Author: admin

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಉಪನೋಂದಣಿ ಕಚೇರಿಯಲ್ಲಿ ಸ್ಟಾಂಪ್ ವೆಂಡರ್ ಗಳದ್ದೆ ಹಾವಳಿಯಾಗುತ್ತಿದ್ದು ಜನ ಸಾಮಾನ್ಯರ ಬಳಿ ಹಣವನ್ನು ದೋಚಲಾಗುತ್ತಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಪ್ರತಿದಿನ ಹಿರಿಯೂರು ತಾಲ್ಲೂಕಿನ ಉಪನೋಂದಣಿ ಕಛೇರಿಗೆ ಸಾವಿರಾರು ಜನರು ತಮ್ಮ ಕೆಲಸಗಳಿಗಾಗಿ ಆಗಮಿಸುತ್ತಾರೆ.  ಆದರೆ ಇಲ್ಲಿನ ಸ್ಟಾಂಪ್ ವೆಂಡರ್ ಗಳು ಉಪನೋಂದಣಿ ಕಛೇರಿಗೆ ಬರುವ ಸಾಮಾನ್ಯ ಜನರನ್ನು ಟಾರ್ಗೆಟ್ ಮಾಡಿ ಅವರಿಂದ ಹಣ ಸುಳಿಗೆ ಮಾಡಲಾಗುತ್ತಿದೆ. ಈ ಘಟನೆಗಳನ್ನು ಸರ್ಕಾರಿ ಆಡಳಿತ ಮಂಡಳಿ ಅಧಿಕಾರಿಗಳು ಕಂಡೂ ಕಾಣದಂತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಿರಿಯೂರು ತಾಲ್ಲೂಕಿನ ಉಪನೋಂದಣಿ ಕಛೇರಿಯಲ್ಲಿ ಎಲ್ಲೆಂದರಲ್ಲಿ ಬರಿ ಸ್ಟಾಂಪ್ ವೆಂಡರ್ ಹೆಸರನ್ನು ಬಳಸಿ‌ ಅಧಿಕಾರಿಗಳಿಗೆ ಹಣ ನೀಡಿದರೆ ಮಾತ್ರವೇ ಪತ್ರಗಳು ಸಿಗುತ್ತವೆ ಎನ್ನಲಾಗುತ್ತಿದೆ. ಸಾರ್ವಜನಿಕರ ಹಣದೋಚುತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.   ಇಂದಿನ ದಿನಗಳಲ್ಲಿ ಎಲ್ಲವೂ ಆನ್ ಲೈನ್ ಆಗಿರುವುದರಿಂದ ಸ್ಟಾಂಪ್ ವೆಂಡರ್ ಗಳ ಅವಶ್ಯಕತೆ ಸಹ ಬೇಕಾಗಿಲ್ಲ. ಆದರೆ ಇಲ್ಲಿ ಅಧಿಕಾರಿಗಳು ಸಹ ಸ್ಟಾಂಪ್…

Read More

ತುಮಕೂರು: ಭೂಮಿ ಮತ್ತು ವಸತಿ ಹೋರಾಟ ಸಮಿತಿ ಮತ್ತು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ತುಮಕೂರು ಜಿಲ್ಲಾ ಘಟಕ ಹಂದ್ರಾಳ್ ನಾಗಭೂಷಣ್ ಅವರ ನೇತೃತ್ವದಲ್ಲಿ ಭೂಮಿ ವಸತಿಗಾಗಿ ಅಹೋರಾತ್ರಿ ಧರಣಿಯನ್ನು ಮಾರ್ಚ್ 21 ರಿಂದ ಸತತವಾಗಿ ನಡೆಸಿಕೊಂಡು ಬರುತ್ತಿದ್ದು, ಧರಣಿ  ನಡೆಯುವ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭೇಟಿಯಾಗಿ ನನೆಗುದಿಗೆ ಬಿದ್ದಿರುವ ಭೂಮಿ ಮತ್ತು ವಸತಿ ಕಡತಗಳ ಪರಿಶೀಲನೆ ನಡೆಸಿ ಆಡಳಿತಾತ್ಮಕವಾಗಿ ಆಗಬೇಕಾದ ಎಲ್ಲಾ ಬೇಡಿಕೆಗಳನ್ನು ಅತಿ ಶೀಘ್ರದಲ್ಲಿ ಜಿಲ್ಲಾಡಳಿತವು ಮಾಡಿ ಕೊಡುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿ ಧರಣಿ ವಾಪಸ್ ಪಡೆಯುವಂತೆ ಮನವಿ ಮಾಡಿದರು. ಇದಕ್ಕೆ ಒಪ್ಪದ ಮುಖಂಡರಾದ  ಹಂದ್ರಾಳ್ ನಾಗಭೂಷಣ್ ಅವರು, ಈ ಹಿಂದೆ ಜಿಲ್ಲಾಧಿಕಾರಿಗಳು ನೀಡಿರುವ ಭೂಮಿಗೆ ಹಕ್ಕು ಪತ್ರ ನೀಡಲು  ಆದೇಶದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದ, ಈ ಹಿಂದಿನ ಬ್ಯಾಲ್ಯ ಗ್ರಾಮ ಪಂಚಾಯ್ತಿಯ ಪಿಡಿಓ ಸಂತೋಷ್ ಸಿಂಗ್, ಹಾಲಿ ಪಿಡಿಓ ಮುದ್ದುರಾಜ್ ರವರನ್ನು ಕೂಡಲೇ ಅಮಾನತು ಗೊಳಿಸಬೇಕು. ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ…

Read More

ಕುಣಿಗಲ್:  ತಾಲ್ಲೂಕಿನ ಕೊತ್ತಗೆರೆ ಹೋಬಳಿ ವ್ಯಾಪ್ತಿಯ ಮಡಿಕೆಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ಗುರುವಾರ ಯುತ್ ಕಾಂಗ್ರೆಸ್ ಉಪಾಧ್ಯಕ್ಷ ಅರುಣ್ ನೇತೃತ್ವದಲ್ಲಿ ರಾಯೊಗೊನಹಳ್ಳಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರಿಗಳು ನರೇಗಾ ಯೋಜನೆ ಅಡಿಯಲ್ಲಿ ನಕಲಿ ಜಾಬ್ ಕಾರ್ಡ್ ಆಗೂ ನಕಲಿ ದಾಖಲೆ ಸೃಷ್ಟಿಸಿ ಕಾಮಗಾರಿ ನಡೆಸದೆ ಅಕ್ರಮವಾಗಿ ಬಿಲ್ ಮಾಡುವ ಮೂಲಕ ಅಧಿಕಾರಿಗಳು ಕರ್ತವ್ಯಲೋಪ ಎಸಗಿದ್ದಾರೆ ಹಾಗೂ ಮಡಿಕೆಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳಪೆ ಕಾಮಗಾರಿಯ ವಿರುದ್ದ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಲಿಖಿತ ದೂರು ನೀಡಿದ್ದರೂ ಯಾವುದೆ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ರಾಯಗೋನಹಳ್ಳಿ ಗ್ರಾಮದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರ ಅನುಮತಿ ಇಲ್ಲದೆ ಗ್ರಾಮದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಗ್ರಾಮದಲ್ಲಿ ನರೇಗಾ ಯೊಜನೆಯಡಿಯಲ್ಲಿ ಕೆಲಸ ಮಾಡಬೇಕಾದರೆ ಗ್ರಾಮ ಪಂಚಾಯಿತಿ ಸದಸ್ಯರ ಅನುಮತಿ ಪಡೆದು ಕೆಲಸ ಮಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಗ್ರಾಮ…

