Subscribe to Updates
Get the latest creative news from FooBar about art, design and business.
- ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
- ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?
- ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ
- ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ: ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ
- ತುಮಕೂರು: ಬೇಡಿಕೆ 1,400 ಸಿಲಿಂಡರ್ ಗಳು, ಪೂರೈಕೆಯಾಗುತ್ತಿರುವುದು ಕೇವಲ 350!
- ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
- ಬೀದರ್ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್ ಗಳು ಬಂದ್!
- ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ
Author: admin
ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಕರುನಾಡ ವಿಜಯಸೇನೆ ಸಂಘಟನೆ ಮತ್ತು ಆನೆಕೆರೆ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಜೂನ್ 22ರಂದು ಆನೆಕೆರೆ ಶಾಲಾ ಆವರಣದಲ್ಲಿ ಏರ್ಪಡಿಸಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಆಯ್ಕೆಯಾದ 20 ಜನ ರೋಗಿಗಳನ್ನು ಹೆಚ್ಚಿನ ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನ ಸಪ್ತಗಿರಿ ವೈದ್ಯಕೀಯ ಆಸ್ಪತ್ರೆಗೆ ಕಳುಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕರುನಾಡು ವಿಜಯ ಸೇನೆ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಹೆಚ್.ಎಸ್.ಸುರೇಶ್, ಹೆಚ್ಚಿನ ಚಿಕಿತ್ಸೆಗಾಗಿ ತೆರಳುತ್ತಿರುವ ತಮಗೆಲ್ಲರಿಗೂ ಶುಭವಾಗಲಿ ಚಿಕಿತ್ಸೆಗೆ ಸಹಕರಿಸಿ, ಬೇಗನೆ ಗುಣಮುಖರಾಗಿ ಬನ್ನಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಕರುನಾಡ ವಿಜಯ ಸೇನೆ ಸಂಘಟನೆಯ ತಾಲೂಕು ಕಾರ್ಯಾಧ್ಯಕ್ಷ ನಂದೀಶ್ , ತಾಲೂಕು ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ , ತಾಲೂಕು ಕಾರ್ಯದರ್ಶಿ ಗವಿರಂಗಪ್ಪ, ತಾಲೂಕು ಉಪಾಧ್ಯಕ್ಷ ನೂರುಲ್ಲಾ, ತಾಲೂಕು ಅಲ್ಪಸಂಖ್ಯಾತ ಘಟಕದ ಗೌರವಾಧ್ಯಕ್ಷ ರಫೀಕ್ , ಮಹಿಳಾ ಅಧ್ಯಕ್ಷೆ ಲಲಿತಾ, ಉಪಾಧ್ಯಕ್ಷೆ ವಿನುತಾ, ವೆಂಕಟೇಶ್, ಮಂಜುನಾಥ್ , ಪಾರ್ಥ ಸಾರಥಿ ಮುಂತಾದ ಪದಾಧಿಕಾರಿಗಳು ಹಾಜರಿದ್ದರು. ವರದಿ: ಸುರೇಶ್ ಬಾಬು, ತುರುವೇಕೆರೆ …
ಪಾವಗಡ: ತಹಶಿಲ್ದಾರ್ ಕಛೇರಿಯಲ್ಲಿ ಬಗರ್ ಹುಕುಂ ನಲ್ಲಿ ಸಾಗುವಳಿ ಚೀಟಿಗಾಗಿ ಅರ್ಜಿ ಸಲ್ಲಿಸಿದ 100 ಮಂದಿ ಫಲಾನುಭವಿಗಳಿಗೆ ಸಾಗುವಳಿ ಚೀಟಿ ವಿತರಣೆಯನ್ನು ಶಾಸಕ ವೆಂಕಟರಮಣಪ್ಪ ವಿತರಣೆ ಮಾಡಿದರು. ವಿತರಣೆ ನಂತರ ಮಾತನಾಡಿದ ಶಾಸಕ ವೆಂಕಟರವಣಪ್ಪ, ರಾಜ್ಯ ಸರಕಾರ 2023 ಮೇ 27ರ ತನಕ ನಮೂನೆ 57 ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಅಗತ್ಯ ದಾಖಲೆಗಳೊಂದಿಗೆ ರೈತರು ತಹಶಿಲ್ದಾರ್ ಕಛೇರಿಯಲ್ಲಿ ಅರ್ಜಿಸಲ್ಲಿಸ ಬಹುದಾಗಿದೆ. ಪಾವಗಡದ ನಾಲ್ಕು ಹೋಬಳಿಗಳಲ್ಲಿ 100 ಮಂದಿ ರೈತರಿಗೆ ಬಗರ್ ಹುಕುಂ ಸಾಗುವಳಿ ಆದೇಶ ಪ್ರತಿಯನ್ನು ವಿತರಣೆ ಮಾಡಿದ್ದು, ಪಹಣಿ ಪಡೆದ ರೈತರು ಸರಕಾರಿ ಸೌಲಭ್ಯಗಳನ್ನು ಪಡೆದು ಸ್ವಾವಲಂಬಿ ಜೀವನ ನಡೆಸುವಂತೆ ತಿಳಿಸಿದರು. ನಂತರ ಮಾತನಾಡಿದ ತಹಶಿಲ್ದಾರ್ ನಾಗರಾಜ್ ತಾಲ್ಲೂಕಿನ ನಾಲ್ಕು ಹೋಬಳಿಗಳ 100 ಫಲಾನುಭವಿಗಳಿಗೆ ಬಗರ್ ಹುಕ್ಕುಂ ಸಾಗುವಳಿ ಪತ್ರ ವಿತರಣೆ ಮಾಡಿದ್ದು, ರೈತರು ಸರಕಾರಿ ಸೌಲಭ್ಯ ಪಡೆದುಕೊಳ್ಳಬಹುದು ಹಾಗೂ ಇನ್ನು ಸಮಯವಿದ್ದು ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿಬಹುದು ಎಂದು ತಿಳಿಸಿದರು. ಈ ವೇಳೆ ಬಗರ್ ಹುಕ್ಕುಂ…
ತಿಪಟೂರು: ಇಡಿ ತನಿಖೆಯ ಹೆಸರಲ್ಲಿ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಯವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಮಾಜಿ ಶಾಸಕ ಕೆ ಷಡಕ್ಷರಿ ಆರೋಪಿಸಿದರು ತಿಪಟೂರು ನಗರದ ಸಿಂಗ್ರಿ ನಂಜಪ್ಪ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ವೇಳೆ ಮಾತನಾಡಿದ ಕೆ ಷಡಕ್ಷರಿ, ಅಗ್ನಿಪಥ ಯೋಜನೆಯ ಮೂಲಕ ದೇಶದ ಶಕ್ತಿಯನ್ನು ಕುಂದಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಮುಖಂಡ ಲೋಕೇಶ್ ಮಾತನಾಡಿ, ಜನರ ತೆರಿಗೆ ಹಣದಿಂದ ಬಿಜೆಪಿ ಕಟ್ಟಾಳು ಗಳಿಗೆ ಸರ್ಕಾರದ ವತಿಯಿಂದ ಮೂರು ವರ್ಷ ತರಬೇತಿ ನೀಡಿ, ನಂತರ ಅವರನ್ನು ಪಕ್ಷದ ಕೆಲಸಕ್ಕೆ ನಿಯೋಜಿಸಿಕೊಳ್ಳುವ ಹುನ್ನಾರವೇ ಅಗ್ನಿಪಥ್ ನೇಮಕಾತಿ ಎಂದು ಆರೋಪಿಸಿದರು. ಇದೇ ವೇಳೆ ತಹಶೀಲ್ದಾರ್ ಚಂದ್ರಶೇಖರ್ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ನಗರಸಭಾ ಅಧ್ಯಕ್ಷ ಟಿ.ಎಂ.ಪ್ರಕಾಶ್ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಸುರೇಶ್, ನಗರಸಭಾ ಸದಸ್ಯ ಮೇಘನಾ, ಭೂಷಣ್, ಲೋಕ್ ನಾಥ್ ಸಿಂಗ್, ಆರ್.ದಿನೇಶ್ ಬಾಬು , ನಿಖಿಲ್ ರಾಜಣ್ಣ ಸೇರಿದಂತೆ ನೂರಾರು ಕಾರ್ಯಕರ್ತರು…
ತುಮಕೂರು: SSLC, PUC ಪಾಸ್ ಅಥವಾ ಫೇಲ್ ಆಗಿರುವ ಅಭ್ಯರ್ಥಿಗಳಿಗೆ ತುಮಕೂರಿನಲ್ಲೇ ಉದ್ಯೋಗಾವಕಾಶಗಳಿದ್ದು, ತುಮಕೂರಿನ ಹೆಸರಾಂತ ಕಂಪನಿಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡಲು ಯುವಕ ಯುವತಿಯರು ಬೇಕಾಗಿದ್ದಾರೆ ಎಂದು ಗೊಲನ ಎಂಟರ್ ಪ್ರೈಸೆಸ್ ಪ್ರಕಟಣೆಯಲ್ಲಿ ತಿಳಿಸಿದೆ. ಲೋಡಿಂಗ್ ಮತ್ತು ಆನ್ಲೋಡಿಂಗ್, ಇತರೆ ಉದ್ಯೋಗ ಅವಕಾಶಗಳಿಗೆ SSLC, PUC ಪಾಸ್ ಆಗಿರುವ ಅಥವಾ ಫೇಲ್ ಆಗಿರುವವರು ಬೇಕಾಗಿದ್ದಾರೆ. ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಉದ್ಯೋಗಕ್ಕೆ ಆಯ್ಕೆಯಾಗುವವರಿಗೆ ESI & PF ಸೌಲಭ್ಯ ಇರುತ್ತದೆ . ಆಸಕ್ತರು +91 97431 03968 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಗೊಲನ ಎಂಟರ್ ಪ್ರೈಸೆಸ್ ಪ್ರಕಟಣೆಯಲ್ಲಿ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೆಟ್ಟ ಶಂಭೋನಹಳ್ಳಿ ಗ್ರಾಮದ ಸರ್ವೇ ನಂಬರ್ 52,10,11,14 ,15 ರ ಜಾಮೀನಿನ ರೈತರು ಜಮೀನಿಗೆ ಸಂಚಾರ ಮಾಡಲು ಪ್ರತಿನಿತ್ಯ ತೊಂದರೆ ಅನುಭವಿಸುತ್ತಿದ್ದ ರೈತರು ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ನಮ್ಮತುಮಕೂರು ವರದಿ ಬೆನ್ನಲ್ಲೇ ಒತ್ತುವರಿ ತೆರವು ಮಾಡುವಲ್ಲಿ ಕೊರಟಗೆರೆ ತಾಲ್ಲೂಕು ಆಡಳಿತ ಯಶಸ್ವಿಯಾಗಿದೆ . ಗ್ರಾಮದ ರೈತರು ಮತ್ತು ಸಾರ್ವಜನಿಕರು ತಹಶೀಲ್ದಾರ್ ರವರಿಗೆ ದಿನಾಂಕ : 17/06/2020 ರ ಹಿಂದಿನಿಂದಲೂ ಮನವಿ ಸಲ್ಲಿಸಿದ್ದರೂ ಕೂಡ ಸಂಬಂಧ ಪಟ್ಟ ಅಧಿಕಾರಿಗಳು ಮೂರ್ನಾಲ್ಕು ಬಾರಿ ಸರ್ವೆ ಮಾಡಿ ನಕಾಶೆ ರಸ್ತೆಯನ್ನು ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾದಾಗ ಸರ್ವೇ ನಂಬರ್ 52 ರ ಖಾತೆ ಮಾಲೀಕ ಮತ್ತು ಅವರ ಕುಟುಂಬಸ್ತರು ತೊಂದರೆ ಮಾಡುತ್ತಿದ್ದರು. ಈ ಎಲ್ಲಾ ಸಮಸ್ಯೆಗಳು ತಹಶೀಲ್ದಾರ್ ನಹೀದಾ ಜಂ ಜಂ ರವರ ಗಮನಕ್ಕೆ ನಮ್ಮ ವಾಹಿನಿಯ ವರದಿಗಾರರು ತಂದಿದ್ದರು. ನಂತರ ತಹಶೀಲ್ದಾರ್ ಅವರು ದಿನಾಂಕವನ್ನು ನಿಗದಿಪಡಿಸಿ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಎಲ್ಲವನ್ನೂ…
ಹಾಸನ: ನಾಡ ಪ್ರಭು ಕೆಂಪೇಗೌಡರ ಹೆಸರಿನಿಂದ ಲಾಭ ಪಡೆದುಕೊಳ್ಳುವ ರಾಜಕೀಯ ನಾಯಕರು, ಆ ಬಳಿಕ ಕೆಂಪೇಗೌಡರು ಮಾತ್ರವಲ್ಲದೇ ಒಕ್ಕಲಿಗ ಸಮುದಾಯವನ್ನೂ ಮರೆತು ಬಿಡುವುದು ವಿಪರ್ಯಾಸವಾಗಿದೆ ಎಂದು ಹಾಸನದ ಯುವ ಮುಖಂಡ ಸಚಿನ್ ಸರಗೂರು ಬೇಸರ ವ್ಯಕ್ತಪಡಿಸಿದ್ದಾರೆ. ಕೆಂಪೇಗೌಡರ ಹುಟ್ಟುಹಬ್ಬ ಆಚರಣೆಯ ಸಂದರ್ಭದಲ್ಲಿ ಒಕ್ಕಲಿಗ ಮುಖಂಡರು ತಮ್ಮ ಆತ್ಮವಿಮರ್ಶೆ ಮಾಡಿಕೊಳ್ಳಬೇಕು. ರಾಜಕೀಯದಲ್ಲಿಯೂ ಪ್ರಬಲವಾಗಿರುವ ಒಕ್ಕಲಿಗ ಸಮುದಾಯದ ಮುಖಂಡರು, ತಮ್ಮ ಸಮುದಾಯದ ಅಭಿವೃದ್ಧಿಗೆ ಎಷ್ಟು ಒತ್ತನ್ನು ನೀಡುತ್ತಿದ್ದಾರೆ ಎನ್ನುವುದನ್ನು ಯೋಚಿಸಬೇಕಿದೆ ಎಂದು ಅವರು ಹೇಳಿದರು. ಕೆಂಪೇಗೌಡರನ್ನು ಕೇವಲ ಬೆಂಗಳೂರಿಗೆ ಮಾತ್ರವೇ ಸೀಮಿತಗೊಳಿಸಲಾಗುತ್ತಿದೆ. ಚುನಾವಣೆ ಸಮೀಪಿಸುತ್ತಿದ್ದಂತೆಯೇ ಒಕ್ಕಲಿಗ ಸಮುದಾಯದ ಓಲೈಕೆಗೆ ಕೆಂಪೇಗೌಡರ ಬಗ್ಗೆ ಮಾತನಾಡುವ ನಾಯಕರು, ಈವರೆಗೆ ಕೆಂಪೇಗೌಡರ ಜನ್ಮ ದಿನಾಚರಣೆಯನ್ನು ಕೇವಲ ಬೆಂಗಳೂರಿಗೆ ಸೀಮಿತಗೊಳಿಸಿದ್ದಾರೆ. ಹಾಸನ ಜಿಲ್ಲೆ ಒಕ್ಕಲಿಗರ ಪ್ರಾಬಲ್ಯದ ಜಿಲ್ಲೆಯಾಗಿದ್ದು, ಇಲ್ಲಿ ಕೆಂಪೇಗೌಡರ ಪುತ್ಥಳಿಯೇ ಇಲ್ಲ. ಕೆಂಪೇಗೌಡರ ಜನ್ಮ ದಿನಾಚರಣೆಯನ್ನು ಫೋಟೋಗೆ ಹಾರಾರ್ಪಣೆ ಮಾಡಿ ಆಚರಿಸುವಂತಹ ಸ್ಥಿತಿ ಇಂದಿಗೂ ಹಾಸನದಲ್ಲಿದೆ ಎಂದು ಸಚಿನ್ ಸರಗೂರು ಆಕ್ರೋಶ ವ್ಯಕ್ತಪಡಿಸಿದರು. ಒಕ್ಕಲಿಗ ಸಮುದಾಯವು ಕೃಷಿಯನ್ನು ಅವಲಂಬಿಸಿರುವ…
ಬೆಂಗಳೂರು: ಶಾಲಾ ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಆಡಳಿತ ಮತ್ತು ವಿಪಕ್ಷಗಳ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ಸಿದ್ಧರಾಮಯ್ಯ ಸರ್ಕಾರದಲ್ಲಿ ಪಠ್ಯ ಪರಿಷ್ಕರಣೆಯಾದಾಗ ಯಾರು,ಏಕೆ ದ್ವನಿ ಎತ್ತಲಿಲ್ಲ. ಈಗ ಮಾತ್ರ ವಿರೋಧ ಮಾಡುತ್ತಿರುವ ಹಿಂದಿನ ಮರ್ಮ ಏನು ಎಂದು ಸಚಿವ ಆರ್. ಅಶೋಕ್ ಪ್ರಶ್ನಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಸಚಿವರುಗಳಾದ ಸಿ.ಸಿ.ಪಾಟೀಲ್, ಶಿವರಾಮ್ ಹೆಬ್ಬಾರ್, ಬೈರತಿ ಬಸವರಾಜು ಇವರುಗಳ ಜತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಆರ್. ಅಶೋಕ್, ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ತಮ್ಮ ಅಜೆಂಡಾಗಳನ್ನು ಪಠ್ಯದಲ್ಲಿ ತುರುಕಿದ್ದರು. ಮನ ಬಂದಂತೆ ಪಠ್ಯಗಳಲ್ಲಿ ವಿಚಾರಗಳನ್ನು ಅಳವಡಿಸಿದ್ದರು. ಆಗ ಯಾರೂ ಮಾತನಾಡಲಿಲ್ಲ. ಆಗಿದ್ದ ತಪ್ಪುಗಳನ್ನು ಸರಿಪಡಿಸಿದ್ದಕ್ಕೆ ವಿವಾದ ಮಾಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಪಠ್ಯ ಚರ್ಚೆಗೆ ಒಳಗಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಈ ಹಿಂದೆ ತುರುಕಲಾಗಿದ್ದ ವಿಚಾರಗಳು, ಕೈಬಿಡಲಾಗಿದ್ದ ಅಂಶಗಳು, ಈಗ ಬಿಜೆಪಿ ಸರ್ಕಾರ ಪರಿಷ್ಕರಿಸಿರುವ ಅಂಶಗಳು, ಸರಿಪಡಿಸಿರುವ ತಪ್ಪುಗಳು ಎಲ್ಲವನ್ನು ಸಾಕ್ಷ್ಯ ಸಮೇತ ಎಳೆ ಎಳೆಯಾಗಿ ಬಿಚ್ಚಿಟ್ಟ ಸಚಿವರು, ಈ ಹಿಂದೆ ಹಿಂದೂ ಮಹಾಸಾಗರ ಎಂಬ ಹೆಸರನ್ನೇ ಕೈಬಿಡಲಾಗಿತ್ತು.…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಬಸವರಾಜ್ ಆಸ್ಪತ್ರೆ ರಸ್ತೆಯ ನೃಪತುಂಗ ಬಡಾವಣೆಯಲ್ಲಿರುವ ಶ್ರೀ ಸಾಯಿಬಾಬಾ ಸ್ವಾಮಿಗೆ ವಾರದ ಪ್ರಯುಕ್ತ ಭಕ್ತಾದಿಗಳಿಂದ ವಿಶೇಷ ಪೂಜೆ, ಮಹಾಮಂಗಳಾರತಿ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮವು ಸಹ ಬಹಳ ವಿಜೃಂಭಣೆಯಿಂದ ನಡೆಯಿತು. ಇದೇ ಸಂದರ್ಭದಲ್ಲಿ ನಮ್ಮ ತುಮಕೂರು ಜೊತೆಗೆ ಮಾತನಾಡಿದ ಭಕ್ತಾದಿಗಳು ಸಾಯಿಬಾಬಾ ಅವರ ಮಹಿಮೆಗಳು ಹಾಗೂ ತಮ್ಮ ಜೀವನದಲ್ಲಿ ನಡೆದ ಪವಾಡಗಳನ್ನು ವಿವರಿಸಿ, ಸ್ವಾಮಿಯ ಮಹಿಮೆಗೆ ಅಚ್ಚರಿ ವ್ಯಕ್ತಪಡಿಸಿದರು. ಹಿರಿಯೂರು ನಗರದಲ್ಲಿರುವ ಈ ಸಾಯಿಬಾಬಾ ದರ್ಶನ ಪಡೆಯಲು ಸಾವಿರಾರು ಜನ ಈ ದೇವಾಲಯಕ್ಕೆ ಶ್ರೀ ಸಾಯಿಬಾಬಾನ ದರ್ಶನ ಪಡೆಯಲು ದಿನನಿತ್ಯವು ಸಹ ಸಾವಿರಾರು ಸಂಖ್ಯೆಯಲ್ಲಿ ಬೆಂಗಳೂರು ಹಾಗೂ ನಾನಾ ಕಡೆಗಳಿಂದಲೂ ಸಹ ಭಕ್ತಾದಿಗಳು ಆಗಮಿಸುತ್ತಾರೆ ಎಂದು ಇಲ್ಲಿನ ಮಹಿಮೆಗಳನ್ನು ಭಕ್ತರು ಕೊಂಡಾಡಿದರು. ವರದಿ: ಮುರುಳಿಧರನ್ ಆರ್ ಚಿತ್ರದುರ್ಗ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ರಾಜ್ಯದಲ್ಲಿ ಮತ್ತಷ್ಟು ಕೈಗಾರಿಕೆಗಳನ್ನು ಸ್ಥಾಪಿಸಿ ಉದ್ಯೋಗ ಸೃಷ್ಠಿಸುವ ಸಲುವಾಗಿ ಮುಂಬರುವ ನವೆಂಬರ್ ತಿಂಗಳಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ನವೆಂಬರ್ 2, 3 ಮತ್ತು 4ರಂದು ಮೂರು ದಿನಗಳ ಅರಮನೆ ಮೈದಾನದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದು ಅವರು ಹೇಳಿದರು. ನಗರದಲ್ಲಿ ಹೊರವಲಯದ ಗಂಗಾಧರಯ್ಯ ಮೆಮೋರಿಯಲ್ ಹಾಲ್ ನಲ್ಲಿ ಏರ್ಪಡಿಸಲಾಗಿರುವ ಉದ್ಯಮಿಯಾಗು ಉದ್ಯೋಗ ನೀಡು ಹಾಗೂ ಕೈಗಾರಿಕಾ ಅದಾಲತ್ ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 2010 ಮತ್ತು 2012ರಲ್ಲಿ ಆಯೋಜಿಸಿದ್ದ ವಿಶ್ವ ಹೂಡಿಕೆದಾರರ ಸಮಾವೇಶ ಬಹಳ ಯಶಸ್ವಿಯಾಗಿತ್ತು. ಇದರಿಂದ 15 ಲಕ್ಷ ಜನರಿಗೆ ಉದ್ಯೋಗಾವಕಾಶ ದೊರೆತ್ತಿತ್ತು. ಹಾಗಾಗಿಯೇ ಮತ್ತೆ ನವೆಂಬರ್ನಲ್ಲೂ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲಾಗುತ್ತಿದೆ ಎಂದರು. ಕರ್ನಾಟಕ ರಾಜ್ಯ ಕೈಗಾರಿಕೆಯಲ್ಲಿ ಹಾಗೂ ಬಂಡವಾಳ ಆಕರ್ಷಿಸುವಲ್ಲಿ ದೇಶದಲ್ಲೇ ಮೊದಲನೇ ಸ್ಥಾನದಲ್ಲಿದೆ. ನಾವು ಮಕ್ಕಳನ್ನು ಬರೀ ಪದವೀಧರರನ್ನಾಗಿ ಮಾಡಿದರೆ ಸಾಲದು,…
ತೆರಿಗೆ ವಂಚನೆಯ ವಿರುದ್ಧ ಸಮರ ಸಾರಿರುವ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಇಂದು ಮುಂಜಾನೆಯಿಂದ ನಗರದಲ್ಲಿ ಹೆಚ್ಚು ಹಣ ಸಂಪಾದಿಸಿ ತೆರಿಗೆ ಪಾವತಿಸದ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಗಳ ಮೇಲೆ ಇಂದು ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ. ಬಾಗಲೂರಿನಲ್ಲಿರುವ ರೇವಾ ಶಿಕ್ಷಣ ಸಂಸ್ಥೆ, ದಿವ್ಯಾ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್,ಹುಣಸಮಾರಹಳ್ಳಿಯ ಕೃಷ್ಣದೇವರಾಯ ಇನ್ಸ್ಟಿಟ್ಯೂಟ್ ಸೇರಿ ಸರ್ಚ್ ವಾರೆಂಟ್ ಪಡೆದು ೪೫ ಕ್ಕೂ ಹೆಚ್ಚು ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಕಾಲೇಜು ಅಲ್ಲದೇ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರ ಮನೆ ಮೇಲೂ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸುಮಾರು ಎಪ್ಪತ್ತು ವಾಹನಗಳಲ್ಲಿ ಬಂದ ಕರ್ನಾಟಕ ಗೋವಾ ವಲಯದ 250 ಕ್ಕೂ ಐಟಿ ಅಧಿಕಾರಿಗಳು ಮುಂಜಾನೆಯಿಂದ ನಡೆಸಿರುವ ಏಕಕಾಲದ ದಾಳಿ ಮಧ್ಯಾಹ್ನದವರೆಗೆ ಮುಂದುವರೆದಿದೆ. ವಿದೇಶಿ ವಿದ್ಯಾರ್ಥಿಗಳಿಂದ ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮ ಶುಲ್ಕ ಸಂಗ್ರಹ ಮಾಡಿರುವುದು,ಸರ್ಕಾರದ ನಿಯಮಾವಳಿಗಳನ್ನ ಮೀರಿ ಪೇಮೆಂಟ್ ಕೋಟಾ ಸೀಟ್ಗಳನ್ನು ಮ್ಯಾನೇಜ್ಮೆಂಟ್ಗಳು ಬ್ಲಾಂಕಿಂಗ್…