Author: admin

ತುಮಕೂರು: ಅಲ್ಪಸಂಖ್ಯಾತರ ಸಮಾವೇಶ ನಡೆಯಲಿದ್ದು,  ತಿಪಟೂರಿನಿಂದ ಒಂದೂವರೆಯಿಂದ ಎರಡು ಸಾವಿರ ಜನ ಸಮಾವೇಶದಲ್ಲಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಜಿ ಶಾಸಕ ಕಾಂಗ್ರೆಸ್ ನ ಕೆ.ಷಡಕ್ಷರಿಯವರು ತಿಳಿಸಿದರು. ತಿಪಟೂರು ನಗರದಲ್ಲಿ ಮಾತನಾಡಿದ ಅವರು , ಅಲ್ಪಸಂಖ್ಯಾತರಿಗೆ ಸಂವಿಧಾನಬದ್ಧವಾಗಿ ಸಿಗಬೇಕಾದ ನ್ಯಾಯ ಸಿಗುತ್ತಿಲ್ಲ , ಸರ್ಕಾರದ ಸವಲತ್ತುಗಳು ಸಿಗುತ್ತಿಲ್ಲ.  22ರಂದು ತುಮಕೂರಿನ ಜಿಲ್ಲಾಮಟ್ಟದಲ್ಲಿ ಅಲ್ಪಸಂಖ್ಯಾತರ ಸಮಾವೇಶ ಏರ್ಪಡಿಸಲಾಗಿದೆ. ಅಲ್ಪಸಂಖ್ಯಾತರೆಂದರೆ ಮುಸಲ್ಮಾನರು ಮಾತ್ರವಲ್ಲ,  ಕ್ರೈಸ್ತರು,  ಸಿಖ್ಖರು ಇನ್ನೂ ಅನೇಕ ಪಂಗಡಗಳು ಬರುತ್ತದೆ.  ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯದ ಪ್ರಮುಖ ನಾಯಕರು ಜಿಲ್ಲಾ ನಾಯಕರು ಭಾಗವಹಿಸಲಿದ್ದಾರೆ  ಎಂದು ತಿಳಿಸಿದರು. ಬಿಜೆಪಿ ಸರ್ಕಾರವು ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸಿ ದೇ ಅಗತ್ಯವಸ್ತುಗಳ ಬೆಲೆಗಳನ್ನು ಗಗನಕ್ಕೇರುತ್ತಿದ್ದು ಅನಾವಶ್ಯಕವಾಗಿ ಸಾವಿರಾರು ವರ್ಷಗಳ ಹಿಂದಿನ ವಿಷಯವನ್ನು ಮುಖ್ಯವಾಗಿಸಿಕೊಂಡು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ಪರವಿಲ್ಲ ಎಂದರು ಇನ್ನು ಆರು ತಿಂಗಳಲ್ಲಿ ಸರ್ಕಾರ ವಿಸರ್ಜನೆ ಗೊಳ್ಳಲಿದೆ ಎಂದು ಕಾಂಗ್ರೆಸ್ ಮುಖಂಡ ಲೋಕೇಶ್ವರ್…

Read More

ಕೊರಟಗೆರೆ: ತಾಲ್ಲೂಕಿನ ಕಸಬಾ ಹೋಬಳಿಯ ಹಂಚಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲೇಶ್ವರದ ಕೆರೆಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮಹಿಳೆಯ ದೇಹವು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ತೇಲಿ ಬಂದಿರುವುದನ್ನು ಕಂಡು ಸ್ಥಳೀಯರು ಕೊರಟಗೆರೆ ಪೊಲೀಸ್ ಠಾಣೆಗೆ ಸುದ್ದಿ ಮುಟ್ಟಿಸಿದ್ದಾರೆ. ತಕ್ಷಣ ಕೊರಟಗೆರೆಯ ಪೊಲೀಸ್ ಠಾಣಾ ಸಬ್ ಇನ್ಸ್ ಪೆಕ್ಟರ್ ನಾಗರಾಜು ,ಎ ಎಸ್ ಐ ಗೋವಿಂದ ನಾಯ್ಕ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಸಹಾಯದಿಂದ ಮಹಿಳೆಯ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ.. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಮಧುಗಿರಿ: ಮೇ 22 ರಂದು ತುಮಕೂರು ನಗರದಲ್ಲಿ ನಡೆಯಲಿರುವ ಕಾಂಗ್ರೆಸ್ ಅಲ್ಪ ಸಂಖ್ಯಾತರ ಸಮಾವೇಶ ಯಶಸ್ವಿಗೊಳಿಸಲು ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಅತೀಖ್ ಅಹಮದ್ ಕರೆ ನೀಡಿದರು. ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ಅಲ್ಪ ಸಂಖ್ಯಾತರ ರಾಜ್ಯ ಹಾಗೂ ಜಿಲ್ಲಾಧ್ಯಕ್ಷರ ಸಮ್ಮುಖದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂ-ಮುಸ್ಲೀಂ ಭಾಂದವರು ಈ ದೇಶದಲ್ಲಿ ಅಣ್ಣ-ತಮ್ಮಂದಿರ ಹಾಗೆ ಜೀವನ ನಡೆಸುತ್ತಿದ್ದಾರೆ. ಆದರೆ ನಮ್ಮ ಮಧ್ಯ ಬಿಜೆಪಿ ಸರ್ಕಾರ ಕೋಮು ಗಲಭೆ ತಂದಿಟ್ಟು ಒಡೆದು ಆಳುವ ನೀತಿ ಅನುಸರಿಸುತ್ತಿದೆ ಹಾಗೂ ಮುಸ್ಲಿಂ ಸಮುದಾಯದ ವಿಧ್ಯಾರ್ಥಿಗಳಿಗೆ ಅನಾನುಕೂಲವಾಗುವಂತಹ ಕಾರ್ಯಕ್ಕೆ ಕೈ ಹಾಕಿದ್ದು, ಇದರ ವಿರುದ್ದ ಮೇ 22 ರಂದು ತುಮಕೂರು ನಗರದಲ್ಲಿ ಬೃಹತ್ ಸಮಾವೇಷ ಹಮ್ಮಿಕೊಳ್ಳಲಾಗಿದೆ ಎಂದರು. ಸಮಾವೇಶದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಶಾಸಕ ಕೆ.ಎನ್.ರಾಜಣ್ಣ, ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ಹಾಗೂ ಇನ್ನಿತರ ಗಣ್ಯರು ಭಾಗವಹಿಸಲಿದ್ದು, ಮುಸ್ಲೀಂ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಮನವಿ ಮಾಡಿದರು. ಅಲ್ಪಸಂಖ್ಯಾತರ ರಾಜ್ಯ ಉಪಾಧ್ಯಕ್ಷ ಮುದರ್…

Read More

ಮಧುಗಿರಿ: ದೊಡ್ಡೇರಿ ಹೋಬಳಿ ಹಾವಿನಮಾಡಗು ಗ್ರಾಮದ ನಿವಾಸಿ ಲಕ್ಷ್ಮಮ್ಮ  ಕೋಂ ಓಬಳಯ್ಯ ಇವರು ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ  ವಿದ್ಯುತ್  ತಂತಿ ತಗಲಿ ಸಾವನ್ನಪ್ಪಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಶಾಸಕರಾದ ಕೆ.ಎನ್.ರಾಜಣ್ಣ ಮೃತರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ ಅವರು, ಕೂಡಲೇ ಬೆಸ್ಕಾಂ ಇಲಾಖೆಯ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಮಾತನಾಡಿ,  ಆದಷ್ಟು ಬೇಗ ಇಲಾಖೆಯಿಂದ ಸಿಗಬೇಕಾದ ಪರಿಹಾರವನ್ನು ನೀಡಬೇಕೆಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ, ಮತ್ತೊಂದು ಬಾರಿ ಇಂತಹ ಅವಘಡಗಳು ಸಂಭವಿಸದಂತೆ ನೋಡಿಕೊಳ್ಳಬೇಕೆಂದು ಎಚ್ಚರಿಕೆ ನೀಡಿದರು. ಈಗಾಗಲೇ ಈ ಕುಟುಂಬದ ಸದಸ್ಯರೊಬ್ಬರು ಕೋವಿಡ್ ನಿಂದ ಮೃತಪಟ್ಟಿದ್ದು, ಇದರಿಂದಾಗಿ ಕುಟುಂಬದ ನಿರ್ವಹಣೆ ಕಷ್ಷವಾಗಿದೆ. ಯಾವುದೇ ತಾರತಮ್ಯ ಮಾಡದೇ ಸರ್ಕಾರದಿಂದ ಬರುವ ಸೌಲಭ್ಯವನ್ನು ಕುಟುಂಬಸ್ಥರಿಗೆ ಬೇಗನೆ ಸಿಗುವಂತೆ ಮಾಡಬೇಕು. ಈ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಇಲಾಖೆ ಎದುರು ಪ್ರತಿಭಟನೆ ಮಾಡುವುದಾಗಿ ಎಚ್ಚರ ವಹಿಸಿದರು. ಈ ಸಂದರ್ಭದಲ್ಲಿ ಲಕ್ಷ್ಮೀನಾರಾಯಣಪ್ಪ, T.P.ಮಂಜಣ್ಣ, ದೊಡ್ಡೇರಿ   ಕಣಿಮಯ್ಯ ತಾಲೂಕು ಯುವ ಕಾಂಗ್ರೆಸ್…

Read More

ಕೊರಟಗೆರೆ: ವಯೋವೃದ್ಧರಿಗೆ 10 ಸಾವಿರ ರೂಪಾಯಿಯ ಆಸೆ ತೋರಿಸಿ, ಸುಮಾರು 5 ಲಕ್ಷ ರೂಪಾಯಿಗಳಿಗೂ ಹೆಚ್ಚಿನ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ಕೊರಟಗೆರೆ ಪಟ್ಟಣದ ದೊಡ್ಡಪೇಟೆ ಬಡಾವಣೆಯಲ್ಲಿ ನಡೆದಿದ್ದು, ಇದೀಗ ಒಡವೆಗಳನ್ನು ಕಳೆದುಕೊಂಡ ವೃದ್ಧರು ಕಂಗಾಲಾಗಿದ್ದಾರೆ. ಕೊರಟಗೆರೆ ಪಟ್ಟಣದ ದೊಡ್ಡಪೇಟೆ ಬಡಾವಣೆಯ ಗಿರಿಜಮ್ಮ ರೇಣುಕಪ್ಪ ಎಂಬ ವೃದ್ಧ ದಂಪತಿಯ ಮನೆಗೆ ಬಂದ  ಅಪರಿಚಿತ ವ್ಯಕ್ತಿಯೊಬ್ಬ ಕಣ್ಣಿನ ಆಪರೇಶನ್ ಮಾಡಿಸಿದರೆ ಹತ್ತು ಸಾವಿರ ರೂಪಾಯಿ ಉಚಿತ ಹಣವನ್ನು ಕೊಡುತ್ತಾರೆ ಎಂದು ವೃದ್ಧರನ್ನು ನಂಬಿಸಿದ್ದಾನೆ. ಇವರ ಆಧಾರ್ ಕಾರ್ಡ್ ನಂಬರ್ ಪೆನ್ಷನ್ ಕ್ಲಿಪ್ ಪಡೆದುಕೊಂಡು ವೃದ್ಧರನ್ನು ನಂಬಿಸಿದ್ದಾನೆ. ಇದಾದ ಬಳಿಕ ಅಜ್ಜಿಯನ್ನು ತನ್ನ ಬೈಕ್ ನಲ್ಲಿ ಕೂರಿಸಿಕೊಂಡು  ಆಸ್ಪತ್ರೆಯ ಬಳಿಗೆ ಕರೆದುಕೊಂಡು ಹೋಗಿದ್ದು, ಆಸ್ಪತ್ರೆಯಲ್ಲಿ ಆಪರೇಷನ್ ಮಾಡುವಾಗ ಒಡವೆಯನ್ನು ಯಾರಾದರೂ ಕೊಂಡುಹೋಗುತ್ತಾರೆ. ನನ್ನ ಬಳಿಯಲ್ಲಿ ಕೊಡಿ ನಾನು ನೋಡಿಕೊಳ್ಳುತ್ತೇನೆ ಎಂದು ಅಜ್ಜಿಯನ್ನು ನಂಬಿಸಿದ್ದಾನೆ. ಈತನ ಮಾತು ನಂಬಿ ಅಜ್ಜಿ ತಮ್ಮ 5 ಲಕ್ಷ ರೂಪಾಯಿ ಬೆಲೆ ಬಾಳುವ ಒಡವೆಯನ್ನು ಕಳ್ಳನ ಕೈಗೆ ನೀಡಿದ್ದಾರೆ. ಈ…

Read More

ಕೊರಟಗೆರೆ: ನಾವು ಕಾಡಿನಲ್ಲಿಯೇ ಸುಖವಾಗಿ ಜೀವನ ಮಾಡುತ್ತಿದ್ವಿ. ಈಗ ನಾಡಿಗೆ ನೋವು  ಅನುಭವಿಸುವ ಪರಿಸ್ಥಿತಿ ನಿರ್ಮಾಣ ಆಗಿದೆ. ಸರಕಾರ ನಮಗೆ ನೀಡಿದ ಭರವಸೆಯು ಈಗ ಹುಸಿಯಾಗಿದೆ. ಕಳೆದ 50 ವರ್ಷಗಳಿಂದ ನಮ್ಮ ಹಕ್ಕಿಪಿಕ್ಕಿ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗವು ಮರೀಚಿಕೆ ಆಗಿದೆ ಎಂದು ಹಕ್ಕಿಪಿಕ್ಕಿ ಬುಡಕಟ್ಟು ಯುವ ಸಂಘಟನೆಯ ರಾಜ್ಯಾಧ್ಯಕ್ಷ ಪುನೀತ್ ಕುಮಾರ್  ಸರ್ಕಾರದ ವಿರುದ್ಧ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಕೊರಟಗೆರೆ ಪಟ್ಟಣದ ಕಂದಾಯ ಆವರಣದಲ್ಲಿ ರಾಜ್ಯ ಸರಕಾರ ಮತ್ತು ಕಂದಾಯ ಇಲಾಖೆಯ ವಿರುದ್ದ ಹಕ್ಕಿಪಿಕ್ಕಿ ಸಮುದಾಯದ ಜನತೆಯ ಜೊತೆಗೂಡಿ ಆಕ್ರೋಶ ವ್ಯಕ್ತಪಡಿಸಿ ಮನೆಗಳ ಹಕ್ಕುಪತ್ರ ನೀಡುವಂತೆ ಉಪತಹಶೀಲ್ದಾರ್ ನರಸಿಂಹಮೂರ್ತಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. 50 ವರ್ಷದಿಂದ ಕೊರಟಗೆರೆ ಕ್ಷೇತ್ರದ ಗಡಿಭಾಗದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ 150 ಕುಟುಂಬಗಳು ವಾಸವಿದ್ದಾರೆ. ಇಲ್ಲಿನ 150 ಕುಟುಂಬಕ್ಕೆ ಮನೆಯ ಹಕ್ಕುಪತ್ರವೇ ಇಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಶಿಕ್ಷಣ ವಂಚಿತ ಕುಟುಂಬಕ್ಕೆ ಮನೆಯ ಹಕ್ಕುಪತ್ರವು ಮರೀಚಿಕೆ ಆಗಿದೆ. ರಾಜಕೀಯ ನಾಯಕರು ಚುನಾವಣೆಗೆ ಮಾತ್ರ ನಮ್ಮನ್ನು…

Read More

ಬೆಂಗಳೂರು: 2021-2022ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದೆ. ಇಂದು ಮಲ್ಲೇಶ್ವರದಲ್ಲಿರುವ ಫ್ರೌಡಶಾಲಾ ಪರೀಕ್ಷಾ ಮಂಡಳಿಯಲ್ಲಿ ನಿಗದಿಪಡಿಸಿದ್ದ ಪತ್ರಿಕಾಗೋಷ್ಟಿ ಮೂಲಕ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಸಚಿವ ಬಿ.ಸಿ ನಾಗೇಶ್ ಫಲಿತಾಂಶ ಪ್ರಕಟಿಸಿದ್ದಾರೆ. ಒಟ್ಟು 8,53,436 ಮಂದಿ ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 7,30,881 ಮಂದಿ ಉತ್ತೀರ್ಣರಾಗಿದ್ದಾರೆ. ಇದರಲ್ಲಿ 3,72,279 ವಿದ್ಯಾರ್ಥಿನಿಯರು, 3,58,602 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನು ಒಟ್ಟು 145 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ಮೊದಲ ಸ್ಥಾನ ಪಡೆದಿದ್ದಾರೆ. ಇನ್ನು 309 ವಿದ್ಯಾರ್ಥಿಗಳು 625ಕ್ಕೆ 624 ಅಂಕ ಪಡೆಯುವ ಮೂಲಕ 2ನೇ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳು ಫಲಿತಾಂಶವನ್ನು http://kseeb.kar.ini.in ಅಥವಾ http://sslc.karnataka.gov.in ಅಥವಾ http://karresults.nic.in. ಮೂಲಕ ವೀಕ್ಷಿಸಬಹುದಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಟೊಮೆಟೊ ಬೆಲೆ ಮತ್ತೆ ಗಗನಕ್ಕೇರಿದೆ. ಅಕಾಲಿಕ ಮಳೆಯಿಂದ ರೈತರು ಬೆಳೆದ ಬೆಳೆ ಸಂಪೂರ್ಣವಾಗಿ ನಾಶವಾಗುತ್ತಿದ್ದು, ಇದ್ದರಿಂದ ರೈತರು ಕಂಗಲಾಗಿದ್ದಾರೆ. ಅದರಲ್ಲೂ ಟೊಮೆಟೊ ಬೆಳೆ ಹೊಲದಲ್ಲೇ ಕೊಳೆಯುತ್ತಿದೆ. ಹೀಗಾಗಿ ಟೊಮೆಟೊ ದರ ಗಗನಕ್ಕೇರಿದೆ. ದಿಢೀರನೇ ಒಂದು ಕೆಜಿ ಟೊಮೆಟೊಗೆ ೯೦ ರಿಂದ ೧೦೦ ರೂಪಾಯಿ ಬೆಲೆ ಏರಿಕೆಯಾಗಿದೆ. ಕಳೆದ ಎರಡು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಟೊಮೆಟೊ ಮಾರುಕಟ್ಟೆಗೆ ಬರುತ್ತಿಲ್ಲ. ಜಿಲ್ಲೆಯ ಎಪಿಎಂಸಿ ಮಾರುಕಟ್ಟೆಗೆ ಹೆಬ್ಬೂರು, ಗುಬ್ಬಿ, ಹೊನ್ನುಡಿಕೆ, ಉರ್ಡಿಗೆರೆ, ಕೊರಟಗೆರೆ, ತಿಪಟೂರು ಕಡೆಯಿಂದ ಅತಿಹೆಚ್ಚು ಮಾರುಕಟ್ಟೆಗೆ ಟೊಮೆಟೊ ಬರುತ್ತಿತ್ತು. ಮಾರುಕಟ್ಟೆಗೆ ದಿನಕ್ಕೆ ಐದಾರು ಲಾರಿಯಲ್ಲಿ ಟೊಮೆಟೊ ಬರುತ್ತಿತ್ತು. ಆದರೆ ಸದ್ಯ ಒಂದು ಲಾರಿಯಲ್ಲಿ ಮಾತ್ರ ಬರುತ್ತಿದೆ. ಟೊಮೆಟೊ ದರ ಏರಿಕೆಯಾಗಿರುವ ಕಾರಣ ಖರೀದಿಸಲು ಜನರು ಹಿಂದೇಟು ಹಾಕುತ್ತಿದ್ದಾರೆ. ಇನ್ನು ರಾಜ್ಯದಲ್ಲಿ ಇದೇ ರೀತಿ ಮಳೆ ಮುಂದುವರೆದರೆ, ಮತ್ತೆ ಟೊಮೆಟೊ ದರ ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಕಳೆದ ವರ್ಷ ಅಕ್ಟೋಬರ್ ನಲ್ಲೂ ಕೂಡ ಟೊಮೆಟೊ ಬೆಲೆ…

Read More

ವಾಯುಭಾರ ಕುಸಿತದಿಂದಾಗಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ನಿನ್ನೆ ಸಂಜೆಯಿಂದ ಇಡೀ ರಾತ್ರಿ ಸುರಿದ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ಅವಾಂತರಕ್ಕೆ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಪರಿಹಾರ ಕಾರ್ಯ ಕೈಗೊಳ್ಳಲಾಗದೆ ಇಬ್ಬರು ಕಾರ್ಮಿಕರ ಮೃತದೇಹ ರಾತ್ರಿ ಇಡೀ ಪೈಪ್‌ನಲ್ಲಿ ಉಳಿದಿತ್ತು. ರಾಜ್ಯದಲ್ಲಿ ಇನ್ನು ೫ ದಿನ ಮಳೆ ಬೀಳಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉಲ್ಲಾಳ ಉಪನಗರದ ಉಪಕಾರ್ ಬಡಾವಣೆಯಲ್ಲಿ ಪೈಪ್ ಲೈನ್ ಕಾಮಗಾರಿ ನಡೆದಿತ್ತು. ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಕಾಮಗಾರಿ ಸ್ಥಳದಲ್ಲಿ ಮಳೆ ನೀರು ತುಂಬಿಕೊಂಡು ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಮೂವರು ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಮೃತಪಟ್ಟವರನ್ನು ಬಿಹಾರ ಮೂಲದ ದೇವ್‌ಭರತ್ ಉತ್ತರ ಪ್ರದೇಶದ ಅಂಕಿತ್ ಕುಮಾರ್ ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯಾಹ್ನನಿಂದಲೇ ಆರಂಭವಾದ ಮಳೆರಾಯ ಬಿಟ್ಟು ಬಿಡದೆ ರಾತ್ರಿಯಿಡಿ ಸುರಿದಿದೆ. ನಗರದ ಕೆಲವು ಪ್ರದೇಶಗಳಲ್ಲಿ ೧೦೦ ಮಿ.ಮೀ ಮಳೆಯಾಗಿದೆ. ಬಹುತೇಕ…

Read More

ಭಾರತ ನೆರಯ ಪಾಕಿಸ್ತಾನ ಮತ್ತು ಚೀನಾದ ಬೆದರಿಕೆ ಎದುರಿಸಲು ರಷ್ಯಾದಿಂದ ಪಡೆದ ಎಸ್-400 ಕ್ಷಿಪಣಿಯನ್ನು ತನ್ನ ಸೇನಾ ಬತ್ತಳಿಕೆಗೆ ಸೇರಿಸಲು ಉದ್ದೇಶಿಸಿದೆ ಎಂದು ಅಮೆರಿಕದ ಪೆಂಟಗನ್ ಗೂಢಚಾರರು ತಿಳಿಸಿದ್ದಾರೆ. ಭಾರತವು ಕಳೆದ ವರ್ಷ ಡಿಸೆಂಬರ್‍ನಲ್ಲಿ ರಷ್ಯಾದಿಂದ ಎಸ್-400 ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಪಡೆಯಲು ಪ್ರಾರಂಭಿಸಿತು ಎಂದು ರಕ್ಷಣಾ ಗುಪ್ತಚರ ಸಂಸ್ಥೆಯ ನಿರ್ದೇಶಕ ಲೆಫ್ಟಿನೆಂಟ್ ಜನರಲ್ ಸ್ಕಾಟ್ ಬೆರಿಯರ್ ಸೆನೆಟ್ ಸಶಸ್ತ್ರ ಸೇವೆಗಳ ಸಮಿತಿಯ ಸದಸ್ಯರಿಗೆ ತಿಳಿಸಿದರು. ಅಕ್ಟೋಬರ್ 2021 ರಿಂದ ಭಾರತದ ಮಿಲಿಟರಿ ತನ್ನ ಭೂಮಿ ಮತ್ತು ಸಮುದ್ರದ ಗಡಿಗಳನ್ನು ಬಲಪಡಿಸಲು ಮತ್ತು ಅದರ ಆಕ್ರಮಣಕಾರಿ ಮತ್ತು ರಕ್ಷಣಾತ್ಮಕ ಸೈಬರ್ ಸಾಮಥ್ರ್ಯಗಳನ್ನು ಹೆಚ್ಚಿಸಲು ಸುಧಾರಿತ ಕಣ್ಗಾವಲು ವ್ಯವಸ್ಥೆಗಳನ್ನು ಪಡೆಯಲು ಪ್ರಯತ್ನಿಸುತ್ತಿದೆ. ಡಿಸೆಂಬರ್‍ನಲ್ಲಿ ಭಾರತವು ರಷ್ಯಾದ ಎಸ್-400 ವಾಯು ರಕ್ಷಣಾ ವ್ಯವಸ್ಥೆಯ ಆರಂಭಿಕ ವಿತರಣೆಯನ್ನು ಸ್ವೀಕರಿಸಿದೆ ಮತ್ತು ಜೂನ್ ವೇಳೆಗೆ ಪಾಕಿಸ್ತಾನ ಮತ್ತು ಚೀನಾದ ಬೆದರಿಕೆಗಳ ವಿರುದ್ಧ ರಕ್ಷಿಸಲು ವ್ಯವಸ್ಥೆಯನ್ನು ನಿರ್ವಹಿಸಲು ಉದ್ದೇಶಿಸಿದೆ ಎಂದು ಬೆರಿಯರ್ ಹೇಳಿದರು. ಭಾರತವು ತನ್ನದೇ ಆದ ಹೈಪಸಾರ್‍ನಿಕ್,…

Read More