Read More

ತುಮಕೂರು: ತಾಲ್ಲೂಕು ಅಜ್ಜಿಪ್ಪನಹಳ್ಳಿ ಸರ್ವೇ ನಂಬರ್ ನಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲುಗಣಿಗಾರಿಕೆ ಸಂಬಂಧಪಟ್ಟ ಭೂ ದಾಖಲೆಗಳ ನೀಡಲು 5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಲಕ್ಷ್ಮಯ್ಯ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅಕ್ರಮ ಗಣಿಗಾರಿಕೆಯ ವಿರುದ್ಧ ಭ್ರಷ್ಟಾಚಾರದ ವಿರುದ್ಧ ನಿರಂತರವಾಗಿ ಹೋರಾಟ ಮಾಡುತ್ತಿರುವ ಸಾಮಾಜಿಕ ಕಾರ್ಯಕರ್ತ ಪತ್ರಕರ್ತ ಟೈಗರ್ ನಾಗ್  ಜೆಟ್ಟಿ ಅಗ್ರಹಾರ ನಾಗರಾಜು ಅವರ ದೂರಿನನ್ವಯ ರೆಡ್ ಹ್ಯಾಂಡ್ ಆಗಿ ಎಸಿಬಿ ಪೊಲೀಸರು  ಆರೋಪಿಯನ್ನು ಬಂಧಿಸಿದ್ದಾರೆ. ಲಕ್ಷ್ಮಯ್ಯ ಐದು ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 1,000 ಮುಂಗಡವಾಗಿ ಪಡೆದು ಇನ್ನುಳಿದ 4,000 ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದು, ಇದೀಗ ಎಸಿಬಿ ಅಧಿಕಾರಿಗಳ ಅತಿಥಿಯಾಗಿದ್ದಾನೆ ತುಮಕೂರು ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನವಾಗಿರುವ ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ಮತ್ತು ತಂಡಕ್ಕೆ ಜಿಲ್ಲೆಯ ನಾಗರಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ರೆಕಾರ್ಡ್ ರೂಂ ಶಿರಸ್ತೆದಾರ ಮತ್ತು ತಹಸೀಲ್ದಾರ್ ಮೋಹನ್ ತಾಲ್ಲೂಕು ಕಛೇರಿಯಲ್ಲಿ ನೆಡೆಯುತ್ತಿರುವ ಈ ಭ್ರಷ್ಟಾಚಾರ ಅಕ್ರಮಗಳಿಗೆ ಕಾರಣ ಎಂದಿದ್ದಾರೆ ಲಕ್ಷಕ್ಕೂ ಅಧಿಕ…

