Subscribe to Updates
Get the latest creative news from FooBar about art, design and business.
- ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
- ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?
- ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ
- ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ: ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ
- ತುಮಕೂರು: ಬೇಡಿಕೆ 1,400 ಸಿಲಿಂಡರ್ ಗಳು, ಪೂರೈಕೆಯಾಗುತ್ತಿರುವುದು ಕೇವಲ 350!
- ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
- ಬೀದರ್ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್ ಗಳು ಬಂದ್!
- ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ
Author: admin
ಬೆಂಗಳೂರು: ಜೂನ್ 21ರಂದು 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಯೋಗ ದಿನಾಚರಣೆಯನ್ನು ಶಾಲೆಗಳಲ್ಲೂ ಆಚರಿಸಲು ಸೂಚಿಸಿದ್ದು, ಹೀಗಾಗಿ ಮಂಗಳವಾರ ಅರ್ಧ ದಿನ ರಾಜ್ಯಾದ್ಯಂತ ಶಾಲೆಗಳಿಗೆ ರಜೆಯನ್ನು ಘೋಷಿಸುವಂತೆ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದೆ. ದಿನಾಂಕ 21.06.22ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲೂ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಎಸ್ಡಿಎಂಸಿ ಸದಸ್ಯರು, ಶಿಕ್ಷಕರುಗಳು, ಸ್ಥಳೀಯ ಯೋಗ ಸಂಸ್ಥೆಗಳ ಸಹಕಾರದೊಂದಿಗೆ ಯೋಗ ದಿನಾಚರಣೆ ನಡೆಸಲು ಸೂಚಿಸಲಾಗಿದೆ. ಜೂನ್ 21ಕ್ಕೆ ಅರ್ಧದಿನ ಶಾಲೆಗಳಿಗೆ ರಜೆಯನ್ನು ಘೋಷಿಸಿರುವುದರಿಂದ ಆ ದಿನದ ಬದಲು ಜೂನ್ 25ರಂದು ಶನಿವಾರ ಪೂರ್ಣಪ್ರಮಾಣದ ಶಾಲೆಯನ್ನು ನಡೆಸಲು ಶಿಕ್ಷಣ ಇಲಾಖೆ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ: ತಾಯಿಯ ಮಾತು ಕೇಳದೇ ನೀರಿಗೆ ಈಜಾಡಲು ಇಳಿದ ಬಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ವಡ್ಡಗೆರೆ ಗ್ರಾಮದ ಶ್ರೀ ವೀರನಾಗಮ್ಮ ಕಲ್ಯಾಣಿಯಲ್ಲಿ ನಡೆದಿದೆ. ಚಿಕ್ಕನಾಯಕನಹಳ್ಳಿ ತಾಲ್ಲೂಕು ಹುಳಿಯಾರು ಹೋಬಳಿಯ ಲಕ್ಕನಹಳ್ಳಿ ಗ್ರಾಮದ ವೀರನಾಗಣ್ಣ ಎಂಬವರ 14 ವರ್ಷ ವಯಸ್ಸಿನ ಪುತ್ರ ತರುಣ್ ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ವಡ್ಡಗೆರೆಯ ಶ್ರೀವೀರನಾಗಮ್ಮ ದೇವಿ ದರ್ಶನಕ್ಕೆ ತನ್ನ ತಾಯಿ ಜೊತೆಗೆ ಆಗಮಿಸಿದ್ದ ಬಾಲಕ, ತಾಯಿ ನೀರಿಗೆ ಇಳಿಯ ಬೇಡ ಎಂದರೂ ಕೇಳದೇ ನೀರಿಗೆ ಧುಮುಕಿದ್ದು, ಇದಾದ ಬಳಿಕ ನೀರಿನಿಂದ ಮೇಲೆ ಬರಲಾಗದೇ, ತಾಯಿಯ ಕಣ್ಣೆದುರೇ ಮುಳುಗಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ದಳ, ತುರ್ತುವಾಹನ ಮತ್ತು ತಹಶೀಲ್ದಾರ್ ನಾಹೀದಾ ಜಂ ಜಂ ಬೇಟಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕೊರಟಗೆರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮೇಕೆ ಹಾಗೂ ಕುರಿ ಕಾಯುತ್ತಿದ್ದ ಹೊಸಬೀರ್ವಾಳು ಗ್ರಾಮದ ಸುಮಾರು 45 ವರ್ಷದ ಸಿದ್ದರಾಜು ಎಂಬುವವರು ನುಗು ಜಲಾಶಯದ ಹಿನ್ನೀರಿನಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಸುಮಾರು 20 ರಿಂದ 25 ಮೇಕೆ ಹಾಗೂ ಕುರಿ ಸಾಕಾಣಿಕೆ ಮಾಡಿಕೊಂಡಿದ್ದ ಇವರು ಪ್ರತಿ ನಿತ್ಯ ಜಾನುವಾರುಗಳಿಗೆ ಮೇವು ಒದಗಿಸಲು ಪಾಳು ಬಿದ್ದಿರುವ ಜಮೀನು ಹಾಗೂ ಸರ್ಕಾರಿ ಖರಾಬು ಸ್ಥಳಗಳನ್ನು ಅವಲಂಬಿಸಿದ್ದರು. ಪ್ರತಿನಿತ್ಯ ಸಿದ್ದರಾಜು ರವರು ತಮ್ಮ ಪತ್ನಿಯ ಜೊತೆ ಕಾಯಕದಲ್ಲಿ ತೊಡಗಿಕೊಂಡಿದ್ದರು ಆದರೆ ಆ ದಿನ ಅವರ ಪತ್ನಿ ಬೇರೆ ಕೆಲಸದ ನಿಮಿತ್ತ ಹುಲ್ಲಹಳ್ಳಿ ಗ್ರಾಮಕ್ಕೆ ಹೋಗಿದ್ದರು. ಹಾಗಾಗಿ ಅಂದು ಅವರೊಡನೆ ಅವರ ಮೊಮ್ಮಗನಾದ ಯಶವಂತ ಜೊತೆಯಲ್ಲಿದ್ದರು. ಸ್ನಾನ ಮಾಡಿ ಬರುತ್ತೇನೆ ದಡದಲ್ಲಿಯೇ ಕುಳಿತಿರು ಎಂದು ಮೊಮ್ಮಗನಿಗೆ ಹೇಳಿ ನೀರಿಗೆ ಇಳಿದಿದ್ದಾರೆ. ಅಷ್ಟರಲ್ಲೇ ಅವರು ಮದ್ಯ ಸೇವಿಸಿದ ಕಾರಣ ನೀರಿನಲ್ಲಿ ಜಾರಿ ಬಿದ್ದಿದ್ದಾರೆ. ಸುಮಾರು 10 ರಿಂದ 15 ನಿಮಿಷಗಳ ನಂತರವೂ ಇವರು ಮೇಲೆ ಬರದಿದ್ದನ್ನು ಗಮನಿಸಿದ ಅವರ ಮೊಮ್ಮಗ ಗ್ರಾಮದ ಬಸ್…
ಲಖನೌ: ಶ್ರೀರಾಮ ಜನ್ಮಭೂಮಿ ಆವರಣದಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮತ್ತು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಡೆದ ದೇಣಿಗೆ ಅಭಿಯಾನದಲ್ಲಿ ದೇವಾಲಯದ ಟ್ರಸ್ಟ್ ನ ಬೊಕ್ಕಸಕ್ಕೆ ಬರೋಬ್ಬರಿ 5,457 ಕೋಟಿ ರೂ. ಬಂದಿತ್ತು. ಆದರೆ ಅಖಿಲ ಭಾರತ ಮಟ್ಟದಲ್ಲಿ ದೇಣಿಗೆ ಅಭಿಯಾನದ ಮೇಲ್ವಿಚಾರಣೆ ನಡೆಸುತ್ತಿರುವ ತಂಡದ ತಾತ್ಕಾಲಿಕ ವರದಿಯು ಪ್ರಕಾರ 22 ಕೋಟಿ ಮೌಲ್ಯದ ಚೆಕ್ಗಳು ಬೌನ್ಸ್ ಆಗಿವೆ. ಮತ್ತೊಂದೆಡೆ, ಟ್ರಸ್ಟ್ ಖಾತೆಗಳ ಜಿಲ್ಲಾವಾರು ಲೆಕ್ಕಪರಿಶೋಧನೆ ನಡೆಯುತ್ತಿರುವುದರಿಂದ ಇದುವರೆಗೆ ಸಂಗ್ರಹಿಸಲಾದ ಒಟ್ಟು ಮೊತ್ತದ ಅಂಕಿಅಂಶವು ತಾತ್ಕಾಲಿಕವಾಗಿದೆ. ಟ್ರಸ್ಟ್ ಮೂಲಗಳ ಪ್ರಕಾರ, ಬೌನ್ಸ್ ಆಗಿರುವ ಚೆಕ್ಗಳನ್ನು ಪ್ರತ್ಯೇಕಿಸಿ ಹೊಸ ಆಡಿಟ್ ವರದಿಯನ್ನು ಸಿದ್ಧಪಡಿಸಲಾಗುತ್ತಿದೆ. ಇನ್ನು ಚೆಕ್ಗಳು ಬೌನ್ಸ್ ಆದ ಕಾರಣ ತಿಳಿದುಕೊಳ್ಳಲು ಪರಿಶೀಲಿಸಲಾಗುತ್ತಿದೆ. ‘ತಾಂತ್ರಿಕ ಕಾರಣಗಳಿಂದಾಗಿ ಬೌನ್ಸ್ ಆಗಿರುವ ಚೆಕ್ಗಳನ್ನು ಸಂಬಂಧಪಟ್ಟ ಬ್ಯಾಂಕ್ನ ಒಪ್ಪಿಗೆ ಪಡೆದ ನಂತರ ಮತ್ತೆ ಪ್ರತಿನಿಧಿಸಲಾಗುತ್ತದೆ’ ಎಂದು ಟ್ರಸ್ಟ್ನ ಸದಸ್ಯರೊಬ್ಬರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಬೆಂಗಳೂರು: ಮೋದಿ ಆಶೀರ್ವಾದವಿದ್ದರೆ ನವ ಕರ್ನಾಟಕದ ಕನಸು ನನಸಾಗುವುದರಲ್ಲಿ ಅನುಮಾನವೇ ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕೊಮ್ಮಘಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿಮಾತನಾಡಿದ ಅವರು ನಾಡಗೀತೆ ಉಲ್ಲೇಖಿಸಿ ಮಾತನಾಡಿ, ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೇ ಎಂಬ ವಾಕ್ಯದಲ್ಲಿ ನಾವು ನಂಬಿಕೆ ಹೊಂದಿದ್ದೇವೆ ಎಂದರು. ಪ್ರಧಾನಿಯವರ ನವಭಾರತದ ಕಲ್ಪನೆಗೆ ನವ ಕರ್ನಾಟಕ ನಿರ್ಮಾಣದ ಮೂಲಕ ನಾವು ಕೈ ಜೋಡಿಸುತ್ತಿದ್ದೇವೆ. ಮೋದಿಯವರ ಆಶೀರ್ವಾದ ಇದ್ದರೆ ನವ ಕರ್ನಾಟಕದ ಕನಸು ಈಡೇರುತ್ತದೆ ಎಂದು ಅಭಿಪ್ರಾಯಪಟ್ಟರು. ಪ್ರಧಾನಿಯವರ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಿದೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮುಂಬೈನ ನೇವಲ್ ಡಾಕ್ಯಾರ್ಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದಕ್ಕಾಗಿ ಜೂನ್ 18, 2022 ರಂದು ಜಾಬ್ ನ್ಯೂಸ್ ನಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು 8ನೇ ಜುಲೈ 2022 ರೊಳಗೆ ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕು. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 338 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇದಕ್ಕಾಗಿ, ಐಟಿಐ ಅರ್ಹತೆ / ಫ್ರೆಶರ್ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಎಲೆಕ್ಟ್ರಿಷಿಯನ್, ಎಲೆಕ್ಟ್ರೋಪ್ಲೇಟರ್, ಮೆರೈನ್ ಎಂಜಿನ್ ಫಿಟ್ಟರ್, ಫೌಂಡ್ರಿ ಮ್ಯಾನ್, ಪ್ಯಾಟರ್ನ್ ಮೇಕರ್, ಮೆಕ್ಯಾನಿಕ್ ಡೀಸೆಲ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕ ಆನ್ ಲೈನ್ ಅರ್ಜಿಯ ಪ್ರಾರಂಭ ದಿನಾಂಕ – 21 ಜೂನ್ 2022 ಬೆಳಿಗ್ಗೆ 10 ಗಂಟೆಗೆ ಆನ್ಲೈನ್ ಅಪ್ಲಿಕೇಶನ್ಗೆ ಕೊನೆಯ ದಿನಾಂಕ – 8 ಜುಲೈ 2022 ಶೈಕ್ಷಣಿಕ ಅರ್ಹತೆ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 50% ಅಂಕಗಳೊಂದಿಗೆ 10 ನೇ ಮತ್ತು ಐಟಿಐ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ನಂದಿಬೆಟ್ಟ ಒಂದು ಸುಂದರ ಪ್ರವಾಸಿ ತಾಣ. ಇಲ್ಲಿ ವೀಕೆಂಡ್ ಬಂದ್ರೆ ಸಾಕು ಪ್ರವಾಸಿಗರ ದಂಡೇ ಇರುತ್ತೆ. ಫ್ಯಾಮಿಲಿ, ಕಾಲೇಜು ಸ್ಟೂಡೆಂಟ್ಸ್, ವಿದೇಶೀಗರು ಇಲ್ಲಿಗೆ ಬರುತ್ತಾರೆ. ಇದೇ ರೀತಿ ಬೆಂಗಳೂರಿನಿಂದ ಯುವಕರಿಬ್ಬರು ನಂದಿಬೆಟ್ಟದಲ್ಲಿನ ಸನ್ ರೈಸ್ ನೋಡುವ ಆಸೆಯಿಂದ ಬಂದ್ರು. ಆದರೆ ಜಾಲಿ ರೈಡ್ ನೆಪದಲ್ಲಿ ಸನ್ ರೈಸ್ ನೋಡುವ ಆಸೆಯಿಂದ ಬಂದ ಯುವಕನೊಬ್ಬ ತನ್ನ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಮತ್ತೋರ್ವ ಯುವಕನಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿ ಆಗಿದೆ. ನಂದಿಬೆಟ್ಟದ ತುದಿಯಿಂದ ಸನ್ ರೈಸ್ ನೋಡುವ ಆಸೆಯಿಂದ ಮಧ್ಯರಾತ್ರಿಯಿಂದಲೇ ನಂದಿಬೆಟ್ಪಕ್ಕೆ ಯುವಕರು ಲಗ್ಗೆ ಇಡ್ತಾರೆ. ಇದೇ ಆಸೆಯಲ್ಲಿ ಬಂದ ಬೆಂಗಳೂರಿನ ಶ್ರೀನಗರದ ಯುವಕ ಬೈಕ್ ಅಪಘಾತದಲ್ಲಿ ತನ್ನ ಪ್ರಾಣವನ್ನ ಕಳೆದುಕೊಂಡಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಣಿವೇಪುರದಲ್ಲಿ ನಿನ್ನೆ ಮುಂಜಾನೆ 5:30ರ ಸಮಯದಲ್ಲಿ ನಡೆದ ಅಪಘಾತದಲ್ಲಿ 26 ವರ್ಷದ ರಾಕೇಶ್ ಸ್ಥಳದಲ್ಲೇ ಪ್ರಾಣ ಕಳೆದು ಕೊಂಡ್ರೆ, ಸುನಿಲ್ ಎಂಬ ಯುವಕ ಗಂಭೀರವಾಗಿ ಗಾಯಾಗೊಂಡು…
ಇಂದು ರಾಜ್ಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ನಗರದ ಮೂರು ಕಡೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಇದೀಗ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಸಂದರ್ಭದಲ್ಲಿ ಪ್ರತಿಭಟನೆ ಭೀತಿ ಎದುರಾಗಿದೆ. ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಓಡಾಡುವ ರಸ್ತೆಯಲ್ಲಿ ಖಾಕಿ ಕಣ್ಗಾವಲು ಹಾಕಲಾಗಿದೆ. ಇಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಬೆಳಿಗ್ಗೆ 11:15 ಕ್ಕೆ ಯಲಹಂಕ ವಾಯು ನೆಲೆಗೆ ಮೋದಿ ಬಂದಿಳಿಯಲಿದ್ದಾರೆ. ಮಲ್ಲೇಶ್ವರಂ ಬಳಿಯಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆ ಗೆ ಆಗಮಿಸಲಿದ್ದಾರೆ. ಇದಾದ ನಂತರ ಜ್ಞಾನ ಭಾರತಿ ಡಾ. ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ ಗೆ ಭೇಟಿ ನೀಡಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳ ನಂತರ ಕೆಂಗೇರಿ ಸಮೀಪದ ಕೊಮ್ಮಘಟ್ಟದಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಾದ ನಂತರ ಪ್ರಧಾನ ಮಂತ್ರಿ ಮೈಸೂರಿಗೆ ತೆರಳಲಿದ್ದಾರೆ. ಪ್ರತಿಭಟನೆ ಭೀತಿ : ಆದರೆ ಪ್ರಧಾನಿ ನರೇಂದ್ರ ಮೋದಿ ಭೀತಿ ವೇಳೆ…
ತುಮಕೂರು: ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಸಮೀಪ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ಸಿನಲ್ಲಿದ್ದ10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ ತುಮಕೂರು-ಶಿವಮೊಗ್ಗ ನ್ಯಾಷನಲ್ ಹೆದ್ದಾರಿ 206ರಲ್ಲಿ ಘಟನೆ ಸಂಭವಿಸಿದೆ. ನಿಟ್ಟೂರು ಕಡೆಯಿಂದ ತುಮಕೂರು ಕಡೆಗೆ ಕಾರು ಬರುತ್ತಿದ್ದರೆ, ಬೆಂಗಳೂರು ಕಡೆಯಿಂದ ಶಿವಮೊಗ್ಗ ಕಡೆಗೆ ಬಸ್ ಹೊರಟಿತ್ತು. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು,ಕಾರಿನಲ್ಲಿದ್ದ ಗಿರೀಶ್ (37), ಮಾನ್ಯ (17), ಮೃತ ದುರ್ದೈವಿಗಳು. ಬಸ್ಸಿನಲ್ಲಿದ್ದ ಗಾಯಾಳುಗಳನ್ನು ತಕ್ಷಣ ಗುಬ್ಬಿ ಸರ್ಕಾರಿ ಆಸ್ಪತ್ರೆ ಹಾಗೂ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತೀವ್ರ ಹಸಿವಿನ ಸಂದರ್ಭದಲ್ಲಿ ಒಂದು ಖರ್ಜೂರ ಸೇವಿಸಿದರೆ, ಸಾಕು. ಮನುಷ್ಯನ ದೇಹದ ಅರ್ಧ ಆಯಾಸವನ್ನು ಹೋಗಲಾಡಿಸುವಷ್ಟು ಶಕ್ತಿ ಅದರಲ್ಲಿದೆ. ಸುಮಾರು 500ರಕ್ಕೂ ಹೆಚ್ಚು ವಿಧದ ವಿವಿಧ ಖರ್ಜೂರಗಳಿವೆ. ಈ ಖರ್ಜೂರಗಳಲ್ಲಿ ಮನುಷ್ಯನ ದೇಹಕ್ಕೆ ಬೇಕಾಗುವ ಕ್ಯಾಲ್ಸಿಯಂ, ಸೋಡಿಯಂ, ಮೆಗ್ನೀಷಿಯಮ್ ಮತ್ತು ಕಬ್ಬಿಣದ ಅಂಶ ಸೇರಿದಂತೆ ವಿವಿಧ ಅಂಶಗಳಿವೆ. ಮಾಗಿದ ಖರ್ಜೂರವನ್ನು ನೀರಿನಲ್ಲಿ ಕುದಿಸಿದ ಬಳಿಕ ಅದನ್ನು ಒಣಗಿಸಿ, ದೀರ್ಘಕಾಲದ ವರೆಗೂ ಸಂರಕ್ಷಿಸಲಾಗುತ್ತದೆ. ಈ ಖರ್ಜೂರ್ ಹಣ್ಣುಗಳಿಗೆ ಮಾರುಕಟ್ಟೆಯಲ್ಲಿ ಕೂಡ ಉತ್ತಮವಾದ ಬೇಡಿಕೆ ಇದೆ. ಮುಖ್ಯವಾಗಿ ಖರ್ಜೂರ ನಮ್ಮ ದೇಹದಲ್ಲಿ ಚೈತನ್ಯವನ್ನು ತುಂಬುತ್ತದೆ. ನಮಗೆ ತೀವ್ರವಾದ ಹಸಿವಾಗುವ ಸಂದರ್ಭದಲ್ಲಿ ಒಂದೆರಡು ಖರ್ಜೂರದ ಹಣ್ಣು ತಿಂದು ನೀರು ಕುಡಿದರೆ ಸಾಕು, ಕೆಲವೇ ಕ್ಷಣಗಳಲ್ಲಿ ನಮ್ಮ ದೇಹ ಹಸಿವು ಮತ್ತು ಆಯಾಸದಿಂದ ಮುಕ್ತವಾಗುತ್ತದೆ. ಒಂದು ಲೋಟ ಹಾಲು ಮತ್ತು ಒಂದು ಖರ್ಜೂರದ ಹಣ್ಣು ಒಂದು ಹೊತ್ತಿನ ಹಸಿವನ್ನು ನೀಗಿಸುವ ಶಕ್ತಿಯನ್ನು ಹೊಂದಿದೆ. ಇದರಲ್ಲಿ ಕಾರ್ಬೋಹೈಡ್ರೇಡ್ ಗಳು, ಪ್ರೋಟೀನ್, ಕ್ಯಾಲ್ಸಿಯಂ, ಅಮೈನೋ ಆಮ್ಲಗಳು, ಸಲ್ಫರ್, ಕಬ್ಬಿಣ, ಪೊಟ್ಯಾಷಿಯಂ,…