Subscribe to Updates
Get the latest creative news from FooBar about art, design and business.
- ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
- ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?
- ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ
- ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ: ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ
- ತುಮಕೂರು: ಬೇಡಿಕೆ 1,400 ಸಿಲಿಂಡರ್ ಗಳು, ಪೂರೈಕೆಯಾಗುತ್ತಿರುವುದು ಕೇವಲ 350!
- ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
- ಬೀದರ್ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್ ಗಳು ಬಂದ್!
- ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ
Author: admin
ಪತ್ನಿ ಐಂದ್ರಿತಾ ಜೊತೆ ಗೋವಾ ಪ್ರವಾಸದಲ್ಲಿದ್ದ ದಿಗಂತ್ ಸಮ್ಮರ್ ಸಾಲ್ಟ್ ಜಂಪ್ ಮಾಡುವ ವೇಳೆ ಅಪಘಾತ ಸಂಭವಿಸಿದ್ದು, ಕುತ್ತಿಗೆಗೆ ಭಾರೀ ಪೆಟ್ಟಾಗಿದೆ. ಗೋವಾದ ಸಮುದ್ರ ದಡದಲ್ಲಿ ಸಮ್ಮರ್ ಸಾಲ್ಟ್ ಜಂಪ್ ಮಾಡುವಾಗ ಬಿದ್ದು ದಿಗಂತ್ ಕುತ್ತಿಗೆಗೆ ಪೆಟ್ಟು ಬಿದ್ದಿದೆ. ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡೊಸಿ ಅವರನ್ನು ಗೋವಾದಿಂದ ಬೆಂಗಳೂರಿಗೆಏರ್ ಲಿಫ್ಟ್ ಮಾಡಲಾಗಿದೆ. ಮಗನ ಆರೋಗ್ಯ ಸ್ಥಿತಿಯ ಬಗ್ಗೆ ತಂದೆ ಹೇಳಿದ್ದೇನು? ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ಡಾ.ವಿದ್ಯಾಧರ್ ದಿಗಂತ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಆಸ್ಪತ್ರೆಗೆ ದಿಗಂತ್ ತಂದೆ, ತಾಯಿ ಹಾಗೂ ನಿರ್ದೇಶಕ ಯೊಗರಾಜ್ ಭಟ್ ಆಗಮಿಸಿದ್ದಾರೆ. ಪುತ್ರ ದಿಗಂತ್ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ತಂದೆ ಕೃಷ್ಣಮೂರ್ತಿ, ಜಿಮ್ನಾಸ್ಟಿಕ್ ಕರಗತ ಮಾಡಿಕೊಂಡಿದ್ದ. ಹೆದರುವ ಅವಶ್ಯಕತೆ ಇಲ್ಲ. ಆಯತಪ್ಪಿ ಬಿದಿದಾನೆ ಅಷ್ಟೇ ಏನು ಆಗಿಲ್ಲ. ಅವನು ಆರಾಮಾಗಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ. ಇವತ್ತೇ ದಿಗಂತ್ ಅವರಿಗೆ ಆಪರೇಷನ್: ಏರ್ಲಿಫ್ಟ್ ಮಾಡಿದ ಸಂದರ್ಭದಿಂದಲೂ ದಿಗಂತ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಬೆನ್ನು ಮೂಳೆ ಮತ್ತು ಸ್ಪೈನಲ್ ಕಾರ್ಡ್ಗೆ ಗಂಭೀರ…
ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಎನ್ಡಿಎ ಬುಡಕಟ್ಟು ನಾಯಕಿ ಮತ್ತು ಜಾರ್ಖಂಡ್ ಮಾಜಿ ರಾಜ್ಯಪಾಲರಾದ ದ್ರೌಪದಿ ಮುರ್ಮು (64) ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದೆ. ಗಮನಾರ್ಹವಾಗಿ ದೇಶದ ಬುಡಕಟ್ಟು ಜನಾಂಗದ ಪ್ರಜೆ ಒಬ್ಬರು ರಾಷ್ಟ್ರಪತಿ ಹುದ್ದೆಯ ಅಭ್ಯರ್ಥಿ ಆಗಿ ಆಯ್ಕೆ ಆಗಿರುವುದು ಇದೇ ಮೊದಲು. ಎನ್ಡಿಎ ತನ್ನ ರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸಿದ ನಂತರ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, “ದ್ರೌಪದಿ ಮುರ್ಮು ಅವರು ಸಮಾಜಕ್ಕೆ ಸೇವೆ ಸಲ್ಲಿಸಲು ಮತ್ತು ಬಡವರು, ದೀನದಲಿತರು ಮತ್ತು ಅಂಚಿನಲ್ಲಿರುವವರ ಸಬಲೀಕರಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅವರು ಶ್ರೀಮಂತ ಆಡಳಿತಾತ್ಮಕ ಅನುಭವವನ್ನು ಹೊಂದಿದ್ದಾರೆ ಮತ್ತು ಅತ್ಯುತ್ತಮ ಗವರ್ನರ್ ಅಧಿಕಾರವನ್ನು ಹೊಂದಿದ್ದಾರೆ. ಅವರು ನಮ್ಮ ರಾಷ್ಟ್ರದ ಶ್ರೇಷ್ಠ ರಾಷ್ಟ್ರಪತಿಯಾಗುತ್ತಾರೆ ಎಂಬ ವಿಶ್ವಾಸವಿದೆ” ಎಂದು ಬರೆದಿದ್ದಾರೆ. ರಾಷ್ಟ್ರಪತಿ ಅಭ್ಯರ್ಥಿ ಹೆಸರನ್ನು ಪ್ರಕಟಿಸಿದ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಮುಂಬರುವ ರಾಷ್ಟ್ರಪತಿ ಚುನಾವಣೆಗೆ ದ್ರೌಪದಿ ಮುರ್ಮು ಅವರನ್ನು ಎನ್ಡಿಎ ಅಭ್ಯರ್ಥಿಯನ್ನಾಗಿ ಘೋಷಿಸುತ್ತೇವೆ. ಮೊದಲ ಬಾರಿಗೆ ಬುಡಕಟ್ಟು ಜನಾಂಗದ ಮಹಿಳಾ…
40 ಶಾಸಕರೊಂದಿಗೆ ಅಸ್ಸಾಂನ ಗುವಾಹಟಿ ತಲುಪಿರುವ ಶಿವಸೇನೆ ಶಾಸಕ ಏಕನಾಥ್ ಶಿಂಧೆ ಇಂದು ಮಹತ್ವದ ಹೆಜ್ಜೆ ಇದುವ ಸಾಧ್ಯತೆ ಇದೆ. ಸರ್ಕಾರದ ವಿದುದ್ದ ಬಂಡಾಯವೆದ್ದಿರುವ ಏಕನಾಥ್ ಶಿಂಧೆ, ಠಾಕ್ರೆ ಸರ್ಕಾರದ ಸಂಕಷ್ಟಗಳನ್ನು ಹೆಚ್ಚಿಸಿದ್ದಾರೆ. ಗುವಾಹಟಿ ತಲುಪಿರುವ ಶಾಸಕರ ಪೈಕಿ ಶಿವಸೇನೆಯ 34, ಇತರ ಪಕ್ಷಗಳ 6 ಶಾಸಕರು ಇದ್ದಾರೆ ಎನ್ನಲಾಗಿದೆ. ಇಂದು ಮಹತ್ವದ ನಿರ್ಧಾರ ಸಾಧ್ಯತೆ : ಮೂಲಗಳ ಪ್ರಕಾರ, ಏಕನಾಥ್ ಶಿಂಧೆ ಅವರು ಇಂದು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಫ್ಯಾಕ್ಸ್ ಮೂಲಕ ಪತ್ರ ರವಾನಿಸುವ ಸಾಧ್ಯತೆ ಇದೆ. ಈ ಪತ್ರದ ಮೂಲಕ ಮಹಾವಿಕಾಸ್ ಅಘಾಡಿ ಸರ್ಕಾರದಿಂದ 40 ಜನ ಶಾಸಕರು ತಮ್ಮ ಬೆಂಬಲವನ್ನು ಹಿಂತೆಗೆದುಕೊಳ್ಳುವ ಬಗ್ಗೆ ತಮ್ಮ ಹಕ್ಕು ಮಂಡಿಸಬಹುದು. ಹೀಗಾದರೆ ಈ ಪತ್ರದ ಆಧಾರದ ಮೇಲೆ, ಉದ್ಧವ್ ಸರ್ಕಾರ ಬಹುಮತವನ್ನು ಸಾಬೀತುಪಡಿಸಬೇಕಾದ ನಿರ್ಧಾರವನ್ನು ನಂತರ ರಾಜ್ಯಪಾಲರು ತೆಗೆದುಕೊಳ್ಳುತ್ತಾರೆ. ಮತ್ತೊಂದೆಡೆ, ಮುಂಬೈನಲ್ಲಿರುವ ಶಿವಸೇನೆ ಶಾಸಕರನ್ನು ತಮ್ಮೊಂದಿಗೆ ಸೇರಿಸಿಕೊಳ್ಳುವ ನಿಟ್ಟಿನಲ್ಲಿ ಏಕನಾಥ್ ಶಿಂಧೆ ಸತತ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ.…
ಸರಗೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಿಸುವಂತೆ ಹಾಗೂ ಪರಿಶಿಷ್ಟರು, ಹಿಂದುಳಿದವರ ಕಲ್ಯಾಣಕ್ಕಾಗಿ ನ್ಯಾಯಧೀಶ ಎಚ್.ಎನ್.ನಾಗಮೋಹನ್ದಾಸ್ ವರದಿಯನ್ನು ಕೂಡಲೇ ಜಾರಿಗೊಳಿಸುವಂತೆ ನಾಯಕ ಸಮಾಜದ ಸ್ವಾಮೀಜಿಗಳು ನಡೆಸುತ್ತಿರುವ ಧರಣಿ ಸತ್ಯಗ್ರಹವನ್ನು ಪರಮ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರ ಹೋರಾಟವನ್ನು ಬೆಂಬಲಿಸಿ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ತಾಲ್ಲೂಕು ನಾಯಕ ಸಂಘದ ಅಧ್ಯಕ್ಷ ಪುರದಕಟ್ಟೆ ಬಸವರಾಜು ಹೇಳಿದರು. ನಾಯಕ ಸಮಾಜದ ಸಂಘದ ವತಿಯಿಂದ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಸರಕಾರ ಪರಿಶಿಷ್ಟ ಜಾತಿ, ಪಂಗಡಗಳಿಗೆ ಸಂವಿಧಾನ ಬದ್ಧವಾಗಿ ಸರಕಾರ ನೀಡಬೇಕಾಗಿರುವ ಪರಿಶಿಷ್ಟರ ಶೇ.7.5, ಪರಿಶಿಷ್ಟ ಜಾತಿಗೆ ಶೇ.17 ಮೀಸಲಾತಿ ನೀಡಬೇಕು. ಆದರೆ, ಮೀಸಲಾತಿಯನ್ನು ನೀಡದೆ ಜನಾಂಗದವರಿಗೆ ವಂಚಿಸುತ್ತಿದೆ. ಮೀಸಲಾತಿ ಪಡೆಯುವ ಸಲುವಾಗಿ ಸಮಾಜದ ಶ್ರೀಪ್ರಸನಾನಂದ ಸ್ವಾಮೀಜಿಗಳು ನೂರು ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಸ್ಪಂದಿಸುತ್ತಿಲ್ಲ. ಆದ್ದರಿಂದ ಅವರ ಹೋರಾಟವನ್ನು ಬೆಂಬಲಿಸಿ ಅವರ ಮಾರ್ಗದರ್ಶನದಂತೆ ರಾಜ್ಯದಾಂದ್ಯತ ಹೋರಾಟ ಮಾಡುತ್ತಿದ್ದೇವೆ. ಬೇಡಿಕೆಯನ್ನು ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ…
ಪಾವಗಡ : ಶುದ್ದ ಕುಡಿಯುವ ನೀರಿಗಾಗಿ ವಸತಿ ನಿಲಯ ವಿದ್ಯಾರ್ಥಿಗಳ ಪರದಾಡುತ್ತಿದ್ದು, ನೀರು ತರಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಕೈ ಮುರಿದುಕೊಂಡಿದ್ದು ಒಬ್ಬ ವಿದ್ಯಾರ್ಥಿಗೆ ಹಲ್ಲು ಉದುರಿರುವ ಘಟನೆ ಗಂಗಸಾಗರ ಗ್ರಾಮದ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಬೆಳಕಿಗೆ ಬಂದಿದೆ. ಹೊಸದುರ್ಗ ಗ್ರಾಮದ 7ನೇ ತರಗತಿ ವಿದ್ಯಾರ್ಥಿ ಮಣಿಕಂಠ ನೀರಿಗಾಗಿ ಹೋಗಿ ಜಾರಿ ಬಿದ್ದು ಕೈಮುರಿದು ಕೊಂಡಿದ್ದು, ಈ ಬಗ್ಗೆ ಪ್ರಾಂಶುಪಾಲ ರಾಜ್ ಕುಮಾರ್ ಪೋಷಕರಿಗೂ ಮಾಹಿತಿ ನೀಡದೇ ನಿರ್ಲಕ್ಷ್ಯವಹಿಸಿದ್ದಾರೆನ್ನಲಾಗಿದೆ. ಕಳೆದ ವಾರವೂ ಕೂಡ ಆರ್.ಡಿ.ರೋಪ್ಪ ಗ್ರಾಮದ ವಿದ್ಯಾರ್ಥಿ ನೀರಿಗಾಗಿ ಹೋಗಿ ಕೈ ಮುರಿದಿದ್ದು, ಚಿಕ್ಕಹಳ್ಳಿ ಗ್ರಾಮದ ವಿದ್ಯಾರ್ಥಿ ನೀರಿಗೆ ಹೋಗಿ ಜಾರಿ ಬಿದ್ದು ಹಲ್ಲು ಉದುರಿರುವ ಘಟನೆ ಕೂಡ ನಡೆದಿದೆ. ಇಷ್ಟೆಲ್ಲ ಮಕ್ಕಳು ನೀರಿಗಾಗಿ ಪರದಾಡುತ್ತಿದ್ದರು ನೀರಿನ ಸಮಸ್ಯೆ ಬಗೆರಿಸದ ನೀಲಯಪಾಲಕರು, ಪ್ರಾಂಶುಪಾಲರು, ವಸತಿ ಶಾಲೆಯ ಸಮಸ್ಯೆ ಪೋಷಕರಿಗೆ ಹೇಳದಂತೆ ಹೆದರಿಸುತ್ತಾರೆಂಬುದು ತಿಳಿದು ಬಂದಿದೆ. ಮಕ್ಕಳಿಗೆ ಗುಣಮಟ್ಟದ ತಿಂಡಿ ಉಟ ನೀಡುವುದಿಲ್ಲ, ಹಾಲು ಕೂಡ ಕಳಪೆ ವಿತರಣೆ ವಸತಿ ನಿಲಯದಲ್ಲಿ…
ತುಮಕೂರು: ಉತ್ತರಪ್ರದೇಶದ ಆಗ್ರಾದಲ್ಲಿ ನಡೆದ ರಾಷ್ಟ್ರಮಟ್ಟದ ಹ್ಯಾಂಡ್ ಬಾಲ್ ಕ್ರೀಡಾಕೂಟದಲ್ಲಿ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಎಸ್ ಬಿ ಜಿ ವಿದ್ಯಾಲಯ ಮತ್ತು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ. ಇತ್ತೀಚಿಗಷ್ಟೇ ದೈಹಿಕ ಶಿಕ್ಷಕರಾದ CP ಉದಯ್,ಗಿರಿಧರ್ ಮತ್ತು ಶಂಕರ್ ರವರ ನೇತೃತ್ವದಲ್ಲಿ ನೇಪಾಳದಲ್ಲಿ ನಡೆದ ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಜಯಭೇರಿ ಬಾರಿಸಿದ್ದ ಎಸ್.ಬಿ.ಜಿ ವಿದ್ಯಾಲಯ, ನೆನ್ನೆ ನಡೆದ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಶ್ರೀ ಪ್ರಸನ್ನಾನಂದ ಸ್ವಾಮಿಗಳು ಶುಭ ಹಾರೈಸಿದ್ದಾರೆ. ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ರಸ್ತೆ ದಾಟುತ್ತಿದ್ದ ಚಿರತೆಯೊಂದಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಚಿರತೆ ಬಾನೆಟ್ ಅಡಿ ಸಿಲುಕಿಕೊಂಡು ಪ್ರಾಣ ಉಳಿಸಿಕೊಳ್ಳಲು ಪರದಾಡಿರುವ ವಿಡಿಯೋ ವೈರಲ್ ಆಗಿದೆ. ಬಾನೆಟ್ ಅಡಿ ಸಿಲುಕಿಕೊಂಡ ಚಿರತೆ ಸ್ಥಳದಿಂದ ಓಡಲು ಸಾಕಷ್ಟು ಪ್ರಯತ್ನ ನಡೆಸಿದರೂ ಸಾಧ್ಯವಾಗಿರಲಿಲ್ಲ, ಈ ವೇಳೆ ಕಾರು ಚಾಲಕ ವಾಹನವನ್ನು ರಿವರ್ಸ್ ತೆಗೆದಿದ್ದು, ಈ ವೇಳೆ ಚಿರತೆ ಬಾನೆಟ್ ಅಡಿಯಿಂದ ಬಿಡುಗಡೆಗೊಂಡಿದ್ದು, ತಕ್ಷಣವೇ ಚಿರತೆ ಅಲ್ಲಿಂದ ಓಡಿದೆ. ಈ ವಿಡಿಯೋವನ್ನು ಐಎಫ್ ಎಸ್ ಅಧಿಕಾರಿ ಸುಸಾಂತ ನಂದಾ, ಚಿತ್ರನಟಿ ರವೀನಾ ಟಂಡನ್ ಸೇರಿದಂತೆ ಹಲವರು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಈ ಘಟನೆ ಎಲ್ಲಿ ಮತ್ತು ಯಾವಾಗ ನಡೆದಿದೆ ಎಂಬುದರ ಕುರಿತು ಯಾವುದೇ ಮಾಹಿತಿ ಇಲ್ಲವಾಗಿದ್ದು, ಪಕ್ಕದ ಕಾರಿನಲ್ಲಿದ್ದವರು ಮೊಬೈಲ್ ನಲ್ಲಿ ಈ ದೃಶ್ಯ ಸೆರೆಹಿಡಿದು ಹರಿಬಿಟ್ಟಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ವಿಶ್ವ ಯೋಗ ದಿನಾಚರಣೆ ಪ್ರಯುಕ್ತ 400ಕ್ಕೂ ಹೆಚ್ಚು ಯೋಗಾಪಟುಗಳಿಂದ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಯೋಗಾಭ್ಯಾಸ ನಡೆಯಿತು. ಈ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಇಂಟರ್ನ್ಯಾಷನಲ್ ನ್ಯಾಚುರೋಪತಿ ಆರ್ಗನೈಸೇಶನ್ ಮಂಜುನಾಥ್ ನೇತೃತ್ವದಲ್ಲಿ ಯೋಗಾಭ್ಯಾಸ ನಡೆಯಿತು. ಮಾನವೀಯತೆಗಾಗಿ ಯೋಗ ಎಂಬ ಶೀರ್ಷಿಕೆಯಡಿ ಯೋಗಾಭ್ಯಾಸ ಮಾಡಲಾಯಿತು. ಪತಾಂಜಲಿ ಯೋಗ ಶಿಕ್ಷಣ ಸಮಿತಿ ನೇತೃತ್ವ ವಹಿಸಿತ್ತು. ನಗರ ಶಾಸಕ ಜ್ಯೋತಿಗಣೇಶ್ ಮತ್ತು ಹಲವು ಸಂಸ್ಥೆಗಳಾದ ಆರೋಗ್ಯ ಭಾರತಿ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ರಾಷ್ಟ್ರೀಯ ಮಾನವ ಪರಿಸರ ರಕ್ಷಣಾ ಪಡೆ ಪಟುಗಳು ಹಾಗೂ ನಗರದ ವೃದ್ಧರು, ವಿದ್ಯಾರ್ಥಿಗಳು, ಮಕ್ಕಳು ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಕಲ್ಪತರು ನಾಡು ತುಮಕೂರಿನ ಪಾರಂಪರಿಕ ತಾಣ ಆಲದ ಮರದ ಪಾರ್ಕ್ನಲ್ಲಿ ಅಮೋಘ ಟಿವಿ, ಫಿಟ್ ಲೋನಿಕ್ ಸಹಯೋಗದಲ್ಲಿ ಪ್ರೆಸ್ ಕ್ಲಬ್ ತುಮಕೂರು ವತಿಯಿಂದ ಯೋಗಾ ಡೇ ಆಚರಿಸಲಾಯಿತು. ಶಾಸಕ ಜ್ಯೋತಿಗಣೇಶ್, ತುಮಕೂರು ತಹಶೀಲ್ದಾರ್ ಮೋಹನ್ ಕುಮಾರ್, ಪಾಲಿಕೆ ಸದಸ್ಯೆ ಗಿರಿಜಾ ದನಿಯಾಕುಮಾರ್ ಸೇರಿದಂತೆ ಹಲವು ಗಣ್ಯರು ಯೋಗಾ ಡೇನಲ್ಲಿ ಭಾಗವಹಿಸಿದ್ದರು. ಪ್ರೆಸ್ಕ್ಲಬ್ ತುಮಕೂರಿನ ಉಪಾಧ್ಯಕ್ಷರಾದ ಶ್ರೀನಿವಾಸ್, ಸಹ ಕಾರ್ಯದರ್ಶಿ ಸತೀಶ್, ನಿರ್ದೇಶಕರಾದ ದಾದಾಫೀರ್ ಸೇರಿದಂತೆ ಪದಾಧಿಕಾರಿಗಳು ಹಾಗೂ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು, ನಾಗರಿಕರು, ಯೋಗಾಪಟುಗಳು ಯೋಗಾಭ್ಯಾಸ ಮಾಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಜ್ಯೋತಿಗಣೇಶ್, ಯೋಗ ದಿನದ ಪ್ರಾಮುಖ್ಯತೆ ತಿಳಿಸಿದರಲ್ಲದೆ, ಆಲದಮರದ ಪಾರ್ಕ್ ಅನ್ನು ಪ್ರೆಸ್ ಕ್ಲಬ್ ಅವರಿಗೆ ನೀಡಿದ ನಂತರ ಉತ್ತಮ ಕಾರ್ಯಗಳು ನಡೆಯುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಜಿಲ್ಲೆ ವಿವಿಧೆಡೆಯಲ್ಲಿ ಇಂದು ವಿಶ್ವ ಯೋಗ ದಿನಾಚರಣೆ ನಡೆಸಲಾಯಿತು. ನಗರದ ಹೈಸ್ಕೂಲ್ ಫೀಲ್ಡ್ ನಲ್ಲಿ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದ್ದು, 400ಕ್ಕೂ ಹೆಚ್ಚು ಯೋಗಾಪಟುಗಳು ಅಭ್ಯಾಸ ನಡೆಸಿದರು. ಕಾರ್ಯಕ್ರಮದಲ್ಲಿ ಶಾಸಕ ಜ್ಯೋತಿಗಣೇಶ್ ಭಾಗಿಯಾದರು. ಮಾನವೀಯತೆಗಾಗಿ ಯೋಗ ಎಂಬ ಶೀರ್ಷಿಕೆಯಡಿ ಯೋಗಾಭ್ಯಾಸ ನಡೆಸಲಾಯಿತು. ಪತಾಂಜಲಿ ಯೋಗ ಶಿಕ್ಷಣ ಸಮಿತಿ ನೇತೃತ್ವದಲ್ಲಿ ಯೋಗಾಭ್ಯಾಸ ನೆರವೇರಿತು. ಆರೋಗ್ಯ ಭಾರತಿ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ರಾಷ್ಟ್ರೀಯ ಮಾನವ ಪರಿಸರ ರಕ್ಷಣಾ ಪಡೆ ಪಟುಗಳು ಭಾಗಿಯಾದರು. ಇಂಟರ್ನ್ಯಾಷನಲ್ ನ್ಯಾಚುರೋಪತಿ ಆರ್ಗನೈಸೇಶನ್ ಮಂಜುನಾಥ್ ನೇತೃತ್ವದಲ್ಲಿ ಯೋಗಭ್ಯಾಸ ನಡೆಯಿತು. ನಗರದ ವೃದ್ಧರು, ವಿದ್ಯಾರ್ಥಿಗಳು, ಪುಟ್ಟ ಪುಟ್ಟ ಮಕ್ಕಳಿಂದ ಯೋಗಾಭ್ಯಾಸ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz