿ ಇಟ್ಟುಕೊಂಡ ಆ ಮಹಿಳೆಯ ಬಗ್ಗೆ ಪತಿಯ ಮನೆಯವರು ಅಮಾನವೀಯವಾಗಿ ವರ್ತಿಸಿದ್ದಾರೆ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ. ಬಳಿಕ ಸಮಾಜ ಸೇವಕರೊಬ್ಬರ ಕಾಳಜಿಯಿಂದ ಮಗು ಮತ್ತು ತಾಯಿಗೆ ಉಡುಪಿ ಬಳಿಯ ನಿಟ್ಟೂರಿನ ಸಖೀ ಕೇಂದ್ರದ ಆಶ್ರಯ ಕಲ್ಪಿಸಲಾಗಿದೆ. ಉಡುಪಿಯಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಬಾದಾಮಿ ಮೂಲದ ಅಯ್ಯಪ್ಪ (28) ಅವರು ಗುರುವಾರ ಅಕಾಲಿಕವಾಗಿ ಮೃತಪಟ್ಟಿದ್ದಾರೆ. ಗುರುವಾರ ಬೆಳಗ್ಗೆ ಅವರು ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದರು . ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯಘಾತಕ್ಕೆ ತುತ್ತಾಗಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು. ಅಯ್ಯಪ್ಪ ಎರಡು ವರ್ಷಗಳ ಹಿಂದೆ ಗಂಗಾವತಿಯ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದರು. ಇವರ ಮದುವೆಗೆ ಎರಡೂ ಕಡೆಯಿಂದಲೂ ವಿರೋಧವಿತ್ತು ಎನ್ನಲಾಗಿದೆ. ಅಯ್ಯಪ್ಪ ಅವರು…
ನವದೆಹಲಿ: ಹಾಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು ಆಗಸ್ಟ್ 26ರಂದು ನಿವೃತ್ತರಾದ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಲಲಿತ್ ಅವರಿಗೆ ಸಿಜೆಐ ಆಗಿ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಬೃಹನ್ಮಠದ ಡಾ. ಶಿವಮೂರ್ತಿ ಮುರಘಾ ಶರಣರಿಗೆ ಬಂಧನದ ಭೀತಿ ಎದುರಾಗಿದೆ. ಪೋಕೋ ಕಾಯ್ದೆಯಡಿ ಕೇಸ್ ದಾಖಲಾಗಿರುವುದರಿಂದ ಜಾಮೀನು ಸಿಗುವುದು ಕೂಡ ಕಷ್ಟವಾಗಲಿದೆ. ಎಫ್ಐಆರ್ನಲ್ಲಿ ಮುರುಘಾ ಮಠದ ಶ್ರೀಗಳನ್ನು A1, ಹಾಸ್ಟೆಲ್ ವಾರ್ಡನ್ ರಶ್ಮಿ A2, ಬಸವಾದಿತ್ಯ ಮರಿಸ್ವಾಮಿ A3 ಸೇರಿದಂತೆ 5 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಾರಂಭದಲ್ಲಿ ಪ್ರಭಾವಿ ಸ್ವಾಮೀಜಿಗಳ ವಿರುದ್ದ ಕೇಸ್ ದಾಖಲು ಮಾಡಲು ಅಧಿಕಾರಿಗಳು ಹಿಂದೇಟು ಹಾಕಿದ್ದರು ಎನ್ನಲಾಗಿದ್ದು, ಒಡನಾಡಿ ಸಂಸ್ಥೆಯವರು ಪ್ರಕರಣ ಸಂಬಂಧ ಡಿಸಿ ಗಮನಕ್ಕೆ ತಂದ ಬಳಿಕ ಸ್ವಾಮೀಜಿಗಳ ವಿರುದ್ದ ಕೇಸ್ ಅನ್ನು ಮಕ್ಕಳ ರಕ್ಷಣಾಧಿಕಾರಿಗಳು ನಜರ್ಬಾದ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿದ್ದಾರೆ ಎನ್ನಲಾಗಿದೆ. ಮಠದ ಉಚಿತ ಹಾಸ್ಟೆಲ್ ನಲ್ಲಿ ಇರುವ ಪ್ರೌಢಶಾಲೆಯ ಕೆಲವು ವಿದ್ಯಾರ್ಥಿನಿಯರಿಗೆ ಹಾಸ್ಟೇಲ್ ವಾರ್ಡ್ನ್ ಖುದ್ದು ಸ್ವಾಮಿಜಿಗಳಿಗೆ ಹೋಗಿ ಹಾಲು ನೀಡುವಂತೆ ಹೇಳುತ್ತಿದ್ದಳು ಎನ್ನಲಾಗಿದ್ದು, ಒಂದು ವೇಳೆ ಒಪ್ಪದೇ ಹೋದ್ರೆ ಅವ್ಯಾಚ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕುತ್ತಿದ್ದಳು ಎನ್ನಲಾಗಿದೆ. ಹಾಸ್ಟೆಲ್…
ತುಮಕೂರು: ಈ ಬಾರಿ ಸಣ್ಣ ಸಣ್ಣ ಸಮುದಾಯಗಳಿಗೆ ಟಿಕೇಟ್ ಕೊಡಬೇಕು ಅಂತಾ ಯೋಚನೆ ಮಾಡಿದ್ದೇವೆ. ಮುಂದಿನ ಚುನಾವಣೆಯಲ್ಲಿ ತಿಗಳ ಸಮುದಾಯದ ಇಬ್ಬರಿಗೆ ಜೆಡಿಎಸ್ ನಿಂದ ಟಿಕೇಟ್ ಕೊಡಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ತುಮಕೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ 40% ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಭ್ರಷ್ಟಾಚಾರ ಅನ್ನೋದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರ ಕಮಿಷನ್ ಅನ್ನೋದು ಉಡುಗೊರೆ ರೂಪದಲ್ಲಿ ನಡೆದುಕೊಂಡು ಬಂದಿದೆ. 2008ರಲ್ಲಿ ಬಿಜೆಪಿ ಸರ್ಕಾರ ಬಂದಾಗ ಅದು ಸ್ವೇಚ್ಚಾಚಾರವಾಗಿ ನಡೆಯಿತು. ಈ ಭ್ರಷ್ಟಾಚಾರವನ್ನ ಹೇಗಾದರೂ ಮಾಡಿ ನಿಲ್ಲಿಸಬೇಕು ಅನ್ನೋದರ ಬಗ್ಗೆ ಜನತೆಯೂ ಚಿಂತಿಸಿ ಸಿದ್ದರಾಗಬೇಕು ಎಂದರು. ನಾನು ಸಿಎಂ ಆಗಿದ್ದಾಗ ಪರ್ಸೆಂಟೇಜ್ ವ್ಯವಸ್ಥೆಯನ್ನ ನಿಲ್ಲಿಸಬೇಕು ಅಂತಾ ತಯಾರಾಗಿದ್ದೆ. ವೈಯಕ್ತಿವಾಗಿ ನಾನು ತೀರ್ಮಾನ ಮಾಡಿದ್ದೆ. ನನ್ನ ಅವಧಿಯ ಮೈತ್ರಿ ಸರ್ಕಾರದಲ್ಲೂ ಕಮಿಷನ್ ದಂಧೆ ನಡೆದಿತ್ತು. ಹಾಗಂತ ಜೆಡಿಎಸ್ ಸಚಿವರು ಯಾರೂ ಕಮಿಷನ್ ತಗೊತಿರಲಿಲ್ಲ ಎಂದರು.…
ತುಮಕೂರು: ಆರ್.ಎಸ್.ಎಸ್ ಸಿದ್ದಾಂತ, ದೇಶ ಭಕ್ತಿ ಜೊತೆಗೆ ನಾನಿದ್ದೀನಿ ಅಂತ ಈ ಹಿಂದೆಯೂ ನಾನು ಹೇಳಿದ್ದೇನೆ. ಸಿದ್ದರಾಮಯ್ಯ ಬಗ್ಗೆ ನಾನು ಏನು ಮಾತಾಡಲ್ಲ. ನಾವು ದೊಡ್ಡ ದೇಶ ಭಕ್ತಿಯ ಸಂಸ್ಥೆಯೊಂದಿಗೆ ಜೋಡಿಸಿಕೊಂಡಿದ್ದೇವೆ. ಸಿದ್ದರಾಮಯ್ಯ ಎಂಥಾ ಸಂಸ್ಥೆ ಜೊತೆ ಜೋಡಿಸಿಕೊಂಡಿದ್ದಾರೆ ಅಂತಾ ಗೊತ್ತು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದರು. ತುಮಕೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಆರ್.ಎಸ್.ಎಸ್ ಅನ್ನೋ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದರು. 40% ಕಮೀಷನ್ ಆರೋಪ ಮಾಡಿದ್ದ ಕೆಂಪಣ್ಣನ ವಿರುದ್ಧ ಕ್ರಮ ತೆಗೆದುಕೊಳ್ಳಲು ಸರ್ಕಾರ ಯಾವುದೇ ರೀತಿಯ ಹಿಂದೇಟು ಹಾಕುತಿಲ್ಲ. ಮುಂದಿನ ದಿನಗಳಲ್ಲಿ ಕಾದು ನೋಡಿ ಎಂದ ಅವರು, ಅರ್ಕಾವತಿ ಫೈಲ್ ರೀ ಓಪನ್ ಆಗೋದಕ್ಕೆ ನಿನ್ನೆ ಸಭೆಯಲ್ಲಿ ಚರ್ಚೆ ಆಗಿಲ್ಲ, ಆದರೇ 40% ಸುಳ್ಳು ಆರೋಪ ಬಗ್ಗೆ ಯಾವ ರೀತಿಯ ಕ್ರಮ ತೆಗೆದುಕೊಳ್ಳಬೇಕು ಅನ್ನೋ ಬಗ್ಗೆ ಚರ್ಚೆ ನಡೆದಿದೆ, ಈ ಸಂಬಂಧ ಮುನಿರತ್ನ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ತಿಳಿಸಿದ್ರು. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ…
ಮಾಯಿಲು ಫಿಲಮ್ಸ್ ಅರ್ಪಿಸುವ , ದಿವ್ಯ ಎಲ್ ಮೂಡಿಗೆರೆ ನಿರ್ಮಾಣದಲ್ಲಿ, ಕರಾವಳಿಯ ನಿರ್ದೇಶಕ ಜಯಂತ್ ನಿಟ್ಟಡೆ ಯವರ ಕಥೆ, ಹಾಗೂ ನಿರ್ದೇಶನದಲ್ಲಿ “ಬಾಯಿಲ್ಡ್ ರೈಸ್” ತುಳು ಕಿರುಚಿತ್ರ ಆಗಸ್ಟ್ 27ಕ್ಕೆ ಸಂಜೆ 6-00ಕ್ಕೆ Maayilu films ಯೂಟ್ಯೂಬ್ ಚಾನಲ್ನಲ್ಲಿ ಬಿಡುಗಡೆಯಾಗಲಿದೆ. ತುಳು ಕಿರುಚಿತ್ರಗಳಲ್ಲಿ ಇದುವರೆಗೂ ಹಾಸ್ಯವನ್ನೆ ನೋಡುತ್ತಿದ್ದ ಸಿನಿಪ್ರೀಯರಲ್ಲಿ ಇದೊಂದು ವಿಬಿನ್ನ ಕಥೆಯನ್ನೊಳಗೊಂಡ ಹೊಸ ಆಲೋಚನೆಗಳನ್ನು ಮೋಡಿಸುವ ಕಿರುಚಿತ್ರ ಇದು ಎನ್ನಲಾಗುತ್ತಿದೆ. ಜನರ ದೈನಂದಿನ ಜೀವನಾಧಾರಿತ ಕಿರುಚಿತ್ರ ಇದಾಗಿದ್ದು, ಶನಿವಾರ ಸಂಜೆ Maayilu Film ಯ್ಯುಟ್ಯೂಬ್ ಚಾನಲ್ ನಲ್ಲಿ ನೋಡಲೆ ಬೇಕಲ್ವೆ. ಚಿತ್ರ ವೀಕ್ಷಿಸಿ: ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz