Subscribe to Updates
Get the latest creative news from FooBar about art, design and business.
- ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
- ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
- ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ
- ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ
- ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ
- ನವೆಂಬರ್ 7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ತುಮಕೂರು ಜಿಲ್ಲಾ ಪ್ರವಾಸ
- ತುಮಕೂರು | SSLC ಫಲಿತಾಂಶ ಸೇರಿದಂತೆ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿತು ಜಿಲ್ಲೆಯ ಹಲವು ಸಮಸ್ಯೆಗಳು!
- ಜಮೀನಿನ ಖಾತೆ ಬದಲಾವಣೆಗೆ ಲಂಚಕ್ಕೆ ಬೇಡಿಕೆ: ಗ್ರಾಮ ಆಡಳಿತಾಧಿಕಾರಿ ಮಂಜುನಾಥ ಲೋಕಾಯುಕ್ತ ಬಲೆಗೆ
Author: admin
ಇಡೀ ರಾಜ್ಯದ ಜನತೆ ಶಿವರಾತ್ರಿ ಆಚರಿಸುವ ಸಂದರ್ಭದಲ್ಲಿ ನಾವು ಬೆಂಗಳೂರು ಹಾಗೂ ಕಾವೇರಿ ಜಲಾನಯನ ಪ್ರದೇಶದ ಜನರ ಬದುಕಿನ ರಕ್ಷಣೆಗಾಗಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.ನಾನು ಬೆಂಗಳೂರು ಜನರ ಕ್ಷಮೆ ಕೇಳಲು ಬಯಸುತ್ತೇನೆ. ಮುಂದಿನ 3 ದಿನ ಟ್ರಾಫಿಕ್ ಸಮಸ್ಯೆ ಎದುರಾಗಲಿದೆ. ಈ ಹೋರಾಟದಿಂದ ಮುಂದಿನ 50 ವರ್ಷ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ. ಹೀಗಾಗಿ ನೀವು ನಮಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಬೆಂಗಳೂರಿನ ಜನರಿಗಾಗಿ ಪಾದಯಾತ್ರೆ ಮಾಡುತ್ತಿದ್ದು, ಎಲ್ಲರೂ ಈ ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡುತ್ತೇನೆ. ಪಾದಯಾತ್ರೆಗೆ ಅಪಾಟ್ರ್ಮೆಂಟ್ ಸಂಘ, ಕೈಗಾರಿಕೆ, ಕಾರ್ಖಾನೆ ಸಂಘಗಳು ಎಲ್ಲರೂ ಪಕ್ಷಭೇಧ ಮರೆತು ಆಗಮಿಸಿದ್ದಾರೆ. ಎಲ್ಲ ಸಹಕಾರ ಕೊಟ್ಟಿದ್ದಾರೆ ಎಂದರು.ಮಾರ್ಚ್ 3ರಂದು ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬಹಿರಂಗ ಸಭೆ ನಡೆಯಲಿದ್ದು ಇದರಲ್ಲಿ ಭಾಗವಹಿಸುವ ಎಲ್ಲ ಕಾರ್ಯಕರ್ತರು ಮೆಟ್ರೋ ಮೂಲಕ ಆಗಮಿಸಿ, ಮೆಟ್ರೋ ಮೂಲಕ ತೆರಳಬೇಕು ಎಂದು…
