Subscribe to Updates
Get the latest creative news from FooBar about art, design and business.
- ಕೊಡಿಗೇನಹಳ್ಳಿ: ಬಸ್ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್ ಕದ್ದ ಮಹಿಳೆ ಬಂಧನ
- ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸೇರಿ ನಾಲ್ವರು ಸಾವು
- ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ
- ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ
- ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ
- ತೆರೆ ಮೇಲೆ ರಾಜ್ ಕುಮಾರ್, ಅಂತರಂಗದಲ್ಲಿ ಮುತ್ತುರಾಜ್ ಇದ್ದರು: ಆರ್. ಮಂಜುನಾಥ್ ಚವಾಣ್, ನಾದಯೋಗಿ ಡಾ.ರಾಜಕುಮಾರ್ ಪುಸ್ತಕ ಬಿಡುಗಡೆ
- ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ
- ಧಾರವಾಡ: ಜನ–ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸೂಚನೆ
Author: admin
ಮಂಗಳೂರು: ಮಾಜಿ ಸಿಎಂ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ ಮೃತರ ಪತ್ನಿ ಹಾಗೂ ಹೆತ್ತವರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹೀಂ, ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್, ಭೋಜೆಗೌಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜೆಡಿಎಸ್ ಮುಖಂಡರು ಜತೆಯಲ್ಲಿದ್ದರು. ಇದೇ ವೇಳೆ ಮಾತನಾಡಿದ ಕುಮಾರಸ್ವಾಮಿ, ಸರಕಾರವು ಕಾಟಾಚಾರಕ್ಕೆ ಪ್ರವೀಣ್ ಹತ್ಯೆ ಪ್ರಕರಣವನ್ನು ಎನ್.ಐ.ಎ. ವಹಿಸಿದೆ. ಈ ಪ್ರಕರಣವನ್ನು ಕಾಟಾಚಾರಕ್ಕೆ ತನಿಖೆ ನಡೆಸಬೇಡಿ. ಇದರಲ್ಲಿ ಸತ್ಯಾಂಶ ಏನು, ಇದರ ಹಿಂದಿರುವ ಎಂತಹ ದೊಡ್ಡ ಶಕ್ತಿಗಳೇ ಇರಲಿ ಅದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸಂತ್ರಸ್ತರಲ್ಲಿ ವಿಶ್ವಾಸ ಮೂಡಿಸಬೇಕು ಎಂದು ಸರಕಾರವನ್ನು ಒತ್ತಾಯಿಸುವುದಾಗಿ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಎನ್ ಹೆಚ್ 4 ರ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಶ್ರೀ ಮುರುಗನ್ ಕ್ರೇನ್ ಸರ್ವಿಸ್ ಟೂರಿಸ್ಟ್ ನಲ್ಲಿ ನಡೆದ ಕರುನಾಡು ಸಾರಥಿಗಳ ಸೈನ್ಯ ಟ್ರೇಡ್ ಯೂನಿಯನ್ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕಾರ್ಯಕ್ರಮದಲ್ಲಿ ಮುರುಳಿ ಪಿ. ಅವರನ್ನು ಕರುನಾಡು ಸಾರಥಿಗಳ ಸೈನ್ಯ ಟ್ರೇಡ್ ಯೂನಿಯನ್ ರಾಜ್ಯಾಧ್ಯಕ್ಷರಾದ ಸುದೀಂದ್ರ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು. ಪದಾಧಿಕಾರಿಗಳ ಆಯ್ಕೆ ಬಗ್ಗೆ ನಮ್ಮ ತುಮಕೂರು ಜೊತೆಗೆ ಮಾತನಾಡಿದ ಸುದೀಂದ್ರ ಅವರು, ಸಂಘದ ಚಟುವಟಿಕೆಯಲ್ಲಿ ಎಲ್ಲರು ಕೈ ಜೋಡಿಸಬೇಕು. ಸಂಕಷ್ಟದಲ್ಲಿರುವವರಿಗೆ ಸಹಕರಿಸಬೇಕು. ವಾಹನ ಚಾಲನೆ ಸಂದರ್ಭದಲ್ಲಿ ಅತ್ಯಂತ ಎಚ್ಚರಿಕೆ ವಹಿಸುವು ದರೊಂದಿಗೆ ಸೂಕ್ತ ದಾಖಲಾತಿಗಳನ್ನು ಚಾಲಕರು ಇಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು. ನೂತನ ಅಧ್ಯಕ್ಷರಾದ ಮುರುಳಿ ಪಿ . ಹಾಗೂ ಪ್ರಧಾನ ಕಾರ್ಯದರ್ಶಿ ತಿಮ್ಮೇಶ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಮಾತನಾಡಿ, ಕಾರು ಚಾಲಕರಿಗೆ ಕರ್ನಾಟಕದ ಯಾವ ಮೂಲೆಯಲ್ಲಿ ಆದರೂ ಏನೇ ಸಮಸ್ಯೆ ಗಳು ಇದ್ದಲ್ಲಿ ತಕ್ಷಣವೇ ನಾವು ಅವರಿಗೆ…
ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮದ ಕೆಂಪಯ್ಯ ಬಯಲು ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಸರ್ವೋದಯ ಮಂಡಲ ತುಮಕೂರು ಸರ್ವೋದಯ ಮಂಡಲ ಹಾಗೂ ತುರುವೇಕೆರೆ ಸರ್ವೋದಯ ಮಂಡಲ ಮತ್ತು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಮತ್ತು ಕಾರ್ಗಿಲ್ ವಿಜಯ ದಿವಸ ಆಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಚುಂಚನಗಿರಿ ಶಾಖಮಠದ ಶ್ರೀಗಳಾದ ಶ್ರೀ ಶ್ರೀ ಪ್ರಸನ್ನಾನಂದ ನಾಥ ಸ್ವಾಮೀಜಿ ವಹಿಸಿದ್ದರು . ಸ್ವಾತಂತ್ರ ಅವಲೋಕನವನ್ನು ವಿಶ್ವರಾಧ್ಯರು ಅವಲೋಕಿಸಿದರು. ನಿರೂಪಣೆಯನ್ನು ರೂಪಶ್ರೀ ನೆರವೇರಿಸಿದ್ದು , ವಿಶೇಷ ಉಪನ್ಯಾಸವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಸಿ.ಎನ್. ನಂಜುಂಡಪ್ಪನವರು ನೀಡಿದರು. ಉದ್ಘಾಟನೆಯನ್ನು ಜಮ್ಮು ಕಾಶ್ಮೀರ ವಲಯದ ಬಿ ಎಸ್ ಎಫ್ ಯೋಧರಾದ ಯೋಗಾನಂದ ಸ್ವಾಮಿ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುರುವೇಕೆರೆ ಸರ್ವೋದಯ ಮಂಡಲ ಅಧ್ಯಕ್ಷ ಡಿ.ಪಿ.ವೇಣುಗೋಪಾಲ್ ವಹಿಸಿದ್ದು, ಪ್ರಾಸ್ತಾವಿಕ ನುಡಿಯನ್ನು ತುರುವೇಕೆರೆ ಸರ್ವೋದಯ ಮಂಡಲದ ಹೆಚ್ ಎನ್ ಕೃಷ್ಣಮೂರ್ತಿ ನುಡಿದರು., ಇದೆ ಸಂದರ್ಭದಲ್ಲಿ ಸ್ವಾತಂತ್ರ ಹೋರಾಟಗಾರರಾದ ಬಿ ಲಿಂಗಪ್ಪ , ಲಕ್ಷ್ಮಮ್ಮ…
ಪದ್ಮುಂಜ: ಪಿ.ಡೀಕಯ್ಯರವರಿಗೆ ಹುಟ್ಟೂರ ಶ್ರದ್ಧಾಂಜಲಿ ಬೆಳ್ತಂಗಡಿ: ಬಹುಜನ ಸಮಾಜಕ್ಕೆ ಸೈಸಮಾಜದಲ್ಲಿ ಮೌಲ್ಯಾಧಾರಿತ ಬದಲಾವಣೆಗಾಗಿ ಚಳುವಳಿಯಲ್ಲಿ ತೊಡಗಿದ್ದ ಪಿ.ಡೀಕಯ್ಯರವರು ಅಪ್ಪಟ ಅಂಬೇಡ್ಕರ್ ವಾದಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಲಿತರ ಮೇಲಾಗುತ್ತಿದ್ದ ಶೋಷಣೆ, ದೌರ್ಜನ್ಯ, ಅನ್ಯಾಯ,ಅಸಮಾನತೆಗಳ ವಿರುದ್ಧ ಗಟ್ಟಿ ಧ್ವನಿ ಎತ್ತಿ ಹೋರಾಡಿ ದಲಿತ, ಹಿಂದುಳಿದ ಶೋಷಿತ ಸಮುದಾಯಗಳ ವಿಮೋಚನೆಗಾಗಿ ಶ್ರಮಿಸಿ ರಾಜ್ಯಾದ್ಯಂತ ಸಾವಿರಾರು ಬೆಂಬಲಿಗರನ್ನು ಅಭಿಮಾನಿಗಳನ್ನು ಸಂಪಾದಿಸಿ ಚಳುವಳಿಯನ್ನು ಮುನ್ನಡೆಸುತ್ತಾ ಬಹುಜನ ಸಮಾಜದಲ್ಲಿ ಸೈದ್ಧಾಂತಿಕ ಧೈರ್ಯವನ್ನು ತುಂಬಿದವರು ಎಂದು ಹಿರಿಯ ಅಂಬೇಡ್ಕರ್ ವಾದಿ, ಪಿ.ಡೀಕಯ್ಯರವರ ಚಳುವಳಿಯ ಒಡನಾಡಿ ಸಮತಾ ಸೈನಿಕದಳ ಸ್ಥಾಪಕ , ಆರ್.ಪಿ.ಐ. ರಾಜ್ಯಾಧ್ಯಕ್ಷ ಡಾ.ವೆಂಕಟ ಸ್ವಾಮಿ ಹೇಳಿದರು. ಇತ್ತೀಚೆಗೆ ಪರಿನಿಬ್ಬಾಣ ಹೊಂದಿದ ಹಿರಿಯ ಅಂಬೇಡ್ಕರ್ ವಾದಿ, ಬಹುಜನ ಸಮಾಜ ಚಳುವಳಿಯ ನೇತಾರ ಪಿ.ಡೀಕಯ್ಯ ಅವರಿಗೆ ಪದ್ಮುಂಜ ಸಂಗಮ್ ವಿಹಾರ್ ನಲ್ಲಿ ನಡೆದ ಹುಟ್ಟೂರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮುಖ್ಯ ಭಾಷಣಕಾರರಾಗಿ ಜು.30ರಂದು ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಬತ್ತರ ದಶಕದಲ್ಲಿ ದಲಿತ ಸಂಘರ್ಷ ಸಮಿತಿ ಪ್ರಾರಂಭವಾದ ದಿನಗಳಲ್ಲಿ ಮಂಗಳೂರಿನಲ್ಲಿ ಹೋರಾಟಗಳನ್ನು…
