Author: admin

ಬೆಳಗಾವಿ : ಪಾಪಿ ಪತಿ ಚಾಕುವಿನಿಂದ ಪತ್ನಿಯ ಕತ್ತು ಕೋಯ್ದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ.ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತ್ನಿ ಶಬಾನಾ(28) ಹತ್ಯೆಗೈದು ಆರೋಪಿ ಪತಿ ಮೆಹಬೂಬ್ ಸಾಬ್ ಸವದತ್ತಿ ಠಾಣೆಗೆ ಶರಣಾಗಿದ್ದಾನೆ. ಬೀಡಿ ಗ್ರಾಮದ ಶಬಾನಾ ಜೊತೆ ಮುನವಳ್ಳಿ ನಿವಾಸಿ ಮೆಹಬೂಬ್‌ಸಾಬ್ ವಿವಾಹವಾಗಿತ್ತು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಶಬಾನಾ ಪತಿಯಿಂದ ದೂರವಾಗಿ, ತನ್ನ ಒಂಬತ್ತು ವರ್ಷದ ಮಗ, ಆರು ವರ್ಷದ ಮಗಳ ಜೊತೆ ಪ್ರತ್ಯೇಕವಾಗಿ ಶಬಾನಾ ಸವದತ್ತಿಯ ಅಯ್ಯಪ್ಪಸ್ವಾಮಿ ನಗರದಲ್ಲಿ ವಾಸವಿದ್ದಳು. ಇಂದು ಬೆಳಗ್ಗೆ ಮನೆಗೆ ಆಗಮಿಸಿ ಶಬಾನಾ ಜೊತೆ ಪತಿ ಮೆಹಬೂಬ್‌ಸಾಬ್ ಗಲಾಟೆ ಮಾಡಿಕೊಂಡಿದ್ದ. ಬಳಿಕ ಚಾಕುವಿನಿಂದ ಕತ್ತು ಕೊಯ್ದು ಹತ್ಯೆಗೈದು ಪೊಲೀಸ್ ಠಾಣೆಗೆ ಆರೋಪಿ ಮೆಹಬೂಬ್‌ಸಾಬ್ ಶರಣಾಗಿದ್ದಾನೆ. ಸಧ್ಯ ಪೊಲೀಸರು ಶಬಾನಾ ಕುಟುಂಬಸ್ಥರ ಆಗಮನಕ್ಕಾಗಿ ಕಾಯುತ್ತಿದ್ದಾರೆ. ಶಬಾನಾ ಕುಟುಂಬಸ್ಥರು ಬೀಡಿ ಗ್ರಾಮದಿಂದ ಸವದತ್ತಿಗೆ ಆಗಮಿಸುತ್ತಿದ್ದಾರೆ. ಸವದತ್ತಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬೆಳಗಾವಿ: ಶಾಲಾ ಆವರಣದಲ್ಲಿ ಕಬಡ್ಡಿ ಪಂದ್ಯಾವಳಿ ವೇಳೆ ವಿದ್ಯಾರ್ಥಿಗಳು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ರಾಮದುರ್ಗ ತಾಲೂಕಿನ ಚಂದರಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳ ಗುಂಪೊಂದು ಕಟ್ಟಿಗೆಗಳಿಂದ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ. ಚಂದರಗಿ – ಕಟಕೋಳ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಫೈನಲ್ ಪಂದ್ಯದ ವೇಳೆ ಪಾಯಿಂಟ್ಸ್ ವಿಚಾರಕ್ಕೆ ಗಲಾಟೆ ನಡೆದಿದೆ. ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಪಂದ್ಯವನ್ನು ರದ್ದುಗೊಳಿಸಿ ಪೊಲೀಸರು ವಿದ್ಯಾರ್ಥಿಗಳನ್ನ ಅಲ್ಲಿಂದ ಓಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹುಬ್ಬಳ್ಳಿ: ಮಹಿಳೆಯೊಬ್ಬರ ಕಣ್ಣಿನ ಕೆಳಗೆ ಸಿಲುಕಿದ್ದ ಮುರಿದ ಟೂತ್ ಬ್ರಶ್ ವೊಂದನ್ನು ಹೊರ ತೆಗೆಯುವಲ್ಲಿ ಹುಬ್ಬಳ್ಳಿ ಕಿಮ್ಸ್ ವೈದ್ಯರು ಯಶಸ್ವಿಯಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ 28 ವರ್ಷದ ಮಹಿಳೆಯ ಕಣ್ಣಿನಲ್ಲಿ ಮುರಿದ 7 ಇಂಚಿನ ಟೂತ್ ಬ್ರಶ್ ಕಣ್ಣಿನ ಕೆಳಗೆ ಸಿಲುಕಿತ್ತು.ಹಾವೇರಿ ಜಿಲ್ಲೆ ಹಾನಗಲ್ ಬಳಿಯ ಹಿರೂರು ಗ್ರಾಮದ ಗೃಹಿಣಿ ವಿನೋದಾ ತಳವಾರ (28) ಅವರ ನಾಲ್ಕು ವರ್ಷದ ಮಗಳು ಆಗಸ್ಟ್ 14 ರಂದು ಬೆಳಗ್ಗೆ ಹಲ್ಲು ಉಜ್ಜುವಾಗ ಇದ್ದಕ್ಕಿದ್ದಂತೆ ಟೂತ್ ಬ್ರಶ್, ಆಕೆಯ ತಾಯಿಯ ಎಡಗಣ್ಣಿನ ಕೆಳಗೆ ಸಿಲುಕಿದೆ. ನಂತರ ಕುಟುಂಬ ಸದಸ್ಯರು ಅದನ್ನು ತೆಗೆಯಲು ಪ್ರಯತ್ನಿಸಿದಾಗ ಮುರಿದಿದೆ.ಕೂಡಲೇ ಅವರು ಮಹಿಳೆಯನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.ಅಲ್ಲಿನ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ ಬಳಿಕ ರೋಗಿಯನ್ನು ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲು ಶಿಫಾರಸು ಮಾಡಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರು ಮುಖದ ಸಿಟಿ ಸ್ಕ್ಯಾನ್, ಸಿಟಿ ಆಂಜಿಯೋಗ್ರಾಮ್ ಮಾಡಿದಾಗ ಕಣ್ಣಿನ ಕೆಳಗೆ ಬ್ರಶ್ ಸಿಲುಕಿರುವುದು ತಿಳಿದುಬಂದಿದೆ.ಸ್ಕ್ಯಾನ್ ವರದಿ ತನಿಖೆ ವೇಳೆ ಎಡಗಣ್ಣು ಸಂಪೂರ್ಣವಾಗಿ…

Read More

ಬೆಳಗಾವಿ : ನಗರದ ಚನ್ನಮ್ಮ ವೃತ್ತದಲ್ಲಿರುವ ವಿಶ್ವರಾಜ ಸುಗರ್ಸ್ ಪ್ರೈವೇಟ್ ಲಿಮಿಟೆಡ್ ಎಂದು ಇಂಗ್ಲೀಷ್ ಬರಹ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಕಾರ್ಯಕರ್ತರು ಚನ್ನಮ್ಮ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದರು. ರಾಜ್ ಶುಗರ್ಸ್ ಲಿಮಿಟೆಡ್ ಇಂಗ್ಲಿಷ್ ಬರಹ ತೆಗೆದು ಕನ್ನಡದಲ್ಲಿ ಬರೆಯಬೇಕು ಎಂದು ಪ್ರತಿಭಟಿಸಿದರು. ರಾಜಕಾರಣಿಗಳ ಸುಗರ್ ಫ್ಯಾಕ್ಟರಿ ಹೆಸರುಗಳನ್ನ ಅಳವಡಿಸಿ ರಾಜಕಾರಣ ಮಾಡುತ್ತಿದ್ದಾರೆ. ಆದಕಾರಣ ರಾಣಿ ಚೆನ್ನಮ್ಮ ವೃತನಲ್ಲಿ ಚನ್ನಮ್ಮನ ಹೆಸರಿಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆಯ ಜಿಲ್ಲಾ ಅಧ್ಯಕ್ಷ ದೀಪಕ್ ಬುರಲಿ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಜಿಲ್ಲಾಧ್ಯಕ್ಷ ಬಾಳಪ್ಪ ಗುಡುಗೇನಟ್ಟಿ ಹಾಗೂ ಎರಡು ಸಂಘಟನೆಯ ಪದಾಧಿಕಾರಿಗಳು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ತದನಂತರ ಕನ್ನಡ ಸಾಹಿತ್ಯ ಭವನದಲ್ಲಿ ಸೇರಿರುವ ಕಾರ್ಯಕರ್ತರನ್ನು ಒತ್ತಾಯ ಪೂರ್ವಕವಾಗಿ ಕಡೆ ಬಜಾರ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ತುಮಕೂರು: ನಗರದ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಕನಿಷ್ಠ ಮೂಲಭೂತ ಸೌಲಭ್ಯವನ್ನೂ ಒದಗಿಸದ ಹಿನ್ನೆಲೆಯಲ್ಲಿ ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರವು ಉಪವಾಸ ಸತ್ಯಾಗ್ರಹ ಆರಂಭಿಸಿದೆ. ಮೂಲಭೂತ ಸೌಕರ್ಯ ಒದಗಿಸಲು 200 ಲಕ್ಷ ರೂಪಾಯಿಗಳು ಬಿಡುಗಡೆಯಾಗಿ 9 ತಿಂಗಳುಗಳು ಕಳೆದರೂ ಕಟ್ಟಡ ಕಾಮಗಾರಿ ಅನುಷ್ಠಾನವಾಗದೇ ಕಾಲೇಜು ಶಿಕ್ಷಣ ಇಲಾಖೆ ಆಡಳಿತ ನಿರ್ಲಕ್ಷಿಸಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಕಟ್ಟಡ ನಿರ್ಮಾಣ ಕಾಮಗಾರಿ ಆರಂಭವಾಗುವವರೆಗೂ ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿದೆ. ಹೋರಾಟದ ನೇತೃತ್ವ ವಹಿಸಿರುವ ಸಿದ್ದಲಿಂಗೇಗೌಡರು, ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಾಲೇಜು ಶಿಕ್ಷಣ ಇಲಾಖೆಯ ರಾಜ್ಯ ನಿರ್ದೇಶಕರಾದ ಅಪ್ಪಾಜಿ ಗೌಡರನ್ನು ತರಾಟೆಗೆತ್ತಿಕೊಂಡು, ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯ ಹಾಗೂ ಜವಾಬ್ದಾರಿಯ ಪಾಠ ಹೇಳಿದರು. ಶಾಲೆಯ ವಿದ್ಯಾರ್ಥಿಗಳಿಗೆ ಸರಿಯಾದ ಮೂಲಭೂತ ವ್ಯವಸ್ಥೆಗಳಿಲ್ಲ. ಕುಡಿಯುವ ನೀರು ಕೂಡ ಇಲ್ಲ. ಹೆಣ್ಣು ಮಕ್ಕಳು ಕಲಿಯುವ ವಿದ್ಯಾಲಯದಲ್ಲಿ ಶೌಚಾಲಯವೇ ಇಲ್ಲ. ಇದೆಲ್ಲ ಸೂಕ್ಷ್ಮವಾದ ವಿಷಯವಾಗಿದ್ದು, ಇದನ್ನು ಸರ್ಕಾರಿ ಅಧಿಕಾರಿಗಳಾದವರು ತಿಳಿದಿರಬೇಕಲ್ಲವೇ? ಎಂದು ಅಪ್ಪಾಜಿ ಗೌಡರನ್ನು ತರಾಟೆಗೆತ್ತಿಕೊಂಡರು. ಹೋರಾಟದಲ್ಲಿ ಸಿದ್ದಲಿಂಗೇಗೌಡರು, ದರ್ಶನ್, ವಕೀಲರಾದ…

Read More

ಬೆಂಗಳೂರು: ಟೀಮ್‌ ಇಂಡಿಯಾದ ಮಾಜಿ ಸ್ಟಾರ್ ಕ್ರಿಕೆಟಿಗ ವಿನೋದ್ ಕಾಂಬ್ಳಿ, ಹಣಕಾಸಿನ ವಿಚಾರದಲ್ಲಿ ಸದ್ಯ ತುಂಬಾ ಕೆಟ್ಟ ಸಮಯವನ್ನು ಎದುರಿಸುತ್ತಿದ್ದಾರೆ. ಇತ್ತೀಚಿನ ಮಾಧ್ಯಮಗಳ ವರದಿ ಪ್ರಕಾರ ಕಾಂಬ್ಳಿ, ತಮ್ಮ ದೈನಂದಿನ ಜೀನವ ನಡೆಸುವ ಸಲುವಾಗಿ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾಜಿ ಕ್ರಿಕೆಟಿಗರಿಗೆ ನೀಡುವ ಪಿಂಚಣಿಯನ್ನು ನೆಚ್ಚಿಕೊಂಡು ಇರುವಂತಹ ದಯನೀಯ ಸ್ಥಿತಿಗೆ ತಲುಪಿದ್ದಾರೆ. ಒಂದು ಕಾಲದಲ್ಲಿ ಟೀಮ್ ಇಂಡಿಯಾದ ಬಹುದೊಡ್ಡ ಸ್ಟಾರ್‌ ಆಟಗಾರರಲ್ಲಿ ಒಬ್ಬರಾಗಿ ಕೋಟಿಗಟ್ಟಲೆ ಸಂಪಾದನೆ ಮಾಡುತ್ತಿದ್ದ ವಿನೋದ್ ಕಾಂಬ್ಳಿ, ಈಗ ದಿನಕ್ಕೆ ಕೇವಲ 1000 ರೂಪಾಯಿ ಸಂಪಾದಿಸುವ ಸ್ಥಿತಿಯಲ್ಲಿದ್ದಾರೆ. ವಿನೋದ್ ಕಾಂಬ್ಳಿ ಭಾರತ ತಂಡದ ಪರ ಆಡುವಾಗ ಬೌಲರ್‌ ಗಳ ಎದೆಯಲ್ಲಿ ನಡುಕ ಹುಟ್ಟಿಸಿದ್ದಂತಹ ಆಟಗಾರ. ಕಾಂಬ್ಳಿ ಉತ್ತಮ ಬೌಲರ್‌ಗಳನ್ನು ಬಡಿದು ಬೆಂಡೆತ್ತುವವ ಸಾಮರ್ಥ್ಯ ಹೊಂದಿದ್ದ ಬ್ಯಾಟರ್‌. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಬಾಲ್ಯದ ಗೆಳೆಯ ಕೂಡ. ಇಬ್ಬರೂ ಟೀಮ್ ಇಂಡಿಯಾಗೆ ಜೊತೆಯಾಗಿ ಪದಾರ್ಪಣೆ ಮಾಡಿದ್ದಾರೆ.ಆದರೆ ಇಂದು ಸಚಿನ್ ತೆಂಡೂಲ್ಕರ್ ದೇಶವಷ್ಟೇ ಅಲ್ಲ ವಿಶ್ವದ ಶ್ರೀಮಂತ…

Read More

ಕೊಡಗು : ಕೊಡಗಿನಲ್ಲಿ ಭಾರೀ ಮಳೆ ಸುರಿದಿದ್ದು, ಈ ಹಿನ್ನೆಲೆ ಬೆಳೆಹಾನಿಯ ಪ್ರದೇಶವನ್ನು ವೀಕ್ಷಣೆ ಮಾಡಲು ತಿಮ್ಮಯ್ಯ ಸರ್ಕಲ್‌ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಬಂದಾಗ ಅವರ ಕಾರಿನ ಮೇಲೆ  ಮೊಟ್ಟೆ ಎಸೆದಿದ್ದಾರೆ. ಬೆಳಗ್ಗೆ ಕೊಡಗಿನ ಗಡಿ ಭಾಗದ ಪೋನ್ನಂಪೇಟೆ ತಾಲೂಕಿನ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ನೇತೃತ್ವದಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ಮಾಡುವ ಮೂಲಕ ಪ್ರತಿಭಟಿಸಿದರು. ಸಿದ್ದರಾಮಯ್ಯ ಅವರಿದ್ದ ಕಾರನ್ನು ಅಡ್ಡಗಟ್ಟಿ ಸಾವರ್ಕರ್ ಭಾವಚಿತ್ರವನ್ನು ಕಾರಿನಲ್ಲಿ ಎಸೆದು ಹಾಕಿದಲ್ಲದೇ ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಸಿದ್ದುಖಾನ್, ಗೋ ಬ್ಯಾಕ್ ಸಿದ್ದರಾಮಯ್ಯ ಘೋಷಣೆ ಕೂಗಿದರು. ಅಷ್ಟೇ ಅಲ್ಲದೇ ಕೊಡವರನ್ನು ಗೋಮಾಂಸ ಭಕ್ಷಕರೆಂದು ಬಿಂಬಿಸಿದ್ದಾರೆ. ಹಿಂದೂ ವಿರೋಧಿ ಸಿದ್ದರಾಮಯ್ಯ ಕೊಡಗಿಗೆ ಕಾಲಿಡಲು ಅಯೋಗ್ಯರಾಗಿದ್ದಾರೆ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ಆಕ್ರೋಶ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ಮಧುಗಿರಿ: ದೇಶದಲ್ಲಿ ಅಸ್ಪೃಶ್ಯರಿಗೆ ಮತದಾನದ ಹಕ್ಕನ್ನು ಕೊಟ್ಟ ಮೇಲೆಯೇ ನಮಗೆ ಬದುಕಿನಲ್ಲಿ ಭರವಸೆಯ ಬೆಳಕು ಕಂಡಿದ್ದು, ಇಂದೇ ನಮಗೆ ಸ್ವತಂತ್ರ ಬಂದ ದಿನವಾಗಿದೆ ಎಂದು ಡಾ.ಅಂಬೇಡ್ಕರ್ ಪೀಪಲ್ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಪ್ರಸನ್ನ ಕುಮಾರ್ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅನುಭವಿಸಿದ ನೋವನ್ನು ಯಾರೂ ಕಾಣಲಾರರು . ಇಂತಹ ಮಹಾನೀಯನಿಂದಾಗಿ ದೇಶದ ಅಸಹಾಯಕರು ಮತದಾನದ ಹಕ್ಕನ್ನು ಪಡೆದ ಈ ದಿನವನ್ನು ದೇಶದ ನೈಜ ಸ್ವತಂತ್ರ ದಿನವಾಗಿ ಆಚರಿಸಲಾಗುತ್ತಿದೆ . 1932 ನೇ ಆಗಸ್ಟ್ 17ರಂದು ಬ್ರಿಟಿಷರಿಂದ ಅನುಮತಿ ಪಡೆದು ಅಸ್ಪೃಶ್ಯ ಸಮುದಾಯಕ್ಕೆ ಮತ ಹಾಕುವ ಹಕ್ಕನ್ನು ಪಡೆಯಲಾಯಿತು. ಈ ಹೋರಾಟ 1917ರಿಂದ 1932ರವರೆಗೂ ನಿರಂತರವಾಗಿ ನಡೆದಿದ್ದರಿಂದ ಇಂದೂ ನಾವೆಲ್ಲ ಮತ ಚಲಾಯಿಸುವ ತ್ತಿದ್ದೇವೆ ಎಂದರು . ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಲಕ್ಷ್ಮೀ ನಾರಾಯಣ್ ತಾಲೂಕು ಅಧ್ಯಕ್ಷ ಲಕ್ಷ್ಮೀಷತಿ ಉಪಾಧ್ಯಕ್ಷ ಬಾಲಕೃಷ್ಣ ಮುಖಂಡರಾದ ಧ್ರುವ ಕುಮಾರ್ , ವಕೀಲ ಶಿವಕುಮಾರ್ , ಜೀವಿಕ ಮಂಜು…

Read More

ಸರಗೂರು: ತಾಲ್ಲೂಕಿನ ಪಟ್ಟಣದ ಸ್ವಾಮಿ ವಿವೇಕಾನಂದ ಆಸ್ಪತ್ರೆಯಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿಅಂಬೇಡ್ಕರ್ ರವರ ಭಾವಚಿತ್ರವನ್ನು ಇಡದೆ ಆಚರಣೆ ಮಾಡಿದ ವಿಚಾರ ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಸಂವಿಧಾನ ಸಂರಕ್ಷಣಾ ಸಮಿತಿ ಹಾಗೂ ಕರ್ನಾಟಕ ಭೀಮ ಸೇನೆ ಮತ್ತು ಪ್ರಗತಿಪರ ಸಂಘಟನೆಗಳು ಘಟನೆಯನ್ನು ಖಂಡಿಸಿವೆ. ಸ್ವಾತಂತ್ರ್ಯೋತ್ಸವದ ವೇಳೆ ಅಂಬೇಡ್ಕರ್ ಅವರ ಫೋಟೋ ಬಳಸಿ ಎಂದು ಮನವಿ ಮಾಡಿದರೆ, ನಿಮ್ಮ ಬಳಿಯಲ್ಲಿ ಸುತ್ತೋಲೆ ಇದೆಯಾ? ಎಂಬ ಉದ್ಧಟತನದ ಪ್ರಶ್ನೆಗಳನ್ನು ಸಿಬ್ಬಂದಿ ಕೇಳಿದ್ದು, ಅಂಬೇಡ್ಕರ್ ಅವರ ಬಗ್ಗೆ ಇವರಿಗೆ ಯಾಕಿಷ್ಟು ಅಸಹನೆ? ಎಂದು ಪ್ರಶ್ನಿಸಿರುವ ಹೋರಾಟಗಾರರು, ಇಂತಹವರು ಸಂವಿಧಾನದ ಅಡಿಯಲ್ಲಿ ಕಾರ್ಯಾಚರಿಸುತ್ತಿರುವ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹರಲ್ಲ, ತಕ್ಷಣವೇ  ಕೆಲಸದಿಂದ ಕಿತ್ತು ಹಾಕಿ ಕಾನೂನು ಕ್ರಮಕೈಗೊಳ್ಳಬೇಕು. ಇಲ್ಲವಾದರೆ, ಬೃಹತ್ ಹೋರಾಟವನ್ನು ರೂಪಿಸುತ್ತೇವೆ ಎಂದು ಸಂಘಟನೆಗಳು ಎಚ್ಚರಿಕೆ ನೀಡಿವೆ. ಘಟನೆ ಸಂಬಂಧ ಆಸ್ಪತ್ರೆಯ ಸಿಬ್ಬಂದಿ ಡಾ ಡೇವಿಸ್ ಚಾಹಲ್ ಮಾತನಾಡಿ, ನಮ್ಮ ಸಿಬ್ಬಂದಿ, ನಾವು ಅಂಬೇಡ್ಕರ್ ರವರ ಭಾವಚಿತ್ರವನ್ನು ಇಡದೆ ಸ್ವಾತಂತ್ರ್ಯ ಆಚರಿಸಿ ತಪ್ಪು…

Read More

ತುಮಕೂರು: ದೇಶದಲ್ಲಿ ರಾಷ್ಟ್ರಪ್ರೇಮದ ಹೆಸರಿನಲ್ಲಿ ರಾಷ್ಟ್ರಪಿತ ಹಾಗೂ ಸ್ವಾತಂತ್ರ್ಯ ಹೋರಾಟಗಾರರನ್ನ ಪದೇ ಪದೇ ಅವಮಾನಿಸುತ್ತಿರುವ ಬಗ್ಗೆ ವರದಿಗಾಳಾಗ್ತಿವೆ. ಇದೀಗ ತುಮಕೂರು ಜಿಲ್ಲೆ ಮಧುಗಿರಿ ಪುರಸಭೆಯ ದಂಡಿನ ಮಾರಮ್ಮನ ಮುಂಭಾಗದಲ್ಲಿನ ಫ್ಲೆಕ್ಸ್‌ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನು ಹತ್ಯೆ ಮಾಡಿದ್ದ ನಾಥೂರಾಮ್ ಗೋಡ್ಸೆಯ ಫೋಟೋವನ್ನು ಗಾಂಧೀಜಿ ಪೋಟೋದ ಮೇಲೆ ಹಾಕಿ ಸಂಭ್ರಮಾಚರಣೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಕಳೆದ ಆಗಸ್ಟ್ 15ರಂದು 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮಧುಗಿರಿ ಪಟ್ಟಣದ ಡಿ.ಎಂ ಬಡಾವಣೆಯ ಭಗತ್ ಸಿಂಗ್ ಯೂಥ್ ಅಸೋಸಿಯೇಷನ್‌ನಿಂದ ಫ್ಲೆಕ್ಸ್‌ಗಳನ್ನು ಹಾಕಲಾಗಿತ್ತು. ಈ ಒಂದು ಫ್ಲೆಕ್ಸ್‌ನಲ್ಲಿ ಭಗತ್ ಸಿಂಗ್, ಸರ್ದಾರ್ ವಲ್ಲಬಭಾಯಿ ಪಟೇಲ್, ಚಂದ್ರಶೇಖರ್ ಆಜಾದ್, ಸುಭಾಷ್ ಚಂದ್ರ ಬೋಸ್, ಮಹಾತ್ಮ ಗಾಂಧೀಜಿ, ಲಾಲ್ ಬಹಾದ್ದೂರ್ ಶಾಸ್ತ್ರಿ, ಕಿತ್ತೂರು ರಾಣಿ ಚೆನ್ನಮ್ಮ ಜೊತೆಗೆ ನಾಥೂರಾಮ್ ಗೋಡ್ಸೆ ಪೋಟೋವನ್ನು ಹಾಕಲಾಗಿದೆ. ಫ್ಲೆಕ್ಸ್ ನಲ್ಲಿರುವ ಇಷ್ಟು ಪೋಟೋಗಳಲ್ಲಿ ಪ್ರಮುಖವಾಗಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಇತರರ ಪೋಟೋಗಳನ್ನು ಕೆಳಗಡೆ ಸಾಲಿನಲ್ಲಿ ಹಾಕಿ, ಗಾಂಧೀಜಿ…

Read More