ತುಮಕೂರು: ತುಮಕೂರಿನ ಎಂ.ಜಿ. ರಸ್ತೆಯಲ್ಲಿರುವ ಅಂಬೇಡ್ಕರ್ ಭವನದಲ್ಲಿ ತುಮಕೂರು ಗ್ರಾಮಾಂತರ ಛಲವಾದಿ ಗ್ರಾಮೀಣಾಭಿವೃದ್ಧಿ ಸಂಘ (ರಿ ). ಸಂಘದ ವತಿಯಿಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಿರ್ದೇಶಕರುಗಳ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು. ಈ ಸಂದರ್ಭದಲ್ಲಿ ಸಮುದಾಯದ ವಿದ್ಯಾರ್ಥಿಗಳ ವಿಚಾರವಾಗಿ ಮತ್ತು ಸಮುದಾಯದ ಏಳಿಗೆಯ ವಿಚಾರವನ್ನು ಚರ್ಚಿಸಲಾಯಿತು. ಸಭೆಯಲ್ಲಿ ಗೌರವಾಧ್ಯಕ್ಷರಾದ ಸಂಪತ್ ಕುಮಾರ್, ಉಪಾಧ್ಯಕ್ಷರಾದ ಯಲ್ಲಯ್ಯ, ಕಾರ್ಯದರ್ಶಿಗಳಾದ ಮಂಜುನಾಥ್ ಹೆಚ್, ಸಂಘಟನಾ ಕಾರ್ಯದರ್ಶಿಗಳಾದ ಸುರೇಶ್, ಸಹಕಾರ್ಯದರ್ಶಿ ಪ್ರವೀಣ್, ನಿರ್ದೇಶಕರುಗಳಾದ ರಾಜಣ್ಣ ಹೊನ್ನುಡಿಕೆ, ರಾಮಚಂದ್ರ ಆರ್., ಶ್ರೀನಿವಾಸ್ ಶಶಿಕುಮಾರ್, ಮಹೇಶ್, ಮಮತಾ ಗುರೂಜಿ, ಮಂಜುಳಾ ಹಾಗೂ ವೆಂಕಟೇಶ್ ರವರು ಭಾಗವಹಿಸಿದ್ದರು ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರ ಸ್ಥಾನಕ್ಕೆ ಆಯ್ಕೆಯಾದ ಪರಮೇಶ್ ರವರನ್ನು ಸನ್ಮಾನಿಸಲಾಯಿತು. ವರದಿ: ಎ.ಎನ್.ಪೀರ್, ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಪಾವಗಡ: ತಾಲೂಕಿನ ಕಾಂಗ್ರೆಸ್ ಶಾಸಕ ವೆಂಕಟರಮಣಪ್ಪ ಹಾಗೂ ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಎಚ್.ವಿ.ವೆಂಕಟೇಶ್ ನೇತೃತ್ವದಲ್ಲಿ ತಾಲ್ಲೂಕಿನಿಂದ ಎರಡು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು, ನೂರಾರು ವಾಹನಗಳಲ್ಲಿ ಮೇಕೆದಾಟು ಪಾದಯಾತ್ರೆಗೆ ತೆರಳಿದರು. ಈ ಸಂದರ್ಭದಲ್ಲಿ ಪಾವಗಡ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ H V V ವೆಂಕಟೇಶ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಕೋಟೆ ಪ್ರಭಾಕರ. ಸಿ.ಕೆ.ಪುರ.ಗ್ರಾಮದ ಬಿಂದು ಮಾಧವ ರಾವ್ ಹಾಗೂ ಪಾವಗಡ ತಾಲ್ಲೂಕಿನ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು ವರದಿ: ರಾಮಪ್ಪ ಸಿ.ಕೆ.