Subscribe to Updates
Get the latest creative news from FooBar about art, design and business.
- ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
- ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
- ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
- ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್ ಬಾಲ್ ಬ್ಯಾಟ್ ನಿಂದ ಹಲ್ಲೆ; ಎಫ್ ಐಆರ್ ದಾಖಲು
- ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮೊರೆ ಹೋದ ಸಿಎಂ ಡಿಕೆಶಿ
- KPSC ಅಕ್ರಮ ಹಾಗೂ ಬಿಡದಿ ಟೌನ್ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
- ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
Author: admin
ಬೆಂಗಳೂರು, ಸೆಪ್ಟೆಂಬರ್ 05: ಬೆಂಗಳೂರಿನಲ್ಲಿ ಹಲವು ದಿನಗಳಿಂದ ನಿತ್ಯ ತೀವ್ರ ಮಳೆ ಸುರಿಯುತ್ತಿದ್ದು ಸಂಚಾರ ವ್ಯವಸ್ಥೆ ತೀರ ಹದಗೆಟ್ಟಿದೆ. ನಿನ್ನೆ ರಾತ್ರಿಯಿಂದ ಬೆಳಗಿನ ಜಾವದವರೆಗೆ ಎಡಬಿಡದೆ ಸುರಿದ ಮಳೆಯಿಂದಾಗಿ ರಸ್ತೆಗಳು ನದಿಗಳಾಗಿ ಮಾರ್ಪಟ್ಟಿವೆ. ರಸ್ತೆಗಳಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ಅಡೆತಡೆ ಉಂಟಾಗಿದೆ. ಇದರಿಂದಾಗಿ ಜನ ಕಚೇರಿಗಳಿಗೆ ತೆರಳಲು ಪರದಾಡುವಂತ ಸ್ಥಿತಿ ನಿರ್ಮಾಣವಾಗಿತ್ತು. ಅಲ್ಲಲ್ಲಿ ಸಂಚಾರ ಸಾಧ್ಯವಾಗದೇ ವಾಹನಗಳು ನಿಂತಿರುವುದು ಹಾಗೂ ನೀರಿನಲ್ಲಿ ತಳ್ಳುತ್ತಿರುವ ದೃಶ್ಯಗಳು ಕಂಡುಬಂದಿದೆ. ಇಂದು ಬೆಳಗ್ಗೆ ಬೆಂಗಳೂರಿನ ಮಾರತ್ತಹಳ್ಳಿ-ಸಿಲ್ಕ್ ಬೋರ್ಡ್ ಜಂಕ್ಷನ್ ರಸ್ತೆಯಲ್ಲಿ ತೀವ್ರ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡ ದೃಶ್ಯಗಳು ಕಂಡು ಬಂದಿವೆ. ಮಾತ್ರವಲ್ಲದೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿರುವುದು ಕಂಡುಬಂದಿದೆ. ವಾಹನ ಸವಾರರು ನಿಗದಿತ ಸಮಯಕ್ಕೆ ಕಚೇರಿಗಳಿಗೆ ತೆರಳಾಗದೆ ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿದ್ದಾರೆ. ಇನ್ನೂ ಬೆಂಗಳೂರು ವಿಮಾನ ನಿಲ್ದಾಣದಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿಮಾನ ನಿಲ್ದಾಣದಲ್ಲಿ ಮಳೆ ನೀರು ಹರಿವು ಹೆಚ್ಚಾದ್ದರಿಂದ ಪ್ರಯಾಣಿಕರು ಮನೆಗಳಿಗೆ ಹಾಗೂ ವಿಮಾನ ನಿಲ್ದಾಣಕ್ಕೆ ತೆರಳು ತೊಂದರೆ ಅನುಭವಿಸಿದ್ದಾರೆ. ವಿಮಾನನಿಲ್ದಾಣದಲ್ಲಿ…
ಶಿಕ್ಷಕರ ದಿನವನ್ನು ಪ್ರತಿ ವರ್ಷ ಸೆಪ್ಟೆಂಬರ್ 5 ರಂದು ಆಚರಿಸಲಾಗುತ್ತದೆ. ಭಾರತದ ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಸಂದರ್ಭದಲ್ಲಿ ಶಿಕ್ಷಕರಿಗೆ ಗೌರವವನ್ನು ತೋರಿಸಲು ಸೆಪ್ಟೆಂಬರ್ 5 ರಂದು ಭಾರತದಾದ್ಯಂತ ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ. ಶಿಕ್ಷಕರು ನಮಗೆ ನಿಜವಾದ ಜೀವನ ವಿಧಾನವನ್ನು ಕಲಿಸುತ್ತಾರೆ. ಸರಿಯಾದ ಮಾರ್ಗವನ್ನು ಅನುಸರಿಸಲು ನಿಮ್ಮನ್ನು ಪ್ರೇರೇಪಿಸುತ್ತಾರೆ. ಜೀವನದಲ್ಲಿ ಪೋಷಕರ ಸ್ಥಾನವನ್ನು ಯಾರೂ ತೆಗೆದುಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ ಅವರು ನಮ್ಮನ್ನು ಈ ವರ್ಣರಂಜಿತ ಸುಂದರ ಜಗತ್ತಿನಲ್ಲಿ ತಂದವರು. ನಮ್ಮ ತಂದೆ ತಾಯಿಗಳು ಜೀವನದ ಮೊದಲ ಗುರುಗಳಾದರೆ ಎರಡನೇ ಸ್ಥಾನವನ್ನು ಶಿಕ್ಷಕರಿಗೆ ನೀಡಲಾಗುತ್ತದೆ. ಪ್ರತಿಯೊಬ್ಬರ ಜೀವನದಲ್ಲಿ ಗುರುವಿಗೆ ಹೆಚ್ಚಿನ ಮಹತ್ವವಿದೆ. ಸಮಾಜದಲ್ಲಿ ಅವರಿಗೆ ವಿಶೇಷ ಸ್ಥಾನವಿದೆ. ಸರ್ವಪಲ್ಲಿ ರಾಧಾಕೃಷ್ಣನ್ ಶಿಕ್ಷಣದಲ್ಲಿ ಅಪಾರ ನಂಬಿಕೆ ಇಟ್ಟವರು. ಅವರು ಮಹಾನ್ ತತ್ವಜ್ಞಾನಿ ಮತ್ತು ಶಿಕ್ಷಕರಾಗಿದ್ದರು. ಅವರಿಗೆ ಬೋಧನೆಯಲ್ಲಿ ಆಳವಾದ ಪ್ರೀತಿ ಇತ್ತು. ಆದರ್ಶ ಶಿಕ್ಷಕನ ಎಲ್ಲಾ ಗುಣಗಳನ್ನು ಹೊಂದಿದ್ದರು. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ತಮ್ಮ ಜನ್ಮದಿನದ ಸಂದರ್ಭದಲ್ಲಿ ಶಿಕ್ಷಕರಿಗೆ…
ಬೆಳಗಾವಿ: ಬುದ್ಧ, ಬಸವ, ಅಂಬೇಡ್ಕರ್, ಏಸುಕ್ರಿಸ್ತ ಮುಂತಾದ ಮಹನೀಯರು ಜಗತ್ತಿಗೆ ಶಾಂತಿ, ಪ್ರೀತಿ, ವಾತ್ಸಲ್ಯಗಳ ಮೂಲಕ ನಾವೆಲ್ಲರೂ ಭಾರತೀಯ ಮಕ್ಕಳು ಎಂದು ತೋರಿಸಿಕೊಟ್ಟಿದ್ದಾರೆ. ಇಂದು ಈ ಎಲ್ಲ ಮಹನೀಯರ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಜೀವನಕ್ಕೆ ಒಂದು ಅರ್ಥ ಸಿಗಲಿದೆ ಎಂದು ಬೆಳಗಾವಿ ಗ್ರಾಮಿಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ಗಣೇಶಪುರ ಶಿವಂ ನಗರದಲ್ಲಿರುವ ಸೆಂಟ್ ಜಾನ್ ಬಾಪ್ಟಿಸ್ಟ್ ಚರ್ಚ್ ಸುತ್ತಮುತ್ತಲಿನ ರಸ್ತೆಗಳನ್ನು ನಿರ್ಮಾಣ ಮಾಡಿಕೊಟ್ಟ ಹಿನ್ನಲೆಯಲ್ಲಿ ಚರ್ಚಿನ ಪದಾಧಿಕಾರಿಗಳಿಂದ ಸನ್ಮಾನ ಸ್ವೀಕರಿಸಿ ಭಾನುವಾರ ಮಾತನಾಡಿದರು. ದೇವನೊಬ್ಬ ನಾಮ ಹಲವು ಎನ್ನುವ ಹಾಗೆ, ವಿವಿಧ ಧರ್ಮೀಯರು ತಮ್ಮದೇ ಆದ ಪದ್ಧತಿಯಲ್ಲಿ ದೇವರನ್ನು ಸ್ಮರಿಸುತ್ತಾರೆ. ಆದರೆ ಎಲ್ಲ ಧರ್ಮಗಳ ಸಾರವೂ ಒಂದೇ ಆಗಿದ್ದು ಸರ್ವ ಧರ್ಮಗಳನ್ನು ಗೌರವಿಸುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು. ಇದೇ ವೇಳೆ ಚರ್ಚ್ ವತಿಯಿಂದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ…
ಹುಬ್ಬಳ್ಳಿ: ನವೆಂಬರ್ 23ರಂದು ಸರ್ವೋಚ್ಛ ನ್ಯಾಯಾಲಯದಲ್ಲಿ ಬರುವ ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ವಿಚಾರಣೆಗೆ ಬರಲಿದೆ. ರಾಜ್ಯದ ಪರವಾಗಿ ವಾದ ಮಂಡಿಸಲು ಅನುಭವಿ ಹಾಗೂ ಹಿರಿಯ ಕಾನೂನು ತಜ್ಞರ ತಂಡ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿವಿವಾದ ಕುರಿತು ಅಡ್ವಕೇಟ್ ಜನರಲ್ ಅವರೊಂದಿಗೆ ಚರ್ಚಿಸಿ , ಸಾಕಷ್ಟು ಅಧ್ಯಯನ ಸಹ ನಡೆಸಲಾಗಿದೆ. ವಾದ ಮಂಡನೆಗೆ ಹಿರಿಯ,ಅನುಭವಿ ವಕೀಲರನ್ನು ನೇಮಿಸಲು ಸೂಚಿಸಲಾಗಿದೆ ಎಂದರು. ಪೊಲೀಸ್ ಇಲಾಖೆಗೆ ಸಂಬಂಧಿಸಿದ ಮಾತನಾಡಿದ ಅವರು, ರಾಘವೇಂದ್ರ ಔರಾದ್ಕರ್ ವರದಿ ಅನುಷ್ಠಾನಗೊಳ್ಳುತ್ತಿದೆ. ಸಿಬ್ಬಂದಿಯೂ ಹೆಚ್ಚಿನ ಕೌಶಲ್ಯ ಬೆಳೆಸಿಕೊಳ್ಳಬೇಕು. ಕಂಪ್ಯೂಟರ್ ಶಿಕ್ಷಣ ಕಡ್ಡಾಯಗೊಳಿಸಲಾಗಿದೆ. ಎಲ್ಲ ಇಲಾಖೆಯ ಸಿಬ್ಬಂದಿಗೂ ಇದು ಕಡ್ಡಾಯವಾಗಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ನಗರದಲ್ಲಿ ಎರಡು ವರ್ಷಗಳ ನಂತರ ಗಣೇಶೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಬೆಳಗಾವಿ ಜನತೆಗೆ ಗಣೇಶ್ ಉತ್ಸವ ಒಂದು ವಿಶೇಷ ಹಬ್ಬವಾಗಿದ್ದು, ಎಲ್ಲಿ ಎಲ್ಲಾ ಸಮುದಾಯದ ಜನ ಸೇರಿ ಈ ಉತ್ಸವವನ್ನು ಆಚರಣೆ ಮಾಡುತ್ತಾರೆ. ಬೆಳಗಾವಿ ಗಣೇಶ್ ಉತ್ಸವ ತನ್ನದೇ ಆದ ಇತಿಹಾಸವನ್ನು ಹೊಂದಿದೆ. 1906ರಲ್ಲಿ ಸ್ವತಂತ್ರ ಹೋರಾಟಗಾರರಾದ ಬಾಲ್ ಗಂಗಾಧರ್ ತಿಲಕ್ ಅವರು ಸ್ವತಂತ್ರದ ಸಂಗ್ರಾಮದಲ್ಲಿ ಸಾರ್ವಜನಿಕರು ಭಾಗವಹಿಸಲು ಮತ್ತು ದೇಶವನ್ನು ಸ್ವಾತಂತ್ರ್ಯಗೊಳಿಸಲು ಧಾರ್ಮಿಕ ಆಚರಣೆ ಮತ್ತು ಹಬ್ಬಗಳಿಂದ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಹಮ್ಮಿಕೊಂಡು ಅದರ ಅಂಗವಾಗಿ ಬೆಳಗಾವಿಯಲ್ಲಿ ಗಣೇಶ್ ಉತ್ಸವ ಪ್ರಾರಂಭಿಸಿದರು. ಈಗ 125 ವರ್ಷಗಳ ಕಳೆದು ತನ್ನ ಇತಿಹಾಸ ಪ್ರದರ್ಶನ ಮಾಡುತ್ತಾ ಇದೆ. ಈ ಸಂದರ್ಭದಲ್ಲಿ ಬೆಳಗಾವಿ ಪ್ರತಿ ಗಲ್ಲಿಗಳಲ್ಲಿ ಸಾರ್ವಜನಿಕ ಗಣಪತಿ ಮಂಟಪಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹತ್ತು ದಿನಗಳ ಕಾಲವರೆಗೆ ಈ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತಾ ಇದ್ದಾರೆ. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ವಾಡ್೯ ನಂ 44 ಸೇವಕರಾದ…
ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವಂತ ಬಿಪಿಎಲ್ ಪಡಿತರ ಚೀಟಿದಾರ ಎಸ್ಸಿ, ಎಸ್ಟಿ ಸಮುದಾಯದವರಿಗೆ 75 ಯುನಿಟ್ ಉಚಿತ ವಿದ್ಯುತ್ ನೀಡೋದಾಗಿ ಘೋಷಣೆ ಮಾಡಿತ್ತು. ಆದರೆ ಈಗ ಯೋಜನೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಇಂಧನ ಇಲಾಖೆ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ 75 ಯುನಿಟ್ ಮಾಸಿಕ ವಿದ್ಯುತ್ ಅನ್ನು ಉಚಿತವಾಗಿ ನೀಡುವುದಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿತ್ತು ಎಂದಿದ್ದಾರೆ. ಈ ಯೋಜನೆಯ ಸಂಬಂಧ ಸರ್ಕಾರದಿಂದ ಹೊರಡಿಸಿದ್ದಂತ ಸುತ್ತೋಲೆಯನ್ನು, ಈ ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂಬುದಾಗಿ ಆದೇಶಿಸಿದ್ದಾರೆ. ಈ ಮೂಲಕ ಎಸ್ಸಿ, ಎಸ್ಟಿ ಸಮುದಾಯದವರಿಗೆ ಬಿಗ್ ಶಾಕ್ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪಾಲ್ಘರ್: ಟಾಟಾ ಸಮೂಹದ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಪಾಲ್ಘರ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ಮಾಹಿತಿಯನ್ನು ಪಾಲ್ಘರ್ ಜಿಲ್ಲಾ ಪೋಲಿಸ್ ಅಧೀಕ್ಷಕರು ನೀಡಿದ್ದಾರೆ. ಸೈರಸ್ ಪಲ್ಲೋಂಜಿ ಮಿಸ್ತ್ರಿ ಭಾರತೀಯ ಮೂಲದ ಐರಿಷ್ ಉದ್ಯಮಿಯಾಗಿದ್ದವರು. ಪಾಲ್ಘರ್ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸೈರಸ್ ಮಿಸ್ತ್ರಿ ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದಾಗ ಈ ದುರಂತ ಘಟನೆ ನಡೆದಿದೆ ಎಂದು ಹೇಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಧುಗಿರಿ: ತಾಲೂಕಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಾನಿಗೀಡಾಗಿರುವ ಸೇತುವೆ ಹಾಗೂ ರಸ್ತೆಗಳ ದುರಸ್ಥಿಗೆ ಅಧಿಕಾರಿಗಳಿಂದ ವರದಿ ಪಡೆದುಕೊಂಡು ಶೀಘ್ರ ನೆರವು ನೀಡಲಾಗುವುದು ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ತಾಲೂಕಿನ ಕಸಬಾ ಬೆಲ್ಲದಮಡುಗು ಕೆರೆ ಕೋಡಿ ಒಡೆದ ಸ್ಥಳಕ್ಕೆ ಭೇಟಿ ನೀಡಿದ ಸಚಿವರು ಪಟ್ಟಣದ ಚೊಳೇನಹಳ್ಳಿ ಕೆರೆ ಕೋಡಿ ದುರಸ್ಥಿ ಕಾರ್ಯ ಹಾಗೂ ಕಾಳೇನಹಳ್ಳಿಯ ಬೃಹತ್ ಸೇತುವೆಗೆ ಆದ ಹಾನಿಯನ್ನು ಪರಿಶೀಲಿಸಿದ ಸಚಿವರು ಬಳಿಕ ಇಮ್ಮಡಗೊಂಡನಹಳ್ಳಿಯಲ್ಲಿ ಉಂಟಾದ ನೆರೆ ಹಾನಿಯನ್ನು ವೀಕ್ಷಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಣ್ಣ ನೀರಾವರಿ ಇಲಾಖೆಯ ಎಲ್ಲ ಕೆರೆಗಳು ತುಂಬಿದ್ದು, ನದಿಗಳಿಂದ ಹೆಚ್ಚುವರಿ ನೀರು ಹರಿದ ಪರಿಣಾಮ, ಕೆಲವೆಡೆ ಸೇತುವೆ ಹಾಗೂ ರಸ್ತೆಗಳಿಗೆ ಹಾನಿಯಾಗಿದೆ. ಇದಕ್ಕಾಗಿ ಅಗತ್ಯ ನೆರವನ್ನು ಅಧಿಕಾರಿಗಳ ವರದಿ ಬಂದಾಕ್ಷಣ ಬಿಡುಗಡೆ ಮಾಡಲಾಗುವುದು ಎಂದರು. ಸಣ್ಣ ನೀರಾವರಿ ಇಲಾಖೆಯ ಕೆರೆಗಳೆಲ್ಲ ತುಂಬಿದ್ದು, ಬೆಲ್ಲದಮಡುಗು ಕೆರೆ ಹೊರತು ಪಡಿಸಿ ಉಳಿದವು ಸುಭದ್ರವಾಗಿವೆ. ಬೆಲ್ಲದಮಡುಗು ಕೆರೆ ಕೋಡಿ, ಚೊಳೇನಹಳ್ಳಿ ಕೆರೆ ಕೋಡಿಯ ದುರಸ್ಥಿಕಾರ್ಯವನ್ನು ಶೀಘ್ರವಾಗಿ ಕೈಗೊಂಡು ಪೂರ್ಣಗೊಳಿಸಲು…
ಸರಗೂರು: ತಾಲ್ಲೂಕಿನ ನುಗು ಜಲಾಶಯದ ಹಿನ್ನೀರಿನಲ್ಲಿ ಅಕ್ರಮವಾಗಿ ಮೀನು ಹಿಡಿಯುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿದ್ದು, ಮೀನುಗಾರಿಕಾ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ನ್ಯಾಯಾಲಯದ ತಡೆಯಾಜ್ಞೆ ಉಲ್ಲಂಘಿಸಿ ಅಕ್ರಮವಾಗಿ ಮೀನು ಹಿಡಿಯಲಾಗುತ್ತಿದೆ. ಈ ಬಗ್ಗೆ ಕಾನೂನು ಕ್ರಮಕೈಗೊಳ್ಳಬೇಕಾದ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ನುಗು ಜಲಾಶಯದ ಮೀನಾಪಾಶುವಾರು ಹಕ್ಕಿನ ವಿಲೇವಾರಿ ಸಂಬಂಧ ಉಚ್ಚ ನ್ಯಾಯಾಲಯದಲ್ಲಿ ದಾವೆ ದಾಖಲಾಗಿದ್ದು, ನ್ಯಾಯಾಲಯ ಅಂತಿಮ ತೀರ್ಪು ನೀಡುವವರೆಗೂ ಮೀನುಗಾರಿಕೆ ನಡೆಸುವುದು ಕಾನೂನು ಬಾಹಿರವಾಗಿದೆ. ಈ ಬಗ್ಗೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ಇದ್ದರೂ, ಸೆಪ್ಟಂಬರ್ 1ರಂದು ಸಂಜೆ ಸುಮಾರು 30 ದೋಣಿಗಳಲ್ಲಿ ಬಲೆ ಹಾಕಿರುವ ಆರೋಪಿಗಳು, ಸೆಪ್ಟಂಬರ್ 2ರಂದು ಬರೋಬ್ಬರಿ 3 ಟನ್ ನಷ್ಟು ಮೀನುಗಳನ್ನು ರಾಜಾರೋಷವಾಗಿ ಹಿಡಿದು ಸಾಗಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ನ್ಯಾಯಾಲಯದ ಆದೇಶ ಧಿಕ್ಕರಿ ಮೀನು ಹಿಡಿಯುತ್ತಿರುವುದನ್ನು ಕಂಡು ವಿಚಾರಿಸಲು ಹೋದವರ ಮೇಲೆ ದಬ್ಬಾಳಿಕೆ ನಡೆಸಲಾಗಿದೆ ಎನ್ನುವ ಆರೋಪ ಕೂಡ ಕೇಳಿ ಬಂದಿದೆ. ಇಷ್ಟೆಲ್ಲ ನಡೆದರೂ ಮೀನುಗಾರಿಕೆ ಇಲಾಖೆ ಅಧಿಕಾರಿಗಳು,…
ಹಿರಿಯೂರು: ಏಷ್ಯಾದಲ್ಲಿಯೇ ಅತ್ಯಂತ ದೊಡ್ಡ ಅಣೆಕಟ್ಟು ಎಂದು ಕರೆಸಿಕೊಳ್ಳುವ ವಾಣಿ ವಿಲಾಸ ಸಾಗರ 88 ವರ್ಷಗಳ ನಂತರ ಐತಿಹಾಸಿಕ 2ನೇ ಬಾರಿಗೆ ಗುರುವಾರ ರಾತ್ರಿ ಕೋಡಿ ಬೀಳುವ ಮೂಲಕ ಇತಿಹಾಸ ಸೃಷ್ಟಿಸಿದೆ. ಈ ಸಂದರ್ಭದಲ್ಲಿ ಮೈಸೂರು ಮಹಾರಾಜರ ಕೊಡುಗೆಯನ್ನು ಸ್ಮರಿಸಬೇಕಿದೆ ಎಂದು ಮಾಜಿ ಶಾಸಕರಾದ ಡಿ.ಸುಧಾಕರ್ ಹೇಳಿದರು. ವಿಲಾಸ ಸಾಗರಕ್ಕೆ ಗಂಗಾ ಪೂಜೆ ಸಲ್ಲಿಸಿದ ಮಾತನಾಡಿದ ಅವರು, ವಾಣಿ ವಿಳಾಸ ಸಾಗರ ಕೋಡಿ ಹರಿಯುವ ಮೂಲಕ ಚಿತ್ರದುರ್ಗ ಜಿಲ್ಲೆಯ ಜನತೆಯ ಮೊಗದಲ್ಲಿ ಹೊಸ ಚೈತನ್ಯ ಮೂಡಿಸಿದೆ ಎಂದರು. ಈ ಜಿಲ್ಲೆಗೆ ಭದ್ರಾ ಮೇಲ್ದಾಂಡನೆ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಜಿಲ್ಲೆಯ ರೈತ ಸಂಘಟನೆಗಳು ಸೇರಿದಂತೆ ಹಲವಾರು ಸಂಘಟನೆಗಳು ಶ್ರಮಿಸಿದ್ದವು. ಕೋದಂಡರಾಮ ಅವರು ಭದ್ರಾ ಮೇಲ್ದಾಂಡ ಯೋಜನೆಯನ್ನು ಕಾರ್ಯರೂಪಕ್ಕೆ ತರುವಲ್ಲಿ ಶ್ರಮಿಸಿದ್ದರು ಎಂದು ಇದೇ ವೇಳೆ ಸುಧಾಕರ್ ತಿಳಿಸಿದರು. ಹಿರಿಯೂರು ನಗರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ.ರಮೇಶ್ ಮಾತನಾಡಿ, ಬರದ ನಾಡಾಗಿದ್ದ ಚಿತ್ರದುರ್ಗ ಜಿಲ್ಲೆಯು ಇಂದು ಹಚ್ಚ ಹಸಿರಿನ ಕ್ರಾಂತಿಯಿಂದ ಕೂಡಿರಲು ಕಾರಣಕರ್ತರಾದ…