Author: admin

ಹುಡುಗಿಗೆ ಮೆಸೆಜ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದಾವಣಗೆರೆ ತಾಲೂಕಿನ ಅತ್ತಿಗೆರೆ ಗ್ರಾಮದಲ್ಲಿ ನಡೆದಿದೆ. ಗಣೇಶ ಎಂಬ ದಲಿತ ಯುವಕನು ಯುವತಿಗೆ ಮೆಸೇಜ್ ಮಾಡಿದ್ದ ಎಂದು ಆರೋಪಿಸಿ ಗ್ರಾಮ ಗ್ರಾ.ಪಂ ಸದಸ್ಯ ಬಾಬಣ್ಣ, ಕಾರ್ತೀಕ್ ಹಾಗೂ ಹರೀಶ್ ಸೇರಿ ಅರವತ್ತಕ್ಕೂ ಹೆಚ್ಚು ಜನ ಸವರ್ಣೀಯರು ದಲಿತ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ. ಯುವಕನಿಗೆ ಎರಡು ದಿನಗಳ ಕಾಲ ಚಿತ್ರ ಹಿಂಸೆ ನೀಡಿ, ಅರೇ ಬೆತ್ತಲೆಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ಹಲ್ಲೆಯಿಂದ ತೀವ್ರಗಾಯಗೊಂಡ ದಲಿತ ಯುವಕನಿಗೆ ಜಿಲ್ಲಾ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಲಿತ ಯುವಕ ಗಣೇಶನನ್ನು ಹಾಗೂ ಆತನ ತಾಯಿಯನ್ನು ಎರಡು ದಿನಗಳ ಕಾಲ ಕಲ್ಯಾಣ ಮಂಟಪದಲ್ಲಿ ಕೂಡಿ ಹಾಕಿ ಹಿಂಸಿಸಲಾಗಿದೆ ಈ ಅಮಾನವೀಯ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವಕನ ಸಂಬಂಧಿಕರು ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳ ಬಂಧನಕ್ಕಾಗಿ ಸಂಬಂಧಿಕರು ಆಗ್ರಹಿಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ವಾರಣಾಸಿ: ಜ್ಞಾನವಾಪಿ ಮಸೀದಿ ಸಮೀಕ್ಷೆ ಕಾರ್ಯ ಮೂರನೇ ದಿನವಾದ ಇಂದು ಮುಂದುವರೆದಿದ್ದು, ಇಂದು ಸರ್ವೇಯಲ್ಲಿ ಹಲವು ಮಹತ್ವದ ಅಂಶಗಳು ಪತ್ತೆಯಾಗಿವೆ ಎಂದು ವಕೀಲರಾದ ವಿಷ್ಣುಜೈನ್ ತಿಳಿಸಿದ್ದಾರೆ. ನಿನ್ನೆವರೆಗೂ ನಡೆದ ಸರ್ವೇಯಲ್ಲಿ ಮಸೀದಿಯ ಬಾವಿಯಲ್ಲಿ ಶಿವಲಿಂಗ ಪತ್ತೆಯಾಗಿದೆ. ವಕೀಲರಾದ ಹರೀಶಂಕರ್ ಜೈನ್, ವಿಷ್ಣು ಜೈನ್ ಅವರ ಪ್ರಕಾರ ಭಾನುವಾರ ಮಸೀದಿಯ ಪ್ರದೇಶದ ಸಮೀಕ್ಷೆ ವೇಳೆ ಕೆಲವು ಭಾಗಗಳು ದೇವಸ್ಥಾನವಾಗಿ ಬಳಕೆಯಾಗಿರುವುದು ಕಂಡು ಬಂದಿದೆ. ಮಸೀದಿ ಸಂಕೀರ್ಣದ ಪಶ್ಚಿಮ ಭಾಗದ ಗೋಡೆ ಮೇಲೆ ಹಿಂದು ದೇವರುಗಳ ಕುರುಹುಗಳು ಪತ್ತೆಯಾಗಿವೆ. ಇದು ದೊಡ್ಡ ಪುರಾವೆಯಾಗಿದೆ. ಶನಿವಾರದ ಸರ್ವೇಯಲ್ಲಿ ಮೂರು ಕೊಠಡಿಗಳನ್ನು ತೆರೆಯಲಾಗಿದೆ, ಇಂದು ನಾಲ್ಕನೇ ಕೊಠಡಿಯನ್ನು ತೆರೆಯಲಾಗುತ್ತದೆ ಎಂದು ತಿಳಿಸಿದ್ದಾರೆ. ಮಸೀದಿಯು ವಾರಣಾಸಿ ಕಾಶಿ ವಿಶ್ವನಾಥ ದೇವಸ್ಥಾನದ ಸಮೀಪದಲ್ಲಿದೆ. ಸ್ಥಳೀಯ ನ್ಯಾಯಾಲಯವು ಅದರ ಹೊರಗಿನ ಗೋಡೆಗಳ ಮೇಲೆ ಪ್ರತಿನಿತ್ಯದ ಪ್ರಾರ್ಥನೆಗೆ ಅನುಮತಿ ಕೋರಿ ದೆಹಲಿ ಮೂಲದ ರಾಖಿ ಸಿಂಗ್, ಲಕ್ಷ್ಮಿ ದೇವಿ, ಸೀತಾ ಸಾಹು ಸೇರಿ ಐದು ಮಂದಿ ಮಹಿಳೆಯರು 2021ರ ಏಪ್ರಿಲ್ 18 ನ್ಯಾಯಾಲಯಕ್ಕೆ…

Read More

ಆ್ಯಸಿಡ್ ದಾಳಿ ನಡೆಸಿದ ನಂತರ ಆರೋಪಿ ನಾಗೇಶ್ ತನ್ನ ಅಣ್ಣನಿಗೆ ಮೊಬೈಲ್ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಬಳಿಕ ತನ್ನ ಬೈಕ್‍ನಲ್ಲಿ ನ್ಯಾಯಾಲಯದ ಬಳಿ ಹೋಗಿ ವಕೀಲರೊಬ್ಬರನ್ನು ಸಂಪರ್ಕಿಸಿ ನಡೆದ ಘಟನೆ ಬಗ್ಗೆ ವಿವರಿಸಿದಾಗ ವಕೀಲರು ಪೊಲೀಸರಿಗೆ ಶರಣಾಗುವಂತೆ ಸೂಚಿಸಿದ್ದಾರೆ. ವಕೀಲರ ಮಾತನ್ನು ಅಲ್ಲಗಳೆದ ಆರೋಪಿ ಬೈಕನ್ನು ಅಲ್ಲೇ ಬಿಟ್ಟು ಬಸ್‍ನಲ್ಲಿ ಹೊಸಕೋಟೆಗೆ ಹೋಗಿದ್ದಾನೆ. ಅಲ್ಲಿಯ ಕೆರೆಯೊಂದರ ಬಳಿ ತೆರಳಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದ ಎಂಬುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಬಳಿಕ ಆರೋಪಿ ನಾಗೇಶ್ ಮನಸ್ಸು ಬದಲಿಸಿಕೊಂಡು ತಿರುಪತಿಗೆ ಹೋಗಲು ನಿರ್ಧರಿಸಿ ತನ್ನ ಬಳಿ ಮೊಬೈಲ್ ಇದ್ದರೆ ಸಿಕ್ಕಿಬೀಳುತ್ತೇನೆಂದು ತಿಳಿದು ಆ ಮೊಬೈಲ್‍ಅನ್ನು ಕೆರೆಗೆ ಬಿಸಾಡಿದ್ದಾನೆ. ನಂತರ ತಿರುಪತಿಗೆ ಹೋದರೆ ಸಿಕ್ಕಿಹಾಕಿಕೊಳ್ಳಬಹುದೆಂದು ತಿಳಿದು ತಮಿಳುನಾಡಿಗೆ ಹೋಗಲು ನಿರ್ಧಾರ ಬದಲಿಸಿದ್ದಾನೆ. ಅದರಂತೆ ಹೊಸಕೋಟೆಯಿಂದ ಮಾಲೂರು ಮುಖಾಂತರ ತಮಿಳುನಾಡಿನ ತಿರುವಣ್ಣಾಮಲೈಗೆ ಹೋಗಿದ್ದಾನೆ. ಅಲ್ಲಿನ ರಮಣ ಆಶ್ರಮದ ಬಗ್ಗೆ ತಿಳಿದುಕೊಂಡು ಖಾವಿ ವಸ್ತ್ರ ಖರೀದಿಸಿ ಸನ್ಯಾಸಿಯಂತೆ ವೇಷ ಧರಿಸಿ ಅಲ್ಲಿನವರೊಂದಿಗೆ ಸೇರಿಕೊಂಡು ಧ್ಯಾನ, ಇನ್ನಿತರ…

Read More

ಎಲ್ಲವೂ ನಿರೀಕ್ಷೆಯಂತೆ ನಡೆದರೆ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ/ಪುನಾರಚನೆ ಸೋಮವಾರ ನಡೆಯುವ ಸಾಧ್ಯತೆಯಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಮುಖರ ಜೊತೆ ಮಾತುಕತೆ ನಡೆಸಿದ್ದಾರೆ. ರೇಸ್‍ಕೋರ್ಸ್ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಮುಖ್ಯಮಂತ್ರಿಗಳ ಜೊತೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವ ಗೋವಿಂದ ಕಾರಜೋಳ, ಮಾಜಿ ಸಚಿವ ಲಕ್ಷ್ಮಣ ಸವದಿ ಸೇರಿದಂತೆ ಮತ್ತಿತರರ ಜೊತೆ ಮಾತುಕತೆ ನಡೆಸಲಾಯಿತು. ದೆಹಲಿಯಿಂದ ವರಿಷ್ಠರ ಸಂದೇಶವನ್ನು ಹೊತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಿದ ಸಂದರ್ಭದಲ್ಲೇ ಬೊಮ್ಮಾಯಿ ಅವರು ಪ್ರಮುಖರ ಜೊತೆ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಮೂರ್ನಾಲ್ಕು ದಿನಗಳಲ್ಲಿ ಸಂದೇಶ ನೀಡಲಾಗುವುದು ಎಂದು ವರಿಷ್ಠರು ಹೇಳಿದ್ದರು. ಆದರೆ ಇದುವರೆಗೂ ಯಾವುದೇ ಸಂದೇಶ ದೆಹಲಿ ನಾಯಕರಿಂದ ಬಾರದಿರುವುದು ಸಚಿವ ಆಕಾಂಕ್ಷಿಗಳಲ್ಲಿ ತಳಮಳ ಉಂಟು ಮಾಡಿದೆ. ಬೆಂಗಳೂರಿಗೆ ಆಗಮಿಸಿರುವ ಉಸ್ತುವಾರಿ ಅರುಣ್ ಸಿಂಗ್ ದೆಹಲಿ ನಾಯಕರಿಂದ ಶುಭ ಸುದ್ದಿಯನ್ನೇ ತಂದೇ ತರುತ್ತಾರೆ ಎಂಬ ಅಚಲವಾದ ವಿಶ್ವಾಸ ಬಿಜೆಪಿ ನಾಯಕರದ್ದು.…

Read More

ತಿಪಟೂರು: ತಾಲ್ಲೂಕು ಕೆರೆಗೋಡಿ ರಂಗಾಪುರ ದಲ್ಲಿ ಶಾಲೆಗೆ ಮಕ್ಕಳು ಬರುವ ಮೊದಲ ದಿನ ಸ್ವಚ್ಛ ಪರಿಸರ ಹಾಗೂ ಸುಂದರ ವಾತಾವರಣವಿರಲಿ ಎಂಬ ಉದ್ದೇಶದಿಂದ ಶಿಕ್ಷಣ ಸಚಿವರು ಜನತೆಗೆ ಕರೆ ನೀಡಿರುವುದು ಉತ್ತಮ ಕಾರ್ಯವಾಗಿದೆ ಎಂದು ರಂಗಾಪುರ ಸುಕ್ಷೇತ್ರ ಅಧ್ಯಕ್ಷರು ಶ್ರೀ ಗುರು ಪರದೇಶಿ ಕೇಂದ್ರ ಸ್ವಾಮೀಜಿಗಳು ತಿಳಿಸಿದರು. ರಂಗಾಪುರ ಪ್ರಾಥಮಿಕ ಶಾಲೆಯನ್ನು ಸ್ವಚ್ಛಗೊಳಿಸುವ ಮೂಲಕ ಕೆಲಸಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಬಿ.ಸಿ. ನಾಗೇಶ್ ಮಾತನಾಡಿ, ದೇಶದಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಹಳ ಓಡಿಸುತ್ತಿರುವ ಮೊದಲ ರಾಜ್ಯ ಕರ್ನಾಟಕ ಎಂದರು. ಕಳೆದ ಎರಡು ವರ್ಷಗಳಿಂದ ಕರೋನಾ ಕಾರಣಕ್ಕೆ ಶಾಲೆಗಳು ಸರಿಯಾಗಿ ನಡೆಯದೆ ಮಕ್ಕಳ ಕಲಿಕೆ ಪೂರ್ಣವಾಗಿ ಇರಲಿಲ್ಲ ಆದಕಾರಣ ವಿಶೇಷವಾಗಿ ಕಲಿಕಾ ಚೇತರಿಕೆಯ ಎಂಬ ಕಾರ್ಯಕ್ರಮವನ್ನು ಜಾರಿಗೊಳಿಸಿದ್ದೇವೆ. ಈ ವರ್ಷದ ಸಿಲಬಸ್ ನಲ್ಲೂ ಸ್ವಲ್ಪ ಕಡಿಮೆ ಮಾಡಿ ಅದನ್ನು ಮುಂದಿನ ವರ್ಷ ಪ್ರಾರಂಭದಲ್ಲಿ ಬೋಧಿಸಿ ಬೋಧಿಸಿ ಪೂರ್ಣಗೊಳಿಸಲಾಗುವುದು ಎಂದರು ಈ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಭುಸ್ವಾಮಿ ರಂಗಾಪುರ ಗ್ರಾಮ…

Read More

ಏರುತ್ತಿರುವ ದೇಶೀಯ ಬೆಲೆಗಳನ್ನು ನಿಯಂತ್ರಿಸುವ ಕ್ರಮಗಳ ಭಾಗವಾಗಿ ಭಾರತ ತಕ್ಷಣವೇ ಜಾರಿಗೆ ಬರುವಂತೆ ಗೋಧಿ ರಫ್ತುಗಳನ್ನು ನಿಷೇಧಿಸಿದೆ. ಗೋಧಿ ರಫ್ತು ನೀತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ಡಿಜಿಎಫ್‍ಟಿ ತಿಳಿಸಿದೆ. ಭಾರತ ಸರ್ಕಾರವು ಇತರ ದೇಶಗಳಿಗೆ ಅವರ ಆಹಾರ ಭದ್ರತೆ ಅಗತ್ಯತೆಗಳನ್ನು ಪೂರೈಸಲು ಮತ್ತು ಆ ಸರ್ಕಾರಗಳ ಕೋರಿಕೆಯ ಮೇರೆಗೆ ನೀಡುವ ಅನುಮತಿಯನ್ನು ಆಧರಿಸಿ ಗೋಧಿ ರಫ್ತಿಗೆ ಅನುಮತಿಸಲಾಗುವುದು ಎಂದು ಸ್ಪಷ್ಟ ಪಡಿಸಲಾಗಿದೆ. ಪ್ರತ್ಯೇಕ ಅಧಿಸೂಚನೆಯಲ್ಲಿ ಈರುಳ್ಳಿ ಬೀಜಗಳ ರಫ್ತು ಷರತ್ತುಗಳನ್ನು ಸಡಿಲಿಸುವುದಾಗಿ ಡಿಜಿಎಫ್‍ಟಿ ತಿಳಿಸಿತ್ತು. ಈ ಹಿಂದೆ ಈರುಳ್ಳಿ ರಫ್ತು ಮಾಡುವುದನ್ನು ನಿಷೇಧಿಸಲಾಗಿತ್ತು. ಈ ವಾರ ಬಿಡುಗಡೆಯಾದ ಅಧಿಕೃತ ಮಾಹಿತಿಯ ಪ್ರಕಾರ ಇಂಧನ ಮತ್ತು ಆಹಾರ ಪದಾರ್ಥಗಳ ಬೆಲೆ ಹೆಚ್ಚಳದಿಂದ ಹಣದುಬ್ಬರದಲ್ಲಿ ಏರಿಕೆ ಕಂಡುಬಂದಿದೆ. ಚಿಲ್ಲರೆ ಹಣದುಬ್ಬರವು ಏಪ್ರಿಲ್‍ನಲ್ಲಿ ಎಂಟು ವರ್ಷಗಳಲ್ಲೇ ಗರಿಷ್ಠ ಮಟ್ಟಕ್ಕೆ ಏರಿದೆ ಎಂದು ತಿಳಿದು ಬಂದಿದೆ. ಆಹಾರಧಾನ್ಯದ ಪ್ರಮುಖ ರಫ್ತುದಾರರಾಗಿರುವ ರಷ್ಯಾ ಮತ್ತು ಉಕ್ರೇನ್ ಯುದ್ಧದಿಂದ ಜಾಗತಿಕ ಗೋ ಪೂರೈಕೆಯಲ್ಲಿ ಏರುಪೇರಾಗಿದೆ. 2021-22ರಲ್ಲಿ ಭಾರತದ…

Read More

ಆರೋಪಿ ನಾಗೇಶನನ್ನು ಪೊಲೀಸರು ಬಂಧಿಸುವುದಕ್ಕಿಂತ ಶೂಟೌಟ್ ಮಾಡಬೇಕಿತ್ತು ಎಂದು ಸಂತ್ರಸ್ಥೆ ಯುವತಿಯ ತಂದೆ ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿ ನಾಗೇಶನ ಒಂದು ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆಂದು ಗೊತ್ತಾಯಿತು. ಎರಡೂ ಕಾಲಿಗೂ ಹೊಡೆಯಬೇಕಿತ್ತು. ಆತನನ್ನು ಜೈಲಿಗೆ ಕಳುಹಿಸಿದರೆ ಪ್ರಯೋಜನವಾಗುವುದಿಲ್ಲ. ರಸ್ತೆಗೆ ಆತನನ್ನು ಬಿಟ್ಟರೆ ಜನ ಏನು ಮಾಡುತ್ತಾರೆ ಎಂಬುದು ಗೊತ್ತಾಗುತ್ತದೆ ಎಂದು ಗುಡುಗಿದರು. ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ. ನಮಗೂ ಸಹ ಧೈರ್ಯ ತುಂಬಿದ್ದಾರೆ. ಮಗಳ ಚಿಕಿತ್ಸೆಗೆ ಸರ್ಕಾರ ಸ್ಪಂದಿಸಿದೆ. ಅದಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದು ರಾಜಣ್ಣ ಹೇಳಿದರು. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಪಿಎಸ್‍ಐ ಪರೀಕ್ಷಾ ಅಕ್ರಮ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಭ್ರಷ್ಟಾಚಾರದ ವಿರುದ್ಧ ನಾವು ಸಂಘಟನೆಯ ಸಹಯೋಗದಲ್ಲಿ ಸಿಐಡಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ ಎಂದು ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ.ರಂಗನಾಥ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪರೀಕ್ಷಾ ಅಕ್ರಮದಲ್ಲಿ ದೊಡ್ಡವರ ಹೆಸರುಗಳು ಕೇಳಿಬರುತ್ತಿವೆ. ನೇಮಕಾತಿ ವಿಭಾಗದ ಅಧಿಕಾರಿ ಶಾಂತಕುಮಾರ್ ವಿಚಾರಣೆ ಸಂದರ್ಭದಲ್ಲಿ ಅನೇಕ ಪ್ರಭಾವಿಗಳನ್ನು ಬಂಧಿಸದಂತೆ ಒತ್ತಡ ಹೇರಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಐಪಿಎಸ್ ಅಧಿಕಾರಿಗಳು, ರಾಜಕೀಯ ನಾಯಕರನ್ನು ಇನ್ನು ವಿಚಾರಣೆ ನಡೆಸಲಾಗುತ್ತಿಲ್ಲ. ಸಿಐಡಿ ತನಿಖೆ ಮೇಲೆ ಹೆಚ್ಚಿನ ಪ್ರಭಾವ ಮತ್ತು ಒತ್ತಡ ಇರುವುದರಿಂದ ಹಿರಿಯ ಅಧಿಕಾರಿಗಳನ್ನು ವಿಚಾರಣೆ ಮಾಡಲಾಗುತ್ತಿಲ್ಲ. ಹೀಗಾಗಿ ನಿಷ್ಪಕ್ಷಪಾತ ತನಿಖೆ ನಡೆಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಭ್ರಷ್ಟಾಚಾರದ ವಿರುದ್ಧ ನಾವು ಸಂಘಟನೆ ಸಹಯೋಗದಲ್ಲಿ ಮೇ 17ರಂದು ಸಿಐಡಿ ಕಚೇರಿ ಎದುರು ಪಾರದರ್ಶಕ ತನಿಖೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ…

Read More

ಮಧುಗಿರಿ – ಹೆಚ್.ಡಿ.ದೇವೇಗೌಡರು ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಿದ ಫಲವಾಗಿ ಈ ಸಮುದಾಯ ಆರ್ಥಿಕವಾಗಿ ಸಾಮಾಜಿಕವಾಗಿ ಮುನ್ನಡೆ ಸಾಧಿಸಿದೆ ಎಂದು ಶಾಸಕ ಎಂ.ವಿ.ವೀರಭಧ್ರಯ್ಯ ತಿಳಿಸಿದರು. ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ದಿ ನಿಗಮದ ವತಿಯಿಂದ 2018-19 ನೇ ಸಾಲಿನಲ್ಲಿ ಕೊರೆದ ಕೊಳವೆ ಬಾವಿಗಳಿಗೆ ಪಂಪ್ ಸೆಟ್ ಹಾಗೂ ಇತರ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿದ ಅವರು, ದುರ್ಬಲ ಹಿಂದುಳಿದ ವರ್ಗಗಳಿಗೆ ಬಲ ತುಂಬುವ ಕೆಲಸವನ್ನು ದೇವೇಗೌಡರು ಮಾಡಿದ್ದು, ಹೆಚ್.ಡಿ.ಕುಮಾರಸ್ವಾಮಿ ಸಿ.ಎಂ ಆಗಿದ್ದಾಗ ಎಸ್.ಸಿ.ಪಿ-ಟಿ.ಎಸ್.ಪಿ ಯೋಜನೆಯಡಿ ಕ್ಷೇತ್ರಕ್ಕೆ 400 ಕೋಟಿ ರೂ ಅನುಧಾನ ನೀಡಿದ್ದರು ಎಂದರು. ಮಲ್ಲನಾಯಕನಹಳ್ಳಿಯಲ್ಲಿ ವಾಲ್ಮೀಕಿ ಪ್ರತಿಮೆ ಸ್ಥಾಪಿಸಲು ವಯಕ್ತಿಕವಾಗಿ 50 ಸಾವಿರ ರೂ ನೀಡಿದ್ದೇನೆ. ಮಿಡಿಗೇಶಿ ಗ್ರಾಮದಲ್ಲಿ ಅಪೂರ್ಣಗೊಂಡಿರುವ ವಾಲ್ಮೀಕಿ ಭವನ ಪೂರ್ಣಗೊಳಿಸಲು 50 ಲಕ್ಷ ರೂ ಹೆಚ್ಚಿನ ಅನುಧಾನ ತಂದಿದ್ದೇನೆ. ಪಟ್ಟಣದಲ್ಲಿ ನಿರ್ಮಿಸುತ್ತಿರುವ ವಿಧ್ಯಾರ್ಥಿ ನಿಲಯಗಳು ಪೂರ್ಣಗೊಳ್ಳುವ ಹಂತದಲ್ಲಿದ್ದು, ವಿಧ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ಕಲ್ಪಿಸಲಿದೆ ಎಂದರು. ಪುರಸಭಾ ಸದಸ್ಯ ಎಂ.ಆರ್.ಜಗನ್ನಾಥ್…

Read More

ಕೆಲವೇ ದಿನಗಳಲ್ಲಿ ಸಪ್ತಪತಿ ತುಳಿದು ಹೊಸ ಬದುಕಿನ ಕನಸು ಕಾಣುತ್ತಿದ್ದ ಯುವತಿಗೆ ಪ್ರೀಯತಮನ ಸಾವಿನ ಸುದ್ದಿ ಅರಗಿಸಿಕೊಳ್ಳಲಾಗದೆ ಪ್ರಿಯತಮೆಯು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ತುಮಕೂರಿನ ಅರೆಹಳ್ಳಿಯಲ್ಲಿ ಎಂಬಲ್ಲಿ ನಡೆದಿದೆ. ಧನುಷ್ (23), ಸುಷ್ಮಾ (22) ಎಂಬವರು ಮೃತ ದುರ್ದೈವಿಗಳು. ಇವರು ತುಮಕೂರು ತಾಲೂಕಿನ ಮಸ್ಕಲ್ ಗ್ರಾಮದವರಾಗಿದ್ದು, ಎರಡು ವರ್ಷಗಳಿಂದ ಇಬ್ಬರು ಪ್ರೀತಿಸುತ್ತಿದ್ದು ಮದುವೆಗೆ ಮನೆಯವರನ್ನೂ ಒಪ್ಪಿಸಿದ್ದರು. ಮೇ 11ರಂದು ಊರಿನ ಜಾತ್ರೆಗೆ ಬರುವ ವೇಳೆ ನೆಲಮಂಗಲ ಕುಲಾನಹಳ್ಳಿ ಬಳಿ ಅಪಘಾತ ನಡೆದಿದ್ದು ಧನುಷ್ ಸ್ಥಳದಲ್ಲೇ ಮೃತಪಟ್ಟಿದ್ದ. ಧನುಷ್ ಸಾವಿನ ಸುದ್ದಿ ಕೇಳಿ ಸುಷ್ಮಾ ಆಘಾತಗೊಂಡಿದ್ದಳು. ಧನುಷ್ ಅಗಲಿಕೆಯ ನೋವಿನಿಂದ ಹೊರಬರಲು ಸಾಧ್ಯವಾಗದೆ ಆಕೆಯು ಆತ್ಮಹತ್ಯೆ ಹಾದಿ ತುಳಿದಿದ್ದಾಳೆ. ವಿಷ ಸೇವಿಸಿದ್ದ ಸುಷ್ಮಾಳನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಆಕೆಯನ್ನು ಬದುಕಿಸಲು ಸಾಧ್ಯವಾಗಲಿಲ್ಲ.ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More