Subscribe to Updates
Get the latest creative news from FooBar about art, design and business.
- ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ
- ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ
- ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ
- ಬೀದರ್ ನಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ
- ವಿಶ್ವಕರ್ಮ ಸಮಾಜವು ಸಂಘಟಿತರಾದಾಗ ಯೋಜನೆಗಳ ಸದ್ಬಳಕೆಗೆ ಸಹಕಾರಿ: ತಹಶೀಲ್ದಾರ್ ಮೋಹನಕುಮಾರಿ ಸಲಹೆ
- ಎಂ.ಎನ್.ಭೀಮರಾಜ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ
- ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ
- ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Author: admin
ತಿಪಟೂರು: ತಾಲ್ಲೂಕಿನ ಚಿಕ್ಕರಂಗಾಪುರ ಭೋವಿಕಾಲೊನಿಯ ಗೊಲ್ಲರಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ 73 ನೇ ಗಣರಾಜ್ಯೋತ್ಸದ ಅಂಗವಾಗಿ ಗ್ರಾಮ ಪಂಚಾಯ್ತಿ ಸದಸ್ಯೆ ರೂಪ ಹರೀಶ್ ರವರು ಉಚಿತವಾಗಿ ಸಮವಸ್ತ್ರ ವಿತರಿಸಿದರು. ಬಳಿಕ ಮಾತನಾಡಿದ ಅವರು, ಗ್ರಾಮೀಣ ಭಾಗದ ಮಕ್ಕಳ ವಿದ್ಯಾಭ್ಯಾಸಕ್ಕೆ ಉಳ್ಳವರು ಕೈಲಾದ ಸಹಾಯ ಮಾಡಿ ಮಕ್ಕಳನ್ನು ಪ್ರೋತ್ಸಾಹಿಸಿದರೆ,ನಮ್ಮ ಹಳ್ಳಿಯ ಮಕ್ಕಳು ಕೂಡ ಪಟ್ಟಣದ ಮಕ್ಕಳಿಗಿಂತ ಮುಂದೆ ಬರುತ್ತಾರೆ. ಮುಂದೊಂದು ದಿನ ಇದೆ ಮಕ್ಕಳು ದೇಶ ಮೆಚ್ಚುವ ಸತ್ಪ್ರೇಜೆಗಳಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಜೊತೆಗೆ ಉತ್ತಮ ಸಂಸ್ಕಾರವಂತರಾದಲ್ಲಿ ತಮ್ಮ ಕುಟುಂಬಕ್ಕೆ,ಸಮಾಜಕ್ಕೆ ಹೆಸರು ತರುವಂತ ಶ್ರೇಷ್ಠ ವ್ಯಕ್ತಿಗಳಾಗುವರು ಈ ನಿಟ್ಟಿಯಲ್ಲಿ ನಾವು ನಮ್ಮ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಿಸಿರುವುದು ಸಂತೋಷ ತಂದಿದೆ ಎಂದರು. ಇನ್ನೊರ್ವ ಗ್ರಾಮ ಪಂಚಾಯ್ತಿ ಸದಸ್ಯ ಶೇಖರಣ್ಣ ಮಕ್ಕಳಿಗೆ ಸಿಹಿ ವಿತರಿಸಿದರು. ಇದೆ ಸಂದರ್ಭದಲ್ಲಿ ನೂತನ ಧ್ವಜಸ್ತಂಭವನ್ನು ಕೂಡ ಶಾಲೆಗೆ ಕೊಡುಗೆಯಾಗಿ ನಿರ್ಮಾಣ ಮಾಡಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು ಮುಖ್ಯ ಶಿಕ್ಷಕಿ ಹೇಮಲತಾ ಮಾತನಾಡಿ, ನಮ್ಮ ಶಾಲೆಯ ಮಕ್ಕಳಿಗೆ ಕಲಿಕೆ…
ಕನ್ನಡದ ವರಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರು ರಾಮಚಂದ್ರ ಬೇಂದ್ರೆ-ಅಂಬವ್ವನವರ ಪುತ್ರರಾಗಿ ೩೧-೧-೧೮೯೬ರಲ್ಲಿ ಧಾರವಾಡದಲ್ಲಿ ಜನಿಸಿದರು. ಧಾರವಾಡದಲ್ಲಿ ೧೯೧೩ರಲ್ಲಿ ಮೆಟ್ರಿಕ್ ಮುಗಿಸಿದ ಮೇಲೆ ಪುಣೆಯ ಫರ್ಗ್ಯುಸನ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ೧೯೧೮ರಲ್ಲಿ ಬಿ.ಎ. ಮಾಡಿದರು. ಕೆಲವು ಕಾಲ ಅಧ್ಯಾಪಕ ವೃತ್ತಿ ಮಾಡಿದ ಮೇಲೆ ೧೯೩೫ರಲ್ಲಿ ಮುಂಬಯಿ ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಗಳಿಸಿದರು. ಗದುಗಿನ ವಿದ್ಯಾದಾನ ಸಮಿತಿ ಪ್ರೌಢಶಾಲೆಯಲ್ಲಿ ಹೆಡ್ ಮಾಸ್ಟರ್ ಆಗಿ ಆಮೇಲೆ ೧೯೪೨ರಲ್ಲಿ ಹುಬ್ಬಳ್ಳಿಯ ನ್ಯೂ ಇಂಗ್ಲಿಷ್ ಸ್ಕೂಲಿನಲ್ಲಿ ಒಪ್ಪೊತ್ತಿನ ಶಿಕ್ಷಕರಾದರು. ೧೯೪೪ರಲ್ಲಿ ಸೊಲ್ಲಾಪುರದ ಡಿಎವಿ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ೧೯೪೪ರಲ್ಲಿ ನೇಮಕಗೊಂಡರು. ೧೯೫೬ರಲ್ಲಿ ನಿವೃತ್ತರಾದ ಮೇಲೆ ಧಾರವಾಡದ ಆಕಾಶವಾಣಿ ಕೇಂದ್ರದಲ್ಲಿ ಸಲಹೆಗಾರರಾಗಿ ಕೆಲಸ ಮಾಡಿದರು. ಮುಂಬಯಿಯಲ್ಲಿ ನಡೆದ ೨೧ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಅಧ್ಯಕ್ಷರಾಗಿದ್ದರು. ೧೯೩೦ ರಲ್ಲಿ ಮೈಸೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೇಖಕ ಗೋಷ್ಠಿಯನ್ನು ನಿರ್ವಹಿಸಿದರು. ಕೆಲವು ಕಾಲ ಜೀವನ ಮಾಸಪತ್ರಿಕೆ ಮತ್ತು ಜಯಕರ್ನಾಟಕ ಪತ್ರಿಕೆ ಸಂಪಾದಕರಾಗಿ ಸೇವೆ ಸಲ್ಲಿಸಿದರು. ಬೇಂದ್ರೆ ಅವರಿಗೆ ೧೯೬೮ರಲ್ಲಿ…
ಪಾವಗಡ: ಪಾವಗಡ ಸರ್ಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರದ ಮೂಳೆ ತಜ್ಞ ರಮೇಶ್ ರವರನ್ನು ಮರು ನೇಮಕ ಮಾಡುವಂತೆ ಸಂಘ ಸಂಸ್ಥೆಗಳ ಮುಖಂಡರು ತುಮಕೂರು ಜಿಲ್ಲಾಧಿಕಾರಿಗಳಿಗೆ ಪಾವಗಡ ತಹಸೀಲ್ದಾರ್ ಕೆ. ಆರ್.ನಾಗರಾಜ ಮೂಲಕ ಮನವಿ ಪತ್ರ ಸಲ್ಲಿಸಿದರು. ಪಾವಗಡ ತಾಲ್ಲೂಕು ಅತೀ ಹಿಂದುಳಿದ ಬರಪೀಡಿತ ತಾಲೂಕಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಡು ಬಡವರು ವಾಸವಾಗಿದ್ದಾರೆ. ಆಕಸ್ಮಿಕ ಅಪಘಾತ ಅಥವಾ ಕೂಲಿ ಕೆಲಸ ಮಾಡುವ ಸಂದರ್ಭದಲ್ಲಿ ಕೈ ಕಾಲುಗಳಿಗೆ ಗಾಯಗಳಾದಾಗ ಜಿಲ್ಲಾ ಆಸ್ಪತೆಗೆ ಹೋಗಬೇಕಾದ ಅನಿವಾರ್ಯತೆ ಇದೆ ಎಂದು ಮನವಿಯಲ್ಲಿ ಗಮನ ಸೆಳೆಯಲಾಯಿತು. ಈ ಹಿಂದೆ ನೇಮಕವಾಗಿರುವ ಮೂಳೆ ತಜ್ಞ ರಮೇಶ್ ರವರು ರೋಗಿಗಳನ್ನು ಗುಣಪಡಿಸಲು ನಿಪಕ್ಷಪಾತವಾಗಿ ಕೆಲಸ ನಿರ್ವಹಿಸುತಿದ್ದು, ಈ ತಾಲ್ಲೂಕಿನ ಜನತೆಗೆ ಇಂತಹ ದಕ್ಷ ತಜ್ಞ ವೈದ್ಯರೆ ಬೇಕಾಗಿರುವುದರಿಂದ ಕೂಡಲೇ ಡಾ.ರಮೇಶ್ ರವರನ್ನು ಮರುನೇಮಕ ಮಾಡುವಂತೆ ಸಂಘ ಸಂಸ್ಥೆಗಳ ಮುಖಂಡರು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎಂ.ಕೆ.ನಾರಾಯಣಪ್ಪ, ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್, ವೆಟರ್ನರಿ ಉಗ್ರಪ್ಪ ಬಿ.ಎಸ್.ಪಿ. ಮಂಜುನಾಥ್, ಕಣ್ಣಮೇಡಿ ಕೃಷ್ಣ…
ಕೊರಟಗೆರೆ: ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ರವರಿಗೆ ಅಗೌರವ ತೋರಿಸಿರುವುದರ ವಿರುದ್ಧ ತಕ್ಷಣವೇ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಸೋಮವಾರ ವಕೀಲರು ಕಾರ್ಯ ಕಲಾಪಗಳಿಗೆ ಹಾಜರಾಗದೆ ಕಾರ್ಯ ಕಲಾಪವನ್ನು ಬಹಿಷ್ಕರಿಸಿದರು. ಈ ವೇಳೆ ವಕೀಲರ ಸಂಘದ ಉಪಾದ್ಯಕ್ಷ ಟಿ.ಕೃಷ್ಣಮೂರ್ತಿ ಮಾತನಾಡಿ, ಜನವರಿ 26 ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರು ಬಾಬಾ ಸಾಹೇಬರ ಭಾವಚಿತ್ರ ತೆಗೆಸಿ ಒಂದು ಗಂಟೆ ತಡವಾಗಿ ಧ್ವಜಾರೋಹಣ ಮಾಡಿದ್ದಾರೆ. ಇದು ಸಂವಿಧಾನಕ್ಕೆ ಅಗೌರವ ತೋರಿಸಿದಂತಾಗಿದೆ. ಉಚ್ಚ ನ್ಯಾಯಾಲಯದ ಆದೇಶ ಏನೇ ಇರಲಿ ವಿಶ್ವ ನಾಯಕನಿಗೆ ಅಗೌರವ ತೋರಿಸಿರುವುದು ನಮ್ಮ ರಾಷ್ಟ್ರವೇ ತಲೆತಗ್ಗಿಸುವಂತಾಗಿದೆ ಎಂದರು. ಪುಟ್ಟರಾಜಯ್ಯ ಮಾತನಾಡಿ, ಸಂವಿಧಾನದ ಅಡಿಯಲ್ಲಿ ಮಲ್ಲಿಕಾರ್ಜುನ ಗೌಡರು, ಎಲ್ಲ ಸೌಲಭ್ಯಗಳನ್ನು ಪಡೆದುಕೊಂಡು ಡಾ.ಬಿ.ಆರ್ ಅಂಬೇಡ್ಕರ್ ರಚಿಸಿ ದೇಶಕ್ಕೆ ನೀಡಿದಂತಹ ಸಂವಿಧಾನದಡಿ ಬರುವಂತಹ ನ್ಯಾಯಾಂಗದಲ್ಲಿ ಇಂತಹ ಘಟನೆಗಳು ನೆಡೆಯುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ಭಾವುಕರಾದರು. ಪ್ರತಿಭಟನಾ ಕಾರ್ಯಕ್ರಮದಲ್ಲಿ ವಕೀಲ ಸಂಘದ ಜಂಟಿ ಕಾರ್ಯದರ್ಶಿ ಎಂ.ಎಲ್. ಸಂತೋಷ್,…
ಮಧುಗಿರಿ: ಪಟ್ಟಣದಲ್ಲಿ ಸ್ಮಾರ್ಟ್ ಸಿಟಿಯ ಹೆಸರಲ್ಲಿ ಯುಜಿಡಿ ಕಾಮಗಾರಿ ನಡೆಯುತ್ತಿದ್ದು, ಅಗೆದ ಗುಂಡಿಗಳನ್ನು ಕಾಮಗಾರಿ ಪೂರ್ಣಗೊಂಡ ನಂತರ ಸರಿಯಾಗಿ ಮುಚ್ಚದೆ ಹಾಗೆಯೇ ಬಿಡಲಾಗಿದೆ. ರಸ್ತೆಯನ್ನು ಅಗೆದ ಗುಂಡಿಯಂದ ವಾಹನ ಸವಾರರಿಗೆ, ಪಾದಚಾರಿಗಳಿಗೆ ಕಿರಿಕಿರಿ ಉಂಟಾಗುತ್ತಿದ್ದು, ಮುಖ್ಯವಾಗಿ ಜನದಟ್ಟನೆ ಇರುವ ಟಿವಿವಿ ಸರ್ಕಲ್ ಬಳಿಯಲ್ಲಿಯೇ ರಸ್ತೆ ಬದಿಯಲ್ಲಿ ಅಲ್ಲಲ್ಲಿ ಗುಂಡಿಗಳಿದ್ದವು. ಇದನ್ನು ಗಮನಿಸಿದ ಶಿಕ್ಷಕ ದಂಪತಿ ಫಣೀಂದ್ರನಾಥ್ ಮತ್ತು ಇಂದ್ರಮ್ಮ ರಜೆ ದಿನ ಭಾನುವಾರ ರಸ್ತೆ ಗುಂಡಿ ಸರಿಪಡಿಸಿ, ಸ್ವಚ್ಛತಾ ಕಾರ್ಯ ನಡೆಸಿದರು. ಇವರಿಗೆ ದಂಪತಿಗಳ ಮಕ್ಕಳಾದ ಸಿರಿ, ಕಲ್ಯಾಣ ಹಾಗೂ ಕಾಲೇಜು ವಿದ್ಯಾರ್ಥಿ ಪ್ರಸನ್ನ ಸಾಥ್ ನೀಡಿದರು. ವರದಿ: ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಇತ್ತೀಚೆಗೆ ಸಾಕಷ್ಟು ವಿವಾದಕ್ಕೆ ಗುರಿಯಾಗಿದ್ದ ದಕ್ಷ ಮತ್ತು ಪ್ರಾಮಾಣಿಕ ಐಪಿಎಸ್ ಅಧಿಕಾರಿ ಎಂದೇ ಗುರುತಿಸಿಕೊಂಡಿರುವ ರವಿ ಡಿ. ಚನ್ನಣ್ಣನವರ್ ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ತನ್ನ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಮಾಧ್ಯಮ ಹೇಳಿಕೆ ಯನ್ನು ಬಿಡುಗಡೆ ಮಾಡಿದ್ದಾರೆ. ನನ್ನ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆರೋಪ ಮಾಡಲಾಗಿದೆ. ಸುಳ್ಳು ಆರೋಪ ಮಾಡಿದವರ ವಿರುದ್ಧ 3 ಕೋಟಿ ರೂ. ಮಾನನಷ್ಟ ಪ್ರಕರಣ ದಾಖಲಿಸಲಾಗುವುದು ಎಂದಿದ್ದಾರೆ. ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ ಕುಟುಂಬದ ಮೇಲೆ ಆಧಾರರಹಿತ ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿದೆ. ಇವೆಲ್ಲವೂ ಸುಳ್ಳಾಗಿದ್ದು, ದುರುದ್ದೇಶದಿಂದ ಕೂಡಿರುತ್ತವೆ ಎಂದು ಅಸಮಾಧಾನ ಹೊರಹಾಕಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ, ನನ್ನ ತಂದೆ-ತಾಯಿಯವರ ಹೆಸರಲ್ಲಿರುವ ಕೆಲ ಪಹಣಿ ಹಾಕಿ, ಆರೋಪಿಸಿದ್ದು, ಅವುಗಳೆಲ್ಲ ಕಾನೂನು ಬದ್ಧವಾಗಿಯೇ ಖರೀದಿಸಿದ್ದೇನೆ. ಇವುಗಳು ಪಿತ್ರಾರ್ಜಿತ ಹಾಗೂ ಸ್ವಯಾರ್ಜಿತ ಆಸ್ತಿಗಳಾಗಿವೆ. ಅವುಗಳನ್ನೆಲ್ಲ ಆಯಾ ವರ್ಷವೇ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇವುಗಳನ್ನು ನಾನು…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ವಾರ್ಡ್ ನಂ 19ರಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬಿ ಇ ಓ ಕಚೇರಿ ಕಟ್ಟಲು ಹೊರಟಿರುವ ಆದೇಶವನ್ನು ಹಿಂಪಡೆಯಲು ಒತ್ತಾಯಿಸಿ ಹೋರಾಟ ನಡೆಸಲು ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಸಮಿತಿ ಪೂರ್ವಸಭೆ ನಡೆಸಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ರಾಮಚಂದ್ರ ಕೆ., ಹಿರಿಯೂರು ತಾಲ್ಲೂಕು ಅಧ್ಯಕ್ಷರಾದ ಶಿವಕುಮಾರ್ ವಿ., ತಾಲ್ಲೂಕು ಕಾರ್ಯಾಧ್ಯಕ್ಷರಾದ ರಾಘವೇಂದ್ರ ಆರ್., ಉಪಾಧ್ಯಕ್ಷರುಗಳಾದ ಶ್ರೀನಿವಾಸ್, ವಿಜಯಕುಮಾರ್, ಶಿವರಾಜ್, ಶಾಲೆಯ ಮಕ್ಕಳ ಪೋಷಕರಾದ ಓಂಕಾರಪ್ಪ, ಪಯಾಜ್, ವೆಂಕಟೇಶ್, ರೂಪ , ಮಂಜುಳ, ರೇಖಾ, ಪಾತಿಮ, ಜಬಿವುಲ್ಲಾ, ಅನಿಫ್, ಲಕ್ಷ್ಮಿ, ಕರಿಯಮ್ಮ, ತೀವ್ರೆಣಿ, ನಿಂಗಮ್ಮ, ವಿದ್ಯಾ, ಅಮ್ಮುಜುಮ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು. ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ ). ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ತುಮಕೂರು: ಜಿಲ್ಲೆಯ ತಿಪಟೂರು ತಾಲ್ಲೋಕಿನ ಗಡಿ ಗ್ರಾಮ ಕಾರೇ ಕುರ್ಚಿ ಶಿವಶರಣ ಶ್ರೀ ಗುರುಸಿದ್ದರಾಮೇಶ್ವರರ ತಪೋಭೂಮಿ ದೊಣೆಗಂಗಾಕ್ಷೇತ್ರ ಮೂಲಸೌಕರ್ಯಗಳಿಲ್ಲದೇ ಭಕ್ತರು ಪರದಾಡುವಂತಾಗಿದೆ. ಕರ್ನಾಟಕ ಸೇರಿದಂತೆ ದೇಶಾದಾಧ್ಯಂತ ಅಸಂಖ್ಯಾತ ಭಕ್ತರನ್ನ ಹೊಂದಿರುವ ಕಾಯಕ ಯೋಗಿ ಶಿವಶರಣ ಶ್ರೀ ಗುರುಸಿದ್ದರಾಮೇಶ್ವರರು ಲೋಕ ಕಲ್ಯಾಣಕ್ಕಾಗಿ 12ವರ್ಷಗಳ ಹಠಯೋಗದ ಮೂಲಕ ತಪಸ್ಸು ಗೈದ ಪೂಣ್ಯಭೂಮಿ ನಾಡಿನ ಕಲ್ಯಾಣಕ್ಕಾಗಿ ಗಂಗೋದ್ಬವವಾಗಿರು ಈ ಕ್ಷೇತ್ರಕ್ಕೆ ಪ್ರತಿನಿತ್ಯ ಸಾವಿರಾರು ಜನ ಭಕ್ತಾಧಿಗಳು ಭೇಟಿ ನೀಡುತ್ತಾರೆ. ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕಾರೇಕುರ್ಚಿ ದೊಣೆಗಂಗಾಕ್ಷೇತ್ರ ತಾಲ್ಲೂಕಿನ ಗಡಿ ಗ್ರಾಮವಾಗಿದ್ದು, ತಿಪಟೂರು ಹಾಗೂ ಗುಬ್ಬಿ ತಾಲ್ಲೂಕಿನ ಗಡಿಗೆ ಹೊಂದಿಕೊಂಡಂತಿರುವ ಕಾರಣ ರಾಜಕೀಯ ನಾಯಕರ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ನಾಡಿನಾದ್ಯಂತ ಅಸಂಖ್ಯಾತ ಭಕ್ತರನ್ನ ಹೊಂದಿರುವ ಶ್ರೀ ಸಿದ್ದರಾಮೇಶ್ವರರ ತಪೋ ಭೂಮಿಗೆ ಸಂಪರ್ಕಿಸಲು ಸರಿಯಾದ ರಸ್ತೆ ಸಂಪರ್ಕವಿಲ್ಲ. ರಾಷ್ಟ್ರೀಯ ಹೆದ್ದಾರಿ 206 ಕೇವಲ 3 ಕಿಲೋಮೀಟ್ ಅಂತರದಲ್ಲಿ ಶ್ರೀಕ್ಷೇತ್ರವಿದ್ದು, ದೊಣೆಗಂಗಾಕ್ಷೇತ್ರಕ್ಕೆ ಸರಿಯಾದ ಸಂಪರ್ಕವಿಲ್ಲದಂತಾಗಿದೆ. ಶ್ರೀಕ್ಷೇತ್ರಕ್ಕೆ ಮಣ್ಣಿನ ರಸ್ತೆಯಲ್ಲಿ ಸಾಗಬೇಕಿದ್ದು ಮಳೆಗಾಲದಲ್ಲಿ ಕೆಸರುಮಯವಾದರೇ ಬೇಸಿಗೆಯಲ್ಲಿ ಧೂಳುಮಯವಾಗುತ್ತದೆ. ಗುಂಡುಗೊಟರುಗಳಿಂದ ಕೂಡಿರುವ…
ಬೆಂಗಳೂರು : ಆಡಿ ಕಾರು ಮಾಲೀಕನೊಬ್ಬ ಮಲಗಿದ್ದ ಬೀದಿ ನಾಯಿಯ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದಿದ್ದಾನೆ.. ಆಡಿ ಕಾರ್ ಮಾಲೀಕನ ದರ್ಪಕ್ಕೆ ಸಿಲುಕಿದ ನಾಯಿ ನೋವಿನಿಂದ ವಿಲಿ ವಿಲಿ ಒದ್ದಾಡಿರುವಂತಹ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.. ಬೇಕಂತಲೇ ಬೀದಿ ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದಿದ್ದಾನೆ.. ರಸ್ತೆ ಬದಿ ನಾಯಿ ತನ್ನ ಪಾಡಿಗೆ ತಾನು ಮಲಗಿತ್ತು.. ಆದ್ರೆ ಕಾರು ಚಲಾಯಿಸುತ್ತಿದ್ದವ ಉದ್ದೇಶಪೂರ್ವಕವಾಗೇ ಕಾರನ್ನ ರಿವರ್ಸ್ ತೆಗೆದುಕೊಂಡು ನಾಯಿ ಮೇಲೆ ಹತ್ತಿಸಿ ವಿಕೃತಿ ಮೆರೆದಿದ್ದಾನೆ.. ಜಯನಗರ1st ಬ್ಲಾಕ್ 10th ಬಿ ಮೈನ್ ನಲ್ಲಿ ಈ ಘಟನೆ ನಡೆದಿದೆ.. ಘಟನೆಯ ವಿಡಿಯೋ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.. ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ನವದೆಹಲಿ: ಫೆಬ್ರವರಿಯಿಂದ ಬ್ಯಾಂಕ್ ಆಫ್ ಬರೋಡಾ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ವಿವಿಧ ಸೇವೆಗಳಿಗೆ ಹೊಸ ನಿಯಮಗಳನ್ನು ಜಾರಿಗೆ ತರಲಿವೆ. ಇದು ದೇಶದ ಜನರ ಜೇಬಿನ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. SBI ನಿಂದ ದೊಡ್ಡ ಬದಲಾವಣೆಯಾಗುವ ಸಾಧ್ಯತೆಗಳಿವೆ. ಇದು ಹಣ ವರ್ಗಾವಣೆಯ ನಿಯಮಗಳನ್ನು ಬದಲಾಯಿಸುತ್ತಿದೆ. IMPS ಮೂಲಕ 2 ಲಕ್ಷದಿಂದ 5 ಲಕ್ಷದವರೆಗೆ ಹಣವನ್ನು ವರ್ಗಾಯಿಸಲು ಬ್ಯಾಂಕ್ ಈಗ 20ರೂ ಜೊತೆಗೆ GST ಶುಲ್ಕವನ್ನು ವಿಧಿಸುತ್ತದೆ. ಇದು ಜನರ ಆರ್ಥಿಕತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇನ್ನೂ ಬ್ಯಾಂಕ್ ಆಫ್ ಬರೋಡಾ ನಿಯಮಗಳು ಫೆಬ್ರವರಿ 1 ರಿಂದ ಬದಲಾಗಲಿದ್ದು ಬ್ಯಾಂಕ್ ಆಫ್ ಬರೋಡಾ ಗ್ರಾಹಕರು ಫೆಬ್ರವರಿ 1 ರಿಂದ ಚೆಕ್ ಪಾವತಿಗೆ ಧನಾತ್ಮಕ ಪಾವತಿ ವ್ಯವಸ್ಥೆಯನ್ನು ಅನುಸರಿಸಬೇಕಾಗುತ್ತದೆ. ಅಂದರೆ ಚೆಕ್ಗೆ ಸಂಬಂಧಿಸಿದ ಮಾಹಿತಿಯನ್ನು ಕಳುಹಿಸಬೇಕಾಗುತ್ತದೆ, ಆಗ ಮಾತ್ರ ನಿಮ್ಮ ಚೆಕ್ ಕ್ಲಿಯರ್ ಆಗುತ್ತದೆ ಎನ್ನಲಾಗುತ್ತಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ನ…