ಪುರ., ಪಾವಗಡ ತಾಲ್ಲೂಕು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ತುಮಕೂರು: ನಾಡಿನಲ್ಲೆಡೆ ಶಿವರಾತ್ರಿ ಹಬ್ಬದ ಸಡಗರ ಗರಿಗೆದರಿದ್ದು ಹಿನ್ನೆಲೆಯಲ್ಲಿ ತುಮಕೂರು ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷವಾದ ಪೂಜಾ ಕೈಂಕರ್ಯಗಳು ನಡೆಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇರುವ ಕೋಟೆ ಆಂಜನೇಯ ಸ್ವಾಮಿಗೆ ಬೆಳಗ್ಗೆಯಿಂದ ವಿಶೇಷವಾದ ಪೂಜಾಕೈಂಕರ್ಯಗಳು ಜರುಗಿದವು. ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಆಂಜನೇಯಸ್ವಾಮಿಗೆ ವಿಶೇಷವಾದ ಅಲಂಕಾರವನ್ನು ಏರ್ಪಡಿಸಲಾಗಿತ್ತು. ಶಿವರಾತ್ರಿ ಹಬ್ಬದ ಪ್ರಯುಕ್ತ ಚಿಕ್ಕಪೇಟೆಯಲ್ಲಿರುವ ಪಾರ್ವತಿ ಸಮೇತ ಗಂಗಾಧರೇಶ್ವರ ದೇವಾಲಯದಲ್ಲಿ ಕೂಡ ವಿಶೇಷವಾದ ಪೂಜಾಕೈಂಕರ್ಯಗಳು ನಡೆದವು.ಸುಮಾರು 700 ವರ್ಷಗಳ ಇತಿಹಾಸವಿರುವ ಚಿಕ್ಕಪೇಟೆಯ ಪ್ರಸನ್ನ ಗಂಗಾಧರೇಶ್ವರ ದೇವಾಲಯವು ಮುಜರಾಯಿ ಇಲಾಖೆಯ ಅಡಿಯಲ್ಲಿದ್ದು, ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ವಿಶೇಷವಾದ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆಯಿಂದ ಗಂಗಾಧರೇಶ್ವರಸ್ವಾಮಿ ವಿಶೇಷವಾದ ಅಭಿಷೇಕಗಳು ವಿವಿಧ ಅಲಂಕಾರಗಳು ನಡೆದವು ಪಾರ್ವತಿ ಸಮೇತ ಗಂಗಾಧರೇಶ್ವರಸ್ವಾಮಿ ದೇವಾಲಯಕ್ಕೆ ಅನೇಕ ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ಪುನೀತರಾದರು. ವರದಿ: ಎ.ಎನ್.ಪೀರ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ತುಮಕೂರು: ಇತ್ತೀಚೆಗೆ ನಗರದಲ್ಲಿ ನಡೆದ ಪತ್ರಕರ್ತ ಚುನಾವಣೆಯಲ್ಲಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಪರಮೇಶ್ವರ್ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರದ ಛಲವಾದಿ ಗ್ರಾಮೀಣ ಅಭಿವೃದ್ಧಿ ಸಂಘಟನೆಯವರು ಇಂದುನಗರದ ಅಂಬೇಡ್ಕರ್ ಭವನದಲ್ಲಿ ಪರಮೇಶ್ ಅವರನ್ನು ಸನ್ಮಾನಿಸಿದರು. ಈ ಸಂದರ್ಭ ಅಧ್ಯಕ್ಷ ಕೆ.ಕುಮಾರ್ , ಗೌರವಾಧ್ಯಕ್ಷ ಎಂ.ಸಂಪತ್ ಕುಮಾರ್ , ಉಪಾಧ್ಯಕ್ಷ ಯಲ್ಲಯ್ಯ ಸೇರಿದಂತೆ ಸಂಘದ ನಿರ್ದೇಶಕರುಗಳು ಸನ್ಮಾನದ ವೇಳೆ ಹಾಜರಿದ್ದರು. ವರದಿ: ಎ.ಎನ್.ಪೀರ್, ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಪಾವಗಡ: ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಕಿಲಾರ್ಲಹಳ್ಳಿ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮದ ನಿರೂಪಣೆಯನ್ನು ವಿಜ್ಞಾನ ಶಿಕ್ಷಕರಾದ ರಾಜಾನಾಯ್ಕ ಎಸ್.ಹೆಚ್. ನೆರವೇರಿಸಿದರು. ಸರ್ ಸಿ.ವಿ.ರಾಮನ್ ಫೋಟೋ ಪೂಜೆ ಮತ್ತು ಪ್ರಾರ್ಥನೆಯನ್ನು 7ನೇ ತರಗತಿ ಲಾವಣ್ಯ ಮತ್ತು ತಂಡ ನೆರವೇರಿಸಿದರು, ಮುಖ್ಯ ಶಿಕ್ಷಕರಾದ ಚಂದ್ರಪ್ಪ ಸ್ವಾಗತ ಮಾಡಿದರು. ಕ್ಷೇತ್ರಶಿಕ್ಷಣಾಧಿಕಾರಿಗಳಾದ ಅಶ್ವತ್ಥ ನಾರಾಯಣರವರು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಮಕ್ಕಳು ಉತ್ತಮ ಕಡಿಮೆ ವೆಚ್ಚದ ಮಾದರಿಗಳನ್ನು ತಯಾರಿಸಲು ವಿಜ್ಞಾನ ಶಿಕ್ಷಕರು ಮತ್ತು ಇತರ ಶಿಕ್ಷಕರು ಪ್ರೋತ್ಸಾಹಿಸಬೇಕು. ಪೋಷಕರು ಮಕ್ಕಳಿಗೆ 1 ರಿಂದ 10 ನೇ ತರಗತಿವರೆಗೆ ಹೆಚ್ಚು ಗಮನ ಕೊಟ್ಟರೆ ಅವರ ಭವಿಷ್ಯ ಉತ್ತಮವಾಗಿರುತ್ತದೆ ಎಂದು ಹೇಳಿದರು. ತಾಲ್ಲೂಕು ಅಕ್ಷರ ದಾಸೋಹ ಅಧಿಕಾರಿಗಳಾದ ಹನುಮಂತರಾಯಪ್ಪ ಮಾತನಾಡಿ, ಈ ದಿನ ಸಿ.ವಿ. ರಾಮನ್ ರವರಿಗೆ ನೋಬಲ್ ಪ್ರಶಸ್ತಿ ಬಂದ ದಿನ. ಅವರು ಭೌತಶಾಸ್ತ್ರ ವಿಷಯದಲ್ಲಿ ಬೆಳಕಿನ ಚದುರುವಿಕೆಯ ಬಗ್ಗೆ ಕೊಡುಗೆ ಅಪಾರ ಎಂದು ತಿಳಿಸಿದರು. ಅದೇ ರೀತಿ…
ಗುಬ್ಬಿ: ತಾಲೂಕಿನ ಕೋಡಿ ನಾಗೇನಹಳ್ಳಿ ಗ್ರಾಮದಲ್ಲಿ ಸಾಮೂಹಿಕ ಸತ್ಯನಾರಾಯಣ ಸ್ವಾಮಿ ಪೂಜೆಯನ್ನು ಮಾರ್ಚ್ 6ರಂದು ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತಾ ಸಭೆಯನ್ನು ನಡೆಸಲಾಯಿತು. ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ಕೋಡಿ ನಾಗೇನಹಳ್ಳಿ ಗ್ರಾಮದ ಪ್ರಸಾದ್ ಪಟೇಲ್ ರವರ ತೋಟದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಎಂ.ಎನ್.ಕೋಟೆ ವಲಯದ ಒಕ್ಕೂಟದ ಗೌರವಾಧ್ಯಕ್ಷರಾದ ಕಿಡಿಗಣ್ಣಪ್ಪ ಸಾಮೂಹಿಕ ಸತ್ಯನಾರಾಯಣ ಸ್ವಾಮಿ ಪೂಜೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಮನವಿ ಮಾಡಿಕೊಂಡರು ಸುಮಾರು ಎರಡು ಸಾವಿರ ಸದಸ್ಯರು 500 ಜೋಡಿಗಳು ಸತ್ಯ ನಾರಾಯಣ ಸ್ವಾಮಿ ಪೂಜೆಗೆ ಭಾಗವಹಿಸಲಿದ್ದು, ಈ ಭಾಗದ ಸರ್ವ ಸದಸ್ಯರು ಈ ಧಾರ್ಮಿಕ ಕಾರ್ಯಕ್ರಮ ದಲ್ಲಿ ಭಾಗವಹಿಸುವ ಮೂಲಕ ಕಾರ್ಯ ಕ್ರಮದ ಅಭೂತಪೂರ್ವ ಸಂಗಮ ಯಶಸ್ವಿ ಗೆ ಸಹಕರಿಸಬೇಕು ಎಂದು ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಹರೀಶ್, ಮಾಜಿ ತಾ.