Author: admin

ಮಂಡ್ಯ: ತಾಲ್ಲೂಕಿನ ಬಸರಾಳು ಹೋಬಳಿಯ ಮುತ್ತೇಗೆರೆ ಪಂಚಾಯತಿಯ ಆಡಳಿತ ವ್ಯವಸ್ಥೆ ವಿರುದ್ಧ ಗ್ರಾಮ ಪಂಚಾಯತ್ ಸದಸ್ಯರು ಶಿವಕುಮಾರ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಪಂಚಾಯತ್ ನಲ್ಲಿ ಎರಡು ವರ್ಷಗಳಿಂದ  ಯಾವುದೇ ಅಭಿವೃದ್ಧಿ ಕಂಡಿಲ್ಲ, ಹುನುಗನಹಳ್ಳಿ  ಎಸ್ ಸಿ ಕಾಲೋನಿ ತೊಂಬೆ ಹಾಕಿ ಎರಡು ವರ್ಷ ಆದರು ನೀರೇ ಕಂಡಿಲ್ಲ.  PDO ಇದ್ದರು ಯಾವುದೇ ಕೆಲಸ ಮಾಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಎರಡು ವರ್ಷಗಳಾದರು ಬಿಲ್ ಕಲೆಕ್ಟರ್ ಮತ್ತು ಕಾರ್ಯದರ್ಶಿಗಳು ಇಲ್ಲದೆ ಪಂಚಾಯಿತಿ ಅವ್ಯವಸ್ಥೆಯಿಂದ ಕೂಡಿದೆ.  ನಡವಳಿಕೆ ಪುಸ್ತಕದಲ್ಲಿ ಸಾಮಗ್ರಿ ಸೇರಿಸಿಲ್ಲ,  ಬೀದಿ ದೀಪ ಖರೀದಿಯ ಬಿಲ್ ಇಲ್ಲ,  ನಡುವಳಿ ಪುಸ್ತಕ ಹಾಗೂ ಬ್ಯಾಂಕ್ ಪಾಸ್ ಬುಕ್ ವ್ಯತ್ಯಾಸ ಕಂಡುಬಂದಿದೆ. ಆಡಳಿತ ಅಧಿಕಾರಿಗಳು ಅಧಿಕಾರ ಹಸ್ತಾಂತರ ಮಾಡುವಾಗ ಯಾವುದೇ ಬಾಕಿ ಮೊತ್ತ ತೋರಿಸುವುದಿಲ್ಲ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಪಂಚಾಯತ್ ನ ದಾಖಲಾತಿ ಅಂಶಗಳನ್ನು ಸರಿಯಾಗಿ ಪರಿಶೀಲನೆ ನಡೆಸಿದರೆ, ಇಲ್ಲಿ ನಡೆಯುವ ಕರ್ಮಕಾಂಡಗಳು ಬಯಲಾಗಲಿದೆ ಎಂದು ಪ್ರತಿಭಟನಾಕಾರರು ಹೇಳಿದ್ದು, ತಪ್ಪಿತಸ್ಥರಿಗೆ ಕಾನೂನು ರೀತಿಯ ಶಿಕ್ಷೆಯಾಗಬೇಕು…

Read More

ಪಾವಗಡ: ತಮ್ಮ ಪುತ್ರನ ವಿವಾಹ ಕಾರ್ಯಕ್ರಮದಲ್ಲಿ ಕುಟುಂಬಸ್ಥರು ತಮ್ಮ ಸಮುದಾಯದ 45 ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮತ್ತು ನೋಟ್ ಪುಸ್ತಕ ಹಾಗೂ ಕಲಿಕಾ ಸಾಮಗ್ರಿಗಳನ್ನು ನೀಡುವ ಮೂಲಕ ವಿದ್ಯಾಭ್ಯಾಸಕ್ಕೆ ವಿಶೇಷ ಪ್ರೋತ್ಸಾಹವನ್ನು ನೀಡಿ ಮಾದರಿಯಾಗಿದ್ದಾರೆ. ಪಾವಗಡ ತಾಲೂಕು ನಿಡಗಲ್ಲು ಹೋಬಳಿ ಹರಿಹರಪುರ ಗ್ರಾಮದಲ್ಲಿ ಈ ವಿಶೇಷ ವಿವಾಹ ನಡೆದಿದ್ದು, ಭಾರತೀಯ ಪರಿವರ್ತನಾ ಸಂಘದ ಪೋಷಕರಾಗಿರುವ ಹನುಮಂತರಾಯಪ್ಪ ಅವರ ಪುತ್ರ ಹೆಚ್.ರಾಜು ಹಾಗೂ ನೇಹಾ ಅಲಿಯಾಸ್ ಚಂದನ ಎ. ಅವರ ವಿವಾಹ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸುವ ಮೂಲಕ ಹೊಸ ಸಂಪ್ರದಾಯಕ್ಕೆ ಸಾಕ್ಷಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಹನುಮಂತರಪ್ಪ, ನಮ್ಮ ನಾಲ್ಕು ಜನ ಮಕ್ಕಳು ಇದೇ ಶಾಲೆಯಲ್ಲಿ ವಿದ್ಯಾಭ್ಯಾಸವನ್ನು ಕಲಿತವರು. ಕೆಲವು ತಿಂಗಳುಗಳ ಹಿಂದೆ ತಮ್ಮ ಹೆಂಡತಿ ತೀರಿಕೊಂಡರು. ಆದರೆ ಅವರು ಬದುಕಿದ್ದಾಗಲೇ ನನಗೆ ಯಾವಾಗಲೂ ಹೇಳುತ್ತಿದ್ದರು. ನಮ್ಮ ಸ್ಕೂಲಿನ ವಿದ್ಯಾರ್ಥಿಗಳಿಗೆ ನಮ್ಮ ಕೈಲಾದಷ್ಟು ಸಹಾಯ ಮಾಡಬೇಕು ಅಂತ. ಅವರ ಆಸೆಯಂತೆಯೇ ನಮ್ಮ ಕುಟುಂಬದವರೆಲ್ಲರ ಒಮ್ಮತದಿಂದ ಒಪ್ಪಿ ಈ ದಿನ ನಮ್ಮ…

Read More

ಮಧುಗಿರಿ: ರಾಜಸ್ಥಾನ ರಾಜ್ಯದ ಜಾಲೂರು ಜಿಲ್ಲೆಯ ಸರಾನಾ ಗ್ರಾಮದ ಸರಸ್ವತಿ ವಿದ್ಯಾಮಂದಿರದ ವಿಧ್ಯಾರ್ಥಿಯನ್ನು ಹತ್ಯೆ ಮಾಡಿರುವ ಆರೋಪಿಗಳಿಗೆ ಮರಣ ದಂಡನೆ ವಿಧಿಸಬೇಕು ಎಂದು ಒತ್ತಾಯಿಸಿ ತಾಲೂಕು ದಲಿತ ಸಾಹಿತ್ಯ ಪರಿಷತ್ ಮತ್ತು ಆದಿಜಾಂಭವ ಮಹಾಸಭಾ ವತಿಯಿಂದ ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಮನವಿ ಪತ್ರ ಸಲ್ಲಿಸದ ಪದಾಧಿಕಾರಿಗಳು ಶಿಕ್ಷಕ ಚೈಲ್ ಸಿಂಗ್ ನಿಂದ ಹಲ್ಲೆಗೆ ಒಳಗಾಗಿ ಸಾವನ್ನಪ್ಪಿರುವ ದಲಿತ ವಿದ್ಯಾರ್ಥಿ ಇಂದ್ರ ಮೇಘವಾಲ್ ಮೃತನ ಕುಟುಂಬಕ್ಕೆ ಆರ್ಥಿಕ ನೆರವನ್ನು ನೀಡುಬೇಕು ಹಾಗೂ ಅವರ ಕುಟುಂಬಕ್ಕೆ ಸರ್ಕಾರಿ ಉದ್ಯೋಗವನ್ನು ನೀಡಬೇಕು ಮತ್ತು ಹಲ್ಲೆ ಮಾಡಿದ ಶಿಕ್ಷಕನನ್ನು ಗಡಿಪಾರು ಇಲ್ಲವೇ ಮರಣ ದಂಡನೆ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹರಾಜು ಮಾತನಾಡಿ, ವಿದ್ಯಾರ್ಥಿ ಇಂದ್ರ ಮೇಘವಾಲ್ ಮೇಲೆ ನಡೆದಂತಹ ಮಾರಣಾಂತಿಕ ಹಲ್ಲೆ ಮತ್ತು ಹತ್ಯೆಯನ್ನ ಖಂಡಿಸುತ್ತೇವೆ. ಇದಕ್ಕೆ ಕಾರಣನಾದ ಶಿಕ್ಷಕನನ್ನು ಗಡಿಪಾರು ಇಲ್ಲವೇ ಮರಣ ದಂಡನೆಗೆ ಗುರಿಪಡಿಸುವಂತೆ ಸರ್ಕಾರದ…

Read More

ಹಿಮಾಲಯದ ರಮ್ಯತೆಯ ಒಡಲಲ್ಲಿ ನೂರಾರು ವರ್ಷಗಳಿಂದಲೂ ಜೀವಿಸಿ, ಮೋಕ್ಷ- ಮುಕ್ತಿ, ಆತ್ಮ ಸಾಕ್ಷತ್ಕಾರದ ಹಾದಿ ತೋರುತ್ತಿದ್ದಾರೆ ಎಂದು ನಂಬಲಾಗಿರುವ ಮಹಾವತಾರ್ ಬಾಬಾಜಿ ಅವರ ಶಿಷ್ಯರ ಸಮಾಗಮ ಇಂದು ಚೆನ್ನೈನ ರಜಿನಿಕಾಂತ್ ನಿವಾಸದಲ್ಲಾಗಿದೆ. ಆಧ್ಯಾತ್ಮಿಕ ಸಾಧನೆಯಲ್ಲಿ ತೊಡಗಿಸಿಕೊಂಡಿರುವ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ರಜಿನಿಕಾಂತ್ ಮತ್ತು ಹಿಮಾಲಯದದ ಯೋಗಿ, ದಾರ್ಶನಿಕ ಶ್ರೀ ಎಂ ಇಬ್ಬರೂ ಭೇಟಿಯಾಗಿ ಕುಶಲೋಪರಿ ವಿಚಾರಿಸಿಕೊಂಡಿದ್ದಾರೆ.‌ ಬಾಬಾಜಿ ಅವರ ಅನುಯಾಯಿ ಆಗಿರುವ ರಜಿನಿಕಾಂತ್ ಆಗಾಗ್ಗೆ ಹಿಮಾಲಯದ ಗುಹೆಗಳಲ್ಲಿ ಧ್ಯಾನಕ್ಕೆ ಕೂರುವುದು ಎಲ್ಲರಿಗೂ ತಿಳಿದಿದ್ದೇ ಆಗಿದ್ದು ಯೋಗಿಗಳೊಟ್ಟಿಗೆ ಸಮಾಧಿ ಸ್ಥಿತಿಯಲ್ಲಿ ರಜಿನಿಕಾಂತ್ ಮಾತನಾಡುತ್ತಾರೆ ಎಂದು ಹೇಳಲಾಗುತ್ತದೆ. ಅದೇ ರೀತಿ, ಶ್ರೀ ಎಂ‌ ಅವರು ಕೇರಳದಲ್ಲಿ ಮುಸ್ಲಿಂ ಕುಟುಂಬದಲ್ಲಿ ಜನಿಸಿ ಬಳಿಕ ಪೂರ್ವಜನ್ಮದ ಆಧ್ಯಾತ್ಮಿಕ ಹಾದಿಯನ್ನು ಮುಂದುವರೆಸಿ ಹಿಂದೂ ಯೋಗಿಯಾಗಿದ್ದಾರೆ. ” ‘ಹಿಮಾಲಯದ ಗುರುವಿನ ಗರಡಿಯಲ್ಲಿ’ ಎಂಬ ತಮ್ಮ ಆತ್ಮಕಥೆಯಲ್ಲಿ ಹಿಮಾಲಯದಲ್ಲಾದ ನೂರಾರು ರೋಮಾಂಚಕ ಘಟನೆಗಳು, ಉಯ್ಯಾಲೆ ಮೇಲೆ ಕುಳಿತು ಸಾಯಿ ಬಾಬಾ ದರ್ಶನ ಕೊಡುವುದನ್ನು ದಾಖಲಿಸಿದ್ದಾರೆ. ಶ್ರೀ ಎಂ‌ ಹಾಗೂ ರಜಿನಿಕಾಂತ್…

Read More

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಕ್ಷಯ್‌ ಮಚ್ಚೀಂದ್ರ ಹಾಕೆ ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಉಡುಪಿ ಎಸ್ಪಿಯಾಗಿದ್ದ ಎನ್‌. ವಿಷ್ಣುವರ್ಧನ್‌ ಕಡತ ಹಾಗೂ ಲಾಠಿ ಹಸ್ತಾಂತರಿಸುವ ಮೂಲಕ ಅಧಿಕಾರ ಸ್ವೀಕರಿಸಿದರು. 2015 ರ‌ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿರುವ ಇವರು 2011 ರಲ್ಲಿ ಕಂಪ್ಯೂಟರ್ ಎಂಜಿನಿಯರಿಂಗ್ ಪದವೀಧರರಾಗಿದ್ದಾರೆ. ಮೂಲತಃ ಮಹಾರಾಷ್ಟ್ರ ದ ನಾಸಿಕ್ ಜಿಲ್ಲೆಯವರು. ಕಳೆದ ಎರಡೂವರೆ ವರ್ಷಗಳಿಂದ ಚಿಕ್ಕಮಗಳೂರಿನ ಎಸ್ಪಿಯಾಗಿದ್ದ ಅಕ್ಷಯ್ ಈ ಹಿಂದೆ ಗುಲ್ಬರ್ಗಾ ದಲ್ಲಿ ಎಎಸ್ಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರು ತಿಂಗಳ ಪ್ರೊಬೇಷನರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಉಡುಪಿ ಜಿಲ್ಲೆಯ ಬಗ್ಗೆ ಹೆಮ್ಮೆ ಇದೆ. ಪ್ರವಾಸೋದ್ಯಮ, ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಉಡುಪಿ ಸಾಂಸ್ಕೃತಿಕವಾಗಿ ಹೆಸರುಗಳಿಸಿದೆ ಎಂದರು. ಉಡುಪಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡುವುದು, ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸುವುದು, ಸಂಚಾರ ದಟ್ಟಣೆ ನಿಯಂತ್ರಿಸುವುದು ಮೊದಲ ಆದ್ಯತೆ ಆಗಿದೆ ಎಂದರು. ಉಡುಪಿ ಜಿಲ್ಲೆಗೆ 25 ವರ್ಷ ತುಂಬುತ್ತಿರುವ ಈ ಕಾಲಘಟ್ಟದಲ್ಲಿ ಬಹಳಷ್ಟು ಮಹತ್ವ ಪಡೆದುಕೊಂಡಿದೆ. ಈ ಸಂದರ್ಭದಲ್ಲಿ ನನಗೆ…

Read More

ಬೆಂಗಳೂರು : ಸಾಕಷ್ಟು ವಿವಾದಕ್ಕೆ ಕಾರಣವಾದ ಶಿವಾನಂದ ಸರ್ಕಲ್ ನ ಸ್ಟೀಲ್ ಬ್ರೀಡ್ಜ್, ಇದೀಗ ಕೆಲವೇ ದಿನಗಳಲ್ಲಿ ಓಪನ್ ಆಗಲಿದೆ.‌ ಇದಕ್ಕೆ ಮೂಹೂರ್ತ ಕೂಡಿ ಬಂದಿದ್ದು ಇದೇ ತಿಂಗಳ 30ಕ್ಕೆ ಎರಡೂ ಕಡೆಯ ಸಂಚಾರ ಪ್ರಾರಂಭವಾಗಲಿದೆ. ಕಳೆದ 5 ವರ್ಷಗಳಿಂದ ನೆನೆಗುದಿಗೆ ಬಿದ್ದಿದ ಫ್ಲೈ ಓವರ್ ಅಗಸ್ಟ್ 15 ರಂದು ಒನ್ ಸೈಡ್ ಓಪನ್ ಮಾಡಲಾಗಿದೆ. ಬಾಕಿ‌ಉಳಿದಿದ್ದ ಒಂದು ಪಥವೂ ಈ ತಿಂಗಳ ಅಂತ್ಯದೊಳಗೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪಾಲಿಕೆ ತಿಳಿಸಿದೆ. ಕಳೆದ 5 ವರ್ಷಗಳಿಂದ ನಗರದ ಶಿವಾನಂದ ಸರ್ಕಲ್ ಬಳಿ ಇರುವ ಸ್ಟೀಲ್ ಬ್ರೀಡ್ಜ್ ಕಾಮಗಾರಿ ಹಲವು ಕಾರಣಗಳಿಂದ ಸ್ಥಗಿತಗೊಂಡಿತ್ತು, ಮೂರು ಸಿಎಂಗಳು ಬಂದು ಹೋದರೂ. ಬ್ರಿಡ್ಜ್ ಮತ್ರ ಓಪನ್ ಅಗಿರಲ್ಲಿಲ್ಲ, ಕೆಲ ಕಾನೂನತ್ಮಕ ತೊಡಕಿನಿಂದ ಕಾಮಗಾರಿ ಕಳೆದ 5 ವರ್ಷಗಳಿಂದ ಆರಂಭವಾಗಿ ಅರ್ಧಕ್ಕೆ ನಿಂತಿತ್ತು. ಆದರೆ ಈಗ ನ್ಯಾಯಲಯದ ಅದೇಶದಂತೆ ಬ್ರೀಡ್ಜ್ ಗೆ ಮುಕ್ತಗೊಳಿಸಲಾಗಿದೆ. ಕಳೆದ ಸೋಮವಾರ ಒಂದು ಕಡೆ ಸಂಚಾರಕ್ಕೆ ಮೂಕ್ತಿ ನೀಡಲಾಗಿದೆ. ನಗರದ ನೆಹರು…

Read More

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಇತರ ಒಂಬತ್ತು ಸದಸ್ಯರೊಂದಿಗೆ ಬಿಜೆಪಿ ಪಕ್ಷವು ತನ್ನ ಸಂಸದೀಯ ಮಂಡಳಿಯನ್ನ ರಚಿಸಿದೆ. ನಿತಿನ್ ಗಡ್ಕರಿ ಮತ್ತು ಶಿವರಾಜ್ ಸಿಂಗ್ ಚೌಹಾಣ್ ಅವರನ್ನ ಬುಧವಾರ ಬಿಜೆಪಿಯ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಿಂದ ಕೈಬಿಡಲಾಗಿದ್ದು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಪಟ್ಟಿಯಲ್ಲಿ ಸೇರಿಸಲಾಗಿದೆ. ಸಂಸದೀಯ ಮಂಡಳಿಯ ಸದಸ್ಯರ ಪಟ್ಟಿ ಜಗತ್ ಪ್ರಕಾಶ್ ನಡ್ಡಾ (ಅಧ್ಯಕ್ಷ) ನರೇಂದ್ರ ಮೋದಿ ರಾಜನಾಥ್ ಸಿಂಗ್ ಅಮಿತ್ ಶಾ ಬಿ.ಎಸ್. ಯಡಿಯೂರಪ್ಪ ಸರ್ಬಾನಂದ ಸೋನೊವಾಲ್ ಕೆ ಲಕ್ಷ್ಮಣ್ ಇಕ್ಬಾಲ್ ಸಿಂಗ್ ಲಾಲ್ ಪುರ ಸುಧಾ ಯಾದವ್ ಬಿ.ಎಲ್. ಸಂತೋಷ್ (ಕಾರ್ಯದರ್ಶಿ) ಕೇಂದ್ರ ಚುನಾವಣಾ ಸಮಿತಿಯ ಸದಸ್ಯರು ಜಗತ್ ಪ್ರಕಾಶ್ ನಡ್ಡಾ (ಅಧ್ಯಕ್ಷ) ನರೇಂದ್ರ ಮೋದಿ ರಾಜನಾಥ್ ಸಿಂಗ್ ಅಮಿತ್ ಶಾ ಬಿ.ಎಸ್. ಯಡಿಯೂರಪ್ಪ ಸರ್ಬಾನಂದ ಸೋನೊವಾಲ್ ಕೆ ಲಕ್ಷ್ಮಣ್ ಇಕ್ಬಾಲ್ ಸಿಂಗ್ ಲಾಲ್ ಪುರ ಸುಧಾ ಯಾದವ್ ಸತ್ಯನಾರಾಯಣ್ ಜತಿಯಾ ಭೂಪೇಂದ್ರ ಯಾದವ್ ದೇವೇಂದ್ರ ಫಡ್ನವೀಸ್ ಬಿ.ಎಲ್.…

Read More

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೌರಾದಲ್ಲಿ ಧಾರುಣ ನಡೆದಿರುವುದು ಬೆಳಕಿಗೆ ಬಂದಿದೆ. ಹೌರಾ ನಗರದ ಉಲುಬೇರಿಯಾ ಮುನ್ಸಿಪಾಲಿಟಿಯ ಕಸದ ತೊಟ್ಟಿಯಲ್ಲಿ ಭ್ರೂಣಗಳು ಪತ್ತೆಯಾಗಿವೆ. ಸ್ಥಳೀಯರು ಕಸದಲ್ಲಿ ಭ್ರೂಣಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ 17 ಭ್ರೂಣಗಳನ್ನು ವಶಪಡಿಸಿಕೊಂಡಿದ್ದಾರೆ.ಅವುಗಳಲ್ಲಿ ಹತ್ತು ಹೆಣ್ಣು ಮತ್ತು ಏಳು ಗಂಡು ಎಂದು ತಿಳಿದುಬಂದಿದೆ. ಅವುಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಉಲುಬೇರಿಯಾದಲ್ಲಿ 30 ಖಾಸಗಿ ನರ್ಸಿಂಗ್ ಹೋಂಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಭ್ರೂಣಗಳನ್ನು ವೈದ್ಯಕೀಯ ತ್ಯಾಜ್ಯವಾಗಿ ಎಸೆಯಲಾಗಿದೆಯೇ ಅಥವಾ ಇನ್ನೇನಾದರೂ ಕಾರಣವೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು. ಘಟನೆಯ ಕುರಿತು ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಹೆಚ್ಚಿನ ವಿವರ ತಿಳಿಯುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಅಸ್ಸಾಂ:ವ್ಯಕ್ತಿಯೊಬ್ಬ ಸಹ ಗ್ರಾಮಸ್ಥರೊಬ್ಬರ ತಲೆ ಕಡಿದ ಬಳಿಕ  ಕತ್ತರಿಸಿದ ತಲೆಯನ್ನು ತೆಗೆದುಕೊಂಡು 25 ಕಿಲೋಮೀಟರ್ ದೂರದ ಪೊಲೀಸ್ ಠಾಣೆಗೆ ತೆರಳಿ ಶರಣಾಗಿರುವ ಘಟನೆ ಸೋನಿಪುರ ಜಿಲ್ಲೆಯಲ್ಲಿ ನಡೆದಿದೆ.ಮೃತ ವ್ಯಕ್ತಿಯನ್ನು ಹೇಮ್ರಾಮ್ ಎಂದು ಗುರುತಿಸಲಾಗಿದೆ. ಸ್ವಾತಂತ್ರ್ಯ ದಿನದಂದು ಸ್ಥಳೀಯವಾಗಿ ಫುಟ್ಬಾಲ್ ಪಂದ್ಯಗಳನ್ನು ಆಯೋಜಿಸಲಾಗಿತ್ತು. ಆದರೆ ಇಬ್ಬರು ಸ್ನೇಹಿತರು ಆ ಪಂದ್ಯದ ಮೇಲೆ ಹಣ ಮಿಲಾಯಿಸಿದರು. ಪಂದ್ಯದಲ್ಲಿ ಸೋತವರು ವಿಜೇತರಿಗೆ 500 ರೂ ಕೊಡಬೇಕು. ಈ ವೇಳೆ ಬೆಟ್ ಗೆದ್ದ ವ್ಯಕ್ತಿ ತನಗೆ 500 ಕೊಡುವಂತೆ ಕೇಳಿದನು. ಆದರೆ ಇನ್ನೊಬ್ಬ ವ್ಯಕ್ತಿ ಹಣ ನೀಡಲು ನಿರಾಕರಿಸಿದ್ದಾನೆ. ಆದರೆ ಪದೇ ಪದೇ ಬೆಟ್ಟಿಂಗ್ ಹಣ ಕೇಳಿದಾಗ ಕೋಪಗೊಂಡ ಆರೋಪಿಯು ತನ್ನ ಬಳಿಯಿದ್ದ ಮಚ್ಚಿನಿಂದ ಹೇಮ್ರಾಮ್ ಎಂಬ ವ್ಯಕ್ತಿಯ ತಲೆಯನ್ನು ಕಡೆದಿದ್ದಾನೆ. ತಲೆಯೊಂದಿಗೆ 25 ಕಿಲೋಮೀಟರ್ ನಡೆದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಚಿತ್ರ ನಟ ರಾಘವೇಂದ್ರ ರಾಜ್‌ ಕುಮಾರ್, ಅಶ್ವಿನಿ ಪುನೀತ್ ರಾಜ್‌ ಕುಮಾರ್ ಸೇರಿದಂತೆ ರಾಜ್‌ ಕುಮಾರ್ ಕುಟುಂಬದ ಸದಸ್ಯರು ಬೆಂಗಳೂರಿನ ರೇಸ್‌ ಕೋರ್ಸ್ ನಿವಾಸದಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ವರನಟ ಡಾ. ರಾಜ್‌ ಕುಮಾರ್ ಸಮಾಧಿ ಅಭಿವೃದ್ಧಿಗೆ ಸಂಬಂಧಪಟ್ಟಂತೆ ರಾಘವೇಂದ್ರ ರಾಜ್‌ ಕುಮಾರ್ ಅವರು ಸಿಎಂ ಜೊತೆ ಚರ್ಚೆ ನಡೆಸಿದರು. ಇದಕ್ಕೆ ಸಂಬಂಧಪಟ್ಟಂತೆ ಸಿದ್ಧಪಡಿಸಲಾಗಿರುವ ಯೋಜನೆಯ ಪಿಪಿಟಿಯನ್ನು ಸಿಎಂ ಬೊಮ್ಮಾಯಿ ಅವರು ವೀಕ್ಷಣೆ ಮಾಡಿದರು. ಈ ಕುರಿತು ಸಿಎಂ ಸಂಬಂಧ ಪಟ್ಟ ಅಧಿಕಾರಗಳ ಜೊತೆ ಚರ್ಚೆ ಮಾಡಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More