Subscribe to Updates
Get the latest creative news from FooBar about art, design and business.
- ಚಿಕ್ಕಬಳ್ಳಾಪುರ: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ; ನವವಿವಾಹಿತೆ ದುರ್ಮರಣ, ಪತಿಗೆ ಗಂಭೀರ ಗಾಯ
- ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ
- ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!
- ಕೊರಟಗೆರೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕ ಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣೋತ್ಸವ
- ಮೇಲನಹಳ್ಳಿ ತ್ಯಾಜ್ಯ ಘಟಕಕ್ಕೆ ಗ್ರಾಮಸ್ಥರ ತೀವ್ರ ವಿರೋಧ: ತಹಶೀಲ್ದಾರ್ ಭೇಟಿ
- ಕರ್ನಾಟಕ ಒಲಂಪಿಕ್ 2025: ಕ್ರೀಡಾಪಟುಗಳ ಬೆನ್ನಿಗೆ ನಿಂತ ಸರ್ಕಾರ; ಪದಕ ಗೆದ್ದರೆ ಕೋಟಿ ಕೋಟಿ ನಗದು ಸಂಭಾವನೆ
- ಪಾವಗಡ ತಾಲ್ಲೂಕಿನಲ್ಲಿ ಪಲ್ಸ್ ಪೋಲಿಯೋ ಅಭಿಯಾನ: 17 ಸಾವಿರ ಮಕ್ಕಳಿಗೆ ಲಸಿಕೆ ಗುರಿ
- ಸಂತಪುರದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
Author: admin
ತುಮಕೂರು: 161 ಅಡಿ ಎತ್ತರದ ಆಂಜನೇಯ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಯಾಗಿರುವುದು ಮುಂದಿನ ದಿನಗಳಲ್ಲಿ ಕನ್ನಡನಾಡಿಗೆ ಒಳ್ಳೆಯ ಕಾಲವಿದೆ ಎನ್ನುವುದರ ಸೂಚನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ಇಂದು ಕುಣಿಗಲ್ ತಾಲ್ಲೂಕಿನ ಬಿದನಗೆರೆ ಶ್ರೀ ಬಸವೇಶ್ವರ ಮಠದ ವತಿಯಿಂದ ನಿರ್ಮಿಸಿರುವ 161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿ ಮೂರ್ತಿಯನ್ನು ಉದ್ಘಾಟಿಸಿ ಮಾತನಾಡಿದರು. ಶ್ರೀ ರಾಮನವಮಿಯ ದಿನದಂದು ಪವಿತ್ರ ಕೆಲಸ ಕಾರ್ಯಗಳು ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿದೆ. ಇಲ್ಲಿಯ ಅಭಿವೃದ್ಧಿ ಕಾರ್ಯಗಳು ಕೆಲವೇ ವರ್ಷಗಳಲ್ಲಿ ಎಷ್ಟು ದೊಡ್ಡ ಶಕ್ತಿಯಾಗಿ ಕ್ಷೇತ್ರಕ್ಕೆ ಬೆಳೆದಿದೆ ಎಂದು ತಿಳಿಯುತ್ತದೆ. ಇಲ್ಲಿನ ಭಕ್ತರ ಮನಸ್ಸು ಬಹಳ ದೊಡ್ಡದಿದೆ ಎಂದು ತಿಳಿಯುತ್ತದೆ ಎಂದರು. ಪಂಚಮುಖಿ ಆಂಜನೇಯ ಬಹಳ ವಿಶಿಷ್ಟ. ರಾಮಾಯಣದಲ್ಲಿ ವಿಶೇಷವಾದ ಸಂದರ್ಭದಲ್ಲಿ ಹನುಮನ ಅವತಾರವಿದು . ಸಂಪೂರ್ಣವಾಗಿ ಲೋಕಕಲ್ಯಾಣ ಕ್ಕಾಗಿ ಹನುಮ ಈ ಅವತಾರವನ್ನು ಎತ್ತಿದ ಎನ್ನುವುದು ತಿಳಿದ ಸಂಗತಿ. ಕನ್ನಡನಾಡಿನಲ್ಲಿ 161 ಅಡಿ ಎತ್ತರದ ಮೂರ್ತಿ ಸ್ಥಾಪನೆಯಾಗಿರುವುದು ಹನುಮನ ಇಚ್ಛೆ. ಶಿಲ್ಪಿಗಳು ಅದ್ಭುತವಾದ ಕಲಾಕೃತಿ ನಿರ್ಮಿಸಿದ್ದಾರೆ.…
ಸರಗೂರು: ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟದ ಬಳಿ ಇರುವ ಹಾಲುಗಡಿ ಕಬಿನಿ ಹೊಳೆ ಕಾವಲಿಯಲ್ಲಿ ಹಸುವಿಗೆ ನೀರು ಕುಡಿಸಲು ತೆರಳಿದ್ದ ಯುವಕ ಕಾಲು ಜಾರಿ ಬಿದ್ದು ನೀರು ಪಾಲಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಲಂಕೆ ಗ್ರಾಮದ 23 ವರ್ಷದ ಯುವಕ ಮನು ಮೃತ ಯುವಕನಾಗಿದ್ದು, ಈತ ತನ್ನ ಜಮೀನು ಬಳಿ ಇರುವ ಕಬಿನಿ ಹೊಳೆಯಲ್ಲಿ ಹುಸುವಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ನಂತರ ತಾಲ್ಲೂಕಿನ ಜೆಡಿಎಸ್ ಯುವ ಮುಖಂಡ ಜಯಪ್ರಕಾಶ್ ಅವರು ಘಟನೆಯ ವಿಷಯ ತಿಳಿದ ತಕ್ಷಣವೇ ಸ್ಥಳಕ್ಕೆ ಆಗಮಿಸಿ, ಅಗ್ನಿಶಾಮಕ ದಳದ ಸಿಬ್ಬಂದಿ ಕರೆ ಮಾಡಿ, ಪಿಎಸ್ಐ ಶ್ರಾಮಣದಾಸ ರೆಡ್ಡಿ ಅವರಿಗೂ ವಿಷಯ ಮುಟ್ಟಿಸಿದ್ದು, ಸದ್ಯ ಯುವಕ ಮೃತದೇಹ ಹೊರ ತೆಗೆಯಲಾಗಿದೆ. ಹಸುಗಳಿಗೆ ನೀರು ಕುಡಿಸಿ ಬರುತ್ತೇನೆ ಎಂದು ಹೋಗಿದ್ದ ಯುವಕ ಬಹಳಷ್ಟು ಹೊತ್ತಾದರೂ ಮರಳಿ ಬಂದಿರಲಿಲ್ಲ. ಇದರಿಂದಾ ಆತಂಕಗೊಂಡ ಪೋಷಕರು ಸಾಕಷ್ಟು ಹುಡುಕಾಟ ನಡೆಸಿದ್ದರೂ ಮನುವಿನ ಪತ್ತೆಯಾಗಿರಲಿಲ್ಲ. ಘಟನೆ ಸಂಬಂಧ ಸರಗೂರು ಪೊಲೀಸ್…
ಕೊರಟಗೆರೆ: ತಾಲ್ಲೂಕಿನ ವಿವಿಧ ದೇವಾಲಯಗಳಲ್ಲಿ ಶ್ರೀ ರಾಮನವಮಿಯ ಅಂಗವಾಗಿ ಬೆಳಿಗ್ಗಿನಿಂದಲೇ ಅಭಿಷೇಕ ವಿವಿಧ ಅಲಂಕಾರಗಳೊಂದಿಗೆ ವಿಶೇಷ ಪೂಜೆಯನ್ನು ಭಕ್ತಾದಿಗಳ ಸಮಕ್ಷಮದಲ್ಲಿ ನೆರವೇರಿಸಲಾಯಿತು. ಅದರಲ್ಲೂ ಶ್ರೀರಾಮ ಬಂಟ ಹನುಮನ ದೇವಾಲಯಗಳಲ್ಲಿ ಯಾವ ದೇವಾಲಯಗಳಲ್ಲೂ ಕಾಣದ ಸಡಗರ ಸಂಭ್ರಮ ಶ್ರೀರಾಮನ ಬಂಟ ಹನುಮನಿಗೆ ಪ್ರಿಯವಾದ ನೈವೇದ್ಯದ ತಿನಿಸುಗಳನ್ನು ಇಟ್ಟು ಶ್ರೀರಾಮನವಮಿಯ ವಿಶೇಷ ಮಜ್ಜಿಗೆ ಪಾನಕವನ್ನು ಭಕ್ತಾದಿಗಳಿಗೆ ನೀಡುವ ಮೂಲಕ ಶ್ರೀರಾಮನವಮಿ ಆಚರಣೆ ಯಿಂದ ಭಕ್ತಾದಿಗಳು ಆಚರಿಸಿದರು: ಇಂದು ಇಡೀ ದೇಶದಲ್ಲೇ ಶ್ರೀ ರಾಮನವಮಿಯ ಆಚರಣೆ ಮಾಡಲಾಗುತ್ತಿದೆ. ಈ ದಿನದಂದು ದೇವಾಲಯಗಳಲ್ಲಿ ಮಜ್ಜಿಗೆ, ಪಾನಕ ಹಂಚುವ ಮೂಲಕ ಭಕ್ತರು ವಿಶೇಷವಾಗಿ ರಾಮನವಮಿ ಆಚರಿಸುತ್ತಾರೆ. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ತುಮಕೂರು: ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ತಾಲೂಕಿನ ಕಟ್ಟಿಗೇನಗಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ನಡೆದಿದೆ. ತುಮಕೂರಿನಿಂದ ಶಿರಾ ಕಡೆಗೆ ತೆರಳುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಕಾರಿನಲ್ಲಿ ಇನ್ನೂ ಮೂವರು ಮಕ್ಕಳಿದ್ದರು. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ತುಮಕೂರು: ಲೋಕಾರ್ಪಣೆಗೊಂಡು ಕೆಲವೇ ತಿಂಗಳುಗಳಲ್ಲಿ ಅತ್ಯಧಿಕ ಓದುಗರನ್ನು ತಲುಪುತ್ತಿರುವ ನಮ್ಮತುಮಕೂರು ಮಾಧ್ಯಮವು ಮೊದಲ ಬಾರಿಗೆ ಡಾ.ಬಿ.ಆರ್.ಅಂಬೇಡ್ಕರ್ ರವರ ಜನ್ಮದಿನದ ಈ ಪ್ರಯುಕ್ತ ಮಕ್ಕಳಿಗೆ ವಿಶೇಷ ಸ್ಪರ್ಧೆಯನ್ನು ಆಯೋಜಿಸಿದೆ. 10 ವರ್ಷದ ಒಳಗಿನ ಮಕ್ಕಳಿಗೆ ಆನ್ ಲೈನ್ ನಲ್ಲಿ ಈ ಸಂಗೀತ ಸ್ಪರ್ಧೆ ಹಮ್ಮಿಕೊಂಡಿದ್ದು, ಮಕ್ಕಳು ಡಾ.ಬಿ.ಆರ್.ಅಂಬೇಡ್ಕರ್ ರವರ ಹಾಡನ್ನು ಹಾಡಿ ಮೊಬೈಲ್ ನಲ್ಲಿ ಚಿತ್ರೀಕರಿಸಿ ಹೆಸರು ವಿಳಾಸಗಳೊಂದಿಗೆ 9164942910 ಈ ನಂಬರಿಗೆ ವಾಟ್ಸಾಪ್ ಮಾಡಿ. ಅತ್ಯುತ್ತಮವಾಗಿ ಹಾಡಿದ ಮಕ್ಕಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಲಾಗುವುದು. ಉತ್ತಮವಾಗಿ ಹಾಡಿದ ಮಕ್ಕಳ ವಿಡಿಯೋಗಳನ್ನು ‘ನಮ್ಮ ತುಮಕೂರು’ ಚಾನೆಲ್ ನಲ್ಲಿ ಪ್ರಸಾರ ಮಾಡಿ ಪ್ರೋತ್ಸಾಹಿಸಲಾಗುವುದು. > ಏಪ್ರಿಲ್ 13 ಸಂಜೆ 3ಗಂಟೆಯ ಒಳಗೆ ವಿಡಿಯೋ ಕಳುಹಿಸ ತಕ್ಕದ್ದು. > ಹಾಡು 5 ನಿಮಿಷದ ಒಳಗೆ ಇರಬೇಕು >ಹಾಡನ್ನು ಸ್ವತಃ ಮಗುವೇ ಹಾಡಿರಬೇಕು ಬಹುಮಾನಗಳ ವಿವರ: ಪ್ರಥಮ: 2,000 ದ್ವಿತೀಯ: 1,000 ತೃತೀಯ: 500 ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ತುಮಕೂರು: ರಾಮನವಮಿಯನ್ನು ಹಿಂದೂ-ಮುಸ್ಲಿಂ ಮುಖಂಡರು ಸೌಹಾರ್ದ ಆಚರಿಸಿರುವ ಘಟನೆ, ತುಮಕೂರಿನಲ್ಲಿ ನಡೆದಿದೆ. ಇಂದು ತುಮಕೂರಿನ ಭದ್ರಮ್ಮ ಸರ್ಕಲ್ ನಲ್ಲಿ ಇಂದು ರಾಮನವಮಿಯ ಸಂದರ್ಭದಲ್ಲಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಸೇರಿ ಕೇಸರಿ ಶಾಲು ತೊಟ್ಟು, ಜೈ ಶ್ರೀರಾಮ್ ಘೋಷಣೆ ಕೂಗಿ, ಸಾರ್ವಜನಿಕರಿಗೆ ಪಾನಕ-ಪಲಾರ, ಮಜ್ಜಿಗೆ ಹಂಚಿ ಗಮನ ಸೆಳೆದರು. ಕಾಂಗ್ರೆಸ್ ಯುವ ಕಾರ್ಯಕರ್ತರು ಕೇಸರಿ ಶಾಲು ಧರಿಸಿದ್ರೇ, ಮುಸ್ಲೀಮರು ಟೋಪಿ ಧರಿಸಿ, ಶ್ರೀರಾಮ ನವಮಿ ಪೂಜೆಯಲ್ಲಿ ಭಾಗಿಯಾಗಿದ್ದು ಕಂಡು ಬಂತು. ಜೊತೆಗೆ ಪಾನಕ ಹಂಚಿ, ರಾಮನವಮಿ ಆಚರಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಬೆಂಗಳೂರು: ಜೆ.ಜೆ.ನಗರ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ವಿಚಾರ ತಿಳಿಸಿದರು. ಜೆ.ಜೆ.ನಗರ ಚಂದ್ರು ಕೊಲೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದೆ. ನಿನ್ನೆ ಡಿಜಿ ಐಜಿಪಿ ಮತ್ತು ಕಮಿಷನರ್ ಕರೆದು ಮಾತನಾಡಿದ್ದೇನೆ. ಆರೋಪ-ಪ್ರತ್ಯಾರೋಪ ಏನೇ ಇರಲಿ, ಸತ್ಯ ಹೊರಗೆ ಬರಲಿ ಎನ್ನುವ ಉದ್ದೇಶದಿಂದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದು ಬೆಂಗಳೂರು , ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಬೆಂಗಳೂರು, ಮೈಸೂರು ,ಕೊಡಗು, ಹಾಸನ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 11 ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಬೆಂಗಳೂರು: ನಾಡಿನ ಸಮಸ್ತ ಜನತೆಯಲ್ಲಿ ನನ್ನ ವಿನಮ್ರ ಮನವಿ ಇಷ್ಟೆ. ರಾಮನವಮಿ ಹಬ್ಬವನ್ನು ಭಕ್ತಿ-ಶ್ರದ್ಧೆಯಿಂದ ಆಚರಿಸೋಣ. ಆದರೆ, ನಮ್ಮ ರಾಮಸ್ಮರಣೆ ಇನ್ನೊಬ್ಬರಿಗೆ ನೋವುಂಟು ಮಾಡದಂತೆ ಎಚ್ಚರ ವಹಿಸೋಣ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮನವಿ ಮಾಡಿಕೊಂಡರು. ರಾಮನ ಹೆಸರಿನಲ್ಲಿ ಶೋಭಾ ಯಾತ್ರೆ ನಡೆಸುವುದನ್ನು ನಾನು ಕೂಡ ಬೆಂಬಲಿಸುತ್ತೇನೆ. ಶ್ರೀರಾಮಚಂದ್ರ ಮಹಾಪ್ರಭು ನಮ್ಮೆಲ್ಲರ ಆರಾಧ್ಯ ದೈವ. ಅಷ್ಟೇ ಅಲ್ಲ; ಮನುಕುಲಕ್ಕೆ ಆದರ್ಶ, ತ್ಯಾಗ, ಸರಳತೆ, ಶಾಂತಿ, ಸಹನೆ, ಮೌಲ್ಯಗಳ ದಿವ್ಯಬೆಳಕು ತೋರಿದ ನಮ್ಮೊಳಗಿನ ದೈವ. ರಾಮರಾಜ್ಯವು ಸರ್ವ ಜನಾಂಗದ ಶಾಂತಿಯ ತೋಟವಾಗಿತ್ತು. ಶೋಭಾಯಾತ್ರೆ ಹೆಸರಿನಲ್ಲಿ ಇನ್ನೊಂದು ಸಮುದಾಯ ವಾಸ ಮಾಡುವ ಬೀದಿಗಳಲ್ಲಿ ಅಥವಾ ಅವರ ಪ್ರಾರ್ಥನಾ ಮಂದಿರಗಳ ಮುಂದೆ ಡಿಜೆ ಸೆಟ್ಟುಗಳನ್ನು ಹಾಕಿಕೊಂಡು 15-20 ನಿಮಿಷ ಕಾಲ ಕುಣಿಯುವುದು, ಕೇಕೆ ಹಾಕುವುದು ಇತ್ಯಾದಿ ಬೇಡ. ಇದರಿಂದ ಶಾಂತಿ ಕದಡುತ್ತದೆ. ಹೀಗೆ ಆಗುವುದು ಬೇಡ ಎಂದು ಎಂದು ಹೇಳಿದ್ದಾರೆ. ಒಂದು ಸಮುದಾಯದ ಜನರು ಈಗ ಉಪವಾಸ ಆಚರಣೆಯಲ್ಲಿದ್ದಾರೆ. ಈ ಸಮಯದಲ್ಲಿ ಅವರ ಬಡಾವಣೆಗಳಿಗೆ ಹೋಗಿ…
ಸರಗೂರು: ತಾಲ್ಲೂಕಿನ ಬಿ ಮಟಕೇರಿ ಗ್ರಾ.ಪಂ. ವ್ಯಾಪ್ತಿಯ ಮೊಳೆಯೂರು ಮತ್ತು ಕಾವಲ್ ಗ್ರಾಮದಲ್ಲಿ ಬಿಲ್ ಕುಮಾರಸ್ವಾಮಿ ಹಾಗೂ ಸಿದ್ದಾಪ್ಪಾಜಿ ಖಂಡಯ ಉತ್ಸವ ಜರುಗಿತು. ಗ್ರಾಮಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಶಾಸಕ ಅನಿಲ್ ಚಿಕ್ಕಮಾದು, ಮಾಜಿ ಸಂಸದರು ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್, ಅವರಿಗೆ ಮೊಳೆಯೂರು ಕಾವಲ್ ಗ್ರಾಮದ ಗ್ರಾಮಸ್ಥರು ಮತ್ತು ಮುಖಂಡರು ಸ್ವಾಗತಿಸಿದರು. ಜಾತ್ರಾ ಮಹೋತ್ಸವದ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ದೇವರನ್ನು ಕರೆದೊಯ್ಯುವುದು ದೇವರ ವಿಗ್ರಹಮೂರ್ತಿ ಗಳನ್ನು ತೊಳೆದು ವಿಶೇಷ ಪೂಜೆ ಸಲ್ಲಿಸಿ ದೇವರನ್ನು ದೇವಸ್ಥಾನದ ಬಳಿಗೆ ಕರೆತರಲಾಗುವುದು. ಈ ನಡುವೆ ಭಕ್ತರಿಂದ ಹಾಲು ಹರಿವೆ, ಬಾಯಿ ಬೀಗ ಸೇವೆ ಇರಲಿದೆ ಎಂದು ದೇವಸ್ಥಾನದ ಆವರಣದಲ್ಲಿ ಗ್ರಾಮದ ಯುವ ಮುಖಂಡ ಮೊಳೆಯೂರು ನಾಗರಾಜ್ ತಿಳಿಸಿದರು. ಗ್ರಾಮದ ಪ್ರಮುಖ ಬೀದಿಯಿಂದ ಬಿಲ್ ಕುಮಾರಸ್ವಾಮಿ ಮತ್ತು ಸಿದ್ದಾಪ್ಪಾಜಿ ಖಂಡಯ ಕಳಶದೊಂದಿಗೆ ದೇವರ ಉತ್ಸವ ಮೂರ್ತಿಯನ್ನು ಮೆರವಣಿಗೆ ಮೂಲಕ ದೇವಸ್ಥಾನ ಬಳಿಗೆ ಕರೆತರಲಾಯಿತು. ನಂತರ…