Subscribe to Updates
Get the latest creative news from FooBar about art, design and business.
- ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
- ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್ ಐ ತೀರ್ಥೇಶ್
- ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
- ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
- ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
- ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
- ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
- ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್ ಜಿ ಯೋಜನೆ ಜಾರಿ : ಜಿಪಂ ಸಿಇಒ
Author: admin
ಜಮಖಂಡಿ: ರಾಜಸ್ಥಾನದ ಜಲೋರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊಡ ಮುಟ್ಟಿದ್ದಕ್ಕೆ ದಲಿತ ಬಾಲಕನನ್ನು ಶಾಲಾ ಶಿಕ್ಷಕನೋರ್ವ ಮಾರಣಾಂತಿಕವಾಗಿ ಥಳಿಸಿ ಹತ್ಯೆ ಮಾಡಿದ ಘಟನೆಯನ್ನು ಖಂಡಿಸಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ದೇಸಾಯಿ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ರಾಜಸ್ಥಾನ ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು, ದೇಸಾಯಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ರಾಜಸ್ಥಾನದಲ್ಲಿ ನಡೆದಿರುವ ಘಟನೆಯಿಂದಾಗಿ ಪ್ರಜ್ಞಾವಂತ ನಾಗರಿಕರು ತಲೆತಗ್ಗಿಸುವಂತಾಗಿದೆ. ದಲಿತರನ್ನು ವೋಟ್ ಬ್ಯಾಂಕ್ ಗೆ ಬಳಸಿಕೊಂಡ ಕಾಂಗ್ರೆಸ್ ಈ ಘಟನೆಗೆ ಏನು ಉತ್ತರ ನೀಡುತ್ತದೆ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಕುಶಾಲ ವಾಘಮೋರೆ, ಗಣೇಶ ಸಿರಿಗನ್ನವರ ಪ್ರಶಾಂತ ಘಾಯಕವಾಡ, ವಿಜಯಲಕ್ಷ್ಮಿ ತುಂಗಳ ಸೇರಿದಂತೆ ಹಲವಾರು ಬಿ ಜೆ ಪಿ ಕಾರ್ಯಕರ್ತರು ಉಪಸ್ಥಿತರಿದ್ದರು. ವರದಿ: ಬಂದೇನವಾಜ ನದಾಫ್, ಜಮಖಂಡಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ಸರಗೂರು: ತಾಲ್ಲೂಕಿನ ಆಡಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರು ತರಗತಿ ನಡೆಸುತ್ತಿರುವಾಗಲೇ ಕಟ್ಟಡದ ಮೇಲ್ಛಾವಣಿಯ ಸಿಮೆಂಟ್ ಕುಸಿದು ಬಿದ್ದಿದ್ದು ಶಿಕ್ಷಕರು ಮತ್ತು ಮಕ್ಕಳು ಪ್ರಾಣಯದಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡಿದ್ದಾರೆ. ಸರಗೂರು ತಾಲ್ಲೂಕಿನ ಆಡಹಳ್ಳಿ ಗ್ರಾಮದಲ್ಲಿ 20 ವರ್ಷಗಳ ಹಿಂದೆ ಈ ಕಟ್ಟಡವನ್ನು ನಿರ್ಮಾಣ ಮಾಡಿದ್ದು, ಕಟ್ಟಡ ಇದೀಗ ಶಿಥಿಲ ಸ್ಥಿತಿಯಲ್ಲಿದೆ. ಇದರ ಬಗ್ಗೆ ಸುಮಾರು ಬಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಉದಯಕುಮಾರ್ ಅವರಿಗೆ ಅರ್ಜಿ ಸಲ್ಲಿಸಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ. ಇದೀಗ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪೋಷಕರು ಮಕ್ಕಳ ಪ್ರಾಣವನ್ನು ಬಲಿ ನೀಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕರು ನಾರಾಯಣಮೂರ್ತಿ ಮಾತನಾಡಿ, ನಮ್ಮ ಶಾಲೆಯಲ್ಲಿ ಒಟ್ಟು 70 ಮಕ್ಕಳು ಇದ್ದಾರೆ. 1ನೇ ತರಗತಿಯಿಂದ 7ನೇ ತರಗತಿವರೆಗೆ ಶಾಲೆ ನಡೆಯುತ್ತಿದೆ. ಶಾಲೆಯಲ್ಲಿ ನಾಲ್ಕು ಕಟ್ಟಡಗಳಿವೆ. ಈ ಪೈಕಿ ಒಂದು ಕಟ್ಟಡದಲ್ಲಿ ಪಾಠ ಮಾಡುತ್ತಿದ್ದ ಸಂದರ್ಭದಲ್ಲಿಯೇ ಮೇಲ್ಛಾವಣಿಯಿಂದ ಕಾಂಕ್ರೀಟ್ ಕಿತ್ತು ಬಿದ್ದಿದೆ. ಆದರೆ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದೇವೆ. ಘಟನೆಯಿಂದಾಗಿ ಮಕ್ಕಳು…
ಹಿರಿಯೂರು: ಬಡವರಿಗೆಂದು ಸರ್ಕಾರ ಉಚಿತವಾಗಿ ನೀಡುತ್ತಿರುವ ಅಕ್ಕಿ ಕಳಪೆ ಗುಣಮಟ್ಟದಿಂದ ಕೂಡಿದ್ದು, ಇದರಲ್ಲೂ ಕಮಿಷನ್ ದಂಧೆ ನಡೆಯುತ್ತಿದೆಯೇ? ಎಂದು ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ಕೂನಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂನಿಕೆರೆ ಗ್ರಾಮದ ಎಸ್ ಸಿ ಕಾಲೋನಿಯ ನಿವಾಸಿಗಳಿಗೆ ಹುಳ, ಕಸ, ಕಡ್ಡಿಗಳಿರುವ ಅಕ್ಕಿಯನ್ನು ಸರ್ಕಾರ ವಿತರಿಸಿದೆ. ಜನರಿಗೆ ತಿನ್ನಲು ಯೋಗ್ಯವಿಲ್ಲದ ಆಹಾರ ನೀಡುವ ಮೂಲಕ , ಪ್ರಾಣಗಳಿಂತಲೂ ಕಡೆಯಾಗಿ ಸರ್ಕಾರ ನಮ್ಮನ್ನು ಪರಿಗಣಿಸುತ್ತಿದೆಯೇ? ಎಂದು ಇಲ್ಲಿನ ನಿವಾಸಿಗಳು ಪ್ರಶ್ನಿಸಿದ್ದಾರೆ. ಸ್ಥಳೀಯ ಶಾಸಕರು ಹಾಗೂ ತಾಲ್ಲೂಕು ಆಡಳಿತ ಸೂಕ್ತ ಕ್ರಮ ವಹಿಸಿ, ಬಡವರಿಗೆ ಸರ್ಕಾರದಿಂದ ತಿನ್ನಲು ಯೋಗ್ಯವಾದ ಉತ್ತಮ ಗುಣಮಟ್ಟದ ಆಹಾರ ನೀಡುವಂತೆ ಒತ್ತಾಯಿಸಿದ್ದಾರೆ. ವರದಿ: ಮುರುಳಿಧರನ್ ಆರ್., ಚಿತ್ರದುರ್ಗ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ: ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿ ದೇವರುಗಳ ಪ್ರೀತಿ ಮತ್ತು ವಿಶ್ವಾಸಕ್ಕೆ ನಾನು ಸದಾ ಚಿರಾಋಣಿ. ನಿಮ್ಮೇಲ್ಲರ ಆರ್ಶಿವಾದ ಮತ್ತು ಹಾರೈಕೆ ಸದಾ ನನ್ನ ಮೇಲಿರಲಿ ಅಷ್ಟು ಸಾಕು ಎಂದು ಕೊರಟಗೆರೆ ಕ್ಷೇತ್ರದ ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ಹೇಳಿದರು. 55ನೇ ಹುಟ್ಟು ಹಬ್ಬವನ್ನು ಕಾರ್ಯಕರ್ತರ ಜೊತೆಗೆ ಆಚರಿಸಿಕೊಂಡ ಸುಧಾಕರಲಾಲ್, ಈ ವೇಳೆ ಮಾತನಾಡಿ, ಕೊರಟಗೆರೆ ಕ್ಷೇತ್ರದ ಮನೆಮಗನಾಗಿ 15 ವರ್ಷ ಜಿಲ್ಲಾ ಪಂಚಾಯತ್ ಸದಸ್ಯ ಮತ್ತು 5 ವರ್ಷ ಶಾಸಕನಾಗಿ 20 ವರ್ಷ ಹಗಲುರಾತ್ರಿ ಎನ್ನದೇ ಸಾಮಾನ್ಯನಂತೆ ಜನತೆಯ ಸೇವೆ ಸಲ್ಲಿಸಿದ್ದೇನೆ. 2018ರಲ್ಲಿ ನಾನು ಸೋತರು ಸಹ ಕೊರಟಗೆರೆ ಕ್ಷೇತ್ರದ ಜನತೆಯ ಒಡನಾಡಿಯಾಗಿ ಕೆಲಸ ಮಾಡುತ್ತಿದ್ದೇನೆ. 2023ರ ಕೊರಟಗೆರೆ ಕ್ಷೇತ್ರದ ವಿಧಾನಸಭಾ ಚುನಾವಣೆಗೆ ನಿಮ್ಮೆಲ್ಲರ ಆರ್ಶಿವಾದ ನನ್ನ ಮೇಲಿರಲಿ ಎಂದು ಮನವಿ ಮಾಡಿದರು. ತುಮಕೂರು ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾಲಿಂಗಪ್ಪ ಮಾತನಾಡಿ, ಸ್ನೇಹಜೀವಿಯ ಹುಟ್ಟುಹಬ್ಬದ ಸಂಭ್ರಮವು ಸಾಮಾಜಿಕ ಕಾರ್ಯಕ್ರಮವಾಗಿ ಕೊರಟಗೆರೆ ಕ್ಷೇತ್ರದಲ್ಲಿ ನಡೆಯುತ್ತಿದೆ. ಕೊರಟಗೆರೆ ಕ್ಷೇತ್ರದ ಪ್ರತಿ…
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ವಿತರಿಸಿದ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರ ಸಾರ್ವಜನಿಕ ವಿತರಣಾ ಪದ್ಧತಿಯಡಿ ಅರ್ಹ ಫಲಾನುಭವಿಗಳಿಗೆ ಎನ್.ಎಫ್.ಎಸ್.ಎ ಮತ್ತು ಪಿ.ಎಂ.ಜಿ.ಕೆ.ಎ.ವೈ ಯೋಜನೆಯಡಿ ಪಡಿತರವನ್ನು ವಿತರಿಸಲಾಗುತ್ತಿದೆ. ಪಡಿತರವನ್ನು ಯಾವುದೇ ಪಡಿತರ ಚೀಟಿದಾರರು ಅಥವಾ ಅದರಲ್ಲಿರುವ ಸದಸ್ಯರು ತಮಗೆ ಹಂಚಿಕೆಯಾದ ಆಹಾರ ಧಾನ್ಯವನ್ನು ತಮ್ಮ ಸ್ವಂತ ಲಾಭಕ್ಕಾಗಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಅಂತಹವರ ಪಡಿತರ ಚೀಟಿಯನ್ನು 6 ತಿಂಗಳ ಅವಧಿಗೆ ಅಮಾನತ್ತುಪಡಿಸುವ ಕ್ರಮ ವಹಿಸಲಾಗುವುದು. ಮಾರಾಟ ಮಾಡಿರುವಂತಹ ಆಹಾರ ಧಾನ್ಯ ಪ್ರಮಾಣಕ್ಕನುಗುಣವಾಗಿ ಮುಕ್ತ ಮಾರುಕಟ್ಟೆಯ ದರದಂತೆ ದಂಡವನ್ನು ವಿಧಿಸಿ ಸರ್ಕಾರದ ಲೆಕ್ಕ ಶೀರ್ಷಿಕೆಗೆ ಜಮಾ ಮಾಡುವ ಕ್ರಮ ವಹಿಸುವಂತೆ ಸರ್ಕಾರವು ಆದೇಶಿಸಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಹಾರಾಷ್ಟ್ರ ರಾಜಧಾನಿ ಮುಂಬಯಿಯ ಬೊರಿವಲಿ (ಪಶ್ಚಿಮ) ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಶುಕ್ರವಾರ ಮಧ್ಯಾಹ್ನ ಕುಸಿದಿದೆ. ಘಟನೆಯಲ್ಲಿ ಇದುವರೆಗೂ ಯಾವುದೇ ಸಾವು- ನೋವು ವರದಿಯಾಗಿಲ್ಲ. ಮೂಲಗಳ ಪ್ರಕಾರ ಸಾಯಿಬಾಬಾ ನಗರದಲ್ಲಿನ ಸಾಯಿಬಾಬಾ ದೇವಸ್ಥಾನ ಸಮೀಪದ ಗೀತಾಂಜಲಿ ಕಟ್ಟಡವು ಮಧ್ಯಾಹ್ನ 12.34ರ ವೇಳೆಗೆ ಕುಸಿದಿದೆ ಎಂದು ಮೂಲಗಳು ತಿಳಿಸಿವೆ.ಈ ಕಟ್ಟಡವು ಬಹಳ ಹಿಂದೆಯೇ ಶಿಥಿಲಗೊಂಡಿದ್ದರಿಂದ, ಅದರಲ್ಲಿ ನೆಲೆಸಿದ್ದವರನ್ನು ಅಲ್ಲಿಂದ ತೆರವುಗೊಳಿಸಲಾಗಿತ್ತು. ಆದರೂ ಅದರ ಒಳಗೆ ಕೆಲವು ಜನರು ಸಿಲುಕಿರುವ ಶಂಕೆ ಇದೆ. ಕಟ್ಟಡ ಸಂಪೂರ್ಣ ಕುಸಿದು ಬೀಳುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಂಡಳಿ ಹಾಗೂ ಪೊಲೀಸ್ ಸಿಬ್ಬಂದಿಗೆ ಕೂಡಲೇ ಕರೆ ನೀಡಲಾಗಿದ್ದು, ಅವರು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಅವಶೇಷಗಳ ಅಡಿ ಕೆಲವು ವ್ಯಕ್ತಿಗಳು ಸಿಲುಕಿರುವ ಅನುಮಾನದಡಿ ಸ್ಥಳದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಎಂಟು ಅಗ್ನಿಶಾಮಕ ವಾಹನಗಳು, ಎರಡು ರಕ್ಷಣಾ ವ್ಯಾನ್ಗಳು ಮತ್ತು ಮೂರು ಆಂಬುಲೆನ್ಸ್ಗಳನ್ನು ಸ್ಥಳದಲ್ಲಿ ಸಿದ್ಧವಾಗಿ ಇರಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಬೆಂಗಳೂರು: ಸ್ವಾತಂತ್ರ್ಯಪೂರ್ವದಲ್ಲಿ ಆರಂಭವಾಗಿದ್ದ ಚಿಕ್ಕಪೇಟೆಯ ಸರ್ಕಾರಿ ಪ್ರೌಢಶಾಲೆಯ ಕಟ್ಟಡವನ್ನು ಜಾಗದ ಸಮೇತ ಮಾರಾಟ ಮಾಡಲು ಕಂದಾಯ ಇಲಾಖೆ ಮುಂದಾಗಿರುವುದು ಆಕ್ಷೇಪಕ್ಕೆ ಕಾರಣವಾಗಿದೆ. ಶಿಕ್ಷಣ ಇಲಾಖೆಯ ತಕರಾರನ್ನೂ ಲೆಕ್ಕಿಸದೇ ಬಹುಕೋಟಿ ಮೌಲ್ಯದ ಆಸ್ತಿಯನ್ನು ಮಾರಾಟ ಅಥವಾ ಹರಾಜು ಹಾಕಲು ನಿರ್ದೇಶನ ನೀಡುವಂತೆ ಕೋರಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕಂದಾಯ ಇಲಾಖೆಗೆ ಪತ್ರ ಬರೆದಿದ್ದಾರೆ. ನಗರದ ಬಹುಕೋಟಿ ಬೆಲೆ ಬಾಳುವ ಪ್ರದೇಶದಲ್ಲಿರುವ ಈ ಆಸ್ತಿಯು, ಶಾಲೆಗಾಗಿಯೇ ದಾನಿಗಳು ನೀಡಿದ ಜಾಗವಾಗಿದೆ. ಬೆಂಗಳೂರು ಉತ್ತರ ತಾಲ್ಲೂಕು ತಹಶೀಲ್ದಾರ್, ಲೋಕೋಪಯೋಗಿ ಇಲಾಖೆ ಎಂಜಿನಿಯರ್ಗಳು ಪ್ರತ್ಯೇಕವಾಗಿ ಶಾಲೆ ಇರುವ ಜಾಗ ಮತ್ತು ಕಟ್ಟಡದ ಮಾರುಕಟ್ಟೆ ಮೌಲ್ಯವನ್ನು ನಿಗದಿ ಮಾಡಿ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಿದ್ದಾರೆ. ಕಂದಾಯ ಇಲಾಖೆ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಸರ್ಕಾರಿ ಶಾಲೆಯ ಭವಿಷ್ಯವೂ ನಿಂತಿದೆ. ಬೆಂಗಳೂರು ಉತ್ತರ ತಾಲ್ಲೂಕು ಚಿಕ್ಕಪೇಟೆ ಒಟಿಸಿ ರಸ್ತೆಯಲ್ಲಿರುವ ಸರ್ಕಾರಿ ಪ್ರೌಢಶಾಲೆ 77 ವರ್ಷಗಳಷ್ಟು ಹಳೆಯದು. 13,735 ಚದರಡಿ ವಿಸ್ತೀರ್ಣದ ಮೈದಾನದಲ್ಲಿ 1945ರಲ್ಲೇ ಪ್ರಾಥಮಿಕ, ಮಾಧ್ಯಮಿಕ ಶಾಲೆ ಆರಂಭವಾಗಿದ್ದವು. ಸ್ವಾತಂತ್ರ್ಯಾ ನಂತರ ಅದೇ…
ಚೆನ್ನೈ: ತಮಿಳುನಾಡಿನಲ್ಲಿ ಬೇರೂರಲು ಪ್ರಯತ್ನಿಸುತ್ತಿರುವ ಬಿಜೆಪಿ, ಇತ್ತೀಚೆಗೆ ಸಂಗೀತ ಮಾಂತ್ರಿಕ ಇಳಯರಾಜಾರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು. ಇದೀಗ ಸೂಪರ್ ಸ್ಟಾರ್ ರಜನಿಕಾಂತ್ರನ್ನು ರಾಜ್ಯಪಾಲರನ್ನಾಗಿಸಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಹಿಂದೆ ಹಲವು ಬಾರಿ ರಾಜಕೀಯಕ್ಕೆ ಬರುವ ಸುಳಿವು ಕೊಟ್ಟಿದ್ದ ರಜನಿಕಾಂತ್ ಕಡೆ ಕ್ಷಣದಲ್ಲಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದರು. ಮೊನ್ನೆ ಕೆಂಪುಕೋಟೆಯ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ರಜನಿಕಾಂತ್, ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಹಲವರನ್ನು ಭೇಟಿ ಮಾಡಿದ್ರು. ಇದಕ್ಕೂ ಮುನ್ನ, ತಮಿಳುನಾಡು ರಾಜ್ಯಪಾಲರನ್ನು ರಜನಿಕಾಂತ್ ಭೇಟಿ ಮಾಡಿದ್ದರು. ಈ ಭೇಟಿಯಲ್ಲಿ ಸದ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾಗಿ ತಿಳಿಸಿದ್ದರು. ಆದರೆ, ನೇರವಾಗಿ ರಾಜಕೀಯಕ್ಕೆ ರಜನಿಕಾಂತ್ ಬರಲು ಒಪ್ಪದ ಕಾರಣ ಅವರನ್ನು ರಾಜ್ಯಪಾಲರನ್ನಾಗಿಸಲು ಬಿಜೆಪಿ ಪ್ಲಾನ್ ಮಾಡಿದೆ. ಇದಕ್ಕೆ ರಜನಿಕಾಂತ್ ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎಂಬ ಸುದ್ದಿ ದಟ್ಟವಾಗಿ ಹಬ್ಬಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಒಂದು ಕಡೆ ಇತ್ತೀಚೆಗೆ 5G ಸ್ಪೆಕ್ಟ್ರಮ್ (5G Spectrum) ಹರಾಜು ಮುಗಿದಿದೆ. ಅದೇ ಸಮಯದಲ್ಲಿ, ಈಗ ದೇಶದ 3 ದೊಡ್ಡ ಟೆಲಿಕಾಂ ಕಂಪನಿಗಳು (Telecom Company) ಕಳೆದ 2 ವರ್ಷಗಳಿಂದ 5G ನೆಟ್ವರ್ಕ್ ಅನ್ನು ಪರೀಕ್ಷಿಸುತ್ತಿವೆ ಮತ್ತು ಇದೀಗ Airtel, Jio, Vodafone Idea ಈಗ 5G ಅನ್ನು ಪ್ರಾರಂಭಿಸಲು ಸಿದ್ಧವಾಗಿವೆ. ಅದೇ ಸಮಯದಲ್ಲಿ, ಸ್ಪೆಕ್ಟ್ರಮ್ ಹರಾಜಿನ ನಂತರ, ಜಿಯೋ ಈಗ 5G ನೆಟ್ವರ್ಕ್ ಅನ್ನು ಪ್ರಾರಂಭಿಸುವುದರೊಂದಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುವುದಾಗಿ ಹೇಳಿತ್ತು. ಅದೇ ಸಮಯದಲ್ಲಿ, ಜಿಯೋ ನಂತರ, ಏರ್ಟೆಲ್ ಕೂಡ ಇದೇ ರೀತಿಯ ಹೇಳಿಕೆಯನ್ನು ನೀಡಿತು. ಇದರಿಂದಾಗಿ ಜಿಯೋ ಮತ್ತು ಏರ್ಟೆಲ್ನ 5G ಬಿಡುಗಡೆಯನ್ನು ಆದಷ್ಟು ಬೇಗ ನಿರೀಕ್ಷಿಸಬಹುದು. ಆದಾಗ್ಯೂ, ವೊಡಾಫೋನ್ ಐಡಿಯಾ ಇನ್ನೂ 5G ಬಿಡುಗಡೆಗೆ ಸಂಬಂಧಿಸಿದಂತೆ ಯಾವುದೇ ಹೇಳಿಕೆ ನೀಡಿಲ್ಲ.5G ಬಗ್ಗೆ ಜಿಯೋದ ದೊಡ್ಡ ಘೋಷಣೆ ವಾಸ್ತವವಾಗಿ ರಿಲಯನ್ಸ್ ಜಿಯೋ 5G ಬಗ್ಗೆ ದೊಡ್ಡ ಘೋಷಣೆ ಮಾಡಿದೆ. ಹೌದು, ಶೀಘ್ರದಲ್ಲೇ ದೇಶದ 1,000 ನಗರಗಳಲ್ಲಿ 5G…
ಚಿಕ್ಕಮಗಳೂರು : ನಿನ್ನೆ ಮಡಿಕೇರಿಯಲ್ಲಿ ಸಿದ್ದರಾಮಯ್ಯಗೆ ಮೊಟ್ಟೆ ಎಸೆದ ವಿಚಾರವಾಗಿ ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಮಾತನಾಡಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಗಾಂಧಿಯನ್ನು ಕೊಂದವರು ನನ್ನನ್ನು ಬಿಡ್ತಾರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ ಚಿಕ್ಕಮಗಳೂರು, ಶೃಂಗೇರಿ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಭೇಟಿಯಾಗಿದ್ದು, ಆ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಗಾಂಧಿಯನ್ನೇ ಕೊಂದು ಹಾಕಿದ್ದವರು ನನ್ನನ್ನು ಬಿಡುತ್ತಾರಾ. ಇನ್ನು ನಾನ್ಯಾವ ಲೆಕ್ಕಾ ಎಂದು ಬಿಜೆಪಿ ಕಾರ್ಯಕರ್ತರ ವಿರುದ್ಧ ಸಿಡಿದ್ದೆದ್ದಿದ್ದಾರೆ. ಸರ್ಕಾರ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಾರೆ. ಪರಿಹಾರದ ಭರವಸೆ ನೀಡುತ್ತಾರೆ ಆದರೆ ಇನ್ನೂ ಪರಿಹಾರ ಸಿಕ್ಕಿರೋದಿಲ್ಲ. ನನಗೆ ಯಾವುದೇ ಜೀವ ಬೆದರಿಕೆಯಿಲ್ಲ. ಜನರ ಆಶೀವಾರ್ದವಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy