Author: admin

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಕಣಜನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ‌ ಕಣಜನಹಳ್ಳಿ ಗ್ರಾಮದಲ್ಲಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ SR ತಿಪ್ಪೇಸ್ವಾಮಿ, ನಗರ ಸಭಾ ಸದಸ್ಯರು ಈರಲಿಂಗೆಗೌಡ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಗೀತಾ ನಂದಿನಿ ಗೌಡ, ಯತೀಶ್ ,‌ ಬಿ.ಎಸ್. ಸದಾನಂದ,ಡಿಸಿಸಿ ST ವಿಭಾಗದ ಪ್ರಧಾನ ಕಾರ್ಯದರ್ಶಿ ಚಿದಾನಂದ ಸ್ವಾಮಿ ಆರ್,ಜಿಲ್ಲಾ ಆಸಂಘಟಿತ ಕಾರ್ಮಿಕ ವಿಭಾಗ ಸಂಘಟನ ಕಾರ್ಯದರ್ಶಿ ಜೆ ವಿದ್ಯಾಧರ,ಕೃಷ್ಣಾಪುರ ಹನುಮಂತರಾಯ, SC ತಿಪ್ಪೇಸ್ವಾಮಿ, ಅರಳಿಕೆರೆ ಬಸವರಾಜ್, ಮಂಜುನಾಥ್, ಗ್ರಾ. ಪಂ. ಸದಸ್ಯರು ಗೋವಿಂದ ರಾಜು,ಶ್ರೀನಿವಾಸ್,ಇನ್ನು ಹಲವಾರು ಪಕ್ಷದ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು . ವರದಿ‌: ಮುರುಳಿಧರನ್ ಆರ್., ಹಿರಿಯೂರು . ( ಚಿತ್ರದುರ್ಗ – ದಾವಣಗೆರೆ )

Read More

ಮಧುಗಿರಿ ತಾಲ್ಲೂಕು ಕೊಂಡವಾಡಿ ಗ್ರಾಮದಲ್ಲಿ ಅಂದಿನಿಂದಲೂ  ನೆಲೆಗೊಂಡಿರುವ ಶ್ರೀ ಉಧ್ಬವ ಬಂಗಾರು ಕಾಟುಮ ಲಿಂಗೇಶ್ವರ ಸ್ವಾಮಿ ಜಾತ್ರೆಯು,ಪ್ರತೀ ವರ್ಷ ಶಿವರಾತ್ರಿ ಹಬ್ಬದ ಪ್ರಯುಕ್ತ ಬಹಳ ವಿಜೃಂಭಣೆಯಿಂದ ನಡೆಯುತ್ತದೆ. ವಾಡಿಕೆಯಂತೆ ,ಈ ಬಾರಿಯೂ ದೇವಸ್ಥಾನದ ಟ್ರಸ್ಟ್ ,ಭಕ್ತ ಮಹಾಶಯರು,ಮತ್ತು ಸಾರ್ವಜನಿಕರ ಸಹಕಾರದಿಂದ ಈ ಬಾರಿಯೂ ಜಾತ್ರೆ ಪ್ರಯುಕ್ತ ಎಲ್ಲ ವಿಧಿ ವಿಧಾನಗಳನ್ನು ಆಚರಿಸಲಾಯಿತು. ಅದರಲ್ಲಿಯೂ ವಿಶೇಷವಾಗಿ ಗುರುವಾರದಂದು ದೇವಾಲಯದ ಪ್ರಾಂಗಣದಲ್ಲಿ “ನೂರಾ ಒಂದು ಎಡೆ ” ಪೂಜೆಯನ್ನು ವಿದ್ಯುಕ್ತವಾಗಿ ಶ್ರದ್ದೆ ಮತ್ತು ಭಕ್ತಿ ಗಳಿಂದ ಆಚರಿಸಲಾಯಿತು. ಈ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಸಾವಿರಾರು ಜನ ದೂರ ದೂರುಗಳಿಂದಲೂ ಆಗಮಿಸಿ ಸ್ವಾಮಿ ಕೃಪೆಗೆ ಪಾತ್ರರಾದರು.. ಎಂತಹ ಬರಗಾಲದಲ್ಲೂ ಸಹ ಜಾತ್ರೆಯ ಆಚರಣೆಗಳು ನಿಲ್ಲದೆ ನಡೆದುಕೊಂಡು ಬಂದಿರುವುದು ಈ ಜಾತ್ರೆಯ ವಿಶೇಷ. ಗ್ರಾಮದ ಪ್ರತಿ ಮನೆಗಳಲ್ಲೂ ಹಬ್ಬದ ವಾತಾವರಣ,ಮನೆಗಳನ್ನೆಲ್ಲ ಸುಣ್ಣ ಬಣ್ಣ ಮಾಡಿ ಸಿಂಗರಿಸಿಕೊಂಡು ಊರಿಗೆ ಊರೇ ಜಾತ್ರೆಯ ಸಡಗರದಲ್ಲಿ ಮುಳುಗಿತ್ತು. ಈ  ದೇವಸ್ಥಾನದ ಒಕ್ಕಲು ,ಮತ್ತು  ಸಕಾಲ ಕರ್ನಾಟಕ ಸರ್ಕಾರ ದ ಆಡಳಿತಾಧಿಕಾರಿಗಳೂ ಆದ…

Read More

ಪಾವಗಡ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ತುಮಕೂರು ಜಿಲ್ಲಾ ಘಟಕದ ನಿರ್ದೇಶಕರ ಚುನಾವಣೆಯಲ್ಲಿ ಅವಿರೋಧ ಆಯ್ಕೆ ಹಾಗೂ ಗೆಲುವಿನ ನಗೆ ಬೀರಿದ ಹಿರಿಯ ಪತ್ರಕರ್ತರಿಗೆ ಇಂದು ಹೆಲ್ಪ್ ಸೊಸೈಟಿ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು ತೀವ್ರ ಕುತೂಹಲಕ್ಜೆ ಎಡೆ ಮಾಡಿ ಕೊಟ್ಟಿದ್ದ ಜಿದ್ದಾ ಜಿದ್ದಿನ ತುಮಕೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಉಪಾಧ್ಯಕ್ಷರ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಪಾವಗಡ ತಾಲ್ಲೂಕಿನ ಹಿರಿಯ ಪತ್ರಕರ್ತ ಶ್ಯಾನ ಪ್ರಸನ್ನಮೂರ್ತಿ ಹಾಗೂ ನಿರ್ದೇಶಕರ ಸ್ಥಾನಕ್ಕೆ ಹೊಸದಿಗಂತ ಪತ್ರಿಕಾ ವರದಿಗಾರ ನಾಗೇಂದ್ರ ಅವರಿಗೆ ಹೆಲ್ಪ್ ಸೊಸೈಟಿ ಕಚೇರಿಯಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಶಾಲು ಹೊದಿಸಿ ಹೂಮಾಲೆ ಹಾಕಿ, ನೆನಪಿನ ಕಾಣಿಕೆ ನೀಡಿ ಆತ್ಮೀಯವಾಗಿ ಸನ್ಮಾನಿಸಿದರು. ಈ ಸರಳ ಕಾರ್ಯಕ್ರಮದಲ್ಲಿ ಆಟೋ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ, ಹೆಲ್ಪ್ ಸೊಸೈಟಿ ಪದಾಧಿಕಾರಿಗಳಾದ ಗೌತಮ್ ಕ್ರಾಂತಿ, ಶ್ರೀಕಾಂತ್, ರಾಕೇಶ್, ವೆಂಕಟೇಶ್, ನರೇಶ್, ಸಾಗರ್, ಸಾಯಿ ಹಾಜರಿದ್ದರು. ವರದಿ: ನಂದೀಶ್ ನಾಯ್ಕ ಪಿ.

Read More

ಗುಬ್ಬಿ:ತಾಲೂಕಿನ ಜೀಗನಹಳ್ಳಿ ಗೊಲ್ಲರಹಟ್ಟಿ ಗ್ರಾಮದ ಇತಿಹಾಸ ಪ್ರಸಿದ್ಧ ಕರೆಕಲ್ಲು ಶ್ರೀ ಚಿತ್ರಲಿಂಗ ಸ್ವಾಮಿಯ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ಚಿತ್ರಲಿಂಗ ಸ್ವಾಮಿಯ ಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿವಿಧ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು.  ಜಾತ್ರಾ ಮಹೋತ್ಸವದಲ್ಲಿ ಭಕ್ತಾದಿಗಳು ಭಾಗವಹಿಸಿ ಚಿತ್ರ ಲಿಂಗಸ್ವಾಮಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದರು ಇದೇ ಸಂದರ್ಭದಲ್ಲಿ ಜೀಗನಹಳ್ಳಿ ಗೊಲ್ಲರಹಟ್ಟಿಯ ಯಾದವ ಸಮಾಜದ ಮುಖಂಡರು ಯಜಮಾನರು ಗ್ರಾಮಸ್ಥರು ಹಾಗೂ ಭಕ್ತಾದಿಗಳು ಹಾಜರಿದ್ದರು. ವರದಿ: ಮಂಜುನಾಥ್,  ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಕೊರಟಗೆರೆ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಡಾ.ಜಿ.ಪರಮೇಶ್ವರ್ ಯುವಪಡೆ ಹಾಗೂ ಯುವ ಕಾಂಗ್ರೆಸ್ ಮತ್ತು ಎನ್.ಎಸ್.ಯು.ಐ. ವತಿಯಿಂದ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಮೂರು ದಿನಗಳ ಕಾಲ ಡಾ.ಜಿ.ಪರಮೇಶ್ವರ್ ಕಪ್ ಕಬಡ್ಡಿ ಹಬ್ಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಗ್ರಾಮೀಣ ಪ್ರದೇಶದ ಯುವ ಕ್ರೀಡಾಪಟು ಗುರುತಿಸುವುದೇ ಕಬಡ್ಡಿ. ಹಬ್ಬದ ಕಾರ್ಯಕ್ರಮದ ಉದ್ದೇಶ, ರಾಜ್ಯ , ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟಕ್ಕೆ ಕೊರಟಗೆರೆ ಕ್ಷೇತ್ರದ ಯುವ ಪ್ರತಿಭೆಗಳ ಅನಾವರಣಕ್ಕೆ ಪ್ರತಿವರ್ಷವೂ ವಿಶೇಷ ರೀತಿಯ ಕಾರ್ಯಕ್ರಮ ರೂಪಿಸುತ್ತೇನೆ ಎಂದು ತಿಳಿಸಿದರು. ಈ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯಲ್ಲಿ 17 ತಂಡಗಳು ಭಾಗವಹಿಸಿದ್ದು, ಮೊದಲನೆಯ ಬಹುಮಾನ ಒಂದು ಲಕ್ಷ ರೂ. ಹಾಗೂ ಪಾರಿತೋಷಕವನ್ನು ಕೊರಟಗೆರೆಯ ಎ ತಂಡ (ಹಿರಿಯರ ತಂಡ ) ಪಡೆದರು. ಎರಡನೆಯ ಬಹುಮಾನವನ್ನು ಐವತ್ತು ಸಾವಿರ ರೂ ಹಾಗೂ ಪಾರಿತೋಷಕವನ್ನು ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಕೋರಾ ತಂಡ ಪಡೆದರು. ಮೂರನೆಯ ಬಹುಮಾನವನ್ನು ಕೊರಟಗೆರೆಯ…

Read More

ಆಸ್ಟ್ರೇಲಿಯಾದ ಕ್ರಿಕೆಟ್‌ ದಂತಕಥೆ ಶೇನ್‌ ವಾರ್ನ್‌ ಇಹಲೋಕ ತ್ಯಜಿಸಿದ್ದಾರೆ. ಈ ಕುರಿತು ಅಂತಾರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಪ್ರಕಟಿಸಿದ್ದು, ಕ್ರಿಕೆಟ್‌ ಪ್ರೇಮಿಗಳಿಗೆ ಈ ಸುದ್ದಿ ಆಘಾತ ನೀಡಿದೆ. ಶೇನ್ ವಾರ್ನ್‌ ಅವರು ತಮ್ಮ ವಿಲ್ಲಾದಲ್ಲಿ ಅಸ್ವಸ್ಥರಾಗಿದ್ದರು, ಕೂಡಲೇ ಅವರಿಗೆ ಚಿಕಿತ್ಸೆ ನೀಡಿದರೂ ಶೇನ್‌ ವಾರ್ನ್‌ (shane warne) ಅವರನ್ನು ಬದುಕಿಸಲು ಆಗಿಲ್ಲ ಎಂದು ಅಂತಾರಾಷ್ಟ್ರೀಯ ಕ್ರೀಡಾ ವಾಹಿನಿ ಸುದ್ದಿ ಪ್ರಕಟಿಸಿದೆ. ಶೇನ್‌ ವಾರ್ನ್‌ ಹೃದಯಾಘಾತಕ್ಕೆ ಬಲಿಯಾಗಿರಬಹುದು ಎಂದು ಅನುಮಾನಿಸಲಾಗಿದೆ. ಆದರೆ ಈವರೆಗೂ ಶೇನ್‌ ವಾರ್ನ್‌ ಸಾವಿಗೆ ಖಚಿತ ಕಾರಣ ತಿಳಿದುಬಂದಿಲ್ಲ.ಶೇನ್ ವಾರ್ನ್ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಲೆಗ್ ಸ್ಪಿನ್ನರ್‌ ಆಗಿದ್ದರು. ಟೆಸ್ಟ್‌ ಕ್ರಿಕೆಟ್‌ನಲ್ಲಿ 708 ವಿಕೆಟ್‌ ಹಾಗೂ ಏಕದಿನ ಪಂದ್ಯಗಳಲ್ಲಿ 293 ವಿಕೆಟ್‌ ಪಡೆದು ಶೇನ್ ವಾರ್ನ್ ದಾಖಲೆ ನಿರ್ಮಿಸಿದ್ದರು. ಆಸ್ಟ್ರೇಲಿಯಾ ಸತತ 3 ಬಾರಿ ವಿಶ್ವಕಪ್‌ ಗೆಲ್ಲುವಲ್ಲಿಯೂ ವಾರ್ನ್‌ ಪಾತ್ರ ದೊಡ್ಡದಿತ್ತು.ಆದರೆ ದಿಢೀರ್‌ ಶೇನ್‌ ವಾರ್ನ್‌ ಸಾವಿನ ಸುದ್ದಿ ಕೇಳಿ ಕ್ರೀಡಾ ಜಗತ್ತು ತತ್ತರಿಸಿದೆ. ಈ ಕುರಿತು ತನಿಖೆ ಆರಂಭವಾಗಿದೆ. ವರದಿ:…

Read More

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯ ಎರಡನೇ ಹಂತ ಇಂದು ಮುಗಿದಿದ್ದು, ಬಸವನಗುಡಿಯ ನ್ಯಾಷನಲ್ ಕಾಲೇಜಿನ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಾಣ ಮಾಡಲು ಕೇಂದ್ರ-ರಾಜ್ಯ ಸರ್ಕಾರಕ್ಕೆ ಆಗ್ರಹ ಮಾಡುವ ಮೂಲಕ ಪಾದಯಾತ್ರೆ ಮುಕ್ತಾಯಗೊಂಡಿತು. ಇದೇ ವೇಳೆ ಪಾದಯಾತ್ರೆ ವೇಳೆ ಉಂಟಾಗಿರುವ ಟ್ರಾಫಿಕ್ ಸಮಸ್ಯೆ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷವು ಜನರ ಕ್ಷಮೆಯನ್ನು ಕೇಳಿದೆ.ಕೋವಿಡ್ ಮೂರನೇ ಅಲೆ ಹಿನ್ನಲೆಯಿಂದಾಗಿ ಹಾಗೂ ಕೋರ್ಟ್ ಅದೇಶದ ಮೆರೆ ಕಾಂಗ್ರೆಸ್ ಕೈಗೊಂಡಿದ್ದ ಮೇಕೆದಾಟು ಪಾದಯಾತ್ರೆ ಜನವರಿ 9 ರಿಂದ 14ರ ವರೆಗೆ ಕನಕಪುರ ತಾಲ್ಲೂಕಿನ ಸಂಗಮದಿಂದ ಪ್ರಾರಂಭವಾಗಿ ರಾಮನಗರದಲ್ಲಿ ಸ್ಥಗಿತಗೊಂಡಿತ್ತು. ಮತ್ತೆ ಫೆ 27 ರಿಂದ ರಾಮನಗರದಿಂದ ಮಾರ್ಚ್ 4ಕ್ಕೆ ನ್ಯಾಷನಲ್ ಕಾಲೇಜ್ ಮೈದಾನವರೆಗೆ ಸಾಗಲಿದೆ. ಮೊದಲಿಗೆ ಭಾಷಣ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡುತ್ತಾ, ರಾಮನಗರದಲ್ಲಿ ಮೇಕೆದಾಟು 1.0 ಸಂದರ್ಭದಲ್ಲಿ ಹತ್ತು ಎಫ್ ಐ ಆರ್ ಹಾಕಿ, ನಮ್ಮನ್ನು ಜೈಲಿಗೆ ಕಳಿಸಲು ಕುತಂತ್ರ ನಡೆಸಿದ್ದರು.ಈಗ ಪಾದಯಾತ್ರೆ  ಯಶಸ್ಸು ನನ್ನ ಯಶಸ್ಸಲ್ಲ ಇದು ಪಕ್ಷ…

Read More

ಉಕ್ರೇನ್‌ನಿಂದ ಭಾರತೀಯರನ್ನು ಸ್ಥಳಾಂತರಿಸುವಲ್ಲಿ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರದಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಭಾರತೀಯರು ಸಿಲುಕಿರುವಾಗ ಪ್ರಧಾನಿ ಮೋದಿ ಉತ್ತರ ಪ್ರದೇಶದಲ್ಲಿ ಚುನಾವಣಾ ಸಭೆಗಳಲ್ಲಿ ನಿರತರಾಗಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಅವರು ಸಮಾಜವಾದಿ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿದ್ದರು.”ಇದೀಗ ಏನಾಗುತ್ತಿದೆ ನೋಡಿ.ಉಕ್ರೇನ್‌ನಲ್ಲಿ ಯುದ್ಧ ನಡೆಯುತ್ತಿದೆ ಮತ್ತು ಮೋದಿ ಇಲ್ಲಿ ಸಭೆಗಳನ್ನು ಮಾಡುತ್ತಿದ್ದಾರೆ.ಇಲ್ಲಿ ಯಾವುದು ಮುಖ್ಯವಾಗಬೇಕು ಹೇಳಿ ? ನಮ್ಮ ಭಾರತೀಯ ವಿದ್ಯಾರ್ಥಿಗಳನ್ನು ಮರಳಿ ಕರೆತರುವುದು ಮುಖ್ಯವಲ್ಲವೇ?” ಎಂದು ದೀದಿ ಪ್ರಶ್ನಿಸಿದರು.”ನೀವು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದರೆ ಮತ್ತು ಯುದ್ಧವು ಪ್ರಾರಂಭವಾಗಲಿದೆ ಎಂದು ಮೂರು ತಿಂಗಳ ಮೊದಲೇ ತಿಳಿದಿದ್ದರೆ, ನೀವು ಭಾರತೀಯರನ್ನು ಉಕ್ರೇನ್‌ನಿಂದ ಏಕೆ ಮರಳಿ ಕರೆತರಲಿಲ್ಲ?” ಎಂದು ಅವರು ಪ್ರಶ್ನಿಸಿದರು.…

Read More

ಮೂರನೇ ಮಹಾಯುದ್ಧ ನಡೆದರೆ ಅದು ಪರಮಾಣು ಶಸ್ತ್ರಾಸ್ತ್ರಗಳನ್ನು ಒಳಗೊಂಡಿರುತ್ತದೆ ಮತ್ತು ವಿನಾಶಕಾರಿಯಾಗಿದೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಬುಧವಾರ ಹೇಳಿದ್ದಾರೆ. ಕಳೆದ ವಾರ ಉಕ್ರೇನ್‌ ವಿರುದ್ಧ ವಿಶೇಷ ಮಿಲಿಟರಿ ಕಾರ್ಯಾಚರಣೆ ಎಂದು ಕರೆಯುವ ರಷ್ಯಾ, ಕೈವ್ ಪರಮಾಣು ಶಸ್ತ್ರಾಸ್ತ್ರಗಳನ್ನು ಸ್ವಾಧೀನಪಡಿಸಿಕೊಂಡರೆ ನಿಜವಾದ ಅಪಾಯ ಎದುರಿಸಬೇಕಾಗುತ್ತದೆ ಎಂದು ಲಾವ್ರೊವ್ ಹೇಳಿದ್ದಾರೆ. ಉಕ್ರೇನ್‌ ನ ಆಕ್ರಮಣವನ್ನು ಪ್ರಾರಂಭಿಸಿದ ಒಂದು ವಾರದ ನಂತರ, ರಷ್ಯಾ ತನ್ನ ಪಡೆಗಳು ಬುಧವಾರದಂದು ನಗರವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿತು, ದಕ್ಷಿಣದಲ್ಲಿ ಖೆರ್ಸನ್ ಅನ್ನು ವಶಪಡಿಸಿಕೊಂಡಿತು.ಸುಮಾರು ಒಂದು ವಾರದ ಹಿಂದೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತನ್ನ ದಕ್ಷಿಣ ನೆರೆಹೊರೆಯ ಮೇಲೆ ಪೂರ್ಣ ಪ್ರಮಾಣದ ಆಕ್ರಮಣಕ್ಕೆ ಆದೇಶಿಸಿದ ನಂತರ ಅರ್ಧ ಮಿಲಿಯನ್‌ಗಿಂತಲೂ ಹೆಚ್ಚು ಉಕ್ರೇನಿಯನ್ನರು ತಮ್ಮ ದೇಶದಿಂದ ಪಲಾಯನ ಮಾಡಿದ್ದಾರೆ. ಇನ್ನೊಂದೆಡೆಗೆ ಪುಟೀನ್ ವಿರುದ್ಧ ಟೀಕಾಪ್ರಹಾರ ನಡೆಸಿರುವ ಅಮೇರಿಕಾದ ಅಧ್ಯಕ್ಷ ಜೋ ಬಿಡೆನ್ “ಅವರು ಯುದ್ಧಭೂಮಿಯಲ್ಲಿ ಲಾಭಗಳನ್ನು ಗಳಿಸಬಹುದಾದರೂ, ದೀರ್ಘಾವಧಿಯಲ್ಲಿ ಅವರು ನಿರಂತರ ಹೆಚ್ಚಿನ ಬೆಲೆಯನ್ನು ತೆರುತ್ತಾರೆ” ಎಂದು ಹೇಳಿದ್ದಾರೆ.ಯುಎಸ್…

Read More

ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ವಾರ್ಡ್ ನಂ 24 ರಲ್ಲಿನ ಹುಳಿಯಾರ್ ರಸ್ತೆಯಲ್ಲಿರುವ ನಾಯಕ ಕ್ಯಾಂಪ್ ಬಳಿ ಇರುವ ಬೊಮ್ಮಕ್ಕ ದೇವಸ್ಥಾನದ ಎದುರು ಇರುವ ಬೀದಿ ದ್ವೀಪವು ಕೆಟ್ಟು ಹೋಗಿದ್ದು, ಆದರೆ ಇತ್ತ ಯಾವುದೇ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ವಿದ್ಯುತ್ ದೀಪ ಕೆಟ್ಟು ಹೋಗಿ 20 ದಿನಗಳು ಕಳೆದವು.‌ಆದರೆ, ಆಡಳಿತ ಅಧಿಕಾರಿಗಳಾಗಲಿ, ಸ್ಥಳೀಯ ಜನಪ್ರತಿನಿಧಿಗಳಾಗಲಿ, ಈವರೆಗೂ ದುರಸ್ತಿಗೊಳಿಸದೇ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಇಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯುತ್ ದೀಪ ಇಲ್ಲದ ಕಾರಣ ಈ ಭಾಗದಲ್ಲಿ ರಾತ್ರಿಯಾದರೆ, ಹೆಣ್ಣುಮಕ್ಕಳು ಓಡಾಡಲು ಹಿಂದೇಟು ಹಾಕುತ್ತಿದ್ದಾರೆ. ಶೀಘ್ರವೇ ಈ ಬಗ್ಗೆ ಸಂಬಂಧಪಟ್ಟವರು ಕ್ರಮಕೈಗೊಳ್ಳ ಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರದಿ: ಮುರುಳಿಧರನ್ ಆರ್., ಹಿರಿಯೂರು (ಚಿತ್ರದುರ್ಗ – ದಾವಣಗೆರೆ ) ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More