Read More

ತುಮಕೂರು: ತುರುವೇಕೆರೆ ಶಾಸಕ ಮಸಾಲೆ ಜಯರಾಮ್ ಅವರು ಕ್ಷೇತ್ರದ ತುಯಾಲಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಹಾಡು ಹಾಡುವ ಮೂಲಕ ಸಾರ್ವಜನಿಕರನ್ನು ರಂಜಿಸಿದ್ದಾರೆ. ತುರುವೇಕೆರೆ ಶಾಸಕ ಮಸಾಲೆ ಜಯರಾಮ್ ಅವರು ಶಿವಪ್ಪ ಕಾಯೋ ತಂದೆ ಮೂರು ಲೋಕ ಸ್ವಾಮಿ ದೇವ ಎನ್ನುವ ಹಾಡು ಮತ್ತು ಇದು ಸೋಮನ ಅವತಾರ ರಾಮನ ಅವತಾರ ಎನ್ನುವ ಹಾಡುಗಳನ್ನು ಹಾಡುತ್ತ ನೆರೆದಿದ್ದ ಸಾರ್ವಜನಿಕರನ್ನು ರಂಜಿಸಿದರು. ಗುಬ್ಬಿ ತಾಲೂಕಿನ ಹಿಂಡಿಸಿಗೆರೆ ಗ್ರಾಮದಲ್ಲಿ ನಡೆದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯನ್ನು ಸಹ ಶಾಸಕರ ಮಸಾಲ ಜಯರಾಮ್ ಬಡ್ಡಿ ಹಾಡುವ ಮೂಲಕವೇ ವಿಶೇಷವಾಗಿ ಪಂದ್ಯಕ್ಕೆ ಚಾಲನೆ ನೀಡಿದ್ದಾರೆ. ಇನ್ನೂ ಶಾಸಕರ ಹಾಡಿರುವ ಹಾವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ವರದಿ: ಮಾರುತಿ ಪ್ರಸಾದ್, ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಕೊರೋನಾ ಸೋಂಕಿನಿಂದ ಸಾವನ್ನಪ್ಪಿದವರ ಕುಟುಂಬ ಸದಸ್ಯರಿಗೆ ಪರಿಹಾರವನ್ನು ನೀಡುವುದಾಗಿ ಹೇಳಲಾಗಿದೆ. ಈ ಮೂಲಕ ಮೃತ ಕುಟುಂಬಗಳಿಗೆ ಪರಿಹಾರವೂ ಸಿಗುತ್ತಿದೆ. ಆದ್ರೆ, ಕೆಲ ಜನ ಹಣದ ಆಸೆಗೆ ಸುಳ್ಳು ಮಾಹಿತಿ ನೀಡಲು ಪ್ರಾರಂಭಿಸಿದ್ದಾರೆ. ಇಂತಹ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದೆ. ಕೇಂದ್ರದ ಅನುಮತಿ ಸಿಕ್ಕಿದೆ ಕೊರೋನಾ ಮರಣ ಪರಿಹಾರವನ್ನು ಪಡೆಯಲು ಸುಳ್ಳು ದೂರುಗಳನ್ನು ಸಲ್ಲಿಸಲಾಗಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಿದೆ. ಇದರ ಅಡಿಯಲ್ಲಿ, ಆಂಧ್ರಪ್ರದೇಶ, ಗುಜರಾತ್, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಸಲ್ಲಿಸಲಾದ 5% ಕ್ಲೈಮ್‌ಗಳನ್ನು ಪರಿಶೀಲಿಸಲಾಗುತ್ತದೆ. 60 ದಿನಗಳಲ್ಲಿ ಕ್ಲೈಮ್ ಮಾಡಿ ಕೊರೋನಾ ಮೃತ ಪಟ್ಟವರ ಪರಿಹಾರವನ್ನು ಪಡೆಯಲು ಸುಪ್ರೀಂ ಕೋರ್ಟ್ ಮಾರ್ಚ್ 28 ರವರೆಗೆ 60 ದಿನಗಳನ್ನು ನಿಗದಿಪಡಿಸಿದೆ. ಭವಿಷ್ಯದ ಸಾವಿಗೆ ಪರಿಹಾರವನ್ನು ಪಡೆಯಲು, 90 ದಿನಗಳಲ್ಲಿ ಕ್ಲೈಮ್ ಮಾಡಬೇಕಾಗಿದೆ. 4 ರಾಜ್ಯಗಳಲ್ಲಿ ತನಿಖೆ ನಡೆಸಲಾಗುವುದು ಸುಪ್ರೀಂ ಕೋರ್ಟ್‌ನ ಅನುಮತಿಯ ನಂತರ, ಕೇಂದ್ರ ಸರ್ಕಾರವು 4 ರಾಜ್ಯಗಳಲ್ಲಿ…

Read More

ಐಪಿಎಲ್ 2022 ಮಾರ್ಚ್ 26 ರಿಂದ ಪ್ರಾರಂಭವಾಗಲಿದೆ. ಮಾರ್ಚ್ 26 ರಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಮೊದಲ  ಪಂದ್ಯ ನಡೆಯಲಿದೆ. T20 ಕ್ರಿಕೆಟ್ ಅನ್ನು ಸಾಮಾನ್ಯವಾಗಿ ಬ್ಯಾಟ್ಸ್‌ಮನ್ ಆಟ ಎಂದು ಕರೆಯಲಾಗುತ್ತದೆ, ಆದರೆ ವರ್ಷಗಳಲ್ಲಿ, ಬೌಲರ್‌ಗಳು ಯಾವುದೇ ತಂಡವನ್ನು ಗೆಲ್ಲಲು ಉತ್ತಮ ಬೌಲಿಂಗ್ ಎಷ್ಟು ಮುಖ್ಯ ಎಂಬುದನ್ನು ತೋರಿಸಿದ್ದಾರೆ. ಇಂದು ನಾವು ಐಪಿಎಲ್‌ನ 5 ಅತ್ಯಂತ ಅಪಾಯಕಾರಿ ಬೌಲರ್‌ಗಳ ಬಗ್ಗೆ ಸಂಪೂರ್ಣ ಮಾಹಿತಿ ನಿಮಗಾಗಿ ತಂದಿದ್ದೇವೆ. 1. ಆನ್ರಿಚ್ ನಾರ್ಟ್ಜೆ ದಕ್ಷಿಣ ಆಫ್ರಿಕಾದ ಸ್ಟಾರ್ ವೇಗದ ಬೌಲರ್ ಆನ್ರಿಚ್ ನಾರ್ಟ್ಜೆ ಕೆಲವೇ ವರ್ಷಗಳಲ್ಲಿ ಐಪಿಎಲ್‌(IPL)ನಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿದ್ದಾರೆ. ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿದ ನಂತರ ಆನ್ರಿಚ್ ನಾರ್ಟ್ಜೆ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಆನ್ರಿಚ್ ನಾರ್ಟ್ಜೆ ಬಗ್ಗೆ ಪ್ರಮುಖ ವಿಷಯವೆಂದರೆ ಡೆತ್ ಓವರ್‌ಗಳಲ್ಲಿ ಅತ್ಯಂತ ಅಪಾಯಕಾರಿ ಬೌಲಿಂಗ್ ಮಾಡುವುದು. ಆನ್ರಿಚ್ ನಾರ್ಟ್ಜೆ ಡೆತ್ ಓವರ್‌ಗಳಲ್ಲಿ ರನ್‌ಗಳನ್ನು ನಿಲ್ಲಿಸುವ ಕಲೆಯನ್ನು ಹೊಂದಿದ್ದಾರೆ. ಅಲ್ಲದೆ,…