ಚಿತ್ರದುರ್ಗ: ಬಿಜೆಪಿ ದುರಾಡಳಿತಕ್ಕೆ ರಾಜ್ಯದ ಜನರು ಬೇಸತ್ತು ಹೋಗಿದ್ದು, ಕಾಂಗ್ರೆಸ್ ಗೆ ಮತ ಹಾಕಲು ಕಾಯುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ತಾಲ್ಲೂಕಿನ ಸೀಬಾರದಲ್ಲಿರುವ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಸ್ಮಾರಕದಲ್ಲಿ ಭಾನುವಾರ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಮತದಾರರ ಮನೆ ಬಾಗಿಲಿಗೆ ತೆರಳಿ ಅವರಿಗೆ ಧ್ವನಿಯಾಗಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಜಿಎಸ್ಟಿ ಹೊರೆ ಹೆಚ್ಚಾಗಿದೆ. ಮೊಸರು, ಮಜ್ಜಿಗೆ, ಆಹಾರ ಧಾನ್ಯಗಳಿಗೂ ತೆರಿಗೆ ವಿಧಿಸಲಾಗಿದೆ. ಬ್ಯಾಂಕ್ ವ್ಯವಹಾರಕ್ಕೆ ಬಳಸುವ ಚೆಕ್ ಬುಕ್ ಗೂ ಜಿಎಸ್ಟಿ ವಿಧಿಸಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ತೆರಿಗೆ ಹೊರೆಗೆ ಜನರು ಹೈರಾಣಾಗಿದ್ದಾರೆ. ಮತದಾರರ ಮನೆಗೆ ಭೇಟಿ ನೀಡಿ ಬಿಜೆಪಿ ದುರಾಡಳಿತದ ಬಗ್ಗೆ ಮನವರಿಕೆ ಮಾಡಿಕೊಡಿ ಎಂದು ಕಾರ್ಯಕರ್ತರಿಗೆ ಅವರು ಮನವಿ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಂಡ್ಯ: ಜೆಡಿಎಸ್ ನ ಯಾರೂ ಸರ್ವನಾಶ ಮಾಡಲು ಸಾಧ್ಯವಿಲ್ಲ.ಈ ಪಕ್ಷದಿಂದ ಬೆಳೆದು ಹೋದ ಕೆಲವರು ಜೆಡಿಎಸ್ ನ ಮುಗಿಸಿದ್ದೇವೆ ಎಂದು ಅಹಂನಲ್ಲಿದ್ದಾರೆ. ಜಿಲ್ಲೆಯಲ್ಲಿ ಜೆಡಿಎಸ್ ನ ಯಾರೂ ಸರ್ವನಾಶ ಮಾಡಲು ಸಾಧ್ಯವಿಲ್ಲ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಸೋಮನಹಳ್ಳಿಯ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷಗಳು ದ್ವೇಷದ ಭಾವನೆ ಧಾರೆ ಎರೆಯುತ್ತಿವೆ. ಇದರಿಂದ ಮಂಗಳೂರಿನಲ್ಲಿ ಸರಣಿ ಹತ್ಯೆಯಾಗಿದೆ. ಸಿಎಂ ಸ್ಥಳದಲ್ಲಿದ್ದಾಗಲೇ ಮತ್ತೊಂದು ಹತ್ಯೆಯಾಗುತ್ತದೆ. ನಾನು ಅಧಿಕಾರದಲ್ಲಿದ್ದಾಗ ಎಂದೂ ಇದಕ್ಕೆ ಅವಕಾಶ ಕೊಟ್ಟಿಲ್ಲ ಎಂದರು. ಇನ್ನು ಯಾರೋ ಒಬ್ಬ ಎಂಪಿ ಹೇಳುತ್ತಾನೆ. ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಕಲ್ಲು ಹೊಡೆಯಬಹುದಿತ್ತು ಎಂದು, ಮತ್ತೊಬ್ಬ ಮಾಜಿ ಸಿಎಂ ಈ ಸರ್ಕಾರಕ್ಕೆ ಮೊಟ್ಟೆಯಲ್ಲಿ ಹೊಡೆಯಬೇಕು ಅಂತಾರೆ. ಹೀಗೆ ಎರಡೂ ರಾಷ್ಟ್ರೀಯ ಪಕ್ಷಗಳು ದ್ವೇಷದ ಭಾವನೆ ಧಾರೆ ಎರೆಯುತ್ತಿದ್ದಾರೆ ಎಂದು ಟೀಕಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಜಂಪೇನಹಳ್ಳಿ ಗ್ರಾಮದ ಯುವಕನೋರ್ವ ಮದುವೆಯಾಗಿಲ್ಲ ಎನ್ನುವ ಬೇಸರದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ನರಸಿಂಹಯ್ಯನ ಮಗ ಕಿರಣ್ ಕುಮಾರ್ (28) ಆತ್ಮಹತ್ಯೆಗೆ ಶರಣಾದ ಮೃತ ದುರ್ದೈವಿ. ಮದುವೆಯಾಗಲು ಹೆಣ್ಣು ಸಿಗದ ಕಾರಣ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಾಕಷ್ಟು ಕಡೆ ಹೆಣ್ಣುಗಳನ್ನು ನೋಡಿದ್ದ ಮಾತುಕತೆಗೆ ಅಥವಾ ನಿಶ್ಚಿತಾರ್ಥದ ಹಂತಕ್ಕೆ ಬಂದು ಮದುವೆ ಮುರಿದು ಬೀಳುತ್ತಿದ್ದವು ಇದರಿಂದ ತೀವ್ರ ಕೈಸಾಲಗಳನ್ನು ಮಾಡಿಕೊಂಡು ಕುಡಿತಕ್ಕೆ ಒಳಗಾಗಿದ್ದ ಯುವಕ ಮಾನಸಿಕವಾಗಿ ನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಜುಲೈ 25 ರ ಸೋಮವಾರ ಮಧ್ಯಾಹ್ನ ಮನೆಯಿಂದ ಹೋದವನು ಊರಿನ ಹೊರಭಾಗದ ಗುಡ್ಡೆಯಲ್ಲಿ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರು ದಿನಗಳ ನಂತರ ಕೊಳೆತ ಸ್ಥಿತಿಯಲ್ಲಿ ಕಿರಣ್ ಕುಮಾರನ ಶವ ಪತ್ತೆಯಾಗಿದೆ ವಿಷಯ ತಿಳಿದ ತಕ್ಷಣವೇ ಕೊರಟಗೆರೆ ಆರಕ್ಷಕ ಠಾಣೆಯ ಸಿಪಿಐ ಸಿದ್ದರಾಮೇಶ್ವರ್ ಪಿಎಸ್ಐ ನಾಗರಾಜ್,ಪಿಎಸ್ಐ…
ಮಧುಗಿರಿ: ರೈತರೊಬ್ಬರ ಜಮೀನಿನಲ್ಲಿ ನೆಲದಡಿಯಿಂದ ನೀರು ಉಕ್ಕಿ ಬಂದಿದ್ದು, ಇನ್ನು ಮೂರು ವರ್ಷಗಳ ಕಾಲ ನಮಗೆ ಕೃಷಿಗೆ ನೀರಿನ ಬರವಿಲ್ಲ ಎಂದು ರೈತರ ಮೊಗದಲ್ಲಿ ಸಂತಸ ಮನೆ ಮಾಡಿದೆ. ದೊಡ್ಡ ತಿಮ್ಮಯ್ಯ ಮತ್ತು ಮೂಡಲಗಿರಿಯಪ್ಪ ಎಂಬ ರೈತರ ಜಮೀನಿನಲ್ಲಿ ನೀರು ಉಕ್ಕುತ್ತಿದ್ದು, ರೈತರು ಹರ್ಷ ವ್ಯಕ್ತಪಡಿಸಿದ್ದಾರೆ. ವಕೀಲರಾದ ಶಿವಣ್ಣನವರು ಈ ಬಗ್ಗೆ ಮಾತನಾಡಿ, ಲಕ್ಷ್ಮಿಪುರದ ಕೆರೆ ತುಂಬಿ ಕೋಡಿ ಹರಿಯುತ್ತಿದ್ದು, ಸುತ್ತಮುತ್ತಲಿನ ಹಳ್ಳ ತುಂಬಿ ಹರಿಯುತ್ತಿದೆ. ದೊಡ್ಡೇರಿ ಗ್ರಾಮದ ಲಕ್ಷ್ಮಿಪುರದ ಕೆರೆಯ ಹಿಂಬದಿ ಇರುವ ಜಮೀನುಗಳಲ್ಲಿ ವ್ಯವಸಾಯಕ್ಕೆ ಯೋಗ್ಯವಾಗಿ ಇನ್ನೂ ಎರಡು ಮೂರು ವರ್ಷ ವ್ಯವಸಾಯ ಮಾಡಿಕೊಳ್ಳಲು ಜೀವನ ನಡೆಸಲು ಯಾವುದೇ ತೊಂದರೆ ಇಲ್ಲ ಎಂದರು. ದೊಡ್ಡೇರಿ ಗ್ರಾಮದ ವಾಸಿಯಾದ ಡಿ.ಟಿ.ಚೇತನ್ ಮಾತನಾಡಿ, ದೊಡ್ಡೇರಿ ಲಕ್ಷ್ಮಿಪುರದ ಕೆರೆ ಹಿಂಭಾಗ ಎಲ್ಲಾ ಬಾವಿಗಳು ತುಂಬಿ ತುಳುಕಿದ್ದು, ಹೊಲಗಳಲ್ಲಿ ನೀರು ನಿಂತಿವೆ. ಇದು ಸಂತೋಷದ ವಿಚಾರ ಎಂದರು. ಈ ಸಂದರ್ಭದಲ್ಲಿ ಸತೀಶ್ ಡಿ.ಎಂ. ರಮೇಶ್ ಡಿಎಸ್ ರಮೇಶ್ ರಾಮಣ್ಣನವರು ಹೊಲದ ಮಾಲೀಕರು ಇದ್ದರು. ವರದಿ:…
ಭಾರತದಂತ ದೇಶದ ಮೇಲೆ ಒಂದು ಭಾಷೆ, ಒಂದು ಧರ್ಮ ಮತ್ತು ಒಂದು ಸಂಸ್ಕೃತಿಯನ್ನು ಹೇರುವುದು ಅಸಾಧ್ಯ ಎಂದು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ. ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಭಾರತದಲ್ಲಿ ಒಂದು ಭಾಷೆ, ಒಂದು ಧರ್ಮ ಮತ್ತು ಒಂದು ಸಂಸ್ಕೃತಿಯನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದು ಅವರು ಹೇಳಿದರು ಒಂದು ಭಾಷೆ ಮತ್ತು ಒಂದು ಧರ್ಮವನ್ನು ಪ್ರಚಾರ ಮಾಡುವವರು ನಮ್ಮ ಏಕತೆಯನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ. ಅಂತಹವರು ಭಾರತ ಮತ್ತು ಭಾರತೀಯರ ಶತ್ರುಗಳು’ ಎಂದು ಅವರು ಹೇಳಿದರು. ಸಂಯುಕ್ತ ವ್ಯವಸ್ಥೆಯು ನಮ್ಮ ದೇಶದ ಅಡಿಪಾಯ ಎಂದ ಅವರು, ಬಲಿಷ್ಠ ಸ್ವಾಯತ್ತ ರಾಜ್ಯಗಳನ್ನು ಹೊಂದುವುದೊಂದೇ ಭಾರತ ಅಭಿವೃದ್ಧಿ ಹೊಂದಲು ಇರುವ ಏಕೈಕ ಮಾರ್ಗವಾಗಿದೆ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆ ಚುರುಕುಗೊಂಡಿದೆ. ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್ ಕೌಂಟರ್ ನಲ್ಲಿ ಒಬ್ಬ ಭಯೋತ್ಪಾದಕನ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಹತ್ಯೆಗೀಡಾದ ಭಯೋತ್ಪಾದಕನನ್ನು ಇರ್ಷಾದ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ. ಆತ ಹಲವು ದಿನಗಳಿಂದ ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದು, ಲಷ್ಕರ್-ಎ-ತಯಬಾ (ಎಲ್ಇಟಿ) ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ. ಈತನಿಂದ ಒಂದು ಬಂದೂಕು, 2 ಮ್ಯಾಗಜೀನ್ಗಳು ಸೇರಿದಂತೆ 30 ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz