Subscribe to Updates
Get the latest creative news from FooBar about art, design and business.
- ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
- ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?
- ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ
- ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ: ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ
- ತುಮಕೂರು: ಬೇಡಿಕೆ 1,400 ಸಿಲಿಂಡರ್ ಗಳು, ಪೂರೈಕೆಯಾಗುತ್ತಿರುವುದು ಕೇವಲ 350!
- ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
- ಬೀದರ್ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್ ಗಳು ಬಂದ್!
- ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ
Author: admin
ಕೊರಟಗೆರೆ : ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದ ಸಹಯೋಗದೊಂದಿಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ತಾಲ್ಲೂಕಿನ ವಡ್ಡಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುರುಗಾನಹಳ್ಳಿ ಗ್ರಾಮದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟನೆ ಮಾಡಿದ ತಾಲ್ಲೂಕು ದಂಡಾಧಿಕಾರಿ ನಾಹಿದಾ ಜಮ್ ಜಮ್ ಗ್ರಾಮದಲ್ಲಿ ಇಂದು ಜಿಲ್ಲಾಧಿಕಾರಿಗಳ ನೆಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಕೋವಿಡ್-19 ನಿಯಮಗಳನ್ನು ಪಾಲಿಸಲಾಗುತ್ತಿದೆ ಎಂದರು. ಪಿಂಚಣಿಗಳ ಅದಾಲತ್ ಮೂಲಕ ವಿಶೇಷ ಚೇತನರಿಗೆ ವೃದ್ಧರಿಗೆ, ರೈತರ ಕುಟುಂಬಗಳಿಗೆ ಕೃಷಿ ಇಲಾಖೆ ಎಲ್ಲಾ ಸೇವೆಗಳನ್ನು ನೀಡುವಲ್ಲಿ ಜಿಲ್ಲೆಯಲ್ಲಿ ಕೊರಟಗೆರೆ ಪ್ರಮುಖ ಪಾತ್ರ ವಹಿಸಿದೆ ಎಂದರು. ಕೃಷಿ ಇಲಾಖೆಯ ಮೂಲಕ ಅನೇಕ ಪರಿಹಾರಗಳನ್ನು ನೀಡಲಾಗುತ್ತಿವೆ. ರೈತರ ಬಣವೆಗಳು ಬೆಂಕಿಹಾನಿಗೊಳಗಾದಾಗ ರೈತನಿಗೆ ಹಾವು ಕಡಿತದಿಂದ , ಆಕಸ್ಮಿಕವಾಗಿ ಸಿಡಿಲು ಬಡಿತದಿಂದಾಗಿ ಜೀವ ಹಾನಿಗೊಳಗಾದಾಗ ತುರ್ತಾಗಿ ಪರಿಹರಿಸುವ ಕಾರ್ಯಗಳನ್ನು ಹಮ್ಮಿಕೊಳ್ಳುವ ಕಮಿಟಿ ರಚಿಸಲಾಗಿದೆ ಎಂದು ತಿಳಿಸಿದರು. ರೈತರಿಗೆ ಸಾವಯವ ಗೊಬ್ಬರಗಳ ತಯಾರಿಕೆಗೆ ಉತ್ತೇಜನ ನೀಡಲಾಗುತ್ತಿದೆ. ಜೊತೆಗೆ ಇಲಾಖೆಗಳಲ್ಲಿ ಜಿಂಕ್ ಗೊಬ್ಬರ ರಸಗೊಬ್ಬರಗಳನ್ನು ಕೃಷಿ ಅಧಿಕಾರಿಗಳ ಮೂಲಕ…
ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕು ಮಾಯಸಂದ್ರ ಗ್ರಾಮದಲ್ಲಿ, ಏರ್ಪಡಿಸಿದ್ದ ಕಂದಾಯ ಸಚಿವರ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಚಿವ ಆರ್. ಅಶೋಕ್ ದಲಿತರ ಮನೆಯ , ರೊಟ್ಟಿ, ಉಪ್ಪಿಟ್ಟು, ಚಿತ್ರಾನ್ನ ಸವಿದರು. ರಾತ್ರಿ ಮಾಯಸಂದ್ರದ ಟಿ.ಬಿ.ಕ್ರಾಸ್ ನಲ್ಲಿರುವ ಶ್ರೀ ಆದಿ ಚುಂಚನಗಿರಿಯ ಮಠದ ಶಾಖಾಮಠ ಕಲ್ಪತರು ಆಶ್ರಮದಲ್ಲಿ ತಂಗಿದ ಅವರು , ಬೆಳಿಗ್ಗೆ ವಾಯು ವಿಹಾರಕ್ಕೆ ತೆರಳಿದರು. ಈ ವೇಳೆ ರಸ್ತೆ ಬದಿಯಲ್ಲಿನ ಟೀ ಅಂಗಡಿಯಲ್ಲಿ ಟೀ ಕುಡಿದು, 9:30ರ ವೇಳೆಗೆ ಮಾಯಸಂದ್ರದ ,ಬಡ ದಲಿತರಾದ ಜಯಮ್ಮ ಬಿನ್ ಲೇಟ್ ನಾರಾಯಣಪ್ಪ ಅವರ ಮಗ ವಿನೋದ್ ರವರ ಮನೆಗೆ ತೆರಳಿ ಅವರ ಉಭಯ ಕುಶಲೋಪರಿ ,ವಿಚಾರಿಸಿದರು. ಬಳಿಕ ಅವರ ಮನೆಯಲ್ಲಿ ಮಾಡಿದ್ದ ಅಕ್ಕಿ ರೊಟ್ಟಿ ,ಉಚ್ಛಳು ಚಟ್ನಿಯನ್ನು ಅವರ ಅಡುಗೆ ಕೋಣೆಯಿಂದ ಸಚಿವರು ತಾವೇ ,ಬಡಿಸಿಕೊಂಡು ಹಾಲ್ ನಲ್ಲಿ ಊಟಕ್ಕೆ ಕುಳಿತರು. ಉಪ್ಪಿಟ್ಟು, ಚಿತ್ರಾನ್ನ ಹಾಕಿಸಿಕೊಂಡು ಸವಿದರು. ಸಚಿವರಿಗೆ ಶಾಸಕ ಮಸಾಲ ಜಯರಾಮ್ , ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ದಲಿತ ಮುಖಂಡರಾದ ವಿ.ಟಿ.ವೆಂಕಟರಾಮ್, ಪಟ್ಟಣ ಪಂಚಾಯಿತಿ…
ಚಿತ್ರದುರ್ಗ: ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಚಿತ್ರದುರ್ಗ ಜಿಲ್ಲಾ ಯುವ ಘಟಕದ ವತಿಯಿಂದ ಚಿತ್ರದುರ್ಗ ಪ್ರವಾಸಿ ಮಂದಿರದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಚಿತ್ರದುರ್ಗ ತಾಲೂಕು ಯುವ ಘಟಕದ ಅಧ್ಯಕ್ಷರನ್ನಾಗಿ ಗೌತಮ್ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ರಾಮಚಂದ್ರ. ಕೆ. , ಸಂಘಟನೆ ಕೇವಲ ಐಡಿ ಕಾರ್ಡ್ ಗೆ ಮಾತ್ರ ಸೀಮಿತವಾಗಿರಬಾರದು. ಅಸ್ಪೃಶ್ಯತೆ, ಶೋಷಣೆ, ಅತ್ಯಾಚಾರಕ್ಕೊಳಗಾದವರ ಪರ ಹೋರಾಡಬೇಕು ಎಂದು ತಿಳಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವೃಷಭೇಂದ್ರ ಬಾಬುರವರ ಮಾತನಾಡಿ, ಬಾಬಾಸಾಹೇಬರ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ಬಾಬಾಸಾಹೇಬರ ವಿಚಾರಗಳನ್ನು ಕೈಗೆತ್ತಿಕೊಂಡು ಯುವಜನತೆ ನಮ್ಮ ದೇಶದ ಮಾದರಿಯಾಗಿ ಬೆಳೆಯಬೇಕು. ದಲಿತರ ಅಲ್ಪಸಂಖ್ಯಾತರ ಶೋಷಣೆಗೊಳಗಾದ ಪರವಾಗಿ ನಿಮ್ಮ ಹೋರಾಟಗಳು ನಡೆಯಬೇಕೆಂದು ನೂತನ ಪದಾಧಿಕಾರಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಹಾಗೂ ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ರಾಮಚಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ವೃಷಭೇಂದ್ರ ಬಾಬು, ಬಿಎಸ್ ಜಿಲ್ಲಾಧ್ಯಕ್ಷರಾದ ರೇವಣಸಿದ್ದಪ್ಪ ಬಿ. ಕಲ್ಕುಂಟೆ, ಜಿಲ್ಲಾ ಕಾರ್ಯದರ್ಶಿಯಾದ ಹನುಮಂತು ಎಸ್., ಹಿರಿಯೂರು ತಾಲೂಕು ಕಾರ್ಯ ಅಧ್ಯಕ್ಷರಾದ…
ಜಮ್ಮು ಕಾಶ್ಮೀರದ ಪಾಂಪೋರ್ ಪ್ರದೇಶದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಮೃತದೇಹ ಕೃಷಿ ಭೂಮಿಯಲ್ಲಿ ಪತ್ತೆಯಾಗಿದ್ದು ಅವರನ್ನು ಗುಂಡಿಕ್ಕಿ ಹತ್ಯೆಗೈಯ್ಯಲಾಗಿದೆ. ಮೃತ ಅಧಿಕಾರಿಯನ್ನು ಫಾರೂಖ್ ಅಹ್ಮದ್ ಮೀರ್ ಎಂದು ಗುರುತಿಸಲಾಗಿದ್ದು ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸಬ್-ಇನ್ಸ್ಪೆಕ್ಟರ್ (ಮಿನಿಸ್ಟೀರಿಯಲ್ ವಿಂಗ್) ಆಗಿದ್ದರು. ಫಾರೂಖ್ ಅವರನ್ನು ಪಾಂಪೋರ್ನ ಸಂಬೂರ ಪ್ರದೇಶದಲ್ಲಿರುವ ಅವರ ನಿವಾಸದಿಂದ ಅಪಹರಿಸಿ ಹತ್ತಿರದ ಗದ್ದೆಯಲ್ಲಿ ಹತ್ಯೆಗೈಯ್ಯಲಾಗಿದೆ ಎಂದು ಶಂಕಿಸಲಾಗಿದೆ. ಅವರು ಶುಕ್ರವಾರ ಸಂಜೆ ತಮ್ಮ ಮನೆಯಿಂದ ತಮ್ಮ ಭತ್ತದ ಗದ್ದೆಗೆ ತೆರಳಿದ್ದರೆನ್ನಲಾಗಿದೆ. ಅಲ್ಲಿ ಈ ಘಟನೆ ನಡೆದಿದೆ. ಫಾರೂಖ್ ಅವರು ಜಮ್ಮು ಕಾಶ್ಮೀರದ ಐಆರ್ಪಿ ಬೆಟಾಲಿಯನ್ ನಲ್ಲಿ ನಿಯೋಜಿಸಲ್ಪಟ್ಟಿದ್ದರು. ಇನ್ನೂ, ಘಟನೆ ನಡೆದ ವೇಳೆ ಫಾರೂಖ್ ಅವರು ಕರ್ತವ್ಯದಲ್ಲಿರಲಿಲ್ಲ ಎಂದು ತಿಳಿದುಬಂದಿದೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಆಕೆ ೭ ರಿಂದ ೮ ವರ್ಷದ ಪುಟ್ಟ ಬಾಲೆ.. ಆದ್ರೇ.. ವಿಧಿಯಾಟಕ್ಕೆ ಬಲಿಯಾಗಿ ಚಿಕ್ಕವಯಸ್ಸಿನಲ್ಲಿಯೇ ತನ್ನ ಎಡಗೈ ಕಳೆದುಕೊಂಡಿದ್ದಳು. ಕೃತಕ ಕೈಜೋಡಣೆಯ ಮೂಲಕ, ಜೋವನೋತ್ಸಾಹ ಮೆರೆಯುತ್ತಿದ್ದ ಬಾಲಕಿಯ ಚಿಕಿತ್ಸೆಗಾಗಿ, ಕೆ ಎಸ್ ಆರ್ ಟಿಸಿಯ ಚಾಲಕ ಸೇವೆ ಬಿಟ್ಟು, ದೀರ್ಘಕಾಲಿಕ ರಜೆ ಕೂಡ ಪಡೆಯುವಂತೆ ಆಗಿ, ಕೆಲಸ ಕಳೆದುಕೊಳ್ಳುವಂತೆ ಆಗಿತ್ತು. ಆದ್ರೇ.. ಮಾನವೀಯ ಅಂತಹಃ ಕರಣದ ಕೆ ಎಸ್ ಆರ್ ಟಿ ಸಿ ಎಂ.ಡಿ ಭೇಟಿಯಾದ ಒಂದೇ ಕ್ಷಣದಲ್ಲಿ, ಆ ಪುಟ್ಟ ಬಾಲೆಯ ಮಾತುಗಳಿಗೆ ಭಾವುಕರಾದಂತ ಎಂಡಿ, ಚಾಲಕನಿಗೆ ಮರು ಆದೇಶ ನೀಡಿ, ಮಾನವೀಯತೆ ಮೆರೆದಿದ್ದಾರೆ. ಹೌದು.. ಕು. ಭೂಮಿಕ, ವಯಸ್ಸು ೭ ರಿಂದ ೮ ಆಸುಪಾಸು, ಮುಗ್ಧತೆ, ಪ್ರಾಮಾಣಿಕತೆಯೊಡನೆಯೇ, ವಿಧಿಯಾಟಕ್ಕೆ ಬಲಿಯಾಗಿ ಚಿಕ್ಕ ವಯಸ್ಸಿನಲ್ಲಿಯೇ ವೈದ್ಯಕೀಯ ಲೋಪದಿಂದ ತನ್ನ ಎಡಗೈಯನ್ನು ಭಾಗಷಃ ಕಳೆದುಕೊಂಡು ಕೃತಕ ಕೈಜೋಡಣೆಯೊಂದಿಗಿದ್ದರೂ ಜೀವನೋತ್ಸಾಹ ಹೊಂದಿದ್ದಳು. ಈ ಬಾಲಕಿಯ ತಂದೆ ದೀರ್ಘಾವಧಿ ಗೈರುಹಾಜರಿ ಪ್ರಕರಣದಲ್ಲಿ ನಿಗಮದಿಂದ ವಜಾ ಆಗಿದ್ದು, ಕೆಲಸವಿಲ್ಲದೆ ಜೀವನ ನಡೆಸುವುದಕ್ಕೆ ಕಷ್ಟ ಪಡುತ್ತಿದ್ದು, ಮಗುವಿಗೆ…
ರಾತ್ರಿ ಸುರಿದ ಧಾರಾಕಾರ ಮಳೆಗೆ ಯುವಕನೋರ್ವ ಕೆರೆಯಲ್ಲಿ ಮುಳುಗಿ ದುರ್ಮರಣ ಹೊಂದಿರುವ ಘಟನೆ ಬೆಳಕಿಗೆ ಬಂದಿದ್ದು, ಒಟ್ಟಾರೆ, ಮಹಾಮಳೆಗೆ ಬೆಂಗಳೂರಿನಲ್ಲಿ ಮೂವರು ಕೊನೆಯುಸಿರೆಳೆದಿದ್ದಾರೆ. ದೀಪಕ್ ಎಂಬಾತ ಮೃತ ಯುವಕನಾಗಿದ್ದು, ನಿನ್ನೆ ರಾತ್ರಿ ೧೧ ಗಂಟೆ ಸುಮಾರಿಗೆ ಸ್ನೇಹಿತನ ರವಿಚಂದ್ರ ಜೊತೆಗೆ ಕಾರಿ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಮಾಗಡಿ ರಸ್ತೆಯ ತಾವರೆಕೆರೆಯ ಸೀಗೆಹಳ್ಳಿ ಗೇಟ್ ಬಳಿ ದುರಂತ ಸಂಭವಿಸಿದೆ. ಅಲ್ಲದೆ, ತಿರುವಿನಲ್ಲಿ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ರಸ್ತೆಯ ಅಂಚು ಗೊತ್ತಾಗದೆ ಕೆರೆಗೆ ಕಾರು ಇಳಿದಿದ್ದು ಆಗ ಮುಳುಗಲು ಶುರುವಾಗುತ್ತಿದ್ದಂತೆ ರವಿಚಂದ್ರ ಬಾಗಿಲು ತೆಗೆದು ಹೊರಬಂದಿದ್ದಾನೆ. ಆದರೆ ದೀಪಕ್ ಕಾರ್ ನಿಂದ ಆಚೆ ಬರಲಾಗದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಘಟನೆ ಬಳಿಕ ಅಗ್ನಿಶಾಮಕ ದಳ ಮತ್ತು ಎಸ್.ಡಿ.ಆರ್.ಎಫ್ ಸಿಬ್ಬಂದಿ ಕಾರ್ಯಾಚರಣ ನಡೆಸಿ ಕೆರೆಯಿಂದ ಮೃತದೇಹ ಮತ್ತು ಕಾರು ಹೊರತೆಗೆಯಲಾಗಿದೆ.ಈ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಕೇಂದ್ರ ಸರ್ಕಾರ ಘೋಷಿಸಿರುವ ಅಗ್ನಿಪಥ್ ಯೋಜನೆ ವಿರೋಧಿಸಿ ಇಂದೂ ಕೂಡ ದೇಶದ ಹಲವೆಡೆ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದೆ. ಬಿಹಾರದಲ್ಲಿ ರೊಚ್ಚಿಗೆದ್ದ ಗುಂಪು ವಾಹನಗಳಿಗೆ ಬೆಂಕಿ ಹಚ್ಚಿದೆ. ಮತ್ತೊಂದೆಡೆ ತಮಿಳುನಾಡು-ಪಂಜಾಬ್ನಲ್ಲೂ ಪ್ರತಿಭಟನೆಯ ಕಾವು ಮತ್ತಷ್ಟು ತೀವ್ರಗೊಂಡಿದ್ದು, ಮುನ್ನೆಚ್ಚೆರಿಕೆ ಕ್ರಮವಾಗಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ. ನಿನ್ನೆ ಬಿಹಾರದಲ್ಲಿ ರೈಲುಗಳಿಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇಂದೂ ಕೂಡ ಅಗ್ನಿಪಥ್ ಯೋಜನೆ ವಿರೋಧಿಸಿ ಬಿಹಾರ ಬಂದ್ಗೆ ಕರೆ ನೀಡಲಾಗಿದೆ. ಬಿಹಾರದ ಸಂಘಟನೆಗಳು ಯೋಜನೆ ವಾಪಸ್ ಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ೭೨ ಗಂಟೆಗಳ ಕಾಲಾವಕಾಶ ನೀಡಿದೆ. ಈ ಬಂದ್ ಗೆ ಆರ್ ಜೆಡಿ, ಮಹಾಘಟ ಬಂಧನ್ ಜತೆಗೆ ವಿವಿಧ ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿವೆ. ಬಂದ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಬಂದ್ ನಡುವೆಯೂ ಜೆಹನಾಬಾದ್ನಲ್ಲಿ ಉದ್ರಿಕ್ತ ಗುಂಪು ಬಸ್, ಟ್ರಕ್ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿದೆ. ಯುವಕರನ್ನು ಸೇನೆಗೆ ಅಲ್ಪಾವಧಿಗಾಗಿ ನೇಮಕ ಮಾಡಿಕೊಳ್ಳುವ ಅಗ್ನಿಪಥ್ ಯೋಜನೆಯನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ಪ್ರಕಟಿಸಿತ್ತು. ಈ ಯೋಜನೆ…
ಕರ್ನಾಟಕ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಯ ಅಧಿಕಾರದ ಪಾರಪತ್ಯವನ್ನು ಮುಂದುವರೆಸುವ ನಿಟ್ಟಿನಲ್ಲಿ ಪಕ್ಷದ ವರಿಷ್ಟರು ಯೋಜನೆಯನ್ನು ರೂಪಿಸಿದ್ದು, ಇಂದು ಮಧ್ಯ ಕರ್ನಾಟಕದ ಜಿಲ್ಲೆ ಐತಿಹಾಸಿಕ ಕೋಟೆ ನಗರಿ ಚಿತ್ರದುರ್ಗದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರ ರಾಜ್ಯಮಟ್ಟದ ಜನಪ್ರತಿನಿಧಿಗಳ ಸಮಾವೇಶವನ್ನು ನಡೆಸುತ್ತಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನೂ ಒಂದು ವರ್ಷ ಬಾಕಿ ಇರುವಂತೆಯೇ, ವಿಧಾನಸಭೆ ಚುನಾವಣೆಗೆ ಅಣಿಯಾಗಲು ಬಿಬಿಎಂಪಿ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಅಧಿಕಾರ ವಿಕೇಂದ್ರೀಕರಣದೊಂದಿಗೆ ಗ್ರಾಮಗಳ ಸಬಲೀಕರಣದ ಘೋಷ ವಾಕ್ಯದಲ್ಲಿ ಅಭಿವೃದ್ಧಿ ಸಮೀಕರಣ ಮೂಲಕ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯಲು ತಯಾರಿ ನಡೆಸಲು ಇಂದಿನ ಕೋಟೆ ನಗರಿಯಲ್ಲಿ ಸಮಾವೇಶ ಆಯೋಜಿಸಲಾಗಿದೆ. ಚಿತ್ರದುರ್ಗದ ಮುರುಘಾ ಮಠದಲ್ಲಿನ ಅನುಭವ ಮಂಟಪದಲ್ಲಿ ಆಯೋಜಿಸಿರುವ ಬೃಹತ್ ಸಮಾವೇಶವು ಸಂಜೆ ೪ ಗಂಟೆಗೆ ಪ್ರಾರಂಭಗೊಳ್ಳಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಉದ್ಘಾಟನೆ ಮಾಡಲಿದ್ದಾರೆ.…
ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ಮಾಫಿವೀರೆಂದು ಟೀಕಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿವಾದಾತ್ಮಕ ಅಗ್ನಿಪಥ್ ಯೋಜನೆ ಕೈಬಿಡಬೇಕೆಂದು ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಅಗ್ನಿಪಥ್ ಸಶಸ್ತ್ರ ಪಡೆಗಳ ನೇಮಕಾತಿ ಯೋಜನೆ ಕುರಿತಂತೆ ಕೇಂದ್ರದ ವಿರುದ್ಧ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸತತ 8 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ, ಜೈ ಜವಾನ್ ಜೈ ಕಿಸಾನ್ ಎಂಬ ಮೌಲ್ಯಗಳಿಗೆ ಕೇಂದ್ರ ಸರ್ಕಾರ ಅವಮಾನ ಮಾಡುತ್ತಿದೆ ಎಂದು ಟೀಕಿಸಿದರು. ಈ ಹಿಂದೆ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದ್ದೆ. ಅದೇ ರೀತಿ ದೇಶದ ಯುವಕರ ಬೇಡಿಕೆಗೆ ಒಪ್ಪಿಕೊಳ್ಳುವ ಮೂಲಕ ಮೋದಿ ಮಾಫಿ ವೀರ್ ಆಗಬೇಕು. ತಕ್ಷಣ ಅಗ್ನಿಪಥ್ ಯೋಜನೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿಯ ಗಡಿಯಲ್ಲಿ ವ್ಯಾಪಕ ಪ್ರತಿಭಟನೆ ನಡೆಸಿದ ನಂತರ ಕಳೆದ ವರ್ಷ ನವೆಂಬರ್ನಲ್ಲಿ ಈ ಕಾಯ್ದೆಗಳನ್ನು ರದ್ದುಪಡಿಸಿ ಮೋದಿ ಅವರು ಕ್ಷಮೆಯಾಚಿಸಿದ್ದರು. ಈಗ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ದೇಶದ…
ತುಮಕೂರು: ತುರುವೇಕೆರೆ ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮ,ಜಿಲ್ಲಾಧಿಕಾರಿಗಳ ನಡೆ ,ಹಳ್ಳಿಯ ಕಡೆ ಹಾಗೂ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ,ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಂದಾಯ ಸಚಿವ ಆರ್.ಅಶೋಕ್ ಅವರು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಶಾಸಕ ಮಸಾಲ ಜಯರಾಮ್ , ನನ್ನ ತುರುವೇಕೆರೆ ಕ್ಷೇತ್ರಕ್ಕೆ 1,600 ಕೋಟಿಗೂ ಹೆಚ್ಚಿನ ಅನುದಾನವನ್ನು ವಿವಿಧ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ನೀಡಿದೆ ಇನ್ನು ಹೆಚ್ಚಿನ ಅನುದಾನವನ್ನು ತರುತ್ತೇನೆ ಎಂದರಲ್ಲದೇ ಇತ್ತೀಚೆಗೆ ರಾಜ್ಯ ಸಭೆಗೆ ಆಯ್ಕೆಯಾದ ಚಿತ್ರ ನಟ ಜಗ್ಗೇಶ್ ಅವರನ್ನು ಅಭಿನಂದಿಸಿದರು. ಇದೇ ವೇಳೆ ಮಾತನಾಡಿದ ನೂತನ ರಾಜ್ಯ ಸಭಾ ಸದಸ್ಯ ಜಗ್ಗೇಶ್, ತುರುವೇಕೆರೆ ವಿಧಾನ ಸಭಾ ಸದಸ್ಯನಾಗಿ ನಂತರ ವಿಧಾನ ಪರಿಷತ್ತಿನ ಸದಸ್ಯನಾಗಿ , ಈಗ ರಾಜ್ಯಸಭಾ ಸದಸ್ಯನಾಗಿ ಮೂರು ಅಧಿಕಾರವನ್ನು ಪಡೆದವರಲ್ಲಿ ನಾನೇ ಮೊದಲ ಇತಿಹಾಸ. ಆದುದರಿಂದ ನಾನೆಂದು ಮಾಯಸಂದ್ರದ ಮಣ್ಣನ್ನು ಮರೆಯುವುದಿಲ್ಲ. ಅದಕ್ಕಾಗೆ ನಾನು ರಾಜ್ಯ ಸಭಾ ಸದಸ್ಯರಾದ ತಕ್ಷಣ ನನ್ನ…