Subscribe to Updates
Get the latest creative news from FooBar about art, design and business.
- ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್ ಜಿ ಯೋಜನೆ ಜಾರಿ : ಜಿಪಂ ಸಿಇಒ
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
- ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
- ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
- ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
- ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
- ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
Author: admin
ಬೆಂಗಳೂರು: ಇಂದು ನವದೆಹಲಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೆರಳಲಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿದೆ. ಸಂಸದೀಯ ಮಂಡಳಿ, ಕೇಂದ್ರೀಯ ಚುನಾವಣಾ ಸಮಿತಿಯಲ್ಲಿ ಸ್ಥಾನ ದೊರೆತ ಬಳಿಕ ಇದೇ ಮೊದಲ ಬಾರಿಗೆ ಅವರು ನವದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಪಕ್ಷದ ವರಿಷ್ಠರನ್ನು ಯಡಿಯೂರಪ್ಪ ಭೇಟಿಯಾಗಲಿದ್ದು, ಅವಕಾಶ ದೊರೆತಲ್ಲಿ ಪ್ರಧಾನಿ ಮೋದಿ ಅವರನ್ನು ಕೂಡ ಭೇಟಿ ಮಾಡಲಿದ್ದಾರೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ, ಸಚಿವ ಸಂಪುಟ ವಿಸ್ತರಣೆ, ಪಕ್ಷ ಸಂಘಟನೆ ಮೊದಲಾದ ವಿಚಾರಗಳ ಬಗ್ಗೆ ವರಿಷ್ಠರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿರುವ 40% ಕಮಿಷನ್ ಆರೋಪ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಪ್ರಕರಣಗಳ ತನಿಖೆ ನಡೆಸಲು ಲೋಕಾಯುಕ್ತ ಎಂಬ ಸ್ವಾಯತ್ತ ಸಂಸ್ಥೆ ಇದೆ ಇತ್ತೀಚೆಗೆ ಕರ್ನಾಟಕ ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರವನ್ನು ಲೋಕಾಯುಕ್ತಕ್ಕೆ ನೀಡಲಾಗಿತ್ತು. ಆ ಸಂಸ್ಥೆಯಲ್ಲಿ ಯಾರ ವಿರುದ್ಧವಾದರೂ ದೂರುಗಳನ್ನು ನೀಡುವ ಅಧಿಕಾರ ಎಲ್ಲರಿಗೂ ಇದೆ. ಆದರೆ, ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಇನ್ನು ಕೆಂಪಣ್ಣ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಕಮಿಷನ್ ಆರೋಪ ಮಾಡಿದ್ದಾರೆ. ಜೊತೆಗೆ ಎಲ್ಲಾ ಪಕ್ಷಗಳ ಶಾಸಕರು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಹೇಳುತ್ತಾರೆ. ಹಿಂದಿನ ಸರ್ಕಾರದಲ್ಲಿ ಈ ಹಗರಣವು ನಡೆದಿದ್ದವು ಆದರೆ ಏಕೆ ಬೆಳಕಿಗೆ ಬರಲಿಲ್ಲ ಎಂದು ಪ್ರಶ್ನಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ಬೆಳಗಾವಿ : ಜಿಲ್ಲೆಯಲ್ಲಿ ಮ್ಯಾನುವಲ್ ಸ್ಕ್ಯಾವೆಂಜರ್ಸ್ ಇಲ್ಲ ಆದರೆ ಅವರ ಅವಲಂಬಿತರಿಗೆ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ದೊರೆಯಬೇಕು ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸಫಾಯಿ ಕರ್ಮಚಾರಿ ಅಧ್ಯಕ್ಷರಾದ ಎಂ. ಶಿವಣ್ಣ ಕೋಟೆ ತಿಳಿಸಿದರು. ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ (ಆ.25) ನಡೆದ ಸಫಾಯಿ ಕರ್ಮಚಾರಿ/ ಪೌರ ಕಾರ್ಮಿಕರ ಕುಂದು ಕೊರತೆಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 2013ರ ಹಿಂದೆ ಈ ಕೆಲಸ ಮಾಡಿದವರು ಇನ್ನೂ ಪತ್ತೆ ಹಚ್ಚಲು ಆಗಿಲ್ಲ. ಗ್ರಾಮೀಣ ಭಾಗದಲ್ಲಿ ಈ ಹಿಂದೆ ಕೆಲಸ ಮಾಡಿದವರು ಅನೇಕರಿದ್ದಾರೆ. ಅಂತಹವರನ್ನು ಗುರುತಿಸಿ ಅವರಿಗೆ ಸರ್ಕಾರದ ಸೌಲಭ್ಯಗಳು ದೊರಕಿಸಬೇಕು ಎಂದು ಸಫಾಯಿ ಕರ್ಮಚಾರಿ ಜಿಲ್ಲಾ ಸದಸ್ಯ ವಿಜಯ ಹಿರಿಕಟ್ಟಿ ಮನವಿ ಮಾಡಿಕೊಂಡರು. ಮ್ಯಾನ್ಯುವಲ್ ಸ್ಕ್ಯಾವೆಂಜರ್ ಅಥವಾ ಅವರ ಅವಲಂಬಿತರು ಇದ್ದರೆ ಅಂತವರಿಗೆ ಕೌಶಲ್ಯ ತರಬೇತಿ, ಪುನರ್ವಸತಿ ಸೇರಿದಂತೆ ಅವಶ್ಯ ಸೌಲಭ್ಯಗಳನ್ನು ನೀಡಲಾಗುವುದು. ಈಗಾಗಲೇ ಅನೇಕ ಬಾರಿ ಸಮೀಕ್ಷೆ ನಡೆಸಿ, ಗುರುತಿಸಲಾಗುತ್ತಿದೆ. ಈ ಕಾರ್ಯದಲ್ಲಿ ತೊಡಗಿರುವ ಬಗ್ಗೆ ಸರಿಯಾದ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆಯಲ್ಲಿರುವ ರಾಷ್ಟ್ರೀಯ ಅಕಾಡೆಮಿ ಶಾಲೆಯಲ್ಲಿ ಕಸಬಾ ಹೋಬಳಿಯ ಕ್ರೀಡಾಕೂಟ ಆಯೋಜಿಸಲಾಯಿತು. ಶೆಟಲ್, ಖೋ ಖೋ , ಹೈಜಂಪ್, ಲಾಂಗ್ ಜಂಪ್ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರೀಯ ಅಕಾಡೆಮಿ ಶಾಲೆಯ ಶಿಕ್ಷಕರಾದ ಪರಮೇಶ್, ಕ್ರೀಡೆಯು ನಮ್ಮ ಜೀವನದ ಒಂದು ಪ್ರಮುಖ ಭಾಗವಾಗಿದೆ. ಇದು ದೈಹಿಕವಾಗಿ ಮತ್ತು ಮಾನಸಿಕವಾಗಿ ನಮ್ಮ ಅಭಿವೃದ್ಧಿಯ ಮೂಲವಾಗಿದೆ ಎಂದರು. ಕ್ರೀಡೆ ನಮ್ಮ ದೇಹದ ರಕ್ತ ಪರಿಚಲನೆಗೆ ಸಹಕಾರಿಯಾಗಿದೆ. ಮತ್ತೊಂದೆಡೆ ಇದು ನಮ್ಮ ಮೆದುಳಿನ ಬೆಳವಣಿಗೆಯಲ್ಲಿ ಪ್ರಯೋಜನಕಾರಿಯಾಗಿದೆ. ಕ್ರೀಡೆಗಳನ್ನು ವ್ಯಾಯಾಮದ ಅತ್ಯುತ್ತಮ ಸಾಧನವೆಂದು ಪರಿಗಣಿಸಲಾಗುತ್ತದೆ. ಯಶಸ್ವಿ ವ್ಯಕ್ತಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಾಗಿರಲು, ಮಾನಸಿಕ ಬೆಳವಣಿಗೆಯು ನಮ್ಮ ಶಾಲಾ ದಿನಗಳಿಂದ ಪ್ರಾರಂಭವಾಗುತ್ತದೆ. ಆದರೆ ದೈಹಿಕ ಬೆಳವಣಿಗೆಗೆ ವ್ಯಾಯಾಮವು ಕ್ರೀಡೆಯ ಮೂಲಕ ನಾವು ಪಡೆಯುತ್ತೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕರಾದ ಪರಮೇಶ್, ರಂಗನಾಥ್, ವಿಜಯ್ ಕುಮಾರ್ ನಾಯಕ, ಶಶಿಕಲಾ ಸೇರಿದಂತೆ ಇತರರು…
ತಿಪಟೂರು: ತಮಿಳುನಾಡು ಮೂಲದ ಪುಲ್ಲರ್ ಟೆನ್ ಇಂಡಿಯಾ ಗ್ರಾಮಶಕ್ತಿ ಮೈಕ್ರೋ ಫೈನಾನ್ಸ್ ಕಂಪನಿಯವರು ಸಂಘದ ಸದಸ್ಯರಿಗೆ ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿರುವ ಘಟನೆ ತಿಪಟೂರು ನಗರದ ಕಂಚಘಟ್ಟ ಗ್ರಾಮದಲ್ಲಿ ನಡೆದಿದೆ. ಗ್ರಾಮಶಕ್ತಿ ಹೆಸರಿನಲ್ಲಿ ರೈತರಿಗೆ ಮತ್ತು ಬಡ ಕುಟುಂಬಗಳಿಗೆ ಸಾಲ ಕೊಟ್ಟು ಕಂತುಗಳ ಮುಖಾಂತರ ಸಾಲ ವಸೂಲಿ ಮಾಡುವ ನೆಪದಲ್ಲಿ ಹಲವು ಸದಸ್ಯರ ಹಣವನ್ನು ಗುಳುಂ ಮಾಡಲಾಗಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಗ್ರಾಮಶಕ್ತಿ ಕ್ರೆಡಿಟ್ ಕಂಪನಿ ಲಿಮಿಟೆಡ್ ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಮ್ಯಾನೇಜರ್ ನಮಗೆ ನ್ಯಾಯ ಕೊಡಿ ಎಂದು ಸದಸ್ಯರು ಕೇಳಿಕೊಂಡರೆ ಉಡಾಫೆ ಉತ್ತರ ಕೊಟ್ಟು ಕಳಿಸುತ್ತಿದ್ದಾರೆ ಎಂದು ಸಾರ್ವಜನಿಕರು ಮತ್ತು ಸದಸ್ಯರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ದಯಮಾಡಿ ಸಂಬಂಧಪಟ್ಟಂತ ಅಧಿಕಾರಿಗಳು ಇತ್ತ ಗಮನಹರಿಸಿ ನ್ಯಾಯ ಒದಗಿಸಿ ಕೊಡಬೇಕೆಂದು ಸದಸ್ಯರು ಮತ್ತು ಸಾರ್ವಜನಿಕರು ಮನವಿ ಮಾಡಿದ್ದಾರೆ. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ತಿಪಟೂರು: ಕರ್ನಾಟಕ ರಾಜ್ಯದ ಭೋವಿ ಜನಾಂಗದ ಜಾಗೃತಿ ಸಮಾವೇಶವು ಸೆಪ್ಟಂಬರ್ 28ರ ಭಾನುವಾರ ಬೆಳಗ್ಗೆ 10 ಗಂಟೆಗೆ ತುಮಕೂರಿನ ಅಮಾನಿಕೆರೆ ಆವರಣದ ಗಾಜಿನ ಮನೆಯಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ರಾಜ್ಯ ಭೋವಿ ಸಮಾಜ ಉಪಾಧ್ಯಕ್ಷರಾದ ಶಶಿಧರ್ ಅಯ್ಯನ ಬಾವಿ ತಿಳಿಸಿದ್ದಾರೆ. ಕಾರ್ಯಕ್ರಮಕ್ಕೆ ಚಿತ್ರದುರ್ಗ ಭೋವಿ ಸಮಾಜದ ಜಗದ್ಗುರುಗಳಾದ ಇಮ್ಮಡಿ, ಸಿದ್ದರಾಮೇಶ್ವರ ಸ್ವಾಮೀಜಿಗಳು, ಸಿಎಂ ಬಸವರಾಜ ಬೊಮ್ಮಾಯಿ, ಚಲನಚಿತ್ರ ನಟರಾದ ರಾಘವೇಂದ್ರ ರಾಜಕುಮಾರ್, ಅಜಯ್ ರಾವ್, ಐಎಎಸ್ ಅಧಿಕಾರಿ ಮಂಜುನಾಥ್ ಪ್ರಸಾದ್ ಹಾಗೂ ತುಮಕೂರಿನ ಎಲ್ಲಾ ಶಾಸಕರು ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಹಲಗೂರು: ಸುವರ್ಣ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಹಲಗೂರಿನ ಸರ್ಕಲ್ ನಿಂದ ಗ್ರಾಮ ಪಂಚಾಯಿತಿವರೆಗೆ ಜಾಥಾ ನಡೆಸಿ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನಯನ್ನುದ್ದೇಶಿಸಿ ಸುವರ್ಣ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಕನ್ನಡ ಗಿರೀಶ್ ಮಾತನಾಡಿ, ಹಲಗೂರು ಗ್ರಾಮ ಪಂಚಾಯಿತಿಯಲ್ಲಿ ಕಾಯಂ ಆಗಿ ಆಡಳಿತ ಅಧಿಕಾರಿ ಇಲ್ಲದ ಕಾರಣ ನೂತನ ಕೆಲಸ ಕಾರ್ಯಗಳು ಆಗುತ್ತಿಲ್ಲ. ಗ್ರಾಮ ಪಂಚಾಯಿತಿಯಲ್ಲಿ 9/11 ಖಾತೆಗಳು ಆಗುತ್ತಿಲ್ಲ. ಹಣ ಕೊಟ್ಟವರಿಗೆ ಬೇಗ ಕೆಲಸ ಆಗುತ್ತಿದೆ.ತಿಂಗಳಿಗೆ 3 ಲಕ್ಷ ಕಂದಾಯ ಮತ್ತು ತೆರಿಗೆ ಹಣ ವಸೂಲಿ ಆದರೂ ಸಹ 1 ಟ್ರ್ಯಾಕ್ಟರ್ ಹಾಗೂ ಆಟೊ ಇದ್ದರೂಯಾವುದೇ ಸ್ವಚ್ಚತೆ ಕಾರ್ಯಗಳು ನಡೆದಿರುವುದು ಕಾಣುತ್ತಿಲ್ಲ ಎಂದು ಆರೋಪಿಸಿದರು. ಹಲಗೂರಿನ ಸರ್ಕಲ್ ನಲ್ಲಿ ಹೈಮಾಸ್ಕ್ ಲೈಟ್ ಕೆಟ್ಟಿದ್ದರೂ ರಿಪೇರಿಯಾಗಿಲ್ಲ. ಸ್ಥಳಕ್ಕೆ ತಾಲ್ಲೂಕು ಅಧಿಕಾರಿ ಅಥವಾ ಜಿಲ್ಲಾಡಳಿತ ಬಂದು ನಮ್ಮ ಮನವಿಯನ್ನು ಸ್ವೀಕರಿಸಬೇಕು .ಅಲ್ಲಿಯವರೆಗೂ ನಮ್ಮ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಸಂತೋಷ್ , ಗಿರೀಶ್ ಮನು, ಕೆಂಪೇಗೌಡ,…
ಬೆಂಗಳೂರು : ಸೆಪ್ಟೆಂಬರ್ 12 ರಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದ್ದು, ಸೆಪ್ಟೆಂಬರ್ 12 ರಿಂದ 10 ದಿನಗಳ ವಿಧಾನಮಂಡಲ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಜ್ಯದ ಹೆಚ್ಚಿನ ಶಿಕ್ಷಕಿಯರಿಗೆ ಅನಾರೋಗ್ಯ ಕಾಡುತ್ತಿದೆ. ಶಿಕ್ಷಣ, ಆರೋಗ್ಯ ಇಲಾಖೆಯ ಜಂಟಿ ಸಮೀಕ್ಷೆಯಲ್ಲಿ ಬಹುತೇಕರಲ್ಲಿ ಮಧುಮೇಹ, ಅಧಿಕ ರಕ್ತದೊತ್ತಡ ಕಂಡುಬಂದಿದೆ. ಶೇ.06 ಮಂದಿಯಲ್ಲಿ ಸ್ತನ, ಬಾಯಿ, ಗರ್ಭಕೋಶದ ಕ್ಯಾನ್ಸರ್ ಪತ್ತೆಯಾಗಿದೆ. ಒಟ್ಟು 2,20,066 ಸರ್ಕಾರಿ ಶಿಕ್ಷಕರ ಪೈಕಿ 60% ಮಂದಿ ಶಿಕ್ಷಕಿಯರಾಗಿದ್ದಾರೆ. ‘ವ್ಯಾಯಾಮ ಕೊರತೆ, ಕೆಲಸದ ಒತ್ತಡ, ಮನೆಯ ಆರ್ಥಿಕ ಸ್ಥಿತಿಯೇ ಇದಕ್ಕೆ ಕಾರಣ. ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಕೊಳ್ಳುವುದು ಒಳ್ಳೆಯದು’ ಎಂಬುದು ವೈದ್ಯರ ಸಲಹೆ. ಇಂದಿನ ಆಹಾರ ಪದ್ದತಿ, ಮಾನಸಿಕ ಒತ್ತಡ, ಜೀವನ ಶೈಲಿಗಳು ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದು, ಇದರಿಂದ ಮಧುಮೇಹ, ರಕ್ತದೊತ್ತಡದಂತಹ ಕಾಯಿಲೆಗಳಿಗೆ ಜನರು ಬಹುಬೇಗ ತುತ್ತಾಗುತ್ತಿದ್ದಾರೆ. ಆರೋಗ್ಯ ತಪಾಸಣೆಗೆ ಒಳಗಾದರೆ ವೈದ್ಯರು ಕಾಯಿಲೆ ಇದೆ ಎಂದು ಎಲ್ಲಿ ಹೇಳಿಬಿಡುತ್ತಾರೋ ಎಂಬ ಭಯದಿಂದಾಗಿ ಬಹಳಷ್ಟು ಜನರು ತಪಾಸಣೆಗೆ ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ರೋಗ ಉಲ್ಭಣಿಸಿದ ನಂತರ ಪಡಿಪಾಟಲು ಪಡುವ ಪರಿಸ್ಥಿತಿ ಉಂಟಾಗುತ್ತಿದೆ. ಇದು ಮನುಷ್ಯನ ಆರೋಗ್ಯದ ಬೆಳವಣಿಗೆ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದರು. ಪ್ರತಿಯೊಬ್ಬರೂ ಭಯ ತೊರೆದು…
ಇಟಲಿಯ ಓರ್ವ ವ್ಯಕ್ತಿಗೆ ಮೂರು ಮಾರಕ ವೈರಸ್ ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ. ಆತನಿಗೆ ಕೊರೋನಾ, ಮಂಕಿಪಾಕ್ಸ್ & ಎಚ್ಐವಿ ಬಾಧಿಸಿವೆ. ಇತ್ತೀಚೆಗೆ, ಆತ ಸ್ಪೇನ್ನಲ್ಲಿ ಬೇರೊಬ್ಬ ಯುವಕನೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಹೊಂದಿದ್ದ ಎಂದು ವೈದ್ಯರು ತಿಳಿಸಿದ್ದಾರೆ. 9 ದಿನಗಳ ನಂತರ ಕೋವಿಡ್, ಮಂಕಿಪಾಕ್ಸ್ ಮತ್ತು ಎಚ್ಐವಿ ಲಕ್ಷಣಗಳು ಕಾಣಿಸಿಕೊಂಡಿದ್ದವು. ಪರೀಕ್ಷೆ ನಡೆಸಿದಾಗ ಆತನಲ್ಲಿ ಮೂರು ವೈರಸ್ಗಳು ದೃಢಪಟ್ಟಿವೆ. ಅಲ್ಲಿಂದ ಮರಳಿ ಮನೆಗೆ ಬಂದವನೇ ಜ್ವರ, ಕಂಟಲು ನೋವು ಎಂದು ಮಲಗಿಬಿಟ್ಟಿದ್ದ. ವೈದ್ಯರಿಗೆ ತೋರಿಸಿದಾಗ ಕೊರೊನಾ ಪರೀಕ್ಷೆ (Covid 19 Test) ಮಾಡಿಸಿದ. ಪರೀಕ್ಷೆಯಲ್ಲಿ ಪಾಸಿಟಿವ್ ಬಂತು.ಕೊವಿಡ್ ಬಂತು ಅಂದುಕೊಂಡು ಎರಡೇ ದಿನಕ್ಕೆ ದೇಹದ ಭಾಗಗಳಲ್ಲಿ ಗುಳ್ಳೆಗಳು ಏಳಲಾರಂಭಿಸಿದವು. ಆ ಗುಳ್ಳೆಗಳು ನೋಯುತ್ತಿದ್ದವು. ಆಸ್ಪತ್ರೆಯಲ್ಲಿ ಒಂದು ವಾರದ ಚಿಕಿತ್ಸೆ ಪಡೆದುಕೊಂಡ ವ್ಯಕ್ತಿಯ ಆರೋಗ್ಯ ಸದ್ಯ ಸ್ಥಿರವಾಗಿದೆ. ಕೋವಿಡ್-19 ಮತ್ತು ಮಂಕಿಪಾಕ್ಸ್ನಿಂದ ಚೇತರಿಸಿಕೊಂಡ ನಂತರ ವ್ಯಕ್ತಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಆದರೆ ಹೆಚ್ಐವಿ ಸೋಂಕು ಮಾತ್ರ ಹಾಗೇ ಇದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…