ಪಂ.ಸದಸ್ಯ ಅ.ನಾ.ಲಿಂಗಪ್ಪ, ಮೇಲ್ವಿಚಾರಕ ವಿಶ್ವನಾಥ್ ಪೂಜಾರಿ, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಇದ್ದರು. ವರದಿ: ಮಂಜುನಾಥ್, ಗುಬ್ಬಿ ನಮ್ಮತುಮಕೂರು.ಕಾಂನ…
ಚಿತ್ರದುರ್ಗ: ಸದನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಬಿಡದ ಕಾಂಗ್ರೆಸ್ ಶಾಸಕರು ಕಲಾಪ ವ್ಯರ್ಥವಾಗಲು ಕಾರಣರಾಗಿದ್ದು, ಈಶ್ವರಪ್ಪನವರ ಹೇಳಿಕೆಯನ್ನು ತಿರುಚಿ, ಸದನ ನಡೆಯಲು ಬಿಡದೇ ಜನರ ತೆರಿಗೆ ವ್ಯರ್ಥವಾಗುವಂತೆ ಮಾಡಿದ್ದಾರೆ ಎಂದು ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾಶ್ರೀನಿವಾಸ್ ಆರೋಪಿಸಿದರು. ಬಿಜೆಪಿ ಮಂಡಲ ಅಧ್ಯಕ್ಷರಾದ ವಿ.ವಿಶ್ವನಾಥ್ ರವರ ನೇತೃತ್ವದಲ್ಲಿ ವಿರೋಧ ಪಕ್ಷ ಕಾಂಗ್ರೆಸ್ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು. ಡಿ . ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಧರ್ಮ – ಧರ್ಮಗಳ ನಡುವೆ ಸಂಘರ್ಷ ಉಂಟುಮಾಡುವಂತ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಶಿವಮೊಗ್ಗದ ಬಜರಂಗದಳದ ನಿಷ್ಠಾವಂತ ಕಾರ್ಯಕರ್ತ ಹರ್ಷನ ಹತ್ಯೆಗೆ ಪರೋಕ್ಷವಾಗಿ ಕಾರಣವಾಗಿದ್ದಾರೆ. ಅಧಿಕಾರ ಕಳೆದು ಕೊಂಡಾಗ ಪಾದಯಾತ್ರೆ ನೆಪದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಕಪಟನಾಟಕದ ಎರಡನೇ ಭಾಗ ಪ್ರಾರಂಭಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಕೇಂದ್ರ ಸರ್ಕಾರ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಹಾಗೂ ಪ್ರಜೆಗಳನ್ನು ಸುರಕ್ಷಿತವಾಗಿ ದೇಶಕ್ಕೆ ಮರಳಿ ಕರೆತರುತ್ತಿದ್ದು…
ಹೆಚ್.ಡಿ.ಕೋಟೆ/ಸರಗೂರು: ಸಾರ್ವಜನಿಕರಿಂದ ಲಂಚ ಸ್ವೀಕರಿಸುವ ಅಧಿಕಾರಿಗಳನ್ನು ಶಾಸಕ ಅನಿಲ್ ಚಿಕ್ಕಮಾದು ತರಾಟೆಗೆತ್ತಿಕೊಂಡಿದ್ದು, ಎಚ್ಚರಿಕೆಯನ್ನು ನೀಡಿದರು. ಹೆಚ್.ಡಿ.ಕೋಟೆ ತಾಲ್ಲೂಕಿನ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆಸಲಾದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು, ನ್ಯಾಯುತವಾಗಿ ಮಾನವೀಯತೆಯ ಗುಣದಿಂದ ಸಾರ್ವಜನಿಕರಿಗೆ ಸೇವೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕೋಟೆ ಮತ್ತು ಸರಗೂರು ತಹಶೀಲ್ದಾರ್ ಎಸ್ .ನರಗುಂದ, ಚಲುವರಾಜು, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಧಿಕಾರಿ ರಾಜೇಶ್, ಪುರಸಭೆ ಅಧ್ಯಕ್ಷೆ ನಾಗಮ್ಮ, ಸರಗೂರು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾಶ್ರೀನಾಥ್, ಉಪಾಧ್ಯಕ್ಷ ವಿನಾಯಕ ಪ್ರಸಾದ್, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್. ಸಿ.ನರಸಿಂಹಮೂರ್ತಿ ವಿವಿಧ ಅಧಿಕಾರಿಗಳು ಭಾಗಿಯಾಗಿದ್ದರು . ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಮಧುಗಿರಿ: ಪುರಾತನ ಕಾಲದ ಬಾವಿಯನ್ನು ಕಿಡಿಗೇಡಿಗಳು ರಾತ್ರೋ ರಾತ್ರಿ ಕೆಡವಿದ ಘಟನೆ ಇಲ್ಲಿನ ಸಿದ್ಧಾಪುರ ಗ್ರಾಮದಲ್ಲಿ ನಡೆದಿದ್ದು, ಊರ ಹೊರಗಿನ ಕೋಟೆಗಳನ್ನು ಧ್ವಂಸ ಮಾಡಿದ ಬಳಿಕ ಇದೀಗ ಜನ ವಸತಿ ಪ್ರದೇಶದಲ್ಲಿರುವ ಸ್ಥಳಗಳನ್ನೂ ನಾಶ ಮಾಡಲು ಆರಂಭಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪುರಾತನ ಕಾಲದ ಈ ಬಾವಿ ಇಲ್ಲಿನ ಜನರ ಹೆಮ್ಮೆಯ ಸಂಕೇತವಾಗಿತ್ತು. ಆದರೆ, ರಾತ್ರೋ ರಾತ್ರಿ ಕಳ್ಳರಂತೆ ಬಂದ ಕಿಡಿಗೇಡಿಗಳು ಈ ಪ್ರದೇಶದ ಬೀದಿ ಲೈಟ್ ಗಳನ್ನು ಆಫ್ ಮಾಡಿದ ಬಳಿಕ ಕೃತ್ಯ ನಡೆಸಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. ಘಟನಾ ಸ್ಥಳದಲ್ಲಿ ಬೀದಿ ಬಾವಿ ಲಕ್ಷ್ಮಿಕಾಂತ, ದ್ವಾರಕೀಶ್ ಬಾಲಾಜಿ, ಮಂಜುನಾಥ್, ರಮೇಶ್, ಶರತ್, ಬಾಬು, ನಾಗೇಶ್, ರಮೇಶ್ ಎಂ, ಆರ್. ಮಂಜುನಾಥ್, ವೆಂಕಟೇಶ್, ಶ್ರೀರಂಗ, ಡಾ.ಶ್ರೀನಿವಾಸ್, ಧನಂಜಯ ಶೆಟ್ಟರು, ಮಾದೇವಯ್ಯ, ರಂಗ, ಶಾಮಣ್ಣ, ವೆಂಕಟೇಶ್ ಪಂಚಾಕ್ಷರಯ್ಯ, ದಿನೇಶ್, ನಾಗಭೂಷಣ್ ಮೊದಲಾದ ಗ್ರಾಮಸ್ಥರು ಘಟನೆಯನ್ನು ಖಂಡಿಸಿ, ಕಿಡಿಗೇಡಿಗಳ ವಿರುದ್ಧ ತಕ್ಷಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…