Read More

ಮೆಜೆಸ್ಟಿಕ್ ನ ತ್ರಿವೇಣಿ ಥಿಯೇಟರ್ ಹಾಗೂ ಅನುಪಮಾ ಥಿಯೇಟರ್‌ ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ  ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿತು. ಥಿಯೇಟರ್ ಗಳಲ್ಲಿ ಪುನೀತ್ ಅಭಿನಯದ ಜೇಮ್ಸ್ ಎತ್ತಂಗಡಿ ಮಾಡಿ RRR ಸಿನಿಮಾ ಹಾಕಿದ್ರೇ ಥಿಯೇಟರ್ ಗೆ ನುಗ್ಗಿ ಪ್ರತಿಭಟನೆ ಮಾಡ್ತೀವಿ ಎಂಬ ಎಚ್ಚರಿಕೆ ನೀಡಿದರು. ಅಲ್ಲದೆ ಅನುಪಮಾ ಥಿಯೇಟರ್ ಮುಂಭಾಗ ಇದ್ದ ಪೋಸ್ಟರ್ ಕಿತ್ತುಹಾಕಿ ಆಕ್ರೋಶ ಹೊರಹಾಕಿದರು.ಪುನೀತ್ ಅಭಿನಯದ ‘ಜೇಮ್ಸ್’  ಬಿಡುಗಡೆಯಾದ ಒಂದೇ ವಾರದಲ್ಲಿ 450 ಸ್ಕ್ರೀನ್‌ ಗಳಿಂದ 150 ಕ್ಕೆ ಇಳಿಸುವುದನ್ನು ಒಪ್ಪಲು ಸಾಧ್ಯವಿಲ್ಲ. ಪುನೀತ್ ಸಿನಿಮಾವನ್ನು ಅಭಿಮಾನಿಗಳು ನೋಡುತ್ತಿದ್ದಾರೆ. ಉತ್ತಮ ಕಲೆಕ್ಷನ್ ಆಗುತ್ತಿದೆ. ಅಲ್ಲದೆ ಡಾ. ಪುನೀತ್ ರಾಜ್ ಕುಮಾರ್  ಅವರ ಕಡೇಯ ಸಿನಿಮಾವನ್ನು ಅಭಿಮಾನಿಗಳಿಗೆ ನೋಡಲು ಅವಕಾಶ ಕೊಡಬೇಕೆಂದು ಆಗ್ರಹಿಸಿದರು. ತ್ರಿವೇಣಿ ಥಿಯೇಟರ್ ಮಾಲೀಕ ಅನಂತ್, ಜೇಮ್ಸ್  ಸಿನಿಮಾ ತೆಗೆಯಲ್ಲ RRR ಸಿನಿಮಾ ಪ್ರದರ್ಶಿಸುವುದಿಲ್ಲ, ಜೇಮ್ಸ್ ಐವತ್ತು ದಿನಗಳ ಕಾಲ ಪ್ರದರ್ಶನ ಮುಂದುವರಿಸುತ್ತೇವೆ ಎಂದು ಭರವಸೆ ಕೊಟ್ಟ ಬಳಿಕ ಪ್ರತಿಭಟನೆ (Protest) ಕೈಬಿಟ್ಟರು. ಅನುಪಮಾ…

Read More

ಆಸ್ಪತ್ರೆಯಲ್ಲಿ ಐವರು ವ್ಯಕ್ತಿಗಳು ಖಾರದ ಪುಡಿ ಎರಚಿ ಮಾರಾಮಾರಿ ಮಾಡಿಕೊಂಡ ಘಟನೆ ನಗರದ ಬ್ರಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ನಡೆದಿದೆ. ದಾಳಿಯಲ್ಲಿ ನಾಲ್ವರಿಗೆ ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ. ಹಲ್ಲೆಗೆ ಒಳಗಾಗದವರು ರೌಫ್, ಫಿರೋಜ್ ಖಾನ್, ಅಫಸರ್ ಖಾನ್, ಅರಬಾಜ್ ಖಾನ್, ಅಜ್ಜು ಗಂಭಿರ ಗಾಯಗೊಂಡ ವ್ಯಕ್ತಿ. ಹೆಚ್ಚಿನ ಚಿಕಿತ್ಸೆ ಗಾಗಿ ಮಹ್ಮದ್ ರೌಭ್ ಹೈದರಾಬಾದ್ ಗೆ ರವಾನೆ ಮಾಡಲಾಗಿದೆ. ಪ್ರಕರಣ ಕುರಿತಂತೆ ನ್ಯೂ ಟೌನ್ ಹಾಗೂ ಟೌನ್ ಪೋಲಿಸ್ ಠಾಣೆಯಲ್ಲಿ ಸೆಕ್ಷನ್ಬ 307,353 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರಾಮಾರಿಗೆ ಕಾರಣ : ಕಳೆದ ವರ್ಷ ಕಾಂಗ್ರೆಸ್ ಪಕ್ಷದ ಮುಖಂಡನ ಪುತ್ರ ಹಾಗೂ ರೌಫ್ ಮಧ್ಯ ಹಣಕಾಸಿನ ವಿಚಾರಕ್ಕೆ ಗಲಾಟೆ ನಡೆದಿತ್ತು. ನಗರದ ಮನಿಯಾರ ತಾಲಿಮ್ ನಲ್ಲಿ ರೌಫ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡನ ಮಕ್ಕಳ ಮಧ್ಯ ಮಾರಾಮಾರಿ ನಡೆದಿತ್ತು.ಚಿಕಿತ್ಸೆಗಾಗಿ ಬ್ರಿಮ್ಸ್ ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ರೌಫ್ ಮತ್ತು ಕೈ ಮುಖಂಡ ಹಾಗೂ ಮಕ್ಕಳಿಂದ ರೌಫ್ ಮೇಲೆ ಹಲ್ಲೆ ಮಾಡಿದ್ದಾರೆ.…

Read More

ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾ ರುಣವಾಗಿ ಮೃತಪಟ್ಟಿದ್ದಾರೆ  ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದ ಬಳಿ ಅವಘಡ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟಿದ್ದಾರೆ . ಮೃತರನ್ನು 43 ವರ್ಷದ ನಾಗರಾಜ್, 37 ವರ್ಷದ ಶೈಲಜ, 9 ವರ್ಷದ ವೀರೇಶ್, 7 ವರ್ಷದ ಸಂತೋಷ್ ಎಂದು ಗುರುತಿಸಲಾಗಿದೆ. ಮೃತರು ಚನ್ನಗಿರಿ ತಾಲೂಕಿನ ಹೆಬ್ಬಳಗೆರೆ ಗ್ರಾಮದ ಬಂಧುಗಳ ಮನೆಯಲ್ಲಿ ಊಟ ಮುಗಿಸಿಕೊಂಡು ರಾತ್ರಿ ಹನ್ನೊಂದುವರೆ ಸಮಯದಲ್ಲಿ ಸ್ವ ಗ್ರಾಮ ಬಿದುರ್ಗ ಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ . ಚಿತ್ರದುರ್ಗದ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬಸ್ ಒವರ್ ಟೇಕ್ ಮಾಡಿ ಮುನ್ನುಗ್ಗುತ್ತಿದ್ದ ವೇಳೆ, ಎದುರಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ…

Read More