Subscribe to Updates
Get the latest creative news from FooBar about art, design and business.
- ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
- ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?
- ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ
- ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ: ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ
- ತುಮಕೂರು: ಬೇಡಿಕೆ 1,400 ಸಿಲಿಂಡರ್ ಗಳು, ಪೂರೈಕೆಯಾಗುತ್ತಿರುವುದು ಕೇವಲ 350!
- ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
- ಬೀದರ್ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್ ಗಳು ಬಂದ್!
- ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ
Author: admin
ತುಮಕೂರು: ಡಿ ಎಸ್ ಎಸ್ ಮುಖಂಡ ನರಸಿಂಹಮೂರ್ತಿ ಅಲಿಯಾಸ್ ಕುರಿಮೂರ್ತಿಯನ್ನು ಹತ್ಯೆ ಮಾಡಿದ 13 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ ವಾದ್ ತಿಳಿಸಿದರು. ಎಸ್ ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನರಸಿಂಹಮೂರ್ತಿ ಹತ್ಯಾರೋಪಿಗಳ ಬಂಧನ ಕುರಿತು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 13 ಮಂದಿ ಆರೋಪಿಗಳನ್ನು ಕನಕಪುರದ ಹಾರೋಹಳ್ಳಿ ಸಮೀಪ ಫಾರಂ ಹೌಸ್ ನಲ್ಲಿ ಬಂಧಿಸಲಾಗಿದೆ ಎಂದು ಹೇಳಿದರು. ಕಿರಣ್, ಕ್ಯಾಟ್ ರಾಜ, ಮಂಜು, ಅಭಿಷೇಕ್, ನಯಾಜ್, ವೆಂಕಟೇಶ, ಕೀರ್ತಿ, ಚಂದ್ರಶೇಖರ್, ಭರತ್, ಧೀರಜ್ ಸೇರಿದಂತೆ 13 ಮಂದಿಯನ್ನು ಬಂಧಿಸಲಾಗಿದೆ. 7 ದಿನ ಪೊಲೀಸರ ವಶಕ್ಕೆ ಪಡೆದು ವಿಚಾರಣೆ ನಡೆಸಿ ಹೆಚ್ಚಿನ ಮಾಹಿತಿ ಕಲೆ ಹಾಕುತ್ತೇವೆ ಎಂದರು. ಜೂನ್ 15 ರಂದು ನರಸಿಂಹಮೂರ್ತಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. 7 ಮಂದಿ ಆರೋಪಿಗಳು ಹತ್ಯೆ ನಡೆಸಿದ್ದರೆ, 6 ಜನ ಆರೋಪಿಗಳು ಹತ್ಯೆಗೆ ಸಹಕರಿಸಿದ್ದರು ಎಂದು ಅವರು ತಿಳಿಸಿದರು. ಭೂ ವಿವಾದ ಹಾಗೂ…
ತುಮಕೂರು: ಕುವೆಂಪು ಕುರಿತಂತೆ ಪಠ್ಯದಲ್ಲಿ ಹೆಚ್ಚಿನ ವಿಚಾರ ಸೇರಿಸಿದ್ದು ಬಿಜೆಪಿ. ಕುವೆಂಪು ಅವರ ಎರಡು ಕವನವನ್ನ ನಾಡಗೀತೆ ಮಾಡಿದ್ದು ಬಿಜೆಪಿ. ಹಾಗಾಗಿ ನಾವು ಕುವೆಂಪುಗೆ ಅಪಮಾನ ಮಾಡಲು ಸಾಧ್ಯನಾ..? ಎಂದು ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಪ್ರಶ್ನಿಸಿದ್ದಾರೆ. ತುಮಕೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಸಣ್ಣಪುಟ್ಟ ಬದಲಾವಣೆ ಮಾಡಲು ಸರ್ಕಾರ ಒಪ್ಪಿಕೊಂಡಿದೆ. ಪಠ್ಯಪುಸ್ತಕ ವಾಪಸ್ ಪಡೆದುಕೊಳ್ಳುವಂತೆ ದೇವೇಗೌಡರ ಪತ್ರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಮಾತನಾಡೋದಕ್ಕೆ ಸಿಎಂ ಹಾಗೂ ಶಿಕ್ಷಣ ಸಚಿವರು ತಯಾರಿದ್ದಾರೆ. ಆದರೆ ದೇವೇಗೌಡರೇ ಮಾತನಾಡೋಕೆ ಬಾರದೇ ಮಾರ್ಗದಲ್ಲಿ ಕುಳಿತುಕೊಳ್ತೇನೆ ಅಂದರೆ ಹೇಗೆ ಎಂದು ಪ್ರಶ್ನಿಸಿದರು. ಎಲ್ಲವೂ ರಾಜಕೀಯ ಪ್ರೇರಿತವಾಗಿರಬಾರದು. ಈಗಾಗಲೇ ಕೆಲವು ಬದಲಾವಣೆಗಳನ್ನ ಮಾಡಲಾಗಿದೆ. ನಾವು ಯಾವುದರಲ್ಲೂ ರಾಜಕಾರಣ ತುರುಕಿ, ಬೆಳೆಯುವಂತಾ ಮಕ್ಕಳ ಮನಸ್ಸನ್ನ ಹಾಳು ಮಾಡಲ್ಲಾ. ದೇಶದ ಸಂಸ್ಕೃತಿ, ಸಂಸ್ಕಾರ ಉಳಿಯಬೇಕು. ಪರದೇಶದ ಶಿಕ್ಷಣ ಪದ್ದತಿಯಿಂದ ನಾವು ಹೊರಬರಲೇಬೇಕು. ಮೆಕಾಲೆ ಆಧಾರಿತ ಶಿಕ್ಷಣ ಪದ್ದತಿಯನ್ನ ಭಾರತೀಯ ಶಿಕ್ಷಣ ಪದ್ದತಿಯಾಗಿ ಬದಲಾಯಿಸಬೇಕು. ಹಾಗಂತ…
ಸರಗೂರು: ವಿಶೇಷಚೇತನರ ತ್ರಿಚಕ್ರ ಬೈಕ್ ಸವಾರನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಬೈಕ್ ಸವಾರನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸರಗೂರು ತಾಲ್ಲೂಕಿನ ಶಾಂತಿನಿವಾಸ ಗ್ರಾಮದ ಬಳಿ ನಡೆದಿದೆ. ಸರಗೂರು ತಾಲ್ಲೂಕಿನ ಕಲ್ಲಹಳ್ಳ ಹಾಡಿಯ ಕಾಳ ಅಲಿಯಾಸ್ ಅಪ್ಪಿ, ನಾಗಮ್ಮ, ವಿಜಯೇಂದ್ರ ಎಂಬುವವರು ತ್ರಿಚಕ್ರ ವಾಹನದಲ್ಲಿ ಸುಂಗೇವಾಡಿ ಹಾಡಿಯಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಮುಗಿಸಿ ತಮ್ಮ ಸ್ವಗ್ರಾಮಕ್ಕೆ ಮರಳುವ ವೇಳೆ ಈ ದುರ್ಘಟನೆ ನಡೆದಿದ್ದು, ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಹಿಂಬದಿ ಸವಾರರಾದ ನಾಗಮ್ಮ, ವಿಜಯೇಂದ್ರ ಎಂಬುವವರು ಮೃತಪಟ್ಟಿದ್ದು, ಬೈಕ್ ಸವಾರ ಕಾಳ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಹೆಚ್.ಡಿ.ಕೋಟೆ ಸಾರ್ವಜನಿಕರ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಗಾಯಗೊಂಡಿದ್ದ ಕಾಳ ಎಂಬುವವರನ್ನು ವಿವೇಕಾನಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ತಿಪಟೂರು : ನಾಡಿನ ಏಳಿಗೆಗಾಗಿ ಶ್ರಮಿಸಿದ ಮಹಾನ್ ಚೇತನಗಳ ವಿಚಾರಧಾರೆಯನ್ನು ಕೇವಲ ಪಠ್ಯಪುಸ್ತಕಕ್ಕೆ ಸೀಮಿತವಾಗಿಸದೇ ಪಠ್ಯದ ಹೊರತಾಗಿಯೂ ಮನವರಿಕೆ ಮಾಡುವ ಕಾರ್ಯವನ್ನು ಮಾಡಬೇಕಿದೆ ಎಂದು ದಸರೀಘಟ್ಟದ ಆದಿಚುಂಚನಗಿರಿ ಶಾಖಾಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ದಸರೀಘಟ್ಟದ ಆದಿಚುಂಚನಗಿರಿ ಶಾಖಾಮಠದ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಶನಿವಾರ ನಡೆದ ನಾಡಪ್ರಭು ಶ್ರೀ ಕೆಂಪೇಗೌಡರ 513ನೇ ಜಯಂತ್ಯೋತ್ಸವವನ್ನು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿ ಅವರು ಮಾತನಾಡಿದರು. ಮಾನವ ಸಂಘ ಜೀವಿಯಾಗಿದ್ದು, ಮಾನವನ ಆಚರಣೆಗಳ ಅನ್ವಯದಲ್ಲಿ ಜಾತಿ, ಮತ, ಧರ್ಮಗಳನ್ನು ರೂಢಿಸಿಕೊಂಡಿದ್ದಾನೆ. ಅಂತಹ ಕಂದಾಚಾರದಿಂದ ಹೊರ ಬಂದು ಎಲ್ಲಾ ಮಾನವರು ಒಂದೇ ಎಂಬ ಮನೋಭಾವವನ್ನು ಬೆಳೆಸಿಕೊಳ್ಳಬೇಕಿದೆ. ಮಹಾನ್ ಚೇತನಗಳಿಗೆ ಅಪಮಾನವಾಗದಂತೆ ಪಠ್ಯದಲ್ಲಿ ವಿಚಾರಗಳನ್ನು ಸೇರಿಸುವ ಅಗತ್ಯವಿದೆ. ಜೊತೆಗೆ ಪಠ್ಯದ ಹೊರತಾಗಿಯೂ ಮಕ್ಕಳಿಗೆ ವಿಚಾರಗಳನ್ನು ತಿಳಿಸುವಂತಹ ಕಾರ್ಯವನ್ನು ಮಾಡುವ ಜವಾಬ್ದಾರಿ ಸಮಾಜದ ಎಲ್ಲರ ಮೇಲಿದೆ. ಸಮಾಜದಲ್ಲಿ ಜಾತಿ, ಮತ, ಧರ್ಮಗಳ ಬೇಧವನ್ನು ಮರೆತು ಎಲ್ಲರೂ ಎಲ್ಲರಿಗೂ ಗೌರವ, ಪ್ರೀತಿ, ಸಹಕಾರ ನೀಡಿ ಒಂದಾಗಿ ಬಾಳುವಂತಹ ಮನೋಭಾವವನ್ನು…
ಬಾಗಲಕೋಟೆ: ಆ ಚಿಂಕಿ ಅಂದ್ರೆ ಏರಿಯಾ ಜನ್ರಿಗೆಲ್ಲ ಅಚ್ಚುಮಚ್ಚು. ರಂಗಭೂಮಿ ಕಲಾವಿದೆ ಮನೆಯಲ್ಲಿನ ಚಿಂಕಿಯ ಹಾರಾಟ ಚೆಲ್ಲಾಟ ನೋಡಲು ಎರಡು ಕಣ್ಗಳು ಸಾಲದು. ನಿಯತ್ತಿಗೆ ಹೆಸರಾದ ಆ ಚಿಂಕಿ ವಾರದ ಹಿಂದೆ ತುಂಬು ಗರ್ಭಿಯಾಗಿದ್ಲು. ಹೀಗಾಗಿ ಪ್ರೀತಿಯ ಚಿಂಕಿಗೆ ಸೀರೆ, ಬಳೆ, ಅರಶಿನ ಕುಂಕಮ ಹಚ್ಚಿ ಆರತಿ ಬೆಳಗಿ ಏರಿಯಾ ಜನ್ರು ಖುಷಿಪಟ್ಟಿದ್ರು. ಸಿಹಿ ತಿಂಡಿ ತಿನಿಸು ಮಾಡಿ ದಿನವನ್ನ ಸಂತಸದಿಂದ ಕಳೆದ್ರು. ಸದ್ಯ ಆ ಚಿಂಕಿ ಆರು ಪುಟಾಣಿ ಮಕ್ಕಳನ್ನ ಹೆತ್ತು ಕೊಟ್ಟಿದೆ. ಕಲಾವಿದೆಯ ಚಿಂಕಿ ಪ್ರೀತಿ, ಚಾರ್ಲಿ ಸಿನೆಮಾ ನೆನಪಸುತ್ತೆ. ಬನ್ನಿ ಹಾಗಿದ್ರೆ ಆ ಚಿಂಕಿ ಯಾರು? ರಂಗಭೂಮಿ ಕಲಾವಿದೆಯ ಪ್ರಾಣಿ ಪ್ರೀತಿ ಕುರಿತ ಸ್ಟೋರಿ ಇಲ್ಲಿದೆ. ಹಸಿರು ಸೀರೆ, ಹಸಿರು ಬಳೆಗಳಿಂದ ಚಿಂಕಿಗೆ ಸಿಂಗಾರ. ಆರತಿ ಬೆಳಗಿ ಸಿಹಿ ತಿಂಡಿ ತನಿಸು ತಿನ್ನಿಸಿ ಶ್ವಾನಕ್ಕೆ ಸೀಮಂತ ಕಾರ್ಯ ಮಾಡುವುದರ ಮೂಲಕ ಈಗ ಇಲ್ಲಿನ ರಂಗಭೂಮಿ ಕಲಾವಿದೆ ಶ್ವಾನ ಪ್ರೀತಿ ಮೆರೆದಿದ್ದಾರೆ.ನಟ ರಕ್ಷಿತ್ ಶೆಟ್ಟಿ ಅಭಿನಯದ ಚಿತ್ರ 777…
ಡ್ರಗ್ ಪೆಡ್ಲಿಂಗ್ನಲ್ಲಿ ತೊಡಗಿದ್ದ ಖತರ್ನಾಕ್ ಡಿಜೆಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 6.5 ಲಕ್ಷ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಬಂಧಿತ ಡಿಜೆ ಡಾರ್ಕ್ವೆಬ್ ಸೈಟ್ ಮೂಲಕ ಡ್ರಗ್ಸ್ ತರಿಸಿಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಬಂಧಿತನಿಂದ 6.5 ಲಕ್ಷ ಮೌಲ್ಯದ 15.08 ಗ್ರಾಂ ತೂಕದ 25 ಎಂಡಿಎಂಎ ಎಕ್ಸ್ಟಸಿ ಪಿಲ್ಸ್ ಗಳು, 0.48 ಗ್ರಾಂ ತೂಕದ 29 ಎಲ್.ಎಸ್.ಡಿ ಸ್ಟ್ರಿಪ್ಸ್ಗಳು 1 ಕೆಜಿ ಗಾಂಜಾ, ಲ್ಯಾಪ್ಟಾಪ್ ಮೊಬೈಲ್ ಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಜಂಟಿ ಆಯುಕ್ತ ರಮಣ್ ಗುಪ್ತ ತಿಳಿಸಿದ್ದಾರೆ. ಆರೋಪಿಯು ಕಡಿಮೆ ಬೆಲೆಗೆ ನಗರದಲ್ಲಿ ನೆಲೆಸಿರುವ ಆಫ್ರಿಕಾ ಪ್ರಜೆಯಿಂದ ಎಂಡಿಎಂಎ ಹಾಗೂ ಸ್ಥಳೀಯ ಪೆಡ್ಲರ್ ಗಳಿಂದ ಗಾಂಜಾವನ್ನು ಖರೀದಿಸಿ ಒಂದು ಎಂಡಿಎಂಎ ಎಕ್ಸ್ ಟೆಸಿ ಪಿಲ್ಸ್ ಅನ್ನು3 ದ 4 ಸಾವಿರದಂತೆ, ಒಂದು ಎಲ್ಎಸ್ಡಿ ಸ್ಟ್ರಿಪ್ಸ್ 8ರಿಂದ 10 ಸಾವಿರದಂತೆ ಹಾಗೂ 10 ಗ್ರಾಂ ಗಾಂಜಾವನ್ನು 1 ರಿಂದ 2 ಸಾವಿರದಂತೆ ಹೆಚ್ಚಿನ ಬೆಲೆಗೆ…
ಮುಳುಬಾಗಿಲು ನಗರ ಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ಮೋಹನರೆಡ್ಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಪಾರಿ ಹಂತಕ ಬಾಲಾಜಿ ಸಿಂಗ್ ನನ್ನು ಗುಂಡಿಕ್ಕಿ ಬಂಧಿಸಿದ್ದಾರೆ. ಸುಪಾರಿ ಹಂತಕ ಬಾಲಾಜಿ ಸಿಂಗ್ಗಬ್ಬರ್ ಗಾಯಗೊಂಡಿದ್ದು, ಆತನನ ಕೋಲಾರದ ಎಸ್ಎಎನ್ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ಮೋಹನರೆಡ್ಡಿ ಕೊಲೆ ಬಾರಿ ಸಂಚಲನ ಸೃಷ್ಟಿಸಿತ್ತು. ಜೂ.7 ರಂದು ಮುತ್ಯಾಲಪೇಟೆಯ ಗಂಗಮ್ಮ ದೇವಾಲಯದ ಮುಂಭಾಗದಲ್ಲಿ ದುಷ್ಕರ್ಮಿಗಳು ಭರ್ಬರವಾಗಿ ಹತ್ಯೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಿರುಸಿನ ಕಾರ್ಯಾಚರಣೆ ಕೈಗೊಂಡಿದ್ದರು. ಕೋಲಾರ ತಾಲ್ಲೂಕಿನ ಚೆಲುವನ ಹಳ್ಳಿ ಬಳಿ ಸುಪಾರಿ ಹಂತಕರು ಅಡಗಿರುವ ಬಗ್ಗೆ ಪೊಲೀಸರುಗೆ ಖಚಿತ ಮಾಹಿತಿ ದೊರೆಯಿತು. ಮುಳಬಾಗಿಲು ಸಿಪಿಐ ಜಿ. ಲಕ್ಷಿಕಾಂತಯ್ಯ ನೇತೃತ್ವದ ತಂಡ ದಾಳಿ ನಡೆಸಿತು. ಈ ವೇಳೆ ಪೇದೆ ವಿನಾಯಕ ಅವರ ಮೇಲೆ ಆರೋಪಿ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ತಕ್ಷಣ ಲಕ್ಷ್ಮಿಕಾಂತಯ್ಯ ಆರೋಪಿ ಬಾಲಾಜಿ ಸಿಂಗ್ ಬಲ ಗಾಲಿಗೆ ಗುಂಡು ಹೊಡೆದಿದ್ದಾರೆ. ಸ್ಥಳದಲ್ಲೇ ಕುಸಿದು ಬಿದ್ದ ಆರೋಪಿಯನ್ನು…
ಭ್ರಷ್ಟಾಚಾರದಿಂದ ಗಳಿಸಿರುವ ಹಣ ಬಳಕೆ ಮಾಡಿಕೊಂಡು ಬಿಜೆಪಿ ವಿವಿಧ ರಾಜ್ಯಗಳಲ್ಲಿ ಆಪರೇಷನ್ ಕಮಲ ನಡೆಸಲು ಮುಂದಾಗಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದ ಬಿಜೆಪಿಯ ಚಾಳಿ ಇಡೀ ದೇಶಕ್ಕೆ ಹಬ್ಬಿದೆ ಎಂದು ಅವರು ಕಿಡಿಕಾರಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ಆಪರೇಷನ್ ಕಮಲ ತಡೆಗಟ್ಟಲು ಪಕ್ಷಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸಿದರು. ಒಂದು ಪಕ್ಷದಿಂದ ಆಯ್ಕೆಯಾದವರು ಬೇರೆ ಪಕ್ಷಕ್ಕೆ ಹೋಗದಂತೆ ತಡೆಯಬೇಕು. ಒಂದು ವೇಳೆ ಬೇರೆ ಪಕ್ಷಕ್ಕೆ ಹೋದರೆ ೧೦ ವರ್ಷ ಆತ ಚುನಾವಣೆಗೆ ಸ್ಪರ್ಧಿಸದಂತೆ ಆದೇಶ ಮಾಡಬೇಕು ಎಂದು ಹೇಳಿದರು. ಪ್ರಜಾಪ್ರಭುತ್ವ ಉಳಿವಿಗಾಗಿ ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗೆ ತರುವುದು ಅತ್ಯಗತ್ಯವಾಗಿದೆ ಎಂದು ಪ್ರತಿಪಾದಿಸಿದ ಅವರು, ಆಪರೇಷನ್ ಕಮಲದ ಪಿತಾಮಹಾ ಬಿಜೆಪಿಯವರು. ೨೦೦೮ರಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೊದಲು ಆಪರೇಷನ್ ಕಮಲ ಮಾಡಿದರು. ಎಲ್ಲೂ ಅವರಿಗೆ ಬಹುಮತ ಬಂದಿಲ್ಲ. ಹಣಕೊಟ್ಟು ಶಾಸಕರನ್ನು…
ಮಧುಗಿರಿ: ತಾಲೂಕಿನ ರೈತರಿಗೆ ಬಗರ್ ಹುಕುಂ ಸಾಗುವಳಿ ಪಡೆಯಲು ಆನ್ ಲೈನ್ ನಮೂನೆ ಅರ್ಜಿ ನಂಬರ್ 57ರಲ್ಲಿ ರೈತರು ಸಾಗುವಳಿದಾರರು ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ನೀಡಲಾಗಿದೆ. ಉಳುವವನೇ ಭೂಮಿಯ ಒಡೆಯ, ರೈತರಿಗೆ ಜೀವನೋಪಾಯಕ್ಕಾಗಿ ವ್ಯವಸಾಯ ಮಾಡಲು ಇರುವ ಭೂಮಿಯಲ್ಲಿ ಬೆಳೆ ಬೆಳೆದುಕೊಂಡು ಜೀವನ ಮಾಡಿಕೊಂಡಿರುವ ರೈತರಿಗೆ ಅನುಕೂಲವಾಗುವ ಭೂಮಿಯನ್ನು ನಮೂನೆ 57 ರಲ್ಲಿ ಅಕ್ರಮ-ಸಕ್ರಮ ಕೋರಿ ಅರ್ಜಿ ಸಲ್ಲಿಸಲು ಸುವರ್ಣಾವಕಾಶ ನೀಡಲಾಗಿದೆ ಎಂದು ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಸುರೇಶ್ ಆಚಾರ್ ರವರು ತಿಳಿಸಿದ್ದಾರೆ. ಎಲ್ಲ ನಾಡಕಚೇರಿಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಕೆಲವು ದಾಖಲಾತಿಗಳ ಅವಶ್ಯಕತೆ ಇದೆ. ಆಧಾರ್ ಕಾರ್ಡ್, ಜಮೀನಿನ ಪಹಣಿ ಇತ್ಯಾದಿ ದಾಖಲೆ ತೆಗೆದುಕೊಂಡು ಹೋಗಿ ನಾಡಕಚೇರಿಯಲ್ಲಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಎಂದು ಅವರು ಮಾಹಿತಿ ನೀಡಿದರು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಬೆಂಗಳೂರು: ಮಹಿಳೆಯರಿಗೆ ಶಕ್ತಿ ತುಂಬುವುದು ಶ್ರೀಮತಿ ಇಂದಿರಾ ಗಾಂಧಿ ಅವರ ಕನಸು. ಅವರು ಸದಾ ಅವಕಾಶಗಳನ್ನು ಸೃಷ್ಟಿ ಮಾಡಿಕೊಳ್ಳಬೇಕು ಎಂದು ಹೇಳುತ್ತಿದ್ದರು. ದೇವರು ನಮಗೆ ವರವನ್ನೂ ಕೊಡುವುದಿಲ್ಲ, ಶಾಪವನ್ನೂ ನೀಡುವುದಿಲ್ಲ. ಅವಕಾಶಗಳನ್ನು ಮಾತ್ರ ನೀಡುತ್ತಾನೆ. ಅವುಗಳನ್ನು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದು ಮುಖ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಜೂಮ್ ಮೂಲಕ ಬಳ್ಳಾರಿಯ ನಾ ನಾಯಕಿ ಪ್ರಾದೇಶಿಕ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ತಾಯಿ ಮಗುವಿಗೆ ಜನ್ಮ ನೀಡಿದಾಗ ಆಕೆಯೇ ಆ ಮಗುವಿನ ಮೊದಲ ಗುರು ಆಗುತ್ತಾಳೆ. ಅದೇ ರೀತಿ ಬಳ್ಳಾರಿಯಲ್ಲಿ ಸಾವಿರಾರು ಮಹಿಳೆಯರು ಸೇರಿದ್ದು, ನೀವೆಲ್ಲರೂ ನಾಯಕಿಯರೇ ಎಂದರು. ಅಮ್ಮನ ನೆನಪು ಪ್ರೀತಿಯ ಮೂಲ, ಗುರುವಿನ ನೆನಪು ಜ್ಞಾನದ ಮೂಲ. ದೇವರ ನೆನಪು ಭಕ್ತಿಯ ಮೂಲ. ಮನುಷ್ಯತ್ವ ಮೋಕ್ಷಕ್ಕೆ ಮೂಲ ಎಂಬ ಮಾತಿದೆ. ಅದೇ ರೀತಿ ತಾಯಿಗೆ ಪವಿತ್ರವಾದ ಸ್ಥಾನವಿದೆ. ನಾವು ಎಲ್ಲಿ ಹೋದರೂ ಗ್ರಾಮದೇವತೆಯನ್ನು ನೋಡುತ್ತೇವೆ. ಈ ಭೂಮಿಯನ್ನು ಭೂತಾಯಿ ಎಂದು ಕರೆಯುತ್ತೇವೆ. ಇದೇ ಈ ದೇಶದ ಸಂಸ್ಕೃತಿ,…