Subscribe to Updates
Get the latest creative news from FooBar about art, design and business.
- ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್
- ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ
- ಭೂಕಂಪನದ ಅನುಭವ: ಬೆಚ್ಚಿಬಿದ್ದ ವಿಜಯಪುರ ಜಿಲ್ಲೆ ಜನ
- ರಾಹುಲ್ ಗಾಂಧಿ ಅವರಿಗೆ ಕಾಮನ್ ಸೆನ್ಸ್ ಇಲ್ಲ: ಆರ್.ಅಶೋಕ್ ವಾಗ್ದಾಳಿ
- ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ
- ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ
- ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ
- ಬೀದರ್ ನಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ
Author: admin
ಮಧುಗಿರಿ : ವಾಸವಿಕ್ಲಬ್ ಮಹಿಳೆಯರ ಬಳಗ ಸದಸ್ಯರು ವರ್ಷದ ಮೊದಲ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಯಿತು. ನಗರದ ಮಹಿಳಾ ಸಮಾಜದಲ್ಲಿ ಸಂಕ್ರಾಂತಿ ಹಬ್ಬವನ್ನು ಆಯೋಜಿಸಿದ್ದು, ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ವಾಸವಿ ಕ್ಲಬ್ ಅಧ್ಯಕ್ಷರಾದ ಲಕ್ಷ್ಮಿಮೂರ್ತಿ, ಸೂರ್ಯನು ಈ ದಿನ ತನ್ನ ಪಥ ಬದಲಾಯಿಸುವಂತೆ ಎಲ್ಲರ ಬಾಳಿನ ಪಥ ಬದಲಾಗಲಿ ಸುಖ ಸಂತೋಷ ಸಮೃದ್ಧಿ ಆರೋಗ್ಯದ ಸಂಭ್ರಮ ಪಸರಿಸಲಿ ಎಂದು ಹಾರೈಸಿದರು. ಹಬ್ಬದಲ್ಲಿ ನಾವು ನದಿಗಳಲ್ಲಿ ಸ್ನಾನವನ್ನು ಮಾಡಿ ಸೂರ್ಯ ದೇವರ ಆರಾಧಿಸುತ್ತೇವೆ. ನಮ್ಮಲ್ಲಿನ ಪಾಪಗಳು ತೊಳೆಯುತ್ತದೆ ಎಂಬ ನಂಬಿಕೆ ಇದೆ. ಸಂಕ್ರಾಂತಿ ಎಂದರೆ ಪರ್ವಕಾಲ ಪುಣ್ಯಕಾಲ ಸೂರ್ಯ ತನ್ನ ಪತನವನ್ನು ಬದಲಿಸುವ ಕಾಲ ಉತ್ತರಾಯಣ ಪುಣ್ಯಕಾಲ ಎಂದು ಕರೆಯುತ್ತೇವೆ ಎಂದು ಲಕ್ಷ್ಮಿ ಮೂರ್ತಿ ವಿವರಿಸಿದರು. ಈ ಸಂದರ್ಭದಲ್ಲಿ ಕ್ಲಬ್ಬಿನ ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಆಶಾ ಮಲ್ಲಿಕಾರ್ಜುನ್, ಅರುಣ ಸತೀಶ್, ಕಲ್ಪನಾ ಗೋವಿಂದರಾಜ್, ಲಲಿತಾ ನವೀನ್, ಸುಮಾ ಸುದರ್ಶನ್, ಭಾರತಿ ಲಕ್ಷ್ಮಿಕಾಂತ್, ಸುಷ್ಮಾ ರಮೇಶ್, ಪ್ರತಿಭಾ ಧನಪಾಲ್, ನಾಗ ಸ್ಮಿತಾ ಲಕ್ಷ್ಮಿ ಶ್ರೀನಾಥ್, ವೀಣಾ ಹನುಮಂತರಾಜು,…
ಚಿತ್ರದುರ್ಗ: ಗರ್ಭಿಣಿ ಪತ್ನಿಯನ್ನು ನೋಡಲು ತನ್ನ ತಾಯಿಯ ಜೊತೆಗೆ ಹೋಗುತ್ತಿದ್ದ ಪತಿ ಅಪಘಾತದಲ್ಲಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಐಮಂಗಲ ಹೋಬಳಿ ಯರಬಳ್ಳಿ ಗ್ರಾಮದ ಗೊಲ್ಲಹಳ್ಳಿ ಸಮೀಪ ನಡೆದಿದೆ. ಬೆಂಗಳೂರಿನ ಬಿ ಎಸ್ ಎಫ್ ನಲ್ಲಿ ಎಲೆಕ್ಟ್ರಿಕಲ್ ಆಗಿ ಕೆಲಸ ನಿರ್ವಹಿಸುತ್ತಿದ್ದಂತಹ ರಾಮಾಚಾರಿ ಮೃತಪಟ್ಟವರಾಗಿದ್ದು, ಇವರ ತಾಯಿ ಪೆದ್ದಕ್ಕನವರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಐಮಂಗಲ ಹೋಬಳಿ ಯರಬಳ್ಳಿ ಗ್ರಾಮದ ಗೊಲ್ಲಹಳ್ಳಿ ಸಮೀಪ ಅಪರಿಚಿತ ಲಾರಿಯೊಂದು ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಪರಿಣಾಮವಾಗಿ ರಾಮಾಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಬ್ಯಾಡರಹಳ್ಳಿ ಮಜರೆ ಆರ್.ಎಸ್.ಉಪ್ಪಾರಹಟ್ಟಿ ಗ್ರಾಮ ನಿವಾಸಿ ರಾಮಾಚಾರಿ ಅವರು ತಮ್ಮ ಗರ್ಭಿಣಿ ಪತ್ನಿ ಚಂದ್ರಕಲಾ ಅವರನ್ನು ನೋಡಲು ರಾತ್ರಿ ಸುಮಾರು 8 ಗಂಟೆಯ ವೇಳೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಹಿರಿಯೂರು ತಾಲ್ಲೂಕಿನ ವೇದಾವತಿ ನಗರದಿಂದ ಹಿಡಿದು ಚಳ್ಳಕೆರೆ ಹೋಗುವ ಈ ಮಾರ್ಗವನ್ನು ಆ್ಯಕ್ಸಿಡೆಂಟ್ ಜೋನ್ ಎಂದೇ ತಾಲ್ಲೂಕಿನ ಸಾರ್ವಜನಿಕರು ಕರೆಯುತ್ತಾರೆ.…
ಬೆಂಗಳೂರು : ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ವಿಮಾ ಪರಿಹಾರ ಕಂಪೆನಿಗಳ ವಿಷಯದಲ್ಲಾಗಲೀ ಬೇರೆ ಯಾವುದೇ ವಿಚಾರದಲ್ಲಾಗಲೀ ಯಾರಿಂದಲೂ ಯಾವುದೇ ರೀತಿಯ ರಾಜೀಯೂ ಇಲ್ಲ ಮುಲಾಜೂ ಇಲ್ಲ.ರೈತರ ಕಾಳಜಿಯೇ ಮುಖ್ಯವಾದ ಗುರಿಯಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ್ ಖೂಬಾ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕರ್ನಾಟಕ ರಾಜ್ಯದ ಕೃಷಿ ಸಚಿವರು ಇಲಾಖಾಧಿಕಾರಿಗಳೊಂದಿಗೆ ಪ್ರಧಾನ್ ಮಂತ್ರಿ ಫಸಲ್ ಬಿಮಾ ಯೋಜನೆ ಸೇರಿದಂತೆ ಮತ್ತಿತ್ತರ ವಿಚಾರಗಳ ಬಗ್ಗೆ ಕೇಂದ್ರ ಸಚಿವರು ಅವಲೋಕನಾ ಸಭೆ ನಡೆಸಿ,ಸರ್ಕಾರಿ ಇನ್ಸೂರೆನ್ಸ್ ಕಂಪೆನಿಗಳು ಸರಿಯಾದ ಸಮಯಕ್ಕೆ ರೈತರಿಗೆ ಬೆಳೆ ವಿಮೆ ಪರಿಹಾರ ನೀಡಬೇಕೆಂಬ ನಿಟ್ಟಿನಲ್ಲಿ ಚರ್ಚಿಸಿದರು. ಅವಲೋಕನಾ ಸಭೆಯಲ್ಲಿ ಸರ್ಕಾರಿ ವಿಮಾ ಕಂಪೆನಿಗಗಳಿಂದ ಸರಿಯಾದ ಸಮಯಕ್ಕೆ ಸರಿಯಾಗಿ ರೈತರಿಗೆ ಬೆಳೆ ವಿಮೆ ನೀಡಲು ಸಾಧ್ಯವಾಗುತ್ತದೆ ಎಂದ ಮೇಲೆ ಖಾಸಗಿ ವಿಮಾ ಕಂಪೆನಿಗಳಿಗೆ ಸರಿಯಾಗಿ ರೈತರಿಗೆ ವಿಮೆ ಪಾವತಿಸಲು ಸಾಧ್ಯವಾಗದೇ ಇರುವುದನ್ನು ಗಮನಿಸಿದ ಸಚಿವದ್ವಯರು ಸಭೆಯಲ್ಲಿ ಖಾಸಗಿ ವಿಮಾ ಕಂಪೆನಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.…
ತುಮಕೂರು: ಜಿಲ್ಲೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಬೆಮೆಲ್ ಕಾಂತರಾಜು ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂತರಾಜು ಇಂದು ಕಾಂಗ್ರೆಸ್ ಸೇರ್ಪಡೆಯಾದರು. ಕಳೆದ ಬಾರಿ ಸ್ಥಳೀಯ ಸಂಸ್ಥೆಗಳ ತುಮಕೂರು ಕ್ಷೇತ್ರದಿಂದ ಕಾಂತರಾಜು ಜೆಡಿಎಸ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂತರಾಜು ಜೆಡಿಎಸ್ನಿಂದ ದೂರು ಉಳಿದಿದ್ದರು. ಅವರಿಗೆ ಜೆಡಿಎಸ್ ಟಿಕೆಟ್ ಕೂಡ ನಿರಾಕರಿಸಿತ್ತು. ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಆಸಕ್ತಿ ತೋರಿಸಿದ ಕಾಂತರಾಜು ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರಲಿಲ್ಲ. ಬದಲಾಗಿ ಕಾಂಗ್ರೆಸ್ ಅಭ್ಯರ್ಥಿ ರಾಜೇಂದ್ರ ರಾಜಣ್ಣ ಅವರ ಪರವಾಗಿ ಕೆಲಸ ಮಾಡಿದ್ದರು. ತುಮಕೂರಿನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.ಕಾಂತರಾಜು ಅವರು ತುರುವೇಕೆರೆ ಅಥವಾ ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇದೇ ಕಾರಣಕ್ಕೆ ಅವರು ಜೆಡಿಎಸ್ನಿಂದ ದೂರು ಉಳಿದಿದ್ದರು. ಕಾಂಗ್ರೆಸ್ನಿಂದ ಈ ಎರಡು ಕ್ಷೇತ್ರಗಳಿಗೆ ಸಮರ್ಥ ಅಭ್ಯರ್ಥಿಗಳ ಕೊರತೆ ಇದೆ. ಹೀಗಾಗಿ ಕಾಂತರಾಜು ಅವರ ಸೇರ್ಪಡೆ ಪಕ್ಷಕ್ಕೆ…
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಮೂರನೇ ಅಲೆಯ ಆರ್ಭಟ ಮುಂದುವರೆಯುತ್ತಿದ್ದು, ಕಳೆದ 24 ಗಂಟೆಯಲ್ಲಿ 3,37,704 ಕೊರೊನಾ ಪ್ರಕರಣಗಳು ದಾಖಲಾಗಿವೆ. 488 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಗುರುವಾರಕ್ಕೆ ಹೋಲಿಸಿದರೆ, ಕಳೆದ 24 ಗಂಟೆಗಳಲ್ಲಿ ಸುಮಾರು 10 ಸಾವಿರ ಸೋಂಕಿತರು ಕಡಿಮೆ ಪತ್ತೆಯಾಗಿದ್ದಾರೆ.ಇನ್ನು ಕಳೆದ 274 ಗಂಟೆಗಳಲ್ಲಿ 2,42,676 ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಒಟ್ಟು ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 10,050ಕ್ಕೆ ಏರಿಕೆ ಕಂಡಿದೆ. ಇತ್ತ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದರೂ, ಈ ಹಿಂದಿನ ಎರಡು ಅಲೆಗಳಿಗೆ ಹೋಲಿಕೆ ಮಾಡಿಕೊಂಡರೇ ಮೂರನೇ ಅಲೆಯ ತೀವ್ರತೆ ಕಡಿಮೆ ಇದೆ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹಿರಿಯೂರು: ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಪತಿ ಡಿ.ಟಿ.ಶ್ರೀನಿವಾಸ್ ಅವರನ್ನು ಸರ್ಕಾರಿ ಅಧಿಕಾರಿಗಳ ವರ್ಗವು ಶಾಸಕರಂತೆ ಬಿಂಬಿಸುವಂತೆ ಒತ್ತಡ ಹೇರುತ್ತಿರುವುದು ವಿಪರ್ಯಾಸ ಎಂದು ಮಹಿಳಾ ಸಾಂತ್ವನ ಕೇಂದ್ರ ಧರಣಿ ಸಂಸ್ಥೆಯ ಕಾರ್ಯದರ್ಶಿ ರಮಾ ನಾಗರಾಜು ಗುಡುಗಿದರು. ಹಿರಿಯೂರು ತಾಲ್ಲೂಕಿನ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ರವರ ಪತಿ ಡಿ.ಟಿ.ಶ್ರೀನಿವಾಸ್ ಜಿಲ್ಲಾಡಳಿತವನ್ನು ಕಪಿಮುಷ್ಟಿಯಲ್ಲಿಟ್ಟುಕೊಂಡು ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಎನ್.ರಮಾನಾಗರಾಜು, ಭಾರತದ ಸಂವಿಧಾನದಲ್ಲಿ ನ್ಯಾಯಾಂಗ , ಕಾರ್ಯಾಂಗ , ಶಾಸಕಾಂಗವಿದ್ದು ಪ್ರತಿಯೊಬ್ಬ ಭಾರತದ ಪ್ರಜೆಯು ಸಹ ಗೌರವಿಸುವುದು ಆದ್ಯ ಕರ್ತವ್ಯವಾಗಿದೆ . ಆದರೆ ಇತ್ತೀಚಿನ ದಿನಗಳಲ್ಲಿ ಹಿರಿಯೂರು ತಾಲ್ಲೂಕಿನ ಶಾಸಕಿಯಾದ ಪೂರ್ಣಿಮಾ ಶ್ರೀನಿವಾಸ್ ರವರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಂಬಂಧಪಟ್ಟ ಅಧಿಕಾರಿ ವರ್ಗದವರನ್ನು ಗಣನೆಗೆ ತೆಗೆದುಕೊಳ್ಳದೇ, ಅವರು ಹೇಳಿದಂತೆ ಅಧಿಕಾರಿ ವರ್ಗದವರು ಸರ್ಕಾರಿ ಕಾರ್ಯಕ್ರಮವನ್ನು ನಡೆಸಿಕೊಂಡು ಹೋಗಬೇಕಾಗುವಂತಾಗಿರುವುದು ಖಂಡನಾರ್ಹವಾಗಿದೆ ಎಂದರು. ತಮ್ಮ ಪತಿಯನ್ನು ಸರ್ಕಾರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಶಾಸಕಿ ಪೂರ್ಣಿಮಾ ಪ್ರೋತ್ಸಾಹಿಸುತ್ತಿರುವುದು ಶ್ರೀ ಬೇಜಾವ್ದಾರಿಯಾಗಿದ್ದು , ಪುರುಷ ಪ್ರಧಾನಕ್ಕೆ ಒತ್ತುಕೊಟ್ಟಂತೆ ಇವರ ನಡುಯವಳಿಕೆ ಎದ್ದು …
ಕೊರಟಗೆರೆ: ಬಡವರ ಕಲ್ಯಾಣಕ್ಕಾಗಿ ಕಡಿಮೆ ದರದಲ್ಲಿ ರಿಯಾಯಿತಿ ನೀಡಿ ಶುದ್ಧ ಆಹಾರವನ್ನು ಬಡವರ, ನಿರ್ಗತಿಕರ, ಕೂಲಿ ಕಾರ್ಮಿಕರ, ಬೀದಿಬದಿ ವ್ಯಾಪಾರಿಗಳ, ಶ್ರಮಿಕರ ಮತ್ತು ಸಾರ್ವಜನಿಕರಿಗೆ ಹೊಟ್ಟೆ ಹಸಿವು ನೀಗಿಸಲು ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿರವರ ಹೆಸರಿನಲ್ಲಿ ಹಸಿದವರಿಗೆ ಆಹಾರ ನೀಡಲು ‘ಇಂದಿರಾ ಕ್ಯಾಂಟೀನ್’ ಎಂಬ ಮಹತ್ವದ ಯೋಜನೆ ಜಾರಿಗೆ ತಂದಿದ್ದರು. ಬೆಳಿಗ್ಗೆಯ ತಿಂಡಿಗೆ 5 ರೂ. ನಿಗದಿ ಪಡಿಸಿ ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ 10 ರೂ.ಗಳನ್ನು ನಿಗದಿ ಪಡಿಸಿದ್ದರು. ಇಂದಿರಾ ಗಾಂಧಿರವರ ಸ್ಮರಣಾರ್ಥವಾಗಿ ಅವರ ಹೆಸರಿನಲ್ಲಿ ಈ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಸಿದ್ದರಾಮಯ್ಯ ರಾಜ್ಯಾದ್ಯಂತ ಜಿಲ್ಲಾ ತಾಲ್ಲೂಕು ಮತ್ತು ನಗರ ಪ್ರದೇಶಗಳಲ್ಲಿ ಕಾರ್ಯರೂಪಕ್ಕೆ ತಂದಿದ್ದರು. ರಾಜ್ಯದಲ್ಲಿ ಹಸಿವಿನಿಂದ ಯಾರು ಇರಬಾರದೆಂಬ ಆಶಯದಿಂದ ಇಂದಿರಾ ಕ್ಯಾಂಟೀನ್ ರಾಜ್ಯಾದ್ಯಂತ ಸ್ಥಾಪಿಸಲಾಗಿತ್ತು. ಕೊರಟಗೆರೆ ತಾಲ್ಲೂಕಿನಲ್ಲಿಯೂ ಸಹ ಡಾ.ಜಿ.ಪರಮೇಶ್ವರ್ ಒಂದು ಇಂದಿರಾ ಕ್ಯಾಂಟೀನ್ ತೆರೆಯಲು ಚಾಲನೆ ನೀಡಿದ್ದರು. ಮೊದಮೊದಲು ಶುಚಿಯಾಗಿ ರುಚಿ ರುಚಿಯಾಗಿ ಆಹಾರವನ್ನು ತಯಾರಿಸಿ ಬಡವರಿಗೆ ಕಡಿಮೆ ದರದಲ್ಲಿ…
ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮಪಂಚಾಯ್ತಿಯಲ್ಲಿ ಗ್ರಾಮಸಭೆ ಹಮ್ಮಿಕೊಂಡಿದ್ದು, ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ರಾದ ಮಂಗಳಗೌರಮ್ಮ ವಹಿಸಿದ್ದರು. ಕಾರ್ಯದರ್ಶಿ ಸುರೇಶ್ ಕಾರ್ಯಕ್ರಮಕ್ಕೆ ಅತಿಥಿಗಳನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಹಾಜರಿದ್ದು, ತಮ್ಮ ಇಲಾಖೆಯಲ್ಲಿ ಬರುವ ಅನುಕೂಲಗಳ ಹಾಗೂ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ನರೇಗಾ ಯೋಜನೆಯ ಮಾಹಿತಿಯನ್ನು ಕಾರ್ಯದರ್ಶಿಗಳಾದ, ಸುರೇಶ್ ಒದಗಿಸಿಕೊಟ್ಟರು. ನಿವೇಶನದ ಮಾಹಿತಿಯನ್ನ ಮುತ್ತುರಾಜ್ ನೀಡಿದರು. ಪಶುವೈದ್ಯಕೀಯ, ಇಲಾಖೆಯ ಸಿಬ್ಬಂದಿ ಕಿಸಾನ್ ಕಾರ್ಡ್ ಬಗ್ಗೆ ಇದರಲ್ಲಿನ ಸಾಲ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು. ಜಲ ಜೀವನ್ ಮಿಷನ್ ಬಗ್ಗೆಯೂ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಯಿತು. ಈ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ನಿವಾಸಮೂರ್ತಿ ಸ್ಪಷ್ಟನೆ ನೀಡಿದರು. ಈ ಸಭೆಯಲ್ಲಿ,ಸದಸ್ಯರು.ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ,ಗೋವಿಂದಯ್ಯ, ಬಿ.ಆರ್.ಸಿ.ಮುಂತಾದವರು ಭಾಗವಹಿಸಿದ್ದರು. ವರದಿ: ಸುರೇಶ್ ಬಾಬು. ಎಂ.ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ತುಮಕೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಲ್ಲೂರು ಗ್ರಾಮ ಪಂಚಾಯಿತಿ ಸಹಕಾರದೊಂದಿಗೆ ಶ್ರೀ ಗಂಗಾಮತಸ್ಥ ಬೆಸ್ತರ ಕ್ಷೇಮಾಭಿವೃದ್ಧಿ ಸಂಘ ಕಲ್ಲೂರು ವತಿಯಿಂದ ನಿಜ ಶರಣ ಅಂಬಿಗರ ಚೌಡಯ್ಯ ನವರ 902ನೆ ಜಯಂತಿ ಆಚರಣೆ ನಡೆಯಿತು. ಕೊರೊನಾ ಹಿನ್ನೆಲೆಯಲ್ಲಿ ಕಲ್ಲೂರು ಗ್ರಾಮ ಪಂಚಾಯಿತಿ ಸಭಾಂಗಣದ ಆವರಣದಲ್ಲಿ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಗ್ರಾ.ಪಂ. ಅಧ್ಯಕ್ಷ ಕೆ.ಎಲ್. ರವಿಕುಮಾರ್ ಮಾತನಾಡಿ, ಅಂಬಿಗರ ಚೌಡಯ್ಯನವರ ಶರಣರ ಕಾಲದ ವಚನಕಾರರು ನೇರ ನಡೆ ವ್ಯಕ್ತಿತ್ವ ಹೊಂದಿದವರು ಇವರ ವಚನಗಳು ಸಮಾಜಕ್ಕೆ ಮಾದರಿಯಾಗಿವೆ. ಅಂಬಿಗರ ಚೌಡಯ್ಯ ನವರ ಗಂಗಾಮತಸ್ಥ ಬೆಸ್ತರ ಸಮುದಾಯದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು. ಗ್ರಾ.ಪಂ. ಸದಸ್ಯರಾದ ರಂಗನಾಥ್ ಮಾತನಾಡಿ, ಕುಲಬಾಂದವರು ಒಗ್ಗಟ್ಟಾಗಿರಬೇಕು ಶರಣರನ್ನು ಅನುಸರಿಸಿ ನಡೆಯಬೇಕು ಎಂದರು. ಗ್ರಾ.ಪಂ. ಸದಸ್ಯರಾದ ಸುಮಿತ್ರಾ ಶಿವಯ್ಯ ಮಾತನಾಡಿ, ಶರಣರು ಹಲವಾರು ವಚನಗಳನ್ನು ರಚಿಸಿದ್ದಾರೆ. ಸಮಾಜಕ್ಕೆ ಮಾದರಿ ಎಂದರು. ಗ್ರಾ.ಪಂ. ಸದಸ್ಯ ನಾಗರಾಜ್, ಗಂಗಾಮತಸ್ಥ ಬೆಸ್ತರ ಕ್ಷೇಮಾಭಿವೃದ್ಧಿ ಸಂಘ ಕಲ್ಲೂರಿನ ಅಧ್ಯಕ್ಷರಾದ ಕೆ ಟಿ ಸೋಮಶೇಖರ್,…
ಕೋಲಾರ: ವಿಧಾನ ಪರಿಷತ್ ಶಾಸಕರಾದ ಚಿದಾನಂದ್ ಎಂ.ಗೌಡ ಅವರು ಇಂದು ತಮ್ಮ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಕೋಲಾರ ಜಿಲ್ಲಾಸ್ಪತ್ರೆಗೆ ಆಂಬುಲೆನ್ಸ್ ಕೊಡುಗೆಯಾಗಿ ನೀಡಿದರು. ಈ ವೇಳೆ ವಿಧಾನ ಪರಿಷತ್ ಶಾಸಕರಾದ ವೈ.ಎ.ನಾರಾಯಣ ಸ್ವಾಮಿ ಹಾಗೂ ಚಿದಾನಂದ್ ಎಂ.ಗೌಡ ಅವರು ಆಂಬುಲೆನ್ಸ್ ಗೆ ಚಾಲನೆ ಕೊಟ್ಟರು. ಬಳಿಕ ಕಾರ್ಯಕ್ರಮ ಕುರಿತು ಮಾತನಾಡಿದ ಚಿದಾನಂದ ಗೌಡ, ಕೊವಿಡ್ ಹೆಚ್ಚುತ್ತಿರುವ ಕಾರಣ ಗ್ರಾಮೀಣ ಪ್ರದೇಶದ ರೋಗಿಗಳಿಗೆ ಅನುಕೂಲವಾಗಲೆಂದು ಸುಸಜ್ಜಿತ ಆಕ್ಸಿಜನ್ ಮತ್ತು ವೆಂಟಿಲೇಟರ್ ಸೌಲಭ್ಯವುಳ್ಳ ಆಂಬುಲೆನ್ಸ್ ನೀಡಿದ್ದು, ಮುಂದಿನ ದಿನಗಳಲ್ಲಿ ನನ್ನ ಕ್ಷೇತ್ರ ವ್ಯಾಪ್ತಿಯ ಮುಂತಾದ ಜಿಲ್ಲೆಗಳಿಗೂ ನೀಡಿ, ಶಿಕ್ಷಣ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಜಗದೀಶ್, ವೈದ್ಯಾಧಿಕಾರಿಗಳಾದ ಮಂಜುನಾಥ್ ರೆಡ್ಡಿ, ಕೋಲಾರ ಬಿಜೆಪಿ ಜಿಲ್ಲಾಧ್ಯಕ್ಷರಾದ ವೇಣುಗೋಪಾಲ್, ತಿಮ್ಮರಾಯಪ್ಪ, ಮಾಗೇರಿ ನಾರಾಯಣಸ್ವಾಮಿ, ವಿಜಯ್ ಕುಮಾರ್, ಬಾಲಾಜಿ, ಸಹ್ಯಾದ್ರಿಯ ಕಾಲೇಜ್ ಉದಯ್ ರವರು, ಮುನಿವೆಂಕಟಪ್ಪ, ಕಾನಿಷ್ಕ ಶಶಿ ಕುಮಾರ್ ರವರು ಹಾಗೂ ಅನೇಕ ಪ್ರಮುಖರು…